Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ಪ್ರಮುಖ ಹೂಡಿಕೆ ಸಲಹೆಗಾರರಾದ ಮೂಡೀಸ್, ಅದಾನಿ ಸಮೂಹದ ನಾಲ್ಕು ಕಂಪನಿಗಳಿಗೆ ರೇಟಿಂಗ್ ನೀಡಿದೆ. ಮೂಡೀಸ್ ಅದಾನಿ ಸಮೂಹದ ನಾಲ್ಕು ಕಂಪನಿಗಳನ್ನು ಋಣಾತ್ಮಕ ಪಟ್ಟಿಗೆ ಇಳಿಸಿದೆ. ಅಂಕಿಅಂಶಗಳನ್ನು ಹೆಚ್ಚಿಸಲಾಗಿದೆ ಎಂಬ ಹಿಂಡೆನ್ಬರ್ಗ್ ವರದಿಯ ನಂತರ ಅದಾನಿ ಗ್ರೂಪ್ ವಿರುದ್ಧ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಹಿನ್ನಡೆ ಮುಂದುವರಿದ ಹಿನ್ನೆಲೆಯಲ್ಲಿ ಈ ನಿರ್ಧಾರವು ಬಂದಿದೆ. ಷೇರುಪೇಟೆಯಲ್ಲಿ ಭಾರೀ ಕುಸಿತ ಉಂಟಾಗಿರುವ ಕಾರಣ ಅದಾನಿ ಸಮೂಹದ ನಾಲ್ಕು ಕಂಪನಿಗಳ ರೇಟಿಂಗ್ ಅನ್ನು ಮೂಡೀಸ್ ಡೌನ್ ಗ್ರೇಡ್ ಮಾಡಿದೆ. ರೇಟಿಂಗ್ ಅನ್ನು ಸ್ಥಿರದಿಂದ ಋಣಾತ್ಮಕ ಮಟ್ಟಕ್ಕೆ ಇಳಿಸಲಾಗಿದೆ. ಅದಾನಿ ಗ್ರೀನ್ ಎನರ್ಜಿ, ಅದಾನಿ ಟ್ರಾನ್ಸ್ಮಿಷನ್, ಅದಾನಿ ಇಲೆಕ್ಟ್ರಿಸಿಟಿ ಮುಂಬೈ ಮತ್ತು ಅದಾನಿ ಗ್ರೀನ್ ಎನರ್ಜಿ ರಿಸ್ಟ್ರಿಕ್ಟೆಡ್ ಗ್ರೂಪ್ ಕಂಪನಿಗಳನ್ನು ಡೌನ್ಗ್ರೇಡ್ ಮಾಡಲಾಗಿದೆ. ಮತ್ತೊಂದು ಹೂಡಿಕೆ ಸಂಶೋಧನಾ ಸಂಸ್ಥೆ, ಮೋರ್ಗಾನ್ ಸ್ಟಾನ್ಲಿ ಕ್ಯಾಪಿಟಲ್ ಇಂಟರ್ನ್ಯಾಶನಲ್, ನಾಲ್ಕು ಅದಾನಿ ಕಂಪನಿಗಳಲ್ಲಿನ ಷೇರುಗಳನ್ನು ಮುಕ್ತ-ವ್ಯಾಪಾರ ಮಾಡಬಹುದಾಗಿದೆ. ಎಂಎಸ್ಸಿಐ ಅದಾನಿ ಎಂಟರ್ಪ್ರೈಸಸ್, ಅದಾನಿ ಟೋಟಲ್ ಗ್ಯಾಸ್, ಅದಾನಿ ಟ್ರಾನ್ಸ್ಮಿಷನ್ ಮತ್ತು ಎಸಿಸಿ ಸಿಮೆಂಟ್ನಲ್ಲಿ ಷೇರುಗಳನ್ನು…
ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ವೈಎಸ್ಆರ್ ಕಾಂಗ್ರೆಸ್ ಸಂಸದರ ಪುತ್ರನನ್ನು ಬಂಧಿಸಲಾಗಿದೆ. ಮಾಕುಂದ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ ಮಾಕುಂದ ಬಂಧಿತ ಆರೋಪಿ. ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳುತ್ತದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ರಾಘವ್ ಬಂಧನವನ್ನು ಇಡಿ ದಾಖಲಿಸಿದೆ. ರಾಘವ್ ಬಂಧನವು ದೆಹಲಿ ಮದ್ಯ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಡೆಸಿದ ಒಂಬತ್ತನೇ ಬಂಧನವಾಗಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ರಾಘವ್ ಮಕುಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದನ್ನು ಇಡಿ ಪತ್ತೆ ಮಾಡಿದೆ. ರಾಘವ್ ಮಕುಂದ ಅವರ ಕುಟುಂಬವು ದೆಹಲಿಯಲ್ಲಿ ಮದ್ಯದ ಡಿಸ್ಟಿಲರಿಗಳನ್ನು ಹೊಂದಿದೆ. ಭ್ರಷ್ಟಾಚಾರದ ಉದ್ದೇಶದಿಂದ ರಾಘವ್ ಮಕುಂದ ಅಕ್ರಮ ಮಾರ್ಗಗಳ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಇಡಿ ಆರೋಪಿಸಿದೆ. ಪಂಜಾಬ್ ಎಸ್ಎಡಿ ಶಾಸಕ ದೀಪ್ ಮಲ್ಹೋತ್ರಾ ಅವರ ಪುತ್ರ ಗೌತಮ್ ಮಲ್ಹೋತ್ರಾ ಮತ್ತು ಜಾಹೀರಾತು ಕಂಪನಿ ಚಾರಿಯಟ್ ಪ್ರೊಡಕ್ಷನ್ಸ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ರಾಜೇಶ್ ಜೋಶಿ…
ಈಗಾಗಲೇ ಜೆಡಿಎಸ್ ನಿಂದ ದೂರ ಉಳಿದಿರುವ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರು, ಯಾವ ಪಕ್ಷಕ್ಕೆ ಸೇರಬೇಕು ಅಥವಾ ಸ್ವತಂತ್ರವಾಗಿ ಸ್ಪರ್ಧೆ ಮಾಡಬೇಕೇ ಎಂಬುದನ್ನ ಫೆ.12ರಂದು ನಡೆಯುವ ಸಮಾವೇಶದ ನಂತರ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಶಿವಲಿಂಗೇಗೌಡರು, ಫೆ.12ರಂದು ಅರಸೀಕೆರೆಯಲ್ಲಿ ಸಮಾವೇಶ ನಡೆಯಲಿದೆ. ಇಲ್ಲಿ ಏನು ತೀರ್ಮಾನ ಆಗುತ್ತದೆಯೋ ಅದರ ಆಧಾರದ ಮೇಲೆ ನಾನು ನಿರ್ಧಾರ ಮಾಡುತ್ತೇನೆ. ಕಾಂಗ್ರೆಸ್ಗೆ ಹೋಗಿ ಅಂತಾ ನನ್ನ ಕ್ಷೇತ್ರದ ಜನರು ಹೇಳುತ್ತಿದ್ದಾರೆ. ಕ್ಷೇತ್ರದ ಜನ ಸ್ವತಂತ್ರವಾಗಿ ಸ್ಪರ್ಧಿಸಿ ಎಂದು ಹೇಳಿದರೆ ಅದಕ್ಕೂ ಸಿದ್ಧ ಎಂದರು. ಇದೇ ವೇಳೆ ಜೆಡಿಎಸ್ ವಿರುದ್ದ ಮತ್ತೆ ಕಿಡಿಕಾರಿದ ಶಿವಲಿಂಗೇಗೌಡರು, ನನ್ನ ವಿರುದ್ಧ ಅಭ್ಯರ್ಥಿ ಕರೆತಂದು ಸಮಾವೇಶ ಮಾಡಿದರೆ ನಾನ್ಯಾಕೆ ಹೋಗಲಿ, ಬೇರೆ ಪಕ್ಷ ಸೇರುವ ಬಗ್ಗೆ ಯಾರ ಜೊತೆಗೂ ನಾನು ಚರ್ಚೆ ಮಾಡಿಲ್ಲ. ನನಗೆ ಯಾಕೆ ಅಸಮಾಧಾನ ಇದೆ ಅಂತಾ ಕ್ಷೇತ್ರದ ಜನರಿಗೆ ಗೊತ್ತು. ನಾನು ಬಿಜೆಪಿಗೆ ಸೇರಲ್ಲ, ನಾನು ಇನ್ನೂ ಜೆಡಿಎಸ್ನಲ್ಲೇ ಇದ್ದೇನೆ. ನನ್ನ ವಿರುದ್ಧ…
ನಟಿ ಅಭಿನಯ ತಾಯಿ ಜಯಮ್ಮ ಸೋದರ ಚಲುವರಾಜುಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣ ಕುರಿತು ಸೇಷನ್ಸ್ ಕೋರ್ಟ್ ನೀಡಿದ್ದ ತೀರ್ಪನ್ನ ಹೈಕೋರ್ಟ್ ಎತ್ತಿಹಿಡಿದು ನಟ ಅಭಿನಯ ಮತ್ತು ಕುಟುಂಬಕ್ಕೆ ಜೈಲು ಶಿಕ್ಷೆ ವಿಧಿಸಿತ್ತು. ಹೈಕೋರ್ಟ್ ತೀರ್ಪನ್ನ ಪ್ರಶ್ನಿಸಿ ಜಾಮೀನು ಕೋರಿ ನಟಿ ಅಭಿನಯ ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದರು. ಇದೀಗ ಮೂವರಿಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ನಟಿ ಅಭಿನಯ ಅವರ ಅತ್ತಿಗೆ ಹಾಗೂ ಅವರ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 2012ರಲ್ಲಿ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ (ಜಯಮ್ಮ, ಅಭಿನಯ, ಶ್ರೀನಿವಾಸ್, ರಾಮಕೃಷ್ಣ ಮತ್ತು ಚೆಲುವರಾಜು) 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಬಳಿಕ ಖುಲಾಸೆಯಾಗಿ ಹೊರಬಂದಿದ್ದರು. ಇದನ್ನು ಮರು ಪ್ರಶ್ನಿಸಿದ್ದ ಲಕ್ಷ್ಮಿದೇವಿ, ಹೈಕೋರ್ಟ್ ಮೊರೆ ಹೋಗಿದ್ದರು. ಮೇಲ್ಮನವಿ ವಿಚಾರಣೆ ಮಾಡಿದ ಕೋರ್ಟ್, ಬದುಕಿರುವ ಮೂವರು ಆರೋಪಿಗಳಿಗೆ (ಜಯಮ್ಮ, ಅಭಿನಯ, ಚೆಲುವರಾಜು) ಶಿಕ್ಷೆ ಜೊತೆಗೆ…
ಕಲಬುರ್ಗಿ: ಜೆಡಿಎಸ್ ಪಕ್ಷಕ್ಕೆ ಮತ ಹಾಕಿದರೆ ಬಿಜೆಪಿಗೆ ಮತಹಾಕಿದಂತೆ ಅದರಿಂದ ಯಾವುದೇ ಪ್ರಯೋಜನವಿಲ್ಲ. ಅಲ್ಪಸಂಖ್ಯಾತರು ಜೆಡಿಎಸ್ ಗೆ ಮತ ಹಾಕಬೇಡಿ ಎಂದು ಶಾಸಕ ಜಮೀರ್ ಅಹ್ಮದ್ ಕರೆ ನೀಡಿದ್ದಾರೆ. ಕಲಬುರ್ಗಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು ಜೆಡಿಎಸ್ ಮತ್ತು ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅನೇಕ ಭಾಗ್ಯಗಳನ್ನು ತಂದಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ. ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಿ, ಕೊಟ್ಟ ಭರವಸೆ ಈಡೇರಿಸದಿದ್ರೆ ಜನರಿಗೆ ದ್ರೋಹ ಮಾಡಿದಂತಾಗುತ್ತದೆ. ನಾವು ಜನರಿಗೆ ನೀಡಿದ ಭರವಸೆಯಂತೆ ನಡೆದುಕೊಳ್ಳಬೇಕು. ಬಿಜೆಪಿ ಹೇಳಿದಂತೆ ಇಲ್ಲಿವರಗೆ ನಡೆದುಕೊಂಡಿಲ್ಲಾ. ಸರ್ಕಾರ, ರಾಜ್ಯಪಾಲರಿಂದ ಬರಿ ಸುಳ್ಳು ಹೇಳಿಸಿದೆ. ಹಿಂದುತ್ವದ ಹೆಸರಲ್ಲಿ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಸಮಾಜವನ್ನು ಒಡೆಯೋ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಲಬುರ್ಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ವೇಳೆ ದೈಹಿಕ ಪರೀಕ್ಷೆಯಲ್ಲಿ ಉತ್ತಿರ್ಣವಾಗಲು ಕಾಲಿಗೆ ಗೋದಿ ಹಿಟ್ಟು ಮೆತ್ತಿಕೊಂಡು ಪರೀಕ್ಷೆಗೆ ಹಾಜರಾಗಿ ಸಿಕ್ಕಿಬಿದ್ದಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಲಬುರ್ಗಿಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 1619 ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿಗೆ 38 ಸಾವಿರ ಅಭ್ಯರ್ಥಿಗಳು ಅರ್ಜಿ ಹಾಕಿದ್ದಾರೆ. ಮೊದಲ ಹಂತದ ದೇಹದಾರ್ಡ್ಯ ಪರೀಕ್ಷೆ ನಡೆಸಲಾಗುತ್ತಿದೆ. ಚಾಲಕ ಕಂ ನಿರ್ವಾಹಕನಾಗಲು 55 ಕೆಜಿ ತೂಕ, 163 ಸೆಂಟಿ ಮೀಟರ್ ಎತ್ತರವಿರಬೇಕು. ಆದ್ರೆ, ಟೆಸ್ಟ್ಗೆ ಬಂದಿದ್ದ ನಾಲ್ವರು ಖದೀಮರು ತೂಕ ಹೆಚ್ಚಳಕ್ಕಾಗಿ ಒಳ ಉಡುಪಿನಲ್ಲಿ ಕೆಜಿ ಕಲ್ಲು, ಕಾಲುಗಳಿಗೆ, ಸೊಂಟಕ್ಕೆ ಕಬ್ಬಿಣದ ಪೀಸ್ಗಳನ್ನು ಕಟ್ಟಿಕೊಂಡಿದ್ರು. ಓರ್ವ ಅಭ್ಯರ್ಥಿ ತನ್ನ ತೊಡೆಗೆ ಗೋದಿ ಹಿಟ್ಟನ್ನು ಮೆತ್ತಿಕೊಂಡು ಬಂದ್ದಿದ್ದಾನೆ. ಇಲಾಖೆಯ ಸಿಬ್ಬಂದಿ ಪರಿಶೀಲನೆ ವೇಳೆ ಅಭ್ಯರ್ಥಿ ಕಳ್ಳಾಟ ಬಯಲಾಗಿದೆ. ಸದ್ಯ ಅಭ್ಯರ್ಥಿಯನ್ನು ನೇಮಕಾತಿ ಪ್ರಕ್ರಿಯೆಯಿಂದಲೇ ಕೈಬಿಡಲಾಗಿದೆ. ಮಾನವೀಯತೆ ದೃಷ್ಟಿಯಿಂದ ಕೇಸ್ ದಾಖಲಿಸದೆ ಬಿಟ್ಟು ಕಳಿಸಲಾಗಿದೆ.…
ಮಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ನಮ್ಮದೆ ಪಕ್ಷದಿಂದ ಸರಕಾರ ರಚಿಸಬೇಕೆಂದು ಶತಾಯ ಗತಾಯ ಪ್ರಯತ್ನಗಳನ್ನು ಮಾಡುತ್ತಿವೆ. ಎಲ್ಲ ಪಕ್ಷಗಳು ಯಾತ್ರೆ, ನಡಿಗೆ ಸೇರಿದಂತೆ ಹಲವಾರು ತಂತ್ರ ಗಳನ್ನು ರೂಪಿಸಿಕೊಂಡು ಮತದಾರರ ಮನೆ ಬಾಗಿಲಿಗೆ ತೆರಳುತ್ತಿದ್ದು ಮತದಾರರನ್ನು ತಮ್ಮತ್ತ ಒಲೈಸುಕೊಳ್ಳಲು ಹಲವಾರು ಪ್ರಯತ್ನಗಳನ್ನು ನಡೆಸುತ್ತಿವೆ ಇದರ ಬೆನ್ನಲ್ಲೆ ಬಿಜೆಪಿ ಪ್ರಣಾಳಿಕೆ ಅಭಿಯಾನ ಸಮಿತಿಯ ಮೊದಲ ಸಭೆಯು ನಿನ್ನೆ ಬಿಜೆಪಿಯ ಕೇಂದ್ರ ಕಚೇರಿ ಜಗನ್ನಾಥ್ ಭವನದಲ್ಲಿ ನಡೆದಿದೆ. ಸದ್ಯ ಇಂದು ಕೇಂದ್ರ ಸಚಿವ ಅಮಿತ್ ಶಾ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಇದಕ್ಕಾಗಿ ಎಲ್ಲಾ ರೀತಿಯ ತಯಾರಿ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಸಮೀಪದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ (Lover) ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದೆ. ಶಿವಲೀಲಾ (18) ಕೊಲೆಯಾಗಿರುವ ಯುವತಿ. ಈಕೆ ಬ್ರೀಮ್ಸ್ನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಇನ್ನೂ ಶ್ರೀನಿವಾಸ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮದುವೆಯಾಗಲು (Marriage) ಇಷ್ಟವಿಲ್ಲ ಎಂದು ಹೇಳಿದ್ದಕ್ಕೆ ಶ್ರೀನಿವಾಸ ಸೋಲಪೂರ್ ಕೆರೆಯ ಬಳಿ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿ ಶ್ರೀನಿವಾಸ ಚಾಂಬೋಳ ಗ್ರಾಮದ ನಿವಾಸಿ. ಶಿವಲೀಲಾ ಮಲ್ಲಿಕ್ ಮಿರ್ಜಾಪೂರ್ ಗ್ರಾಮದ ಹುಡುಗಿ. ಬೀದರ್ ನಗರದ ಮಂಗಲ್ ಪೇಟೆಯಲ್ಲಿ ತಾಯಿಯೊಂದಿಗೆ ವಾಸವಾಗಿದ್ದಳು. ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಶ್ರೀನಿವಾಸನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಕುರಿತು ಬೀದರ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.ಥಣಿಸಂದ್ರದ ಮಂಜುನಾಥ್ ನಗರದಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರ ಆರೀಫ್ ಎಂಬುವವನ್ನ ಬಂಧಿಸಿದ್ದಾರೆ. ಶಂಕಿತ ಉಗ್ರ ಆರೀಫ್ ಅಲ್ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕದಲ್ಲಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ಈತ ಕಳೆದ 2 ವರ್ಷಗಳಿಂದ ಅಲ್ಖೈದಾ ಜೊತೆ ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಖಾಸಗಿ ಸಾಫ್ಟ್ವೇರ್ ಕಂಪನಿಯಲ್ಲಿ ವರ್ಕ್ ಫರ್ಮ್ ಹೋಮ್ ಮೂಲಕ ಮನೆಯಲ್ಲೆ ಕೆಲಸ ಮಾಡ್ತಿದ್ದ ಆರೀಫ್ಗೆ ಉಗ್ರ ಸಂಘಟನೆಗಳಲ್ಲಿ ಸೇರಿಕೊಳ್ಳಬೇಕು ಎಂಬ ಕನಸಿತ್ತು. ಅದರಂತೆ ಸಾಮಾಜಿಕ ಜಾಲತಾಣಗಳು, ವೆಬ್ ಸೈಟ್ ಮೂಲಕ ಉಗ್ರ ಸಂಘಟನೆಗಳನ್ನು ಸೇರಲು ತಯಾರಿ ನಡೆಸಿದ್ದ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಧುಗಿರಿ: ಮಧುಗಿರಿ ತಾಲೂಕು ದಂಡಾದಿಕಾರಿಗಳ ಕಾರ್ಯಾಲಯದಲ್ಲಿ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸೌಹಾರ್ದ ಕರ್ನಾಟಕ ಸಂಘಟನೆಯ ರಾಜ್ಯ ಖಜಾಂಚಿ ಜೀವಿಕ ಮಂಜು ಮಾತನಾಡಿ, ಜೀತ ಪದ್ದತಿ ಒಂದು ಅಮಾನವೀಯ ಪದ್ದತಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರದಾನಿ ಇಂದಿರಾಗಾಂಧಿಯವರ ಇಪ್ಪತ್ತು ಅಂಶಗಳ ಕಾರ್ಯಕ್ರಮದಲ್ಲಿ ಜೀತ ಪದ್ದತಿಯಂತ ಅನಿಷ್ಟ ಪದ್ದತಿಯು ಒಂದು ಪ್ರಮುಖವಾದದ್ದು ತಿಳಿಸಿದ್ದು, ಆಗಾಗಿ ದೇಶದಲ್ಲಿ ಕೋಟ್ಯಾಂತರ ಬಡ ಶೋಷಿತರು ಮನುಷ್ಯರಾಗಿ ಬದುಕಲು ದಾರಿಯಾಯಿತು ಇದರ ಉದ್ದೇಶ ಎಲ್ಲಾ ಸ್ಥಳೀಯ ಸರ್ಕಾರಿ ಸರ್ಕಾರೇತರ ಸಂಸ್ಥೆ ಗಳಲ್ಲು ತಳ ಮಟ್ಟದ ಅದಿಕಾರಿಗಳು ಸಹ ಇಂದು ಜೀತ ಪದ್ದತಿ ಹೋಗಲಾಡಿಸಲು ಕಾಳಜಿ ವಹಿಸಬೇಕು ಮತ್ತು ತಮ್ಮ ಜವಾಬ್ದಾರಿ ಕರ್ತವ್ಯ ದೇಶದ ಅಭಿವೃದ್ದಿ ಕೂಡ ಎಂದರು. ಕಾರ್ಯಕ್ರಮ ದಲ್ಲಿ ಉಪ ತಹಶೀಲ್ದಾರ್ ತಿಪ್ಪೇಸ್ವಾಮಿ ಸೌಹಾರ್ದ ಕರ್ನಾಟಕ ಸಂಘಟನೆಯ ಹೋರಾಟಗಾರ್ತಿ ಜೀವಿಕ ಚಿಕ್ಕಮ್ಮ, ಅಂಬೇಡ್ಕರ್ ಸೇನೆ ಮಾರುತಿ ಗೂಬಲಗುಟ್ಟೆ, ಅಂಜಿನಪ್ಪ ಎಲ್ಲಾ ಅಧಿಕಾರಿಗಳು ಹಾಜರಿದ್ದರು. ವರದಿ: ಆಬಿದ್, ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…