Subscribe to Updates
Get the latest creative news from FooBar about art, design and business.
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
- ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
- ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
- ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
- ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
- ಜೂಜಾಟ: 12 ಮಂದಿ ಆರೋಪಿಗಳ ಬಂಧನ
Author: admin
ನಿಕೋಬಾರ್ ದ್ವೀಪಗಳ ಬಳಿ ಬೆಳಗ್ಗೆ 5 ಗಂಟೆಗೆ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಈ ವರ್ಷ ಈ ಪ್ರದೇಶದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ. ಅದಕ್ಕೂ ಮುನ್ನ ಜನವರಿಯಲ್ಲಿ ಅಂಡಮಾನ್ ಸಮುದ್ರದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿತ್ತು. 77 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಇದೇ ವೇಳೆ ಉತ್ತರಕಾಶಿಯಲ್ಲೂ ಭಾನುವಾರ ಬೆಳಗ್ಗೆ ಭೂಕಂಪದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 2.5 ತೀವ್ರತೆಯ ಭೂಕಂಪನದ ನಂತರ ಎರಡು ಭೂಕಂಪಗಳು ಸಂಭವಿಸಿದವು. ಮಧ್ಯರಾತ್ರಿ 12.45ಕ್ಕೆ ಮತ್ತೆರಡು ಕಂಪನಗಳು ಕಾಣಿಸಿಕೊಂಡವು. ಜಿಲ್ಲೆಯ ಭಟ್ವಾರಿ ಪ್ರದೇಶದ ಸಿರೋರ್ ಅರಣ್ಯದಲ್ಲಿ ಮೊದಲ ಕಂಪನದ ಕೇಂದ್ರಬಿಂದುವಾಗಿದೆ. ಆದರೆ ಸ್ವಲ್ಪ ಕಂಪನ ಮಾತ್ರ ಕಂಡುಬಂದಿದ್ದು, ಸ್ಥಳೀಯವಾಗಿ ದಾಖಲಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್…
ನಮ್ಮತುಮಕೂರು: ಬದುಕನ್ನು ಕಟ್ಟಿಕೊಡುವಂತಹ ಹಲವಾರು ಯೋಜನೆಗಳನ್ನು ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ತುಮಕೂರು ಜಿಲ್ಲೆಯ 24 ಲಕ್ಷ ಜನರಿಗೆ ಉಭಯ ಸರ್ಕಾರಗಳ ವಿವಿಧ ಯೋಜನೆಗಳ ಸವಲತ್ತುಗಳನ್ನು ಒದಗಿಸಲಾಗಿದೆ. ಯೋಜನೆಗಳನ್ನು ಘೋಷಿಸುವುದಲ್ಲದೆ ಪೂರ್ಣ ಪ್ರಮಾಣದಲ್ಲಿ ಯೋಜನೆಗಳನ್ನು ಕಾರ್ಯಗತಗೊಳಿಸುವಲ್ಲಿ ನಮ್ಮ ಸರ್ಕಾರ ಮುಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ತುಮಕೂರು ಮಹಾನಗರ ಪಾಲಿಕೆ ಹಾಗೂ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದಲ್ಲಿ ಇಂದು ನಗರದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ಮಾರ್ಟ್ ಸಿಟಿ ಲಿಮಿಟೆಡ್ನ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡುತ್ತಾ ಕನ್ನಡನಾಡಿನಲ್ಲಿ ಬಡತನವನ್ನು ಸಂಪೂರ್ಣವಾಗಿ ಅಳಿಸಿ ಸಮೃದ್ಧಿ ಕರ್ನಾಟಕ ಸ್ಥಾಪಿಸುವ ಸಂಕಲ್ಪ ಕೈಗೊಳ್ಳುತ್ತಿರುವುದಾಗಿ ಘೋಷಿಸಿದರು. ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಗರೀಬ್ ಕಲ್ಯಾಣ್, ಆತ್ಮ ನಿರ್ಭರ್ ಭಾರತ್, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಯೋಜನೆಗಳ ಅನುದಾನ ನೇರವಾಗಿ ಫಲಾನುಭವಿಗಳ ಖಾತೆಗೆ ಡಿಬಿಟಿ ತಂತ್ರಜ್ಞಾನದ ಮೂಲಕ…
ಒಂದು ಕೋಟಿ ಜನರನ್ನು ಸಂಪರ್ಕಿಸಿ ಬಿಜೆಪಿ ಪ್ರನಾಳಿಕೆ ಸಿದ್ಧಪಡಿಸಲಾಗುತ್ತದೆ ಎಂದು ಬಿಜೆಪಿ ಪ್ರಣಾಳಿಕೆ ಸಮಿತಿ ಸಂಚಾಲಕ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆಯನ್ನು ರಚಿಸುವ ಮುನ್ನ ಸಮಿತಿಯು ಸುಮಾರು ಒಂದು ಕೋಟಿ ಜನರನ್ನು ಸಂಪರ್ಕಿಸಿ ಸಲಹೆಗಳನ್ನು ಪಡೆಯಲಾಗುತ್ತದೆ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುಧಾರಣೆಗಳನ್ನು ತರುವ ಮೂಲಕ, ನಿಯಮಗಳನ್ನು ಬದಲಾಯಿಸುವ ಮೂಲಕ, ರೆಡ್-ಟ್ಯಾಪಿಸಂ ಅನ್ನು ಕಡಿತಗೊಳಿಸುವ ಮೂಲಕ ಮತ್ತು ವಿಶೇಷ ಉಪಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಜನರ ಜೀವನವನ್ನು ಸುಧಾರಿಸಲು ಬಯಸುತ್ತಿದ್ದೇವೆ ಎಂದು ಹೇಳಿದರು. ಜನರ ಎಲ್ಲಾ ಸಲಹೆಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಅವುಗಳನ್ನು ಜಾರಿಗೊಳಿಸಲು ಪ್ರಯತ್ನಿಸುತ್ತೇವೆ ಎಂದು ಭರವಸೆ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಎಡಪಕ್ಷಗಳ ಆಡಳಿತವಿರುವ ಕೇರಳದಲ್ಲೂ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ. ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ನಲ್ಲಿ ನಾವು ಸರ್ಕಾರ ರಚಿಸುವ ರೀತಿಯಲ್ಲಿ ಬಿಜೆಪಿ ಮೈತ್ರಿಕೂಟವು ಮುಂದಿನ ದಿನಗಳಲ್ಲಿ ಕೇರಳದಲ್ಲಿ ಸರ್ಕಾರ ರಚಿಸುತ್ತದೆ ಎಂಬ ನನಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. ತ್ರಿಪುರಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಡ-ಕಾಂಗ್ರೆಸ್ ಮೈತ್ರಿಯನ್ನು ವ್ಯಂಗ್ಯವಾಡಿದ ಪ್ರಧಾನಿ, ಈ ಪಕ್ಷಗಳು ಕೇರಳವನ್ನು ಲೂಟಿ ಮಾಡುತ್ತಿವೆ ಎಂದು ಹೇಳಿದ ಮೋದಿ ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿದರು. ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ಚುನಾವಣೆಗಳಲ್ಲಿ ಬಿಜೆಪಿ ಪರವಾಗಿರುವ ವಿಧಾನಸಭಾ ಫಲಿತಾಂಶದಿಂದ ಉತ್ತೇಜಿತರಾಗಿರುವ ಪ್ರಧಾನಿ ನರೇಂದ್ರ ಮೋದಿ ಕೇರಳದಲ್ಲೂ ಬಿಜೆಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎಂದು ತಿಳಿಸಿದರು. ಜತೆಗೆ ಚುನಾವಣಾ ಫಲಿತಾಂಶದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯು ಜನರಿಗೆ ಮಾಡಿದ ಅವಮಾನ ಎಂದು ಆರೋಪಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನಿಯಂತ್ರಣ ಹೇರಲು ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ, ಕಾಂಗ್ರೆಸ್ನ್ನು ಗೆಲ್ಲಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿ ದಕ್ಷಿಣ ಕ್ಷೇತ್ರದ ವಡಗಾವಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರು ಬೇಸತ್ತಿದ್ದಾರೆ. ಬಿಜೆಪಿಯವರು ಸುಳ್ಳು ಹೇಳುತ್ತಲೇ ಇದ್ದಾರೆ. ಅಡುಗೆ ಅನಿಲ ಬೆಲೆ ಏರಿಕೆಯಾಗುತ್ತಲೇ ಇದೆ. ನಮ್ಮ ಸರ್ಕಾರದ ಅವಧಿಯಲ್ಲಿ ಸಿಲಿಂಡರ್ಗೆ ₹ ೪೦೦ ಇತ್ತು. ಈಗ ₹ ೧೧೦೦ ಆಗಿದೆ. ಎಲ್ಲ ವಸ್ತುಗಳ ಬೆಲೆ ಶೇ. ೧೮ ರಷ್ಟು ತೆರಿಗೆ ಕೊಡಬೇಕು. ಅದು ನಮಗೆ ಗೊತ್ತಿಲ್ಲದೇ ಮೋದಿ ಅಕೌಂಟ್ಗೆ ಹೋಗುತ್ತಿದೆ. ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೇಕಾರರು ಇದ್ದಾರೆ. ಬೆಲೆ ಏರಿಕೆಯಿಂದಾಗಿ ನೇಕಾರರು ಕೂಡ ಸಂಕಷ್ಟದಲ್ಲಿದ್ದಾರೆ. ನಮ್ಮ ತೆರಿಗೆ ಹಣ ನಮಗೆ ಸಿಗುವಂತೆ ಮಾಡಬೇಕಿದೆ ಎಂದರು. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ, ಪಕ್ಷ…
ಬೆಳಗಾವಿ: ವಿಧಾನ ಸಭೆ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳು ಯಾವ ರೀತಿ ಕಾರ್ಯನಿರ್ವಹಿಸುತ್ತವೆ ಮತ್ತು ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಮೂಲಕ ಮತದಾನ ವಿಧಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ಜಿಲ್ಲೆಯಾದ್ಯಂತ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದ್ದು, ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ವಿದ್ಯುನ್ಮಾನ ಮತ ಯಂತ್ರಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ ಮತ್ತು ಅವುಗಳ ಮೂಲಕ ಸಾರ್ವಜನಿಕರು ಹೇಗೆ ಮತ ಚಲಾವಣೆ ಮಾಡಬೇಕು ಎಂಬುದರ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ, ಬಸ್ ನಿಲ್ದಾಣದಲ್ಲಿ, ರೈಲ್ವೆ ನಿಲ್ದಾಣ, ಮಾರುಕಟ್ಟೆ ಹಾಗೂ ಕಡಿಮೆ ಮತದಾನ ಆಗಿರುವ ಕ್ಷೇತ್ರ, ಮತಗಟ್ಟೆಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆದಿದೆ. ಅಣುಕು ಮತದಾನದ ಬಳಿಕ ಮತ ಎಣಿಕೆ ಮಾಡಿ ಪ್ರಾತ್ಯಕ್ಷಿಕೆಯನ್ನು ತೋರಿಸಲಾಗುವುದು. ಮತದಾರರು ತಮ್ಮ ಮತಗಟ್ಟೆ ಮಾಹಿತಿಯನ್ನು ಕೂಡ ತಿಳಿಸಲಾಗುವುದು ಎಂದು…
ತುಮಕೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಹಾಗೂ ವಿವಿಧ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ, ಸಂಸದರಾದ ಜಿ.ಎಸ್. ಬಸವರಾಜ್, ಸಚಿವರುಗಳಾದ ಬಿ.ಸಿ ನಾಗೇಶ್, ಎಸ್.ಟಿ ಸೋಮಶೇಖರ್, ಸಿ.ಸಿ.ಪಾಟೀಲ್, ಸ್ಥಳೀಯ ಶಾಸಕರಾದ ಜ್ಯೋತಿ ಗಣೇಶ್, ಜನಪ್ರಿಯ ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ. ಗೌಡ, ಮಸಾಲೆ ಜಯರಾಮ್, ರಾಜೇಶ್ ಗೌಡ, ಚಿತ್ರದುರ್ಗ ವಿಧಾನ ಪರಿಷತ್ ಶಾಸಕರಾದ ಕೆ.ಎಸ್ ನವೀನ್, ತುಳಸಿ ಮುನಿರಾಜು ಗೌಡ, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಮುಂತಾದ ಮುಖಂಡರುಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಫಲಾನುಭವಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ:…
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಕಾರ್ಮಿಕ ಇಲಾಖೆ ನಿರೀಕ್ಷಕ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ವೇಳೆ ನಿರೀಕ್ಷಕ ಚಂದ್ರು ಕಚೇರಿಯಿಂದ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ಧಾರೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ಕಬ್ಬಿಣದ ಅಂಗಡಿ ವ್ಯಾಪಾರಿ ಲಕ್ಷ್ಮಣ್ ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಹಾಕಿದ ವೇಳೆ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇವರ ಜತೆಗೆ ಮತ್ತೊಬ್ಬ ವ್ಯಾಪಾರಿಯೂ ಅಧಿಕಾರಿಯ ಲಂಚದಾಹದಿಂದ ಬೇಸತ್ತು ಲೋಕಾಯುಕ್ತರಿಗೆ ದೂರು ನೀಡಿದ್ದರು ಎನ್ನಲಾಗಿದೆ. ದೂರು ಪಡೆದ ಲೋಕಾಯುಕ್ತರು ಕಾರ್ಯಾಚರಣೆ ನಡೆಸಿದ್ಧಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ನೀವು ಎಲ್ಲಿ ನೋಡುತ್ತೀರಿ ಎಂಬುದರ ಆಧಾರದ ಮೇಲೆ ಸಮಯ ಬದಲಾಗುತ್ತದೆ. ನಾವು ಒಮ್ಮೆ ಹೋದರೆ ಮತ್ತೆ ಬರುವುದಿಲ್ಲ ಎಂದು ಸಮಯದ ಬಗ್ಗೆ ಹೇಳಲಾಗುತ್ತದೆ, ಆದರೆ ತಾಂತ್ರಿಕವಾಗಿ, ನಾವು ಇರುವ ಹಂತವನ್ನು ಅವಲಂಬಿಸಿ ಸಮಯ ಬದಲಾಗುತ್ತದೆ. ನಮ್ಮಲ್ಲಿ ಹಲವರು ಸಮಯವನ್ನು ಕಳೆದುಕೊಳ್ಳುವ ಮತ್ತು ಅದನ್ನು ಮರಳಿ ಪಡೆಯುವ ಅನುಭವವನ್ನು ಹೊಂದಿದ್ದೇವೆ. ಸಮಯವು ಅಂತಹ ಅದ್ಭುತಗಳನ್ನು ತೋರಿಸಲು ಸಮರ್ಥವಾಗಿರುವಾಗ ಚಂದ್ರನಲ್ಲಿ ಸಮಯ ಎಷ್ಟು ಎಂದು ವೈಜ್ಞಾನಿಕ ಜಗತ್ತು ಯೋಚಿಸುತ್ತಿದೆ. ಅನೇಕ ಚಂದ್ರನ ಕಾರ್ಯಾಚರಣೆಗಳಿದ್ದರೂ, ಚಂದ್ರನ ಮೇಲೆ ಸಮಯ ಮತ್ತು ಕಾರ್ಯಾಚರಣೆಯ ಅವಧಿಯನ್ನು ಮಿಷನ್ ಅನ್ನು ಮುನ್ನಡೆಸುವ ದೇಶದ ಸಮಯವನ್ನು ಆಧರಿಸಿ ಲೆಕ್ಕಹಾಕಲಾಗುತ್ತದೆ. ಕನಿಷ್ಠ ಚಂದ್ರನ ಕಾರ್ಯಾಚರಣೆಗಳನ್ನು ಹೆಚ್ಚಿಸುವ ಈ ಹಂತದಲ್ಲಿ, ಯುರೋಪಿಯನ್ ಬಾಹ್ಯಾಕಾಶ ಏಜೆನ್ಸಿಯ ಉಪಕ್ರಮದಲ್ಲಿ ಚಂದ್ರನ ಮೇಲೆ ಸಮಯವನ್ನು ಇಡಲು ಸಾಮಾನ್ಯ ಉಲ್ಲೇಖ ಬಿಂದು ಮತ್ತು ಸಮಯ ವಲಯವನ್ನು ರಚಿಸುವುದನ್ನು ಚರ್ಚಿಸಲಾಗುತ್ತಿದೆ. ಕಳೆದ ವರ್ಷ ನೆದರ್ಲ್ಯಾಂಡ್ಸ್ನಲ್ಲಿ ನಡೆದ ಸಭೆಯೊಂದರಲ್ಲಿ ಇಂತಹ ಕಲ್ಪನೆಯನ್ನು ಮೊದಲು ತರಲಾಯಿತು. ಚಂದ್ರನ ಮೇಲೆ ಸಮಯವನ್ನು ತಿಳಿಯಲು ಒಂದು ಉಲ್ಲೇಖ…
ಮೈಸೂರಿನ ಸೈಲೆಂಟ್ ಶೋರ್ಸ್ ಆ್ಯಂಪಿ ಥಿಯೇಟರ್ ನಲ್ಲಿ ಯು ಡಿಜಿಟಲ್ ನೆಟ್ ವರ್ಕ್’ನ 3ನೇ ವಾರ್ಷಿಕೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್, ಸುದ್ದಿ ವಾಹಿನಿಗಳಿಗೆ ಮೂರು ‘ವಿಟಮಿನ್’ಗಳೆಂದರೆ ಟಿವಿ ವೀಕ್ಷಕರು, ಟಿವಿಯನ್ನು ಮನೆಗೆ ಕೊಂಡೊಯ್ಯುವ ಕೇಬಲ್ ಆಪರೇಟರ್ ಗಳು, ಸುದ್ದಿ ವಾಹಿನಿಗಳಿಗೆ ಸಾಕಷ್ಟು ‘ಆಹಾರ’ ನೀಡುವ ರಾಜಕಾರಣಿಗಳು ಎಂದು ತಮಾಷೆ ಮಾಡಿದರು. ಸಾಕಷ್ಟು ಪೈಪೋಟಿ ನಡುವೆ ಯು ಡಿಜಿಟಲ್ ಪ್ರಗತಿಯ ಹಾದಿಯಲ್ಲಿ ಸಾಗುತ್ತಿರುವುದು ಶ್ಲಾಘನೀಯ. ಇದಕ್ಕೆ ಯು ಡಿಜಿಟಲ್ ತಂಡದ ಶ್ರಮ ಹಾಗೂ ಯು ಡಿಜಿಟಲ್ ನ ಮಂಜುನಾಥ್ ಅವರ ಶ್ರಮ ಹೆಚ್ಚಿದೆ. ಇದೇ ರೀತಿ ಯು ಡಿಜಿಟಲ್ ತಂಡ ಅಭಿವೃದ್ಧಿಯ ಪಥದಲ್ಲಿ ಸಾಗಲಿ ಎಂದು ಹಾರೈಸಿದರು. ಕನ್ನಡಿಗರು ಹೊರ ರಾಜ್ಯಗಳಿಗೆ ಹೋಗಿ ವಹಿವಾಟು ಮಾಡುವವರು ಕಡಿಮೆ. ನಮ್ಮ ರಾಜ್ಯದವರು ಹೊರಗಡೆ ಹೋಗಿ ವಹಿವಾಟು ನಡೆಸಲು ಸಾಕಷ್ಟು ಶಕ್ತಿ ಬೇಕು. ಆದರೆ ಯು ಡಿಜಿಟಲ್ ಪಕ್ಕದ ಆಂಧ್ರ ಪ್ರದೇಶಕ್ಕೂ ತಮ್ಮ ಸೇವೆಯನ್ನು ವಿಸ್ತರಿಸುವುದು…