Subscribe to Updates
Get the latest creative news from FooBar about art, design and business.
- ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
- ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
- ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
- ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
- ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
- ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
- ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
- ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
Author: admin
ಬೆಂಗಳೂರು:ಅರವಿಂದ ಲಿಂಬಾವಳಿ ಸೇರಿ ಆರು ಜನರ ಹೆಸರು ಬರೆದಿಟ್ಟು ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದೆ. 47 ವರ್ಷದ ಪ್ರದೀಪ್ ಕಾರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್ಎಸ್ಆರ್ ಲೇಔಟ್ ನಿವಾಸಿಯಾಗಿರುವ ಪ್ರದೀಪ್ , ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ನಲ್ಲಿ ಅವರು ಹಲವು ವಿಷಯ ಪ್ರಸ್ತಾಪಿಸಿದ್ದು, ಆರು ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಬರೆಯಲಾಗಿದೆ. ಹೆಸರುಗಳ ಮುಂದೆ ಮೊಬೈಲ್ ನಂಬರ್ ಬರೆದು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವ್ಯವಹಾರದಲ್ಲಿ ವಂಚನೆ ಹಿನ್ನೆಲೆ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ವಿಜಯಪುರ: ಆನಾರೋಗ್ಯದಿಂದ ಬಳಲುತ್ತಿರುವ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸೇರಿದ ಅಪಾರ ಸಂಖ್ಯೆಯ ಭಕ್ತರು ಶ್ರೀಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ಶ್ರೀಗಳ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ. ಸಿದ್ದೇಶ್ವರ ಶ್ರೀಗಳಿಗೆ ಮಠದಲ್ಲಿಯೇ ಚಿಕಿತ್ಸೆ ಮುಂದುವರೆದಿದ್ದು, ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಸಿದ್ಧೇಶ್ವರ ಶ್ರೀಗಳ ದರ್ಶನಕ್ಕೆ ನಾಡಿನ ಗಣ್ಯರು, ಮಠಾಧೀಶರು ಹಾಗೂ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡತೊಡಗಿದ್ದಾರೆ. ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವೈ.ಎನ್.ಹೊಸಕೋಟೆ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅಂಗವಾಗಿ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಭಾನುವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಉಮಾಕಾಂತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಅಮರ ಶಿಲ್ಪಿ ಜಕಣಾಚಾರಿ ಅವರು ಹಲವಾರು ದೇವರ ಮೂರ್ತಿಗಳು ಮತ್ತು ಶಿಲ್ಪಗಳನ್ನು ಕೆತ್ತನೆ ಮಾಡಿದ್ದಾರೆ. ಇಂತಹ ಕಲೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಶಿಲ್ಪ ಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗಬೇಕು. ಇಂತಹ ಕಲೆ ಉಳಿಸಿ ಬೆಳಿಸಿದಾಗ ಮಾತ್ರ ಜಕಣಾಚಾರಿ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಆದಿ ನಾರಾಯಣಾಚಾರಿ, ನಿರ್ದೇಶಕರಾದ ಶಿವಶಂಕರಾಚಾರಿ, ಸತ್ಯನಾರಾಯಣಾಚಾರಿ, ಕೌಶಿಕ್ ಹಾಜರಿದ್ದರು. ವರದಿ: ನಂದೀಶ್ ನಾಯ್ಕ್, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾರವಾರ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಅರುಣ್ ಪಾಂಡ್ಯನ್, ನಿಪುಲ್, ಮೊಹಮ್ಮದ್ ಶೇಖರನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಮೃತರು ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ. ಗೋವಾದಲ್ಲಿ ಪಾರ್ಟಿ ಮುಗಿಸಿಕೊಂಡು ಅಂಕೋಲ ಭಾಗದಿಂದ ಯಲ್ಲಾಪುರ ಕಡೆಗೆ ಕಾರು ತೆರಳುತ್ತಿದ್ದು, ಈ ವೇಳೆ ಹುಬ್ಬಳ್ಳಿಯಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಮುಖಾಮುಖಿ ಡಿಕ್ಕಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಜೌರಿ: ನಂತರ ಶಂಕಿತ ಉಗ್ರರ ಗುಂಡಿನ ದಾಳಿಯ ಪರಿಣಾಮ ಮೂವರು ನಾಗರಿಕರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಇಲ್ಲಿನ ಡ್ಯಾಂಗ್ರಿ ಗ್ರಾಮದಲ್ಲಿ ಇಬ್ಬರು ಶಂಕಿತ ಉಗ್ರರು ಗ್ರಾಮಸ್ಥರ ಮನೆಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಮೂರು ಮನೆಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, 8 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರಜೌರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕರೆದೊಯ್ಯುಲಾಗಿದೆ. ಕಳೆದ ಎರಡು ವಾರಗಳಲ್ಲಿ ರಜೌರಿ ಜಿಲ್ಲೆಯಲ್ಲಿ ನಡೆದಿರುವ ಎರಡನೇ ಘಟನೆಯಾಗಿದೆ. ಡಿಸೆಂಬರ್ 16 ರಂದು ಸೇನಾ ಶಿಬಿರ ಹೊರಗಡೆ ನಡೆದ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಅವರ ಹೊಸ ಪಕ್ಷ ‘ಕಲ್ಯಾಣ ರಾಜ್ಯ ಪ್ರಗತಿ’(ಕೆಆರ್ ಪಿ) ಇತ್ತೀಚೆಗೆ ಘೋಷಣೆಯಾಗಿತ್ತು. ಇದೀಗ ಪಕ್ಷದ ಬಾವುಟವನ್ನು ಅಧಿಕೃತವಾಗಿ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಬಿಡುಗಡೆಗೊಳಿಸಿದ್ದಾರೆ. ಬೆಣಕಲ್ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅರುಣಾ ಲಕ್ಷ್ಮೀ ಪಕ್ಷದ ಬಾವುಟವನ್ನು ಬಿಡುಗಡೆ ಮಾಡಿದರು. ಹಸ್ತಲಾಘವ ಹೊಂದಿರುವ ಸಹಕಾರ ಮಾದರಿಯ ಚಿಹ್ನೆಯನ್ನು ಬಾವುಟದಲ್ಲಿ ಬಳಕೆ ಮಾಡಲಾಗಿದೆ. ಬಾವುಟ ಬಿಡುಗಡೆಯ ಬಳಿಕ ಮಾತನಾಡಿದ ಅರುಣಾ ಲಕ್ಷ್ಮೀ, ಇಡೀ ರಾಜ್ಯ ಕಲ್ಯಾಣ ಕರ್ನಾಟಕ ಆಗಬೇಕೆಂಬುದು ಜನಾರ್ದನ್ ರೆಡ್ಡಿಯವರ ಬಯಕೆಯಾಗಿದೆ. ತಾವು ಹುಟ್ಟಿ ಬೆಳೆದ ಬಳ್ಳಾರಿ ಪ್ರಚಂಚದ ಭೂಪಟದಲ್ಲಿ ಕಾಣಬೇಕು. ಅವರ ಆಶಯದಂತೆ ಕೆಲಸ ಮಾಡುವುದು ನನ್ನ ಜವಾಬ್ದಾರಿ ಆಗಿದೆ ಎಂದರು. ಜನಾರ್ದನ್ ರೆಡ್ಡಿ ಅವರಿಗೆ ಕೋರ್ಟ್ ನಿರ್ಬಂಧ ಇರುವುದರಿಂದ ನಾನು ಬೆಣಕಲ್ ಗ್ರಾಮಕ್ಕೆ ಬಂದಿದ್ದೇನೆ. ಕುರುಬ ಸಮಾಜದ ಜನರ ಆಶೀರ್ವಾದ ನಮ್ಮ ಮೇಲಿದ್ದರೆ ಚುನಾವಣೆ ಗೆದ್ದೇ ಗೆಲ್ಲುತ್ತೇವೆ ಎಂಬುದು ನನ್ನ ಪತಿಯ ನಂಬಿಕೆ ಆಗಿದೆ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ…
ತುರುವೇಕೆರೆ: ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಎ ವಿ ಎಸ್ ಎಸ್ ಕಚೇರಿಯಲ್ಲಿ ಛಲವಾದಿ ಮಹಾಸಭಾ ಹಾಗೂ ದಲಿತ ಸಂಘರ್ಷ ಸಮಿತಿಯ ವತಿಯಿಂದ ಭೀಮ ಕೊರೆಗಾಂವ್ ವಿಜಯ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭೀಮ ಕೊರೆಗಾಂವ್ ಸ್ಮಾರಕದ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇರಿಸಿ ಚಲವಾದಿ ಮಹಾಸಭಾ ಹಾಗೂ ದಲಿತ ಸಂಘರ್ಷ ಸಮಿತಿಯ ಹೋರಾಟಗಾರರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ತಮ್ಮ ಪೂರ್ವಜರನ್ನು ಸ್ಮರಿಸಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಚಲವಾದಿ ಮಹಾಸಭಾ ಅಧ್ಯಕ್ಷರಾದ ಡೊಂಕಿಹಳ್ಳಿ ರಾಮಣ್ಣ, ಪೇಶ್ವೆಗಳ ವಿರುದ್ಧ ಶೋಷಿತ ಮಹರ್ ಸೈನಿಕರು ಹೋರಾಡಿ ಗೆದ್ದ ದಿನವನ್ನು ಭೀಮ ಕೊರೆಗಾಂವ್ ವಿಜಯೋತ್ಸವ ಎಂಬುದಾಗಿ ಆಚರಣೆ ಮಾಡುತ್ತಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇದನ್ನು ಆಚರಣೆಗೆ ತಂದಿದ್ದರು ಎಂದರು. ಈ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕರಾದ ಕುಣಿಕೇನಹಳ್ಳಿ ಜಗದೀಶ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೊಡಗಿಹಳ್ಳಿ ಹನುಮಂತಯ್ಯ, ಬೀಚನಹಳ್ಳಿ ಸೀನಪ್ಪ, ಮಾದಿಗ ದಂಡೋರದ ಜಿಲ್ಲಾಧ್ಯಕ್ಷ ಸೋಮೇನಹಳ್ಳಿ ಜಗದೀಶ್, ಪುರರಾಮಚಂದ್ರ,…
ಬೆಂಗಳೂರು: ಕರ್ನಾಟಕದ ನಂದಿನಿಯನ್ನು ಗುಜರಾತ್ ನ ಅಮುಲ್ ಜೊತೆಗೆ ವಿಲೀನ ಮಾಡುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಗೃಹ ಸಚಿವ ಅಮಿತ್ ಶಾ ನಂದಿನಿ ಹಾಗೂ ಅಮೂಲ್ ವಿಲೀನ ವಿಚಾರವನ್ನು ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಸೃಷ್ಟಿಯಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ನಂದಿನಿ ವಿಲೀನವಾಗಲಿದೆ ಎಂದು ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ನಂದಿನಿ ತನ್ನ ಸ್ವಂತ ಅಸ್ಥಿತ್ವ ಉಳಿಸಿಕೊಳ್ಳಲಿದೆ. ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ ಎಂದಿದ್ದಾರೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದು ಸಮರ್ಥಿಸಿಕೊಂಡರು. ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ…
ಪಾವಗಡ : ಪಾವಗಡ ಪಟ್ಟಣದ ಹಿಂದೂಪುರ ರಸ್ತೆಯ ಬದಿಯ ಗುಡಿಸಲುಗಳಲ್ಲಿ ವಾಸಿಸುತ್ತಿರುವ ನಿರ್ಗತಿಕರ ಜೊತೆಯಲ್ಲಿ ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಹಾಗೂ ತಂಡ ಕೇಕ್ ಕತ್ತರಿಸಿ, ಗುಡಿಸಲು ವಾಸಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸಿ ವಿಭಿನ್ನವಾಗಿ ಹೊಸ ವರ್ಷವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ಪ್ ಸೊಸೈಟಿ ಮಾರ್ಗದರ್ಶಕರಾದ ಸಂಧ್ಯಾ ಮಾನಂ ಶಶಿಕಿರಣ್, ಇಂದು ನಿರ್ಗತಿಕರು ಚಳಿ, ಮಳೆ, ಬಿಸಿಲನ್ನದೇ ತಮ್ಮ ಜೀವನೋಪಯವನ್ನು ನಡೆಸುತ್ತಿದ್ದೂ, ಇಂತವರ ಮುಖದಲ್ಲಿ ಮಂದಹಾಸವನ್ನು ನೋಡುವ ಸಲುವಾಗಿ ಹೊಸ ವರ್ಷ ದಲ್ಲಿ ಇವರ ಜೊತೆಯಲ್ಲಿ ಕೇಕ್ ಕತ್ತರಿಸಿ ಶುಭಾಶಯಗಳನ್ನು ತಿಳಿಸಿ, ಇವರ ಜೀವನ ಸುಖಕರವಾಗಿರಲೆಂದು ಆಶಿಸಿ, ಇಲ್ಲಿ ನೆಲೆಸಿರುವ ನಿರ್ಗತಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಲಾ ಬ್ಯಾಗ್ ವಿತರಿಸಿ ಮಕ್ಕಳನ್ನು ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಪೋಷಕರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ರೂವಾರಿಗಳು ಅಧ್ಯಕ್ಷರು ಆದಂತಹ ಮಾನಂ ಶಶಿಕಿರಣ್,ಚಿರಂಜೀವಿ ಫ್ಯಾನ್ಸ್ ಕ್ಲಬ್ ನ ವೀರ, ಹೆಲ್ಪ್ ಸೊಸೈಟಿ ತಂಡದ…
ಪಾವಗಡ: ಕನ್ನಡದಲ್ಲಿ ವೈವಿಧ್ಯಮಯವಾದ ಕತೆ, ಕವನ, ಮಹಾಕಾವ್ಯ ಇತ್ಯಾದಿಗಳ ಮೂಲಕ ರಸ ಸಾಹಿತ್ಯವನ್ನು ಕಟ್ಟಿಕೊಟ್ಟ ರಸಋಷಿ ಕವಿ ಕುವೆಂಪು ಎಂದು ಉಪನ್ಯಾಸಕರಾದ ಆಂಜನೇಯಲು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕವು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆಯ ಕುವೆಂಪು ಗೀತಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವ ವಿಶ್ವಮಾನವನಾಗುವುದು ಹೇಗೆ? ಎಂಬ ಅಂಶಗಳನ್ನು ಕವಿ ತನ್ನ ಸಾಹಿತ್ಯದಲ್ಲಿ ಸ್ಪಷ್ಟವಾಗಿ ತಿಳಿಸಿಕೊಟ್ಟಿದ್ದಾರೆ. ಅವರಲ್ಲಿನ ದೂರದೃಷ್ಟಿ ಮತ್ತು ವೈಚಾರಿಕತೆ ಬರಹಗಳು ಮಾನವನ ಜೀವನವನ್ನೇ ಬದಲಿಸುತ್ತವೆ. ಹಾಗಾಗಿ ಪ್ರತಿಯೊಬ್ಬರು ಕುವೆಂಪುರವನ್ನು ಓದಬೇಕು ಎಂದರು. ಕನ್ನಡ ಉಪನ್ಯಾಸ ಅನಿಲ್ ಕುಮಾರ್ ಮಾತನಾಡಿ, ರಾಷ್ಟಕವಿ ಕುವೆಂಪುರವರು ವಿಶ್ವಮಾನವ ಸಂದೇಶವನ್ನು ಸಾಹಿತ್ಯದ ಮೂಲಕ ನೀಡಿದ್ದಾರೆ. ಅವರ ಪಂಚಮಂತ್ರಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡು ಸಾಗಬೇಕು ಎಂದರು. ಕಸಾಪ ಹೋಬಳಿ ಅಧ್ಯಕ್ಷ ಹೊ.ಮ.ನಾಗರಾಜು, ಕಾರ್ಯದರ್ಶಿ ಚಂದ್ರಶೇಖರ್ ಮುದ್ರಾಡಿ, ಶಿಕ್ಷಕಿ ವಿದ್ಯಾಶ್ರೀ ಮಾತನಾಡಿದರು. ವಾಸವಿ ವಿದ್ಯಾನಿಕೇತನ ಮತ್ತು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಕುವೆಂಪು ಗೀತಗಳ ಗಾಯನ ಮಾಡಿದರು. ಇದೇ ವೇಳೆ ಶಾಲಾ ಗ್ರಂಥಾಲಯಕ್ಕೆ…