Subscribe to Updates
Get the latest creative news from FooBar about art, design and business.
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
- ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
- ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
Author: admin
ಚಿಕ್ಕನಾಯಕನಹಳ್ಳಿ: ದೇವಾಲಯದೊಳಗೆ ನುಗ್ಗಿರುವ ಕಳ್ಳರು, ದೇವಸ್ಥಾನದೊಳಗಿದ್ದ ದೇವರ ಮೂರ್ತಿ ಸಹಿತ ಬೆಲೆಬಾಳುವ ವಸ್ತುಗಳನ್ನು ದೋಚಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಕೆಂಕೆರೆಯಲ್ಲಿ ನಡೆದಿದೆ. ಕೆಂಕೆರೆಯಲ್ಲಿರುವ ಕಾಳಮ್ಮ ದೇವಸ್ಥಾನಕ್ಕೆ ನುಗ್ಗಿರುವ ಕಳ್ಳರು, ಕಾಳಮ್ಮ ದೇವರ 3 ಬಂಗಾರದ ಮುಖ ಪದ್ಮ, ಛತ್ರಿ, ದೇವಸ್ಥಾನದ ಹುಂಡಿಯನ್ನು ಕದ್ದೊಯ್ದಿದ್ದಾರೆ. ಕಳವಾಗಿರುವ ವಸ್ತುಗಳ ಒಟ್ಟು ಮೌಲ್ಯ 2.50 ಕೋಟಿ ಎಂದು ಹೇಳಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತುಮಕೂರು ಡಿಸಿ, ಎಸ್ ಪಿ ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಳ್ಳರು ದೇವರನ್ನು ಕೂರಿಸುವ ಹಲಗೆಯೊಂದನ್ನು ಬಿಟ್ಟು ಬೇರೆಲ್ಲ ವಸ್ತುಗಳನ್ನು ದೋಚಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಹುಬ್ಬಳ್ಳಿ: ಮೂರು ಮಕ್ಕಳ ತಂದೆಯೊಬ್ಬ 17 ವರ್ಷದ ಅಪ್ರಾಪ್ತೆಯನ್ನು ಮದುವೆಯಾದ ಘಟನೆ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಹನುಮಂತ ಉಪ್ಪಾರ ಈಗಾಗಲೇ ಮದುವೆಯಾಗಿ ಮೂರು ಮಕ್ಕಳಿದ್ದರೂ ಈಗ ಅಪ್ರಾಪ್ತ ಬಾಲಕಿಯೊಂದಿಗೆ ಎರಡನೇ ಮದುವೆಯಾಗಿದ್ದಾನೆ. ಎಂದು ಫೋಟೋಗಳ ಸಮೇತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹನುಮಂತ ಉಪ್ಪಾರ ಹುಬ್ಬಳ್ಳಿಯ ಮಹದೇವ ನಗರದ ನಿವಾಸಿಯಾಗಿದ್ದು, ನೇತ್ರಾ ಎಂಬಾಕೆಯನ್ನು ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದ. ಇಬ್ಬರಿಗೂ ಮೂರು ಮಕ್ಕಳು ಕೂಡ ಜನಿಸಿದ್ದಾರೆ. ಆದರೆ ಈಗ ಆರೋಪಿ ಮೊದಲ ಪತ್ನಿ ನೇತ್ರಾ ಅವರನ್ನು ಬಿಟ್ಟು ಮತ್ತೊಂದು ಮದುವೆಯಾಗಿದ್ದಾನೆ. ಅದರಲ್ಲೂ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಆರೋಪಿ ಮದುವೆಯಾಗಿದ್ದು, ಆಕೆಗೆ ಹಣದ ಆಮಿಷ ತೋರಿಸಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾನೆ ಎಂದು ಮೊದಲ ಪತ್ನಿ ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ವಾಣಿ ಜೈರಾಮ್ ಅವರು ಫೆಬ್ರವರಿ 4 ರಂದು ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಅವರು ಭಾರತ ಸರ್ಕಾರದಿಂದ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರ ಹಠಾತ್ ನಿಧನ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ದೇಶಾದ್ಯಂತ. ಅವರು ತಮ್ಮ ವೃತ್ತಿಜೀವನದಲ್ಲಿ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದರು. ಅವರ ಹಠಾತ್ ನಿಧನವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು,. ಈ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ನವದೆಹಲಿ: ಅಗ್ನಿಪಥ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ತರಲಾಗಿದ್ದು ದೈಹಿಕ ಕ್ಷಮತೆ ಪರೀಕ್ಷೆಗೂ ಮುನ್ನ ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಬೇಕಾಗುತ್ತದೆ ಎಂದು ಭಾರತೀಯ ಸೇನೆ ಘೋಷಿಸಿದೆ. ಇದಕ್ಕೆ ಸಂಬಂಧಸಿದಂತೆ ಸೇನೆಯು ಶುಕ್ರವಾರ ಜಾಹೀರಾತು ಬಿಡುಗಡೆ ಮಾಡಿದ್ದು ಅಗ್ನಿವೀರರ ನೇಮಕಕ್ಕೆ ಸಂಬಂಧಿಸಿದ ಮೂರು ಹಂತಗಳ ಬಗ್ಗೆ ವಿವರಣೆ ನೀಡಿದೆ. ಅಗ್ನಿವೀರರಾಗಿ ನೇಮಕಗೊಳ್ಳಲು ಬಯಸುವ ಅಭ್ಯರ್ಥಿಗಳು ಮೊದಲು ಆನ್ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆ (ಅಇಇ) ಬರೆಯಬೇಕಾಗುತ್ತದೆ. ನಂತರ ದೈಹಿಕ ಕ್ಷಮತೆ ಪರೀಕ್ಷೆ ಹಾಗೂ ನೇಮಕಾತಿಗೂ ಮುನ್ನ ನಡೆಸುವ ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ. ನೇಮಕಾತಿ ರ್ಯಾಲಿಗಳಿಗೆ ಬರುವ ಸಾವಿರಾರು ಅಭ್ಯರ್ಥಿಗಳು ನಿಭಾಯಿಸಲು ತಗಲುವ ಆಡಳಿತಾತ್ಮಕ ವೆಚ್ಚ, ಸಾಗಾಟದ ವ್ಯವಸ್ಥೆ ಇತ್ಯಾದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆ ಮಾಡಲಾಗಿದೆ. ಇದೀಗ ಮೊದಲು ಪ್ರವೇಶ ಪರೀಕ್ಷೆ ಮಾಡುವುದರಿಂದ ಅರ್ಹ ಅಭ್ಯರ್ಥಿಗಳು ಮಾತ್ರ ನೇಮಕಾತಿ ರ್ಯಾಲಿಗಳಿಗೆ ಬರುವಂತಾಗುತ್ತದೆ. ಇದು ನೇಮಕಾತಿ ಪ್ರಕ್ರಿಯೆಯನ್ನು ಸುಗಮಗೊಳಿಸಲಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಹೊಸ ನೇಮಕಾತಿ ನಿಯಮ ೨೦೨೩-೨೪ರಲ್ಲಿ ಸೇನೆ ಸೇರ ಬಯಸುವ ೪೦,೦೦೦ ಅಭ್ಯರ್ಥಿಗಳಿಗೆ…
ಸರಕಾರಿ ಕೆಲಸ ಹುಡುಕುವವರಿಗೆ ಭಾರತೀಯ ಸೇನೆಯ ಗಡಿ ಭದ್ರತಾ ಪಡೆ ಸಿಹಿ ಸುದ್ದಿ ನೀಡಿದ್ದು 1410 ಕಾನ್ಸ್ಟೇಬಲ್ (ಟ್ರೇಡ್ಸ್ಮೆನ್) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಮಾರ್ಚ್ 1, 2023 ಕೊನೆಯ ದಿನಾಂಕವಾಗಿದ್ದು ಗಡಿ ಭದ್ರತಾ ಪಡೆಯ ಅಧಿಕೃತ ವೆಬ್ಸೈಟ್ rectt.bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಕಾನ್ಸ್ಟೇಬಲ್ (ಪುರುಷ)- 1343 ಹುದ್ದೆಗಳು ಕಾನ್ಸ್ಟೇಬಲ್ (ಮಹಿಳೆ)- 67 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಪಾಸಾಗಿರುವವರು ಮಾರ್ಚ್ 1, 2023ಕ್ಕೆ ಅನುಗುಣವಾಗಿ 18 ರಿಂದ 25 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು ಕೆಲ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಜೊತೆ ಐಟಿಐ ಪ್ರಮಾಣ ಪತ್ರವೊಂದಿರಬೇಕೆಂದು ತಿಳಿಸಲಾಗಿದೆ. ಈ ಕುರಿತಾದ ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಪರಿಶೀಲಿಸಬಹುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು ಇದೀಗ ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಕೆಪಿಸಿಸಿ ಎಲೆಕ್ಷನ್ ಕಮಿಟಿ ಮಹತ್ವದ ಸಭೆ ನಡೆಸಿದ್ದು 37 ಅಭ್ಯರ್ಥಿಗಳ ಪಟ್ಟಿ ಸಭೆ ಮುಂದೆ ಬಂದಿದೆ, ಇದೀಗ ಮೊದಲ ಪಟ್ಟಿ ಸ್ಕ್ರೀನಿಂಗ್ ಕಮಿಟಿಗೆ ರವಾನಿಸಿದ್ದು, ಫೆಬ್ರವರಿ ಅಂತ್ಯದೊಳಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮಾಹಿತಿ ನೀಡಿದ್ದಾರೆ. ಉಡುಪಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ವಿಧಾನಪರಿಷತ್ ಪ್ರದೇಶ ಎಲೆಕ್ಷನ್ ಕಮಿಟಿಯ ಜವಾಬ್ದಾರಿ ಮುಕ್ತಾಯವಾಗಿದೆ. ಅಭ್ಯರ್ಥಿಗಳ ಪಟ್ಟಿಗಳು ಈಗಾಗಲೇ ನಿನ್ನೆ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ೩೭ ಜನರ ಸಮ್ಮುಖ ಬಂದಿದೆ. ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯ, ಶಿಫಾರಸುಗಳನ್ನು ಕೊಟ್ಟಿದ್ದಾರೆ. ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ನಾಯಕರು ಘೋಷಿಸಲಿದ್ದಾರೆ. ಫೆಬ್ರವರಿ ಅಂತ್ಯದೊಳಗೆ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ ಇದೆ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಅವರು ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಿದ್ದಾರೆ ಎಂದು…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಯರ್ರಮ್ಮನಹಳ್ಳಿ ಗ್ರಾಮದಲ್ಲಿ ಪಡಿತರದಾರರಿಗೆ ನೀಡಿದ ಅಕ್ಕಿಯಲ್ಲಿ ರಸಗೊಬ್ಬರದ ಹರಳುಗಳು ಮಿಶ್ರಣವಾಗಿರುವುದು ಬುಧವಾರ ಬೆಳಕಿಗೆ ಬಂದಿದೆ. ಬೂದಿಬೆಟ್ಟ ಪಂಚಾಯಿತಿ ವ್ಯಾಪ್ತಿಯ ಯರ್ರಮ್ಮನಹಳ್ಳಿ ಗ್ರಾಮದಲ್ಲಿ ಬುಧವಾರ ಪಡಿತರ ವಿತರಿಸಲಾಗಿದೆ. ಪಡಿತರದಾರರು ಮನೆಗೆ ಅಕ್ಕಿಯನ್ನು ತೆಗೆದುಕೊಂಡು ಹೋಗಿ ಅಕ್ಕಿಯನ್ನು ಶುಭ್ರಮಾಡುವಾಗ ಅದರಲ್ಲಿ ಯೂರಿಯಾ ಮತ್ತು ಕಾಂಪ್ಲೆಕ್ಸ್ ಗೊಬ್ಬರದ ಹರಳುಗಳು ಗೋಚರಿಸಿವೆ. ಅನುಮಾನಗೊಂಡು ಅಕ್ಕಪಕ್ಕದ ಮನೆಗಳಲ್ಲಿನ ಪಡಿತರವನ್ನು ಪರೀಕ್ಷಿಸಿದಾಗ ಅವುಗಳಲ್ಲೂ ಗೊಬ್ಬರದ ಹರಳು ಕಂಡುಬಂದಿದೆ. ಗ್ರಾಮಸ್ಥರೆಲ್ಲಾ ಸೇರಿ ಈ ಬಗ್ಗೆ ಸಂಬಂಧಿಸಿದವರಿಗೆ ಮಾಹಿತಿ ನೀಡಲಾಗಿದೆ. ತಹಶೀಲ್ದಾರರ ಆದೇಶದ ಅನ್ವಯ ತಕ್ಷಣ ಪಡಿತರ ವಿತರಣೆಯನ್ನು ನಿಲ್ಲಿಸಲಾಗಿದೆ. ಗುರುವಾರ ಬೆಳಿಗ್ಗೆ ಗ್ರಾಮಕ್ಕೆ ಆಹಾರ ಪರಿವೀಕ್ಷಕ ಮಂಜುನಾಥ ಮತ್ತು ವಿತರಕ ರಾಮಚಂದ್ರರೆಡ್ಡಿ ಬೇಟಿ ನೀಡಿ ಪ್ರತಿ ಮನೆಯಲ್ಲಿ ಪರೀಕ್ಷಿಸಿದಾಗ ಎಲ್ಲದರಲ್ಲೂ ಮಿಶ್ರಣ ಕಂಡುಬಂದಿದೆ. ಸಾರ್ವಜನಿಕರ ಸೂಚನೆಯಂತೆ ಪಡಿತರ ಕೇಂದ್ರದ ದಾಸ್ತಾನುಗಳ ಮೂಟೆಗಳನ್ನು ಪರೀಕ್ಷಿಸಿದಾಗ ಅದರಲ್ಲೂ ಗೊಬ್ಬರ ಮಿಶ್ರಣ ಇರುವುದು ಖಾತ್ರಿಯಾಗಿದೆ. ಈ ಬಗ್ಗೆ ಸ್ಥಳೀಯರು ಆತಂಕಗೊಂಡು ಅದಿಕಾರಗಳ ಬೇಜವಾಬ್ದಾರಿಯ ಬಗ್ಗೆ ಬೇಸರೊಂಡಾಗ ಪುಡ್ ಇನ್ಸ್ಪೆಕ್ಟರ್ ಮಂಜುನಾಥ…
ಕೊರಟಗೆರೆ: ಪ್ರತಿ ತಿಂಗಳ ಮೊದಲನೇ ಶನಿವಾರ ಸ್ವಚ್ಛತಾ ಆಂದೋಲನ ಕಾರ್ಯಕ್ರಮದ ಅಂಗವಾಗಿ ಪಟ್ಟಣದ ತಾಲ್ಲೂಕು ಕಚೇರಿಯ ಆವರಣದಲ್ಲಿ ನೂತನ ತಹಶೀಲ್ದಾರ್ ಮುನಿಸ್ವಾಮಿ ರೆಡ್ಡಿ ಕಚೇರಿ ಆವರಣದಲ್ಲಿ ಕಸ ಕಡ್ಡಿ ಇನ್ನಿತರೆ ತ್ಯಾಜ್ಯ ವಸ್ತುಗಳನ್ನ ಸ್ವಚ್ಛತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಆದೇಶದಂತೆ ತುಮಕೂರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ರತಿ ತಿಂಗಳ ಮೊದಲನೇ ಶನಿವಾರ ಸ್ವಚ್ಛತಾ ದಿನವನ್ನಾಗಿ ಆಚರಿಸಿ ಕಚೇರಿ ಆವರಣವನ್ನು ಸ್ವಚ್ಛವಾಗಿ ಇರಿಸಿಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಉದ್ದೇಶ ತುಂಬಾ ಚೆನ್ನಾಗಿದೆ. ಮೊದಲು ನಾವಿರುವ ಜಾಗ ಸ್ವಚ್ಛತೆಯಿದ ಇರಬೇಕು. ನಮ್ಮ ನಮ್ಮ ಇಲಾಖೆ ಕಚೇರಿಗಳನ್ನ ಸ್ವಚ್ಛವಾಗಿ ಇರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಆದ್ದರಿಂದ ನಾನು ಬಂದ ಮೊದಲನೇ ದಿನವೇ ಕಚೇರಿಯನ್ನು ಗಮನಿಸಿದೆ . ನಮ್ಮ ಇಲಾಖೆಯ ಸಿಬ್ಬಂದಿ ಗೂ ತುಂಬಾ ಸ್ವಚ್ಛತೆಯಿಂದ ಕಾಪಾಡಿಕೊಂಡಿದ್ದಾರೆ. ಕಚೇರಿ ಆವರಣದಲ್ಲಿ ಮಾತ್ರ ಸ್ವಲ್ಪ ಕಸ ಕಡ್ಡಿ ಇದ್ದಿದ್ದರಿಂದ ಅದನ್ನು ಕೂಡ ಇಂದು ಸ್ವಚ್ಛತೆಯ ಕಾರ್ಯಕ್ರಮದ…
ತುರುವೇಕೆರೆ: ಎರಡನೇ ತರಗತಿಯ ವಿದ್ಯಾರ್ಥಿಯೋರ್ವನಿಗೆ ಶಿಕ್ಷಕ ಕೋಲಿನಿಂದ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ತುರುವೇಕೆರೆ ತಾಲೂಕಿನ ದಂಡಿನಶಿವರ ಹೋಬಳಿ ಕಲ್ಕೆರೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ. ಈ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಜೆ.ರಂಗಸ್ವಾಮಿ ತರಗತಿಯ ಸಮಯದಲ್ಲಿ ಎರಡನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಮ್ರಾನ್ ಗೆ ಕೋಲಿನಿಂದ ಬಾಸುಂಡೆ ಬರುವ ರೀತಿಯಲ್ಲಿ ಬೆನ್ನು ಮತ್ತು ಬುಜದ ಮೇಲೆ ಹೊಡೆದಿದ್ದಾನೆ. ಶಿಕ್ಷಕ ಅಮಾನವೀಯವಾಗಿ ಥಳಿಸಿರುವ ವಿಚಾರವನ್ನು ಬಾಲಕ ಪೋಷಕರ ಗಮನಕ್ಕೆ ತಂದಿದ್ದು, ಈ ಬಗ್ಗೆ ಪೋಷಕರು ಊರಿನ ಸಾರ್ವಜನಿಕರೊಂದಿಗೆ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಸಭೆ ಕರೆದು ಶಿಕ್ಷಕ ರಂಗಸ್ವಾಮಿಯನ್ನು ತರಾಟೆ ತೆಗೆದುಕೊಂಡರು. ಶಾಲಾ ಆವರಣ ಮುಂದೆ ಸುಮಾರು ನೂರಾರು ಸಾರ್ವಜನಿಕರು, ಜಮಾಮಣೆಗೊಂಡು ಘಟನೆಯನ್ನು ಖಂಡಿಸಿದ್ದು, ಇದರ ಬೆನ್ನಲ್ಲೇ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ಮತ್ತು ಸಿ ಆರ್ ಪಿ ಅವರ ಗಮನಕ್ಕೆ ತಂದು ಇದರ…
ಬಿಹಾರದ ಸುಂದರ್ ಗಢ್ನಲ್ಲಿರುವ ಬ್ರಿಲಿಯಂಟ್ ಕಾನ್ವೆಂಟ್ ಶಾಲೆಯ ಪರೀಕ್ಷಾ ಹಾಲ್ನಲ್ಲಿ ಹುಡುಗಿಯರು ತುಂಬಿರುವುದನ್ನು ನೋಡಿದ 17 ವರ್ಷದ ಯುವಕ ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ನಡೆದಿದೆ. ಪರೀಕ್ಷೆ ಹಾಲ್ ತುಂಬಾ ಹುಡುಗಿಯರನ್ನು ನೋಡಿ ವಿದ್ಯಾರ್ಥಿ ಗೊಂದಲಕ್ಕೊಳಗಾಗಿದ್ದು, ಈ ಆಘಾತದಿಂದ ಈತ ತಲೆತಿರುಗಿ ಬಿದ್ದಿದ್ದಾನೆ ಎಂದು ಹೇಳಲಾಗಿದೆ. ಬಿಹಾರದ ಷರೀಫ್ ಅವರ ಅಲ್ಲಮ ಇಕ್ಬಾಲ್ ಕಾಲೇಜಿನ ವಿದ್ಯಾರ್ಥಿ ಮನೀಶ್ ಶಂಕರ್ ಪ್ರಸಾದ್ (17) ಪರೀಕ್ಷೆಯ ಸೀಸನ್ ನ ಮೊದಲ ದಿನ ಗಣಿತ ಪರೀಕ್ಷೆಗೆ ಹಾಜರಾಗಿದ್ದಾಗ ಕುಸಿದುಬಿದ್ದಿದ್ದಾನೆ. ವಿದ್ಯಾರ್ಥಿಯ ಪರೀಕ್ಷಾ ಕೇಂದ್ರವು ಸುಂದರ್ಗಢದ ಬ್ರಿಲಿಯಂಟ್ ಕಾನ್ವೆಂಟ್ ಶಾಲೆಯಾಗಿತ್ತು. ಪರೀಕ್ಷಾ ಕೇಂದ್ರವನ್ನು ತಲುಪಿದಾಗ, ಅಭ್ಯರ್ಥಿಗಳಲ್ಲಿ ಅವನು ಒಬ್ಬನೇ ಹುಡುಗ ಎಂದು ವಿದ್ಯಾರ್ಥಿಗೆ ಅರಿವಾಯಿತು. ಇದರಿಂದ ಗಾಬರಿಗೊಂಡ ವಿದ್ಯಾರ್ಥಿ ಸಭಾಂಗಣದಲ್ಲಿ ಕುಸಿದು ಬಿದ್ದಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1