Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ಜನಪರ ಯೋಜನೆಗಳನ್ನು ಘೋಷಿಸುತ್ತ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು 2023- 24ರ ಚುನಾವಣಾ ಬಜೆಟ್ ಅನ್ನು ಎಂದು ವಿಧಾನಸಭಾ ಸದನದ ಒಳಗಡೆ ಮಂಡಿಸುತ್ತಾ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ, ಗೃಹನಿ ಶಕ್ತಿ ಯೋಜನೆ ಭೂ ರೈತ ಮಹಿಳಾ ಕೃಷಿ ಕಾರ್ಮಿಕರಿಗೆ ಮಾಸಿಕ 500ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದುವರಿಕೆ.ದುಡಿಯುವ ಮೂರು ಲಕ್ಷ ಮಹಿಳೆಯರಿಗೆ ಉಚಿತ ಬಸ್ ಪಾಸ್ 1 ಲಕ್ಷಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ, ಮಕ್ಕಳ ಆರೋಗ್ಯ ತಪಾಸಣೆ ವಾಸ್ತಲ್ಯ ಯೋಜನೆ, ವಿದ್ಯಾ ವಾಹಿನಿ ಯೋಜನೆಗೆ 350 ಕೋಟಿ ಜಾರಿಗೆ, ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರೈತರಿಗೆ ಭೂಸೇರಿ ರೈತರಿಗೆ 10000 ಹೆಚ್ಚುವರಿ ಸಹಾಯಧನ, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮಾಸಿಕ 6 ಕೆಜಿ ಅಕ್ಕಿ, ನಿರುದ್ಯೋಗಿ ಯುವಕರಿಗಳಿಗೆ ರೂ.2000, ರೈತರಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಮಹಿಳಾ ಕಾಲೇಜುಗಳಿಗೆ ಯೋಗ ತರಬೇತಿ , ಗ್ರಾಮ ಪಂಚಾಯತ್ ಸದಸ್ಯರ 1000 ಗೌರವಧನ ಹೆಚ್ಚಳ, ಬಿಸಿ ಊಟ ಸಹಾಯಕರಿಗೆ ಗೌರವದನ ಹೆಚ್ಚಳ,…
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರದ ಇ ಭಾರಿಯ ಕೊನೆಯ ಬಜೆಟ್ ಮಂಡನೆ ಮಾಡಲಾಗುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂಗಡ ಪತ್ರವನ್ನು ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ 3ಲಕ್ಷ 7 ಸಾವಿರ ಕೋಟಿ ರೂ. ಮೊತ್ತದ ಅತಿ ದೊಡ್ಡ ಗಾತ್ರದ ಬಜೆಟ್ ಇದಾಗಿದ್ದು. ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ನೀಡಲಾಗಿದ್ದು ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಘೋಷಿಸಲಾಗಿದೆ. ಚುನಾವಣೆ ಹೊಸ್ತಿಲಲ್ಲೆ ಕೊನೆಯ ಬಜೆಟ್ ಮಂಡನೆಯಾಗುತ್ತಿದ್ದು ಜನರನ್ನು ಸರಕಾರದತ್ತ ಸೆಳೆಯುವ ಮಾದರಿಯಲ್ಲಿ ಬಜೆಟ್ ಮಂಡನೆಯಾಗಬಹುದೆಂಬ ಕುತೂಹಲ ಎಲ್ಲರಲ್ಲಿದ್ದು ನಿರೀಕ್ಷೆಯಂತೆಯೆ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಬಜೆಟ್ ನಲ್ಲಿ ರೈತರಿಗೆ ಆಫರ್ ನೀಡಲಾಗಿದ್ದು ಬಡ್ಡಿ ರಹಿತ ಸಾಲ ಸೌಲಭ್ಯ ಘೋಷಣೆ ಮಾಡಲಾಗಿದೆ. ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ. ಸಾಲ ಸೌಲಭ್ಯ ನೀಡುವುದಾಗಿ ಬಜೆಟ್ ಮಂಡಿಸಲಾಗಿದೆ. ಇನ್ನೂ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ 781 ಕೋಟಿ ರೂ. ಆರೋಗ್ಯ ಕ್ಷೇತ್ರಕ್ಕೆ ಅನುದಾನ ನೀಡಲಾಗಿದ್ದು 438 ನಮ್ಮ ಕ್ಲಿನಿಕ್ ಸ್ಥಾಪನೆ ಮಾಡುವುದರ ಜೊತೆಗೆ 1000 ಸಮುದಾಯ ಆರೋಗ್ಯ ಕೇಂದ್ರಗಳನ್ನು…
ಬೆಂಗಳೂರು: ಭಾರತೀಯ ಜನತಾ ಪಕ್ಷದ ಆಡಳಿತದ ಅವಧಿ ಕೊನೆಯ ಆಯವಯವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದಲ್ಲಿ ಬೆಳಗ್ಗೆ 10: 15_ ಗಂಟೆಗೆ ತನ್ನ ಎರಡನೇ ಅವಧಿಯ ಬಜೆಟ್ ಅನ್ನು ಮಂಡನೆ ಮಾಡುವ ಪ್ರಾರಂಭದಲ್ಲಿ ಕುವೆಂಪು ಅವರ ಬದಲಾವಣೆಯ ಕಾಲ ಬರುತ್ತಾ ಇದೆ. ಕವನದ ಮೂಲಕ ಕಾಂಗ್ರೆಸ್ಸಿಗೆ ಪರೋಕ್ಷವಾಗಿ ಟಾಂಗ್ ನೀಡಿ ನೀವು ಜನರ ಕಿವಿಗೆ ಹೂ ಬಿಟ್ಟಿದ್ದೀರಿ ,ಅದಕ್ಕೆ ಜನ ನಿಮ್ಮ ಕಿವಿಗೆ ಹೂವಿಟ್ಟಿದ್ದಾರೆ ಎಂದರು. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪ್ರತಿಭಟಿಸಿ ಸರ್ಕಾರ ಬರಿ ಸುಳ್ಳು ಭರವಸೆಗಳನ್ನು ನೀಡಿ ಜನರ ಕಿವಿಗೆ ಹೂವು ಇಡ್ತಾ ಇದೆ. ನೀವು ಘೋಷಿಸಿದ ಯೋಜನೆಗಳನ್ನು ಒಂದನ್ನು ಜಾರಿಗೆ ತಂದಿದ್ದೀರಾ? ಎಂದು ಪ್ರಶ್ನಿಸಿ ಸದನದಲ್ಲಿ ಕೆಲಕ್ಷಣ ಗದ್ದಲದ ವಾತಾವರಣ ನಿರ್ಮಾಣವಾಯಿತು. ನಂತರ ಸಭಾಧ್ಯಕ್ಷರು ಸಭೆಯನ್ನು ಸಂಜಯಸಿ ಮುಖ್ಯಮಂತ್ರಿಗಳಿಗೆ ಬಜೆಟ್ ಮಂಡನೆ ಮಾಡಲು ಅವಕಾಶ ಮಾಡಿಕೊಟ್ಟರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದು ಇದನ್ನ ಗಮನದಲ್ಲಿಟ್ಟುಕೊಂಡು ಜನರ ಮನಸ್ಸು ಗೆಲ್ಲಲು ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಬಂಪರ್ ಬಜೆಟ್ ಮಂಡನೆಯಾಗುವ ನಿರೀಕ್ಷೆ ಜನರಲ್ಲಿದೆ. ಇನ್ನೇನು ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಜನರ ಮೇಲೆ ಹೊಸ ತೆರಿಗೆ ಹೊರೆ ಹಾಕದೆ, ಜನರನ್ನು ತಮ್ಮತ್ತ ಸೆಳೆಯುವ ಜನಪ್ರಿಯ ಯೋಜನೆಗಳನ್ನು, ಘೋಷಣೆಗಳನ್ನೊಳಗೊಂಡ ಬಜೆಟ್ ಮಂಡಿಸುವತ್ತ ಸಿಎಂ ಬಸವರಾಜ ಬೊಮ್ಮಾಯಿ ಗಮನ ಹರಿಸಿದ್ದಾರೆ ಎನ್ನಲಾಗಿದೆ. ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಂಪುಟ ಸಭೆಯಲ್ಲಿ ಬಜೆಟ್ ಗೆ ಒಪ್ಪಿಗೆ ಪಡೆಯಲಿದ್ದಾರೆ. ಬಜೆಟ್ನಲ್ಲಿ ಸಾಮಾನ್ಯ ಜನರಿಗೆ, ಕೃಷಿಕರಿಗೆ, ಮಹಿಳೆಯರಿಗೆ, ಯುವಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಿದ್ದಾರೆಯೇ ಎಂದು ಕಾದು ನೋಡಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ವಿರುದ್ಧ ಪ್ರಿಯಕರನ (Lover) ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಲೆಯಾದ ವ್ಯಕ್ತಿ ಹೂಟಗಳ್ಳಿ ನಿವಾಸಿ ಮಂಜು ಎಂದು ತಿಳಿದು ಬಂದಿದೆ. ಪತ್ನಿ ಲಿಖಿತಾ ತನ್ನ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ ಎಂದು ಮಂಜುನ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ 12 ವರ್ಷದ ಹಿಂದೆ ಮಂಜು ಹಾಗೂ ಲಿಖಿತಾ ಅವರ ಮದುವೆಯನ್ನು ಕುಟುಂಬಸ್ಥರು ಮಾಡಿದ್ದರು. ದಂಪತಿಗಳಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಆದರೆ ಇತ್ತೀಚೆಗೆ ಲಿಖಿತಾ ಪತಿಯನ್ನು ಬಿಟ್ಟು ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು. ಈ ವೇಳೆ ಹಿರಿಯರು ರಾಜಿ ಪಂಚಾಯಿತಿ ನಡೆಸಿ ಲಿಖಿತಾಳನ್ನು ಮತ್ತೆ ಗಂಡನ ಮನೆಗೆ ವಾಪಸ್ ಕಳುಹಿಸಿದ್ದರು. ಈ ನಡುವೆ ಪತಿ, ಪತ್ನಿಗೆ ಅನೈತಿಕ ಸಂಬಂಧ ಮುಂದುವರಿಸದಂತೆ ಹೇಳಿದ್ದನಂತೆ. ಇದರಿಂದ ಕೋಪಗೊಂಡ ಪತ್ನಿ ಲಿಖಿತಾ, ರಾತ್ರೋರಾತ್ರಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲು ಮಾಡಿರುವ…
ವಿಪಕ್ಷ ನಾಯಕ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿರುವ ಸಚಿವ ಅಶ್ವಥ್ ನಾರಾಯಣ್ ವಿರುದ್ದ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಮಾಜಿ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಅಶ್ವಥ್ ನಾರಾಯಣ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅಶ್ವತ್ಥ್ ನಾರಾಯಣ ಅವರು ಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದ್ದಾರೆ. ಸಂವಿಧಾನ ಬದ್ಧವಾಗಿ ಕಾರ್ಯ ನಿರ್ವಹಿಸುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮೂಲ ತಳಹದಿಯನ್ನೇ ಉಲ್ಲಂಘಿಸಿದ್ದಾರೆ. ಶಾಂತಿ ಸುವ್ಯವಸ್ಥೆಯನ್ನು ಕದಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ್ದಾರೆ. ಐಪಿಸಿ ಸೆಕ್ಷನ್ 353, 504, 506ರ ಅಡಿಯಲ್ಲಿ ಅಪರಾಧವೆಸಗಿದ್ದಾರೆ. ಕೂಡಲೇ ಅಶ್ವತ್ಥ್ ನಾರಾಯಣರನ್ನು ಸಚಿವ ಸಂಪುಟದಿಂದ ವಜಾಗೊಳಿಸಿಬೇಕು. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಕಲಬುರಗಿ ಎಸ್ ಪಿ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ಖಂಡಿಸಿ ಸಚಿವ ಅಶ್ವಥ್ ನಾರಾಯಣ್ ವಿರುದ್ದ ಕೊಲೆ ಯತ್ನ ಪ್ರಕರಣ ದಾಖಲಿಸಬೇಕು ಎಂದು ಮಲ್ಲೇಶ್ವರಂ ಪೊಲೀಸ್…
ಟಿಪ್ಪು ಹೊಡೆದಂತೆ ಸಿದ್ಧರಾಮಯ್ಯರನ್ನು ಹೊಡೆದು ಹಾಕೋಣ ಎಂಬ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಗೆ ಸ್ವಪಕ್ಷೀಯ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಿದ್ದರಾಮಯ್ಯ ರಾಜಕೀಯ ವಿರೋಧಿ ಮಾತ್ರ ಶತ್ರು ಅಲ್ಲ. ಸಚಿವ ಅಶ್ವಥ್ ನಾರಾಯಣ್ ಮಾತುಗಳನ್ನ ಒಪ್ಪುವುದಿಲ್ಲ. ಸಿದ್ಧರಾಮಯ್ಯಗೆ ಭಗವಂತ ದೀರ್ಘಾಯಿಷ್ಯ ಕೊಡಲಿ ಎಂದು ಪ್ರಾರ್ಥಿಸಿದರು. ಹಾಗೆಯೇ ಕಾಂಗ್ರೆಸ್ ವಿರುದ್ದ ವಾಗ್ದಾಳಿ ಮುಂದುವರೆಸಿದ ಶಾಸಕ ಸಿ.ಟಿ ರವಿ, ದೇಶ ಒಡೆದಿದ್ದು ಕಾಂಗ್ರೆಸ್ ನವರು.ಜಾತಿವಾರು ವಿಭಜನೆ ಮಾಡಿದ್ದ ಕಾಂಗ್ರೆಸ್. ಭಾಷೆ ಆಧಾರದಲ್ಲಿ ದೇಶ ವಿಭಜನೆ ಮಾಡಿದ್ರು. ಭ್ರಷ್ಟಾಚಾರದ ಬೀಜ ಬಿತ್ತಿದ್ದು ಕಾಂಗ್ರೆಸ್ ನವರು ಎಂದು ಹೇಳಿದರು. ಅಶ್ವಥ್ ನಾರಾಯಣ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಅಶ್ವಥ್ ನಾರಾಯಣ್ ಹಾಗೆ ಮಾತನಾಡಿದ್ರೆ ನಾವು ಖಂಡಿಸುತ್ತೇವೆ. ವಿರೋಧ ಪಕ್ಷದವರಿಗೆ ನಾವು ಗೌರವ ಕೊಡುತ್ತೇವೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಖಾಸಗಿ ಲೇಔಟ್ ನಿರ್ಮಾಣಕ್ಕೆ ಪರವಾನಗಿ ನೀಡಲು ಮೂರು ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಪಡೆಯುವಾಗ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕ ಮಂಜು ಕೆ.ಆರ್ ಹಾಗೂ ನಗರ ಯೋಜನಾಧಿಕಾರಿ ಭರತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದು, ದಾವಣಗೆರೆ ನಗರದ ನಗರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಖಾಸಗಿ ಲೇಔಟ್ ನಿರ್ಮಾಣಕ್ಕೆ ಶ್ರೀನಿವಾಸ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಪರವಾನಗಿ ನೀಡಲು ಮೂರು ಲಕ್ಷ ಲಂಚಕ್ಕೆ ಅಧಿಕಾರಿಗಳಿಬ್ಬರು ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1 ಲಕ್ಷ ಹಣವನ್ನು ಪಡೆದಿದ್ದರು. ನಂತರ ಶ್ರೀನಿವಾಸ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅಂತೆಯೇ ಬಾಕಿ 2 ಲಕ್ಷ ಹಣ ನೀಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದಂತ ಕೆ.ಆರ್ ಮಂಜು ಹಾಗೂ ಭರತ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.…
ಗೋಕಾಕ್: ಕೊಟ್ಟ ಸಾಲ ಕೇಳಿದ್ದಕ್ಕೆ ವೈದ್ಯರು ಉದ್ಯಮಿಯನ್ನು ಹತ್ಯೆಗೈದಿರುವ ಪ್ರಕರಣ ಗೋಕಾಕ ತಾಲ್ಲೂಕನ್ನೆ ಬೆಚ್ಚಿಬೀಳಿಸಿತ್ತು ಪ್ರಕರಣದ ಕುರಿತು ಆರು ದಿನಗಳ ಕಾಲ ಎಡೆಬಿಡದೆ ತನಿಖೆ ನಡೆಸಿದ ಪೊಲೀಸರು ಶವ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಮೂರನೆಯ ಕೊಲೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯ ನಡೆದ ಸ್ಥಳದಿಂದ 10ಕಿಮೀ ಅಂತರದಲ್ಲಿ ಪಂಚನಾಯಕನಟ್ಟಿ ಬಳಿ ಬಾವಿಯೊಂದರಲ್ಲಿ ರಾಜು ಝಂವರ(52)ಶವ ಪತ್ತೆಯಾಗಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿ,ಡಾ ಸಚೀನ್ ಶಂಕರ ಶಿರಗಾವಿ,.(36) ಚನ್ನಮ್ಮ ನಗರ ಗೋಕಾಕ್,ಡಾ.ಶಿವಾನಂದ ಕಾಡಗೌಡ ಪಾಟೀಲ ಸಿಟಿ ಹಾಸ್ಪಿಟಲ್ ಗೋಕಾಕ್ ಈ ಇಬ್ವರು ಆರೋಪಿಗಳನ್ಬು ಈ ಹಿಂದೆಯೇ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದ ಪೋಲಿಸರು ಈಗ ಮೂರನೇಯ ಆರೋಪಿಯಾದ,ಇರ್ಷಾದ್ ಅಹ್ಮದ ತ್ರಾಸಗರ್(25) ಎಂಬಾತನನ್ನು ಬಂಧಿಸಿದ್ದಾರೆ. ಕಳೆದ ಒಂದು ವಾರದಿಂದ ಬೃಹತ್ ಕಾಲುವೆ ಸುತ್ತ, ಹೊಲ ಗದ್ದೆಗಳಲ್ಲಿ ಪೊಲೀಸರು ತಿರುಗಾಡಿ ಮೃತ ಉದ್ಯಮಿಯ ದೇಹಕ್ಕಾಗಿ ಹುಡುಕಾಟ ನಡೆಸಿದ್ದರು. ಇದೀಗ ಪೊಲೀಸರು ಪ್ರಕರಣವನ್ನು ಬೇದಿಸಿದ್ದು ಕೋಲೆಗೆ ಪ್ರಮುಖ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ತಪಾಸಣೆಗೈದ ಪೊಲೀಸರಿಗೆ…
ಬೆಂಗಳೂರು: ಸರ್ಕಾರದ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ ಮಾಡುತ್ತೇವೆ ಅಂತ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಕೇಳಿದರು. ಗುತ್ತಿಗೆ ಆಧಾರದಲ್ಲಿ ಆಗೋ ನೇಮಕಾತಿ ಮೀಸಲಾತಿ ಜಾರಿ ಮಾಡಿ. ಕೇವಲ ಸರ್ಕಾರ ಹುದ್ದೆಗೆ ಮಾತ್ರ ಮೀಸಲಾತಿ ಜಾರಿ ಮಾಡಿದರೆ ಸಾಲದು. ಸರ್ಕಾರಿ ಇಲಾಖೆಗೆ ಗುತ್ತಿಗೆ ಆಧಾರದ ನೇಮಕಾತಿಗೂ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯ ಮಾಡಿದರು. ಇದಕ್ಕೆ ಉತ್ತರ ನೀಡಿದ ಸಿಎಂ ಬೊಮ್ಮಾಯಿ, ಈಗಾಗಲೇ ಎಲ್ಲಾ ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಆಗಿದೆ. ಹೊಸ ನೇಮಕಾತಿಯಲ್ಲಿ ಮೀಸಲಾತಿ ಕೊಟ್ಟೆ ಕೊಡುತ್ತೇವೆ. ಎಲ್ಲಾ ನೇಮಕಾತಿಯಲ್ಲಿ ಸಂವಿಧಾನದ ಪ್ರಕಾರ ಮೀಸಲಾತಿ ಕೊಡ್ತೀವಿ. ಇದರಲ್ಲಿ ಎರಡು ಮಾತಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ:…