Author: admin

ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕರ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ತಾಲೂಕಿನ ನದಿ ಇಂಗಳಗಾವ್ ನ ಕಿರಣ್ ಕೊರಬು (28), ಬೈಲಹೊಂಗಲ ತಾಲ್ಲೂಕಿನ ಜಕನಾಯಕನಕೊಪ್ಪ ಗ್ರಾಮದ ನಾಗಯ್ಯ ಹುಬ್ಬಳ್ಳಿ (26), ಗೋಕಾಕ್ ತಾಲೂಕಿನ ಹಡಗಿನಾಳ ಗ್ರಾಮದ ನಾಗಪ್ಪ ಹೊಸಮನಿ (29), ಗೋಕಾಕ ತಾಲೂಕಿನ ಬೆಣಚಿಮನರಡಿ ಗ್ರಾಮದ ಶಶಿಕಾಂತ ಮಾಗಿ (25) ಹಾಗೂ ಬಗರನಾಳ ಗ್ರಾಮದ ದೇವರಾಜ ಅವಲಿ (26) ಬಂಧಿಸಲಾಗಿದೆ. 2022 ಅಕ್ಟೋಬರ್ 7 ರಂದು ನಡೆದ ಕೆಪಿಟಿಸಿಎಲ್ ಸ್ಪರ್ಧಾತ್ಮಕ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 36 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮಹಿಳೆಯರು ಹಾಗೂ ಶೋಷಿತ ಸಮುದಾಯಗಳಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವ ಮೂಲಕ ಭಾರತದ ಮೊಟ್ಟ ಮೊದಲ ಶಿಕ್ಷಕಿಯಾದ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ , ಸತಿಸಹಗಮನ ಪದ್ದತಿ , ಕೇಶ ಮುಂಡೆನೆ , ವಿರುದ್ದ ಹೋರಾಟ ಮಾಡಿದ ದಿಟ್ಟ ಮಹಿಳೆಯಾಗಿದ್ದಾರೆ.  ಮಹಿಳೆಯರಿಗಾಗಿ ಪ್ರಪ್ರಥಮವಾಗಿ ಶಾಲೆಗಳು, ಅಬಲಾಶ್ರಮ, ಸ್ಥಾಪನೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಸಾವಿತ್ರಿಬಾಯಿ ಶ್ರೀ ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಸ್ರ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ದ್ರೋಹ ಬಗೆದಂತೆ ಎಂದು ಅವರನ್ನು ಪಾಠಶಾಲೆಗೆ ಹೊರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲನೂ ತೂರುತ್ತಿದ್ದರು. ಇದರಿಂದ ಧೃತಿಗೆಡದ ಸಾವಿತ್ರಿಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು. ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರಗೊಳ್ಳದೇ ತಮ್ಮ ಶಿಕ್ಷಣದ ಕ್ರಾಂತಿಯನ್ನು ಮುಂದುವರಿಸಿದರು. ಬೀದಿಯಲ್ಲಿ ಮನುವಾದಿಗಳು ಕೆಸರು,…

Read More

ವಿಜಯಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಶತಮಾನದ ಸಂತ, ನಡೆದಾಡುವ ದೇವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ನಿನ್ನೆ ಸಂಜೆ 6.05 ಕ್ಕೆ ಲಿಂಗೈಕ್ಯರಾಗಿದ್ದು, ಸಿದ್ದೇಶ್ವರ ಶ್ರೀಗಳ ಆಶಯದಂತೆ ಇಂದು ಸಂಜೆ ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ಶ್ರೀ ಸಿದ್ದೇಶ್ವರ ಶ್ರೀಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಿಸಿದ್ದರು. ಎರಡನೇ ವಿವೇಕಾನಂದರು ಎಂಬ ಖ್ಯಾತಿ ಪಡೆದಿದ್ದರು. ಸಿದ್ದೇಶ್ವರ ಸ್ವಾಮಿಜಿಯವರು ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು. ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. ಬೆಳೆಯುವ ಪೈರು ಮೊಳಕೆಯಲ್ಲೇ ಎಂಬಂತೆ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ…

Read More

ಬೆಳಗಾವಿ: ಗ್ರಾಮದಲ್ಲಿ ಗುಟ್ಕಾ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅನಿಗೋಳದಲ್ಲಿ ನಡೆದಿದೆ. 45 ವರ್ಷದ ಮಂಜುನಾಥ್‌ ಸುಣಗಾರ ಕೊಲೆಯಾದ ವ್ಯಕ್ತಿ. ಅಜಯ್‌ ಹಿರೇಮಠ ಎಂಬಾತ ಕೊಲೆ ಆರೋಪಿಯಾಗಿದ್ದು, ಕೃತ್ಯದ ಬಳಿಕ ಪರಾರಿಯಾಗಿದ್ದಾನೆ. ಇಬ್ಬರು ಕುಡಿದು ಪಾನ್‌ ಶಾಪ್‌ ಬಳಿ ನಿಂತಿದ್ದರು. ಗುಟ್ಕಾ ತಿಂದು ಉಗುಳಿದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಉಂಟಾಗಿದೆ. ಈ ವೇಳೆ ಜಗಳ ವಿಕೋಪಕ್ಕೆ ಹೋಗಿ ಅಜಯ್‌ ಹಿರೇಮಠ ಮಂಜುನಾಥ್‌ ಅವರನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ್ದಲ್ಲದೇ ಆತನ ತಲೆ ಮೇಲೆ ಕಲ್ಲು ಎತ್ತಿ  ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಸ್ಥಳದಿಂದ ಆರೋಪಿ ಅಜಯ್‌ ಪರಾರಿಯಾಗಿದ್ದು, ಈ ಸಂಬಂಧ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬಳ್ಳಾರಿ: ಜೆಡಿಎಸ್ ಸೇರಿದಂತೆ ಯಾವುದೇ ಪ್ರಾದೇಶಿಕ ಪಕ್ಷಗಳಿಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಇಲ್ಲಿ ನನ್ನ ಮುಖ ನೋಡಿಯೋ, ಇನ್ನೊಬ್ಬರ ಮುಖ ನೋಡಿಯೋ ಜನ ಮತ ಹಾಕಲ್ಲ, ಪ್ರಧಾನಿ ಮೋದಿಯವರ ಮುಖ ನೋಡಿ ಮತ ಹಾಕ್ತಾರೆ. ಕಲ್ಯಾಣ ಕರ್ನಾಟಕದಲ್ಲಿಯೂ ಬಿಜೆಪಿ ಗೆಲ್ಲಲಿದೆ, ಇಲ್ಲಿ ಪ್ರಾದೇಶಿಕ ಪಕ್ಷದ ಮಾತೇ ಇಲ್ಲ ಎಂದು ಅವರು ಟಾಂಗ್ ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರ ಪಕ್ಷದ ಕುರಿತು ಪರೋಕ್ಷವಾಗಿಯೇ ಟಾಂಗ್ ನೀಡಿದ ಶ್ರೀರಾಮುಲು, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದ್ರೂ ಪಕ್ಷ ಕಟ್ಟ ಬಹುದು. ಆದ್ರೆ, ಜನರ ಒಲವು ಕೂಡ ಬೇಕಲ್ವಾ? ಎಂದು ಪ್ರಶ್ನಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕಳೆದ ಹಲವು ವಾರಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಪ್ರವಚನಕಾರ, ನಡೆದಾಡುವ ದೇವರೆಂದೇ ಜನಪ್ರಿಯತೆಗಳಿಸಿದ್ದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀ ಇಂದು ಸಂಜೆ ಲಿಂಗೈಕ್ಯರಾಗಿದ್ದಾರೆ. ಬಿಎಲ್ ಡಿಇ ಸಂಸ್ಥೆಯ ಬಿ.ಎಂ.ಪಾಟೀಲ್ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ನಲ್ಲಿ ಖ್ಯಾತ ವೈದ್ಯರ ತಂಡ ಶ್ರೀಗಳಿಗೆ  ಚಿಕಿತ್ಸೆ ನೀಡುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಅವರು ಲಿಂಗೈಕ್ಯರಾಗಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ 1941 ಅಕ್ಟೋಬರ್ 24ರಂದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ ಜನಿಸಿದ್ದರು. ಇವರಿಗೆ ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನೂ ಘೋಷಣೆ ಮಾಡಿತ್ತು. ಆದರೆ ಇವರು ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದರು. ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ 4 ನೇ ತರಗತಿವರೆಗೆ ಓದಿದ ನಂತರ ಅವರು ವೇದಾಂತ ಕೇಸರಿ ಎಂದೇ ಪ್ರಖ್ಯಾತರಾಗಿದ್ದ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮಿಗಳವರನ್ನು ಆಶ್ರಯಿಸಿದರು. ಬಾಲಕ  ಚುರುಕುತನವನ್ನು ಗುರುತಿಸಿದ ಹಿರಿಯ ಶ್ರೀಗಳು ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ದೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು.…

Read More

ಹೆಚ್.ಡಿ.ಕೋಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಹೆಚ್.ಡಿ.ಕೋಟೆ ಪಟ್ಟಣದ ಟಿಎಪಿಎಂಎಸ್ ಕಛೇರಿಯ ಆವರಣದಲ್ಲಿ ಮಂಜುನಾಥೇಶ್ವರ ಲೋಡರ್ಸ್ ಅಸೋಷಿಯನ್ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯಿತು. ಸಂಘದ ಕಾರ್ಯದರ್ಶಿ ಜಿ.ಮಹದೇವು ಮಾತನಾಡಿ, ನಮಗೆ ಈಗ ನೀಡುತ್ತಿರುವ ಕೂಲಿ ಕಡಿಮೆ ಇದ್ದು, ನಮಗೆ ಒಂದು ಮೂಟೆಗೆ 25 ರೂ. ಕೂಲಿ ಹೆಚ್ಚಿಸಬೇಕೆಂದು ಒತ್ತಾಯಿಸಿದರು. ಅಧಿಕಾರಿಗಳು ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸದೆ ಮೀನಾ—ಮೇಷ ಎಣಿಸುತ್ತಿದ್ದಾರೆ. ಕೂಡಲೇ ಸಮಿತಿಯನ್ನು ರಚಿಸದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಮಹದೇವು, ಅಧ್ಯಕ್ಷ ಬಸವರಾಜು, ಸೋಮಣ್ಣ, ಸೋಮು, ಸಣ್ಣಪನಾಯಕ, ಮಾದಶೆಟ್ಟಿ, ರಾಜನಾಯಕ, ಎಲ್ಲಾ ಪ್ರಗತಿಪರ ಸಂಘಟನೆಯ ಮುಖಂಡರು ಹಾಗೂ ಬೀಮನಹಳ್ಳಿ ಬಸವರಾಜು, ಉಮೇಶ್, ಮಹದೇವಪ್ರಸಾದ್, ಸಂತೋಷ್ ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಅಣ್ಣೋ… ಶಿವಣ್ಣೋ ಅನ್ನೋ ಅಭಿಮಾನಿಗಳ ಕೂಗು, ವಾಹನದ ಮೇಲೆ ನಿಂತು ಅಭಿಮಾನಿಗಳ ಕೈ ಸ್ಪರ್ಶಿಸಿ ಅಭಿಮಾನಿಗಳನ್ನು ಸಂತೈಸುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಈ ದೃಶ್ಯ ಕಂಡು ಬಂದಿದ್ದು, ಸರಗೂರಿನ ಶಂಕರ ಚಿತ್ರದ ಮಂದಿರದ ಆವರಣದಲ್ಲಿ. ಇಂದು ಸರಗೂರಿನ ಶಂಕರ ಚಿತ್ರದ ಮಂದಿರದ ಆವರಣಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿ ದೇವ್ರುಗಳೊಂದಿಗೆ ಶಿವರಾಜ್ ಕುಮಾರ್ ಮನಸ್ಸು ಬಿಚ್ಚಿ ಬೆರೆತರು. ಶಿವರಾಜ್ ಕುಮಾರ್ ಅವರ ವೇದ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ವೇಳೆ ಚಿತ್ರದ ಪ್ರಚಾರಕ್ಕೆ ಆಗಮಿಸಿದ ಶಿವರಾಜ್ ಕುಮಾರ್ ಅವರಿಗೆ ಸರಗೂರಿನಲ್ಲಿ ಅಭಿಮಾನಿಗಳು ಅದ್ದೂರಿಯ ಸ್ವಾಗತ ನೀಡಿದರು. ತಮ್ಮ ನೆಚ್ಚಿನ ನಟನನ್ನು ಕಂಡು ಸಂತಸದಿಂದ ಜೈಕಾರ ಹಾಕಿದ್ರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಪಾವಗಡ: ತಾಲ್ಲೂಕಿನ ಯ.ನಾ.ಹೊಸಕೋಟೆ ಗ್ರಾಮದ ದೊಡ್ಡಹಳ್ಳಿಗೆ ಮುಖ್ಯ ರಸ್ತೆಯನ್ನು ಸಂಪರ್ಕಿಸುವ ನೂರಾರು ಜನರು ಪ್ರತಿನಿತ್ಯ ಸಂಚರಿಸುವ ರಸ್ತೆಯಲ್ಲೇ ನೀರು ಹರಿದು ಹೋಗುತ್ತಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ಶಾಲೆಗೆ ತೆರಳುವ ಪುಟಾಣಿ ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಎಲ್ಲಾ ನಾಗರಿಕರು ನಡೆದುಕೊಂಡು ಹೋಗುತ್ತಿದ್ದು, ನೀರಿನ ಮೇಲೆ ಹಾಕಿರುವ ಕಲ್ಲುಗಳ ಮೇಲೆ ಕಾಲು ಇಟ್ಟುಕೊಂಡು ನರಕದ ದಾರಿ ಹಾದು ಹೋಗುವಂತೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಸಮಸ್ಯೆಯ ಬಗ್ಗೆ ವೈ ಎನ್ ಹೊಸಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರ  ಗಮನಕ್ಕೆ ತರಲಾಗಿತ್ತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಶ್ರೀರಾಮ ನಾಯ್ಕ ಅವರು ಎರಡು ಬಾರಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಹೋದರೂ, ಇನ್ನೂ ಕೂಡ ನರಕದ ದಾರಿಗೆ ಮುಕ್ತಿ ಸಿಕ್ಕಿಲ್ಲ. ಸುಮಾರು 2 ತಿಂಗಳುಗಳಿಂದ ಇದೇ ರೀತಿಯ ಸ್ಥಿತಿ ಇದ್ದು, ಇಲ್ಲಿಂದ ನಿತ್ಯ ಸಂಚರಿಸುವ ಜನರು ಅಧಿಕಾರಿ ವರ್ಗಗಳಿಗೆ, ಜನ ಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿಕೊಂಡು ತೆರಳುತ್ತಿದ್ದಾರೆ. ಯಾರಾದರೂ ಸಾರ್ವಜನಿಕರು ಬಿದ್ದು, ಪ್ರಾಣ ಕಳೆದುಕೊಂಡ ಬಳಿಕ…

Read More

ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ: ಕನ್ನಡದಲ್ಲಿ ಈಗಾಗಲೇ ಧ್ವನಿ ಇಲ್ಲದವರ ಕುರಿತ ಸಿನಿಮಾಗಳು ಮೂಡಿಬಂದು ಸಾಕಷ್ಟು ಸದ್ದುಮಾಡಿವೆ. ಕಾಡೇ ನಮ್ಮ ಬದುಕು ಅಂದುಕೊಂಡು ಬದುಕುತ್ತಿರುವ ಬಡಜನರ ಬದುಕಿನ ಚಿತ್ರಣವನ್ನು ಸಾಕಷ್ಟು ಚಿತ್ರಗಳು ತೋರಿಸಿವೆ. ಅಂತಹ ಸಿನಿಮಾಗಳ ಸಾಲಿಗೆ ಈಗ ಅಡವಿ ಎಂಬ ಸಿನಿಮಾ ಕೂಡ ಸೇರಿದೆ. ಈಗಾಗಲೇ ಸದ್ದಿಲ್ಲದೆಯೇ ಆ ಸಿನಿಮಾದ ಚಿತ್ರೀಕರಣ ಪೂರೈಸಿದೆ. ಆ ಸಿನಿಮಾ ಕುರಿತ ಒಂದು ವಿಶೇಷ ವರದಿ ಇದು… ಕನ್ನಡ ಬೆಳ್ಳಿತೆರೆಗೆ ಬರಲು ಸಿದ್ದವಾಗಿರುವ ಅಡವಿ ಎಂಬ ಸಿನಿಮಾ ಒಂದರ್ಥದಲ್ಲಿ ಕಾಡು ಮಕ್ಕಳ ಕರುಳಿನ ಕೂಗು.. ನೊಂದ ಹೃದಯಗಳ ಆರ್ತನಾದ. ಅನಾದಿ ಕಾಲದಿಂದಲೂ ಅರಣ್ಯದಲ್ಲಿ ವಾಸಿಸುತ್ತಿರುವ ಆದಿವಾಸಿ ಬುಡಕಟ್ಟು ಜನರ ಸಾಮಾಜಿಕ ಜನಜೀವನ, ಕಾಡಿನ ಸಂಸ್ಕೃತಿ, ದೈವಾಚರಣೆ, ಆರ್ಥಿಕತೆ ಮತ್ತು ಆಳುವ ನಾಗರಿಕ ವರ್ಗಗಳ ವಿರುದ್ದದ ಸಂಘರ್ಷವನ್ನು ತುಂಬಾನೇ ಪರಿಣಾಮಕಾರಿಯಾಗಿ ಅಡವಿ ಜನರ ಭೂಮಿ, ವಸತಿ, ಶಿಕ್ಷಣ ಮತ್ತು ಆರೋಗ್ಯದ ಸಮಸ್ಯೆಯನ್ನು ಗಂಭೀರವಾಗಿ ಚಿತ್ರೀಕರಣ ಮಾಡಲಾಗಿದೆ. ಕಲೆಯೇ ತನ್ನ ದೈವ ಅಂದುಕೊಂಡು ಸದಾ ಹೋರಾಟದ ಹಾದಿಯಲ್ಲಿ ದಿನ ಸವೆಸುತ್ತಿರುವ…

Read More