Author: admin

ಶಾಸಕರ ನಿಧಿ ಹಾಗೂ ನಗರಾಭಿವೃದ್ಧಿ ನಿಧಿ ಒಟ್ಟು 10 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ರೂಪಕಗಳ ಹಾಗೂ ಧ್ವನಿವರ್ಧಕ ಹಾಗೂ ಬೆಳಕಿನ ರೂಪಕ 40 ನಿಮಿಷಗಳ ಸಮಯದ ರೂಪಕ ಇದು ಕನ್ನಡ ಹಾಗೂ ಮರಾಠಿ ಭಾಷೆಗಳಲ್ಲಿ ಮೂಡಿಬರಲಿದೆ. ಸ್ಮಾರಕ ಫೆಬ್ರುವರಿ 19ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ದಿನದಂದು ಸ್ಮಾರಕ ಉದ್ಘಾಟನೆಗೊಳ್ಳಲಿದೆ      ಅದರ ಅಂಗವಾಗಿ ಇಂದು ಶಾಸಕ ಅಭಯ ಪಾಟೀಲ್ ಕಾಮಗಾರಿಯನ್ನು ಪರಿಶೀಲಿಸಿ ಫೆಬ್ರವರಿ 19ರ ಒಳಗೆ ಸಂಪೂರ್ಣ ಕಾಮಗಾರಿ ಮುಗಿಯಲಿದೆ. ಈ ಸ್ಮಾರಕ ಶಾಲಾ ಮಕ್ಕಳಿಗೆ ರಿಯಾಯಿತಿ ದರದಲ್ಲಿ ಪ್ರವೇಶ ನೀಡಲಾಗುವುದು ಆದರೆ ಯಾವ ರೀತಿ ಶಾಲಾ ಮಕ್ಕಳಿಗೆ ಶಿವಪ್ರೇಮಿಗಳಿಗೆ ಇದನ್ನು ನೋಡಲು ಅವಕಾಶ ಮಾಡಿಕೊಡುವುದು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ಬೆಳಗಾವಿ ದಕ್ಷಿಣ ಭಾಗದಲ್ಲಿರುವ ಶಿವಾಜಿ ಗಾರ್ಡನ್ ಹತ್ತಿರ ಈ ಸ್ಮಾರಕ ನಿರ್ಮಾಣಗೊಂಡಿದ್ದು ಈ ಸ್ಮಾರಕ ಉದ್ಘಾಟನೆಯ ಸಲುವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳ ಯೋಗಿ ಆದಿತ್ಯನಾಥ್ ಹಾಗೂ ಆಸ್ಸಾಂ ಮುಖ್ಯಮಂತ್ರಿ ಅವರನ್ನುಆಹ್ವಾನಿಸಲಾಗಿದೆ.…

Read More

ದಾವಣಗೆರೆ ಮಕ್ಕಳ ಸ್ನೇಹಿ‌ ನ್ಯಾಯಾಲಯದ ಎಸ್‌ಪಿಪಿ, ರೇಖಾ ಕೋಟೆಗೌಡರು ಪೋಕ್ಸೋ ಪ್ರಕರಣದ (POCSO Case) ಆರೋಪಿಯಿಂದ ಲಂಚಕ್ಕೆ ಬೇಡಿಕೆ ಇಟ್ಟು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಕ್ಸೋ ಪ್ರಕರಣದ ಆರೋಪಿ ಬಳಿ 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಅದರಂತೆ ಮನೆಯಲ್ಲಿ 1 ಲಕ್ಷದ 87 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ. ಮಧುಸೂಧನ್ ಕಿತ್ತೂರು ಎಂಬುವರು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ರೇಖಾ ಅವರನ್ನು ಬಲೆಗೆ ಕೆಡವಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಬೆಂಗಳೂರಿನ ಕೋಣನಕುಂಟೆ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ವಿದ್ಯುತ್ ಶಾಕ್ ನಿಂದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ ಮೂಲದ ದಿಲೀಪ್ ಮೃತ ಕಾರ್ಮಿಕರು. ಕೋಣನಕುಂಟೆ ಬಳಿಯ ಪ್ರೆಸ್ಟೀಜ್ ಗ್ರೂಪ್ ನ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಕಾರ್ಮಿಕರು ಅಪಾರ್ಟ್ ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಎಸ್ ಟಿಪಿ ಸಂಪ್ ಬಳಿ ಕೆಲಸ ಮಾಡುತ್ತಿದ್ದರು. ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಮನಗರ: ಜಿಲ್ಲೆಯ ಕಗ್ಗಲೀಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ವಾಸುದೇವಪುರ ಗ್ರಾಮದಲ್ಲಿ ಯುವಕನೊಬ್ಬ ತಮ್ಮ ಮನೆಯಲ್ಲಿರುವ ದೇವರ ಕೋಣೆಯಲ್ಲಿ ಕುಳಿತು ಸೆಲ್ಫಿ ವಿಡಿಯೋ  ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ ಶಿವರಾಜ್ (35) ಎಂದು ತಿಳಿದು ಬಂದಿದೆ. ಈತ ತನ್ನ ಮನೆಯಲ್ಲಿನ ಫ್ಯಾನ್‌ ಗೆ ನೇಣು ಬಿಗಿದುಕೊಂಡು ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂರು ದಿನಗಳ ಬಳಿಕ ಆತ ಮಾಡಿದ್ದ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ಶಿವರಾಜ್ ತನ್ನ ಸ್ನೇಹಿತರ ಬಳಿ ಮೀಟರ್ ಬಡ್ಡಿಗೆ ಸಾಲ  ಪಡೆದಿದ್ದನು. ಒಟ್ಟು 40 ಸಾವಿರ ಹಣ ಸಾಲ ಪಡೆದಿದ್ದು, ಸಾಲದ ಹಣ ಮರಳಿ ಕೊಡದ ಕಾರಣ ಶಿವರಾಜ್ ಗೆ ಕಿರುಕುಳ ನೀಡಿದ್ದಾರೆ. ನನ್ನ ಸ್ನೇಹಿತರು ಇಸ್ಪೀಟ್ ಸೇರಿ ಹಲವು ದುಶ್ಚಟಗಳನ್ನು ಕಲಿಸಿ ಸುಮಾರು 8 ಲಕ್ಷ ರೂ. ನಷ್ಟಕ್ಕೆ ಕಾರಣವಾಗಿದ್ದಾರೆ. ಆದರೆ, ನನ್ನ ಮನೆಯವರು ನನ್ನ ಸಾವಿಗೆ ಕಾರಣವಲ್ಲ.…

Read More

ತುರುವೇಕೆರೆ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಲಾವಿದ ಮೂರ್ತಿ ಸಿ (43) ಅವರ ಮನೆಗೆ ತುರುವೇಕೆರೆ ತಾಲೂಕು ಆದಿ ಜಾಂಬವ  ವಿವಿಧೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕರು ಮಾಜಿ ಜಿಲ್ಲಾ ಪರಿಷತ್ತಿನ  ಸದಸ್ಯರಾಗಿದ್ದ ಹೊನ್ನಯ್ಯನವರ ಮೊಮ್ಮಗ ಸಿ.ಎಸ್.ಮೂರ್ತಿರವರು ಭೇಟಿ ನೀಡಿ ಸಾಂತ್ವನವನ್ನು ಹೇಳಿ ಆರ್ಥಿಕ ನೆರವನ್ನು ನೀಡಿದ್ದಾರೆ. ಮೃತ ವ್ಯಕ್ತಿ ಮೂರ್ತಿ ಸಿ ಅವರು ಇಬ್ಬರು ಗಂಡು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಇವರ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ತನ್ನ ಕೈಲಾದ ಸಹಾಯವನ್ನು ಮಾಡುವುದಾಗಿ ಸಿ.ಎಸ್.ಮೂರ್ತಿ ಅವರು ಇದೇ ವೇಳೆ ಭರವಸೆ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಇನ್ನೂ  ದಲಿತ ಜನಾಂಗದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರಿಗೆ ಕೋಚಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆಯಲು ಸಹಾಯ ಮಾಡುವುದಾಗಿ ಇದೇ ವೇಳೆ ಸಿ.ಎಸ್.ಮೂರ್ತಿ ಘೋಷಿಸಿದರು. ಈ ಸಂದರ್ಭದಲ್ಲಿ ಆದಿಜಾಂಭವ ವಿವಿದೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಾಯಸಂದ್ರ ಎಂ.ಎನ್.ಸುಬ್ರಮಣ್ಯ, ದಲಿತ ಮುಖಂಡರಾದ ಟಿ.ಹೆಚ್.ಗುರುದತ್, ಮಾಜಿ ತಾಲೂಕು ಪಂಚಾಯ್ತಿ ಅಧ್ಯಕ್ಷರಾದ ಲಕ್ಷ್ಮೀದೇವಮ್ಮ, ಬಾಣಸಂದ್ರ ಕೃಷ್ಣ ಮಾದಿಗ,…

Read More

ತುರುವೇಕೆರೆ: ಸರ್ಕಾರದಿಂದ ಆಟೋ ಚಾಲಕರಿಗೆ ಸಿಗುವ ಸವಲತ್ತುಗಳನ್ನು ನಿಮಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಮಸಾಲಾ ಜಯರಾಮ್ ತಿಳಿಸಿದರು. ತಾಲ್ಲೂಕಿನ ಲೈಸೆನ್ಸ್ ಇಲ್ಲದ  ಆಟೋ ಚಾಲಕರಿಗೆ ಲೈಸೆನ್ಸ್ ಮತ್ತು ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದ ಅವರು, ಈಗ ನನ್ನ ಸ್ವಂತ ಖರ್ಚಿನಿಂದ 53 ಚಾಲಕರಿಗೆ  ಲೈಸೆನ್ಸ್  ಮತ್ತು 80 ಚಾಲಕರಿಗೆ ಸಮವಸ್ತ್ರ  ವಿತರಿಸಲಾಗುತ್ತಿದೆ. ನಿಮ್ಮ ಆಟೋಗಳಿಗೆ ಕಡ್ಡಾಯವಾಗಿ ಇನ್ಸೂರೆನ್ಸ್ ಮಾಡಿಸಿ, ನಿಮ್ಮ ಕಷ್ಟಗಳ ಬಗ್ಗೆ ನನಗೆ ಅರಿವಿದೆ,  ನಿಮ್ಮ ಜೊತೆ ನಾನಿರುತ್ತೇನೆ ಎಂದು  ಧೈರ್ಯ ಹೇಳಿದರು. ನಿಮ್ಮ ಬಳಿ ಅಗತ್ಯ ಪರವಾನಗಿ ಮತ್ತು ದಾಖಲೆಗಳನ್ನು ಹೊಂದಿ, ಪೊಲೀಸರಿಂದ ಬೀಳುವ ಫೈನ್ ಗಳಿಂದ ದೂರವಿರಿ. ಯಾವುದೇ ತರನಾದ ದಂಡವನ್ನು ಕಟ್ಟದ  ರೀತಿಯಲ್ಲಿ ಅಗತ್ಯ ಧಾಖಲೆ ಇಟ್ಟುಕೊಳ್ಳಿ. ಇನ್ಸೂರೆನ್ಸ್ ಅನ್ನು ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಸರ್ಕಾರದಿಂದ ಮತ್ತು ನಿಗಮದಿಂದ ಬರುವ ಸವಲತ್ತುಗಳನ್ನು ತಲುಪಿಸಲಾಗುವುದು. ಈಗ ಸರ್ಕಾರದಿಂದ  ಎರಡು ಆಟೋಗಳನ್ನೂ ಕೊಡಲು ವ್ಯವಸ್ಥೆ ಮಾಡಿದ್ದೇನೆ. ನಾನು ಸುಳ್ಳು ಆಶ್ವಾಸನೆ ಕೊಡುವುದಿಲ್ಲ, ನಿವೇಶನಗಳನ್ನು…

Read More

ತುರುವೇಕೆರೆ:  ತಾಲೂಕು ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೀಯ ಚುನಾವಣೆಯಲ್ಲಿ ನೂರ್ ಆಯಿಷಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ 15 ದಿನಗಳಿಂದ ಹಿಂದಿನ ಉಪಾಧ್ಯಕ್ಷೆಯಾದ ‘ ಗೀತಾ ಹೆಚ್ಎಸ್ ‘ ರವರ ರಾಜೀನಾಮೆಯಿಂದ  ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು.  ಈ ಗ್ರಾಮ ಪಂಚಾಯಿತಿಯು 16 ಜನ ಸದಸ್ಯ ಬಲ ಹೊಂದಿರುವ ಪಂಚಾಯತಿ ಆಗಿದ್ದು  ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದೆ, ನೂರ್ ಆಯಿಷಾ ಒಬ್ಬರೇ  ಸಲ್ಲಿಸಿದ್ದು. ಕೊನೆಯ ಘಳಿಗೆಯವರೆಗೂ  ಯಾರೊಬ್ಬರೂ ಇವರ ವಿರುದ್ಧ ನಾಮಪತ್ರ ಸಲ್ಲಿಸಲಿಲ್ಲ. ಆದ ಕಾರಣ ಅಂತಿಮವಾಗಿ ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತುರುವೇಕೆರೆ ತಾಲೂಕು ದಂಡಾಧಿಕಾರಿಗಳಾದ ವೈ ಎಂ ರೇಣು ಕುಮಾರ್ ರವರು ನೂರ್ ಆಯುಷಾ ರವರನ್ನು ಅವಿರೋಧ ಆಯ್ಕೆ ಉಪಾಧ್ಯಕ್ಷೆ ಎಂದು ಘೋಷಿಸಿದರು. ಆಯ್ಕೆಯಾದ ತಕ್ಷಣ ನೂತನ ಉಪಾಧ್ಯಕ್ಷೆಯ ಬೆಂಬಲಿಗರು ಹಾಗೂ ಅಭಿಮಾನಿಗಳು ಪಂಚಾಯಿತಿಯ ಹೊರಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿ ಸಿಹಿ ಹಂಚಿದರು. ಪುಷ್ಪಮಾಲೆಯನ್ನು ಹಾಕಿ  ಅಭಿನಂದನೆಯನ್ನು ಸಲ್ಲಿಸಿದರು. ಈ ಚುನಾವಣೆಯಲ್ಲಿ …

Read More

ತಿಪಟೂರು : ನನ್ನ ಕಣ್ಣೀರನ್ನು ನೋಡಿ ಹಲವಾರು ನಾಟಕವೆನ್ನುತ್ತಾರೆ, ಆದರೆ ಇದು ರಾಜ್ಯದ ಜನತೆಯ ಸಂಕಷ್ಟವನ್ನು ನೋಡಿ ಬರುತ್ತಿರುವ ಕಣ್ಣೀರು, ಹೃದಯದಿಂದ ಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗಿ ನುಡಿದರು. ನಗರದ ಕಲ್ಪತರು ಕ್ರೀಡಾಂಗಣದಲ್ಲಿ ಕೆ.ಟಿ.ಶಾಂತಕುಮಾರ್ ಜೆ.ಡಿ.ಎಸ್ ಸೇರ್ಪಡೆ ಹಾಗೂ ಜೆ.ಡಿ.ಎಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಕಣ್ಣೀರು ಹಾಕುವುದನ್ನು ನೋಡಿ, ಕೆಲವರು ಗೇಲಿ ಮಾಡುತ್ತಾರೆ. ಯಾರ ಹೃದಯದಲ್ಲಿ ನೋವಿರುತ್ತದೋ ಅದು ಕಣ್ಣೀರಾಗಿ ಹರಿಯುತ್ತದೆ. ನನ್ನ ಕಣ್ಣೀರು ಅಂತಹದ್ದು ಎಂದರು. ರಾಜ್ಯದಲ್ಲಿ 2 ರಾಷ್ಟ್ರೀಯ ಪಕ್ಷಗಳು ಅಧಿಕಾರವನ್ನು ಮಾಡುತ್ತಾ ಜನರಿಗೆ ಇಲ್ಲದ ತೆರಿಗೆ ಹಾಕಿ ಜನರ ದುಡ್ಡಿನಲ್ಲಿ ಸರ್ಕಾರಿ ಸೌಲಭ್ಯಗಳನ್ನು ಅನುಭವಿಸುತ್ತಿದ್ದಾರೆಯೇ , ಹೊರತು ಯಾವುದೇ ಕಾರಣಕ್ಕೂ  ಜನರ ಸಮಸ್ಯೆಯ ಬಗ್ಗೆ ಕಾಳಜಿ ಅವರಿಗಿಲ್ಲ. ಇವರಿಗೆ ಜನರ ಮತಗಳು ಮಾತ್ರ ಬೇಕು, ಜನರ ಸಮಸ್ಯೆ ಬೇಡ. ಇಂತಹ ರಾಜಕಾರಣಿಗಳು ನಿಮಗೇ ಬೇಕೆ ಎಂದು ಪ್ರಶ್ನಿಸಿದ ಅವರು, ನಾನು ಪಂಚರತ್ನ ಯಾತ್ರೆಯನ್ನು ಯಶಸ್ವಿಯಾಗುತ್ತಿರುವುದು ಅವರ ಕಣ್ಣುರಿಯಾಗುತ್ತಿದೆ. ಅವರು ಕಣ್ಣೀರು ಹಾಕುವ…

Read More

ಸರಗೂರು:  ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಉಮಾರಾಮು ನೇಮಕಗೊಂಡಿದ್ದಾರೆ. ಶನಿವಾರ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಗಳಾಗಿ ಸದಸ್ಯರಾದ ಎಸ್.ಎಲ್.ರಾಜಣ್ಣ, ಉಮಾರಾಮು, ಶಿವಕುಮಾರ್ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಶಿವಕುಮಾರ್ ಉಮಾರಾಮು ಅವರಿಗೆ ಬೆಂಬಲ ಸೂಚಿಸಿದರು. ಹೀಗಾಗಿ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಉಮಾರಾಮು ಆಯ್ಕೆಗೊಂಡರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಕಾಂಗ್ರೆಸ್ ಪಕ್ಷದ ಪಪಂ ಸದಸ್ಯರು ಚಲುವಕೃಷ್ಣ ಶ್ರೀನಿವಾಸ ಇಬ್ಬರು ಸದಸ್ಯರು ಬಿಜೆಪಿ ಪಕ್ಷದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶಿವಕುಮಾರ್ ಎಂಬುವರಿಗೆ ಸೂಚಕ ಹಾಗೂ ಅನುಮೋಧಕವಾಗಿ ಬಿಜೆಪಿ ಪಕ್ಷದ ಶಿವಕುಮಾರ್ ರವರಿಗೆ ಬೆಂಬಲ ಸೂಚಿಸಿದರು. ಸದಸ್ಯ ಎಸ್.ಎಲ್.ರಾಜಣ್ಣ ಮಾತನಾಡಿ, ಸಾಮಾನ್ಯ ಸಭೆಗೆ ಸಂಸದರು, ಶಾಸಕರಿಗೆ ಏಳು ದಿನಗಳೊಳಗೆ ನೋಟೀಸ್ ನೀಡಬೇಕು. ಆದರೆ, ಅಧಿಕಾರಿಗಳು ಜ.31ರಂದು ನೋಟೀಸ್ ನೀಡಿದ್ದಾರೆ. ಸಂಸದರು, ಶಾಸಕರ ಗೈರು ಹಾಜರಿಯಲ್ಲಿ ನಡೆದ ಸ್ಥಾಯಿ ಸಮಿತಿ ಅಧ್ಯಕ್ಷೆ ಆಯ್ಕೆ ಅಸಿಂಧುವಾಗಿದೆ. ಮುಂದೆ…

Read More

ನೆಲಮಂಗಲ: ನಗರಸಭೆ ವ್ಯಾಪ್ತಿಯಲ್ಲಿ ಬರುವ ಜಕ್ಕಸಂದ್ರದ ಬ್ರಾಹ್ಮಣರ ಬೀದಿಯಲ್ಲಿ ಕರ್ನಾಟಕ ರಣಧೀರ ವೇದಿಕೆಯ ನೂತನ ಕೇಂದ್ರ ಕಚೇರಿಯನ್ನು ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ನೇತೃತ್ವದಲ್ಲಿ ಉದ್ಘಾಟನೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ನಾಡಿನ ಒಳಿತಿಗಾಗಿ ನಾಡ ದೇವತೆಯಾದ  ಶ್ರೀ ಭುವನೇಶ್ವರಿ ದೇವಿಗೆ ವಿವಿಧ ರೀತಿಯ ಪೂಜಾ ಕೈಂಕರ್ಯಗಳೊಂದಿಗೆ ವಿವಿಧ ಹೋಮ ಹವನಗಳನ್ನು ಇದೇ ಸಂದರ್ಭದಲ್ಲಿ ಕೈಗೊಳ್ಳಲಾಗಿತ್ತು. ರಾಜ್ಯದ ವಿವಿಧ ಭಾಗಗಳಿಂದ ಕರ್ನಾಟಕ ರಣಧೀರರ ವೇದಿಕೆಯ ಕಾರ್ಯಕರ್ತರು ಈ ಶುಭ ಸಂದರ್ಭದಲ್ಲಿ ಹಾಜರಾಗಿ ತಾಯಿ ಭುವನೇಶ್ವರಿ ದೇವಿಯ ಕೃಪೆಗೆ ಪಾತ್ರರಾದರು. ಕಚೇರಿ ಉದ್ಘಾಟನೆಯಾದ ನಂತರ ನೂತನವಾಗಿ ವಿಜಯಪುರ ಜಿಲ್ಲೆಯ ಜಿಲ್ಲಾ ಘಟಕವನ್ನು ಇದೆ ಸಂದರ್ಭದಲ್ಲಿ ಸ್ಥಾಪಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಮಹೇಶ್ ಆಯ್ಕೆಯಾದರು. ಕಾರ್ಯಧ್ಯಕ್ಷರಾಗಿ ಜಾವಿದ್ ಹಾಕಿಯಾದರೂ ಹಾಗೂ ಜಿಲ್ಲಾ ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು ಆಯ್ಕೆಯಾದ ಎಲ್ಲಾ ಕಾರ್ಯಕರ್ತರಿಗೂ ನೇಮಕಾತಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಲಾಯಿತು. ಕಲ್ಯಾಣ ಕರ್ನಾಟಕ ಭಾಗದ ರಾಜ್ಯ ಉಸ್ತುವಾರಿಯಾಗಿ ಬಸವರಾಜ್ ರವರನ್ನು ಇದೇ ಸಂದರ್ಭದಲ್ಲಿ ರಾಜ್ಯ ಘಟಕದ ಮುಖಂಡರುಗಳ…

Read More