Author: admin

ರಾಹುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದ್ದು.ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇಗುಲಗಳ ಬಾಗಿಲು ಮುಚ್ಚಿರಲಿದ್ದು ದೇವಸ್ಥಾನಗಳಲ್ಲಿ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಇದು 2022 ರಲ್ಲಿ ಸಂಭವಿಸುತ್ತಿರುವ ಕಟ್ಟಕಡೆಯ ಗ್ರಹಣವಾಗಿದೆ. ಎರಡು ವಾರದ ಹಿಂದಷ್ಟೇ ಸೂರ್ಯಗ್ರಹಣ ಗೋಚರವಾಗಿತ್ತು. ಮಧ್ಯಾಹ್ನ 2 ಗಂಟೆ 37 ನಿಮಿಷಕ್ಕೆ ಚಂದ್ರ ಗ್ರಹಣ ಆರಂಭವಾಗಲಿದ್ದು, ಸಂಜೆ 4 ಗಂಟೆ 28 ನಿಮಿಷಕ್ಕೆ ಗ್ರಹಣ ಮಧ್ಯಕಾಲ ತಲುಪಲಿದೆ. ಸಂಜೆ 6 ಗಂಟೆ 17 ನಿಮಿಷ ಚಂದ್ರಗ್ರಹಣ ಅಂತ್ಯವಾಗಲಿದೆ. ಕರ್ನಾಟಕದಲ್ಲಿ ಪಾರ್ಶ್ವ ಚಂದ್ರಗ್ರಹಣ ಗೋಚರ ಆಗಲಿದ್ದು, ಇದೇ ಹೊತ್ತಲ್ಲಿ ಬಹುತೇಕ ದೇವಾಲಯಗಳು ಬಂದ್​​​​ ಆಗಲಿವೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಮೈಸೂರಿನ ಚಾಮುಂಡಿಬೆಟ್ಟದ ದೇಗುಲ, ತುಮಕೂರು ಜಿಲ್ಲೆ​ ದೇವರಾಯನದುರ್ಗ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ಇಂದು ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ನಿಷೇಧ ಹೇರಲಾಗಿದ್ದು ಕೊರಟಗೆರೆ ತಾಲೂಕಿನ ಗೊರವನಹಳ್ಳಿಯಲ್ಲಿರುವ ಗೊರವನಹಳ್ಳಿ ಮಹಾಲಕ್ಷ್ಮೀ ದೇಗಲವು ಇಂದು ಸಂಜೆ 5ರಿಂದ ನಾಳೆ ಬೆಳಗ್ಗೆ 6.30ರವರೆಗೆ ಬಂದ್ ಆಗಿರಲಿದೆ. ಇಂದು ಸಂಭವಿಸುವ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣಕ್ಕೆ ಭಾರತ…

Read More

ಉಡುಪಿ : ಹಿಂದೂ ಪದ ಅಶ್ಲೀಲ ಹೇಳಿಕೆ ನೀಡಿದ ಸತೀಶ್‌ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಸತೀಶ್‌ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ಎಂದು ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಸತೀಶ್‌ ಜಾರಕಿಹೊಳಿ ಅರೆಬರೆ ಓದಿದ ವ್ಯಕ್ತಿ. ಸತೀಶ್‌ ಆಳವಾದ ಅಧ್ಯಯನ ಮಾಡದೇ ಮಾತಾಡಿದ್ದಾರೆ. ಸತೀಶ್‌ ಅಲ್ವಸಂಖ್ಯಾತರ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಜಾರಕಿಹೊಳಿ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ. ಸತೀಶ್‌ ಹೇಳಿಕೆಯನ್ನು ಖಂಡಿಸಬೇಕು ಈ ಬಗ್ಗೆ ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಮೌನ ಯಾಕೆ.. ಕಾಂಗ್ರೆಸ್‌ ನಾಯಕರ ಮೌನ ಸತೀಶ್‌ ಮಾತಿಗೆ ಸಮ್ಮತಿನಾ.. ಎಂದು ಪ್ರಶ್ನಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವೆಂಬರ್ 4ರ ಶುಕ್ರವಾರ ಸಂಜೆ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಅಪರಿಚಿತ ವಾಹನದಿಂದ ಡಿಕ್ಕಿ ಹೊಡೆಸಿ ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿಯೋರ್ವರನ್ನು ಹತ್ಯೆಗೈಯ್ಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಕೊಲೆ ಕುರಿತಂತೆ ವಿಶೇಷ ತಂಡ ತನಿಖೆ ನಡೆಸುತ್ತಿತ್ತು. ತನಿಖೆ ವೇಳೆ ಕುಲಕರ್ಣಿಯವರ ಪಕ್ಕದ ಮನೆಯ ಮಾದಪ್ಪ ಮತ್ತು ಆರ್.ಎನ್.ಕುಲಕರ್ಣಿ ನಡುವೆ ಮನೆ ಕಟ್ಟುವ ವಿಚಾರವಾಗಿ ಗಲಾಟೆ ನಡೆದಿತ್ತು ಎಂಬ ಬಗ್ಗೆ ಮಾಹಿತಿ ಲಭಿಸಿತ್ತು. ಈ ಸಂಬಂಧ ವಿಶೇಷ ತಂಡ ತನಿಖೆ ಮುಂದುವರಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾದಪ್ಪನ ಪುತ್ರ , ಕಟ್ಟಡ ಕಾಮಗಾರಿಗಳಲ್ಲಿ ತೊಡಗಿಸಿಕೊಂಡಿದ್ದ ಮನು(30) ಹಾಗೂ ಇತನ ಸ್ನೇಹಿತ ವರುಣ್ ಬಂಧಿತ ಆರೋಪಿಗಳು. ಮನುವಿನ ಸ್ನೇಹಿತ ವರುಣ್ ಎಂಬಾತ ಆರ್.ಎನ್ ಕುಲಕರ್ಣಿ ವಾಯುವಿಹಾರಕ್ಕೆ ಬರುತ್ತಿದ್ದ ಸ್ಥಳಗಳನ್ನು ದ್ವಿಚಕ್ರವಾಹನದಲ್ಲಿ ಕರೆತಂದು ತೋರಿಸಿದ್ದು, ಇಬ್ಬರೂ ಸೇರಿ ಕೊಲೆಗೆ ಸ್ಕೆಚ್ ರೂಪಿಸಿದ್ದರು…

Read More

ಕರ್ನಾಟಕದಲ್ಲಿರುವ 943 ಸರ್ಕಾರಿ, 10 ಅನುದಾನಿತ ಹಾಗೂ 48 ಖಾಸಗಿ ಶಾಲೆಗಳು ಸೇರಿದಂತೆ ಸುಮಾರು ೧,೦೦೧ ಶಾಲೆಗಳಲ್ಲಿ ಬಾಲಕಿಯರಿಗಾಗಿ ಪ್ರತ್ಯೇಕ ಶೌಚಾಲಯಗಳಿಲ್ಲ. ಒಟ್ಟು ೭೫,೯೧೯ ಬಾಲಕಿಯರ ಶಾಲೆಗಳ ಪೈಕಿ ೧,೫೭೦ ಶಾಲೆಗಳಲ್ಲಿ ಬಳಕೆಯ ಸ್ಥಿತಿಯಲ್ಲಿ ಇಲ್ಲದಿರುವಂತಹ ಶೌಚಾಲಯಗಳಿದ್ದರೆ; ೩೨೮ ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ ಎಂಬ ಮಾಹಿತಿ ಬಹಿರಂಗಗೊಂಡಿದೆ. ಮೇಲ್ಕಂಡ ದತ್ತಾಂಶವನ್ನು ಇತ್ತೀಚಿನ ಎಜುಕೇಷನ್ ಪ್ಲಸ್‌ ಗಾಗಿ ಯೂನಿಫೈಡ್ ಡಿಸ್ಟ್ರಿಕ್ಟ್ ಇನ್‌ಫರ್ಮೇಷನ್ ಸಿಸ್ಟಂ (ಯುಡಿಐಎಸ್‌ಎ+) 2021-22ರ ಒಂದು ವರದಿ ಬಹಿರಂಗಪಡಿಸಿದ್ದು, ಈ ಮೂಲಕ ಕರ್ನಾಟಕದ ಶಾಲೆಗಳಲ್ಲಿರುವ ಕಳಪೆ ಮೂಲಸೌಕರ್ಯ ಹಾಗೂ ಕೊರತೆಯ ಮೇಲೆ ಬೆಳಕು ಚೆಲ್ಲಿದೆ. ವರದಿಯ ಪ್ರಕಾರ ೭೧೪ ಶಾಲೆಗಳಲ್ಲಿ ವಿದ್ಯುತ್ ಇಲ್ಲ ಹಾಗೂ ೨೨೦ ಶಾಲೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯಗಳಿಲ್ಲ. ೮,೧೫೩ ಶಾಲೆಗಳಲ್ಲಿ ಕೈ ತೊಳೆಯುವ ಸೌಕರ್ಯಗಳಿಲ್ಲವಂತೆ. ಅಂದಾಜು ೨೨,೬೧೬ ಶಾಲೆಗಳಲ್ಲಿ ವಿಶೇಷ ಅಗತ್ಯಗಳಿರುವಂತಹ ಮಕ್ಕಳಿಗಾಗಿ ರ್ಯಾಂಪ್‌ ಗಳಿಲ್ಲ. ಹಾಗಾಗಿ, ಅನೇಕ ಶೈಕ್ಷಣಿಕ ಸಂಸ್ಥೆಗಳು ಇನ್ನೂ ಸೇರ್ಪಡೆಗೊಳ್ಳುವುದರಿಂದ ಬಹಳ ದೂರವೇ ಉಳಿದಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ. ಸುಮಾರು ೧೨,೪೪೨ ಶಾಲೆಗಳು ಕಳೆದ…

Read More

ಹಿಂದೂ ಬಗ್ಗೆ ನನ್ನ ಹೇಳಿಕೆ ತಪ್ಪೆಂದು ಸಾಬೀತು ಪಡಿಸಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿ ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿ, ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ. ಹಿಂದೂ ಧರ್ಮಕ್ಕೆ ಎಲ್ಲಿ ಅವಮಾನ ಮಾಡಿದ್ದೇನೆ..? ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಅಶ್ಲೀಲ ಅಂತಾ ನಾನು ಬರದಿದ್ದಾ..? ಅದು ಪರ್ಷಿಯನ್ ಪದ. ಇದಕ್ಕೆ ವಿಕಿಪಿಡಿಯಾದಲ್ಲಿ ದಾಖಲೆ ಇದೆ. ಡಿಕ್ಷನರಿಯಲ್ಲಿ ಹಿಂದೂ ಅರ್ಥ ಅಶ್ಲೀಲ ಅಂತಿದೆ ಎಂದು ಪುನರುಚ್ಚರಿಸಿದರು. ನಾನು ಪಕ್ಷದ ವೇದಿಕೆಯಲ್ಲಿ ಮಾತನಾಡಿಲ್ಲ. ಪಕ್ಷಕ್ಕೂ ನನ್ನ ಹೇಳಿಕೆಗೂ ಸಂಬಂಧವಿಲ್ಲ. ಪಕ್ಷದ ನಿಲುವು ಬೇರೆ ಇದೆ. ರಾಜ್ಯಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಅವರ ಖಂಡನೆಗೆ ಆಕ್ಷೇಪಿಸಲ್ಲ. ಮನುವಾದಿಗಳು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಬೆಳಗಾವಿ : 2022-23 ನೇ ಸಾಲಿಗೆ ಇಲಾಖೆಯಿಂದ ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಯೋಜನೆಯಡಿ ಮೆಟ್ರಿಕ್ ಪೂರ್ವ (ಪ್ರೀಮ್ಯಾಟ್ರಿಕ್) ವಿದ್ಯಾರ್ಥಿ ವೇತನಕ್ಕಾಗಿ ಎಸ್.ಎಸ್.ಪಿ. ತಂತ್ರಾಂಶದಡಿ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಶಾಲೆ/ ಶಿಕ್ಷಣ ಸಂಸ್ಥೆಗಳ ಮುಖಾಂತರ ಸದರಿ ಯೋಜನೆಯ Website: https:/ssp.karnataka.gov.inರಲ್ಲಿ ಆನ್‍ಲೈನ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಕಾರಣ ಬೆಳಗಾವಿ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಕಲಚೇತನರು ಈ ಸೌಲಭ್ಯವನ್ನು ಪಡೆದು ಉನ್ನತ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಂಗಳೂರು: ಕೃತಿಸ್ವಾಮ್ಯ ಉಲ್ಲಂಘನೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ, ಭಾರತ್ ಜೋಡೋ ಯಾತ್ರಾ ಟ್ವಿಟರ್ ಹ್ಯಾಂಡಲ್‌ ಗಳನ್ನು ನಿರ್ಬಂಧಿಸಿ ಬೆಂಗಳೂರು ನ್ಯಾಯಾಲಯ ಆದೇಶ ನೀಡಿದೆ. ಭಾರತ್ ಜೋಡೋ ಯಾತ್ರೆಗೆ ಕೆಜಿಎಫ್ ಮ್ಯೂಸಿಕ್ ಬಳಸಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಸಿನಿಮಾದ ಹಾಡೊಂದರ ಮ್ಯೂಸಿಕ್ ಬಳಸಿರುವ ಆರೋಪ ಕೇಳಿ ಬಂದಿದ್ದು, ಕಾಪಿ ರೈಟ್ಸ್ ಉಲ್ಲಂಘನೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಮೇಲೆ ಎಮ್.ಆರ್.ಟಿ ಸಂಸ್ಥೆಯು ಕಾನೂನು ಸಮರಕ್ಕೆ ಮುಂದಾಗಿದ್ದು, ಸಂಸ್ಥೆಯು ದೂರು ದಾಖಲಿಸಿತ್ತು. ಕೆಜಿಎಫ್ ಸಿನಿಮಾದ ಸುಲ್ತಾನಾ..ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಬೆಳಗಾವಿ: ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆಗೆ ಒತ್ತಡ ಹೆಚ್ಚಿದೆ ಇದೆ. ಸಾವಿರಾರು ಜನ ಹೆಣ್ಣು ಮಕ್ಕಳ ಮನೆ ಎದುರು ಧರಣಿ ಮಾಡ್ತೇವೆ ಅಂತಾ ಒತ್ತಡ ಹಾಕಿದಲ್ಲದೇ ಪತ್ರ ಬರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವರುಣಾದಿಂದ ನಿಂತುಕೊಳ್ಳಬೇಕು ಅಂತಾ ನಮ್ಮ ಹುಡುಗ ಹೇಳ್ತಿದ್ದಾನೆ. ಚಾಮರಾಜಪೇಟೆಯಿಂದ ನಿಂತುಕೊಳ್ಳಬೇಕು ಅಂತಾ ಜಮೀರ್ ಹೇಳುತ್ತಿದ್ದಾನೆ ಎಂದು ಹೇಳಿದ್ದಾರೆ. ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಹೆಚ್ಚಿನ ಒತ್ತಡ ಇದೆ. ಸಾವಿರಾರು ಹೆಣ್ಣು ಮಕ್ಕಳು ಮನೆ ಎದುರು ಧರಣಿ ಮಾಡ್ತೇವೆ ಅಂತಾ ಒತ್ತಡ ಹಾಕಿದಲ್ಲದೇ ಪತ್ರ ಬರೆದಿದ್ದಾರೆ. ನಾನು ಏಕೆ ಯೋಚನೆ ಮಾಡ್ತಿರುವುದು ಅಂದ್ರೆ ವಾರಕ್ಕೊಮ್ಮೆ ಹೋಗಿ ಅಲ್ಲಿ ಇರೋದಕ್ಕೆ ಆಗೋದಿಲ್ಲ. ಕಾರ್ಯಕರ್ತರಿಗೆ ಜನರಿಗೆ ಸಿಗೋದಕ್ಕಾಗಲ್ಲ, ಅವರ ಕಷ್ಟ ಸುಖಗಳಿಗೆ ಸ್ಪಂದಿಸೋದಕ್ಕೆ ಆಗೋದಿಲ್ಲ. ನೀವು ಬಂದು ನಿಂತುಕೊಳ್ಳಿ ಅಂತಾ ಅವರು ಹೇಳಬಹುದು. ಆದರೆ ನನಗೆ ಮನಸು ಒಪ್ಪುತ್ತಿಲ್ಲ. ಎರಡು ತಿಂಗಳಿನಿಂದ ಬಾದಾಮಿಗೇ ಹೋಗಿಲ್ಲ. ನಾಳೆ ಹೋಗಬೇಕೆಂದುಕೊಂಡಿದ್ದೆ, ಅದೂ ಕ್ಯಾನ್ಸಲ್ ಆಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ…

Read More

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಬದಲಾವಣೆ ಮಾಡಲಾಗಿದ್ದು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಸಹ ಅಧಿಸೂಚನೆ ಪ್ರಕಟಿಸಿದೆ. ಮಂಡಳಿ ನಿರ್ದೇಶಕರು ಹೆಚ್. ಎನ್. ಗೋಪಾಲಕೃಷ್ಣ ಈ ಕುರಿತು ಆದೇಶವನ್ನು ಹೊರಡಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಂದು ಬದಲಾವಣೆ ಮಾಡಲಾಗಿದೆ, ಕಡತ, ಮೊಹರು, ಪತ್ರ ವ್ಯವಹಾರದಲ್ಲಿಯೂ ಹೊಸ ಹೆಸರು ಬಳಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೋಹಳ್ಳಿ: ಮಹಾರಾಷ್ಟ್ರದ ಜತ್ತ ತಾಲೂಕಿನ ಗೊಗವಾಡ ಗ್ರಾಮದಲ್ಲಿ ನ.12ರಂದು ನಡೆಯುವ ಧಮ್ಮಭೂಮಿ ಲೋಕಾರ್ಪಣೆ ಸಮಾರಂಭಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಬನ್ನಿ ಎಂದು DSS ಜಿಲ್ಲಾ ಅಧ್ಯಕ್ಷ ಶ್ರೀಕಾಂತ ಆಲಗೂರ ಕರೆ ನೀಡಿದರು. ಗ್ರಾಮದಲ್ಲಿ ಜತ್ತತಾಲೂಕಿನ ಗುಗವಾಡ ಗ್ರಾಮದಲ್ಲಿ ಧಮ್ಮಭೂಮಿ ಲೋಕಾರ್ಪಣೆ ಸಮಾರಂಭದ ಪ್ರಚಾರ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿ, ಬೋಧಿಸತ್ವ ಪರಮಪೂಜ್ಯ ಡಾ.ಬಾಬಸಾಹೇಬ ಅಂಬೇಡ್ಕರ್ ಅವರು ನೀಡಿದ ಧಮ್ಮದ ಪ್ರಚಾರ ಮಾಡಲು ಮತ್ತು ಆದರ್ಶ ಸಮಾಜ ನಿರ್ಮಾಣಕ್ಕಾಗಿ ಸಾಂಸ್ಕೃತಿಕ ಕೇಂದ್ರ ನಿರ್ಮಿಸಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕಲ್ಪನೆಯಂತೆ ಮಾನವ ಅಭಿವೃದ್ಧಿ ಕೇಂದ್ರವನ್ನು ರಚಿಸಲು ಸಿ.ಆರ್. ಸಾಂಗಲೀಕರ ಇವರು ಪ್ರಯತ್ನಿಸಿದ್ದಾರೆ. ನಾಗಪೂರದ ದೀಕ್ಷಾಭೂಮಿ, ಮುಂಬೈನ ಚೈತ್ಯಭೂಮಿ, ಮಾಣಗಾವನ ಸನ್ಮಾನಭೂಮಿ ರೀತಿ ಗೂಗವಾಡದ ಧಮ್ಮಭೂಮಿಯಾಗಿದ್ದು, ಲೋಕಾರ್ಪಣೆಯ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗೋಣ ಎಂದರು. ದಲಿತ ಮುಖಂಡರಾದ ರಘುನಾಥ್ ನಾಟಿಕಾರ, ಪ್ರಕಾಶ ಕನ್ನಾಳ, ಲಖನ್ ಗುರಪ್ಪಗೊಳ, ಹಣಮಂತ ಭಜಂತ್ರಿ, ತುಖಾರಾಮ ಭಜಂತ್ರಿ, ಪ್ರಭು ದೊಡ್ಡಮನಿ, ವಿನೋದ ಗುರಪ್ಪಗೊಳ, ವೈಭವ ಕನ್ನಾಳ, ರಾಜು ಭಜಂತ್ರಿ, ರಾಜು ನಾಕಮಾನ, ರಾಜು…

Read More