Author: admin

ಬೆಂಗಳೂರು : ಜನವರಿ 26 ರಿಂದ 400 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತರಲು ಇಲಾಖೆ ನಿರ್ಧರಿಸಿದೆ ಮತ್ತು ಅಗತ್ಯವಿರುವ ಪಠ್ಯಕ್ರಮವನ್ನು ಸಿದ್ಧಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎನ್‌ಇಪಿ ಚಟುವಟಿಕೆ ಆಧಾರಿತ ಶಿಕ್ಷಣವಾಗಿದೆ ಮತ್ತು ಪಠ್ಯಕ್ರಮ-ಕೇಂದ್ರಿತವಲ್ಲ. ಹೊಸ ಪಠ್ಯಕ್ರಮದ ಪ್ರಕಾರ ಶಿಕ್ಷಕರಿಗೆ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು. ಇನ್ನು ರಾಜ್ಯದಲ್ಲಿ 2,500 ಪ್ರೌಢಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಲಿದೆ. ಎಸ್ಸಿ ಮತ್ತು ಎಸ್ಟಿಗಳಿಗೆ ನಿಗದಿಪಡಿಸಿದ ಹೊಸ ಮೀಸಲಾತಿಯ ಶೇಕಡಾವಾರು ಪ್ರಕಾರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ನೇಮಕಾತಿ ಪ್ರಕ್ರಿಯೆಯಲ್ಲಿ ಅನಗತ್ಯ ವಿಳಂಬ ಮಾಡುತ್ತದೆ ಎಂಬ ಅಪಖ್ಯಾತಿ ಹೊಂದಿದ್ದ ಕರ್ನಾಟಕ ಲೋಕಸೇವಾ ಆಯೋಗ ಇದೇ ಮೊದಲ ಬಾರಿಗೆ ಸಂದರ್ಶನ ಮುಗಿಸಿದ 24 ಗಂಟೆಯೊಳಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸುವ ಮೂಲಕ ದಾಖಲೆ ಬರೆದಿದೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ 660 ಹುದ್ದೆಗಳಿಗೆ ಸಂದರ್ಶನ ಮುಗಿಸಿದ 24 ಗಂಟೆ ಒಳಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.ಶನಿವಾರ ರಾತ್ರಿಯೇ ಆಯೋಗದ ವೆಬ್ ಸೈಟ್ ನಲ್ಲಿ ಇದು ಲಭ್ಯವಿದ್ದು, ಆಕ್ಷೇಪಣೆಗೆ ಏಳು ದಿನಗಳ ಅವಕಾಶ ನೀಡಲಾಗಿದೆ. ಈ ಹುದ್ದೆಗಳಿಗೆ 2022ರ ನವೆಂಬರ್ 7ರಂದು ಸಂದರ್ಶನ ಆರಂಭಗೊಂಡಿದ್ದು, 2023 ರ ಜನವರಿ 6 ಶುಕ್ರವಾರ ಪೂರ್ಣಗೊಂಡಿತ್ತು. ತಕ್ಷಣವೇ ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗಿದ್ದು, ಈ ಪಟ್ಟಿಗೆ ಆಯೋಗ ಒಪ್ಪಿಗೆ ನೀಡಿದ ಬಳಿಕ ಪ್ರಕಟಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ರಾಜ್ಯ ಸರ್ಕಾರ ನೂತನವಾಗಿ 50 ತಾಲೂಕುಗಳನ್ನು ರಚಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ 8 ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಾಧಿಕಾರಿ ಕಚೇರಿ ಪ್ರಾರಂಭಿಸಲು ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 34 ತಾಲೂಕುಗಳಲ್ಲಿ ಹೊಸದಾಗಿ ಉಪ ನೋಂದಣಿ ಕಚೇರಿಗಳನ್ನು ಪ್ರಾರಂಭಿಸಲು ಪ್ರಸ್ತಾಪಿಸಲಾಗಿರುತ್ತದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಾಗವಾಡ, ಕುಕನೂರು, ಕನಕಗಿರಿ, ಸಿರಿವಾರ, ಉಡುಪಿಯ ಕಾಪು, ಬಬಲೇಶ್ವರ, ತಿಕೋಟಾ ಹಾಗೂ ತಾಳಿಕೋಟೆಯಲ್ಲಿ ನೂತನವಾಗಿ ಹೊಸ ಉಪನೋಂದಣಾಧಿಕಾರಿಗಳ ಕಚೇರಿಗಳು ಆರಂಭಗೊಳ್ಳಲಿವೆ. ಹೊಸದಾಗಿ ರಚಿಸಲಾಗಿರುವ ತಾಲೂಕುಗಳ ಪೈಕಿ 8 ತಾಲೂಕುಗಳಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಹೊಸ ಉಪ ನೋಂದಣಾಧಿಕಾರಿಗಳ ಕಚೇರಿಗಳನ್ನು ಹೊಸದಾಗಿ ಪ್ರಾರಂಭಿಸಲು ಅನುಮೋದನೆ ನೀಡಿ ಆದೇಶಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : 2022-23 ನೇ ಸಾಲಿಗೆ ಇಲಾಖೆಯ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆಯಡಿ ಜಿಲ್ಲೆಯ ದೈಹಿಕ ವಿಕಲಚೇತನರಿಂದ ಸೌಲಭ್ಯಕ್ಕಾಗಿ ಶೇಕಡಾ 75 ಅಥವಾ ಹೆಚ್ಚಿನ ಅಂಗವಿಕಲತೆ ಪ್ರಮಾಣ ಹೊಂದಿರುವ ಕನಿಷ್ಠ 20 ವರ್ಷ ಗರಿಷ್ಠ 60 ವರ್ಷ ವಯೋಮಿತಿಗೊಳಪಟ್ಟ ವಿಕಲಚೇತನ ವ್ಯಕ್ತಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಲಗತ್ತಿಸಬೇಕಾದ ದಾಖಲಾತಿಗಳು: ವಿಕಲಚೇತನರ ಯು.ಡಿ.ಐ.ಡಿ.ಕಾರ್ಡ್ (75% ಅಥವಾ ಹೆಚ್ಚಿನ ಅಂಗವಿಕಲತೆ ಪ್ರಮಾಣ ಹೊಂದಿರತಕ್ಕದ್ದು), ತಹಸೀಲ್ದಾರ್ ರವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ ಪಡೆದಿರಬೇಕು. ವಾಹನ ಚಾಲನಾ ಪ್ರಮಾಣ ಪತ್ರ. ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವಯಸ್ಸಿನ ದಾಖಲಾತಿ. ಸ್ವಂತ ಉದ್ಯೋಗ/ ಖಾಸಗಿ ನೌಕರಿ / ಶಿಕ್ಷಣದ ಬಗ್ಗೆ ದೃಢೀಕರಣ ಹಾಗೂ ಸದರಿ ಸೌಲಭ್ಯವನ್ನು ಯಾವುದೇ ಮೂಲದಿಂದ ಪಡೆದಿರುವುದಿಲ್ಲವೆಂಬ ದೃಢೀಕರಣ ಸಲ್ಲಿಸಬೇಕು. ಬೆಳಗಾವಿ ಜಿಲ್ಲೆಯ ದೈಹಿಕ ವಿಕಲಚೇತನರು ಆಯಾ ತಾಲೂಕಿನ ತಾಲೂಕು ಪಂಚಾಯತ ಕಛೇರಿಯಲ್ಲಿನವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ ಪ್ರತಿಯಲ್ಲಿ ಈ ಕೆಳಕಾಣಿಸಿದ ಅಗತ್ಯ ದಾಖಲಾತಿಗಳೊಂದಿಗೆ…

Read More

ಕನ್ನಡದ ಬಹು ನಿರೀಕ್ಷಿತ ಚಿತ್ರ ‘ಪಾಲಾರ್’ ಚಿತ್ರದ ವಿತರಣಾ ಹಕ್ಕನ್ನು ಕರ್ನಾಟಕದ ಪ್ರಮುಖ ಸಿನಿಮಾ ವಿತರಣಾ ಸಂಸ್ಥೆಯಾದ “ಸತ್ಯ ಸಿನಿ ಡಿಸ್ಟ್ರಿಬ್ಯೂಟರ್ಸ್” ಪಡೆದುಕೊಂಡಿದೆ. “ಪಾಲಾರ್” ಸಿನಿಮಾದ ವಿಶಾಲ ಕರ್ನಾಟಕ ವಿತರಣಾ ಹಕ್ಕನ್ನು ಪಡೆದುಕೊಂಡಿದೆ. ಶೀಘ್ರದಲ್ಲೆ ಸಿನೆಮಾ ಬಿಡುಗಡೆ ಆಗಲಿದೆ. ಅದಕ್ಕಿಂತ ಮುಂಚೆ ಪ್ರತೀ ಜಿಲ್ಲೆಯಲ್ಲೂ ಪ್ರೀಮಿಯರ್ ಶೋ ಆಯೋಜನೆಯಾಗಲಿದೆ ಎಂದು ನಿರ್ದೇಶಕ ಜೀವಾ ನವೀನ್ ತಿಳಿಸಿದ್ದಾರೆ. ಶೋಷಣೆಗಳ ವಿರುದ್ಧ ಜನ ಸಾಮಾನ್ಯರ ಸಂಘರ್ಷದ ಕಥೆಯನ್ನು ಹೊಂದಿರುವ ಪಾಲಾರ್ ಚಿತ್ರ, ಬಿಡುಗಡೆಗೂ ಮೊದಲೇ ಸಾಕಷ್ಟು ಜನಪ್ರಿಯತೆ ಹೊಂದಿದೆ. ಸಾಕಷ್ಟು ಹಳ್ಳಿಗಳಲ್ಲಿ ಚಿತ್ರದ ಬ್ಯಾನರ್ ಗಳನ್ನು ಹಾಕಿ ಸಾರ್ವಜನಿಕರೇ ಪ್ರಚಾರ ನೀಡುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿರುವನಂತಪುರಂ: ಆನ್ ಲೈನ್ ನಿಂದ ಆರ್ಡರ್ ಮಾಡಿ ಖರೀದಿಸಿದ್ದ ಬಿರಿಯಾನಿ ಸೇವಿಸಿದ ವಿದ್ಯಾರ್ಥಿನಿಯೋರ್ವಳು ಅಸ್ವಸ್ಥಗೊಂಡು ಸಾವನ್ನಪ್ಪಿದ ದಾರುಣ ಘಟನೆ ಕೇರಳದಲ್ಲಿ ನಡೆದಿದೆ. ಕಾಸರಗೋಡು ಸಮೀಪದ ಪೆರುಂಬಳದ ಅಂಜು ಶ್ರೀಪಾರ್ವತಿ ಎಂಬವರು ಮೃತಪಟ್ಟವರಾಗಿದ್ದರು, ಇವರು ‘ಕುಜಿಮಂತಿ’ ಎಂಬ ಕೇರಳ ಬಿರಿಯಾನಿಯನ್ನು ಹೊಟೇಲ್ ವೊಂದರಿಂದ ಆನ್ ಲೈನ್ ನಲ್ಲಿ ಖರೀದಿಸಿ ಸೇವಿಸಿದ್ದರು. ಬಿರಿಯಾನಿ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಯುವತಿಯನ್ನು  ಪೋಷಕರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಬಳಿಕ ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಮಂಗಳೂರಿನ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ್ದಾಳೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಸುರೇಶ್ ಬಾಬು ಎಂ. ತುರುವೇಕೆರೆ ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವಡವನಗಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲದೇವನಹಳ್ಳಿ ಗ್ರಾಮದ ರೈತ ರಾಜಶೇಖರ್ ಬಿನ್ ರಂಗಪ್ಪ ಅವರ ತೋಟದಲ್ಲಿ ಪ್ರಕೃತಿಯ ವಿಸ್ಮಯ ನಡೆದಿದೆ. ರಾಜಶೇಖರಯ್ಯ ಅವರಿಗೆ ಸೇರಿದ 80 ಗಿಡ ತೆಂಗಿನ ತೋಟದಲ್ಲಿ ಒಂದು ವಿಸ್ಮಯಕಾರಿ ತೆಂಗಿನ ಮರವಿದೆ. ಈ ತೆಂಗಿನ ಮರ ಸುಮಾರು 20 ವರ್ಷಗಳ ಪ್ರಾಯವಾಗಿದ್ದು, 20 ಅಡಿ ಎತ್ತರಕ್ಕೆ ಬೆಳೆದಿದೆ. ಈ ಮರದ 18 ಅಡಿಯ ಎತ್ತರದಲ್ಲಿ  20 ತೆಂಗಿನ ಸಸಿಗಳು ಬೆಳೆದಿವೆ ಕನಿಷ್ಠ ವೆಂದರೆ ಒಂದು ತೆಂಗಿನ ಮರ ಐದು ವರ್ಷಗಳಿಗೆ ಪಸಲಿಗೆ ಬರುತ್ತದೆ. ಅದೇ ರೀತಿ ಈ ಮೇಲೆ ಬೆಳೆದಿರುವ 20 ತೆಂಗಿನ ಸಸಿಗಳು ಹೊಂಬಾಳೆ ಹೊಡೆದು ತೆಂಗಿನಕಾಯಿ ಬಿಟ್ಟು ಅಚ್ಚರಿ ಮೂಡಿಸಿದೆ. ಈ ಕುತೂಹಲ ಹಾಗೂ ಆಶ್ಚರ್ಯ ತೆಂಗಿನ ಮರವು 8 ವರ್ಷಗಳ ನಂತರ ಬೆಳಕಿಗೆ ಬಂದಿದೆ ಅಂದಿನಿಂದ ಇಲ್ಲಿವರೆಗೂ ಆ ರೈತ ಕುಟುಂಬ ಆ ತೆಂಗಿನ ಮರಕ್ಕೆ ಪೂಜೆಯನ್ನು ಸಲ್ಲಿಸುತ್ತಿದ್ದಾರೆ.…

Read More

ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ದೊಡ್ಡಹಳ್ಳಿ ಗ್ರಾಮದಲ್ಲಿ  ಶ್ರೀ ವರದಾಂಜನೇಯಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ಹಿನ್ನೆಲೆ ದೇವಾಲಯದಲ್ಲಿ ಗಣಪತಿ ಪೂಜೆ, ಪಂಚಾಮೃತ ಅಭಿಷೇಕ, ನವಗ್ರಹ ಪೂಜೆ, ಹೋಮ, ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಗಾರುಡಿ ಗೊಂಬೆ ಕುಣಿತ ಮತ್ತು ಮಹಿಳೆಯರು ಪೂರ್ಣ ಕುಂಭ ಕಳಶ ಒತ್ತು ಮೆರವಣಿಗೆಯಲ್ಲಿ ಸಾಗಿದರು. ಭಾರೀ ಸಂಖ್ಯೆಯಲ್ಲಿ ಭಕ್ತರು  ಆಗಮಿಸಿ ರಥೋತ್ಸವದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು. ಇದೇ ವೇಳೆ ಬ್ರಹ್ಮರಥೋತ್ಸವ ಕಾರ್ಯಕ್ರಮಕ್ಕೆ ಸಹಕರಿಸಿದ ವ್ಯಕ್ತಿಗಳಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ಇದೇ ಭಾನುವಾರ ಜಾರುಮರ ಜಾತ್ರೆ ನಡೆಯಲಿದೆ ಈ ಸಂದರ್ಭದಲ್ಲಿನಿವೃತ್ತ ಜಿಲ್ಲಾಧಿಕಾರಿ ಹೆಚ್.ರಾಮಾಂಜನೇಯ, ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಶೇಖರ್, ಬೆಂಗಳೂರು ದಕ್ಷಿಣ ಉಪ ವಿಭಾಗಾಧಿಕಾರಿ ರಘುನಂದನ್, ಶ್ರೀ ವರದಾಂಜನೇಯಸ್ವಾಮಿ ಸೇವಾ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಣ್ಣ ವಯಸ್ಸಿನ ಯುವಕರೇ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಇಂದೋರ್ ನಲ್ಲಿ ನಡೆದ ಘಟನೆಯೊಂದು ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದೋರ್ ನಲ್ಲಿ ನಡೆದಿದ್ದು, ವ್ಯಾಯಾಮ ಮಾಡುತ್ತಿದ್ದ ವೇಳೆಯೇ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹೋಟೆಲ್ ಮಾಲೀಕರಾದ ಪ್ರದೀಪ್ ರಘುವಂಶಿ ಎಂಬವರು ಮೃತಪಟ್ಟವರಾಗಿದ್ದು, ಅವರು ಕುಸಿದು ಬಿದ್ದ ವೇಳೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ. ಪ್ರದೀಪ್ ರಘುವಂಶಿ ನಮ್ಮ ಹಳೆಯ ಕ್ಲೈಂಟ್ ಆಗಿದ್ದಾರೆ. ಅವರು ಪ್ರತಿದಿನ ಜಿಮ್ ​ಗೆ ಬರುತ್ತಿದ್ದರು ಎಂದು ತರಬೇತುದಾರರು ಹೇಳಿದ್ದು, ಘಟನೆಯ ಬಗ್ಗೆ ವಿವರಿಸಿದ ಅವರು, ಪ್ರದೀಪ್ ಇದ್ದಕ್ಕಿಂದ್ದಂತೆ ಹೃದಯಾಘಾತಕ್ಕೆ ಒಳಗಾದರು. ಮೂರು ನಿಮಿಷಗಳಲ್ಲಿ ಎಲ್ಲವೂ ಮುಗಿದುಹೋಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. https://twitter.com/Lucknowkibaat32/status/1610939077918089216?s=20&t=qCV8DDqKC14Ks7eAXHvExQ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಪಾಟ್ನಾ: ಬಿಹಾರದಲ್ಲಿ ಶನಿವಾರದಿಂದ ಜಾತಿ ಆಧಾರಿತ ಜನಗಣತಿ ಆರಂಭವಾಗಿದೆ. ಈ ಮೂಲಕ ಎಲ್ಲಾ ಜಾತಿಗಳು, ಉಪ ಜಾತಿಗಳು, ಧರ್ಮಗಳ ಮಾಹಿತಿ ಕಲೆ ಹಾಕಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಇದೊಂದು ಐತಿಹಾಸಿಕ ಹೆಜ್ಜೆಯಾಗಿದ್ದು, ಸಮಾಜದಲ್ಲಿನ ದುರ್ಬಲ ವರ್ಗಗಳಿಗೆ ಸರ್ಕಾರದ ಕಲ್ಯಾಣ ಯೋಜನೆಗಳನ್ನು ತಲುಪಿಸಲು ಜನಗಣತಿಯಿಂದ ವೈಜ್ಞಾನಿಕವಾಗಿ ಮಾಹಿತಿ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರದಿಂದ ಐತಿಹಾಸಿಕ ಹೆಜ್ಜೆಯನ್ನಿಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ, ಜನರಿಗೆ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ವೈಜ್ಞಾನಿಕವಾಗಿ ಮಾಹಿತಿ ದೊರೆಯಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More