Author: admin

ಅಥಣಿ: ಶಾಲೆಗೆ ಹೋಗಿದ್ದ ಬಾಲಕ ಚಿಕ್ಕಪ್ಪನ ಜೊತೆ  ಟ್ರ್ಯಾಕ್ಟರ್ ನಲ್ಲಿ ಬರೋವಾಗ ಬಿದ್ದು ಟ್ರ್ಯಾಕ್ಟರ್ ಅಡಿಗೆ ಸಿಲುಕಿ ಸ್ಥಳದಲ್ಲೆ ಸಾವನ್ನಪ್ಪಿರುವ ದಾರುಣ ಘಟನೆ ಅಥಣಿ ತಾಲ್ಲೂಕಿನ ತೆವರಗಟ್ಟಿ ಗ್ರಾಮದಲ್ಲಿ ನಡೆದಿದೆ ಸುದರ್ಶನ ನಿಲಜಗಿ(7) ಮೃತ ಬಾಲಕನಾಗಿದ್ದು ಶಾಲೆಗೆಂದು ಹೋಗಿ ಶವವಾಗಿ ಬಂದಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಚಿಕ್ಕಪ್ಪನ ಜತೆ ಟ್ರಾಕ್ಟರ್ ನಲ್ಲಿ ಮನೆಗೆ ಬರುತ್ತಿದ್ದ ಬಾಲಕ ಟ್ರ್ಯಾಕ್ಟರ್ ನಿಂದ ಇಳಿಯುವ ಸಂದರ್ಭದಲ್ಲಿ ಬಾಲಕನ ಬ್ಯಾಗ್ ಟ್ರ್ಯಾಕ್ಟರಿಗೆ ಸಿಲುಕಿ ಕೆಳಗೆ ಬಿದ್ದಿದ್ದಾನೆ. ಟ್ರ್ಯಾಕ್ಟರ್ ಅಡಿಗೆ ಸಿಲುಕಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಥಣಿ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಹತ್ಯೆಯಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಅವಧಿಯಲ್ಲೇ ಹೆಚ್ಚು ಹಿಂದೂಗಳ ಹತ್ಯೆಗಳಾಗಿವೆ ಎಂದು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧರಾಮಯ್ಯ, ನಮ್ಮ ಕಾಲದಲ್ಲಿ ಹಿಂದೂಗಳಷ್ಟೇ ಅಲ್ಲ, ಅಲ್ಪಸಂಖ್ಯಾತರ ಕೊಲೆ ಆಗಿವೆ. ಅವುಗಳೆಲ್ಲ ಬೇರೆ ಬೇರೆ ವಿಚಾರಕ್ಕೆ ಆಗಿರುವ ಕೊಲೆಗಳಾಗಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಹಿಂದೂಗಳ ಹತ್ಯೆಯಾಗಲು ಆರ್​ಎಸ್​ಎಸ್​​, ಬಿಜೆಪಿಯವರೇ ಕಾರಣರಾಗಿದ್ದಾರೆ. ಪರೇಶ್​ ಮೇಸ್ತ ಕೊಲೆಯಾದಾಗ ದೊಡ್ಡ ಗಲಾಟೆ ಮಾಡಿದ್ದರು. ಆಗ ಮೇಸ್ತ ಪ್ರಕರಣವನ್ನ ಸಿಬಿಐಗೆ ಕೊಟ್ಟಿದ್ದೆ, ಆಮೇಲೆ ಏನಾಯ್ತು ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಾಕಿಸ್ತಾನದಲ್ಲಿ ಸ್ಪರ್ಧೆ ಮಾಡಿದರಷ್ಟೇ 150 ಸ್ಥಾನ ಗೆಲ್ಲುತ್ತದೆ ಎಂದು ಲೇವಡಿ ಮಾಡಿದ್ದ ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ, ಕರ್ನಾಟಕ ಪಾಕಿಸ್ತಾನದಲ್ಲಿ ಇದೆಯಾ?ಭಾರತದಲ್ಲಿದೆಯಾ? ಚುನಾವಣೆ ನಡೆಯುತ್ತಿರುವುದು ಪಾಕಿಸ್ತಾನದಲ್ಲಾ? ಕರ್ನಾಟಕದಲ್ಲಾ? ಪೆದ್ದು ಪೆದ್ದಾಗಿ ಮಾತನಾಡುತ್ತೀರಲ್ಲಾ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಪಾರ್ಟಿ ನೆಪದಲ್ಲಿ ಯುವತಿಯರನ್ನ ಕರೆಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನ ಬೆಂಗಳೂರಿನ ವಿವೇಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 5 ರಂದು ಪಾರ್ಟಿ ನೆಪದಲ್ಲಿ ಆರೋಪಿಗಳು ಪರಿಚಯಸ್ತ ಯುವತಿಯರನ್ನಕರೆಸಿಕೊಂಡಿದ್ದರು ಅಂದು ಮಧ್ಯರಾತ್ರಿ 2.30ರವರೆಗೆ ಎಣ್ಣೆ ಪಾರ್ಟಿ ಮಾಡಿದ್ದರು. ಬಳಿಕ ನಶೆಯಲ್ಲಿದ್ದ ಜಮ್ಮು ಕಾಶ್ಮೀರ ಮೂಲದ ಯುವತಿ ಮೇಲೆ ಇಬ್ಬರು ಆರೋಪಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಮತ್ತೊರ್ವ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಯುವತಿ ತಪ್ಪಿಸಿಕೊಂಡು ಹೋಗಿ ಬಾತ್​ ರೂಮ್​​ನಲ್ಲಿ ಲಾಕ್ ಮಾಡಿಕೊಂಡು ಅಡಗಿಕೊಂಡಿದ್ದಾಳೆ. ಬಳಿಕ ಮರುದಿನ ಕೋರಮಂಗಲ ಠಾಣೆಗೆ ತೆರಳಿ ಯುವತಿ ಮಾಹಿತಿ ನೀಡಿ ದೂರು ದಾಖಲಿಸಿದ್ದಾಳೆ. ಇದೀಗ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನ ಗಡಿ ಪ್ರದೇಶ ಅಭವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಭೇಟಿಯಾಗಿ ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಮನವಿ ಮಾಡಿದರು. ಗಡಿ ಪ್ರದೇಶ ಅಭವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಹಾಗೂ ಮಂಜೇಶ್ವರ ಶಾಸಕ ಅಶ್ರಪ್ ಮತ್ತು ಕಾಸರಗೋಡು ಶಾಸಕ ನೆಲ್ಲಿಕುನ್ನುರ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನ ಭೇಟಿ ಮಾಡಿ ಕೇರಳದಲ್ಲಿ ಕನ್ನಡಿಗರ ಸಮಸ್ಯೆಗಳ ಕುರಿತು ಮತ್ತು ಕನ್ನಡ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಮತ್ತು ಕಾಸರಗೋಡು ಜಿಲ್ಲೆಯಲ್ಲಿ ಕನ್ನಡದ ಹೆಸರುಗಳ ಸ್ಥಳ ನಾಮಗಳನ್ನು ಮಲೆಯಾಳಂ ಭಾಷೆಗೆ ಬದಲಾಯಿಸಿದ್ದು ಅವುಗಳನ್ನು ಸ್ಥಗಿತಗೊಳಿಸಲು ವಿನಂತಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬುರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕಳೆದ  6 ವರ್ಷಗಳಿಂದ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ಧೋರಣೆ ಖಂಡಿಸಿ ಇಂದು ಸಾರಿಗೆ ನೌಕರರು ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ.ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದ ಸಮೀಪ ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಮೃತರು ಹುಬ್ಬಳ್ಳಿ ಮೊಹಮ್ಮದ್ ಇಶಾನ್ , ಮೊಹಮದ್ ಸೈಫ್ , ಇಸ್ಮಾಯಿಲ್ ಎಂದು ತಿಳಿದು ಬಂದಿದೆ. ಈ ಮೂವರು ಸ್ನೇಹಿತರು ಕಾರ್​ನಲ್ಲಿ ಪ್ರಯಾಣ ಮಾಡುವಾಗ ಪ್ರವಾಸಕ್ಕೆ ಹೊರಟಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಕಾರಿನಲ್ಲಿ 6 ಜನ ಸ್ನೇಹಿತರು ದೇವರ ದರ್ಶನಕ್ಕೆ ಕಾರವಾರಕ್ಕೆ ತೆರಳುತ್ತಿದ್ದರು. ಕಲಘಟಗಿ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸಂಘಟನೆಗಳೆಲ್ಲ ಬೆಳಗಾವಿಯ ಅಭಿವೃದ್ಧಿಗಾಗಿ ಒಗ್ಗೂಡಿರುವುದು ಅತ್ಯಂತ ಒಳ್ಳೆಯ ಬೆಳವಣಿಗೆ ಎಂದು ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ ಗುರೂಜಿ ಪ್ರಶಂಸಿಸಿದ್ದಾರೆ. ಮಂಗಳವಾರ ಇಲ್ಲಿಯ ಕೆಎಲ್ಇ ಸಂಸ್ಥೆಯ ಶತಮಾನೋತ್ಸವ ಸಭಾಭವನದಲ್ಲಿ ಫೆಡರೇಶನ್ ಆಫ್ ಅಸೋಸಿಯೇಶನ್ಸ್ ಆಫ್ ಬೆಳಗಾವಿ (ಎಫ್ಒಎಬಿ) ಲೋಗೋ ಲೋಕಾರ್ಪಣೆಗೊಳಿಸಿ ಅವರು ಆಶಿರ್ವಚನ ನೀಡುತ್ತಿದ್ದರು. ಬೆಳಗಾವಿ ಎಂದರೆ ಒಂದು ಮೂಲೆಯಲ್ಲಿರುವ ಪ್ರದೇಶ, ಬೇಡದ ಕಾರಣಕ್ಕೆ ಸುದ್ದಿಯಲ್ಲಿರುವ ಪ್ರದೇಶ ಎನ್ನುವ ಭಾವನೆ ಹೊರಗಡೆ ಇದೆ. ಆದರೆ ನಿಜ ಸ್ಥಿತಿ ಆ ರೀತಿಯ ಇಲ್ಲ. ಇಲ್ಲಿ ಉದ್ಯಮ ಸ್ನೇಹಿ ವಾತಾವರಣವಿದೆ. ಇಲ್ಲಿನ ಉದ್ಯಮಿಗಳು ಹಾಗೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರೆಲ್ಲ ಸೇರಿ ಇಂತಹ ಒಂದು ಸಂಘಟನೆ ಕಟ್ಟಿಕೊಂಡು ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಮಾಜದ ಉನ್ನತಿಗೆ ಇಂತಹ ಪ್ರಯತ್ನ ಶ್ಲಾಘನೀಯ ಎಂದು ಅವರು ಹೇಳಿದರು. ಬೆಳಗಾವಿಯ ಇತಿಹಾಸ, ಬೆಳಗಾವಿಯ ಅಂತರ್ ಶಕ್ತಿಗಳನ್ನೆಲ್ಲ ತಿಳಿದು ನಿಜವಾಗಿ ಸಂತೋಷವಾಗಿದೆ. ಇಷ್ಟೊಂದು ಉದ್ಯಮಿಗಳು ಇಲ್ಲಿಯ ನೆಲದಲ್ಲಿ ತಯಾರಾಗಿದ್ದಾರೆ ಎನ್ನುವುದೇ…

Read More

ಬೆಂಗಳೂರಿನ ಕೆಂಗೇರಿಯ ಲಾಡ್ಜ್ ಒಂದರಲ್ಲಿ ಜನವರಿ 30 ರಂದು ಬಿಎಂಟಿಸಿ ಚಾಲಕನೋರ್ವ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ತನಿಖೆ ಕೈಗೊಂಡ ಪೊಲೀಸರಿಗೆ ಸ್ಪೋಟಕ ಮಾಹಿತಿ ದೊರೆತಿದೆ. ಕೊಲೆಯೋ ಆತ್ಮಹತ್ಯೆಯೋ ಎಂಬ ಅನುಮಾನಕ್ಕೆ ತೆರೆ ಬಿದ್ದಿದ್ದು, ವಿವಾಹಿತಳ ಹಿಂದೆ ಬಿದ್ದ ಚಾಲಕ ಪುಟ್ಟೇಗೌಡ (28) ಆಕೆ ಸಂಬಂಧ ನಿರಾಕರಿಸಿದಾಗ ಬೇಸತ್ತು ಆತ್ಮಹತ್ಯೆಗೆ (Suicide) ಶರಣಾಗಿದ್ದಾನೆ ಎಂಬುದು ಗೊತ್ತಾಗಿದೆ. ಮೃತ ಚಾಲಕ ಪುಟ್ಟೇಗೌಡ ಓರ್ವ ಆಂಟಿಯನ್ನು ಪ್ರೀತಿಸುತ್ತಿದ್ದ. ಕೇವಲ ಆರು ತಿಂಗಳ ಹಿಂದಷ್ಟೇ ಪರಿಚಿತಳಾದ ಆಕೆಯೊಂದಿಗೆ ಪ್ರೀತಿ ಚಿಗುರಿತ್ತು. ಇಬ್ಬರು ಅಕ್ಕಪಕ್ಕದ ಊರಿನವರಾಗಿದ್ದರಿಂದ ಓಡಾಟ ಹೆಚ್ಚಾಗಿತ್ತು. ಇತ್ತೀಚೆಗೆ ಮಹಿಳೆಯನ್ನು ತನ್ನ ಜೊತೆಯಲ್ಲೇ ಇರುವಂತೆ ಪುಟ್ಟೇಗೌಡ ಒತ್ತಾಯ ಮಾಡ್ತಿದ್ದ. ಆದರೆ ಆಕೆ ನನಗೆ ಇಬ್ಬರು ಮಕ್ಕಳಿದ್ದಾರೆ, ಜೊತೆಯಲ್ಲಿರಲು ಸಾಧ್ಯವಿಲ್ಲ ಎಂದು ಮಹಿಳೆ ಹೇಳಿದ್ದಳು. ಈ ಮಧ್ಯೆ ಜನವರಿ 30 ರಂದು ಕೆಲಸಕ್ಕೆ ಬಂದಿದ್ದ ಪುಟ್ಟೇಗೌಡ ನೇರವಾಗಿ ಮಹಿಳೆಯೊಂದಿಗೆ ಸಲುಗೆಯಿಂದಲೇ ಮಾತನಾಡುತ್ತ ಕೆಂಗೇರಿ ಲಾಡ್ಜ್​​ಗೆ ಮಹಿಳೆಯನ್ನು ಕರೆದೊಯ್ದಿದ್ದ. ಇಬ್ಬರು ಲಾಡ್ಜ್​​ನಲ್ಲಿ ಸುಮಾರು ಗಂಟೆಗಳ ಕಾಲ ಕಳೆದಿದ್ದರು. ನಂತರ…

Read More

ಕೊರಟಗೆರೆ: ಕಳೆದ ಐದು ವರ್ಷಗಳಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಕುಡಿಯುವ ನೀರು, ರಸ್ತೆ, ಆರೋಗ್ಯ,ವಸತಿ ನಿರ್ಮಾಣ ಹಾಗೂ ಎತ್ತಿನ ಹೊಳೆ ಯೊಜನೆಯೂ ಸೇರಿದಂತೆ ವಿವಿಧ ಯೋಜನೆಗಳ ಅಡಿಯಲ್ಲಿ 2573.67 ಕೋಟಿ ರೂ.ಗಳ ಅನುದಾನದ ತಂದು 4080 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮಾಜಿ ಡಿಸಿಎಂ ಹಾಗೂ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ತಮ್ಮ ಐದು ವರ್ಷಗಳ ಸಾಧನೆಯ ದಾಖಲೆಗಳನ್ನು ಒಳಗೊಂಡ ಹೆಜ್ಜೆ ಗುರುತು ಎಂಬ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು,ಇದರಲ್ಲಿ ವಸತಿ ಯೋಜನೆಗಾಗಿ 95.75 ಕೋಟಿ, ಗಂಗಾ ಕಲ್ಯಾಣಕ್ಕೆ 1.53 ಕೋಟಿ, ಸಾಲ ಸೌಲಭ್ಯಕ್ಕೆ5.76 ಕೋಟಿ, ಇತರೆ ಇಲಾಖೆಗಳಿಂದ 95.21 ಕೋಟಿ ನೀಡಲಾಗಿದೆ. ಇದುವರೆಗೂ 19,501 ಜನರಿಗೆ ಸರಕಾರದ ಸೌಲಭ್ಯಗಳು ದೊರೆತಿವೆ. ಎತ್ತಿನ ಹೊಳೆ ಯೋಜನೆಯಡಿ 7 ಕಾಮಗಾರಿಗಳನ್ನು ಕೈಗೊಂಡು 1279.31 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ, ಪ್ರತಿ ಗ್ರಾಮಕ್ಕೂ ಒಂದಿಲೊಂದು ಯೋಜನೆಯ ಮೂಲಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಸಾಧನೆಯ ಪುಸ್ತಕವನ್ನು ಪ್ರತಿ…

Read More

ಇಂದು ಕಾಂಗ್ರೆಸ್ ಮುಖಂಡರಾದ ಶಶಿಧರ್ ಟೂಡಾ ಅವರು ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ತಿಪಟೂರು ತಾಲ್ಲೂಕಿನ ಹಾಲ್ಕುರಿಕೆ ಮತ್ತು ಕೆ.ಬಿ. ಕ್ರಾಸ್ ನ ನೂತನ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದರು. ಈ ವೇಳೆ ಆರೋಗ್ಯ ಸಖಿಯರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರೆಲ್ಲರೂ ಸೇರಿ ಶಶಿಧರ್ ಅವರ ಹುಟ್ಟುಹಬ್ಬವನ್ನು ನಮ್ಮ ಆರೋಗ್ಯ ಕೇಂದ್ರದಲ್ಲಿ ವಿಶೇಷವಾಗಿ ಮತ್ತು ಸರಳವಾಗಿ ಆಚರಿಸಿದರು. ತಿಪಟೂರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ನಮ್ಮ ಆರೋಗ್ಯ ಕೇಂದ್ರ ಮತ್ತು ಉದ್ಯೋಗ ಕೌಶಲ್ಯ ತರಬೇತಿ ಕೇಂದ್ರಗಳಂತಹ ಮಹಿಳೆಯರನ್ನು ಒಳಗೊಳ್ಳುವ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳು ಮುಂಬರುವ ದಿನಗಳಲ್ಲಿ ಮತ್ತಷ್ಟು ಬರಲಿ ಎಂದು ತಿಪಟೂರಿನ ಜನತೆ ನಿರೀಕ್ಷಿಸುತ್ತಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಪ್ರಮುಖ ಮುಖಂಡರು, ಆರೋಗ್ಯ ಕೇಂದ್ರದ ಆರೋಗ್ಯ ಸಖಿಯರಾದ ಗೀತಾ, ಸಹನ, ಶ್ರೀ ಲಕ್ಷ್ಮಿ, ಉಮಾದೇವಿ, ಮಂಜುಳಾ, ಪ್ರಿಯ, ನಿವೇದಿತಾ, ರೂಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More