Subscribe to Updates
Get the latest creative news from FooBar about art, design and business.
- ಪಾವಗಡ | ಮನೆಯ ಬೀಗ ಒಡೆದು, ನಗದು, ಚಿನ್ನಾಭರಣ ಕಳವು
- ವೃದ್ಧೆಯ ಕೊಲೆ ಮಾಡಿ ಚಿನ್ನದ ಸರ ಅಪಹರಿಸಿದ್ದ ಆರೋಪಿಯ ಬಂಧನ
- ಕೂಲಿ ಕೊಡದೇ ಗಾರ್ಮೆಂಟ್ಸ್ ಮಾಲಿಕ ಪರಾರಿ: ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ
- ಸರಗೂರು | ಪಟ್ಟಣ ಪಂಚಾಯತ್ ಜೆಡಿಎಸ್ ಸದಸ್ಯೆ ಕಾಂಗ್ರೆಸ್ ಗೆ ಸೇರ್ಪಡೆ
- ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ
- ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ
- ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ: ಶಾಸಕ ಅನಿಲ್ ಚಿಕ್ಕಮಾದು
- ವಿದ್ಯಾರ್ಥಿಗಳಿಗೆ ಶಿಕ್ಷಕರು ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕು: ಬಿ.ಅಬ್ದುಲ್ ರಹಮಾನ್
Author: admin
ತಾಯಿ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಇಲ್ಲದ ಕಾರಣ ಆಸ್ಪತ್ರೆಗೆ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ತಾಯಿ ಹಾಗೂ ಅವಳಿ ಶಿಶುಗಳು ಮೃತಪಟ್ಟ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ. ಭಾರತೀನಗರದ ಅಭಯ ಆಂಜನೇಯ ದೇವಸ್ಥಾನದ ಬಳಿ ಕಳೆದ ಒಂದು ತಿಂಗಳಿನಿಂದ ವಾಸವಿದ್ದ ತಮಿಳುನಾಡು ಮೂಲದ ಗರ್ಭಿಣಿ ಕಸ್ತೂರಿ (30) ಹಾಗೂ ಅವಳಿ ಮಕ್ಕಳು ಮನೆಯಲ್ಲೇ ಹೆರಿಗೆ ವೇಳೆ ಮೃತಪಟ್ಟ ದುರ್ದೈವಿಗಳು. ಕಸ್ತೂರಿ ಗಂಡ ಇತ್ತೀಚೆಗಷ್ಟೇ ಮೃತಪಟ್ಟಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಬುಧವಾರ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ಕಸ್ತೂರಿ ತೆರಳಿದ್ದರು. ಆದರೆ ತಾಯಿಗೆ ಆಧಾರ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಿಕೊಳ್ಳದೇ, ವಾಪಸ್ ಕಳುಹಿಸಲಾಗಿದೆ. ಚಿಕಿತ್ಸೆ ದೊರೆಯದ ಕಾರಣ ಕಸ್ತೂರಿ ಮನೆಗೆ ಮರಳಿದ್ದು, ಗುರುವಾರ ರತ್ರಿ ಕಸ್ತೂರಿಗೆ ಮನೆಯಲ್ಲಿಯೇ ಹೆರಿಗೆ ಆಗಿದೆ. ಮನೆಯಲ್ಲೇ ಒಂದು ಮಗುವಿಗೆ ಜನ್ಮ ನೀಡಿದ್ದು, ಅದು ಸೂಕ್ತ ಚಿಕಿತ್ಸೆ ಇಲ್ಲದೇ ಮೃತಪಟ್ಟಿದೆ. ಕೆಲವೇ ಸಮಯದಲ್ಲಿ ಅತೀವ ರಕ್ತಸ್ರಾವ ಹಾಗೂ ಚಿಕಿತ್ಸೆ ಕೊರತೆಯಿಂದ…
ಕೋಹಳ್ಳಿ: ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಮತ್ತು ದ್ವಿಥಿಯ ಸ್ಥಾನ ಪಡೆದು ರಾಜ್ಯ ಮಟ್ಟಕೆ ಆಯ್ಕೆಯಾಗಿದ್ದಾರೆ. ಓಟದ ಸ್ಪರ್ಧೆಯಲ್ಲಿ ಮೊದಲನೇ ಸ್ಥಾನ ಪಡೆದ ವಿದ್ಯಾರ್ಥಿನಿ ಮೀನಾಕ್ಷಿ ಕದಮ 1500 ಮತ್ತು3000 ಮೀಟರ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ಹಾಗೂ ನಡೆಯುವ ಸ್ಪರ್ಧೆಯಲ್ಲಿ 3000 ಮೀಟರದಲ್ಲಿ ಕಾವೇರಿ ಸಾವಂತ ಎಂಬ ವಿದ್ಯಾರ್ಥಿಥಿನಿ 2 ನೇ ಸ್ಥಾನ ಪಡೆದು ಕೊಕಟನೂರಿನ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕೆ ಆಯ್ಕೆ ಆಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಎಂದು ಪ್ರಮೋದ್ ಮುತಾಲಿಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನಗೆ ಬೇರೆ ಬೇರೆ ನಂಬರ್ಗಳಿಂದ ಕರೆ ಮಾಡಿ, ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ ಬೋ. ಮಗನೇ ಎಂದು ಹೀನಾಯ ಶಬ್ದಗಳಿಂದ ನಿಂದಿಸಿದ ಸುಮಾರು 4-5 ಸಲ ಬೆದರಿಕೆ ಕರೆಗಳು ಬಂದಿವೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಲಾಗುತ್ತಿದೆ. ಉರ್ದು ಮಿಶ್ರಿತ ಮಂಗಳೂರು ಕನ್ನಡ ಭಾಷೆಯಲ್ಲಿ ಅತ್ಯಂತ ಕೆಟ್ಟದಾಗಿ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ನಂಬರ್ ಗಳನ್ನು ಹುಕ್ಕೇರಿ ಪೊಲೀಸ್ ಠಾಣೆಗೆ ನೀಡಿ ದೂರು ದಾಖಲಿಸಿದ್ದೇನೆ. ಸೂಕ್ತ ರೀತಿಯಲ್ಲಿ ತನಿಖೆ ಮಾಡಿ, ಕ್ರಮ ಕೈಗೊಳ್ಳಬೇಕೆಂದು ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಡ್ಯದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಪೊಲೀಸರು ಕಿರುಕುಳ ನೀಡಿದ್ದು ಖಂಡನೀಯ. ಮಾನವೀಯತೆಯನ್ನೇ ಅಣಕಿಸುವ ಇಂಥ ಘಟನೆಗಳು ರಾಜ್ಯದಲ್ಲಿ ಪದೇಪದೆ ಘಟಿಸುತ್ತಿರುವುದು ಆಘಾತಕಾರಿ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಬಿಜೆಪಿ ಸರಕಾರ ಹಾಳು ಮಾಡಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೊಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಆಸ್ಪತ್ರೆಗೆ ಬೈಕ್ ನಲ್ಲಿ ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ತಂದೆ-ತಾಯಿಯನ್ನು ಅಡ್ಡಗಟ್ಟಿ ಹೆಲ್ಮೆಟ್ ಇಲ್ಲ ಎನ್ನುವ ಕಾರಣಕ್ಕೆ ಬೈಕಿನ ಕೀ ಕಿತ್ತುಕೊಂಡು ಪೊಲೀಸರು ಕಿರುಕುಳ ನೀಡಿದ ಘಟನೆಯ ಘಟನೆಯ ವಿಡಿಯೋ ತುಣುಕುಗಳನ್ನು ನೋಡಿ ನನಗೆ ಬಹಳ ಸಂಕಟವಾಯಿತು. ಮಗುವಿನ ಅನಾರೋಗ್ಯದಿಂದ ಆತಂಕಗೊಂಡಿದ್ದ ದಂಪತಿಯೊಂದಿಗೆ ಪೊಲೀಸರು ಹೀಗೆ ನಡೆದುಕೊಂಡಿದ್ದು ಅಕ್ಷಮ್ಯ ಮತ್ತು ಹೇಯ. “ದಮ್ಮಯ್ಯ, ನಮ್ಮಲ್ಲಿ ಹಣವಿಲ್ಲ, ದಯವಿಟ್ಟು ಬಿಟ್ಟುಬಿಡಿ” ಎಂದು ಬೇಡಿಕೊಂಡರೂ ಪೊಲೀಸರು ದಯೆ ತೋರಿಸಿಲ್ಲ. ದಂಡದ ಮಾತು ಹೇಳುತ್ತಲೇ ಪೊಲೀಸರು ಹಣಕ್ಕಾಗಿ ಪೀಡಿಸಿರುವುದು ಪೈಶಾಚಿಕ ನಡವಳಿಕೆ, ಇಲಾಖೆಯೇ ತಲೆ ತಗ್ಗಿಸುವಂತದ್ದು ಎಂದು ಅಸಮಾಧಾನ…
ಸುಳ್ಯ: ಹೃದಯಾಘಾತದಿಂದ 2ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ.(7) ಮೃತ ಬಾಲಕ. ಬಾಲಕ ಎಂದಿನಂತೆ ಶಾಲೆಗೆ ಬಂದಿದ್ದು ಮಧ್ಯಾಹ್ನದ ವೇಳೆಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕರು ದೂರವಾಣಿ ಮೂಲಕ ಪೋಷಕರಿಗೆ ಮಾಹಿತಿ ನೀಡಿದರು. ತಂದೆ ಚಂದ್ರಶೇಖರ ಆಚಾರ್ಯ ಅವರು ಶಾಲೆಗೆ ಬಂದಿರುವ ಸಂದರ್ಭದಲ್ಲೇ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದು, ತಕ್ಷಣ ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ವೈದ್ಯರು ಪರೀಕ್ಷಿಸಿದಾಗ ಬಾಲಕನಿಗೆ ಹೃದಯಾಘಾತ ಸಂಭವಿಸಿದ್ದರಿಂದ ಮೃತ ಪಟ್ಟಿರುವುದಾಗಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಡ್ಯ: ಅರ್ಚಕ ಹಾಗೂ ಆತನ ಮಕ್ಕಳು ಹಾಗೂ ದೇವಾಲಯದ ಕಾವಲುಗಾರ ದೇವಾಲಯಕ್ಕೆ ಸೇರಿದ ಲಕ್ಷಾಂತರ ರೂಪಾಯಿಗಳನ್ನು ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಬಯಲು ಸೀಮೇಯ ಸುಬ್ರಹ್ಮಣ್ಯ ಎಂದೇ ಪ್ರಸಿದ್ದವಾಗಿರುವ ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಸಮೀಪದ ಶ್ರೀ ಕ್ಷೇತ್ರ ಸಾಸಲು ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿರುವ ಶ್ರೀ ಸೋಮೇಶ್ವರ ಮತ್ತು ಶ್ರೀ ಶಂಭುಲಿಂಗೇಶ್ವರ ದೇವಾಯಲ್ಲಿ ಪ್ರತಿ ವರ್ಷವು ಕೋಟ್ಯಾಂತರ ರೂಪಾಯಿಗಳು ಆದಾಯ ಬರುವ ದೇವಾಯವಾಗಿದೆ. ಇದನ್ನು ದುರುಪಯೋಗ ಮಾಡಿಕೊಂಡು ರಾತ್ರಿ ವೇಳೆಯಲ್ಲಿ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ದೋಚುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ದೇವಾಯದ ಕಾವಲುಗಾರ ವೀರಪ್ಪ, ಅರ್ಚಕರಾದ ಸೋಮೇಶ ಮತ್ತು ಆತನ ಮಕ್ಕಳಾದ ಸಂತೋಷ್ ಆರಾದ್ಯ, ಉಮಾಶಂಕರ್ ಆರಾದ್ಯ, ಮತ್ತು ಸಚ್ಚಿನ್ ಜಂಗಮ್, ಪುಟ್ಟರಾಜು ಇವರುಗಳು ದೇವಾಯದ ಹುಂಡಿಯಲ್ಲಿ ಸಂಗ್ರಹವಾಗುವ ಕಾಣಿಕೆ ಹಣವನ್ನು ಯಾರಿಗೂ ತಿಳಿಯದಂತೆ ಹುಂಡಿಯ ಬಾಯಿಯನ್ನು ಅಗಲಿಸಿ ದಿನನಿತ್ಯ ಲಕ್ಷಾಂತರ ರೂಪಾಯಿಗಳನ್ನು ದೋಚಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ದೇವಾಲಯದ ಅರ್ಚಕರಾದ ಸೋಮೇಶ ಆರಾದ್ಯ, ಆತನ…
ಬೆಂಗಳೂರು: ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದು, ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗಧಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್ ಟೇಬಲ್ 420+3064 ಸೇರಿ ಒಟ್ಟು 3484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ. ಹುದ್ದೆಗಳಿಗೆ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡವು ಷರತ್ತಿಗೆ ಒಳಪಟ್ಟು ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಛತ್ತೀಸ್ಗಢ : ಎಂಟು ವರ್ಷದ ಬಾಲಕನೊಬ್ಬ ನಾಗರ ಹಾವನ್ನು ಕಚ್ಚಿ ಸಾಯಿಸಿದ್ದ ವಿಚಿತ್ರ ಘಟನೆ ಜಶ್ಪುರ ಜಿಲ್ಲೆಯ ಪಂದರ್ಪಾಡ್ ಎಂಬ ಗ್ರಾಮದಲ್ಲಿ ನಡೆದಿದೆ. ದೀಪಕ್ ಮನೆಯ ಹಿತ್ತಲಿನಲ್ಲಿ ಆಟವಾಡುತ್ತಿದ್ದಾಗ ವಿಷಪೂರಿತ ನಾಗರಹಾವು ಕೈಗೆ ಸುತ್ತಿಕೊಂಡಿತ್ತು.ದೀಪಕ್ ಕೈಗೆ ನಾಗರಹಾವು ಕಚ್ಚಿದೆಯಂತೆ. ಹಾವಿನ ಹಿಡಿತವನ್ನು ಬಿಡಿಸಿಕೊಳ್ಳಲು ಸಾಕಷ್ಟು ಪ್ರಯತ್ನಿಸಿದ್ರೂ ಸಾಧ್ಯವಾಗಲೇ ಇಲ್ಲ. ಕೊನೆಗೆ ಬೇರೆ ದಾರಿ ಕಾಣದೆ ಬಾಲಕನೂ ಹಾವಿಗೆ ಎರಡು ಬಾರಿ ಕಚ್ಚಿದ್ದಾನೆ. ಕೂಡಲೇ ಹಾವು ಹಿಡಿತ ಸಡಿಲಿಸಿದೆ. ಕುಟುಂಬದವರು ಹಾವಿನ ಕಡಿತಕ್ಕೊಳಗಾದ ಬಾಲಕನನ್ನು ಕೂಡಲೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ದೀಪಕ್ನಲ್ಲಿ ಯಾವುದೇ ರೋಗಲಕ್ಷಣಗಳಿರಲಿಲ್ಲ. ಹಾವು ಕಚ್ಚಿದಾಗ ವಿಷ ಬಿಡುಗಡೆಯಾಗಿರಲಿಲ್ಲ, ಹಾಗಾಗಿ ಬಚಾವ್ ಆಗಿದ್ದಾನೆ. ಮನುಷ್ಯರಿಂದ ಕಡಿತಕ್ಕೊಳಗಾಗಿ ಹಾವು ಸಾಯುವುದು ಅತ್ಯಂತ ಅಪರೂಪದ ಪ್ರಕರಣ. ಜಶ್ಪುರ್ ಜಿಲ್ಲೆಯಲ್ಲಿ ಈವರೆಗೂ ಇಂತಹ ಘಟನೆ ನಡೆದಿರಲಿಲ್ಲವಂತೆ. ಜಶ್ಪುರ್ ಬುಡಕಟ್ಟು ಜಿಲ್ಲೆಯಾಗಿದ್ದು, ಇದನ್ನು ಸರ್ಪಗಳ ವಾಸಸ್ಥಾನ ಎಂದೂ ಕರೆಯುತ್ತಾರೆ. ಇಲ್ಲಿ 200ಕ್ಕೂ ಹೆಚ್ಚು ಜಾತಿಯ ಹಾವುಗಳಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಹಾವೇರಿ: ಹಾವೇರಿ ತಹಶೀಲ್ದಾರ್ ಗಿರೀಶ್ ಸ್ವಾದಿ ನಾಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಅವರು ಮನೆಗೆ ಬಂದಿಲ್ಲ ಅಂತ ಅವರ ಪತ್ನಿ ಭಾಗ್ಯಶ್ರೀ ಅವರು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಕ್ಟೋಬರ್ 31ರ ರಾತ್ರಿ ನಂತರ ತಹಶೀಲ್ದಾರ್ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಕುಟುಂಬಸ್ಥರನ್ನು ಆತಂಕದಿಂದ ಕಾಲ ಕಳೆಯುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಂಡ್ಯ: ಮಹಾವೀರ ವೃತ್ತದಲ್ಲಿ ಸಂಚಾರಿ ಪೊಲೀಸರೊಬ್ಬರು ಮಾನವೀಯತೆ ಮರೆತು ಚಿಕಿತ್ಸೆಗಾಗಿ ಹಸುಗೂಸನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದ ದಂಪತಿಗಳನ್ನು ತಡೆದು ಅಮಾನವೀಯವಾಗಿ ನಡೆದುಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಕೆ.ಆರ್. ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಯಗಚೆ ಕುಪ್ಪೆ ಗ್ರಾಮದ ಅಭಿಷೇಕ್ ಮತ್ತು ಆತನ ಪತ್ನಿ ತಮ್ಮ 6–7 ತಿಂಗಳ ಹಸುಗೂಸನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಬೈಕ್ ನಲ್ಲಿ ಕರೆದುಕೊಂಡು ಬಂದಿದ್ದರು. ನಗರದ ಮಹಾವೀರ ವೃತ್ತಕ್ಕೆ ಬಂದ ಸಂದರ್ಭದಲ್ಲಿ ಸಂಚಾರಿ ಠಾಣೆಯ ಎಎಸ್ಐ ರಘುಪ್ರಕಾಶ್ ಎಂಬಾತ ಹೆಲ್ಮೆಟ್ ಇಲ್ಲದ ಕಾರಣಕ್ಕಾಗಿ ಅಭಿಷೇಕ್ ಅವರನ್ನು ತಡೆದು ನಿಲ್ಲಿಸಿದ್ದಾರೆ. ಹೆಲ್ಮೆಟ್ ಧರಿಸದ ಕಾರಣ 500 ರೂಪಾಯಿ ದಂಡ ಕಟ್ಟಿ ಹೋಗುವಂತೆ ತಿಳಿಸಿದ್ದಾರೆ. ಆಗ ಅಭಿಷೇಕ್ ನನ್ನ ಬಳಿ ಹಣವಿಲ್ಲ ಎಂದಾಗ ಬೈಕ್ ನ ಕೀ ಕಿತ್ತುಕೊಂಡು ದಂಡದ ಹಣ ಕಟ್ಟಿ ಬೈಕ್ ತೆಗೆದುಕೊಂಡು ಹೋಗು ಎಂದು ದರ್ಪದಿಂದ ಹೇಳಿದ್ದಾರೆ. ಈ ಸಂದರ್ಭದಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಒಂದಿಬ್ಬರು ನಾಗರಿಕರು ಪಾಪ, ಅವರು ಕೆ.ಆರ್. ಪೇಟೆಯಿಂದ ಮಗು ತೋರಿಸಲು…