Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ಬೆಂಗಳೂರ: ನಮ್ಮ ಕ್ಲಿನಿಕ್ ಒಂದು ಕ್ರಾಂತಿಕಾರಿ ಹೆಜ್ಜೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಹಾಲಕ್ಷ್ಮೀ ಲೇಔಟ್ ನ ರಾಣಿ ಅಬ್ಬಕ್ಕದೇವಿ ಆಟದ ಮೈದಾನದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 108 ನಮ್ಮ ಕ್ಲಿನಿಕ್ಗಳ ಲೋಕಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣಕ್ಕೆ ಅತಿ ಹೆಚ್ಚಿನ ಮಹತ್ವ ನೀಡಲಾಗಿದೆ. ರಸ್ತೆಗಳ ನಿರ್ಮಾಣವಾಗಿದೆ. ಬಹಳಷ್ಟು ಅಭಿವೃದಿಯಾಗುತ್ತಿರುವುದನ್ನು ಬಿಂಬಿಸುವ ಮೂಲಕ ಬೆಂಗಳೂರು ಬ್ರಾಂಡ್ ನ್ನು ಹೆಚ್ಚಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದ ಮುಖ್ಯಮಂತ್ರಿಗಳು, ಮೊದಲೆಲ್ಲಾ ಕೇವಲ ಸಮಾಲೋಚನೆ ನೀಡುವ ವೈದ್ಯರಿದ್ದರು. ಈಗ ಪ್ರಾಥಮಿಕ ಚಿಕಿತ್ಸೆ ಪಡೆದು ಗುಣಮುಖರಾಗುವ ಅವಕಾಶ ದೊರೆಯುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಮೂಡಿಗೆರೆ : ಮೂಡಿಗೆರೆ ತಾಲೂಕಿನ ಬಿಳಗುಳ ಕೊಲ್ಲಿಬ್ಯೆಲ್ ಸಮೀಪದ ಲಕ್ಷ್ಮಣಗೌಡ ಎಂಬುವವರ ಸುಮಾರು 10ವರ್ಷದಿಂದ ಪಾಳುಬಿದ್ದ ಕಾಫಿ ತೋಟದಲ್ಲಿ. ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸುಮಾರು ಮೂರು ವರ್ಷದ ಚಿರತೆ ಸಿಲುಕಿ ಸಾವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ವೇಳೆ ನಡೆದಿದೆ. ಕಡೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೆಲವೆ ಅಡಿ ದೂರದ ಅಂತರದಲ್ಲಿ ಚಿರತೆಯು ಉರುಳಿಗೆ ಬಿದ್ದಿದ್ದು ಈ ವೇಳೆ ಕೂಗಾಟವನ್ನು ಕೇಳಿ ದಾರಿಯಲ್ಲಿ ಹೋಗುವ ಪ್ರಯಾಣಿಕರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದು, ರಾತ್ರಿಯೇ ತೆರಳಿದ ಅಧಿಕಾರಿಗಳು ಚಿರತೆಯನ್ನು ಬದುಕಿಸಲು ಪ್ರಯತ್ನಪಟ್ಟಿದ್ದು ಉರುಳು ಕುತ್ತಿಗೆ ಬಲವಾಗಿ ಸಿಲುಕಿದ್ದ ಕಾರಣ ಮೃತಪಡುವ ಹಂತಕ್ಕೆ ತಲುಪಿದ್ದು. ರಕ್ಷಣೆ ಮಾಡುವ ವೇಳೆಗೆ ಮೃತಪಟ್ಟಿದೆ. ಈ ಸಂಬಂಧ ತೋಟದ ಮಾಲೀಕರು ಮತ್ತು ಉರುಳು ಹಾಕಿದ ದುಷ್ಕರ್ಮಿಗಳ ವಿರುದ್ಧ ಮುಖದಮ್ಮೆ ದಾಖಲಿಸಿದ್ದು. ಮೂಡಿಗೆರೆ ಅರಣ್ಯ ಇಲಾಖೆಗೆ ಶವ ಸ್ಥಳಾಂತರಿಸಿ ಮರಣೋತ್ತರ ಪರೀಕ್ಷೆಯ ನಂತರ ಚಿರತೆಯ ಶವವನ್ನು ಅಗ್ನಿಸ್ಪರ್ಷ ಮೂಲಕ ಸಂಸ್ಕಾರ ನಡೆಸಲು ತಿರ್ಮಾನಿಸಲಾಗಿದೆ. ನಮ್ಮತುಮಕೂರು.ಕಾಂನ…
ಬೆಂಗಳೂರು: ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಕರ್ನಾಟಕ್ಕೆ ಬಂದ ಬೆನ್ನಲ್ಲೆ ಬಿಜೆಪಿ ಚುನಾವಣೆ ಗೆಲ್ಲುವ ಭರಾಟೆಯಲ್ಲಿದ್ದರೆ ಜೆಡಿಎಸ್ ಟ್ವಿಟ್ ಮೂಲಕ ಬಿಜೆಪಿ ಕಾಲೆಳೆಸಿದೆ. ರಾಜ್ಯ ಸರಕಾರದ ಆಡಳಿತ ಕಾರ್ಯವೈಖರಿ ವಿರುದ್ಧ ಟ್ವಿಟ್ ದಾಳಿ ನಡೆಸಿ ರಾಜ್ಯ ಬಿಜೆಪಿ ಸರ್ಕಾರ ನಪುಂಸಕ ಸರ್ಕಾರ ಎಂದು ಜೆಡಿಎಸ್ ಟ್ವೀಟ್ ಮಾಡುವುದರ ಮೂಲಕ ಸರಕಾರ ಕಾಲೆಳೆದಿದೆ. ರಾಜ್ಯಕ್ಕೆ ಪ್ರಧಾನಿ ಬಂದಾಗ ಸ್ವಾಗತಿಸಿ, ಚುನಾವಣೆ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ರಾಜ್ಯದಲ್ಲಿ ಬರಗಾಲ, ಪ್ರವಾಹದ ವೇಳೆ ಮಾಯವಾಗುವ ಪ್ರಧಾನಿಯವರು ಚುನಾವಣೆ ಹತ್ತಿರ ಬಂದ ತಕ್ಷಣ ಪ್ರತ್ಯಕ್ಷರಾಗುತ್ತಾರೆ. ಆರ್ಥಿಕತೆಗೆ ಬೆನ್ನೆಲುಬಾಗಿರುವ ಪ್ರಮುಖ ರಾಜ್ಯಗಳಲ್ಲೊಂದಾದ ಕರ್ನಾಟಕ. ಕರ್ನಾಟಕದ ಸಮಸ್ಯೆಗಳಿಗೆ ಕುರುಡಾಗಿ ವರ್ತಿಸುವವರು. ಈಗ ಮತ ಕೇಳಲು ಯಾವ ಮುಖ ಹೊತ್ತು ಬರುತ್ತಾರೆ. ಆದಾಯ, ಕಾರ್ಪೊರೇಟ್ ತೆರಿಗೆ, ಜಿಎಸ್ಟಿಯಿಂದ ಕೇಂದ್ರದ ಖಜಾನೆ ತುಂಬಿಸಿಕೊಳ್ಳಲು ಮಾತ್ರ ಕರ್ನಾಟಕ ಬೇಕು. ನಮ್ಮಿಂದ ಸಂಗ್ರಹವಾದ ತೆರಿಗೆಯಲ್ಲಿ ಕನಿಷ್ಠ ಪಾಲು ಸಿಗುವುದೇ ಕನಸಾಗಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ದಾವಣಗೆರೆ ಜಿಲ್ಲೆಯ ಹರಿಹರ (Harihar) ತಾಲ್ಲೂಕಿನ ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಇಂಗ್ಲೀಷ್ ಶಿಕ್ಷಕ ವಿಜಯ್ ಕುಮಾರ್ (54) ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳಿಗ್ಗೆ ಶಾಲೆಯಲ್ಲಿ ಪ್ರಾರ್ಥನೆ ಮುಗಿಸಿ ತರಗತಿಯಲ್ಲಿ ಪಾಠ ಮಾಡುವಾಗ ವಿಜಯ್ ಕುಮಾರ್ ಅವರು ಹೃದಯಾಘಾತದಿಂದ (Heart attack) ಸಾವನ್ನಪ್ಪಿದ್ದಾರೆ. ಶಿಕ್ಷಕ ವಿಜಯ್ ಕುಮಾರ್ ಮೂಲತಃ ದಾವಣಗೆರೆ ತಾಲ್ಲೂಕು ಮಹಾದೇವಿಪುರದ ನಿವಾಸಿಯಾಗಿದ್ದಾರೆ. ಹೃದಯಾಘಾತವಾದ ತಕ್ಷಣ ಸಹ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದದಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕ ಸಾವನ್ನಪ್ಪಿದ್ದಾರೆ. ಶಿಕ್ಷಕರ ಮೃತದೇಹದ ಬಳಿ ಮಕ್ಕಳು ಗೋಳಾಡುತ್ತಿರುವ ದೃಶ್ಯ ಮನಕಲುಕುವಂತಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಭಾರಿ ಕುತೂಹಲ ಮೂಡಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಆಯ್ಕೆ ಪೂರ್ಣಗೊಂಡಿದ್ದು ಎರಡು ಸ್ಥಾನಗಳು ಬಿಜೆಪಿ ತೆಕ್ಕೆ ಸೇರಿವೆ. ಮಹಾಪೌರ ಸ್ಥಾನಕ್ಕೆ ಶೋಭಾ ಸುಮ್ನಾಚೆ ಅವಿರೋಧವಾಗಿ ಆಯ್ಕೆಗೊಂಡರೆ, ರೇಷ್ಮಾ ಪಾಟೀಲ್ ಉಪ ಮೇಯರ್ ಆಗಿ ಚುನಾಯಿತಗೊಂಡಿದ್ದಾರೆ. ದಕ್ಷಿಣ ಮತ್ತು ಉತ್ತರ ಮತಕ್ಷೇತ್ರದ ಶಾಸಕರಗಳ ಮೇಲೆ ವಿರೋಧಪಕ್ಷಗಳು ಮಹಾನಗರ ಪಾಲಿಕೆ ಚುನಾವಣೆಯು ಮುಕ್ತಾಯಗೊಂಡ ನಂತರದಿಂದ ಆರೋಪಗಳು ಟೀಕೆಗಳು ಇಬ್ಬರು ಶಾಸಕರುಗಳ ಮೇಲೆ ಸಾಮಾನ್ಯವಾಗಿತ್ತು. ಒಂದು ಹಂತದಲ್ಲಿ ಭಾರತೀಯ ಜನತಾ ಪಕ್ಷದ ಮಹಾನಗರ ಸದಸ್ಯರುಗಳು ಅಸಮಾಧಾನಗೊಂಡು ಆಪರೇಷನ್ ಹಸ್ತ ಅಥವಾ ಬೇರೆಯಾಗುವ ಚರ್ಚೆಯು ಕೂಡ ಗುಸು-ಗುಸು ಆಗಿ ನಡೆದಿತ್ತು. ಎಲ್ಲವನ್ನೂ ಬಹು ಜಾನ್ಮೆಯಿಂದ ಮತ್ತು ತಾಳ್ಮೆಯಿಂದ ನಿಭಾಯಿಸಿದ ಇಬ್ಬರು ಶಾಸಕರುಗಳು ಬೆಳಗಾವಿ ಮಹಾನಗರ ಪಾಲಿಕೆಯನ್ನು ತನ್ನ ರಾಜಕೀಯ ಇಚ್ಛಾಶಕ್ತಿಯಿಂದ ಹಿಡಿದು ಇಟ್ಟಿದ್ದರು. ಇದರಲ್ಲಿ ಪ್ರಮುಖ ಪಾತ್ರ ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಇಲ್ಲಿ ಪ್ರಮುಖ ಪತ್ರ ವಹಿಸಿದ್ದರು. ಮೊದಲ ಬಾರಿಗೆ ಭಾರತೀಯ ಜನತಾ ಪಕ್ಷ ಮಹಾನಗರ ಪಾಲಿಕೆಯಲ್ಲಿ ಆಡಳಿತ…
ಗೋವಿಂದ ಪೈ, ಕುವೆಂಪು ಅವರ ಬಳಿಕ ರಾಷ್ಟ್ರಕವಿ ಗೌರವಕ್ಕೆ ಪಾತ್ರರಾದ ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ(ಜಿ.ಎಸ್.ಶಿವರುದ್ರಪ್ಪ) ಅವರು 07-02-1926 ರಂದು ಶಿವಮೊಗ್ಗದ ಶಿಕಾರಿಪುರದ ಈಸೂರಿನಲ್ಲಿ ಜನಿಸಿದರು. ನವೆಂಬರ್ 1, 2006ರಂದು ಕವಿ ಜಿ.ಎಸ್.ಶಿವರುದ್ರಪ್ಪ ಅವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು. ತಮ್ಮ ತಂದೆಯಿಂದ ಸಾಹಿತ್ಯದ ಆಸಕ್ತಿ ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ (1949) ಪದವಿ ಪಡೆದರು. ಜಿ.ಎಸ್.ಶಿವರುದ್ರಪ್ಪ ಅವರ ಕವನಗಳು: ಸಾಮಗಾನ, ಚೆಲುವು-ಒಲವು, ದೇವಶಿಲ್ಪ,ದೀಪದ ಹೆಜ್ಜೆ, ಕಾರ್ತಿಕ, ಅನಾವರಣ, ತೆರೆದ ದಾರಿ, ಗೋಡೆ, ಕಾಡಿನ ಕತ್ತಲಲ್ಲಿ, ಪ್ರೀತಿ ಇಲ್ಲದ ಮೇಲೆ, ಚಕ್ರಗತಿ, ವ್ಯಕ್ತಮಧ್ಯ, ಅಗ್ನಿಪರ್ವ, ತೀರ್ಥವಾಣಿ, ಜಾರಿದ ಹೊವು,ಸಮಗ್ರ ಕಾವ್ಯ, ಎದೆತುಂಬಿ ಹಾಡಿದೆನು ಮೇರಾ ದಿಯಾ ಮತ್ತು ಇತರ ಕವನಗಳು ವಿಮರ್ಶೆಗಳು: ಪರಿಶೀಲನ, ವಿಮರ್ಶೆಯ ಪೂರ್ವ ಪಶ್ಚಿಮ, ಸೌಂದರ್ಯ ಸಮೀಕ್ಷೆ. (ಇದು ಅವರ ಪಿಹೆಚ್ಡಿ ಮಹಾ ಪ್ರಬಂಧ),…
ಕೊರಟಗೆರೆ: ನ್ಯಾಯದಿಂದ ವಂಚಿತರಾದ, ಆರ್ಥಿಕವಾಗಿ ಹಿಂದುಳಿದವರಿಗೆ ಲೋಕ ಆದಾಲತ್ ಮೂಲಕ ನ್ಯಾಯ ಒದಗಿಸಿಕೊಡುವ ವ್ಯವಸ್ಥೆ ಇದೆ ಎಂದು ಜೆಎಂಎಫ್ಸಿ ಸಿವಿಲ್ ನ್ಯಾಯಧೀಶರಾದ ಜೆ.ಎನ್.ಶ್ರೀನಾಥ್ ತಿಳಿಸಿದರು. ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತಶ್ರಾಯದಲ್ಲಿ ಕೊರಟಗೆರೆ ಕಾನೂನು ಸೇವಾ ಸಮಿತಿ ವತಿಯಿಂದ ಕೊರಟಗೆರೆ ಜೆಎಂಎಫ್ಸಿ ನ್ಯಾಯಲಯದಲ್ಲಿ ಲೋಕಾ ಆದಾಲತ್ (ಜನತಾ ನ್ಯಾಯಲಯ) ಏರ್ಪಡಿಸಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆರ್ಥಿಕವಾಗಿ ಬಲಿಷ್ಠರಾಗಿರುವವರು ದುರ್ಬಲರನ್ನು ದುರುಪಯೋಗ ಪಡಿಸಿಕೊಳ್ಳುತ್ತಾರೆ, ಕಾನೂನಿನ ಅರಿವು ಇಲ್ಲದೇ ಸಾರ್ವಜನಿಕರು ಅನೇಕ ಬಾರಿ ಮೋಸ ಹೋಗುತ್ತಾರೆ, ಇಂತಹ ಸಂದರ್ಭದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ ಕಾನೂನು ಸೇವೆಗಳ ಪ್ರಾಧಿಕಾರ ನ್ಯಾಯ ಒದಗಿಸಿ ಕೊಡುವಲ್ಲಿ ನೆರವಾಗುತ್ತದೆ ಎಂದು ಹೇಳಿದರು. ರಾಜ್ಯದ ಎಲ್ಲಾ ನ್ಯಾಯಲಯಗಳಲ್ಲಿ ಫೆ.11 ರಂದು ರಾಷ್ಟ್ರೀಯ ಲೋಕ ಆದಾಲತ್ಗಳನ್ನು ಏರ್ಪಡಿಸಲಾಗಿದ್ದು ಇದರಲ್ಲಿ ಚೆಕ್ಬೌನ್ಸ್, ಕೌಟುಂಬಿಕ ಆಸ್ತಿ ವಿವಾದಗಳು ಮತ್ತು ಜಗಳಗಳು, ಮೋಟಾರ್ ವಾಹನಗಳು, ಅಪಘಾತದ ವಿಮಾ ಪ್ರಕರಣಗಳು, ಸೇರಿದಂತೆ ಜನತಾ ನ್ಯಾಯಲಯಕ್ಕೆ ಒಳಪಡುವ ಹಲವು ಅರ್ಜಿಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ ಎಂದರು. ಲೋಕ…
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ, ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳು (Electricity distribution companies) ವಿದ್ಯುತ್ ದರ ಪರಿಷ್ಕರಣೆ ಕೋರಿರುವ ಹಿನ್ನೆಲೆಯಲ್ಲಿ ಫೆ. 13 ರಿಂದ ಮಾರ್ಚ್ 1 ರವರೆಗೆ ಸಾರ್ವಜನಿಕ ಅದಾಲತ್ ನಡೆಸಲಿದ್ದು, ಮತ್ತೆ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ಫೆ. 13 ರಿಂದ ಮಾರ್ಚ್ 1 ರವರೆಗೆ ಸಾರ್ವಜಿಕ ಅದಾಲತ್ ನಡೆಸಲಿದ್ದು, ಆಕ್ಷೇಪಣೆ, ಸಲಹೆ ಸೂಚನೆಗಳನ್ನು ಪರಿಗಣಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ತನ್ನ ನಿರ್ಧಾರ ಪ್ರಕಟಿಸಲಿದೆ. ಇನ್ನೂ ಎಸ್ಕಾಮ್ ಗಳು ಪ್ರತಿ ಯುನಿಟ್ ಗೆ 1.50 ರಿಂದ 2 ರೂ. ತನಕ ವಿದ್ಯುತ್ ದರ ಏರಿಕೆ ಕೋರಿ ಈಗಾಗಲೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಇನ್ನು ಕಳೆದ ವರ್ಷ ಎರಡು ಬಾರಿ ವಿದ್ಯುತ್ ದರ ಏರಿಕೆ ಮಾಡಲಾಗಿತ್ತು. ಕಳೆದ ಏಪ್ರಿಲ್ ನಲ್ಲಿ ಪ್ರತಿ ಯುನಿಟ್ ಗೆ 35 ಪೈಸೆ, ಸೆಪ್ಟೆಂಬರ್ ನಲ್ಲಿ ವಿದ್ಯುತ್ ದರವನ್ನು ಪ್ರತಿ ಯುನಿಟ್ ಗೆ (Unit) 24 ಪೈಸೆಯಿಂದ…
ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಟ್ವಿಟ್ಟರ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ (Share). ಯುವಕ ಮತ್ತು ಯುವತಿಯಿಬ್ಬರು ನಾಯಿಯೊಂದಕ್ಕೆ ಹಿಂಸಿಸುವ ವಿಡಿಯೋ ಇದಾಗಿದೆ. ವಿಡಿಯೋದಲ್ಲಿ ಓರ್ವ ಯುವಕ ಮತ್ತು ಯುವತಿ ಬೀದಿ ನಾಯಿ ಮರಿಯನ್ನು ಅದರ ಹಿಂಗಾಲುಗಳನ್ನು ಹಿಡಿದು ಆಟಿಕೆಯಂತೆ ಜೋಕಾಲಿ ಮಾಡಿ ಹಿಂಸಿಸುವುದನ್ನು ನೋಡಬಹುದು. ಅಲ್ಲಿಯೇ ಇರುವ ಮಂಗಗಳನ್ನು ಹೆದರಿಸಲು ನಾಯಿ ಮರಿಯನ್ನು ಅವುಗಳತ್ತ ಎಸೆದಂತೆ ಮಾಡುತ್ತಾನೆ. ನಂತರ ಅದನ್ನು ತಲೆಕೆಳಗಾಗಿ ಹಿಡಿಯುತ್ತಾನೆ. ಆನಂತರ ಇಬ್ಬರೂ ಕೇಕೆ ಹಾಕಿ ನಗುವುದನ್ನು ಕಾಣಬಹುದು. ಕೊನೆಗೆ ವಿಚಿತ್ರ ಎಂಬಂತೆ ಯುವತಿ ನಾಯಿಯನ್ನು ಮುದ್ದಿಸುತ್ತಾಳೆ. ಈ ವಿಚಿತ್ರ ವರ್ತನೆ ನೆಟ್ಟಿಗರನ್ನು ಕೆರಳಿಸಿದೆ. ಇಬ್ಬರಿಗೂ ಕಠಿಣ ಶಿಕ್ಷೆ (Punishment) ವಿಧಿಸಬೇಕೆಂದು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ. ಇವರು ಅದೆಷ್ಟು ಕ್ರೂರಿಗಳಾಗಿರಬೇಕು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
SSLC ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ಒಂದು ‘ ಪೂರ್ವ ಸಿದ್ಧತಾ ಪರೀಕ್ಷೆ’ ನಡೆಸಲು ಸಾಧ್ಯವಾಗದಷ್ಟು ಅಸಮರ್ಥವಾಯಿತೇ ಹೊಸದಾಗಿ ರಚನೆಯಾಗಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ..? ಈ ಮೊದಲು ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ರಾಜ್ಯಮಟ್ಟದಲ್ಲಿ ನಡೆಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣ ಕಲ್ಪಿಸಲಾಗುತ್ತಿತ್ತು. ಇದು ಪರೀಕ್ಷಾ ಫಲಿತಾಂಶದ ಮೇಲೆ ಸಾಕಷ್ಟು ಪ್ರಯೋಜನ ಸಹ ಬೀರುತ್ತಿತ್ತು. ಆದರೆ ಈಗ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನೆಪ ಮಾತ್ರಕ್ಕೆ ನಡೆಸಲಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ. ಕಾರಣ, ರಾಜ್ಯಮಟ್ಟದಲ್ಲಿ ವೇಳಾಪಟ್ಟಿ ಪ್ರಕಟಿಸಿ, ಪ್ರಶ್ನೆ ಪತ್ರಿಕೆ ತಯಾರಿಸಿ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ತಾಲ್ಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಕಾರಿಗೆ (ಬಿಒಒ) ವಹಿಸಿ ಆದೇಶ ಹೊರಡಿಸಿರುವುದು. ಪರೀಕ್ಷೆ ನಡೆಸುವ ಕಾರ್ಯವನ್ನು ತಾಲ್ಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಕಾರಿಗಳಿಗೇ ವಹಿಸಲಿ, ಕನಿಷ್ಠ ಪಕ್ಷ ರಾಜ್ಯ ಮಟ್ಟದ ಒಂದು ಪ್ರಶ್ನೆ ಪತ್ರಿಕೆಯನ್ನಾದರೂ ಸಿದ್ಧಪಡಿಸಿ ಅದನ್ನೇ BEO ಲಾಗಿನ್ ಗೆ ಕಳುಹಿಸಿ ಗೌಪ್ಯತೆ ಕಾಪಾಡುವ ಮೂಲಕ ಪರೀಕ್ಷಾ…