Author: admin

ಬೆಳಗಾವಿ: ಹುಟ್ಟಿದಾಗಿನ ಹಾಗೂ ನಡುವಿನ ಬದುಕಿನ ಅಗತ್ಯಗಳು ಎಷ್ಟು ಮುಖ್ಯವೋ ಮನುಷ್ಯನ ಅಂತ್ಯದಲ್ಲಿನ ಸಂಸ್ಕಾರಗಳು ಅದಕ್ಕಿಂತ ಮುಖ್ಯ. ಒಬ್ಬ ಮನುಷ್ಯನನ್ನು ಸಾವಿನಲ್ಲೂ ಗೌರವಯುತವಾಗಿ ನಡೆಸಿಕೊಳ್ಳಬೇಕಾದುದು ಎಲ್ಲರ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಬಡಸ್ ಕೆ.ಎಚ್. ಗ್ರಾಮದ ದಲಿತ ಸಮಾಜದ ಸ್ಮಶಾನ ಭೂಮಿಯ ಸಲುವಾಗಿ ಇಂದು ವೈಯಕ್ತಿಕ 3 ಲಕ್ಷ ರೂ. ಸಹಾಯಧನ ನೀಡಿ ಮಾತನಾಡಿದರು. ಈ ಸಹಾಯಧನ ಬಳಸಿ ಸ್ಮಶಾನ ಭೂಮಿಯನ್ನು ಯಾವುದೇ ಮೂಲಸೌಕರ್ಯಗಳ ಕೊರತೆ ಇಲ್ಲದಂತೆ ಅಭಿವೃದ್ಧಿಪಡಿಸಿಕೊಳ್ಳುವಂತೆ ಅವರು ಸಮುದಾಯದ ಮುಖಂಡರಿಗೆ ಸಲಹೆ ನೀಡಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಶಂಕರ ಗಿಡ್ಡಬಸನ್ನವರ, ಇನಾಯತ್ ಅಲಿ ಅತ್ತಾರ, ಮನ್ಸೂರ್ ಅಲಿ, ಪ್ರಶಾಂತ ಪಾಟೀಲ, ಶಂಕರ ಪಾಟೀಲ, ಭರ್ಮಾ ಶೀಗಿಹಳ್ಳಿ, ಗೌಸ್ ಶಿಂಪಿ, ಸದೆಪ್ಪ ಹಾದಿಮನಿ, ಕಲ್ಲಪ್ಪ ವಣ್ಣೂರ, ಅರ್ಜುನ ಜಿಮ್ಮನ್ನವರ, ಭೀಮಶಿ ಹಾದಿಮನಿ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಮಂಗಳೂರು ಜಿಲ್ಲೆಯ ಮುಲ್ಕಿ ಸಮೀಪದ ಎಸ್ ಕೋಡಿ ಎಂಬಲ್ಲಿ ಅತಿಥಿ ಉಪನ್ಯಾಸಕಿ ಅಮಿತಾ ಬಿವಿ (34) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ತಿಳಿದು ಬಂದಿದೆ. ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಗಂಡನ ಮನೆಗೆ ಬಂದು ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಮಿತಾ ಅತ್ಯಂತ ಕ್ರಿಯಾಶೀಲ ಮಹಿಳೆಯಾಗಿದ್ದು, ಇವಳು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಇಲ್ಲಿನ ಪ್ರತಿ ವಿಭಾಗದ ವಿದ್ಯಾರ್ಥಿಗಳಿಗೂ ಇವರು ಅಚ್ಚುಮೆಚ್ಚಿನ ಉಪನ್ಯಾಸಕಿಯಾಗಿದ್ದರು ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೇಶದಲ್ಲಿ ಭ್ರಷ್ಟಾಚಾರ, ಕುಟುಂಬ ರಾಜಕಾರಣ ಅಂತ್ಯವಾಗಿದೆ. ಯುಪಿಎ ಅವದಿಯಲ್ಲಿ ಅರ್ಥ ವ್ಯವಸ್ಥೆ ಪಾತಾಳಕ್ಕೆ ಕುಸಿದಿತ್ತು. ಈಗ ಅರ್ಥವ್ಯವಸ್ಥೆ ಸರಿಯಾಗಿರುವುದನ್ನ ಕಂಡು ಕೆಲವರಿಗೆ ನಿರಾಸೆಯಾಗಿದೆ ಎಂದು ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಟಿ ಬೀಸಿದರು. ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ವಿಪಕ್ಷಗಳನ್ನ ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ, 2004ರಿಂದ 2014ರವರೆಗೆ ಭಾರತೀಯ ಆರ್ಥಿಕ ಸ್ಥಿತಿ ಹದಗೆಟ್ಟಿತ್ತು. ಈಗ ಅರ್ಥವ್ಯವಸ್ಥೆ ಸುಧಾರಿಸಿದೆ. ಮೊಬೈಲ್ ಉತ್ಪಾದನೆಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ದ್ವೇಷದ ಭಾವನೆಯ ರಾಜಕಾರಣ ಈಗ ಬಯಲಾಗಿದೆ. ದ್ವೇಷದ ಹಿಂದಿನ ಸತ್ಯ ಎಲ್ಲರ ಮುಂದೆ ಬಯಲಾಗಿದೆ ಎಂದು ಹೇಳಿದರು. ಕ್ರಮೇಣವಾಗಿ ದೇಶ ಭ್ರಷ್ಟಾಚಾರದಿಂದ ಮುಕ್ತವಾಗಿದೆ. ದೇಶದಲ್ಲಿ ಕುಟುಂಬ ರಾಜಕಾರಣ ಭ್ರಷ್ಟಾಚಾರ ಅಂತ್ಯವಾಗಿದೆ. ವಿಶ್ವದ ಸಮೃದ್ಧ ದೇಶಗಳಲ್ಲಿ ಭಾರತ ಒಂದಾಗಿದೆ. ಈ ಬಾರಿ ಭಾರತಕ್ಕೆ ಜಿ-20 ಅಧ್ಯಕ್ಷತೆ ಸಿಕ್ಕಿರುವುದರಿಂದ ಕೆಲವರಿಗೆ ದುಃಖವಾಗುತ್ತಿದೆ . ಅನೇಕ ದೇಶಗಳು ನಿರುದ್ಯೋಗ ಹಸಿವು ಬಡತನದಿಂದ ಬಳಲುತ್ತಿವೆ. ಭಾರತ ವಿಶ್ವದ 5ನೇ ಬಲಿಷ್ಠ ಆರ್ಥಿಕತೆ ಹೊಂದಿದೆ. ಭಾರತ…

Read More

ಗೋಕಾಕ್: ಫೆ. 24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಪ್ರವಾಸ ಹಮ್ಮಿಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ಲ್‌ ಗಾರ್ಡನ್‌ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆ. 28 ರಂದು ಸಂಜೆ ಗೋಕಾಕ್ ನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ ಯಶಸ್ಸಿಯಾಗಿ ನಡೆಸಲಾಗಿದ್ದು, 2ನೇ ಹಂತದ ಯಾತ್ರೆಯನ್ನು ವಿಧನಸಭಾ ಕ್ಷೇತ್ರವಾರು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಿಸಿದ ಯೋಜನೆಗಳನ್ನುಮನೆ ಮನೆಗೆ ತಿಳಿಸಲಾಗುವುದು, ಇನ್ನು ಅನೇಕ ಯೋಜನೆಗಳನ್ನು ಘೋಷಿಸಲಾಗುವುದು, ಇದರಲ್ಲಿ ಜಿಲ್ಲಾವಾರು ಯೋಜನೆಗಳು ಹಂಚಿಕೆಯಾಗಿವೆ. ಜನ ಆಶೀರ್ವಾದ ಮಾಡಿದರೆ ಈ ಎಲ್ಲಾ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ತುರುವೇಕೆರೆ: ತಾಲೂಕಿನ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಹೊಸಹಳ್ಳಿ ಗ್ರಾಮದಲ್ಲಿ ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಎರಡನೇ ವರ್ಷದ ರಾಜ್ಯಮಟ್ಟದ ಹೊನಲು  ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಫೆಬ್ರವರಿ 18ರಂದು ಹಮ್ಮಿಕೊಳ್ಳಲಾಗಿದೆ ಎಂದು ನಿವೃತ್ತ ಶಿಕ್ಷಕ ಕೆ ಶಿವಣ್ಣ ತಿಳಿಸಿದರು. ತಾಲೂಕಿನ ಎ ಹೊಸಹಳ್ಳಿಯ  ಮಾರುತಿ ಮಾರುತಿ ದೇವಾಲಯದ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುತಿ ದೇವಾಲಯದ ಮುಂಭಾಗ ಶನಿವಾರ ಸಂಜೆ 6 ಗಂಟೆಗೆ ಪಂದ್ಯಾವಳಿ ಪ್ರಾರಂಭವಾಗಲಿದೆ. ಪ್ರಥಮ ಬಹುಮಾನ 30,000  ನಗದು, ದ್ವಿತೀಯ ಬಹುಮಾನ 20,000 ನಗದು ತೃತಿಯ 10,000 ನಗದು ಚತುರ್ಥ ಬಹುಮಾನ 5000 ಬಹುಮಾನವಿದೆ  ಎಂದು ತಿಳಿಸಿದರು. ಈ ಪಂದ್ಯಾವಳಿಗೂ ಮುನ್ನ ವೇದಿಕೆ ಕಾರ್ಯಕ್ರಮವಿದ್ದು, ಅದರಲ್ಲಿ ಅಧ್ಯಕ್ಷತೆಯನ್ನ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಗ್ರಾಮದ ಹಿರಿಯ ಮುಖಂಡ ಶಿವಣ್ಣ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜೆಡಿಎಸ್ ತಾಲೂಕು ಯುವ ಘಟಕದ ಅಧ್ಯಕ್ಷ ಬಾಣಸಂದ್ರ ರಮೇಶ್ ಜನಪ್ರತಿನಿಧಿಗಳು ಊರಿನ ಮುಖಂಡರು ಭಾಗವಹಿಸಲಿದ್ದಾರೆ . ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಕುಡಿಯುವ…

Read More

ತುರುವೇಕೆರೆ: ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನೆಪೆಡ್ ಮೂಲಕ ರಾಗಿ ಖರೀದಿ ಮಾಡಲು ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು ನಾಲ್ಕೈದು ದಿನಗಳಿಂದ ರಾಗಿ ಮಾರಾಟ ಮಾಡಲು ಬಂದಿದ್ದ ರೈತರು ಖರೀದಿ ಕೇಂದ್ರದಲ್ಲಿ ಖರೀದಿ ಪ್ರಕ್ರಿಯೆ ನಿಧಾನಗತಿಯಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಯುವಂತಹ ಪರಿಸ್ಥಿತಿ ಸೃಷ್ಟಿಯಾಗಿದ್ದು, ತಾವು ತಂದಿದ್ದ ರಾಗಿ ತುಂಬಿದ ಟ್ರಾಕ್ಟರ್ ಗಳನ್ನು ರಸ್ತೆ ಬದಿಯ ಪಕ್ಕದಲ್ಲಿ ಸುಮಾರು ಎರಡರಿಂದ ಮೂರು ಕಿಲೋಮೀಟರ್ ದೂರದವರೆಗೆ ಸಾಲುಗಟ್ಟಿ ನಿಲ್ಲಿಸಲಾಗಿದೆ. ಇನ್ನು ಇದೇ ವೇಳೆಯಲ್ಲಿ ತಾಲೂಕು ಅಧ್ಯಕ್ಷರಾದ ರೈತ ಮುಖಂಡ ನಾಗೇಂದ್ರ ಅವರು ಮಾತನಾಡಿ, ಕೇವಲ ಮೂರು ರಾಗಿ ಖರೀದಿ ಕೇಂದ್ರಗಳಿ ಇಲ್ಲಿದ್ದು, ಇಲ್ಲಿ ಖರೀದಿ ಆಮೆ ಗತಿಯಲ್ಲಿ ಸಾಗುತ್ತಿದೆ. ತಾಲೂಕಿನಾದ್ಯಂತ ಹಳ್ಳಿಗಳಿಂದ ಬಂದಂತಹ ರೈತರುಗಳು ಬೇಸತ್ತು ಹೋಗಿದ್ದಾರೆ. ಒಟ್ಟಾರೆ ಈ ತಾಲೂಕಿನಲ್ಲಿ ಸುಮಾರು 13,602 ರೈತರು ನೋಂದಣಿ ಮಾಡಿಸಿದ್ದು, ಇಲ್ಲಿಯವರೆಗೆ ಕೇವಲ 980 ರೈತರಿಂದ ರಾಗಿ ಖರೀದಿ ಮಾಡಲಾಗಿದೆ ,ಏನೇ ಇರಲಿ ಆಹಾರ ಇಲಾಖೆಗೆ ಯಾವುದೇ ಮಂತ್ರಿ ಇಲ್ಲದಿರುವುದು ಈ ಸರ್ಕಾರಕ್ಕೆ ನಾಚಿಕೆಗೇಡಿನ…

Read More

ತುರುವೇಕೆರೆ: ತಾಲೂಕಿನ ಕಸಬಾ ಹೋಬಳಿ, ಕೊಡಿಗೆಹಳ್ಳಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೀಣಾ ಎಂಬ ಮುಖ್ಯ ಶಿಕ್ಷಕಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಕೆಲಸಕ್ಕಾಗಿ ಯೋಜನೆ ಮಾಡಿಕೊಂಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳ ಪೋಷಕರುಗಳಾದ ರಘುಕುಮಾರ್ ರವರ ನೇತೃತ್ವದಲ್ಲಿ ಇಂದು ಸರ್ಕಾರಿ ಶಾಲೆಯ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ರಘುಕುಮಾರ್ ಮುಖ್ಯ ಶಿಕ್ಷಕಿ ವೀಣಾ ಅವರು, ಬಂದಾಗಿನಿಂದ ಈ ಶಾಲೆಯಲ್ಲಿ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಉತ್ತಮವಾಗಿದ್ದು, ಎಸ್, ಎಸ್, ಎಲ್, ಸಿ ,ಫಲಿತಾಂಶ ಜಿಲ್ಲೆಯಲ್ಲಿ ಮೂರನೇ ಸ್ಥಾನಕ್ಕೆ ಕೊಂಡೊಯ್ಯಲು ಈ ಶಿಕ್ಷಕಿಯು ನೀಡುವ ಗುಣಮಟ್ಟದ ಶಿಕ್ಷಣ, ಹಾಗೂ ಇಂಗ್ಲಿಷ್ ಪರಿಣಿತಿ, ಮಕ್ಕಳಲ್ಲೂ ಉತ್ತೇಜಿಸಿ, ಇಂಗ್ಲಿಷ್ ಭಾಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಾಗಿರುತ್ತಾರೆ.  ಜೊತೆಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪೆಣಂಬೂತವಾಗಿರುವ ಇಂಗ್ಲಿಷ್ ಭಾಷೆಯನ್ನು ಸುಲಲಿತವಾಗಿ ಮಕ್ಕಳಿಗೆ ಅರ್ಥೈಸುತ್ತಿದ್ದರು, ಆದರೆ ಈ ಮುಖ್ಯ ಶಿಕ್ಷಕಿಯನ್ನು ತಾಲೂಕು ಶಿಕ್ಷಣಾಧಿಕಾರಿಯ ಕಚೇರಿಗೆ ನಿಯೋಜನೆ ಮಾಡಿಕೊಂಡಿರುವುದು ಖಂಡನೀಯ ಎಂದರು. ಈ ಬಗ್ಗೆ ಈ ಶಾಲೆಯ ಎಸ್ ಡಿ ಎಂ…

Read More

ಬೆಂಗಳೂರು: ಫೆಬ್ರವರಿ 08, 2023:* ಬೆಂಗಳೂರಿನ ಆರ್ಚ್‌ಬಿಷಪ್ ವಿಶ್ರಾಂತ ಧರ್ಮಗುರು ಡಾ. ಇಗ್ನೇಷಿಯಸ್ ಪಾಲ್ ಪಿಂಟೋ (98) ಅವರು ಇಂದು ಮುಂಜಾನೆ 1:30 ಕ್ಕೆ ಹೊಸೂರು ರಸ್ತೆಯಲ್ಲಿರುವ ಬಡ ಹಿರಿಯ ನಾಗರಿಕರ ಲಿಟಲ್ ಸಿಸ್ಟರ್ಸ್ ಹೋಮ್‌ನಲ್ಲಿ ನಿಧನರಾದರು. ಬೆಂಗಳೂರಿನ ಮೆಟ್ರೋಪಾಲಿಟನ್ ಆರ್ಚ್ ಬಿಷಪ್ ಅತಿ ವಂದನೀಯ ಡಾ.ಪೀಟರ್ ಮಚಾಡೊ ಅವರು ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ಅವರ ದುಃಖದ ನಿಧನವನ್ನು ಖಚಿತಪಡಿಸಿದ್ದಾರೆ. ಆರ್ಚ್‌ಬಿಷಪ್ ಇಗ್ನೇಷಿಯಸ್ ಪಿಂಟೋ ಅವರು ಮೇ 18, 1925 ರಂದು ಜನಿಸಿದರು. ಅವರು ಸೆಮಿನರಿಗೆ ಸೇರಿದರು ಮತ್ತು ಆಗಸ್ಟ್ 24, 1952 ರಂದು ಬೆಂಗಳೂರಿನ ಆರ್ಚ್‌ಡಯಾಸಿಸ್‌ಗೆ ಪಾದ್ರಿಯಾಗಿ ನೇಮಕಗೊಂಡರು. ಬೆಂಗಳೂರಿನ ಆರ್ಚ್‌ಡಯೋಸಿಸ್‌ನ ಪಾದ್ರಿ ಮತ್ತು ವಿಕಾರ್ ಜನರಲ್ ಆಗಿ, ಅವರು ಪೋಪ್ ಜಾನ್ ಪಾಲ್ II ರ ಆರ್ಚ್‌ಡಯೋಸಿಸ್‌ಗೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದರು, ಅವರ ಅಪೊಸ್ಟೋಲಿಕ್ ಪತ್ರ “ಬೋನೆವೊಲೆಂಟಿಯಂ ಕ್ವಿಡೆಮ್ ನಾಸ್ಟ್ರಮ್” ಮೂಲಕ ಅವರನ್ನು ಚರ್ಚಿನ ಪ್ರಾಂತ್ಯದಲ್ಲಿ ಹೊಸದಾಗಿ ಸ್ಥಾಪಿಸಲಾದ ಶಿವಮೊಗ್ಗದ ಡಯಾಸಿಸ್‌ನ ಮೊದಲ ಬಿಷಪ್ ಆಗಿ…

Read More

ತುಮಕೂರು:  ಶ್ರೀ ಸಿದ್ಧಗಂಗಾಮಠದಲ್ಲಿ ಇಂದು(ಫೆ.8) ಸಂಜೆ  7 ಗಂಟೆಯಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 ಆರಂಭವಾಗಲಿದ್ದು, ಇಂದು ಸಂಜೆ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಸಮಾರಂಭದಲ್ಲಿ ಶ್ರೀಶ್ರೀ ಸಿದ್ದಲಿಂಗ ಮಹಾಸ್ವಾಮಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ತುಮಕೂರು ಮಹಾನಗರ ಪಾಲಿಕೆ ಮೇಯರ್ ಎಂ.ಪ್ರಭಾವತಿ ಸುಧೀಶ್ವರ್ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರ್ ವಾಡ್, ಮಹಾನಗರ ಪಾಲಿಕೆ ಆಯುಕ್ತರಾದ ಸಿ.ಯೋಗಾನಂದ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಕೆ.ಎಂ.ಉಮೇಶ್ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಬೆಳಗಾವಿ: ಪ್ರಜಾಪ್ರಭುತ್ವದ ಅಡಿಯಲ್ಲಿ 2 ಬಾರಿ ಮುಖ್ಯಮಂತ್ರಿಗಳಾಗಿ ರಾಜ್ಯವನ್ನಾಳಿದ ಕುಮಾರಸ್ವಾಮಿಯವರ ಬಾಯಿಯಲ್ಲಿ ಜಾತಿಯವಾಸನೆ ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಅಕ್ರೋಶ ವ್ಯಕ್ತಪಡಿಸಿದ್ದಾರೆ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು ಜಾತಿ ಮತ ಪಂಥ ಬಡವ ಬಲ್ಲಿದ ಎಂಬವದನ್ನು ಮೀರಿ ಜನಸಾಮಾನ್ಯರೆ ಸೇವೆ ಮಾಡುವ ಮೂಲಕ ಕೇಂದ್ರ ಸಚಿವರಾದ ಪ್ರಲ್ಲಾದ ಜೋಶಿಯವರು ಬಿಜೆಪಿಯಲ್ಲಿ ಅಗ್ರ ನಾಯಕರ ಪಂಕ್ತಿಯಲ್ಲಿ ಇದ್ದಾರೆ ಇದನ್ನು ಸಹಿಸದೆ ಹಾಗೂ ಸೋಲಿನ ಭಯದಲ್ಲಿ ಹತಾಷರಾಗಿ ಜಾತಿಯನ್ನು ವಿನಕಾರಣ ರಾಜಕೀಯದಲ್ಲಿ ಏಳೆದು ತಂದಿದ್ದಾರೆ. ರಾಜಕಾರಣದಲ್ಲಿ ಟೀಕೆಗಳು ಸಾಮಾನ್ಯ ಆದರೆ ಜಾತಿಗಳನ್ನು ನಿಂದಿಸುವದು ರಾಜಕಾರಣಕ್ಕೆ ಬಳಸಿಕೊಳ್ಳುವದು ಸರಿಯಾದ ಮಾರ್ಗವಲ್ಲ. ಜನಪ್ರತಿನಿಧಿಗಳು ಆದವರು ಇವುಗಳನೆಲ್ಲ ಮೀರಿ ಬೆಳೆಯಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ ಇದೆಯೆಂದು ಬಾಯಿ ಚಪಲಕ್ಕಾಗಿ ಇನ್ನೊಬ್ಬರನ್ನ ತೃಪ್ತಿ ಪಡಿಸುವ ಉದ್ದೇಶಕ್ಕಾಗಿ ಜಾತಿಯ ಹೆಸರಿನಲ್ಲಿ ಮಾತನಾಡವದು ಸರಿಯಲ್ಲ. ಒಂದು ಅಧಿಕಾರ ಅನುಭವಿಸಿದ ವ್ಯಕ್ತಿಗಳೆ ಇಂತಹ ಕಿಳುಮಟ್ಟಕ್ಕೆ ಇಳಿಯಬಾರದು. ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಮೋದಿಜಿಯವರ ಜೋತೆಯಲ್ಲಿ ಉತ್ತಮ…

Read More