Author: admin

ತುಮಕೂರು: ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ಸೇ ಅಶ್ಲೀಲ ಎಂದು ಹಿಂದೂ ಅರ್ಥ ಅಶ್ಲೀಲ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ಸೇ ಅಶ್ಲೀಲ. ಇಷ್ಟು ದಿನ ಕಾಂಗ್ರೆಸ್ಸಿಗರು ಹಿಂದೂಗಳನ್ನ ಅವಮಾನ ಮಾಡುತ್ತಾ ಅಲ್ಪಸಂಖ್ಯಾತರ ಮತ ಪಡೆದುಕೊಂಡು ಅಧಿಕಾರದ ಕುರ್ಚಿ ಮೇಲೆ ಕುಳಿತಿದ್ರು ಎಂದು ಕಿಡಿಕಾರಿದ್ದಾರೆ. ಈಗ ಇಡೀ ರಾಜ್ಯ ಮತ್ತು ದೇಶದ ಜನಕ್ಕೆ ಕಾಂಗ್ರೆಸ್ಸೇ ಒಂದು ಅಶ್ಲೀಲ ಅಂತ ಗೊತ್ತಾಗಿದೆ. ಹಾಗಾಗಿ ಜನ ಕಾಂಗ್ರೆಸ್ ಪಕ್ಷವನ್ನ ತಿರಸ್ಕರಿಸಿದ್ದಾರೆ. ಈಗಾಗಲೇ ಹಿಂದೂಗಳಿಗೆ ಅವಮಾನ ಮಾಡಿದ್ದಕ್ಕೆ ಬೆಲೆ ತೆತ್ತಿದ್ದಾರೆ. ಮುಂದೆಯೂ ಬೆಲೆ ತೆರುತ್ತಾರೆ. ಇನ್ನೂ 5 ತಿಂಗಳಲ್ಲಿ ಚುನಾವಣೆ ಇದೆ. ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಈ ರೀತಿಯ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಧಾರವಾಡ, ನವೆಂಬರ್ 9 : ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಿಸಲು ಅವಕಾಶ ಪಾಲಿಕೆ ಅನುಮತಿ ಕೊಟ್ಟಿರುವುದರ ಬಗ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಇಲಾಖೆ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಮುತಾಲಿಕ್, ಬಿಜೆಪಿ ಆಡಳಿತದಲ್ಲಿ ಇರುವ‌ ಪಾಲಿಕೆ ಟಿಪ್ಪು ಜಯಂತಿಗೆ ಅನುಮತಿ ದ್ರೋಹ ಮಾಡಿದೆ ಎಂದು ಕಿಡಿಕಾರಿದ್ದಾರೆ. ಟಿಪ್ಪು ಜಯಂತಿಗೆ ಅವಕಾಶ ಮಾಡಿಕೊಟ್ಟು ಹಿಂದೂಗಳಿಗೆ ದ್ರೋಹ ಮಾಡಿದ್ದೀರಿ, ಇದನ್ನ ರದ್ದು ಮಾಡಿ ವಾಪಸ್ ಪಡೆಯಬೆಕು ಎಂದು ಅವರು ತಿಳಿಸಿದರು. ಗುರುವಾರ ಇದನ್ನು ವಿರೋಧಿಸಿ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಪಾಲಿಕೆಗೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಪಾಲಿಕೆಯಿಂದ ಷರತ್ತುಬದ್ಧ ಅನುಮತಿ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವುದಕ್ಕಾಗಿ ಎಐಎಂಐಎಂ ಹಾಗೂ ಕೆಲವು ದಲಿತ ಸಂಘಟನೆಗಳಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ಕೇಳಿದ್ದವು. ಇದರ ಬಗ್ಗೆ ಸುದೀರ್ಘ ಸಭೆ ನಡೆಸಿದ ಪಾಲಿಕೆ, ಈದ್ಗಾ ಮೈದಾನದಲ್ಲಿ…

Read More

ಬೆಳಗಾವಿ ‌ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಮತದಾರರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ನಗರದ ಜಿಲ್ಲಾಧಿಕಾರಿ ಆವರಣದಲ್ಲಿ ಬುಧವಾರ (ನ.9) ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ದರ್ಶನ್. ಹೆಚ್.ವಿ ಅವರು ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಆರಂಭಗೊಂಡ ಜಾಗೃತಿ ಜಾಥಾ ಚನ್ನಮ್ಮ ವೃತ್ತದ ಮಾರ್ಗವಾಗಿ ಸಂಚರಿಸಿ, ಬೋಗಾರ್ವಿಸ್ ಸರ್ಕಲ್ ವರೆಗೆ ತಲುಪಿತು. ಸರ್ದಾರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಸರ್ದಾರ್ ಶಿಕ್ಷಣ ಸಂಸ್ಥೆಯ ಪ್ರಶಿಕ್ಷಣಾರ್ಥಿಗಳು, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು. ಈ ಸಂಧರ್ಬದಲ್ಲಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಪರುಶರಾಮ ದುಡಗುಂಟಿ, ಬೆಳಗಾವಿ ಶಿಕ್ಷಣಾಧಿಕಾರಿ ರವಿ ಭಜಂತ್ರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ. ಎಂ ಕಾಂಬಳೆ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಮತ್ತು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾಗಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ,, ಪರಿಶೀಲನೆ ನಡೆಸಿ ನಂತರ ಸಿಬ್ಬಂದಿ , ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಿಳೆ ಮತ್ತು ಮಕ್ಕಳ ಸಾವಿನ ಬಗ್ಗೆ ಸಭೆ ನಡೆಸಿದ್ದೇನೆ. ಸರಿಯಾಗಿ ಕೆಲಸ ಮಾಡುವಂತೆ ಎಚ್ಚರಿಕೆ ನೀಡಿದ್ದೇನೆ. ಔಷಧ ಚೀಟಿಯನ್ನ ಹೊರಗೆ ಬರೆದುಕೊಡಬಾರದು. ಆಸ್ಪತ್ರೆಯೊಳಗೆ ನೀಡಬೇಕು ಎಂದು ಸೂಚಿಸಿದ್ದೇನೆ. ತಾಯಿ ಅವಳಿ ಮಕ್ಕಳ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗುತ್ತಿದೆ. ತನಿಖೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಆಸ್ಪತ್ರೆಯ ಕೊರತೆಗಳನ್ನ ಸರಿಪಡಿಸುತ್ತೇವೆ ಎಂದು ಸಚಿವ ಅರಗ ಜ್ಞಾನೇಂದ್ರ ನುಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ತಂದೆ ನಂತರ 44 ವರ್ಷಗಳ ನಂತರ ಸಿಜೆಎ ಹುದ್ದೆ ಅಲಂಕರಿಸಿದ ಮಗ ಎಂಬ ಗೌರವಕ್ಕೆ ಪಾತ್ರರಾದರು. ಡಿವೈ ಚಂದ್ರಚೂಡ್ ಮುಖ್ಯ ನ್ಯಾಯಮೂರ್ತಿಯಾಗಿ 2 ವರ್ಷಗಳ ಕಾಲ ಅಂದರೆ ನವೆಂಬರ್ 10, 2024ರವರೆಗೆ ಕಾರ್ಯ ನಿರ್ವಹಿಸಲಿದ್ಧಾರೆ. ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಡಿವೈ ಚಂದ್ರಚೂಡ್ ಸುಪ್ರೀಂಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ ಅವರ 74 ದಿನಗಳ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಜಾಗವನ್ನು ಚಂದ್ರಚೂಡ್ ಭರ್ತಿ ಮಾಡಿದರು. ವೈವೈ ಚಂದ್ರಚೂಡ್ ಸುಪ್ರೀಂಕೋರ್ಟ್ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿ 7 ವರ್ಷಗಳ ಕಾಲ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ತಂದೆ ನಂತರ ಡಿವೈ ಚಂದ್ರಚೂಡ್ 44 ವರ್ಷಗಳ ನಂತರ ಈ ಹುದ್ದೆ ಅಲಂಕರಿಸಿದ್ದಾರೆ. ಡಿವೈ ಚಂದ್ರಚೂಡ್ ಇದಕ್ಕೂ ಮುನ್ನ ಹಲವಾರು ಮಹತ್ವದ ತೀರ್ಪುಗನ್ನು ಪ್ರಕಟಿಸಿದ ವಿವಿಧ ಪೀಠಗಳಲ್ಲಿ…

Read More

ಶಾಂತಿಗೆ ಭಂಗ ಉಂಟು ಮಾಡುತ್ತಿರುವ ಆರ್.ಎನ್. ರವಿ ರಾಜ್ಯಪಾಲ ಹುದ್ದೆಗೆ ಅಯೋಗ್ಯರಾಗಿದ್ದು, ಕೂಡಲೇ ಅವರನ್ನು ಸೇವೆಯಿಂದ ಹಿಂಪಡೆಯಬೇಕು ಎಂದು ತಮಿಳುನಾಡಿನ ಡಿಎಂಕೆ ಪಕ್ಷ ರಾಷ್ಟ್ರಪತಿಗೆ ದೂರು ಸಲ್ಲಿಸಿದೆ. ಸಾರ್ವಜನಿಕ ಸೇವೆ ಮಾಡುವುದಕ್ಕಾಗಿ ಪ್ರಮಾಣ ವಚನ ಸ್ವೀಕರಿಸಿರುವ ಆರ್.ಎನ್. ರವಿ ಅದಕ್ಕೆ ತದ್ವಿರುದ್ಧವಾಗಿ ವರ್ತಿಸುತ್ತಿದ್ದಾರೆ. ಪ್ರಮಾಣ ವಚನ ಉಲ್ಲಂಘಿಸುತ್ತಿದ್ದಾರೆ ಎಂದು ಡಿಎಂಕೆ ಪತ್ರದಲ್ಲಿ ಆರೋಪಿಸಿದೆ. ರಾಜ್ಯ ಸರಕಾರ ಅನುಮೋದಿಸಿದ ಕಾಯ್ದೆಗಳಿಗೆ ಅನುಮೋದನೆ ನೀಡದೇ ವಿಳಂಬ ಮಾಡುತ್ತಿದ್ದಾರೆ ಎಂದು ಡಿಎಂಕೆ ಸಂಸದರು ರಾಷ್ಟ್ರಪತಿಗೆ ದೂರು ಸಲ್ಲಿಸಿದ್ದಾರೆ. ಆದರೆ ಈ ಬಗ್ಗೆ ರಾಜ್ಯಪಾಲ ರವಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನಲ್ಲಿ ಮತ್ತೊಂದು ಸೌಹಾರ್ದ ಬ್ಯಾಂಕ್ ನ ಕರ್ಮಕಾಂಡ ಬಯಲಾಗಿದೆ. ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಐವರನ್ನು ಕೆಂಪೇಗೌಡನಗರ ಪೊಲೀಸರು ಬಂಧಿಸಿದ್ದಾರೆ. ಠೇವಣಿದಾರರ ಹಣವನ್ನ ದುರ್ಬಳಕೆ‌ ಮಾಡಿಕೊಂಡು ಕುರುಹಿನ ಶೆಟ್ಟಿ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಸಾಲ ನೀಡಿ ಆರ್ಥಿಕ ದಿವಾಳಿಗೆ ನೂಕಿ ಅಕ್ರಮವೆಸಗಿದ್ದ ಆರೋಪದಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸೇರಿ ಐವರನ್ನು ಕೆಂಪೇಗೌಡನಗರ ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ಮಾಜಿ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಈಶ್ವರಪ್ಪ, ಸಾಲಗಾರರಾದ ದಯಾನಂದ್, ಚಂದ್ರಶೇಖರ್ ಹಾಗೂ ಸುರಬಿ ಚಿಟ್ಸ್ ಮಾಲೀಕ ಬಿ.ಟಿ.ಮೋಹನ್ ಎಂಬುವರನ್ನು ಬಂಧಿಸಲಾಗಿದೆ‌. ಕೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕುರುಹಿನ ಶೆಟ್ಟಿ ಬ್ಯಾಂಕ್ ನಲ್ಲಿ 2011 ರಿಂದ 22ರವರೆಗೆ ಶ್ರೀನಿವಾಸ್ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದರು‌‌. ನೂರಾರು ಗ್ರಾಹಕರು ಠೇವಣಿ ರೂಪದಲ್ಲಿ ಬಂದಿದ್ದ ಕೋಟ್ಯಾಂತರ ರೂಪಾಯಿ ಹಣವನ್ನ ಸಾಲ ಮಂಜೂರಾತಿ ಸಮಿತಿ ಅಧಿಕಾರಿಗಳ ಮುಖಾಂತರ ದಾಖಲಾತಿ ಪರಿಶೀಲಿಸದೆ ಸಾಲ ಮಂಜೂರು ಮಾಡಿಸಿದ್ದರು. ನೋಟು ಅಮಾನ್ಯನೀಕರಣ ಹಾಗೂ ಕೊರೊನಾ ನೆಪ ಹೇಳಿ…

Read More

ಅನ್ಯ ಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಪಾಪಿ ತಂದೆ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಹೃದಯವಿದ್ರಾವಕ ಘಟನೆ ಬಳ್ಳಾರಿಯಲ್ಲಿ ನಡೆದಿದೆ.ಆರೋಪಿಯನ್ನು ಕುಡತಿನಿ ಪಟ್ಟಣದ ನಿವಾಸಿ 31 ವರ್ಷದ ಓಂಕಾರ್ ಗೌಡ ಎಂದು ಗುರುತಿಸಲಾಗಿದೆ. ಪದೇಪದೇ ಬುದ್ದಿ ಹೇಳಿದರೂ ಮಗಳು ಕೇಳದೇ ಅನ್ಯ ಕೋಮಿನ ಯುವಕನ ಜೊತೆ ಮಾತನಾಡುತ್ತಿದ್ದರಿಂದ ಸಿಟ್ಟಿಗೆದ್ದ ಆರೋಪಿ ಮಗಳನ್ನು ಚಾನೆಲ್ ಗೆ ತಳ್ಳಿ ಕೊಲೆ ಮಾಡಿದ್ದಾನೆ. ಅಕ್ಟೋಬರ್ 31ರಂದು ಸಿನಿಮಾಗೆ ಕರೆದುಕೊಂಡು ಹೋಗುತ್ತೇನೆ ಎಂದು ಓಂಕಾರ್ ಮಗಳಿಗೆ ಹೇಳಿದ್ದಾನೆ. ಅದರಂತೆ ಇಬ್ಬರು ಮನೆಯಿಂದ ಸಿನಿಮಾಗೆ ಹೋದಾಗ ತಡವಾಗಿದೆ. ಹಾಗಾಗಿ ಸಿನಿಮಾ ನೋಡದೇ ದೇವಸ್ಥಾನಕ್ಕೆ ಹೋಗಿದ್ದಾರೆ. ದೇವಸ್ಥಾನಕ್ಕೆ ಹೋದ ನಂತರ ಜ್ಯುವೆಲರಿ ಅಂಗಡಿಗೆ ಹೋಗಿ ಅಲ್ಲಿ ಮಗಳಿಗೆ ಓಂಕಾರ್ ಒಡವೆ ಕೊಡಿಸಿದ್ದಾನೆ. ನಂತರ ಎತ್ತರವಾದ ಪ್ರದೇಶಕ್ಕೆ ಕರೆದೊಯ್ದು ಅಲ್ಲಿಂದ ಕೆಳಗೆ ಹರಿಯುತ್ತಿದ್ದ ಚಾನೆಲ್ ಗೆ ಮಗಳನ್ನು ತಂದೆ ತಳ‍್ಳಿದ್ದಾನೆ.ಮಗಳು ರಕ್ಷಣೆಗಾಗಿ ಬೇಡಿಕೊಂಡರೂ ಕರಗದ ಅಪ್ಪ ಆಕೆ ಸಾಯುವುದನ್ನು ದೃಢಪಡಿಸಿಕೊಂಡಿದ್ದಾನೆ. ಮಗಳನ್ನು ಕೊಂದ ನಂತರ ಓಂಕಾರ್ ತಿರುಪತಿಗೆ ಓಡಿ ಹೋಗಿದ್ದಾನೆ.…

Read More

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಬಂದಿದ್ದು, ಕಂದಾಯ ಇಲಾಖೆ ವರದಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸಾಣೇಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಂಗಳವಾರ ಮಾತನಾಡಿದ ಅವರು, ಮುರುಘಾ ಮಠದಲ್ಲಿ ಈ ಹಿಂದೆ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದ್ದು, ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುರುಘಾ ಶ್ರೀಗಳ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ವ್ಯಾಖ್ಯಾನ ಮಾಡುವುದಿಲ್ಲ. ನ್ಯಾಯಾಲಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ ಶಾಸಕ ಸತೀಶ್ ಜಾರಕಿಹೊಳಿಯವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ಶತಮಾನಗಳಿಂದ ಯಾವುದೇ ಧರ್ಮ ನಡೆಯುವುದು ನಂಬಿಕೆ, ವಿಶ್ವಾಸದ ಮೇಲೆ ಸ್ಥಾಪಿತವಾಗಿರುವ ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ ಮಾಡಿದ್ದಾರೆ. ಅದರ ಮೇಲೆ ಚರ್ಚೆ ಮಾಡುವುದೇನಿದೆ. ತಾಂತ್ರಿಕವಾಗಿ ಅವರ ಶಾಲಾ,…

Read More

ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕ್ಷಮೆಯಾಚಿಸುವಂತೆ ಆಗ್ರಹಿಸಿ ರಾಜ್ಯದೆಲ್ಲೆಡೆ ಬಿಜೆಪಿ ಪ್ರತಿಭಟನೆ ನಡೆಸಿದೆ. ಬೆಂಗಳೂರು, ಮೈಸೂರು, ಉಡುಪಿ ಸೇರಿದಂತೆ ರಾಜ್ಯಾದ್ಯಂತೆ ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ಭುಗಿಲೆದಿದ್ದು ತಮ್ಮ ಹೇಳಿಕೆಯನ್ನ ಹಿಂಪಡೆದು ಕ್ಷಮೆಯಾಚಿಸುವಂತೆ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಸತೀಶ್ ಜಾರಕಿಹೊಳಿ ಪ್ರತಿಕೃತಿ ದಹಿಸಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಸಾಹಿತ್ಯಭವನದ ಮುಂದೆ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ ಸತೀಶ್ ಜಾರಕಿಹೊಳಿ ಕ್ಷಮೆಯಾಚಿಸುವಂತೆ ಆಗ್ರಹಿಸಿದರು. ಹಾಗೆಯೇ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ, ಉಡುಪಿ ಕಾರವಾರದಲ್ಲೂ ಸತೀಶ್ ಜಾರಕಿಹೊಳಿ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಪ್ರತಿಭಟನೆ ನಡೆಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More