Author: admin

ನೆರೆಯ ಪಾಕಿಸ್ತಾನ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದು ದೇಶದಾದ್ಯಂತ ಕಠಿಣ ಕ್ರಮಗಳಿಗೆ ಕಾರಣವಾಗುವ ನಿರೀಕ್ಷೆಯಿದೆ. ಇತ್ತೀಚೆಗೆ ಘೋಷಿಸಲಾದ ಇಂಧನ ಉಳಿತಾಯ ಕ್ರಮಗಳಿಂದಾಗಿ ಮಾರುಕಟ್ಟೆಗಳು ರಾತ್ರಿ 8.30 ಕ್ಕೆ ಮತ್ತು ಉತ್ಸವ ಸಭಾಂಗಣಗಳನ್ನು ಬೆಳಿಗ್ಗೆ 10 ಗಂಟೆಗೆ ಮುಚ್ಚಲಾಗುವುದು ಎಂದು ಪಾಕಿಸ್ತಾನದ ಸಚಿವ ಖವಾಜಾ ಆಸಿಫ್ ಘೋಷಿಸಿದ್ದಾರೆ. ಅಲ್ಲದೆ, ಫೆಬ್ರವರಿಯಿಂದ ಬಲ್ಬ್‌ಗಳ ಉತ್ಪಾದನೆ ಮತ್ತು ಜುಲೈನಿಂದ ಗುಣಮಟ್ಟವಿಲ್ಲದ ಫ್ಯಾನ್‌ಗಳ ಉತ್ಪಾದನೆಯನ್ನು ನಿಲ್ಲಿಸಲಾಗುವುದು ಎಂದು ತಿಳಿದುಬಂದಿದೆ. ಸರಕಾರಿ ಕಚೇರಿಗಳಲ್ಲಿ ಶೇ.30ರಷ್ಟು ವಿದ್ಯುತ್ ಉಳಿತಾಯಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು, ಇಂಧನ ಉಳಿತಾಯ ಯೋಜನೆಗಳನ್ನು ಕೂಡಲೇ ಜಾರಿಗೊಳಿಸಲಾಗುವುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅಮೆಜಾನ್ ಈಗಾಗಲೇ ತನ್ನ ಕೆಲವು ಉದ್ಯೋಗಿಗಳನ್ನು ವಜಾಗೊಳಿಸಿದೆ. ಮತ್ತೊಮ್ಮೆ, ಅಮೆಜಾನ್ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ವೆಚ್ಚ ಕಡಿತ ಕ್ರಮಗಳ ಭಾಗವಾಗಿ, ಏಕಕಾಲದಲ್ಲಿ 18,000 ಉದ್ಯೋಗಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ. ಆದಾಗ್ಯೂ, ಜನವರಿ 18 ರಂದು ಯಾರನ್ನು ವಜಾಗೊಳಿಸಲಾಗುವುದು ಎಂಬುದನ್ನು ಪ್ರಕಟಿಸುವುದಾಗಿ ಅಮೆಜಾನ್ ಮುಖ್ಯ ಕಾರ್ಯನಿರ್ವಾಹಕ ಆಂಡಿ ಜೇಸಿ ಹೇಳಿದ್ದಾರೆ. ಅಮೆಜಾನ್ ಪ್ರಸ್ತುತ 3 ಲಕ್ಷ ಉದ್ಯೋಗಿಗಳನ್ನು ಹೊಂದಿದ್ದು, ಇತ್ತೀಚಿನ ನಿರ್ಧಾರದಿಂದ ಶೇಕಡಾ 6 ರಷ್ಟು ಉದ್ಯೋಗ ನಷ್ಟವಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಇಡೀ ವಿಶ್ವದಲ್ಲೇ ಬೆಂಗಳೂರು ಮಹಾನಗರ ಅತ್ಯಂತ ದುಬಾರಿ ನಾಯಿಗಳಿರುವ ನಗರವಂತೆ! ಇದು ನಿಮಗೆ ತಿಳಿದಿತ್ತೇ?! ಕಡಬೊಮ್ ಕೆನ್ನೆಲ್ಸ್ ಎಂಬ ಹೆಸರಿನ ಸಂಸ್ಥೆಯೊಂದರ ಮಾಲೀಕರು ಹಾಗೂ ಭಾರತೀಯ ನಾಯಿ ತಳಿಗಳ ಸಂಘದ ಸತೀಶ್ ಅವರು ಅತ್ಯಂತ ದುಬಾರಿ ನಾಯಿಗಳನ್ನು ಖರೀದಿಸುವಲ್ಲಿ ನಿಪುಣರು. ಇವರು ಇತ್ತೀಚೆಗೆ ಖರೀದಿಸಿರುವ ನಾಯಿಯ ಬೆಲೆ ಬರೋಬ್ಬರಿ ರೂ.೨೦ ಕೋಟಿಗಳಂತೆ. ಈ ನಾಯಿ ಕಾಕೇಸಿಯನ್ ಷೆಪರ್ಡ್ ಜಾತಿಗೆ ಸೇರಿದ್ದು, ಬಹುಪಾಲು ರಷ್ಯಾ, ಟರ್ಕಿ, ಅಮೇನಿಯಾ, ಸಕಾಸ್ಸಿಯ ಹಾಗೂ ಜಿಯೋರ್ಜಿಯದಂತಹ ದೇಶಗಳಲ್ಲಿ ಮಾತ್ರ ಲಭಿಸುತ್ತದೆ. ಆದರೆ ಭಾರತದಲ್ಲಿ ಈ ಜಾತಿಯ ನಾಯಿ ಬಹಳ ಅಪರೂಪ. ಈ ಜಾತಿಯ ನಾಯಿಗಳು, ಬಹಳ ಧೈರ್ಯ, ವಿಶ್ವಾಸ, ಭಯರಹಿತ ಹಾಗೂ ಅತ್ಯಂತ ಬುದ್ಧಿವಂತ ನಾಯಿಗಳಂತೆ. ಇವು ನೋಡಲು ಬಹಳ ದೊಡ್ಡ ಗಾತ್ರವನ್ನು ಹೊಂದಿರುತ್ತವೆ ಮತ್ತು ೧೦-೧೨ ವರ್ಷ ಜೀವಿಸುತ್ತವಂತೆ. ಅಮೇರಿಕನ್ ಕೆನ್ನೆಲ್ ಕ್ಲಬ್‌ ನ ಪ್ರಕಾರ, ಈ ಕಾಕೇಸಿಯನ್ ಷೆಪರ್ಡ್ಸ್ ಜಾತಿಯ ನಾಯಿಗಳನ್ನು ಭೂಮಿ ಒತ್ತುವರಿಯನ್ನು ತಡೆಗಟ್ಟಲು, ಹಸು ಹಾಗೂ ಇತರೆ ಸಾಕುಪ್ರಾಣಿಗಳಂತಹ ಜಾನುವಾರುಗಳನ್ನು ನರಿ,…

Read More

ಬೆಳಗಾವಿ: ಯಲ್ಲಮ್ಮನ ಗುಡ್ಡಕ್ಕೆ ಭಕ್ತರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಮರಕ್ಕೆ ಡಿಕ್ಕಿಯಾಗಿ 6 ಜನ ಸಾವನ್ನಪ್ಪಿದ್ದ ಭೀಕರ ಘಟನೆ ರಾಮದುರ್ಗ ತಾಲ್ಲೂಕಿನ ಚಿಂಚನೂರು ಗ್ರಾಮದ ವಿಠ್ಠಲ ದೇವಸ್ಥಾನದ ಹತ್ತಿರ ನಡೆದಿದೆ. ಗೂಡ್ಸ್ ವಾಹನ ಆಲದ ಮರಕ್ಕೆ ಗುದ್ದಿದ್ದರಿಂದ ಸ್ಥಳದಲ್ಲಿ ಐವರು ಮತ್ತು ಆಸ್ಪತ್ರೆಯಲ್ಲೊಬ್ಬರು ಅಸುನೀಗಿದ್ದಾರೆ.ಮೃತರನ್ನು ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ನಿವಾಸಿಗಳಾದ ಹನಮವ್ವ (25), ದೀಪಾ (32), ಸವಿತಾ(17), ಸುಪ್ರಿತಾ(11), ಮಾರುತಿ (42), ಇಂದರವ್ವಾ (24) ಎಂದು ಗುರುತಿಸಲಾಗಿದೆ. ಇವರು ಮಧ್ಯ ರಾತ್ರಿ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಯಾತ್ರಾರ್ಥಿ ಗಳ  ವಾಹನ ಅಪಘಾತವಾಗಿ 6 ಜನ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಭೇಟಿ ನೀಡಿದ್ದಾರೆ. ಪ್ರಕರಣ ಕಟಕೋಳ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ) ಪಕ್ಷದ ಪ್ರಣಾಳಿಕೆ ಮತ್ತು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಜನವರಿ 16ರ ನಂತರ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, , ಜನರಿಂದ ಸಿಗುತ್ತಿರುವ ಪ್ರತಿಕ್ರಿಯೆ ನೋಡಿದರೆ, ನಮ್ಮ ಪಕ್ಷ ಬಲವನ್ನು ಹೆಚ್ಚಿಸಿಕೊಳ್ಳುವ ವಿಶ್ವಾಸವಿದೆ ಎಂದರು. ರೆಡ್ಡಿ ಮತ್ತು ಅವರ ಪತ್ನಿ ಅರುಣಾ ಲಕ್ಷ್ಮಿ ಅವರು ಪಕ್ಷವನ್ನು ಪ್ರಾರಂಭಿಸಿದ ತಕ್ಷಣ ಗಂಗಾವತಿಯಿಂದ ಬಳ್ಳಾರಿ ವಿಧಾನಸಭಾ ಕ್ಷೇತ್ರಗಳಿಗೆ ಮುಸ್ಲಿಂ ಮತ್ತು ಕುರುಬ ಸಮುದಾಯಗಳನ್ನು ಓಲೈಸಲು ಯತ್ನ ನಡೆಸುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ನ ಸಾಂಪ್ರದಾಯಿಕ ಮತಗಳಿಗೆ ಹೊಡೆತ ಬೀಳಲಿದೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಡಿಕೇರಿ: ಹಾವೇರಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಲಿತ ಹಾಗೂ ಮುಸ್ಲಿಮರನ್ನು ಕಡೆಗಣಿಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಬಿಜೆಪಿ ಎಂಲ್ ಸಿ ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ. ಸಮ್ಮೇಳನದಲ್ಲಿ 85 ಸಾಧಕರಿಗೆ ಸನ್ಮಾನ ಮಾಡಲಾಗುತ್ತಿದ್ದು, ಇರದಲ್ಲಿ ಮುಸ್ಲಿಂ ಮತ್ತು ದಲಿತರನ್ನು ಕಡೆಗಣಿಸಲಾಗಿದೆ. ಇದರಲ್ಲೂ ರಾಜಕೀಯ ಮಾಡಲಾಗಿದೆ ಎಂದು ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ. ದಿಕ್ಕುದೆಸೆ ಇಲ್ಲದ ಡೋಂಗಿ ಸಾಹಿತ್ಯ ಸಮ್ಮೇಳನ ಧಿಕ್ಕರಿಸುತ್ತೇನೆ. ಸಮ್ಮೇಳನಕ್ಕೆ ಸರ್ಕಾರ 20 ಕೋಟಿ ರೂ. ಬಿಡುಗಡೆ ಮಾಡಿದೆ. ಹಣ ಕೊಟ್ಟು ಸಭೆ ಮಾಡದೆ ಮೌನವಾಗಿರುವುದು ಸರಿಯಲ್ಲ. ಆಡಳಿತ ಪಕ್ಷವನ್ನು ಮೆಚ್ಚಿಸುವಂತಹ ಕಾರ್ಯಕ್ರಮ ಆಗಬಾರದು. ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲಾ ಕನ್ನಡಿಗರ ಸಮ್ಮೇಳನವಾಗಬೇಕು ಎಂದು ಹೆಚ್.ವಿಶ್ವನಾಥ್ ಹೇಳಿದ್ದಾರೆ. ಜನವರಿ 6, 7, 8ರಂದು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈಗಾಗಲೇ ಸಕಲ ಸಿದ್ಧತೆಗಳನ್ನು ಸಹ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಈ ಗಂಭೀರ ಆರೋಪ ಕೇಳಿ ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಸುರೇಶ್ ಬಾಬು ಎಂ., ತುರುವೇಕೆರೆ ತುರುವೇಕೆರೆ: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ,  ಈ ಬಾರಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಗೆಲ್ಲುವುದು ಅಷ್ಟೇ ಸತ್ಯ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆ  ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಕಾರ್ಯಕರ್ತರ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಈ ಕ್ಷೇತ್ರದ ಜನರ ಉತ್ಸಾಹ ಹುರುಪನ್ನು ನೋಡಿದರೆ, ತುರುವೇಕೆರೆ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ವಿಜಯಶಾಲಿಯಾಗಿ ಮಾಡಿ ಗತವೈಭವವನ್ನು ನೆನಪು ಮಾಡುತ್ತೀರಿ. ಜೊತೆಗೆ ತುರುವೇಕೆರೆ ತಾಲೂಕಿನಲ್ಲಿ ಯಾವುದೇ ಮನಸ್ತಾಪಗಳಿಲ್ಲದೆ ಎಲ್ಲಾ ಮುಖಂಡರುಗಳು ಒಟ್ಟಾಗಿ ಸೇರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಿದ್ದರಾಗಿದ್ದೀರಿ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು. ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಈ ಬಾರಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಗೆಲ್ಲುವುದು ಅಷ್ಟೇ ಸತ್ಯ. ಈ 40% ಕಮಿಷನ್ ಕೇಳುವ ಸರ್ಕಾರವನ್ನು ಕಿತ್ತೊಗೆದು ರೈತರಿಗೆ ಆಗುತ್ತಿರುವ ಅನ್ಯಾಯ ಹಾಗೂ ಭ್ರಷ್ಟಾಚಾರದಿಂದ ಮುಕ್ತಿಗೊಳಿಸಿ ಜನರ…

Read More

ಹೆಚ್.ಡಿ.ಕೋಟೆ: ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲ್ಲೂಕು ಆಡಳಿತ ವತಿಯಿಂದ ಗುಲಾಬಿ ಆಂದೋಲನ ಜಾಥಾ ಕಾರ್ಯಕ್ರಮ ನಡೆಯಿತು. ತಾಲ್ಲೂಕು ಉಪ  ದಂಡಾಧಿಕಾರಿಗಳಾದ ಸಣ್ಣ ರಾಮಪ್ಪ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಜಾಥಾಕ್ಕೆ  ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಶಾಲೆ ಮತ್ತು ಕಾಲೇಜಿನ ಮಕ್ಕಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ತಂಬಾಕು ಸೇವನೆಯಿಂದ ಆಗುವ ಮತ್ತು ಆಗಿರುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು. ರಸ್ತೆ ಬದಿ ವ್ಯಾಪಾರಿಗಳಿಗೆ ಗುಲಾಬಿ ನೀಡಿ ಈ ದಿನದಿಂದಲೇ ಬಿಡಿ ಸಿಗರೇಟ್ ಮತ್ತು ತಂಬಾಕಿಗೆ ಸಂಬಂಧಿಸಿದಂತೆ ಇತರ ವಸ್ತುಗಳನ್ನು ಮಾರಾಟ ಮಾಡದಂತೆ ಹಾಗೂ ಸೇವಿಸಿದಂತೆ ಮನವಿ ಮಾಡಿದರು. ಇದೇ ವೇಳೆ ತಾಲ್ಲೂಕು ಆರೋಗ್ಯಾಧಿಕಾರಿ  ಡಾ.ಟಿ .ರವಿಕುಮಾರ್  ಮಾತನಾಡಿ, ಇಂದಿನ ಯುವ ಜನಾಂಗದಲ್ಲಿ ಮೋಜಿಗಾಗಿ ಶುರು ಮಾಡುವ ಬೀಡಿ, ಸಿಗರೇಟ್ ಸೇವನೆ ಮುಂದಿನ ದಿನಗಳಲ್ಲಿ ಅವು ನಮ್ಮ ದೇಹವನ್ನೇ ತಿನ್ನುತ್ತವೆ ಎನ್ನುವ ಅರಿವು ಕೂಡ ಇರುವುದಿಲ್ಲ. ಧೂಮಪಾನದಿಂದ ಸ್ವಲ್ಪಮಟ್ಟಿಗೆ ಒತ್ತಡ ಕಡಿಮೆ…

Read More

ಪಾವಗಡ: ಶಾಸಕರಾದ ವೆಂಕಟರಮಣಪ್ಪ ನವರು ಇಂದು ಪಾವಗಡ ತಾಲ್ಲೂಕಿನ ರಂಗಸಮುದ್ರ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಸಮುದಾಯ ಭವನ ಉದ್ಘಾಟನೆ ಹಾಗೂ ವಿವಿಧೆಡೆಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ದೊಡ್ಡೇನಹಳ್ಳಿಯಲ್ಲಿ 13.90 ವೆಚ್ಚದ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಚಳ್ಳಕೆರೆ-ಪಾವಗಡ ರಸ್ತೆಯ ಚಿಕ್ಕತಿಮ್ಮನಹಟ್ಟಿ ಗ್ರಾಮದ 50 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ, ಗೋವರ್ಧನ ಗಿರಿ ಬಳಿ 15 ಲಕ್ಷ ವೆಚ್ಚದ ರಸ್ತೆಗೆ ಗುದ್ದಲಿ ಪೂಜೆ, ವದನಕಲ್ ತಿಪ್ಪೆರುದ್ರ ಸ್ವಾಮಿ ದೇವಸ್ಥಾನ ಬಳಿ 10 ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತು ವದನಕಲ್ ಗ್ರಾಮದಲ್ಲಿ 30 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಗುದ್ದಲಿ ಪೂಜೆ, ಮಲ್ಲಮ್ಮನಹಳ್ಳಿ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಲಿಂಗದಹಳ್ಳಿ-ಸಾಸಲಕುಂಟೆ (ಮುಂದುವರೆದ) 1.50 ಕೋಟಿ ವೆಚ್ಚದ ರಸ್ತೆಗೆ ಗುದ್ದಲಿ ಪೂಜೆ, ಸಾಸಲಕುಂಟೆ ಗ್ರಾಮದಲ್ಲಿ 13.90 ಲಕ್ಷ ವೆಚ್ಚದ ನೂತನ ಶಾಲಾ…

Read More

2002ರ ಗೋಧ್ರಾ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಕೊಂದ 11 ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತೆ ಹಿಂದೆ ಸರಿದಿದ್ದಾರೆ. ಇದಕ್ಕೆ ಕಾರಣವನ್ನು ನಿರ್ದಿಷ್ಟಪಡಿಸಲಾಗಿಲ್ಲ. ಕಳೆದ ತಿಂಗಳು ಕೂಡ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಬಾನೊ ಅವರ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಆರೋಪಿಗಳ ಬಿಡುಗಡೆ ವಿರುದ್ಧದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಫೆಬ್ರವರಿಗೆ ಮುಂದೂಡಿದೆ. ಸಂತ್ರಸ್ತ ಬಿಲ್ಕಿಸ್ ಅವರ ಅರ್ಜಿಯೊಂದಿಗೆ ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿರುವ ಅರ್ಜಿಗಳನ್ನೂ ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬುಧವಾರ ನಡೆದ ವಿಚಾರಣೆಯಲ್ಲೂ ಗುಜರಾತ್ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಸಿಪಿಐಎಂ ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್, ಲಕ್ನೋ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ರೂಪ ರೇಖಾ ವರ್ಮಾ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ…

Read More