Author: admin

ರಾಜ್ಯ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದರು. ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಳಿಕ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿಯಾಗಿ ಜೆಪಿ ನಡ್ಡಾ ಅವರು ಆಶೀರ್ವಾದ ಪಡೆದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಜೆ.ಸಿ ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಳೆದ 5 ವರ್ಷದ ಹಿಂದೆ ಬಿಜೆಪಿ ಸೇರಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಾನಸಭಾ ಚುನಾವಣೆ ಹತ್ತಿರವಿರುವಾಗ ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ್ದಾರೆ. ಅಲ್ಲದೆ ವರಿಷ್ಠರಿಗೆ ತಿಳಿಸಿ ನಿವೃತ್ತಿ ಘೋಷಿಸುವ ಅವಶ್ಯಕತೆ ಇಲ್ಲ, ಅವರೇನೂ ಪಿಂಚಣಿ ಕೊಡಲ್ಲವೆಂದು ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರಾಗಿದ್ದ ಕೃಷ್ಣ, ಬಿಜೆಪಿ ಸೇರಿದ್ದ ಬೆನ್ನಲ್ಲೇ ಅವರನ್ನು ರಾಷ್ಟ್ರಪತಿ ಮಾಡಲಾಗುತ್ತದೆ ಎನ್ನಲಾಗುತ್ತಿತ್ತು. ಆದರೆ ಅವರು ಬಿಜೆಪಿಯಲ್ಲಿ ಯಾವುದೇ ಹುದ್ದೆ ಅಲಂಕರಿಸಲಿಲ್ಲ. ಬೆಂಗಳೂರಿನ ಚಿತ್ರಕಲಾ ಪರಿಷತ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೀಗ 90 ವರ್ಷ, ವಯಸ್ಸಿನ ಬಗ್ಗೆ ನಮಗೆ ಅರಿವು ಇರಬೇಕು. 90ರಲ್ಲಿ 50 ವರ್ಷದ ರೀತಿ ನಟನೆ ಮಾಡಲು ಆಗುವುದಿಲ್ಲ. ಅದಕ್ಕಾಗಿ ಕ್ರಮೇಣವಾಗಿ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಎಸ್ಎಂ ಕೃಷ್ಣ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಜ್ಯದಲ್ಲಿ ಲಾಟರಿ ಮಾರಾಟವನ್ನು ಮರು ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘವು ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತು ಮಾತನಾಡಿದ ಸಂಘದ ಅಧ್ಯಕ್ಷ ಸಿ.ರಾಮಕೃಷ್ಣ, ಈಶಾನ್ಯ ರಾಜ್ಯಗಳು ಹಾಗೂ ಕೇರಳದ ಲಾಟರಿ ಟಿಕೆಟ್ ಗಳು ರಾಜ್ಯದಲ್ಲಿ ಅಕ್ರಮವಾಗಿ ಹಾಗೂ ಆನ್ ಲೈನ್ ಮುಖೇನ  ನಡೆಯುತ್ತಿವೆ. ಇದನ್ನು ತಡೆಯಲು ಸರ್ಕಾರ 30 ದಿನಗಳಲ್ಲಿ ಕ್ರಮ ವಹಿಸಿ ಸಮಿತಿ ರಚಿಸಬೇಕು. ಇಲ್ಲವಾದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆಂದು ಎಚ್ಚರಿಸಿದ್ದಾರೆ. ಕೇರಳ ಲಾಟರಿ ಟಿಕೆಟ್‌.. ಆನ್​ಲೈನ್​ ಹಾಗೂ ಹೊರ ರಾಜ್ಯದವರು ಖರೀದಿಸಬಹುದೇ, ಗೆದ್ದ ಹಣ ಪಡೆಯುವುದು ಹೇಗೆ? ಕೇರಳದ ಬಂಪರ್ ಲಾಟರಿಯಲ್ಲಿ ಆಟೋ ರಿಕ್ಷಾ ಚಾಲಕ 25 ಕೋಟಿ ರೂಪಾಯಿ ಹಣ ಗೆದ್ದು ದೇಶದ ಗಮನ ಸೆಳೆದಿದ್ದಾರೆ. ಕೇರಳ ಲಾಟರಿ ಟಿಕೆಟ್‌ಗಳನ್ನು ಹೊರ ರಾಜ್ಯದವರು ಖರೀದಿಸಬಹುದೇ ಹಾಗೂ ಆನ್‌ಲೈನ್​ನಲ್ಲಿ ಲಾಟರಿ ಟಿಕೆಟ್‌ ಲಭ್ಯ ಇವೆಯೇ ಎಂಬ ಪ್ರಶ್ನೆಗಳು ಹಲವರನ್ನು ಕಾಡುತ್ತಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ತುರುವೇಕೆರೆ: ಕೊಬ್ಬರಿ ತುಂಬಿದ್ದ ಶೆಡ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಸುಮಾರು 25 ಸಾವಿರಕ್ಕೂ ಅಧಿಕ ಕೊಬ್ಬರಿಗಳು ಬೆಂಕಿಗಾಹುತಿಯಾದ ಘಟನೆ ತುರುವೇಕೆರೆ ತಾಲೂಕು ತಾವರೆಕೆರೆಯ ಬಾನಿ ನಿಂಗಯ್ಯ ಎಂಬವರ ತೋಟದ ಮನೆಯಲ್ಲಿ ನಡೆದಿದೆ. ತಾವರೆಕೆರೆ ಗ್ರಾಮದ ತೋಟದ ಹತ್ತಿರ ನಿರ್ಮಿಸಿರುವ ಕೊಬ್ಬರಿ ಶೆಡ್ ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಸುಮಾರು 25 ಸಾವಿರಕ್ಕೂ ಅಧಿಕ ಕೊಬ್ಬರಿಗಳು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ. ಘಟನೆಯಿಂದ ಸುಮಾರು 30 ಲಕ್ಷ ಬೆಲೆ ಬಾಳುವ ಕೊಬ್ಬರಿ ಬೆಂಕಿಗಾಹುತಿಯಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ದಂಡಾಧಿಕಾರಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರಿನಲ್ಲಿ ರಾಜ್ಯದ ಪ್ರಥಮ ವನ್ಯಜೀವಿ ವಿಧಿ ವಿಜ್ಞಾನಗಳ ಪ್ರಯೋಗಾಲಯ ಸ್ಥಾಪನೆಯಾಗಲಿದ್ದು, ಇದಕ್ಕೆ ರಾಜ್ಯ ಸರ್ಕಾರ 12.7 ಕೋಟಿ ಅನುದಾನ ನೀಡಲು ಒಪ್ಪಿದೆ. ಮಾರ್ಚ್‌ನಿಂದ ಈ ಪ್ರಯೋಗಾಲಯ ಕಾರ್ಯಾರಂಭ ಮಾಡಲಿದೆ. ವನ್ಯಜೀವಿಗಳ ಮೇಲಿನ ಅಪರಾಧಗಳ ಬಗ್ಗೆ ತನಿಖೆ ನಡೆಸಲು, ಅಪರಾಧಿಗಳಿಗೆ ಶಿಕ್ಷೆ ಕೊಡಿಸಲು ಈ ಪ್ರಯೋಗಾಲಯ ನೆರವಾಗಲಿದೆ.ಈವರೆಗೆ ಸ್ಯಾಂಪಲ್‌ಗಳನ್ನು ಡೆಹ್ರಾಡೂನ್ ಅಥವಾ ಹೈದರಾಬಾದ್‌ನಲ್ಲಿದ್ದ ಪ್ರಯೋಗಾಲಯಗಳಿಗೆ ಕಳುಹಿಸಲಾಗುತ್ತಿತ್ತು. ಕಳೆದ ಒಂದು ದಶಕದಿಂದ ಪ್ರಯೋಗಾಲಯ ಸ್ಥಾಪನೆಯ ಪ್ರಸ್ತಾವನೆ ಚರ್ಚೆಯಲ್ಲಿದ್ದು, ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಒಪ್ಪಿಗೆ ನೀಡಿದೆ. ವನ್ಯಜೀವಿಗಳ ಮೇಲಿನ ಅಪರಾಧಗಳ ಬಗ್ಗೆ ತನಿಖೆ ನಡೆಸಲು ಈ ಪ್ರಯೋಗಾಲಯ ನೆರವಾಗಲಿದೆ. ಇದರಿಂದ ಅಪರಾಧಿಗಳಿಗೆ ಶಿಕ್ಷೆ ಕೊಡಿಸಲು ನೆರವಾಗಲಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚಳಿಗಾಲದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಕೂದಲು ಉದುರುವುದರಲ್ಲಿ ಆಶ್ಚರ್ಯವಿಲ್ಲ ಎಂಬುದು ತಜ್ಞರ ಅಭಿಪ್ರಾಯ. ಆದಾಗ್ಯೂ, ಅತಿಯಾದ ಕೂದಲು ಉದುರುವಿಕೆಗೆ ಚಿಕಿತ್ಸೆ ನೀಡದಿದ್ದರೆ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಕೂದಲಿನ ನಿರ್ಜಲೀಕರಣ ಮತ್ತು ನೆತ್ತಿಯ ಶುಷ್ಕತೆ ಚಳಿಗಾಲದಲ್ಲಿ ಕೂದಲು ಉದುರುವಿಕೆಗೆ ಮುಖ್ಯ ಕಾರಣಗಳಾಗಿವೆ. ಕೂದಲು ಉದುರುವುದನ್ನು ಕಡಿಮೆ ಮಾಡಲು ಈ ಹಂತಗಳನ್ನು ಅನುಸರಿಸಿ. ಚಳಿಗಾಲದಲ್ಲಿ, ಕೂದಲಿನ ತೇವಾಂಶವನ್ನು ಕಾಪಾಡಿಕೊಳ್ಳಲು, ವಾರಕ್ಕೆ ಎರಡು ಬಾರಿ ಎಣ್ಣೆಯಿಂದ ಸ್ನಾನ ಮಾಡುವ ಅಭ್ಯಾಸವನ್ನು ಮಾಡಿ. ಆಲಿವ್ ಎಣ್ಣೆ, ಬಾದಾಮಿ ಎಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಬಳಸುವುದು ಉತ್ತಮ. ಶೀತ ಋತುವಿನಲ್ಲಿ ಶಾಂಪೂ ಮತ್ತು ಕಂಡಿಷನರ್ ಅನ್ನು ಆಯ್ಕೆಮಾಡುವಾಗ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಕೂದಲನ್ನು ಒಣಗಿಸುವ ಶ್ಯಾಂಪೂಗಳನ್ನು ತಪ್ಪಿಸಿ. ಅಂತಹ ಉತ್ಪನ್ನಗಳನ್ನು ಕೂದಲಿಗೆ ಚಳಿಗಾಲಕ್ಕೆ ಸೂಕ್ತವೆಂದು ಖಚಿತಪಡಿಸಿಕೊಂಡ ನಂತರವೇ ಬಳಸಿ.ನಿಮ್ಮ ಕೂದಲು ಒಣಗುವ ಮೊದಲು ಹೊರಗೆ ಹೋಗಬೇಡಿ.ನಿಮ್ಮ ಕೂದಲು ಸಂಪೂರ್ಣವಾಗಿ ಒಣಗಿದೆ ಎಂದು ಖಚಿತಪಡಿಸಿಕೊಳ್ಳಿ ಮತ್ತು ನಂತರ ಹೊರಬನ್ನಿ. ಪ್ರತಿದಿನ ತಲೆಗೆ ಸ್ನಾನ ಮಾಡಬೇಡಿ.ಅತಿಯಾಗಿ ತಲೆಗೆ ಸ್ನಾನ ಮಾಡುವುದರಿಂದ ಕೂದಲಿನ…

Read More

250ಕ್ಕೂ ಹೆಚ್ಚು ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿದ್ದ ರಾಮನಗರದ ಪೊಲೀಸ್ ಶ್ವಾನ ‘ರಾಮ್’ ನಿಧನಹೊಂದಿದೆ. 2017ರಲ್ಲಿ ಜಿಲ್ಲಾ ಪೊಲೀಸ್ ಘಟಕಕ್ಕೆ ಸೇರ್ಪಡೆಗೊಂಡಿದ್ದ ಹೆಮ್ಮೆಯ ಶ್ವಾನ, 6 ವರ್ಷ ಸೇವೆ ಸಲ್ಲಿಸಿ ಹೃದಯಾಘಾತದಿಂದ ಮೃತಪಟ್ಟಿದೆ. 30 ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿ ಪ್ರಶಂಸೆಗೆ ಪಾತ್ರವಾಗಿತ್ತು. ಚನ್ನಪಟ್ಟಣದ ಡಿಎಆರ್ ಕವಾಯತು ಮೈದಾನದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ‘ರಾಮ್’ ನಿಧನಕ್ಕೆ ಪೊಲೀಸ್ ಅಧಿಕಾರಿಗಳು ಕಂಬನಿ ಮಿಡಿದರು. ರಾಮನಗರ ಜಿಲ್ಲೆಯ ಪೊಲೀಸ್‌ ಘಟಕದಲ್ಲಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾ ಶ್ವಾನ ರಾಮ್‌ 250 ಕ್ಕೂ ಹೆಚ್ವು ಪ್ರಕರಣಗಳಲ್ಲಿ ಭಾಗಿಯಾಗಿ ಆರೋಪಿಗಳ ಪತ್ತೆ ಹಚ್ಚುವಲ್ಲಿ ನಿರತವಾಗಿತ್ತು. ಈ ಪೈಕಿ ಪೊಲೀಸರ ಕೈಯಿಂದಲೂ ಪತ್ತೆಹಚ್ಚಲಾಗದ 30 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ರಾಮ್ ಶ್ವಾನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿ ಆಗಿತ್ತು. ಇದರಿಂದಾಗಿಯೇ ಜಿಲ್ಲಾ ಪೊಲೀಸ್‌ ಘಟಕದಲ್ಲಿ ಅತ್ಯಂತ ಪ್ರೀತಿ ಪಾತ್ರವಾಗಿತ್ತು. ಎಲ್ಲರ ಸ್ನೇಹವನ್ನು ಬಯಸದಿದ್ದರೂ, ಒಮ್ಮೆ ಪೊಲೀಸರನ್ನು ಹಚ್ಚಿಕೊಂಡರೆ ಅವರಿಗೆ ತುಂಬಾ ಆತ್ಮೀಯತೆಯಿಂದ ಇರುತ್ತಿತ್ತು. ಆದರೆ, ಇಂದು…

Read More

ಭಾರತ ಇಂದು ಶ್ರೀಲಂಕಾ ವಿರುದ್ಧದ ಟ್ವೆಂಟಿ-20 ಸರಣಿಯನ್ನು ಗುರಿಯಾಗಿಸಿಕೊಂಡಿದೆ. ಮೊದಲ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಮೊಣಕಾಲು ಗಾಯಗೊಂಡಿದ್ದ ಸಂಜು ಸ್ಯಾಮ್ಸನ್ ಇಂದು ಆಡುವುದಿಲ್ಲ. ಸಂಜು ಬದಲಿಗೆ ವಿದರ್ಭ ವಿಕೆಟ್‌ಕೀಪರ್ ಜಿತೇಶ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ  ಬಗ್ಗೆ ಬಿಸಿಸಿಐ ಅಧಿಕೃತವಾಗಿ ಮಾಹಿತಿ ನೀಡಿದೆ.ಸಂಜು ಬದಲಿಗೆ ರಿತುರಾಜ್ ಗಾಯಕ್ವಾಡ್ ಅಥವಾ ರಾಹುಲ್ ತ್ರಿಪಾಠಿ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.ಸಂಜು ಅವರ ಎಡ ಮೊಣಕಾಲಿಗೆ ಗಾಯವಾಗಿದೆ. ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಈ ಘಟನೆ ನಡೆದಿದೆ. ಹೆಚ್ಚಿನ ಪರೀಕ್ಷೆಗಳಿಗಾಗಿ ಬಿಸಿಸಿಐ ವೈದ್ಯಕೀಯ ತಂಡ ಮುಂಬೈನಲ್ಲಿ ಅವರೊಂದಿಗಿದೆ. ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ಎರಡನೇ ಟ್ವೆಂಟಿ-20 ಇಂದು ಪುಣೆಯಲ್ಲಿ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಸರಣಿಯಲ್ಲಿ ಭರವಸೆ ಜೀವಂತವಾಗಿರಿಸಲು ಶ್ರೀಲಂಕಾಗೆ ಗೆಲುವು ಅತ್ಯಗತ್ಯ. ಎಲ್ಲಾ ಯುವ ಆಟಗಾರರು ತಂಡದಲ್ಲಿ ಸ್ಥಾನ ಪಡೆಯಲು ಸರಣಿ ನಿರ್ಣಾಯಕವಾಗಿದೆ. ಶ್ರೀಲಂಕಾ ತಂಡದಲ್ಲಿ ಯಾವುದೇ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇಲ್ಲ. MCA ಸ್ಟೇಡಿಯಂನಲ್ಲಿ ಆಡಿದ ಮೂವತ್ನಾಲ್ಕು ಟ್ವೆಂಟಿ-20 ಗಳಲ್ಲಿ,…

Read More

ಮಹಾರಾಷ್ಟ್ರದಲ್ಲಿ ಸೆಲ್ಫಿ ಕ್ರೇಜ್ ಒಬ್ಬರ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ವರಂದ ಘಾಟ್ ರಸ್ತೆಯಲ್ಲಿ ಮಂಗಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಅಬ್ದುಲ್ ಶೇಖ್ ಎಂಬ ವ್ಯಕ್ತಿ 500 ಅಡಿ ಕಮರಿಗೆ ಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಅವರ ಮೃತದೇಹ ಪತ್ತೆಯಾಗಿದೆ. ಕಾರಿನಲ್ಲಿ ಕೊಂಕಣಕ್ಕೆ ತೆರಳುತ್ತಿದ್ದ ಅಬ್ದುಲ್, ವರಂದಾ ಘಾಟ್ ರಸ್ತೆಯ ವಾಕ್ ಜೈ ದೇವಸ್ಥಾನದ ಬಳಿ ನಿಲ್ಲಿಸಿ, ಮಂಗಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದರು.ಆಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಉತ್ತರ ಪ್ರದೇಶದಲ್ಲಿ ನಜ್ರಾನಾ ಎಂಬ ಮಹಿಳೆ ಹೊಟ್ಟೆ ನೋವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಮತ್ತು ಸಿಬ್ಬಂದಿ ಮಹಿಳೆಯ ಹೆರಿಗೆಗೆ ಸಹಕರಿಸಿದರು. ಆದರೆ ಆಪರೇಷನ್ ವೇಳೆ ಟವೆಲ್ ಮರೆತು ಹೊಟ್ಟೆಗೆ ಹೊಲಿಗೆ ಹಾಕಿದ್ದಾರೆ. ಇದರಿಂದ ನಜ್ರಾನಾಗೆ ಹೊಟ್ಟೆನೋವು ಉಂಟಾಗಿದೆ. ತೀವ್ರ ಹೊಟ್ಟೆನೋವಿನ ಬಗ್ಗೆ ವೈದ್ಯರನ್ನು ಸಂಪರ್ಕಿಸಿದ್ದು, ವಿಪರೀತ ಚಳಿಯಿಂದಾಗಿ ಎಂದು ಹೇಳಿದ್ದಾರೆ. ಆದರೆ ಹೊಟ್ಟೆ ನೋವು ಕಡಿಮೆಯಾಗದ ಕಾರಣ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು, ಮತ್ತೊಮ್ಮೆ ಆಪರೇಷನ್ ಮಾಡಿ ಹೊಟ್ಟೆಯಲ್ಲಿದ್ದ ಟವೆಲ್ ಹೊರತೆಗೆದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More