Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ ಗುಡ್ಡೆನೆಹಳ್ಳಿ ಗ್ರಾಮದ ಹಿರಿಯ ಜೆಡಿಎಸ್ ಮುಖಂಡರಾದ ಜಿ.ಶಂಕರೇಗೌಡ ಹಾಗೂ ಜೆಡಿಎಸ್ ಪಕ್ಷದಿಂದ ಗೆದ್ದು ಎಪಿಎಂಸಿ ಮಾಜಿ ಅಧ್ಯಕ್ಷರಾಗಿದ್ದ ಛಾಯಾಶಂಕರೇಗೌಡ ಹಾಗೂ ತುರುವೇಕೆರೆ ಕಾಂಗ್ರೆಸ್ ಮುಖಂಡರು ಹಾಗೂ ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷರಾದ ಕೆ.ಟಿ.ಶಿವಶಂಕರ್ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು. ಜೆ ಡಿ ಎಸ್ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯ ವೈಖರಿಗಳಿಂದ, ಬೇಸತ್ತು ಬಾರತೀಯ ಜನತಾ ಪಕ್ಷದ ತತ್ವ ಹಾಗೂ ಸಿದ್ದಾಂತವನ್ನು ಒಪ್ಪಿ ಶಾಸಕರಾದ ಮಸಾಲ ಜಯರಾಮ್ ರವರ ಸರಳತೆ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ನೂತನ ಸದಸ್ಯರು ತಿಳಿಸಿದರು. ಮಾಜಿ ಸಂಸದರಾದ ಎಸ್.ಪಿ. ಮುದ್ದುಹನುಮೇಗೌಡರ ನೇತೃತ್ವದಲ್ಲಿ ಹಾರ ಹಾಗೂ ಪಕ್ಷದ ಬಾವುಟ ನೀಡುವ ಮೂಲಕ ನೂತನ ಸದಸ್ಯರನ್ನು ಆತ್ಮೀಯವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಮಸಾಲ ಜಯರಾಮ್, ಮುಖಂಡರಾದ ಕೊಂಡಜ್ಜಿ ವಿಶ್ವನಾಥ್, ವಿ.ಬಿ.ಸುರೇಶ್, ಡಿ.ಜೆ.ರಂಗಸ್ವಾಮಿ ಮತ್ತಿತರರು ಹಾಜರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕುಂದಗೋಳ: ತಾಲೂಕಿನ ಬೆನಕನಹಳ್ಳಿ ಗ್ರಾಮಕ್ಕೆ ಇಂದು ಬೆಳ್ಳಂಬೆಳಗ್ಗೆ ನುಗ್ಗಿದ ನಾಯಿಯೋ, ತೋಳಯೋ, ನರಿವೋ ಎಂದು ತಿಳಿಯದ ಪ್ರಾಣಿ ಬರೋಬ್ಬರಿ 9 ಜನರಿಗೆ ಕಚ್ಚಿ ಗಾಯಪಡಿಸಿದ ಘಟನೆ ಕುಂದಗೋಳ ತಾಲೂಕಿನ ಬೆನಕನಹಳ್ಳಿಯಲ್ಲಿ ನಡೆದಿದೆ. ಗಾಯಾಳುಗಳೆಲ್ಲಾ ಕುಂದಗೋಳ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿ ಆಗಿಲ್ಲಾ.ಮನುಷ್ಯರನ್ನೇ ಅಲ್ಲದೇ ಜಾನುವಾರುಗಳ ಮೇಲೆ ದಾಳಿ ಮಾಡಿದ ಪ್ರಾಣಿ ಅವುಗಳಿಗೂ ಕಚ್ಚಿ ಗಾಯಪಡಿಸಿದೆ. ಇಂದು ಬೆನಕನಹಳ್ಳಿ ಗ್ರಾಮಕ್ಕೆ ಮಬ್ಬು ಕತಲಲ್ಲಿ ನುಗ್ಗಿದ ಪ್ರಾಣಿ, ಕಸ ಗುಡಿಸುವವರು, ಜಾನುವಾರು ಹೊರಗೆ ಕಟ್ಟುವವರು, ಗೋಧಿ ಕೀಳಲು ಹೋದವರ ಮೇಲೆ ದಾಳಿ ಮಾಡಿದೆ. ಒಟ್ಟಾರೆ ಯಾವುದೋ ಪ್ರಾಣಿ ಜನರ ರಕ್ತದ ರುಚಿ ನೋಡಿ ಓಡಿ ಹೋಗಿದೆ ಎಂದು ಇಲ್ಲಿನ ಜನರು ಆತಂಕ ವ್ಯಕ್ತಪಡಿಸಿದ್ದಾರೆ. ವರದಿ: ಸುರೇಶ್ ಬಾಬು ಎಂ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರಲ್ಲಿ ಗ್ರಾಮದಲ್ಲಿ ಇಂದು ಅಖಿಲ ನಾಮಧಾರಿಗೌಡ ಸಂಘವನ್ನು ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜೇಗೌಡರು, ಗ್ರಾಮದಲ್ಲಿ ಎಲ್ಲಾರು ಅಣ್ಣ ತಮ್ಮಂದಿರಂತೆ ಇರಬೇಕೆಂದು ಯುವಕರಿಗೆ ಕಿವಿ ಮಾತು ಹೇಳಿದರು. ಗ್ರಾಮದ ಮುಖಂಡರಾದ ತಿಮ್ಮೇಗೌಡರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರವಣೂರು ಗ್ರಾಮದ ಹಿರಿಯರಿಗೆ ಸನ್ಮಾನ ಮಾಡಲಾಯಿತು. ವಾಲ್ಮೀಕಿ ಯುವಕರ ಸಂಘ ಮತ್ತು ಅಪ್ಪು ಅಭಿಮಾನಿಗಳ ಬಳಗ ಶ್ರವಣೂರು ಹಾಗೂ ಸುತ್ತಮುತ್ತ ಗ್ರಾಮಸ್ಥರು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಅಥಣಿ: ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಿಂದ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ. ಅಥಣಿ ತಾಲೂಕಿನ ಹಲ್ಯಾಳ ಸಕ್ಕರೆ ಕೃಷ್ಣಾ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬಗ್ಯಾಸಗೆ (ಒನ ಹಿಪ್ಪಿಗೆ) ಬೆಂಕಿ ತಗಲಿದೆ. ಪರಿಣಾಮವಾಗಿ ಭಾರೀ ಬೆಂಕಿ ಸೃಷ್ಟಿಯಾಗಿದ್ದು, ಆತಂಕ ಸೃಷ್ಟಿಸಿತ್ತು. ಘಟನಾ ಸ್ಥಳಕ್ಕೆ ಸುಮಾರು 5 ಅಗ್ನಿಶಾಮಕ ದಳದ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿವೆ. ಸತತ ಪ್ರಯತ್ನದ ಬಳಿಕ ಬೆಂಕಿ ಹತೋಟಿಗೆ ಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ವರದಿ: ಸುರೇಶ್ ಬಾಬು ಎಂ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸೂರ್ಯ ಯಾವಾಗಲೂ ಸಂಶೋಧನಾ ಜಗತ್ತನ್ನು ಆಕರ್ಷಿಸಿದ್ದಾನೆ. ಇದೀಗ ಹೊಸ ಬೆಳವಣಿಗೆಯೊಂದು ವಿಜ್ಞಾನಿಗಳನ್ನು ಅಚ್ಚರಿಗೊಳಿಸಿದೆ. ಸೂರ್ಯನ ಮೇಲ್ಮೈಯ ಒಂದು ಭಾಗವು ಬೇರ್ಪಟ್ಟಿದೆ ಎಂಬುದು ವೈಜ್ಞಾನಿಕ ಪ್ರಪಂಚದ ಆವಿಷ್ಕಾರವಾಗಿದೆ. ಇದರೊಂದಿಗೆ ಉತ್ತರ ಧ್ರುವದಲ್ಲಿ ಚಂಡಮಾರುತದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವರದಿಯಾಗಿದೆ. ಎನ್ಡಿಟಿವಿ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಕುರಿತು ಮಾಹಿತಿ ನೀಡಿವೆ. ಈ ವಿದ್ಯಮಾನವನ್ನು ನಾಸಾದ ಜೇಮ್ಸ್ ವೆಬ್ ಟೆಲಿಸ್ಕೋಪ್ ಕಂಡುಹಿಡಿದಿದೆ. ಗಗನಯಾತ್ರಿ ಡಾ. ತಮಿತಾ ಸ್ಕೋವ್ ಅವರು ಈ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಂತಹ ವಿದ್ಯಮಾನ ಹೇಗೆ ಸಂಭವಿಸಿತು ಎಂದು ವೈಜ್ಞಾನಿಕ ಜಗತ್ತು ಹುಡುಕುತ್ತಿದೆ. ಸೂರ್ಯನ ಮೇಲ್ಮೈಯಿಂದ ಹೊರಕ್ಕೆ ವಿಸ್ತರಿಸಿರುವ ಭಾಗವು ಬೇರ್ಪಟ್ಟಿದೆ ಎಂದು ನಾಸಾ ಕಂಡುಹಿಡಿದಿದೆ. ನಾಸಾ ಪ್ರಕಾರ, ಈ ಹಿಂದೆಯೂ ಇಂತಹ ವಿದ್ಯಮಾನಗಳು ನಡೆದಿವೆ. ವೈಜ್ಞಾನಿಕ ಜಗತ್ತನ್ನು ಕಂಗೆಡಿಸುವ ಮಾಹಿತಿ ಹೊರಬೀಳುತ್ತಿದೆ. ಸೂರ್ಯನ ಬಿದ್ದ ಭಾಗವು ಉತ್ತರ ಧ್ರುವವನ್ನು ಸುತ್ತಲು ಎಂಟು ಗಂಟೆಗಳವರೆಗೆ ತೆಗೆದುಕೊಳ್ಳುತ್ತದೆ. ವಿಜ್ಞಾನಿಗಳ ಪ್ರಕಾರ ಚಂಡಮಾರುತದ ವೇಗ ಸೆಕೆಂಡಿಗೆ 96 ಕಿ.ಮೀ. ಸೂರ್ಯನು ನಿರಂತರವಾಗಿ ಸೌರ…
ತುಮಕೂರು: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಳ್ಳಿ ತಾಲೂಕಿನ, ಹುಳಿಯಾರು ಗೇಟ್ ಬಳಿ ನಡೆದಿದೆ. ರಘು(35), ಅನುಷಾ (28) ಸ್ಥಳದಲ್ಲೇ ಸಾವನ್ನಪ್ಪಿದ ದಂಪತಿಯಾಗಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ. ದಂಪತಿಯು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿ ಯಿಂದ ಬಳ್ಳಾರಿಗೆ ಮದುವೆಗೆಂದು ತೆರಳುತ್ತಿದ್ದರು. ಈ ವೇಳೆ ಹುಳಿಯಾರು ಗೇಟ್ ಬಳಿ ಬಳಿ ಕಾರಿಗೆ ಲಾರಿ ಅಪ್ಪಳಿಸಿದೆ. ದಂಪತಿಗೆ ಮದುವೆಯಾಗಿ ಕೇವಲ 2 ತಿಂಗಳಾಗಿತ್ತು. ಇದೀಗ ಈ ದುರಂತ ಕಂಡು ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಭೂಕಂಪದಿಂದ ತತ್ತರಿಸಿರುವ ಟರ್ಕಿಯಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿರುವ ಭಾರತೀಯ ಸೇನಾ ಅಧಿಕಾರಿಗೆ ಟರ್ಕಿ ಮಹಿಳೆಯೊಬ್ಬರು ಮುತ್ತಿಟ್ಟಿರುವ ಚಿತ್ರ ವೈರಲ್ ಆಗಿದೆ. ಆಪರೇಷನ್ ದೋಸ್ತಿ ಯೋಜನೆಗೆ ಭಾರತವು ಟರ್ಕಿ ಮತ್ತು ಸಿರಿಯಾಕ್ಕೆ ಸಹಾಯ ಮಾಡಲು ಬಂದಿತು. ಇದರ ಭಾಗವಾಗಿ ಟರ್ಕಿಗೆ ಆಗಮಿಸಿರುವ ಭಾರತೀಯ ಸೇನಾ ಅಧಿಕಾರಿಗೆ ಟರ್ಕಿ ಮಹಿಳೆಯೊಬ್ಬರು ಪ್ರೀತಿಯಿಂದ ಮುತ್ತಿಕ್ಕಿದ್ದಾರೆ. ಇದರ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾರತೀಯ ಸೇನೆಯ ಸಾರ್ವಜನಿಕ ಮಾಹಿತಿಯ ಹೆಚ್ಚುವರಿ ನಿರ್ದೇಶನಾಲಯದ ಟ್ವಿಟರ್ ಖಾತೆಯ ಮೂಲಕ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ‘ವಿ ಕೇರ್’ ಎಂಬ ಶೀರ್ಷಿಕೆಯೊಂದಿಗೆ ನೀಡಿರುವ ಚಿತ್ರ ವೈರಲ್ ಆಗಿದೆ. ಟರ್ಕಿ ಮತ್ತು ಸಿರಿಯಾಕ್ಕೆ ಸಹಾಯ ಹಸ್ತ ಚಾಚಿರುವ ವಿಶ್ವದ ಮೊದಲ ರಾಷ್ಟ್ರಗಳಲ್ಲಿ ಭಾರತವೂ ಒಂದು. ಭಾರತದ ಸಮಯೋಚಿತ ಮಧ್ಯಸ್ಥಿಕೆ ಮತ್ತು ನಿಶ್ಚಿತಾರ್ಥವನ್ನು ಪ್ರಶಂಸಿಸಲಾಗಿದೆ. ಪೀಡಿತ ಪ್ರದೇಶಗಳಲ್ಲಿ ಭಾರತೀಯ ಸೇನೆ ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಿಸಿ ಚಿಕಿತ್ಸೆ ನೀಡುತ್ತಿರುವ ಚಿತ್ರಗಳನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಂಚಿಕೊಂಡಿದ್ದಾರೆ. ಭಾರತವು ಆರು ವಿಮಾನಗಳನ್ನು ಟರ್ಕಿ ಮತ್ತು ಸಿರಿಯಾಕ್ಕೆ ಪರಿಹಾರ…
ಪ್ರೇಮಿಗಳ ದಿನದಂದು ನೇಪಾಳವು ಭಾರತ ಮತ್ತು ಚೀನಾದಂತಹ ದೇಶಗಳಿಂದ ತಾಜಾ ಗುಲಾಬಿಗಳ ಆಮದನ್ನು ನಿಷೇಧಿಸಿದೆ. ಈ ಬಗ್ಗೆ ಪಿಟಿಐ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಮಾಹಿತಿ ನೀಡಿವೆ. ಸಸ್ಯ ರೋಗಗಳ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.ನೇಪಾಳಕ್ಕೆ ಹೆಚ್ಚಿನ ಸಂಖ್ಯೆಯ ಕೆಂಪು ಗುಲಾಬಿಗಳನ್ನು ದೆಹಲಿ, ಬೆಂಗಳೂರು ಮತ್ತು ಕೋಲ್ಕತ್ತಾದಿಂದ ರಫ್ತು ಮಾಡಲಾಗುತ್ತದೆ. ಸಸ್ಯ ರೋಗಗಳ ಅಪಾಯವನ್ನು ಪರಿಗಣಿಸಿ ಗುಲಾಬಿಗಳಿಗೆ ಆಮದು ಪರವಾನಗಿ ನೀಡದಂತೆ ಕೃಷಿ ಸಚಿವಾಲಯದ ಅಧೀನದಲ್ಲಿರುವ ಸಸ್ಯ ಕ್ವಾರಂಟೈನ್ ಮತ್ತು ಕೀಟನಾಶಕ ನಿರ್ವಹಣಾ ಕೇಂದ್ರವು ಗಡಿ ಕಚೇರಿಗಳಿಗೆ ಗುರುವಾರ ಸೂಚನೆ ನೀಡಿದೆ. ವಿಶೇಷ ಕಾರಣಗಳಿಂದ ನೇಪಾಳ, ಭಾರತ ಮತ್ತು ಚೀನಾದ ಗಡಿಯಲ್ಲಿರುವ 15 ಕಸ್ಟಮ್ಸ್ ಕಚೇರಿಗಳು ಗುಲಾಬಿಗಳ ಆಮದನ್ನು ನಿಷೇಧಿಸಿವೆ ಎಂದು MyRepublica ಪತ್ರಿಕೆ ವರದಿ ಮಾಡಿದೆ. ಈ ಹಣಕಾಸು ವರ್ಷದ ಮೊದಲಾರ್ಧದಲ್ಲಿ ನೇಪಾಳವು 1.3 ಮಿಲಿಯನ್ ಮೌಲ್ಯದ 10,612 ಕೆಜಿ ಗುಲಾಬಿಗಳನ್ನು ಆಮದು ಮಾಡಿಕೊಂಡಿದೆ. ಏತನ್ಮಧ್ಯೆ, ನೇಪಾಳ ಫ್ಲೋರಿಕಲ್ಚರ್ ಅಸೋಸಿಯೇಷನ್ ಕಾರ್ಯಕ್ರಮ ಸಂಯೋಜಕ ಜೆಬಿ ತಮಾಂಗ್ ಮಾತನಾಡಿ, ಸರ್ಕಾರದ ಈ…
ರಾಜ್ಯದಾದ್ಯಂತ ಸಾರ್ವಜನಿಕ ರಸ್ತೆಗಳಲ್ಲಿ ಮಾರ್ಗ ಮೆರವಣಿಗೆ ನಡೆಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ಗೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ. ರೂಟ್ ಮಾರ್ಚ್ಗೆ ಮೂರು ದಿನಾಂಕಗಳನ್ನು ಸೂಚಿಸಲು ಮತ್ತು ಪೊಲೀಸರ ಅನುಮತಿ ಪಡೆಯಲು ಆರ್ಎಸ್ಎಸ್ಗೆ ಪೀಠ ಸೂಚಿಸಿದೆ. ಈ ಅರ್ಜಿಯನ್ನು ಕಾನೂನುಬದ್ಧವಾಗಿ ಪರಿಗಣಿಸುವಂತೆ ಪೊಲೀಸರಿಗೆ ಸೂಚಿಸಿದ ಅವರು, ಯಾರನ್ನೂ ಪ್ರಚೋದಿಸದೆ ಮೆರವಣಿಗೆಯನ್ನು ಆಯೋಜಿಸಲು ಆರ್ಎಸ್ಎಸ್ಗೆ ಸೂಚಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆಯ ಹಿನ್ನೆಲೆಯಲ್ಲಿ ಆರ್ಎಸ್ಎಸ್ಗೆ ಹೊರಗಡೆ ರೂಟ್ ಮಾರ್ಚ್ ನಡೆಸಲು ಮತ್ತು ಆವರಣದೊಳಗೆ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ನ್ಯಾಯಮೂರ್ತಿಗಳಾದ ಆರ್.ಮಹದೇವನ್ ಮತ್ತು ಮುಹಮ್ಮದ್ ಶಫೀಕ್ ರದ್ದುಗೊಳಿಸಿದ್ದಾರೆ. ಪ್ರಜಾಸತ್ತಾತ್ಮಕ ರಾಜ್ಯವು ತನ್ನ ನಾಗರಿಕರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಬೇಕು ಎಂದು ನ್ಯಾಯಾಲಯವು ಗಮನಿಸಿದೆ. ಆರ್ಎಸ್ಎಸ್ ಮತ್ತು ಬಿಜೆಪಿ ಈ ಆದೇಶವನ್ನು ಸ್ವಾಗತಿಸಿದ್ದು, ಇದು ಪ್ರಜಾಪ್ರಭುತ್ವದ ವಿಜಯ ಎಂದು ಬಣ್ಣಿಸಿದೆ. ಇದೇ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಕಾಂಗ್ರೆಸ್ ತಂಡಕ್ಕೆ ಮನವಿ ಮಾಡಿದೆ.…
ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸುವವರಿಗೆ ಶೇ. 50 ವಿನಾಯಿತಿ ಘೋಷಣೆ ಮಾಡಿದ ಬೆನ್ನಲ್ಲೇ ವಾಹನ ಸವಾರರು ದಂಡ ಪಾವತಿಸಲು ಮುಗಿಬಿದ್ದಿದ್ದಾರೆ. 8ನೇ ದಿನವೂ ಸಹ ಸರ್ಕಾರದ ಬೊಕ್ಕಸಕ್ಕೆ ಕೋಟಿ ಕೋಟಿ ಹಣ ಹರಿದು ಬಂದಿದೆ. 67, 0602 ಪ್ರಕರಣಗಳಲ್ಲಿ 17.61 ಕೋಟಿ ರೂಪಾಯಿ ದಂಡದ ಹಣ ಸಂಗ್ರಹವಾಗಿದೆ. ಇದರೊಂದಿಗೆ 31.11 ಲಕ್ಷ ಪ್ರಕರಣಗಳಲ್ಲಿ 85.83 ಕೋಟಿ ರೂಪಾಯಿ ಹಣ ಕಲೆಕ್ಷನ್ ಆಗಿದೆ. 50% ರಿಯಾಯಿತಿಯಲ್ಲಿ ದಂಡ ಪಾವತಿಗೆ ಫೆಬ್ರವರಿ 11 ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಸಂಚಾರ ನಿಮಯ ಉಲ್ಲಂಘಿಸಿದ ವಾಹನ ಸವಾರರು ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ದಂಡ ಪಾವತಿ ಮಾಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy