Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ಹುಬ್ಬಳ್ಳಿ: ಕಳೆದ ಹಲವು ವರ್ಷಗಳಿಂದ ಕನ್ನಡದ ಶ್ರೇಷ್ಠ ಕೃತಿಗಳಿಗೆ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ನಿಂದ ಮೂರು ವಿಧದ ಕೃತಿಗಳಿಗೆ ಪುಸ್ತಕ ಪ್ರಶಸ್ತಿಗಳನ್ನು ನೀಡುತ್ತ ಬಂದಿದ್ದು, ಈ ಸಾಲಿಗೆ ಪುಸ್ತಕ ಪ್ರಶಸ್ತಿಗಳಿಗಾಗಿ ಕೃತಿಗಳ ಆಹ್ವಾನ ನೀಡಲಾಗಿದೆ. ಜಾನಪದಕ್ಕೆ ಸಂಬಂಧಿಸಿದಂತೆ ಕೃತಿಗೆ ಜಾನಪದ ಸಿರಿ ಪ್ರಶಸ್ತಿ, ಮಹಿಳೆಯರು ರಚಿಸಿದ ಯಾವುದೇ ಪ್ರಕಾರದ ಸಾಹಿತ್ಯ ಕೃತಿಗೆ ಅಕ್ಕ ಪ್ರಶಸ್ತಿ ಹಾಗೂ 18 ವರ್ಷದೊಳಗಿನ ಮಕ್ಕಳು ರಚಿಸಿದ ಕೃತಿಗೆ ಅರಳು ಮೊಗ್ಗು ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರತಿಯೊಂದು ಪ್ರಶಸ್ತಿಗೂ 25 ಸಾವಿರ ರೂ.ನಗದು, ಹಾಗೂ ಪ್ರಶಸ್ತಿ ಫಲಕಗಳನ್ನು ಒಳಗೊಂಡಿರುತ್ತದೆ. ಜನವರಿ 2020 ರಿಂದ ಡಿಸೆಂಬರ್ 2022ರ ಅವಧಿಯಲ್ಲಿ ಪ್ರಥಮ ಬಾರಿಗೆ ಮುದ್ರಣಗೊಂಡ ಕೃತಿಗಳನ್ನು ರಚಿಸಿದ ಲೇಖಕರು ತಮ್ಮ ಕೃತಿಯ 3 ಪ್ರತಿಗಳನ್ನು ಇದೇ ಮಾರ್ಚ್ 10ರೊಳಗಡೆ ಚಂದ್ರಶೇಖರ್ ವಸ್ತ್ರದ, ಬೆಳಗು, ಆನಂದ ಆಶ್ರಮ ರಸ್ತೆ, ಪಂಚಾಕ್ಷರಿ ನಗರ, ಗದಗ. ದೂರುವಾಣಿ 9448677434 ಈ ವಿಳಾಸಕ್ಕೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕೊಲೆಗೆ ಸುಪಾರಿ ಪಡೆದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಹೊಳಲ್ಕೆರೆ ಪೊಲೀಸರು ಇಬ್ಬರನ್ನು ಬಂಧನ ಮಾಡಿದ್ದು, ಸತೀಶ್ ರೆಡ್ಡಿ ಹತ್ಯೆಗೆ 2ಕೋಟಿ ರೂ. ಸುಪಾರಿ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಬಂಧಿತರನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಟೀಮ್ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸ್ಕೆಚ್ ಹಾಕಿತ್ತು ಎನ್ನಲಾಗಿದೆ. ಹಲವು ದಿನಗಳಿಂದ ಶಾಸಕ ಸತೀಶ್ ರೆಡ್ಡಿ ಅವರನ್ನ ಇಬ್ಬರು ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ. ಇದೀಗ ಇಬ್ಬರನ್ನ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಸತೀಶ್ ರೆಡ್ಡಿ, ‘ರಾಜಕೀಯ ಕಾರಣಕ್ಕಾಗಿ ಕೊಲೆಗೆ ಸುಪಾರಿ ನೀಡಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಇಂತಹ ಹತ್ಯೆ ಸ್ಕೆಚ್ಗಳಿಗೆ ನಾನು ಭಯಪಡಲ್ಲ. ಯಾವುದೇ ರಾಜಕೀಯ ಪಕ್ಷದ ಮೇಲೂ ಆರೋಪ ಮಾಡಲ್ಲ. ನಾನು ಯಾರಿಗೂ ದ್ರೋಹ ಮಾಡಿಲ್ಲ. ನನಗೆ ಯಾವುದೇ ಬೆದರಿಕೆ ಕರೆ…
ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಉತ್ತಮ ಕೆಲಸ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಅವರ ಗೆಲುವಿಗೆ ಶ್ರಮಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೂಚಿಸಿದರು. ತಮ್ಮನ್ನು ಭೇಟಿ ಮಾಡಿದ ಸುರೇಶಗೌಡ ನೇತೃತ್ವದ ತುಮಕೂರು ಗ್ರಾಮಾಂತರ ಕ್ಷೇತ್ರದ ಮುಖಂಡರಿಗೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸುರೇಶ್ ಗೌಡ ಒಳ್ಳೆಯ ಕೆಲಸಗಾರರಾಗಿದ್ದಾರೆ. ಅವರು ಸದಾ ಜನರ ಪರವಾಗಿ ಕೆಲಸ ಮಾಡುವ ವ್ಯಕ್ತಿಯಾಗಿದ್ದು, ಕೆಲಸದ ಆಧಾರದಲ್ಲಿ ಚುನಾವಣೆಗಳು ನಡೆಯುವುದಾದರೆ ಸುರೇಶಗೌಡ ಅವರು ಸೋಲುವುದಿಲ್ಲ. ರಾಜಕೀಯದಲ್ಲಿ ಏರುಪೇರುಗಳಾಗುತ್ತವೆ. ಈ ಬಾರಿ ಚುನಾವಣೆಯಲ್ಲಿ ಸುರೇಶ್ ಗೌಡ ಅವರು ಗೆಲ್ಲುತ್ತಾರೆ ಎಂಬ ವರದಿಗಳಿವೆ. ಎಲ್ಲರೂ ಸೇರಿ ಅವರನ್ನು ಗೆಲ್ಲಿಸುವಂತೆ ಸೂಚಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೆ.ಆರ್.ಪೇಟೆ: ಕೆ.ಆರ್.ಪೇಟೆಯಲ್ಲಿ ಕ್ಷೇತ್ರದಲ್ಲಿ ಈಗ ಇರುವ ಸರ್ಕಾರ ಯಾವುದೆ ಅಭಿವೃದ್ದಿ ಕೆಲಸ ಮಾಡಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಹೋಬಳಿ ಮಟ್ಟದ ಕಾರ್ಯಕರ್ತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ನಿಖಿಲ್, ಕೆ.ಆರ್.ಪೇಟೆ ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ ಮತ್ತು ಜೆಡಿಎಸ್ ಪಕ್ಷ ನನಗೆ ತಾಯಿ ಇದ್ದಂತೆ. ತಾಯಿ ದ್ರೋಹ ಮಾಡಿ ಹೋದ ಹಾಲಿ ಶಾಸಕ ಹಾಗೂ ಮಂತ್ರಿ ಅಗಿರುವವರು ಯಾವುದೆ ಕೆಲಸ ಮಾಡಿಲ್ಲ ಎಂದರು. ಈ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರಸ್ವಾಮಿ ಆಗಮಿಸಿದ ವೇಳೆ ಅಕ್ಕಿಹೆಬ್ಬಾಳು ಹೋಬಳಿ ಮಟ್ಟದ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದ್ದರು. ನಂತರ ರೋಡ್ ಶೋ ಮುಖಾಂತರ ವೇದಿಕೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಎಚ್.ಟಿ.ಮಂಜು, ಎ.ಆರ್.ರಘು, ಶ್ರೀನಿವಾಸ್, ಜಮೀರ್ ಅಹಮ್ಮದ್ ಮತ್ತು ಹೋಬಳಿಯ ಮಟ್ಟದ ಜೆಡಿಎಸ್ ನ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕಾಂತಾರ ಚಿತ್ರದ ಮೂಲಕ ಪಿಲ್ಮ ಇಂಡಸ್ಟ್ರಿಯಲ್ಲೇ ದಾಖಲೆ ಬರೆಯುವುದರ ಮೂಲಕ ಸ್ಯಾಂಡಲ್ ವುಡ್ ಖ್ಯಾತಿಯನ್ನು ಜಾಗತಿಕವಾಗಿ ಹೆಚ್ಚಿಸಿದ ಯಶಸ್ಸು ನಟ ರಿಷಬ್ ಶೆಟ್ಟಿಗೆ ಸಲ್ಲುತ್ತದೆ. ಕರಾವಳಿ ತೀರದ ಕಥೆಹೊತ್ತು ಬಂದಿದ್ದ ಕಾಂತಾರವು 400 ಕೋಟಿ ರೂಪಾಯಿಗೂ ಅಧಿಕ ಹಣ ಗಳಿಸಿ ರಿಷಬ್ ಶೆಟ್ಟಿ ಅವರ ಕೆಲಸದ ಬಗ್ಗೆ ಮೆಚ್ಚುಗೆಯನ್ನು ಹೆಚ್ಚಿಸಿತ್ತು. ಇದರಿಂದ ರಿಷಬ್ ಶೆಟ್ಟಿ ಅವರಿಗೆ ಈಗ ‘ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಘೋಷಣೆ ಆಗಿದೆ. ಫೆಬ್ರವರಿ 20ರಂದು ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ನಲ್ಲಿ ಈ ಸಮಾರಂಭ ನಡೆಯಲಿದೆ. ಈ ಗೌರವ ಸಿಕ್ಕಿರುವುದಕ್ಕೆ ಅಭಿಮಾನಿಗಳು, ಆಪ್ತರು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾ ಮೂಲಕ ರಿಷಬ್ ಶೆಟ್ಟಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಇವರ ವತಿಯಿಂದ ಫೆಬ್ರವರಿ 16ರಂದು ಸಾರ್ವಜನಿಕ ಕುಂದುಕೊರತೆ ಸಭೆ ನಡೆಯಲಿದೆ. ಮಧುಗಿರಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಪೂರ್ವಾಹ್ನ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಭೆ ನಡೆಯಲಿದೆ. ಸಾರ್ವಜನಿಕರು ತಮ್ಮ ಅಹವಾಲಿನ ಜೊತೆಗೆ ಕುಂದುಕೊರತೆ ಸಭೆಯಲ್ಲಿ ಹಾಜರಾಗುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಧುಗಿರಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ರಾಜ್ಯ ಸರ್ಕಾರ ಟೆಂಡರ್ ಗೋಲ್ಮಾಲ್ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಆರೋಪಕ್ಕೆ ದಾಖಲೆ ನೀಡಬೇಕು. ಕಾಂಗ್ರೆಸ್ ನವರು ತಾವು ಮಾಡಿದ ಅನುಭವದಿಂದ ಮಾತನಾಡುತ್ತಿದ್ದಾರೆ. ಕಳೆದ ಚುನಾವಣೆ ವೇಳೆ ಮಾಡಿದ್ದ ಕರ್ಮಕಾಂಡ ನೆನೆಸಿಕೊಳ್ಳೂತ್ತಿದ್ದಾರೆ. ಕಾಂಗ್ರೆಸ್ ಅವಧಿಯ ಅಕ್ರಮ ಲೋಕಾಯುಕ್ತದಲ್ಲಿದೆ. ಕಾಂಗ್ರೆಸ್ ತಾವು ಜೈಲಿಗೆ ಹೋಗೋದನ್ನ ತಪ್ಪಿಸಿಕೊಳ್ಳಲಿ. ಜಾಮೀನು ಪಡೆದು ರಕ್ಷಣೆ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದರು. ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದರೆ ಸುಲಿಗೆ ಮಾಡುವುದು ಸ್ಪಷ್ಟವಾಗಿದೆ. ಕಾಂಗ್ರೆಸ್ ನಾಯಕರ ಹೇಳಿಕೆಯಿಂದ ಅಜೆಂಡಾ ಸ್ಪಷ್ಟವಾಗಿದೆ. 40 ಪರ್ಸೆಂಟ್ ಕಮಿಷನ್ ಆರೋಪದ ಬಗ್ಗೆ ಸಾಬೀತು ಮಾಡಿಲ್ಲ. ಕೋರ್ಟ್ ನಲ್ಲಿ ಕೇಸ್ ದಾಖಲಿಸುತ್ತೇವೆ ಎಂದಿದ್ದರು. ಆದರೆ ದಾಖಲಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತೆ ವಾಗ್ದಾಳಿ ಮುಂದುವರೆಸಿದ್ದು, ನನ್ನ ಅಪ್ಪನಾಣೆಗೂ ಸಿದ್ದರಾಮಣ್ಣ ಮುಂದೆ ಸಿಎಂ ಆಗಲ್ಲ ಎಂದು ಲೇವಡಿ ಮಾಡಿದ್ದಾರೆ. ಮಾತನಾಡಿದ ನಳೀನ್ ಕುಮಾರ್ ಕಟೀಲ್, ಅವತ್ತು ಸೋನಿಯಾ ಗಾಂಧಿ ಕಾಲಿಡಿದು ಸಿಎಂ ಆಗಿದ್ರಿ. ದೇವೇಗೌಡರ ಹತ್ತಿರ ಬೆಳೆದು ಅವರನ್ನೇ ತುಳಿದ್ರಲ್ಲಾ ಸಿದ್ದರಾಮಣ್ಣ. ನನ್ನ ಅಪ್ಪನಾಣೆಗೂ ನೀವು ಮುಂದೆ ಸಿಎಂ ಆಗಲ್ಲ ಎಂದರು. ಒಂದ್ ದಿನ ಸೋನಿಯಾ ಗಾಂಧಿ ನಿವಾಸದ ಮುಂದೆ ಕತ್ತೆ ಮಲಗಿತ್ತು. ಖರ್ಗೆ ಅಜಾದ್ ಸೇರಿ ಯಾರಿಂದಲೂ ಕತ್ತೆ ಓಡಿಸಲು ಆಗಲಿಲ್ಲ. ಕತ್ತೆಯನ್ನ ಓಡಿಸಿದ್ದು ಸಿದ್ದರಾಮಣ್ಣ. ಕಾಂಗ್ರೆಸ್ ಸೇರ್ತೀಯಾ ಅಂದಿದ್ರಂತೆ ಅದಕ್ಕೆ ಕತ್ತೆ ಓಡಿತು. ಕತ್ತೆಗೂ ಕಾಂಗ್ರೆಸ್ ಬೇಡವಾಗಿದೆ ಎಂದು ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಫೆಬ್ರವರಿ 17ರಂದು ಬೆಳಿಗ್ಗೆ 10:15ಕ್ಕೆ ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಿಸಿದರು. ಈ ಬಗ್ಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಇದೇ ಶುಕ್ರವಾರ ಬೆಳಗ್ಗೆ 10:15 ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ . ಸುಮಾರು ಒಂದು ಗಂಟೆ ಕಾಲ ಬಜೆಟ್ ಭಾಷಣ ಇರಲಿದೆ. ಬಳಿಕ ಫೆಬ್ರುವರಿ 20ರಿಂದ 22ರವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. ಫೆಬ್ರುವರಿ 22ರಂದು ಸರ್ಕಾರದಿಂದ ಉತ್ತರ ಬರಲಿದೆ ಎಂದು ತಿಳಿಸಿದರು. ಈಗಾಗಲೇ ಬಜೆಟ್ ಅಧಿವೇಶನ ಫೆಬ್ರುವರಿ 10ರಂದು ಆರಂಭವಾಗಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯುತ್ತಿದೆ.ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಇದು ಕೊನೆಯ ಬಜೆಟ್ ಆಗಿದೆ. ಏಪ್ರಿಲ್–ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಈ ಬಾರಿ ಬಜೆಟ್ ಮೇಲೆ ಕುತೂಹಲವಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ತುಮಕೂರು: ಶಾಲೆಯ ನೈರ್ಮಲ್ಯ ಕಾಪಾಡಬೇಕಾದ ಶಾಲೆಯ ಸಿಬ್ಬಂದಿ, ಆಡಳಿತ ಮಂಡಳಿ, ಶಾಲೆಯ ಮುಂಭಾಗದಲ್ಲಿ ಕೊಳಚೆ ತುಂಬಿದ್ದರೂ, ಸ್ವಚ್ಛಗೊಳಿಸಲು ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿರುವ ಘಟನೆ ತುಮಕೂರಿನ ಎಂಪ್ರೆಸ್ ಶಾಲೆಯಲ್ಲಿ ನಡೆದಿದ್ದು, ಶಾಲೆಯ ಮುಖ್ಯೋಪಾದ್ಯಾಯರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ನಿರ್ಲಕ್ಷ್ಯವಹಿಸಿದ್ದಾರೆ ಅನ್ನೋ ಆಕ್ರೋಶದ ಮಾತುಗಳು ಇದೀಗ ಕೇಳಿ ಬಂದಿವೆ. ತುಮಕೂರು ಮಹಾನಗರ ಪಾಲಿಕೆ, ಬಸ್ ನಿಲ್ದಾಣ ಸಮೀಪದ, ಮೈಸೂರು ಮಹಾರಾಜರು ಕೊಡುಗೆಯಾಗಿ ನೀಡಿರುವ ಜಾಗದಲ್ಲಿ ಕಟ್ಟಿರುವ ಹಾಗೂ ಕೆಆರ್ ಜಿ ಎಂಎಸ್ ಎಂಬ ಶಾಲೆಯ ಆವರಣಕ್ಕೆ ಹೊಂದಿಕೊಂಡಂತಿರುವ, ತುಮಕೂರು ನಗರ ಹೃದಯ ಭಾಗದಲ್ಲಿರುವ ತುಮಕೂರಿನ ಎಂಪ್ರೆಸ್ ಶಾಲೆಯಲ್ಲಿ ಇಂತಹದ್ದೊಂದು ದುಸ್ಥಿತಿ ಕಂಡು ಬಂದಿದ್ದು, ಶಾಲೆಯ ಸ್ವಚ್ಚವಾಗಿಡದೇ ನಿರ್ಲಕ್ಷ್ಯವಹಿಸಲಾಗಿದೆ. ಮಕ್ಕಳು ಊಟ ಮಾಡಿ ಕೈ ತೊಳೆಯಲು ಸರಿಯಾದ ವ್ಯವಸ್ಥೆ ಇಲ್ಲದೇ, ಶಾಲೆಯ ಆವರಣದಲ್ಲಿ ಮಕ್ಕಳು ಊಟದ ಬಳಿಕ ಎಸೆದ ಅನ್ನ, ಕೈ ತೊಳೆದ ನೀರು ಕೊಳೆಯಾಗಿ ಗಬ್ಬೆದ್ದು ನಾರುತ್ತಿದೆ. ಇದರ ಬಗ್ಗೆ ಯಾರ ಗಮನಕ್ಕೆ ತಂದರೂ ಯಾರೂ ಕಿವಿಗೆ…