Author: admin

ಬೆಂಗಳೂರು : ಪಹಣಿ ಬೆಲೆಯನ್ನು ಏಕಾಏಕಿ 10 ರೂಪಾಯಿ ಹೆಚ್ಚಳ ಮಾಡುವ ಮೂಲಕ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಈ ಮೊದಲು 15 ರೂಪಾಯಿ ಇದ್ದ ಪಹಣಿ ದರವನ್ನು 25 ರೂ.ಗೆ ಹೆಚ್ಚಳ ಮಾಡಲಾಗಿದೆ. ವಿವಿಧ ಸೌಲಭ್ಯಕ್ಕಾಗಿ ಪಹಣಿ ಅಗತ್ಯವಾಗಿದ್ದು, ರೈತರು ಈಗ 25 ರೂಪಾಯಿ ನೀಡಿ ಪಹಣಿ ಪಡೆದುಕೊಳ್ಳಬೇಕಿದೆ. ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಪಹಣಿ ಕಡ್ಡಾಯಗೊಳಿಸಲಾಗಿದ್ದು, ಆಸ್ತಿ ಮಾರಾಟ, ಬ್ಯಾಂಕುಗಳಲ್ಲಿ ಸಾಲ ಸೇರಿದಂತೆ ಹಲವು ಕಾರಣಕ್ಕೆ ಪಹಣಿ ಅಗತ್ಯವಾಗಿದ್ದು, ನಾಡಕಚೇರಿ, ತಹಶೀಲ್ದಾರ್ ಕಚೇರಿ, ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ರೈತರು ಪಹಣಿ ಪಡೆದುಕೊಳ್ಳಬೇಕಿದೆ. ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಪಹಣಿಗೆ 5 ರೂ. ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಈಗ ಪಹಣಿ ಪಡೆಯಲು 30 ರೂಪಾಯಿ ಪಾವತಿಸಬೇಕಿದೆ ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗದಗ: ಮಗನ ಸಾವಿನ ಸುದ್ದಿ ಕೇಳಿ ತಾಯಿ ನಿಧನರಾದ ಮನಕುಲುಕುವ ಘಟನೆ ಗಜೇಂದ್ರಗಡ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ನಡೆದಿದೆ. ಮಗ ಶಿವರುದ್ರಯ್ಯ ಪೂಜಾರ್ (38) ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ನಿನ್ನೆ ಮೃತಪಟ್ಟಿದ್ದಾರೆ. ಮಗ ಮೃತಪಟ್ಟಿರುವ ಸುದ್ದಿ ಕೇಳಿ ತಾಯಿ ಬಸಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ತಾಯಿ ಮತ್ತು ಮಗ ಸಾವಿನಲ್ಲೂ ಒಂದಾದ ಘಟನೆ ನಡೆದಿದೆ. ಇಬ್ಬರು ಸಾವಿನಿಂದ ಇಡೀ ಗ್ರಾಮದ ಜನರು ಶೋಕಸಾಗರದಲ್ಲಿ ಮುಳುಗಿದ್ದಾರೆ. ತಾಯಿ ಮತ್ತು ಮಗನ ಶವಗಳ ಅಂತಿಮ ಅಂತ್ಯಕ್ರಿಯೆ ನಡೆಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಎರಡು ವರ್ಷಗಳ ಬಳಿಕ ಸಂಭ್ರಮದ  ಹೊಸ ವರ್ಷಾಚರಣೆಗೆ ಇಡೀ ಜಗತ್ತು ಸಿದ್ಧವಾಗಿದೆ. ಕಳೆದೆರಡು ವರ್ಷಗಳಲ್ಲಿ ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಭ್ರಮಕ್ಕೆ ಅವಕಾಶ ನೀಡಿರಲಿಲ್ಲ. ಈ ಬಾರಿ ಅದ್ದೂರಿ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆ ನಡೆದಿದೆ. 2021 ಮತ್ತು 2022ರಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೊವಿಡ್ ಮಾರ್ಗ ಸೂಚಿಗಳು ಸಂಪೂರ್ಣವಾಗಿ ಬ್ರೇಕ್ ಹಾಕಿದ್ದವು. ಈ ಬಾರಿ ಕೂಡ ಹೊಸ ವರ್ಷಾಚರಣೆಯ ಸಂದರ್ಭದಲ್ಲಿಯೇ ಕೊವಿಡ್ ನ ಹೆಸರು ಕೇಳಿ ಬಂದಿತ್ತು. ಆದರೆ ಸರ್ಕಾರವು  ಮುಂಜಾಗೃತಾ ಕ್ರಮದೊಂದಿಗೆ ಹೊಸ ವರ್ಷಾಚರಣೆಗೆ ಅವಕಾಶ ನೀಡಿರುವುದು ಸಾರ್ವಜನಿಕರಿಗೆ ಅನುಕೂಲಕರವಾಗಿದೆ. 2022ರ ಡಿಸೆಂಬರ್ 31ರ ದಿನವಾದ ಇಂದು ಮಧ್ಯರಾತ್ರಿ 12 ಗಂಟೆಗೆ ಸಾರ್ವಜನಿಕರು ತಮ್ಮ ಅಭಿರುಚಿಗೆ ತಕ್ಕಂತೆ ಹೊಸ ವರ್ಷವನ್ನು ಸಂಭ್ರಮಿಸಲಿದ್ದಾರೆ.  ಈಗಾಗಲೇ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಜನರು ಸಂಭ್ರಮಿಸಲು ಸಕಲ ಸಿದ್ಧತೆಯಲ್ಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ನೀವು ಮದ್ಯದ ಚಟಕ್ಕೆ ಬಿದ್ದರೆ, ನೀವು ಬೇಗನೆ ವಯಸ್ಸಾಗುತ್ತೀರಿ ಎಂದು ಅಧ್ಯಯನಗಳು ತೋರಿಸುತ್ತವೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಚೆನ್ನಾಗಿ ಊಟ ಮಾಡಿದರೆ ಸಾಲದು, ಮದ್ಯಪಾನವನ್ನೂ ತ್ಯಜಿಸಬೇಕು ಎನ್ನುತ್ತಾರೆ ಸಂಶೋಧಕರು ಶಿಫಾರಸು ಮಾಡಿ. ಆಲ್ಕೋಹಾಲ್ ಚರ್ಮದ ಅಕಾಲಿಕ ವಯಸ್ಸನ್ನು ಉಂಟುಮಾಡುತ್ತದೆ ಎಂದು ಹೇಳಲಾಗುತ್ತದೆ. ಆಲ್ಕೋಹಾಲ್ ದೇಹದಲ್ಲಿ ನಿರ್ಜಲೀಕರಣ ಮತ್ತು ಆಲಸ್ಯವನ್ನು ಉಂಟುಮಾಡುತ್ತದೆ. ಮುಖಭಾವವೂ ಕಡಿಮೆಯಾಗುತ್ತದೆ. ಯಕೃತ್ತು ಮತ್ತು ಮೂತ್ರಪಿಂಡದ ಕಾರ್ಯವನ್ನು ಹಾನಿಗೊಳಿಸುತ್ತದೆ. ಹೆಚ್ಚು ಆಲ್ಕೋಹಾಲ್ ಕುಡಿಯುವುದರಿಂದ ಮೆದುಳಿನ ಜೀವಕೋಶಗಳು ಕುಗ್ಗಲು ಕಾರಣವಾಗಬಹುದು. ಪರಿಣಾಮವಾಗಿ, ಸಮಯೋಚಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥತೆ, ಕೆಲಸದಲ್ಲಿ ಅಸ್ತವ್ಯಸ್ತತೆ, ಕೇಂದ್ರೀಕರಿಸಲು ಅಸಮರ್ಥತೆ, ಭಾವನೆಗಳನ್ನು ನಿಯಂತ್ರಿಸುವುದು ಮತ್ತು ಕೋಪದಂತಹ ಲಕ್ಷಣಗಳು ಕಂಡುಬರುತ್ತವೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಆಲ್ಕೋಹಾಲ್ ಮೊದಲಿಗೆ ನಿಮ್ಮನ್ನು ಅಮಲುಗೊಳಿಸಿದರೂ, ಅದರ ಪರಿಣಾಮಗಳು ಕಡಿಮೆ ನಿದ್ರೆಯಿಂದ ಎಚ್ಚರಗೊಳ್ಳಲು ಮತ್ತು ಮರುಕಳಿಸುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ ಮುಖ್ಯವಾದ ಅಂಗವಾಗಿದೆ. ಮೂತ್ರಪಿಂಡಗಳು ನಿಯತಕಾಲಿಕವಾಗಿ ದೇಹದಿಂದ ತ್ಯಾಜ್ಯವನ್ನು ಹೊರಹಾಕುತ್ತವೆ. ಮೂತ್ರಪಿಂಡಕ್ಕೆ ಯಾವುದೇ ಹಾನಿಯನ್ನು ನಿರ್ಲಕ್ಷಿಸುವುದು ಅಪಾಯಕಾರಿ. ನಾವು ತೆಗೆದುಕೊಳ್ಳುವ ಆಹಾರ ಮತ್ತು ನೀರಿನಿಂದ ಕಿಡ್ನಿಯನ್ನು ರಕ್ಷಿಸಬಹುದು ಎನ್ನುತ್ತಾರೆ ವೈದ್ಯರು. ಇದರಲ್ಲಿರುವ ಕೆಂಪು ಮೆಣಸಿನಕಾಯಿ ಕಿಡ್ನಿಯನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಅವುಗಳಲ್ಲಿ ಪೊಟ್ಯಾಸಿಯಮ್ ಕಡಿಮೆ ಎಂದು ಅಧ್ಯಯನಗಳು ತೋರಿಸಿವೆ. ಇದರಲ್ಲಿ ವಿಟಮಿನ್ ಎ, ಸಿ, ಬಿ6, ಫೋಲಿಕ್ ಆಮ್ಲ ಮತ್ತು ಫೈಬರ್ ಸಮೃದ್ಧವಾಗಿದೆ. ಈ ಪೋಷಕಾಂಶಗಳು ಮೂತ್ರಪಿಂಡದ ಆರೋಗ್ಯಕ್ಕೆ ಪ್ರಯೋಜನಕಾರಿ. ಇದರಲ್ಲಿ ಲೈಕೋಪೀನ್ ಸಮೃದ್ಧವಾಗಿದೆ. ಇದು ಕ್ಯಾನ್ಸರ್ ನಿಂದ ರಕ್ಷಿಸುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಿಪಟೂರು : ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಮಟ್ಟದ ಎರಡನೇ ಸಾಹಿತ್ಯ ಸಮ್ಮೇಳನವನ್ನು ತಿಪಟೂರು ಗಡಿಭಾಗದ ಬಳುವನೇರಲಿನಲ್ಲಿ ಡಿಸೆಂಬರ್ 31ರಂದು ಹಮ್ಮಿಕೊಳ್ಳಲಾಗಿದೆ ಎಂದು ಕ.ಸಾ.ಪ ಹೊನ್ನವಳ್ಳಿ ಹೋಬಳಿ ಘಟಕದ ಅಧ್ಯಕ್ಷ ಚನ್ನಬಸಪ್ಪ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿ ಹೊನ್ನವಳ್ಳಿ ತಾಲ್ಲೂಕು ಕೇಂದ್ರವಾಗಿದ್ದ ಇತಿಹಾಸಗಳನ್ನು ಒಳಗೊಂಡಿದೆ. ಇದಕ್ಕಿಂತ ಹಿಂದೆ ಪಾಳೇಗಾರರು ಹೊನ್ನವಳ್ಳಿಯನ್ನು ಆಳುತ್ತಿದ್ದು, ಆಗಿನ ಕೋಟೆ-ಕೊತ್ತಲನ್ನು ಈಗಲೂ ನೋಡಬಹುದು. ಮುಖ್ಯವಾಗಿ ಇಲ್ಲಿನ ವಿಶಿಷ್ಟವಾದ ಗಂಗಾಪಾಣಿ ಎಳನೀರು ಮೈಸೂರು ದಸರಾಕ್ಕೆ ಕಳುಹಿಸುತ್ತಿದ್ದ ಇತಿಹಾಸವನ್ನು ಹೊಂದಿದೆ ಹಾಗೂ ಇಲ್ಲಿನ ಜನರು ಶಾಂತಿಪ್ರಿಯರು ಸಾಹಿತ್ಯಾಭಿರುಚಿಯನ್ನು ಉಳ್ಳವರು ಅದಕ್ಕಾಗಿಯೇ ಇಲ್ಲಿ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದ ಇದೇ ಡಿಸೆಂಬರ್ 31ರ ಶನಿವಾರ ಬಳುವನೇರಲಿನಲ್ಲಿ ಹೋನ್ನವಳ್ಳಿ ಹೋಬಳಿ ಮಟ್ಟದ 2ನೇ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬಳುವನೇರಲು ರಂಗಾಪುರದ ಆರ್.ಕೆ.ಶಿವಶಂರಪ್ಪ ಸಮ್ಮೇಳನಾಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದರು. ಸಮ್ಮೇಳನವು ದೊಡ್ಡಮೇಟಿಕುರ್ಕೆಯ ಬೂದಾಳು ಮಠದ ಶ್ರೀಶ್ರೀ ಶಶಿಶೇಖರಸಿದ್ದಬಸವ ಮಹಾಸ್ವಾಮೀಜಿಗಳ ನೇತೃತ್ವದದಲ್ಲಿ ಜರುಗಲಿದ್ದು, ಸ್ಥಳೀಯ ಗ್ರಾಮೀಣ ಪ್ರತಿಭೆಗಳ ಕಲೆಗಳು ಸಮ್ಮೇಳನದಲ್ಲಿ…

Read More

ಪ್ರವಾಹಗಳು ಫಿಲಿಪೈನ್ಸ್ ಅನ್ನು ನಾಶಮಾಡುತ್ತಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿಯ ಪ್ರಕಾರ, ನಿನ್ನೆ ಪ್ರವಾಹದಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಪ್ರವಾಹದಲ್ಲಿ ಒಟ್ಟು 3,93,069 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. 292 ಪುನರ್ವಸತಿ ಕೇಂದ್ರಗಳಲ್ಲಿ 81,443 ಜನರು ಆಶ್ರಯ ಪಡೆದಿದ್ದಾರೆ. ಕ್ರಿಸ್ಮಸ್ ದಿನದ ಸಂಜೆ ಆರಂಭವಾದ ಪ್ರವಾಹವು ಫಿಲಿಪ್ಪೀನ್ಸ್‌ನ 9 ಪುರಸಭೆಗಳನ್ನು ಮುಳುಗಿಸಿತು. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರವಾಹದ ಪರಿಣಾಮ ಕೃಷಿಯ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಅಧಿಕಾರಿಗಳು ಭವಿಷ್ಯ ನುಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಂಚಮಸಾಲಿ ಸಮುದಾಯಕ್ಕೆ ಸರ್ಕಾರದ ಮೀಸಲಾತಿ ವಿಚಾರ ಸ್ಪಷ್ಟವಾಗಿಲ್ಲ, ಹೀಗಾಗಿ ಯಾರೂ ವಿಜಯೋತ್ಸವ ಅಥವಾ ತಿರಸ್ಕಾರ ವ್ಯಕ್ತಪಡಿಸಬೇಡಿ ಎಂದು ಕೂಡಲಸಂಗಮ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಮೀಸಲಾತಿ ನೀಡಿದೆ ಎಂದು ಸಚಿವರು ಹೇಳುತ್ತಿದ್ದಾರೆ. ಆದರೆ ಸಚಿವ ಮಾಧುಸ್ವಾಮಿ ಹೇಳಿಕೆ ಸ್ಪಷ್ಟವಾಗಿಲ್ಲ ಎಂದರು. ಈ ಬಗ್ಗೆ ಪಂಚಮಸಾಲಿ ಸಮಾಜದ ಮುಖಂಡರಾದ ಈರಣ್ಣ ಕಡಾಡಿ, ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ಮಾತನಾಡಿದ್ದೇನೆ. ಅವರು ಮುಂಜಾನೆ ಬರುತ್ತೇನೆ ಎಂದು ಹೇಳಿದ್ದಾರೆ. ಅವರು ಬಂದ ಮೇಲೆ ಚರ್ಚಿಸಿದ ನಂತರವೇ ನಿರ್ಧಾರ ತಿಳಿಸುತ್ತೇನೆ. ಕ್ಯಾಬಿನೆಟ್ ಚರ್ಚೆ ಪ್ರತಿ ನಮಗೆ ಇನ್ನೂ ಸಿಕ್ಕಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಕಬ್ಬು ಬೆಳೆಗಾರರ ನಿರಂತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತಿ ಟನ್ ಕಬ್ಬಿಗೆ 50 ರೂ. ಎಫ್ ಆರ್ ಪಿ ಹೆಚ್ಚಳ ಮಾಡಿದ್ದರೂ, ಕಬ್ಬು ಬೆಳೆಗಾರರು ಹೋರಾಟ ಮುಂದುವರೆಸಿದ್ದರಿಂದ ರಾಜ್ಯ ಸರ್ಕಾರ ಮೊಲಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶದಲ್ಲಿ ಪ್ರತಿ ಟನಗೆ 100 ರೂಪಾಯಿ ಹೆಚ್ಚುವರಿಯಾಗಿ ಪಾವತಿಸುವಂತೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ 3050 ರೂಪಾಯಿ ಎಫ್ ಆರ್ ಪಿ ನಿಗದಿಗೊಳಿಸಿತ್ತು. ಹೀಗಾಗಿ ಕಬ್ಬಿನ ದರ ಹೆಚ್ಚಳ ಮಾಡುವಂತೆ ಬೆಳೆಗಾರರು ಬೆಳಗಾವಿ ಸೇರಿದಂತೆ ಹಲವೆಡೆ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಸರ್ಕಾರ ಎಥೆನಾಲ್ ಉತ್ಪಾದಿಸುವ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ 50 ರೂಪಾಯಿ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಇದಕ್ಕೆ ಒಪ್ಪದ ಕಬ್ಬು ಬೆಳೆಗಾರರು ಹೋರಾಟ ಮುಂದುವರೆಸಿದ್ದರು. ಗುರುವಾರ ಹೊಸ ಆದೇಶ ಹೊರಡಿಸಲಾಗಿದ್ದು, ಮೊಲಾಸಿಸ್ ಮಾರಾಟದಿಂದ ಸಕ್ಕರೆ ಕಾರ್ಖಾನೆಗಳಿಗೆ ಬರುವ ಲಾಭಾಂಶ ಮತ್ತು ಸಾಗಾಣಿಕೆ ವೆಚ್ಚ…

Read More

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇಂದು ನಡೆದ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ಕುರಿತು ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಈ ಮಾಹಿತಿ ನೀಡಿದ್ದು, ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಇನ್ನು ಪಂಚಮಸಾಲಿ ಮೀಸಲಾತಿಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಭಾರೀ ಪ್ರತಿಭಟನೆ ನಡೆಸಿದ್ದು, ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More