Author: admin

ಬೆಳಗಾವಿ: ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪಯಾತ್ರೆ ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ಇನ್ನು ಎರಡನೇ ಹಂತದ ಜನ ಸಂಪರ್ಕ ಸಭೆ ಬೆಳಗಾವಿ ಜಿಲ್ಲೆಯಲ್ಲಿ 9ರಂದು ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ. ರಾಯಭಾಗಕ್ಕೆ ತೆರಳಿ ಅಲ್ಲಿ ಜನ ಸಂಪರ್ಕ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಸಂಜೆ ಖಾನಾಪುರ ಪಟ್ಟಣದಲ್ಲಿ ಸಭೆ ನಡೆಯಲಿದ್ದು ಬಿಜೆಪಿ ನಾಯಕರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಒಂದೇ ದಿನ ಮೂರು ಕಡೆ ಸಭೆ ಮಾಡುವುದರ ಮೂಲಕ ಜಿಲ್ಲೆಯ ಬಿಜೆಪಿ ಕಾರ್ಯಕರ್ತರನ್ನ ಒಗ್ಗೂಡಿಸಿ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸಂದೇಶ ನೀಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : 11,136 ಪೌರ ಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಿದ್ದೇವೆ. ಉಳಿದವರಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರು ಕಾನ್ಸಿರಾಂ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಬಿ.ಆರ್. ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 11,136 ಪೌರ ಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಿದ್ದೇವೆ. ಉಳಿದವರಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. ಶೀಘ್ರವೇ ರಾಜ್ಯಾದ್ಯಂತ ನಗರ ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು, ಪೌರಕಾರ್ಮಿಕರ ಆಪತ್ತು ನಿಧಿಯನ್ನು 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸಮಿತಿ ರಚಿಸಿ ಅವರ ಶಿಫಾರಸ್ಸು ಅನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ : ಆರ್ಥಿಕವಾಗಿ ಮೇಲ್ವರ್ಗದ ಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲು ನೀಡುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್‌ ಇಂದು ತೀರ್ಪು ನೀಡಲಿದೆ. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಸೆಪ್ಟೆಂಬರ್ 27ರಂದು ಈ ಸಂಬಂಧ ಸಲ್ಲಿಕೆಯಾಗಿದ್ದಂತ ಅರ್ಜಿಗಳ ವಿಚಾರಣೆ ನಡೆಸಿತ್ತು. ಈ ಬಳಿಕ ತನ್ನ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ಹಿಂದುಳಿದ ವರ್ಗದವರಿಗೆ ಮೀಸಲು ಕಲ್ಪಿಸುವ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ.ಮುಖ್ಯ ನ್ಯಾಯ ಮೂರ್ತಿ ಯು.ಯು. ಲಲಿತ್‌ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಲಿದೆ. ಸಂವಿಧಾನದ 103ನೇ ತಿದ್ದುಪಡಿಯನ್ನು ಅಸಿಂಧುಗೊಳಿಸಬೇಕೆಂದು ಒಂದು ವರ್ಗ ವಾದ ಮಾಡಿಸಿತ್ತು. ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರವು ಶೇ.50:50ರ ಮೀಸಲಿಗೆ ಧಕ್ಕೆ ಬಾರದ ರೀತಿಯಲ್ಲಿ ಇವಿಎಸ್ ಗೆ ಮೀಸಲು ಕಲ್ಪಿಸಲಾಗಿದೆ ಎಂಬುದಾಗಿ ಸಮರ್ಥಿಸಿಕೊಂಡಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಧಾರವಾಡ: ಆ ಮನೆಯಲ್ಲಿ ದೇವಿಯ ಉದ್ಭವ ಮೂರ್ತಿ ಸೃಷ್ಡಿಯಾಗಿದೆ. ಹೀಗಾಗಿ ನಿತ್ಯ ಸಾವಿರಾರು ಜನ ಬಂದು ಸರತಿ ಸಾಲಿನಲ್ಲಿ ನಿಂತು ಪೂಜೆ ಮಾಡುತ್ತಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೆಟ್ಟಿ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಕಲಭಾವಿ ಅವರ ಮನೆಯಲ್ಲಿ ದ್ಯಾಮಮ್ಮನ ಉದ್ಭವ ಮೂರ್ತಿ ಸೃಷ್ಟಿಯಾಗಿದೆ. ಮನೆಯ ಕೋಣೆಯೊಂದರ ಮೂಲೆಯಲ್ಲಿ ದೇವಿ ಮೂರ್ತಿ ಸೃಷ್ಟಿಯಾಗಿದೆ. ಕಳೆದ ಹದಿನೈದು ದಿನಗಳ ಹಿಂದೆ ದ್ಯಾಮಮ್ಮನ ಉದ್ಭವ ಮೂರ್ತಿ ಉದ್ಭವವಾಗಿದ್ದು, ನಿತ್ಯ ದ್ಯಾಮಮ್ಮನಿಗೆ ಅಲಂಕಾರ ಮಾಡಿ ಪೂಜೆ ಮಾಡುತ್ತಿದ್ದಾರೆ. ಇನ್ನು ಈ ಪವಾಡ ನೋಡಿದ ಗ್ರಾಮದ ಜನರು, ಇಲ್ಲಿಗೆ ಬಂದು ಪೂಜೆ ಮಾಡಿಸಿಕೊಂಡು ಹೋಗ್ತಾ ಇದ್ದಾರೆ. ಇನ್ನು ಬಸವರಾಜ್ ಅವರಿಗೆ ಕಳೆದ ಒಂದು ವರ್ಷದಿಂದ ಮೈಮೇಲೆ ದೇವಿ ಬರ್ತಿದ್ದಾಳಂತೆ. ದೇವರು ಬಂದ ಸಮಯದಲ್ಲಿ ದ್ಯಾವಮ್ಮ ದೇವಿ ನಾನು ನಿಮ್ಮ ಮನೆಯಲ್ಲಿ ಉದ್ಭವ ಮೂರ್ತಿಯಾಗ್ತೀನಿ ಎಂದು ಹೇಳ್ತಾ ಇದ್ದಳಂತೆ. ಜೊತೆಗೆ ನಾನು ಹೇಳೋವರೆಗೂ ಕೋಣೆ ತೆರೆಯಬೇಡಿ ಎಂದು ಹೇಳಿದ್ದಳಂತೆ. ತದನಂತರ ಕೋಣೆ ತೆರೆಯುವಂತೆ ಹೇಳಿದ್ದಳಂತೆ. ಕೋಣೆ ತೆರೆದು…

Read More

ನವದೆಹಲಿ: ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರ ವೆಚ್ಚದ ಕುರಿತಂತೆ ಅಭ್ಯರ್ಥಿಯ ನಗದು ವೆಚ್ಚವನ್ನು ಹತ್ತು ಸಾವಿರ ರೂಪಾಯಿಗಳಿಂದ ಎರಡು ಸಾವಿರ ರೂಪಾಯಿಗಳಿಗೆ ಇಳಿಕೆ ಮಾಡಲು ಚಿಂತನೆ ನಡೆಸಲಾಗಿದೆ. ಚುನಾವಣಾ ವೆಚ್ಚ ಕುರಿತಂತೆ ಮತ್ತಷ್ಟು ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂಬ ಉದ್ದೇಶದಿಂದ ಈ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಕೇಂದ್ರ ಚುನಾವಣಾ ಆಯೋಗ ನಿಯಮಗಳಲ್ಲಿ ತಿದ್ದುಪಡಿ ತರುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ. ನಗದು ಮಿತಿ 2 ಸಾವಿರಗಳಿಗಿಂತ ಹೆಚ್ಚಿನ ಮೊತ್ತವನ್ನು ವ್ಯಯಿಸಬೇಕಾದ ಸಂದರ್ಭದಲ್ಲಿ ಅಭ್ಯರ್ಥಿಗಳು ಚೆಕ್, ಆನ್‌ ಲೈನ್ ರೂಪದಲ್ಲಿ ಪಾವತಿಸಬೇಕು ಎಂದು ಚುನಾವಣಾ ಆಯೋಗ ಶಿಫಾರಸ್ಸು ಮಾಡಿದೆ. ಅಲ್ಲದೆ ಅಭ್ಯರ್ಥಿಗಳು ತಮ್ಮ ಚುನಾವಣಾ ವೆಚ್ಚಗಳನ್ನು ಬ್ಯಾಂಕ್ ಖಾತೆಯ ಮೂಲಕವೇ ನಿರ್ವಹಿಸಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತ್ರಿಪುರಾ : 15 ವರ್ಷದ ಬಾಲಕನೊಬ್ಬ ತನ್ನ ತಾಯಿ ಮತ್ತು ಸಹೋದರಿ ಸೇರಿದಂತೆ ಕುಟುಂಬದ ನಾಲ್ವರನ್ನು ಕೊಂದು, ಸೆಪ್ಟಿಕ್ ಟ್ಯಾಂಕ್  ನಲ್ಲಿ ಶವಗಳನ್ನು ಹೂತು ಹಾಕಿದ ಆಘಾತಕಾರಿ ಘಟನೆ ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ನಡೆದಿದೆ. ಧಲೈ ಜಿಲ್ಲೆಯ ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ದುರೈ ಶಿಬ್ ಬಾರಿ ಎಂಬ ಗ್ರಾಮದಲ್ಲಿ ನೆಲೆಸಿದ್ದ ಅಜ್ಜ ಬಾದಲ್ ದೇಬನಾಥ್ (70), ತಾಯಿ ಸಮಿತಾ ದೇಬನಾಥ್ (32), ಚಿಕ್ಕಮ್ಮ ರೇಖಾ ದೇಬ್ (42) ಮತ್ತು 10 ವರ್ಷದ ಬಾಲಕಿ ಕೊಲೆಯಾಗಿದ್ದಾರೆ. ಆರೋಪಿ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ನಾಲ್ವರನ್ನು ಕೊಲೆ ಮಾಡಲಾಗಿದೆ. ಶವಗಳು ಮನೆಯ ಹಿಂದೆ ಸೆಪ್ಟಿಕ್ ಟ್ಯಾಂಕ್  ನಲ್ಲಿ ದೊರೆತಿವೆ. ಬಸ್ ಕಂಡೆಕ್ಟರ್ ಆಗಿರುವ ಬಾಲಕನ ತಂದೆ ಹರದನ್ ದೇಬನಾಥ್ ಮಧ್ಯರಾತ್ರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಪಿ ಆನ್ ​ಲೈನ್​ ಗೇಮ್​​ ವ್ಯಸನಿಯಾಗಿದ್ದ. ಇದಕ್ಕಾಗಿ ಮನೆಯಲ್ಲಿ ಆಗಾಗ್ಗೆ…

Read More

ಕಾರವಾರ: ಪಾಕಿಸ್ತಾನದಿಂದ ಅಕ್ರಮವಾಗಿ ಬಂದು ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ನೆಲಸಿದ್ದ ಪಾಕ್​ ಮಹಿಳೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಖತೀಜಾ ಮೆಹರೀನ್ ​ಗೆ ಧಾರವಾಡ ಹೈಕೋರ್ಟ್​​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣ ವಿಚಾರವಾಗಿ ಧಾರವಾಡ ಪೀಠದಲ್ಲಿ ವಿಚಾರಣೆ ಮಾಡಲಾಗಿದ್ದು, 1 ಲಕ್ಷ ಮೌಲ್ಯದ ಬಾಂಡ್ ಸಲ್ಲಿಸಬೇಕು, ಸಾಕ್ಷಿ ನಾಶಕ್ಕೆ ಯತ್ನಿಸಬಾರದು. ಪೂರ್ವಾನುಮತಿ ಇಲ್ಲದೇ ಬೇರೆ ಸ್ಥಳಕ್ಕೆ ಹೋಗಬಾರದು. ಹೀಗೆ ಹಲವು ಷರತ್ತು ವಿಧಿಸಿ ಪಾಕಿಸ್ತಾನ ಮಹಿಳೆಗೆ ಜಾಮೀನು ಮಂಜೂರು ಮಾಡಲಾಗಿದೆ.​ ಪಾಕ್​ ಮಹಿಳೆ ಪಾಸ್‌ಪೋರ್ಟ್ ಹಾಗೂ ಇತರೆ ಯಾವುದೇ ದಾಖಲೆ ಇಲ್ಲದೇ ಭಾರತಕ್ಕೆ ಮಹಿಳೆ ನುಸುಳಿದ್ದಳು. ಈ ಹಿನ್ನೆಲೆ 2021ರಲ್ಲಿ ಗುಪ್ತಚರ ಇಲಾಖೆ, ಪೊಲೀಸರು ಖತೀಜಾಳನ್ನು ವಶಕ್ಕೆ ಪಡೆದಿದ್ದರು. ದಿ.ಜಾವೇದ್ ರುಕ್ನುದ್ದೀನ್​ ಜೊತೆ ಮದುವೆಯಾಗಿದ್ದು, ಮೂವರು ಮಕ್ಕಳನ್ನು ದಂಪತಿ ಹೊಂದಿದ್ದರು. ಆದರೆ ಇತ್ತೀಚೆಗೆ ಹೃದಯಾಘಾತದಿಂದ ಪತಿ ಜಾವೇದ್ ಮೃತಪಟ್ಟಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ವಾಷಿಂಗ್ಟನ್‌: ಸಂಸತ್ತಿನ ಕೆಳಮನೆ ಜನಪ್ರತಿನಿಧಿ ಸಭೆಗೆ ನಡೆಯುತ್ತಿರುವ ಮಧ್ಯಂತರ ಚುನಾವಣೆಯಲ್ಲಿ ಬೆಳಗಾವಿ ಮೂಲದ ಉದ್ಯಮಿ ಥಾಣೇದಾರ್‌ ಸೇರಿದಂತೆ ಐವರು ಭಾರತೀಯರು ರೇಸ್‌ ನಲ್ಲಿದ್ದಾರೆ. ಅಲ್ಲದೇ ಭಾರತೀಯರೇ ಗೆಲ್ಲುವ ಸಾಧಿಸಲಿದ್ದಾರೆ ಎನ್ನಲಾಗಿದೆ. ಬೆಳಗಾವಿ ಮೂಲದವರಾದ ಥಾಣೆದಾರ್‌ ಉದ್ಯಮಿಯಾಗಿದ್ದು, ಹಲವು ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದಾರೆ. ಮಧ್ಯಂತರ ಚುನಾವಣೆಯಲ್ಲಿ ಇವರು ಕ್ಯಾಲಿಫೋರ್ನಿಯಾದ 7ನೇ ಜಿಲ್ಲೆಯಿಂದ ಸ್ಪರ್ಧಿಸುತ್ತಿದ್ದಾರೆ. ಇವರಲ್ಲದೇ ಅಮಿ ಬೇರಾ, ರಾಜಾ ಕೃಷ್ಣಮೂರ್ತಿ , ರೋ ಖನ್ನಾ ಮತ್ತು ಪ್ರಮಿಳಾ ಜೈಪಾಲ್‌ ಸಹ ವಿವಿಧ ಕ್ಷೇತ್ರಗಳಿಂದ ಚುನಾವಣಾ ರೇಸ್‌ನಲ್ಲಿದ್ದಾರೆ. ಇವರಲ್ಲಿ ಬೇರಾ ಅತ್ಯಂತ ಹಿರಿಯರಾಗಿದ್ದು, ಈವರೆಗೆ 6 ಬಾರಿ ಗೆಲುವು ಸಾಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕೋಲಾರ : ಹೆಣ್ಣು ಮಗು ಹುಟ್ಟಿದ್ದಕ್ಕೆ ತಂದೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಶೆಟ್ಟಿಹಳ್ಳಿ ಗ್ರಾಮದ ಲೋಕೇಶ್ (34) ನೇಣಿಗೆ ಶರಣಾದ ವ್ಯಕ್ತಿ, ಮತ್ತೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋಕೇಶ್ ಗೆ ಈ ಮೊದಲು ಮೂವರು ಹೆಣ್ಣು ಮಕ್ಕಳು ಜನಿಸಿದ್ದರು. ಮತ್ತೆ 4 ನೇ ಮಗುವೂ ಕೂಡ ಹೆಣ್ಣು ಆಗಿರುವುದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾಜಿ ಸಚಿವ ರಮೇಶ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ರಮೇಶ್ ಜಾರಕಿಹೊಳಿ ಜೆಡಿಎಸ್ ಗೆ ಬಂದರೆ ಸ್ವಾಗತ, ಜೆಡಿಎಸ್ ಪಕ್ಷ ಜನರಿಗಾಗಿ ಇರುವ ಪಕ್ಷ. ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ರಮೇಶ್ ಜಾರಕಿಹೊಳಿ ಅಥವಾ ಯಾರೇ ಬಂದರೂ ಸ್ವಾಗತ ಎಂದರು. ಎಲ್ಲ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜೆಡಿಎಸ್ ಕೆಲಸ ಮಾಡುತ್ತಿದೆ. ಇದು ಸರ್ವಜನಾಂಗದ ಶಾಂತಿಯ ತೋಟ ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕಿದೆ. ವಿಧಾನಸಭಾ ಚುನಾವಣೆಯಲ್ಲಿ ಈ ಭಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷ ಸಂಘಟಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬರುತ್ತಿದ್ದಾರೆ. ಜನರು ಸಾವಿರಾರು ಸಂಖ್ಯೆಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More