Author: admin

ಮಾಜಿ ವಿಶ್ವ ಸುಂದರಿ, ನಟಿ ಪ್ರಿಯಾಂಕಾ ಚೋಪ್ರಾ ಹಲವು ವರ್ಷಗಳ ಬಳಿಕ ಭಾರತಕ್ಕೆ ಮರಳಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಮತ್ತು ತಾರತಮ್ಯವನ್ನು ಕೊನೆಗೊಳಿಸಲು ಯುನಿಸೆಫ್ ಕಾರ್ಯಗಳ ಪ್ರಗತಿಯನ್ನು ನೋಡಲು ಅವರು ಉತ್ತರ ಪ್ರದೇಶದ ಲಕ್ನೋಗೆ ಭೇಟಿ ನೀಡಿದ್ದಾರೆ. ಅಂದಹಾಗೆ ಪ್ರಿಯಾಂಕಾ ಚೋಪ್ರಾ ಯುನಿಸೆಫ್‌ನ ಸದ್ಭಾವನಾ ರಾಯಭಾರಿಯಾಗಿದ್ದು ಅವರು ತಮ್ಮ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವಿಷಯವನ್ನು ಪ್ರಿಯಾಂಕಾ ಚೋಪ್ರಾ ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ. ತಮ್ಮ ಭೇಟಿಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು “ಸದ್ಯ, ನಾನು ಯುನಿಸೆಫ್‌ನೊಂದಿಗೆ ಭಾರತದ ಲಕ್ನೋದಲ್ಲಿದ್ದೇನೆ. ನಾನು ಈ ಕ್ಷೇತ್ರ ಭೇಟಿಗಾಗಿ ನಿಜವಾಗಿಯೂ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಯುದ್ಧಕ್ಕೆ ಸಜ್ಜಾಗಿ ಗೆಲುವಿಗೆ ಹೋರಾಡಿ ಎಂದು ಸೇನೆಗೆ ಚೀನಾ ಅಧ್ಯಕ್ಷ ಕ್ಸಿಜಿನ್ ಪಿಂಗ್ ಕರೆ ನೀಡಿದ್ದಾರೆ. ಸತತ ಮೂರನೇ ಬಾರಿ 5 ವರ್ಷಗಳ ಅವಧಿಯ ಚೀನಾ ನ್ಯಾಷನಲ್ ಸೆಕ್ಯೂರೆಟಿ ಮುಖ್ಯಸ್ಥರಾಗಿ ನೇಮಕಗೊಂಡ ನಂತರ ಸೇನೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, ಸೇನೆಯಲ್ಲಿ ಅತ್ಯಂತ ಅಸ್ಥಿರ ಕಾಡುತ್ತಿದ್ದು, ಎಲ್ಲರೂ ಒಗ್ಗಟ್ಟಾಗಬೇಕಿದೆ ಎಂದರು. ಪಕ್ಷದ ಮೂರು ಪ್ರಮುಖ ಹುದ್ದೆಗಳನ್ನು ಹೊಂದಿರುವ ಕ್ಸಿ ಜಿನ್ ಪಿಂಗ್, ಚೀನಾ ಸೇನೆ ಹಿಂದೆದಿಗಿಂತಲೂ ಹೆಚ್ಚು ಸವಾಲುಗಳನ್ನು ಎದುರಿಸುತ್ತಿದ್ದು, ಅದರ ವಿರುದ್ಧ ಹೋರಾಡಿ ಗೆಲ್ಲಬೇಕಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಎಎಸ್ ಐ ನಾರಾಯಣಸ್ವಾಮಿ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರ ಪುತ್ರನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಪೇರೇಸಂದ್ರ ಗ್ರಾಮದಲ್ಲಿನ ಎಎಸ್ ಐ ನಾರಾಯಣ ಸ್ವಾಮಿ ಮನೆಯಲ್ಲಿ ಈ ಘಟನೆ ನಡೆದಿದೆ. ನಾರಾಯಣ ಸ್ವಾಮಿ ಅವರ ಪುತ್ರ ಶರತ್ ಗೆ ಮೂರು ಗುಂಡು ತಗುಲಿದ್ದು, ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ನಾಲ್ವರು ದುಷ್ಕರ್ಮಿಗಳು ಮನೆಗೆ ನುಗ್ಗಿ ಶರತ್ ಮೇಲೆ ಗುಂಡು ಹಾರಿಸಿ ಪತ್ನಿ ಹಾಗೂ ಸೊಸೆ ಮೈಮೇಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ತಾರಾ ಅವರ ಕಾರು ಚಾಲಕನ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾರಾ ಅವರ ಕಾರು ಚಾಲಕ ಅಕ್ಷಯ್ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅಕ್ಟೋಬರ್ 29ರಂದು ನಟಿ ತಾರಾ ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕ ಅಕ್ಷಯ್ ಮುಂದೆ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ಗುದ್ದಿದ್ದಾರೆ. ಮುಂದೆ ಇದ್ದ ಕಾರು ಜಖಂಗೊಂದಿತ್ತು, ಅಕ್ಷಯ್ ಅವರ ಅಜಾಗರೂಕ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎಂದು ಮುಂದಿನ ಕಾರಿನಲ್ಲಿದ್ದ ಗಿರೀಶ್ ಅವರು ಆರೋಪಿಸಿದ್ದರು. ಘಟನಾ ನಂತರ ಕಾರು ರಿಪೇರಿ ಮಾಡಿಸುವುದಾಗಿ ಅಕ್ಷಯ್ ಭರವಸೆ ನೀಡಿದ್ದರು. ಆದರೆ ರಿಪೇರಿ ಮಾಡಿಸದೇ ನಂತರ ಸಾಕಷ್ಟು ಬಾರಿ ಅಲೆದಾಡಿಸಿದ್ದಾರೆ ಎಂದು ಮತ್ತೊಂದು ಕಾರಿನ ಗಿರೀಶ್ ದೂರು ನೀಡಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ‘ಅಜಾಗರೂಕ ಚಾಲನೆ’ ಎಂದು ಪ್ರಕರಣ ದಾಖಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ದೇವರ ಹರಕೆ ತೀರಿಸಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ ಮೂವರು ಲಾರಿಗೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದಲ್ಲಿ ಸಂಭವಿಸಿದೆ. ಗೋಗಿ ತಾಂಡ ನಿವಾಸಿಗಳಾದ ದೀಪಕ್ (45), ಯುವರಾಜ್ (17) ಮತ್ತು ರಾಹುಲ್ (17) ಮೃತಪಟ್ಟ ದುರ್ದೈವಿಗಳು. ಗೋಗಿ ತಾಂಡಾದಿಂದ ಸಾವಳಗಿ ತಾಂಡಗೆ ದೇವರಿಗೆ ಹರಕೆ ತೀರಿಸಲು ಕುಟುಂಬ ಸಮೇತರಾಗಿ ತೆರಳಿದ್ದರು. ಕುಟುಂಬದವರು ಬೇರೆ ವಾಹನದಲ್ಲಿ ಮರಳಿದರೆ, ಈ ಮೂವರು ಬೈಕ್ ನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಶವಗಳನ್ನು ಸಾಗಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆಗೆ ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ. ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ವಾರ್ಡ್ ಕಚೇರಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಗೆ ಮತದಾರರ ಪಟ್ಟಿ ಪರಿಶೀಲಿಸಲು ಅವಕಾಶ ನೀಡಲಾಗಿದೆ. ತಮ್ಮ ಮೊಬೈಲ್​ನಲ್ಲಿ VHA ಆ್ಯಪ್ ಅಥವಾ NVSP ವೆಬ್​ಸೈಟ್ ​ಮೂಲಕ ಮಾಹಿತಿ ಪಡೆಯಬಹುದಾಗಿದೆ. e-EPIC download ಮಾಡಿಕೊಳ್ಳಲು ಇನ್ನಿತರ ಮತಗಟ್ಟೆ, ಶೇಕಡಾವಾರು ಮತದಾನದ ಮಾಹಿತಿ ಪಡೆಯಬಹುದು. ಈ ಹಿಂದೆ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 8614 ಮತಗಟ್ಟೆಗಳಿದ್ದವು. ಪ್ರಸ್ತುತ 8615 ಮತಗಟ್ಟೆಗಳಿವೆ. ಮತದಾರರ ಪಟ್ಟಿಯಲ್ಲಿ ದೋಷಗಳಿದ್ದರೆ ಆಕ್ಷೇಪಣೆ ಸಲ್ಲಿಸಲು ಒಂದು ತಿಂಗಳು ಅವಕಾಶ ಇದೆ. ಅಂದರೆ 8-12-22 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಅಂತಿಮ‌ ಮತದಾರರ ಪಟ್ಟಿಯನ್ನು 5-1-2023 ಕ್ಕೆ ಪ್ರಕಟಿಸಲಾಗುತ್ತೆ ಎಂದು ತುಷಾರ್ ಗಿರಿನಾಥ್​ ತಿಳಿಸಿದರು. ಇ-ಲಿಸ್ಟ್ ಇಂದು ಪ್ರಕಟನೆ ಮಾಡಿದ್ದೇವೆ. ಅದರ ಆಧಾರದ…

Read More

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಪ್ರಚೋದನೆ ನೀಡಿದ್ದಾರೆ ಎಂಬ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಿಜೆಪಿ ಹಿರಿಯ ಮುಖಂಡರಾದ ಎಲ್ ಕೆ ಆಡ್ವಾಣಿ, ಉಮಾಭಾರತಿ, ಮನೋಹರ್ ಜೋಷಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಸರೋಜ್ ಯಾದವ್ ಅವರನ್ನೊಳಗೊಂಡ ಪೀಠ, ಅಡ್ವಾಣಿ, ಉಮಾ ಭಾರತಿ, ದಿವಂಗತ ಕಲ್ಯಾಣ್ ಸಿಂಗ್, ಮನೋಹರ್ ಜೋಷಿ ಸೇರಿದಂತೆ 32 ಮಂದಿ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದೆ. ಅಯೋಧ್ಯೆಯ ಇಬ್ಬರು ಮುಸ್ಲಿಮ್ ಮುಖಂಡರು ಬಾಬ್ರಿ ಮಸೀದಿ ಧ್ವಂಸಗೊಳಿಸಿ ರಾಮ ಮಂದಿರ ಸ್ಥಾಪನೆಗೆ ಪ್ರಚೋದನೆ ನೀಡಿ ಗಲಭೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಇವರ ಮೇಲಿದ್ದ ಆರೋಪಗಳನ್ನು ವಜಾಗೊಳಿಸಿದ್ದ ಸಿಬಿಐ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು. 2020ರಲ್ಲಿ ಸಿಬಿಐ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವ ಯೋಜಿತ ಕೃತ್ಯ ಎಂದು ಹೇಳಿತ್ತು. ಆದರೆ ಅದೇ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆ ಹಾಗೂ ಸುಪ್ರೀಂಕೋರ್ಟ್ ವಿವಾದ ಬಗೆ…

Read More

ಭಾರತ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಪತ್ನಿ ಹೆಸರು ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯ ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಿದ್ದು, ಸಂಭಾವ್ಯ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಹಲವು ಘಟಾನುಘಟಿಗಳ ಜೊತೆ ರವೀಂದ್ರ ಜಡೇಜಾ ಅವರ ಪತ್ನಿ ಕೂಡ ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ. ಜಡೇಜಾ ಪತ್ನಿ ರಿವಾಬಾ ಜಡೇಜಾ ಮೆಕಾನಿಕಲ್ ಇಂಜಿನಿಯರ್ ವಿದ್ಯಾಭ್ಯಾಸ ಮಾಡಿದ್ದು, ರಿವಾಬಾ ಅವರ ಸಂಬಂಧಿ ಹರಿ ಸಿಂಗ್ ಸೋಲಾಂಕಿ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದಾರೆ. ಕರ್ಣಿಸೇನಾ ಮುಖಂಡರಲ್ಲಿ ಒಬ್ಬರಾಗಿರುವ ರಿವಾಬಾ ಜಡೇಜಾ ರಜಪುತ್ ಸಮುದಾಯದವರಾಗಿದ್ದಾರೆ. ರವೀಂದ್ರ ಜಡೇಜಾ ಅವರನ್ನು 2016ರಲ್ಲಿ ವಿವಾಹ ಆಗಿದ್ದಾರೆ. ಗುಜರಾತ್ ನಲ್ಲಿ 27 ವರ್ಷಗಳಿಂದ ಬಿಜೆಪಿ ಆಡಳಿತ ನಡೆಸುತ್ತಿದೆ. ಪ್ರಧಾನಿ ಮೋದಿ ತವರೂರಾದ ಈ ರಾಜ್ಯದ ವಿಧಾನಸಭೆ ಚುನಾವಣೆ ಬಿಜೆಪಿಗೆ ಪ್ರಮುಖವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ದೇಶದಲ್ಲೇ ದೆಹಲಿ ಮತ್ತು ಮುಂಬೈ ಹೊರತುಪಡಿಸಿದರೆ 2ನೇ ಟರ್ಮಿನಲ್ ಹೊಂದಿದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ರಾಜ್ಯದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಲಿದೆ. ಶುಕ್ರವಾರ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರಮೋದಿ ಅವರು 2ನೇ ಟರ್ಮಿನಲ್‍ಗೆ ಉದ್ಘಾಟನೆ ಮಾಡಲಿದ್ದಾರೆ. ಇದರಿಂದ ಇನ್ನುಮುಂದೆ ವಿಮಾನ ನಿಲ್ದಾಣಕ್ಕೆ ದೇಶ-ವಿದೇಶಗಳಿಂದ ಬಂದುಹೋಗುವ ವಿಮಾನಗಳು ಮತ್ತು ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಲಿದೆ. ಟರ್ಮಿನಲ್-2ನ್ನು ಗಾರ್ಡನ್ ಟರ್ಮಿನಲ್ ಎಂದು ಬಿಲ್ ಮಾಡಲಾಗಿದೆ. ಉದ್ಯಾನ ನಗರಿ ಬೆಂಗಳೂರಿನ ಅಭಿವೃದ್ಧಿ ನೀತಿಯನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ವಿಶೇಷವಾಗಿ ಟರ್ಮಿನಲ್ ಅನ್ನು ವಿನ್ಯಾಸಗೊಳಿಸಲಾಗಿದೆ . ಒಟ್ಟು 13,000 ಕೋಟಿ ರೂ. ವೆಚ್ಚದಲ್ಲಿ 2.55 ಲಕ್ಷ ಚದರ ಮೀ. ಟರ್ಮಿನಲ್-2 ನಿರ್ಮಾಣ ನಡೆಯುತ್ತಿದೆ. ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೂಪುಗೊಳ್ಳುತ್ತಿದೆ. 1.6 ಕೋಟಿ ಪ್ರಯಾಣಿಕರ ದಟ್ಟಣೆಯ ಹೊರೆ ತಗ್ಗಿಸಲು ಟರ್ಮಿನಲ್-2 (ಟಿ-2) ಸಿದ್ದಪಡಿಸಲಾಗಿದೆ. ಪ್ರತಿ ಗಂಟೆಗೆ 90 ವಿಮಾನಗಳ ಸಂಚಾರದೊಂದಿಗೆ ವಾರ್ಷಿಕ 3.6 ಕೋಟಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ…

Read More

ಬೆಂಗಳೂರು: ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂದು ಹೇಳಿಕೆ ನೀಡಿದ್ದ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದು, ಜನತೆಯಲ್ಲಿ ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ. ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮ ಹೇಳಿಕೆಯಲ್ಲಿ ತಪ್ಪು ಇದೆಯಾ ಎನ್ನುವ ಬಗ್ಗೆ ತನಿಖೆ ನಡೆಸುವಂತೆಯೂ ಕೋರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More