Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ಕಾಶ್ಮೀರ ಶ್ರೀನಗರದಲ್ಲಿರುವ ಚಿತ್ರಮಂದಿರಗಳಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಭರ್ತಿಯಾಗಿವೆ ಎಂದು ಮೋದಿ ಹೇಳಿದರು. ಕಳೆದ ದಿನ ಲೋಕಸಭೆಯಲ್ಲಿ ಮಾತನಾಡುವಾಗ ಹೊಗಳಿದ್ದರು. ಆದರೆ ಸಂಸತ್ತಿನಲ್ಲಿ ‘ಪಠಾಣ್’ ಬಗ್ಗೆ ನಿರ್ದಿಷ್ಟವಾಗಿ ಪ್ರಸ್ತಾಪಿಸದ ಪ್ರಧಾನಿ, 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಶ್ರೀನಗರ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಅವರು ತಿಳಿಸಿದರು. ಪಠಾಣ್ ವಿರುದ್ಧದ ಬಹಿಷ್ಕಾರ ಕರೆಗಳು ಮತ್ತು ಪ್ರತಿಭಟನೆಗಳಿಗೆ ಪ್ರಧಾನಿ ಈ ಹಿಂದೆ ಪ್ರತಿಕ್ರಿಯಿಸಿದ್ದರು. ಆಗ ನರೇಂದ್ರ ಮೋದಿ ಅವರು ಬಾಲಿವುಡ್ ಮತ್ತು ಬಾಲಿವುಡ್ ತಾರೆಯರ ಬಗ್ಗೆ ಅನಗತ್ಯ ಕಾಮೆಂಟ್ ಮಾಡಬಾರದು ಎಂದು ಹೇಳಿದರು. ಅದೇ ಸಮಯದಲ್ಲಿ, ಪಠಾಣ್ ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಖ್ಯಾತಿಯನ್ನು ಸಹ ಹೊಂದಿದೆ. ಇಲ್ಲಿಯವರೆಗೆ ವಿಶ್ವದಾದ್ಯಂತ 865 ಕೋಟಿ ಅಧ್ಯಯನ ಮಾಡಲಾಗಿದೆ. ಜನವರಿ 25 ರಂದು ಬಿಡುಗಡೆಯಾದ ಈ ಚಿತ್ರವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದಾರೆ. ಇದೆ ಸಮಯದಲ್ಲಿ ಚಿತ್ರತಂಡ ಹಾಗೂ ನಟ ಶಾರುಖ್…
ಪ್ರೇಮಿಗಳ ದಿನದಂದು ವಿಚಿತ್ರ ಉತ್ತರ ನೀಡಿದ ಕೇಂದ್ರ ಪ್ರಾಣಿ ಕಲ್ಯಾಣ ಇಲಾಖೆ. ಪ್ರೇಮಿಗಳ ದಿನವನ್ನು ‘ ಹಸು ಅಪ್ಪುಗೆಯ ದಿನ’ವನ್ನಾಗಿ ಆಚರಿಸಲು ಆದೇಶವಾಗಿದೆ. ಈ ಕುರಿತು ಕೇಂದ್ರ ಪಶುಸಂಗೋಪನಾ ಇಲಾಖೆ ಆದೇಶ ಹೊರಡಿಸಿದ್ದು, ಗೋವು ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ತಿಳಿಸಿದ್ದಾರೆ. ಇಂತಹ ಆಂದೋಲನದ ಉದ್ದೇಶ ಜನರಲ್ಲಿ ಪ್ರಾಣಿಗಳ ಬಗ್ಗೆ ಪ್ರೀತಿಯನ್ನು ಬೆಳೆಸುವುದು. ಸಾರ್ವಜನಿಕರು ಗೋವಿನ ಗುಣಗಳನ್ನು ತಿಳಿದುಕೊಳ್ಳಲು ಪ್ರೋತ್ಸಾಹಿಸಬೇಕು. ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ಜನರು ನಿಧಾನವಾಗಿ ನಮ್ಮ ಸಂಸ್ಕೃತಿಯಿಂದ ದೂರ ಸರಿಯುತ್ತಿದ್ದಾರೆ. ಪಶು ಕಲ್ಯಾಣ ಇಲಾಖೆಯು ಹಸುವಿನ ನರ್ತನ ದಿನವನ್ನು ಯೋಗ ದಿನದಂತೆ ಆಚರಿಸಲು ಕರೆ ನೀಡುತ್ತಿದೆ’ – ಪ್ರಾಣಿ ಕಲ್ಯಾಣ ಮಂಡಳಿಯ ಕಾನೂನು ಸಲಹೆಗಾರ ಬಿಕ್ರಮ್ ಚಂದ್ರವರ್ಷಿ ಇಂಡಿಯಾ ಟುಡೇಗೆ ತಿಳಿಸಿದರು. ಅರಣ್ಯ ಇಲಾಖೆಯ ಪ್ರಕಾರ ಗೋವು ಭಾರತೀಯ ಸಂಸ್ಕೃತಿಯ ಬೆನ್ನೆಲುಬು. ಹಸುವು ನಮ್ಮನ್ನು ತಾಯಿಯಂತೆ ನೋಡಿಕೊಳ್ಳುವುದರಿಂದ ಅದನ್ನು ‘ಕಾಮಧೇನು’ ಮತ್ತು ‘ಗೋಮಾತೆ’ ಎಂದು ಕರೆಯುತ್ತಾರೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಸಿರಿಯಾ : ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಸಂಭವಿಸಿ ನರಕಯಾತನೆ ಶುರುವಾಗಿದ್ದು ಸಾವು ನೋವುಗಳು ನೋಡುಗರನ್ನು ಬೆಚ್ಚಿಬೀಳಿಸುತ್ತಿವೆ. ಸುಮಾರು 9 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 15 ರಿಂದ 20 ಸಾವಿರಕ್ಕೂ ಹೆಚ್ಚು ಮಂದಿ ದುರಂತದಲ್ಲಿ ಗಾಯಗೊಂಡಿದ್ದು ಪ್ರತಿಯೊಂದು ದೃಷ್ಯಗಳು ಮನಕಲುಕುತ್ತಿದ್ದು ಇಬ್ಬರು ಕಂದಮ್ಮಗಳ ನರಳಾಟ ನೋಡುಗರ ಮನ ಕರಗುವಂತೆ ಮಾಡಿದೆ. ಸಿರಿಯಾದಲ್ಲಿ ಭೂಕಂಪದ ಸಂಭವಿಸಿ ಹಲವು ಕಟ್ಟಡಗಳು ಕುಸಿದಿವೆ. ಈ ಪುಟಾಣಿಗಳು ಆ ಕಟ್ಟಡಗಳ ಕೆಳಗೆ ಬರೋಬ್ಬರಿ 17 ಗಂಟೆಗಳ ಕಾಲ ಸಿಲುಕಿ ಒದ್ದಾಡಿವೆ. ನೀರು, ಆಹಾರ ಇಲ್ಲದ ಈ ಇಬ್ಬರೂ ಮಕ್ಕಳು ಅವಶೇಷಗಳಡಿಯಲ್ಲಿ 17 ಗಂಟೆ ಕಳೆದು ತನ್ನನ್ನು ಮತ್ತು ತನ್ನ ತಮ್ಮನ್ನು ಕಾಪಾಡುವಂತೆ ಬೇಡಿ ಕೊಳ್ಳುತ್ತಿರುವ ಘಟನೆ ಮನಕಲುಕುವಂತಿದೆ. ಈ ಏಳು ವರ್ಷದ ಬಾಲಕಿ ಹಾಗೂ ಆಕೆಯ ಕಿರಿಯ ಸಹೋದರ ಕೂಡ ಸಿಲುಕಿದ್ದಾರೆ. ಆದರೆ ಇಂತಹ ಕಷ್ಟದ ಸಂದರ್ಭದಲ್ಲೂ ತಮ್ಮನ ಜವಾಬ್ದಾರಿ ತೆಗೆದುಕೊಂಡಿರುವ ಬಾಲಕಿ, ಪುಟ್ಟ ಮಗುವಿನ ತಲೆಯನ್ನು ತನ್ನ ಕೈಯಲ್ಲಿ ಹಿಡಿಕೊಂಡು ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾಳೆ.…
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಈ ಭಾರಿಯ ಕೊನೆಯ ಬಜೆಟ್ ಮಂಡನೆ ಮಾಡಲಿದ್ದು ಪೆ.10 ರಿಂದ ಅಧಿವೇಶನ ನಡೆಯಲಿದೆ. ಇದು ಕೊನೆಯ ಅಧಿವೇಶನವಾಗಿದ್ದು ಎಲ್ಲ ಶಾಸಕರುಗಳು ಇದರಲ್ಲಿ ಕಡ್ಡಾಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸ್ಪೀಕರ್ ಕಾಗೇರಿ ಅವರು ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಕಳೆದ ಅಧಿವೇಶನ ನಡೆದಿತ್ತು. ಅದಾದ ಬಳಿಕ ಈಗ ವಿಧಾನಸೌಧದಲ್ಲಿ ಸೇರುತ್ತಿದ್ದೇವೆ. ಪ್ರಜಾಪ್ರಭುತ್ವದ ದೇಗುಲ ಎಂದು ಕರೆಯಲಾಗುವ ಸದನ ಇದು. ಈ ವಿಧಾನಸಭೆಯ 15ನೆಯ ಅಧಿವೇಶನವಾಗಿದ್ದು ಸದಸ್ಯರು ಜವಾಬ್ದಾರಿಯುತವಾಗಿ ನಡೆದುಕೊಂಡು ಅಧಿವೇಶದಲ್ಲಿ ಪಾಲ್ಗೊಳ್ಳಬೇಕೆಂದು ಬಯಸುವುದಾಗಿ ಹೇಳಿದರು. ಫೆ. 10 ರಿಂದ ಫೆ. 24ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನವಾಗಿದ್ದು ಫೆಬ್ರುವರಿ 17ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸಲಿದ್ದಾರೆ. ನಾಳೆ 11 ಗಂಟೆಗೆ ರಾಜ್ಯಪಾಲರು ಬೃಹತ್ ಮೆಟ್ಟಿಲುಗಳ ಮೂಲಕ ವಿಧಾನಸಭೆಗೆ ಆಗಿಸಲಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೀದರ್: ನೂತನ ಅಂಗನವಾಡಿ ಕೇಂದ್ರದ ಕಟ್ಟಡದ ಮುಂದೆ ನಿರ್ಮಿಸಲಾಗಿರುವ ಸೇಫ್ಟಿ ಟ್ಯಾಂಕ್ ಗೆ ಬಿದ್ದು 3 ವರ್ಷ ವಯಸ್ಸಿನ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದ್ದು, ಘಟನೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಔರಾದ ಪಟ್ಟಣದ ಅಂಬಿಕಾ ಕಾಲೋನಿಯಲ್ಲಿ ಅಂಗನವಾಡಿ ಕೇಂದ್ರದ ಸಮೀಪವಿರುವ ಸೇಫ್ಟಿ ಟ್ಯಾಂಗ್ ಗುಂಡಿ ಮುಚ್ಚದ ಕಾರಣ, ಮುಂಜಾನೆ ಅಂಗನವಾಡಿ ಕೇಂದ್ರಕ್ಕೆ ಮಗು ತೆರಳಿದ ವೇಳೆ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದೆ. ಟ್ಯಾಂಕ್ ಮುಚ್ಚದೇ ನಿರ್ಲಕ್ಷ್ಯವಹಿಸಿದ್ದರಿಂದಾಗಿ ಮಗು ಸಾವನ್ನಪ್ಪಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಆಹೋ ರಾತ್ರಿ ಧರಣಿ ನಡೆಸಿದರು. ಸಚಿವ ಪ್ರಭು ಚೌವ್ಹಾಣ್ ವಿರುದ್ಧವೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಇಕಳಗಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಜೊತೆಗೆ ಮಾತನಾಡಿ ಕ್ರಮಕೈಗೊಳ್ಳುವ ಭರವಸೆ ನೀಡಿದ ಬಳಿಕ ಔರಾದ್ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ…
ತಿಪಟೂರು: ನಗರದ ಇಂದಿರಾನಗರದಲ್ಲಿರುವ ಸರ್ಕಾರಿ ಜಾಗ ಹದ್ದಿ ಹದುಹಿಡಿದ ಹಳ್ಳದ ಸುಮಾರು ಕೋಟ್ಯಾಂತರ ರೂ ಬೆಲೆಬಾಳುವ ಜಾಗವನ್ನು ಜಿ.ಬಿ.ಗಂಗಯ್ಯನವರ ಮಕ್ಕಳಾದ ಪುಷ್ಪಾವತಿ ಮತ್ತು ಮೋಹನ ಕುಮಾರಿ ಎಂಬುವವರು ಒತ್ತುವರಿ ಮಾಡಿಕೊಂಡಿದ್ದರು ಈ ಬಗ್ಗೆ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಕ್ರಮ ಜರುಗಿಸಲು ಮೀನಾಮೇಷ ಎಣಿಸುತ್ತಿದ್ದಾರೆಂದು ವಾರ್ಡ್ ನಂ 18ರ ನಗರಸಭಾ ಸದಸ್ಯ ಮಹೇಶ್ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನಗರದಲ್ಲಿ ಅನೇಕ ಬಡವರು ವಾಸಿಸುತ್ತಿದ್ದಾರೆ. ಸರ್ಕಾರಿ ಜಾಗವನ್ನು ಮಂಜೂರು ಮಾಡಿಸಿಕೊಂಡು ಮನೆಕಟ್ಟಿಕೊಂಡು ವಾಸಿಸುತ್ತಿದ್ದು, ಇನ್ನು ಅನೇಕ ನಿರ್ಗತಿಕರು ನಿವೇಶನವಿಲ್ಲದೇ ಹೋರಾಡುತ್ತಿದ್ದಾರೆ. ಆದರೆ ಪ್ರಭಲ ಗಾಣಿಗ ಸಮುದಾಯಕ್ಕೆ ಸೇರಿದ ಮೋಹನ ಕುಮಾರಿ ಮತ್ತು ಪುಷ್ಪಾವತಿ ಎಂಬುವವರು ಒತ್ತುವರಿ ಮಾಡುತ್ತಿದ್ದು, ಸರ್ಕಾರ ನೋಟಿಸ್ ನೀಡಿದರು ಅದನ್ನು ತೆಗೆದುಕೊಳ್ಳದೇ ಕಟ್ಟಡದ ಕಾಮಗಾರಿಯನ್ನು ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹಾಗು ನಿವೇಶನ ರಹಿತರಿಗೆ ತುಂಬಾ ಅನ್ಯಾಯವಾಗುತ್ತಿದೆ ಎಂದು ಅವರು ದೂರಿದರು. ಮಾರನಗೆರೆ ಗ್ರಾಮದ ಸರ್ವೇ ನಂ 11/2ರ ಜಮೀನನ್ನು ದಿನಾಂಕ: 14-09-2018ರಂದು ಮಾರನಗೆರೆ ಗಡಿಯನ್ನು ನಿರ್ಧರಿಸಿದ್ದರು. ಆದರೆ ತಿಪಟೂರು ಗಡಿಯನ್ನು ಇದುವರೆಗೂ…
ಮಧ್ಯಾಹ್ನದ ಊಟಕ್ಕೆ ಕರಿಬೇವು ಏನೇ ಇರಲಿ, ತೆಂಗಿನಕಾಯಿ ಎಂದರೆ ಮಲಯಾಳಿಗಳು ಒಮ್ಮೆಯಾದರೂ ತಪ್ಪಿಸಿಕೊಳ್ಳಲಾರರು. ಹೆಚ್ಚಿನ ಮನೆಗಳಲ್ಲಿ, ತೆಂಗಿನಕಾಯಿ ಒಡೆಯಲು ಪ್ರಾರಂಭಿಸುವ ಮೊದಲು ತೆಂಗಿನ ನೀರಿನ ಅಭಿಮಾನಿಗಳು ಅಡುಗೆಮನೆಯಲ್ಲಿ ಇರುತ್ತಾರೆ. ತೆಂಗಿನ ನೀರಲ್ಲಿ ಅನೇಕರಿಗೆ ತಿಳಿದಿಲ್ಲದ ಕೆಲವು ಆರೋಗ್ಯದಾಯಕ ಅಂಶಗಳು ಇವೆ, ಅದು ರುಚಿಯನ್ನು ಮಾತ್ರವಲ್ಲದೆ ಸೌಂದರ್ಯವನ್ನೂ ಹೆಚ್ಚಿಸುತ್ತದೆ. ತೆಂಗಿನ ನೀರನ್ನು ಚರ್ಮ ಮತ್ತು ಕೂದಲಿಗೆ ಹೇಗೆ ಬಳಸಬಹುದು ಎಂದು ನೋಡೋಣ… ಕೆಂಪು ಕಲೆಗಳು ಮೊಡವೆ ಇತ್ಯಾದಿಗಳಿಂದ ಮುಖದ ಮೇಲಿನ ಕೆಂಪು ಕಲೆಗಳು ಮತ್ತು ಮೊಡವೆಗಳನ್ನು ಹೋಗಲಾಡಿಸಲು ತೆಂಗಿನ ನೀರು ಅದ್ಭುತವಾಗಿದೆ. ತೆಂಗಿನ ನೀರು ಮತ್ತು ಅರಿಶಿನವನ್ನು ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿದರೆ ಕಲೆಗಳು ಮಾಯವಾಗಲು ಪ್ರಾರಂಭಿಸುತ್ತವೆ. ಈ ಫೇಸ್ ಪ್ಯಾಕ್ ಅನ್ನು ನಿಯಮಿತವಾಗಿ ಬಳಸುವುದರಿಂದ ಕಲೆಗಳು ಸಂಪೂರ್ಣವಾಗಿ ಮಾಯವಾಗುತ್ತವೆ. ಹೊಳೆಯುವ ಚರ್ಮಕ್ಕಾಗಿ ಧೂಳು ಮತ್ತು ಬಿಸಿಲಿನಿಂದ ಕಾಂತಿಯನ್ನು ಕಳೆದುಕೊಂಡಿರುವ ತ್ವಚೆಯು ಬಹುಬೇಗನೆ ತನ್ನ ನೈಸರ್ಗಿಕ ಹೊಳಪನ್ನು ಮರಳಿ ಪಡೆಯಲು ನೆರವಾಗುವ ವಸ್ತುಗಳಲ್ಲಿ ತೆಂಗಿನ ನೀರು ಕೂಡ ಒಂದು. ತೆಂಗಿನಕಾಯಿ ನೀರಿನಲ್ಲಿ ಹತ್ತಿ…
ಅಧಿಕೃತ ಮೂಲಗಳ ಪ್ರಕಾರ ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪಗಳಿಂದ ಸತ್ತವರ ಸಂಖ್ಯೆ 15,000 ಮೀರಿದೆ. ಟರ್ಕಿಯಲ್ಲಿ 12,391 ಮತ್ತು ಸಿರಿಯಾದಲ್ಲಿ 2,992 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 15,383 ಕ್ಕೆ ಏರಿದೆ ಎಂದು ಗಾರ್ಡಿಯನ್ ವರದಿ ಮಾಡಿದೆ. ಭೂಕಂಪದ ಕೇಂದ್ರಬಿಂದುವಿಗೆ ಭೇಟಿ ನೀಡಿದ ರೆಸೆಪ್ ತಯ್ಯಿಪ್ ಎರ್ಡೊಗನ್, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ. ವಿಕೋಪದಿಂದ ತೀವ್ರ ಹಾನಿಗೊಳಗಾದ 10 ಪ್ರಾಂತ್ಯಗಳಲ್ಲಿ ವಸತಿ ರಹಿತರಿಗೆ ಮನೆ ನಿರ್ಮಿಸಿಕೊಡುವುದಾಗಿ ಸರ್ಕಾರ ಭರವಸೆ ನೀಡಿದೆ. ಸಿರಿಯಾದಲ್ಲಿ 2,98,000 ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆಯಬೇಕಾಯಿತು ಎಂದು ಸಿರಿಯನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ವಾಯುವ್ಯದಲ್ಲಿ ಬಂಡುಕೋರರ ಹಿಡಿತದಲ್ಲಿರುವ ಪ್ರದೇಶಗಳಲ್ಲಿ 1,730 ಜನರು ಕೊಲ್ಲಲ್ಪಟ್ಟರು. ದೇಶದಲ್ಲಿ ಸರ್ಕಾರಿ ನಿಯಂತ್ರಿತ ಪ್ರದೇಶಗಳಲ್ಲಿ ಸಾವಿನ ಸಂಖ್ಯೆ 1,262 ಕ್ಕೆ ಏರಿದೆ. ಸುಮಾರು 5,108 ಜನರು ಗಾಯಗೊಂಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯು ತಜ್ಞರ ತಂಡಗಳನ್ನು ಮತ್ತು ವೈದ್ಯಕೀಯ ಸಾಮಗ್ರಿಗಳೊಂದಿಗೆ ಟರ್ಕಿ ಮತ್ತು ಸಿರಿಯಾಕ್ಕೆ ವಿಶೇಷ ವಿಮಾನಗಳನ್ನು ಕಳುಹಿಸುತ್ತಿದೆ…
ಅದಾನಿ ಅವ್ಯವಹಾರದ ಕುರಿತು ನಾನು ಕೇಳಿದ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿಲ್ಲ. ಈ ಮೂಲಕ ಅದಾನಿಯನ್ನ ಮೋದಿಯವರು ರಕ್ಷಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದರು. ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಪ್ರಧಾನಿ ಮೋದಿ ಈ ವೇಳೆ ವಿಪಕ್ಷಗಳನ್ನ ಟೀಕಿಸಿದರು. ಇದೇ ಸಮಯದಲ್ಲಿ ಗೌತಮ್ ಅದಾನಿ ಅವ್ಯವಹಾರದ ಬಗ್ಗೆ ತನಿಖೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಆರ್ ಎಸ್, ಕಾಂಗ್ರೆಸ್ ಸಭಾತ್ಯಾಗ ಮಾಡಿದ ಘಟನೆ ನಡೆಯಿತು. ನಂತರ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ನನ್ನ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಅದಾನಿ ವಿರುದ್ಧದ ತನಿಖೆ ಬಗ್ಗೆ ಮಾತನಾಡಲಿಲ್ಲ ಮೋದಿ ಅದಾನಿಯನ್ನ ರಕ್ಷಿಸುತ್ತಿದ್ದಾರೆ. ಪ್ರಧಾನಿ ಉತ್ತರದಿಂದ ನಮಗೆ ನಿರಾಸೆ ಉಂಟಾಗಿದೆ. ಅದಾನಿ ಅವ್ಯವಹಾರದ ಬಗ್ಗೆ ತನಿಖೆ ಮಾಡಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ (Sidlaghatta) ಕಾನೂನು ಮಾಪನ ಇಲಾಖೆ ಕಚೇರಿಯಲ್ಲಿ ಪೆಟ್ರೋಲ್ ಬಂಕ್ ಮಾಲೀಕರಿಂದ ಲಂಚ ಪಡೆಯುತ್ತಿದ್ದ ವೇಳೆ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾನೂನು ಮಾಪನ ಇಲಾಖೆಯ ಸಹಾಯಕ ನಿಯಂತ್ರಕಿ ಎಸ್.ಮಾಲಾ ಕಿರಣ್ ಅವರು, ₹ 8 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು ಮಂಗಳವಾರ ಹಣ ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರತಿ ವರ್ಷ ಕಾನೂನು ಮಾಪನ ಇಲಾಖೆಯ (Legal Measurement Department) ಅಧಿಕಾರಿಗಳು ಪೆಟ್ರೋಲ್ ಬಂಕ್ ತಪಾಸಣೆ ಮಾಡಿ ಪ್ರಮಾಣ ಪತ್ರ ನೀಡುವರು. ಅದರಂತೆ ಶಿಡ್ಲಘಟ್ಟ ರಸ್ತೆಯ ಬಸವೇಶ್ವರ ಪೆಟ್ರೋಲ್ ಬಂಕ್ ಮಾಲೀಕ ಭಾಸ್ಕರ್ ಅವರು ಬಂಕ್ ತಪಾಸಣೆ ಮಾಡಿ ಸ್ಟಾಂಪಿಂಗ್ ಮಾಡುವಂತೆ ಜ.31ರಂದು ಕಾನೂನು ಮಾಪನ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಫೆ.6ರಂದು ಮಾಲಾ ಕಿರಣ್ ಪೆಟ್ರೋಲ್ ಬಂಕ್ಗೆ ಬಂದು ತಪಾಸಣೆ ಮಾಡಿ ಸ್ಟಾಂಪಿಂಗ್ ಮಾಡಿದ್ದರು. ಪೆಟ್ರೋಲ್ ಬಂಕ್ನಲ್ಲಿ ಎರಡು ಪಂಪ್ ಇದ್ದು ಇದಕ್ಕೆ ನಾಲ್ಕು ನಾಜಲ್ ಇವೆ. ಪ್ರತಿ ನಾಜಲ್ಗೆ ₹ 2 ಸಾವಿರಂತೆ ₹…