Subscribe to Updates
Get the latest creative news from FooBar about art, design and business.
- ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
- ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
- ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
- ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
- ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
- ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
- ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
- ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
Author: admin
ಬೀದರ್: ಪ್ರತಿ ಟನ್ ಕಬ್ಬಿಗೆ 3,200 ರೂ. ಬೆಲೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ರೈತರೊಬ್ಬರು ಉರುಳು ಸೇವೆ ಮೂಲಕ ಉರುಳು ಸೇವೆ ಮೂಲಕ ಗಮನಸೆಳೆದಿದ್ದಾರೆ. ಶನಿವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ರೈತರು ಭಾಗವಹಿಸಿ ಸರಕಾರದ ವಿರುದ್ಧ ಘೋಷಣೆಗಳು ಕೂಗಿದರು. ನಂತರದಲ್ಲಿ ಹುಡಗಿ ಗ್ರಾಮದ ರೈತ ಕರಬಸಪ್ಪ ಮಲಶೆಟ್ಟಿ ಅವರು ಅಂಬೇಡ್ಕರ್ ವೃತ್ತದಿಂದ ಉಸ್ತುವಾರಿ ಸಚಿವರ ಕಾರ್ಯಾಲಯದವರೆಗೆ ರಸ್ತೆ ಮೇಲೆಯೇ ಉರುಳು ಸೇವೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ, ಮೌಲಾ ಮುಲ್ಲಾ, ಆದಿನಾಥ್, ಖಾಸೀಮ್ ಅಲಿ, ಶಂಕರೆಪ್ಪಾ ಮರ್ಕಲ್, ಕೊಂಡಿಬಾ ಪಾಂಡ್ರೆ, ಶಿವರಾಜ್ ಪಾಟೀಲ್, ಬಾಬುರಾವ್ ಹೊನ್ನಾ, ಶಿವರಾಯ್ ಮುದಾಳೆ, ಖಾಶೆಪ್ಪಾ, ಧುಳಪ್ಪಾ, ರುದ್ರಸ್ವಾಮಿ, ಸಂತೋಷ ಗುದಗೆ, ಮಲ್ಲಿಕಾರ್ಜುನ ಸಂಗಮ್, ನಝೀರ್ ಅಹ್ಮದ್, ಪ್ರಕಾಶ್, ಶಾಂತಮ್ಮ, ಶಿವಲೀಲಾ, ವಿಜಯಕುಮಾರ್, ವೀರಾರೆಡ್ಡಿ, ನಾಗಶೆಟ್ಟಿ, ಭೀಮರಾವ್, ಖಮರ್ ಪಟೇಲ್, ವಿಜಯ್ ರೆಡ್ಡಿ, ನಾಗಶೆಟ್ಟಿ, ಮುಖೀಮುದ್ದೀನ್, ಖಾನಸಾಬ್, ಸಂಜು ಪಾಟೀಲ್, ಬಾಬುರಾವ ಪಾಟೀಲ್,…
ತುಮಕೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಪ್ರಥಮ ವರದಿ ಸಲ್ಲಿಕೆಯ ಸುವರ್ಣ ಮಹೋತ್ಸವದ ನೆನಪಿಗಾಗಿ ನ.19ರಂದು ಹಿಂದುಳಿದ ವರ್ಗಗಳ ಆಯೋಗದ ಕರ್ನಾಟಕ ರಾಜ್ಯ ವತಿಯಿಂದ ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಬೆಂಗಳೂರಿನ ಮಿಲ್ಲರ್ ಬ್ಯಾಂಕ್ ಏರಿಯಾ ದೇವರಾಜು ಅರಸು ಭವನದಲ್ಲಿ ಅಂದು ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು, ಹಾವನೂರು ಪ್ರತಿಮೆ ಅನಾವರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸುವರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ ಎಸ್.ತಂಗಡಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಕೆ.ಜೆ. ಜಾರ್ಜ್, ಕೃಷ್ಣಬೈರೇಗೌಡ, ಭೈರತಿ ಸುರೇಶ್, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ರಿಜ್ವಾನ್ ಹರ್ಷದ್, ಡಾ.ಶಾಲಿನಿ ರಜನೀಸ್, ಪ್ರೊ. ರವಿವರ್ಮಕುಮಾರ್ ಉಪಸ್ಥಿತರಿರುವರು. ಶಿಲ್ಪಿ ಪುಟ್ಟಸ್ವಾಮಿ ಗುಡಿಗಾರ ಅವರನ್ನು ಇದೇ ವೇಳೆ ಸನ್ಮಾನಿಸಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ತುಮಕೂರು ಜಿಲ್ಲಾ ಸಹಕಾರ ಯೂನಿಯನ್, ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಸಹಕಾರ ಇಲಾಖೆ, ತುಮಕೂರು ಹಾಗೂ ತುಮಕೂರು ಜಿಲ್ಲೆಯ ಎಲ್ಲಾ ಮಹಿಳಾ ಸಹಕಾರ ಸಂಘಗಳ ಸಹಯೋಗದಲ್ಲಿ ನಾಳೆ (ನ.18) ಬೆಳಗ್ಗೆ 11 ಗಂಟೆಗೆ ಜ್ಞಾನಧಾರ ಸಭಾಭವನ, ಮಹಿಳಾ ಸಮಾಜ, ಎಂ.ಜಿ.ರಸ್ತೆ, ತುಮಕೂರು ಇಲ್ಲಿ 72ನೆ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಉದ್ಯಮ ಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗ ಸಬಲೀಕರಣ ದಿನವನ್ನು ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಯನ್ನು ತಮಕೂರು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರಾದ ಎಸ್.ಆರ್. ಶಾಂತಲಾ ರಾಜಣ್ಣ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಜಿಲ್ಲ ಸಹಕಾರ ಯೂನಿಯನ್ ನ ಅಧ್ಯಕ್ಷರಾದ ಬಿ.ಜಿ.ವೆಂಕಟೇಗೌಡ ಅವರು ವಹಿಸುವರು. ವಿಶೇಷ ಆಹ್ವಾನಿತರಾಗಿ ಎನ್.ಗಂಗಣ್ಣ, ಎಂ.ಎಸ್.ವಿಜಯಕುಮಾರ್, ಟಿ.ಎನ್.ಆಶಾಕಿರಣ್, ಹೆಚ್.ಆರ್.ಶಾಲಿನಿ, ಮುಖ್ಯ ಅತಿಥಿಗಳಾಗಿ ಬಿ.ಸಿ.ಉಮೇಶ್, ಎಸ್.ಲಕ್ಷ್ಮೀನಾರಾಯಣ್, ಹೆಚ್.ಕೆ.ರೇಣುಕಾಪ್ರಸಾದ್, ಪಿ.ಮೂರ್ತಿ, ನರಸಮ ಕವನಯ್ಯ, ಸುನೀತಾ ನಟರಾಜ್, ಉಮಾದೇವಿ, ಎಂ.ರವಿ ಮತ್ತಿತರರು ಆಗಮಿಸುವರು.…
ತುಮಕೂರು: ಮ್ಯಾಜಿಕ್ ಸ್ಟೇರ್ ಚೆಸ್ ಅಕಾಡೆಮಿ, ತುಮಕೂರು ಸಂಸ್ಥೆಯ ಆಶ್ರಯದಲ್ಲಿ ಆಲ್ ಇಂಡಿಯಾ FIDE ರೇಟೆಡ್ ರಾಪಿಡ್ ಚೆಸ್ ಟೂರ್ನಮೆಂಟ್–2025 ಸ್ಪರ್ಧೆಯನ್ನು ನವೆಂಬರ್ 30 ತುಮಕೂರು ಎಂ.ಜಿ. ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಗೆ 4,00,000 ಮೊತ್ತದ ನಗದು ಬಹುಮಾನಗಳು, 52 ಟ್ರೋಫಿಗಳು ಹಾಗೂ 50 ಪದಕಗಳು ವಿವಿಧ ವಿಭಾಗಗಳಲ್ಲಿ ಪ್ರದಾನವಾಗಲಿವೆ. ಸ್ಪರ್ಧೆಯನ್ನು ಸ್ವಿಸ್ ಸಿಸ್ಟಮ್ ನಿಯಮಾನುಸಾರ ನಡೆಸಲಾಗುತ್ತದೆ. ಈ ಟೂರ್ನಮೆಂಟ್ ಆಲ್ ಇಂಡಿಯಾ ಚೆಸ್ ಫೆಡರೇಶನ್, ಕರ್ನಾಟಕ ರಾಜ್ಯ ಅಸೋಸಿಯೇಶನ್ ಮತ್ತು ತುಮಕೂರು ಜಿಲ್ಲಾ ಚೆಸ್ ಅಸೋಸಿಯೇಶನ್ ಅವರ ಅಶ್ರಯದಲ್ಲಿ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗೆ: ದೀಕ್ಷಿತ್ ಜೆ ಮೊ: 7892504742: magicsquareacademy64@gmail.com ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ನಡೆಸಲಿದ್ದಾರೆ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದ ಪ್ರಧಾನಿ ಮೋದಿ ಅವರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕಬ್ಬು ದರ ನಿಗದಿ ಮಾಡೋದು, FRP ನಿಗದಿ ಮಾಡೋದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರ 2024–25 ಮತ್ತು 2025–26ಕ್ಕೆ FRP, ದರ ನಿಗದಿ ಮಾಡಿದೆ. 3,550 ರೂ. ಕೇಂದ್ರ ನಿಗದಿ ಮಾಡಿದೆ. ಈಗ ನಮ್ಮ ರೈತರು ಹೆಚ್ಚು ಮಾಡಿಕೊಡಿ ಅಂತ ಕೇಳ್ತಿದ್ದಾರೆ. ಕಾರ್ಖಾನೆ ಅವರು ಜಾಸ್ತಿ ಕೊಡಬೇಕು. ಇಲ್ಲ ಸರ್ಕಾರ ಕೊಡಬೇಕು. ನಾವು ಹೇಳಿದ್ವಿ ಸರ್ಕಾರ ಕೊಡಲು ಬರೊಲ್ಲ ಅಂತ. ಆದರೂ ಕೂಡಾ ನಮ್ಮ ರೈತರ ಹಿತದೃಷ್ಟಿಯಿಂದ 50 ರೂ. ಪ್ರತಿ ಟನ್ ಗೆ ಜಾಸ್ತಿ ಮಾಡ್ತೀವಿ ಅಂತ ಸಿಎಂ ಘೋಷಣೆ ಮಾಡಿದ್ದಾರೆ. 50 ರೂ. ಮಾಲೀಕರು ಕೊಡಬೇಕು ಅಂತ ಆಗಿದೆ. ಅದಕ್ಕೆ…
ಪಾವಗಡ: ಆಗ್ನೆಯ ಪದವೀಧರರ ಕ್ಷೇತ್ರ ವ್ಯಾಪ್ತಿಯ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಮತ್ತು ದಾವಣಗೆರೆ (ಹರಿಹರ, ಜಗಳೂರು ದಾವಣಗೆರೆ ತಾಲೂಕುಗಳು) ಸೇರಿ ಜಿಲ್ಲೆಗಳು ಒಳಪಟ್ಟಿದ್ದು ಮತದಾರರರ ಪಟ್ಟಿಯಲ್ಲಿ ಹೆಸರು ಸೇರಿಸುವ ಸಲುವಾಗಿ ಈಗಾಗಲೇ ಮತದಾರರ ನೋಂದಣಿ ಮುಗಿದಿದೆ, ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಭಾರತೀಯ ಜನತಾ ಪಕ್ಷ ಕಾನೂನು ಪ್ರಕೋಷ್ಟದ ಸಂಚಾಲಕರಾದ ವಸಂತ್ ಕುಮಾರ್ ರವರು ಮತ್ತೊಂದು ಸುತ್ತಿನ ಪಧವೀಧರರ ನೋಂದಣಿ ಪ್ರಕ್ರಿಯೆಯು ನವೆಂಬರ್ 25 ರಿಂದ ಡಿಸೆಂಬರ್ 10ರವರೆಗೆ ನಡೆಯಲಿದ್ದು ಈಗಾಗಲೇ ನೋಂದಣಿಯಾಗಿರುವವರು ತಮ್ಮ ಹಕ್ಕು ಆಕ್ಷೇಪಣೆಗಳು ಏನಾದರೂ ಇದ್ದರೆ ನವೆಂಬರ್ 25 ರ ನಂತರ ತಮ್ಮ ತಮ್ಮ ತಾಲ್ಲೂಕು ಕಛೇರಿಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಯಾಗಿರುವುದರಿಂದ ಪದವೀಧರರಿಗೆ ವೈಯುಕ್ತಿಕವಾಗಿ ಅಭಿನಂದಿಸುತ್ತೇನೆ. ಮೊದಲನೇ ಹಂತದಲ್ಲಿ ಕಳೆದ ಬಾರಿಯ ಚುನಾವಣೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಬದ್ಧ ಮತದಾನದ ಹಕ್ಕನ್ನು ತಾವೆಲ್ಲರೂ ಚಲಾಯಿಸುವ ಮೂಲಕ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದರು. ಮುಂದಿನ…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಗೌಡನಹಳ್ಳಿ ತೋಟದ ಮನೆಯಲ್ಲಿ ಗುರುವಾರ ಗೌರಮ್ಮ (55) ಮೃತಪಟ್ಟಿದ್ದು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಗೌರಮ್ಮ ಅವರ ಮಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗೌರಮ್ಮ ಮತ್ತು ಆಕೆಯ ಮಗ ಇಬ್ಬರೇ ತೋಟದ ಮನೆಯಲ್ಲಿ ವಾಸವಿದ್ದರು. ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದ ಮಗ, ಮಧ್ಯಾಹ್ನ ತಾಯಿಯ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿರುವುದನ್ನು ಕಂಡು ಗಾಬರಿಗೊಂಡಿದ್ದರು. ತಕ್ಷಣ ಮನೆಗೆ ಮರಳಿದಾಗ ಗೌರಮ್ಮ ಮೃತಪಟ್ಟಿರುವುದು ತಿಳಿದುಬಂದಿದೆ. ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಮೀನು ವಿಚಾರವಾಗಿ ನಮಗೂ ಮತ್ತು ನಮ್ಮ ದೊಡ್ಡಪ್ಪ ಅವರಿಗೂ ಆಗ್ಗಾಗ್ಗೆ ಜಗಳ ನಡೆಯುತ್ತಿತ್ತು. ಈ ಘಟನೆಗೂ ಅವರಿಗೂ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲೆಯ ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿರುವ 110.45 ಕೋಟಿ ಹಣವನ್ನು ವಾರಸುದಾರರಿಗೆ ತಲುಪಿಸಲು ಮೂರು ತಿಂಗಳ ಕಾಲ ‘ನಿಮ್ಮ ಹಣ ನಿಮ್ಮ ಹಕ್ಕು’ ಅಭಿಯಾನವನ್ನು ಆರ್ ಬಿಐ ಹಮ್ಮಿಕೊಂಡಿದೆ. ನಗರದ ಶುಕ್ರವಾರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಬ್ಯಾಂಕ್ ವ್ಯವಸ್ಥಾಪಕ ಚೈತನ್ಯ ಕಂಚಿಬೈಲು ಈ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ 26 ಬ್ಯಾಂಕ್ ಗಳ 373 ಶಾಖೆಗಳಲ್ಲಿ 4,11,477 ಖಾತೆಗಳು ನಿಷ್ಕ್ರಿಯಗೊಂಡಿವೆ. ಈ ಖಾತೆಗಳಲ್ಲಿ ಒಟ್ಟು 110.45 ಕೋಟಿ ಹಣ ಇದೆ. ಸಂಬಂಧಿಸಿದವರು ಅಗತ್ಯ ದಾಖಲೆ ಸಲ್ಲಿಸಿ ಖಾತೆ ಸಕ್ರಿಯಗೊಳಿಸಬಹುದು. 10 ವರ್ಷಗಳಿಂದ ಖಾತೆ ನಿಷ್ಕ್ರಿಯಗೊಂಡಿದ್ದರೆ ಅದು ಆರ್ ಬಿಐಗೆ ವರ್ಗಾವಣೆ ಆಗಿರುತ್ತದೆ. ಅಂತಹ ಖಾತೆಯನ್ನೂ ಸಕ್ರಿಯಗೊಳಿಸಲಾಗುವುದು ಎಂದರು. ಮೃತಪಟ್ಟ ಗ್ರಾಹಕರ ಸಂಬಂಧಿಕರು ಅಗತ್ಯ ದಾಖಲೆ ನೀಡಿ ಖಾತೆಯಲ್ಲಿರುವ ಹಣ ಪಡೆಯಬಹುದು. ನಿಷ್ಕ್ರಿಯಗೊಂಡಿರುವ ಬ್ಯಾಂಕ್ ಖಾತೆ ಸಕ್ರಿಯಗೊಳಿಸುವ ಪ್ರಕ್ರಿಯೆ ಡಿಸೆಂಬರ್ ವರೆಗೆ ನಡೆಯಲಿದೆ ಎಂದು ಹೇಳಿದರು. ಆರ್…
ತುಮಕೂರು: ನಗರ ಹೊರವಲಯದಲ್ಲಿ ಗಣಿಗಾರಿಕೆ ಎಗ್ಗಿಲ್ಲದೆ ನಡೆಯುತ್ತಿದ್ದು, ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ. ನೀವು ಪ್ರತಿ ತಿಂಗಳು ಸಂಬಳ ಎಣಿಸಿಕೊಂಡು ಮನೆಗೆ ಹೋಗಿ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಾಲ್ಲೂಕಿನ ಅಮಲಾಪುರ, ಅಜ್ಜಪ್ಪನಹಳ್ಳಿ ಬಳಿಯ ಕ್ರಷರ್ ಗಣಿಗಾರಿಕೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಯಮ ಉಲ್ಲಂಘಿಸಿ ಗಣಿಗಾರಿಕೆ ನಡೆಸುತ್ತಿರುವುದು ಕಂಡು ಬಂತು. ಅಧಿಕಾರಿಗಳು ಅರಣ್ಯ ಜಾಗದಲ್ಲಿ ಗಣಿಗಾರಿಕೆ ನಡೆಸಲು ಬಿಟ್ಟು, ಕೆರೆಯಲ್ಲಿ ಗಿಡ ಬೆಳೆಸುತ್ತಿದ್ದಾರೆ. ಕಂದಾಯ ಇಲಾಖೆಯವರಿಗೆ ಇದು ಗೊತ್ತೇ ಇಲ್ಲ ಎಂದರು. ಕ್ರಷರ್ ಮಾಲಿಕರು ತಮಗಿಷ್ಟ ಬಂದಂತೆ ಗುಡ್ಡ ಕೊರೆದಿದ್ದಾರೆ. ಯಾವುದೇ ಗಡಿ ಗುರುತಿಸಿಲ್ಲ. ಬೆಂಚ್ ಮಾರ್ಕ್, ಬಫರ್ ರೋವ್ ಸಹ ಇಲ್ಲ. ಎಲ್ಲ ಹೊಡೆದುಕೊಂಡು ಹೋಗಿದ್ದಾರೆ. ಗಡಿಯಿಂದ ಮೂರು ಕಡೆ 7 ಮೀಟರ್ ಬಫರ್ ರೋಪ್ ಬಿಡಬೇಕು. ಎಲ್ಲಿ ಬಿಟ್ಟಿದ್ದಾರೆ ತೋರಿಸಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಮಧ್ಯೆ…
ಕೊಡಿಗೇನಹಳ್ಳಿ: ಹೋಬಳಿಯ ಚಿಕ್ಕಮಾಲೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಮಮತ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶನಿವಾರ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಶನಿವಾರ ಬೆಳಿಗ್ಗೆ ಶಾಲೆಗೆ ಬಂದ ವಿದ್ಯಾರ್ಥಿಗಳು ತರಗತಿಗಳಿಗೆ ತೆರಳದೆ, ಮುಖ್ಯಶಿಕ್ಷಕಿ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶಾಲೆ ಮುಂದೆ ಜಮಾಯಿಸಿ ಪ್ರತಿಭಟಿಸಿದರು. ಮುಖ್ಯ ಶಿಕ್ಷಕಿ ತರಗತಿಗೆ ತೆರಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದಾಗ, ಶೌಚಕ್ಕೆ ಬಿಡುವುದಿಲ್ಲ, ಸರಿಯಾಗಿ ಮೊಟ್ಟೆ, ಬಾಳೆಹಣ್ಣು ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದರು. ಶಾಲೆಯ ಶೌಚಾಲಯದಲ್ಲಿ ನೀರಿನ ಸಮಸ್ಯೆ ಇರುವುದರಿಂದ ಶೌಚಾಲಯಕ್ಕೆ ಹೋಗಲು ಬಿಡುವುದಿಲ್ಲ. ಮೂರು ತಿಂಗಳಿನಿಂದ ಇಲ್ಲಿ ಹಿಂದಿ ಟೀಚರ್ ಇಲ್ಲದೆ ಸಮಸ್ಯೆಯಾಗಿದೆ ಎಂದು ದೂರಿದರು. ಪಿಎಸ್ ಐ ಶ್ರೀನಿವಾಸಪ್ರಸಾದ್ ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದರು. ಮಕ್ಕಳ ಶಿಕ್ಷಣಕ್ಕೆ ಕುಂದು ಬರದಂತೆ ಅಂತರಿಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಮುಖ್ಯ ಶಿಕ್ಷಕಿ ಹಾಗೂ ಸಹ ಶಿಕ್ಷಕರಿಗೆ ಸೂಚಿಸಿದರು. ವರ್ಷವಾದರೂ ಪೋಷಕರ ಸಭೆ ಕರೆದಿಲ್ಲ. ಕರೆದರೂ ಸಭೆಯಲ್ಲಿ ನಾವು ಮತ್ತು ಶಿಕ್ಷಕರು ಹೇಳುವ…