Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ಮಧುಗಿರಿ: ದೊಡ್ಡೇರಿ ಹೋಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ದೊಡ್ಡೇರಿ ಕ್ಲಸ್ಟರ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ಆಯೋಜನೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ದಾಸಪ್ಪನವರು ಮಾತನಾಡಿ, ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಯಲ್ಲಿ ಉತ್ತಮವಾದ ಗುಣಮಟ್ಟದ ಬೋಧನೆ, ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮ ಕೂಡಿರುತ್ತವೆ. ಇದನ್ನು ತಮ್ಮ ಮಕ್ಕಳು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ನಮ್ಮ ಮಕ್ಕಳು ಓದುವುದರಿಂದ ಕನ್ನಡ ಉಳಿಸುವಂತೆ ಮಾಡಬಹುದು ಎಂದು ಕರೆ ನೀಡಿದರು. ಶಾಲೆಯ ಮುಖ್ಯ ಶಿಕ್ಷಕರಾದ ನರಸಪ್ಪನವರು ಮಾತನಾಡಿ, ಇಂದು ಶಾಲಾ ವಾರ್ಷಿಕೋತ್ಸವಕ್ಕೆ ಎಲ್ಲಾ ಮಕ್ಕಳ ತಂದೆ ತಾಯಂದಿರ ಆಶೀರ್ವಾದದೊಂದಿಗೆ, ಊರಿನ ಗಣ್ಯರೊಂದಿಗೆ ನಡೆಯುತ್ತಿರುವುದು ಸಂತೋಷ ತಂದಿದೆ, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಕಾರ್ಯಕ್ರಮಗಳು ಆಯೋಜನೆ ಮಾಡಿದರೆ, ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳ ಕಾರ್ಯಕ್ರಮಕ್ಕಿಂತ ನಮ್ಮ ಸರ್ಕಾರಿ ಶಾಲೆ ಉತ್ತಮ ಎಂದು ನೋಡಿಸಬಹುದಾಗಿರುತ್ತದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದಲ್ಲಿ ಆಯ್ಕೆಯಾದ ರಾಜ್ಯಮಟ್ಟ ಮತ್ತು ಜಿಲ್ಲಾಮಟ್ಟದ ಮಕ್ಕಳಿಗೆ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ…
ಈ ಬಾರಿಯ ಏರ್ ಶೋ ಎಲ್ಲರೂ ಹೆಮ್ಮೆಪಡುವಂತಾಗಿದೆ. ಈ ಬಾರಿಯ ಏರ್ ಶೋ ಎಲ್ಲಾ ದಾಖಲೆಗಳನ್ನು ಮೆಟ್ಟಿ ನಿಂತಿದೆ. ಈ ಐದು ದಿನದ ಏರ್ ಶೋನಲ್ಲಿ ದೇಶ, ವಿದೇಶಿ ನಿರ್ಮಿತ ಯುದ್ಧ ವಿಮಾನಗಳು ಹಾರಾಟ ನಡೆಸಲಿವೆ ಎಂದು ಪ್ರಧಾನಿ ಮೋದಿ ಹೇಳಿದರು. ಬೆಂಗಳೂರಿನಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2023ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏರ್ ಶೋನಿಂದ ಕರ್ನಾಟಕದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಕರ್ನಾಟಕದ ಯುವ ಜನತೆ ಹೊಸ ಹೊಸ ತಂತ್ರಜ್ಞಾನ ಸ್ವಾಗತಿಸುತ್ತಿದ್ದಾರೆ. ಕರ್ನಾಟಕ ತಂತ್ರಜ್ಞಾನದಲ್ಲಿ ಮುಂದಿದೆ ಎಂದು ಹೇಳಿದರು. ಏರ್ ಶೋ ಮೂಲಕ ಹೊಸ ಹೊಸ ಉದ್ಯೋಗ ಸೃಷ್ಟಿಯಾಗಲಿವೆ. ಇದೊಂದು ಕೇವಲ ಕಾರ್ಯಕ್ರಮ ಆಗಿ ಉಳಿದಿಲ್ಲ. ಇದು ವಿಶ್ವದಲ್ಲಿ ಭಾರತದ ಶಕ್ತಿಯನ್ನು ಪ್ರದರ್ಶಿಸುತ್ತದೆ. ಏರ್ ಶೋ ಭಾರತದ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಇಂತಹ ಒಂದು ಅದ್ಭುತ ಕ್ಷಣಕ್ಕೆ ಬೆಂಗಳೂರು ಸಾಕ್ಷಿಯಾಗಿದೆ ಎಂದು ನರೇಂದ್ರ ಮೋದಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಬೆಳಗಾವಿ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯನ್ನು ವೈದ್ಯ ಕೊಲೆ ಮಾಡಿರುವ ಘಟನೆ ನಡೆದಿದ್ದು, ಜಿಲ್ಲೆಯ ಗೋಕಾಕ್ ನಗರದ ನಿವಾಸಿ ರಾಜು ಝಂವರ ಮೃತ ದುರ್ದೈವಿ. ಉದ್ಯಮಿ ಫೆ.10ರಂದು ಗೋಕಾಕ್ ನಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಫೆ.11ರಂದು ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಉದ್ಯಮಿ ರಾಜು ಝಂವರ್ಗೆ ಕೊನೆ ಬಾರಿ ಕರೆ ಮಾಡಿದ್ದವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ರಾಜು ಝಂವರ್ ನಾಪತ್ತೆ ಬಳಿಕ ವೈದ್ಯ ಡಾ.ಸಚಿನ್ ಶಿರಗಾವಿ ಕೂಡ ರಾಜುಗೆ ದೂರವಾಣಿ ಕರೆ ಮಾಡಿದ್ದನು. ಡಾ.ಸಚಿನ್ ಶಿರಗಾವಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಸತ್ಯ ಬಾಯಿಬಿಟ್ಟಿದ್ದಾನೆ. ತಾನು (ಡಾ.ಸಚಿನ್ ಶಿರಗಾವಿ) ರಾಜುವನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಎಸಿದಿರುವುದಾಗಿ ಹೇಳಿದ್ದಾನೆ. ಸದ್ಯ ನಾಪತ್ತೆಯಾಗಿದ್ದ ಉದ್ಯಮಿ ರಾಜುಗಾಗಿ ಕೊಳವಿ ಬಳಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಶೋಧ ಕಾರ್ಯ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ಬೆಳಗಾವಿ: ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಸಾತೇರಿ ಬೆಳವಟ್ಕರ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಭಾರತೀಯ ಜನತಾ ಪಕ್ಷದ ಸರ್ಕಾರ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ. ನಾವು ಬೆಳಗಾವಿ ದಕ್ಷಿಣ ಮತಕ್ಷೇತ್ರ ಈಗ ಕಾಂಗ್ರೆಸ್ ಮಾಯವಾಗುತ್ತಾ ಇರುವುದು ನಮ್ಮ ನಾಯಕರಗಳ ಫಲತ್ಕೃತಿಯಾಗಿದೆ . ಈ ಸರ್ಕಾರ ಹಾಗೂ ಇಲ್ಲಿಯ ಶಾಸಕರ ಧೋರಣೆಗಳಿಂದ ಜನರು ಬೆಸೆತ್ತು ಹೋಗಿದ್ದಾರೆ ನಾವು ಈಗ ಯಾರಿಗೂ ಹೆದರುವುದಿಲ್ಲ ನಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿ ಹೊಳೆ, ಶಾಸಕಿ ಅಂಜಲಿ ನಿಂಬಾಳ್ಕರ್ ಮಾರ್ಗದರ್ಶನದಲ್ಲಿ ದಕ್ಷಿಣ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಧ್ವಜ ಹಾರಿಸುತ್ತೇವೆ. ನಿಮ್ಮ ಆಶೀರ್ವಾದ ನಿಮ್ಮ ಬೆಂಬಲ ನಮ್ಮ ಜೊತೆ ಇರಲಿ ಎಂದು ನಾನು ಆಶಿಸುತ್ತೇನೆ ತಮಗೆ ನಾನು ಆಶ್ವಾಸನೆ ನೀಡಬಯಸುತ್ತೇನೆ ದಕ್ಷಿಣದ ಸರ್ವಾಂಗಿನ ಅಭಿವೃದ್ಧಿ ಕಾಂಗ್ರೆಸ್ ಪಕ್ಷದ ಗುರಿಯಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಹುಟ್ಟು ಹಬ್ಬದ ದಿನದಂದೇ ಚೂಡಿದಾರ್ ನ ಶಾಲ್ ಯಂತ್ರಕ್ಕೆ ಸಿಲುಕಿ ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ಕಾಸರಗೋಡಿನ ಮಂಜೇಶ್ವರ ತೂಮಿನಾಡಿನಲ್ಲಿ ನಡೆದಿದೆ.ಮೃತ ದುರ್ದೈವಿಯನ್ನು ಜಯಶೀಲ (24) ಎಂದು ವರದಿಯಾಗಿದೆ. ಜಯಶೀಲ ತೂಮಿನಾಡಿನಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬೃಹತ್ ಗ್ರೈಂಡರ್ನಲ್ಲಿ ತೆಂಗಿನಕಾಯಿ ಅರೆಯುತ್ತಿದ್ದ ವೇಳೆ ಕೆಳಬದಿಯ ತಿರುಗುವ ಕಬ್ಬಿಣದ ಹಿಡಿಗೆಯಲ್ಲಿ ಆಕೆ ಧರಿಸಿದ್ದ ಚೂಡಿದಾರ್ ನ ಶಾಲ್ ಸಿಲುಕಿಕೊಂಡಿತ್ತು. ಗಂಭೀರವಾಗಿ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ. ಒಂದೂವರೆ ವರ್ಷಗಳ ಹಿಂದೆ ಜಯಶೀಲ ಅವರ ಮದುವೆಯಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಏರ್ ಶೋ ಭಾರತದ ಆತ್ಮವಿಶ್ವಾಸವನ್ನ ಮತ್ತಷ್ಟು ಹೆಚ್ಚಿಸಿದೆ. ಏರೋ ಶೋ ಮೂಲಕ ನವಭಾರತದ ಶಕ್ತಿ ಪ್ರದರ್ಶನಗೊಳ್ಳುತ್ತಿದೆ. ರಕ್ಷಣಾ ವಲಯದಲ್ಲಿ ಯುವಕರು ಹೆಚ್ಚಿನ ಸಾಧನೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ಶೋ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಏರೋ ಇಂಡಿಯಾ ಶೋ ಭಾರತದ ಆತ್ಮವಿಶ್ವಾಸವನ್ನ ಮತ್ತಷ್ಟು ಹೆಚ್ಚಿಸಿದೆ. ಭಾರತ ಸೇನೆಯ ಸಾಮರ್ಥ್ಯವನ್ನ ಪ್ರತ್ಯಕ್ಷವಾಗಿ ನೋಡುತ್ತಿದ್ದೇವೆ ಕಳೆದ 5 ವರ್ಷಗಳಲ್ಲಿ ಭಾರತ ಸೇನೆ ಮತ್ತಷ್ಟು ಬಲಗೊಂಡಿದೆ. ಈಗ ಭಾರತ ದೂರದೃಷ್ಠಿ ಹಾಗೂ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದೆ. ರಕ್ಷಣಾ ಕ್ಷೇತ್ರಕ್ಕೆ ವಿದೇಶ ಬಂಡವಾಳ ಹರಿದು ಬರುತ್ತಿದೆ. ಏರೋ ಇಂಡಿಯಾ ಭಾರತಕ್ಕೆ ಒಂದು ಹೆಮ್ಮೆಯ ಸಂಗತಿ. ಏರ್ ಶೋ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ರಾಷ್ಟ್ರಗಳು ಭಾಗಿಯಾಗಿವೆ ಎಂದರು. ಕರ್ನಾಟಕ ತಂತ್ರಜ್ಞಾನ ಕ್ಷೇತ್ರದಲ್ಲಿ ಬಹಳಷ್ಟು ಮುಂದುವರೆದಿದೆ. ರಕ್ಷಣಾ ವಲಯದಲ್ಲಿ ಯುವಕರು ಹೆಚ್ಚಿನ ಸಾಧನೆ ಮಾಡಬೇಕು ಎಂದು ಕರ್ನಾಟಕದ ಯುವಕರಿಗೆ ಪ್ರಧಾನಿ ಮೋದಿ ಕರೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬೆಳಗಾವಿ: ಭಾರಪತೀಯ ಜನತಾ ಪಾರ್ಟಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಬ್ರಾಹ್ಮಣ ಸಮಾಜವೇ ಕಾರಣ ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದ್ದಾರೆ. ಇಲ್ಲಿನ ಭಾಗ್ಯ ನಗರದ ಸಿಟಿ ಹಾಲ್ ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬ್ರಾಹ್ಮಣ ಸಮಾಜದ ಸಾಧಕರಿಗೆ ವಿಪ್ರಶ್ರೀ ಪ್ರಶಸ್ತಿ ಪ್ರಧಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಬ್ರಾಹ್ಮಣ ಸಮುದಾಯ ಸ್ವಾಭಿಮಾನಿ ಸಮುದಾಯವಾಗಿದೆ. ಬಿಜೆಪಿ ಪಕ್ಷ ಬೆಳೆಯಲು ಬ್ರಾಹ್ಮಣ ಸಮುದಾಯದ ಕೊಡುಗೆ ದೊಡ್ಡದು. ಬ್ರಾಹ್ಮಣರಿಗೆ ಸೌಲಭ್ಯಗಳನ್ನು ಕೊಡುವಲ್ಲಿ ಹಿಂದೇಟು ಹಾಕುವುದು ಸರಿಯಲ್ಲ ಎಂದರು. ಬೆಳಗಾವಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಗಾಯತ್ರಿ ಭವನಕ್ಕೆ ಶಾಸಕರ ಅಭಿವೃದ್ಧಿ ನಿಧಿಯಿಂದ 10 ಲಕ್ಷ ರೂ. ಅನುದಾನ ನೀಡಿದ್ದೇನೆ. ಇನ್ನು 1ವಾರದೊಳಗೆ ಮತ್ತೆ 30 ಲಕ್ಷ ರೂ. ಅನುದಾನ ನೀಡುವುದಾಗಿ ಅವರು ತಿಳಿಸಿದರು. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್. ಎಸ್. ಸಚ್ಚಿದಾನಂದಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ, ರಾಜ್ಯದಲ್ಲಿ ಬ್ರಾಹ್ಮಣರ ಜನಸಂಖ್ಯೆ 47.50 ಲಕ್ಷದಷ್ಟಿದೆ. ಆದರೆ…
ಬೆಳಗಾವಿ: ಜನಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳನ್ನು ಮಾಡಿದಾಗ ಅದು ಅವರ ಕರ್ತವ್ಯ ಎಂದೇ ಪರಿಗಣಿಸಿ ಜನ ಕೇವಲ ‘ಧನ್ಯವಾದ’ ಹೇಳಿ ಮುಗಿಸುವುದು ಸಾಮಾನ್ಯ. ಆದರೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಾಂಬ್ರಾ ಗ್ರಾಮಸ್ಥರು ಮನೆಗೇ ಬಂದು ಸನ್ಮಾನಿಸಿ ಕೃತಜ್ಞತೆ ಸಲ್ಲಿಸುವ ಮೂಲಕ ಕ್ಷೇತ್ರದ ಜನತೆ ಉಪಕೃತ ಭಾವನೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 30 ಲಕ್ಷ ರೂ. ಬಿಡುಗಡೆ ಮಾಡಿಸಿಕೊಟ್ಟ ಹಿನ್ನೆಲೆಯಲ್ಲಿ ಇಂದು ಸಾಂಬ್ರಾ ಗ್ರಾಮಸ್ಥರು ಲಕ್ಷ್ಮೀ ಹೆಬ್ಬಾಳಕರ ಅವರ ಗೃಹ ಕಚೇರಿಗೆ ಆಗಮಿಸಿ, ಹರಸಿ, ಆಶೀರ್ವದಿಸಿ ಸತ್ಕರಿಸಿದರು. ಗ್ರಾಮದ ಅಭಿವೃದ್ಧಿಗೆ ಹಿಂದೆಂದೂ ನೀಡದ ಕಾಣಿಕೆ ನೀಡಿರುವ ಬಗ್ಗೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಕೃತಜ್ಞತೆ ಅರ್ಪಿಸಿದ ಗ್ರಾಮಸ್ಥರು, ಕ್ಷೇತ್ರದ ಏಳಿಗೆಗೆ ಕಂಕಣಬದ್ಧರಾಗಿ ಕಾರ್ಯ ನಿರ್ವಹಿಸುತ್ತಿರುವ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸದಾ ತಮ್ಮ ಬೆಂಬಲವಿರುವುದಾಗಿ ಹೇಳಿದರಲ್ಲದೆ, ”ನೀವು ಸದಾ ನಮ್ಮೊಂದಿಗೆ, ನಾವು ಸದಾ ನಿಮ್ಮೊಂದಿಗೆ” ಎಂಬ ಅಭಯ ನೀಡಿದರು. ಅವರ ಈ…
‘ದಿ ಮಂಕಿ ಮ್ಯಾನ್’ ಖ್ಯಾತಿಯ ಜ್ಯೋತಿರಾಜ್ ಯಾನೆ ಕೋತಿ ರಾಜ್ ಎರಡೇ ತಾಸಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಕೇವಲ ಕೈಗಳ ಸಹಾಯದಿಂದ ಬಂಡೆ ಏರಿ ದಾಖಲೆ ನಿರ್ಮಿಸಿದ್ದಾರೆ. ಸಮುದ್ರ ಮಟ್ಟದಿಂದ 1,700 ಅಡಿ ಇರುವ ಗಡಾಯಿಕಲ್ಲನ್ನು ಪ್ರಪ್ರಥಮ ಬಾರಿಗೆ ಮೆಟ್ಟಿಲುಗಳ ಸಹಾಯವಿಲ್ಲದೆ ಅನಾಯಾಸವಾಗಿ ಏರುವ ಮೂಲಕ ದಿ ಮಂಕಿ ಮ್ಯಾನ್ ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ದೇವಸ್ಥಾನದ ಉತ್ತರ ಭಾಗದಿಂದ ಗಡಾಯಿಕಲ್ಲು ಏರುವ ಮುನ್ನ 9.50ಕ್ಕೆ ತೆಂಗಿನ ಕಾಯಿ ಒಡೆದು ಹತ್ತಲು ಆರಂಭಿಸಿದ್ದಾರೆ. ಸುಮಾರು 11.50ರ ಸುಮಾರಿಗೆ ಗಡಾಯಿಕಲ್ಲು ತುತ್ತ ತುದಿ ಏರಿ ಕನ್ನಡ ನಾಡಿನ ಬಾವುಟವನ್ನು ಹಾರಿಸುವ ಮೂಲಕ ಕನ್ನಡಭಿಮಾನ ಮೆರೆದಿದ್ದಾರೆ. ಇವರ ತಂಡದಿಂದೊಗೆ ಕುದುರೆಮುಖ ವನ್ಯಜೀವಿ ವಿಭಾಗದ ಆರ್.ಎಫ್.ಒ. ಸ್ವಾತಿ, ಅರಣ್ಯ ರಕ್ಷಕ ಕಿರಣ್ ಪಾಟೀಲ ಜತೆಗಿದ್ದರು. ಈ ಸಾಹಸವನ್ನು ವೀಕ್ಷಿಸಲು ದೂರದ ಊರು ಗಳಿಂದ ಜನಸ್ತೋಮವೇ ಬಂದು ನೆರೆದಿತ್ತು.…
ದಕ್ಷಿಣ ಭಾರತದ ನಟ ರಾಣಾ ದಗ್ಗುಬಾಟಿ ಹಾಗೂ ಅವರ ತಂದೆ ಸುರೇಶ್ ಬಾಬು ವಿರುದ್ಧ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಪ್ರಮೋದ್ ಕುಮಾರ್ ಎಂಬ ಉದ್ಯಮಿ ತಂದೆ ಮಗನ ವಿರುದ್ಧ ದೂರು ದಾಖಲಿಸಿದ್ದಾರೆ. ತನ್ನ ಒಡೆತನದ ಜಮೀನನ್ನು ಬಿಟ್ಟುಕೊಡುವಂತೆ ರಾಣಾ ಮತ್ತು ಆತನ ತಂದೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. 2014 ರಲ್ಲಿ, ರಾಣಾ ದಗ್ಗುಬಾಟಿ ಮತ್ತು ಸುರೇಶ್ ಬಾಬು ಹೈದರಾಬಾದ್ ನ ಫಿಲ್ಮ್ ಸಿಟಿ ಬಳಿ ಇರುವ ತಮ್ಮ ಜಮೀನನ್ನು ದೂರುದಾರ ಪ್ರಮೋದ್ ಗೆ ಹೋಟೆಲ್ ಸ್ಥಾಪಿಸಲು ಗುತ್ತಿಗೆ ನೀಡಿದ್ದರು ಎಂದು ವರದಿಯಾಗಿದೆ. 2018ರ ಫೆಬ್ರುವರಿಯಲ್ಲಿ ಗುತ್ತಿಗೆ ಅವಧಿ ಮುಗಿಯುವ ಹಂತದಲ್ಲಿದ್ದಾಗ, ಸುರೇಶ್ ಬಾಬು 18 ಕೋಟಿ ರೂ.ಗೆ ಆಸ್ತಿಯನ್ನು ಮಾರಾಟ ಮಾಡಲು ನಿರ್ಧರಿಸಿದರು. ಸ್ಥಳ ತೆರವು ಮಾಡುವಂತೆ ಪ್ರಮೋದ್ ಅವರಿಗೆ 5 ಕೋಟಿ ರೂ. ಪಾವತಿಸಿದ್ದರೂ ತೆರವು ಮಾಡಿಲ್ಲ ಎಂಬ ಆರೋಪವಿದೆ. ಪಿನಾಲೆ ಪ್ರಮೋದ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆಗ ಪ್ರಮೋದ್ ಕೂಡ 5 ಕೋಟಿ…