Author: admin

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆಗೆ 126.27ಎಕರೆ ಸರ್ಕಾರಿ ಜಮೀನು ಮೀಸಲಿರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದರು. ವಿಧಾನಸಭೆಯಲ್ಲಿ ಗುರುವಾರ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆಗೆ ಉತ್ತರಿಸಿದ ಅವರು, ವಿ.ವಿಗೆ ಹಿರೇಬಾಗೇವಾಡಿ- ಹಾಲಗಿಮರ್ಡಿ ಗ್ರಾಮದಲ್ಲಿ ಮುಂಜೂರಾದ ಜಾಗದಲ್ಲಿ ಕಂಪೌಂಡ್ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, ಮೊದಲನೇ ಹಂತದ ಕಟ್ಟಡ ಕಾಮಗಾರಿಗೆ ಸ್ಥಳೀಯ ರೈತರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿ.9ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರೈತರು ಹಾಗು ವಿವಿಯ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರೈತರಿಗೆ ಕಬ್ಬು ಹಾಗೂ ಇನ್ನಿತರೆ ಕೃಷಿ ಸಂಬಂಧಿತ ವಸ್ತುಗಳನ್ನು ಸಾಗಿಸಲು ಅನುಕೂಲವಾಗುವಂತೆ ರಸ್ತೆ ಬಿಟ್ಟುಕೊಡಲು ವಿಶ್ವವಿದ್ಯಾಲಯ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಕಂಪೌಂಡ್ ಗೋಡೆಯನ್ನು ತೆರವುಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಕಳೆದ ಐದು ವರ್ಷಗಳಲ್ಲಿ 36117 ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗಿದ್ದು,18618 ಕಟ್ಟಡಗಳನ್ನು ದುರಸ್ಥಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.ವಿಧಾನಸಭೆಯಲ್ಲಿ ಗುರುವಾರ ಶಾಸಕ ಪ್ರಿಯಾಂಕ್ ಖರ್ಗೆಯವರ ಪ್ರಶ್ನೆಗೆ ಅವರು ಉತ್ತರಿಸಿದರು. ಹಿಂದಿನ ಸರ್ಕಾರ ಕಾಲ ಕಾಲಕ್ಕೆ ತಕ್ಕಂತೆ ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ಥಿಕಾರ್ಯ ಮಾಡದ ಹಿನ್ನೆಲೆ ನಮ್ಮ ಸರ್ಕಾರ ಇಷ್ಟೊಂದು ಪ್ರಮಾಣದ ಕಟ್ಟಡಗಳ ನಿರ್ಮಾಣ ಹಾಗೂ ದುರಸ್ಥಿಗೆ ದೊಡ್ಡ ಮೊತ್ತದ ಅನುದಾನ ಬಳಸಬೇಕಾಗಿದೆ ಎಂದುಅವರು ತಿಳಿಸಿದರು. 2013ರಿಂದ 18ರವರೆಗೆ ಶಾಲಾಕಟ್ಟಡಗಳ ದುರಸ್ಥಿ ಆಗಿರುವುದಿಲ್ಲ ಹಾಗಾಗಿ ನಮ್ಮ ಸರ್ಕಾರ ಅವಧಿಯಲ್ಲಿ ದುರಸ್ಥಿ ಕಾರ್ಯ ಹೆಚ್ಚಾಗಿದೆ, ಪ್ರತಿವರ್ಷ 3 ಸಾವಿರ ಕೊಠಡಿಗಳ ದುರಸ್ಥಿ ಆಗುತ್ತಿದೆ ಮತ್ತು ಪಠ್ಯಪುಸ್ತಕಗಳ ಸುಳ್ಳು ಇತಿಹಾಸ ತೆಗೆದು ಸತ್ಯವನ್ನಷ್ಟೇ ಹೇಳಲಾಗುತ್ತ್ತಿದೆ ಎಂದರು. 2022-23 ನೇ ಸಾಲಿನ ಯುಸೈಡ್/ ಸ್ಯಾಟ್ಸ್ ಅಂಕಿ ಅಂಶಗಳ ಪ್ರಕಾರ 75,675 ಸರ್ಕಾರಿ ಶಾಲಾ ಕೊಠಡಿಗಳಿಗೆ ದುರಸ್ಥಿ ಅವಶ್ಯಕತೆ ಇರುತ್ತದೆ.ಈ ಪೈಕಿ 36,724 ಕೊಠಡಿಗಳಿಗೆ ಸಣ್ಣ ಪ್ರಮಾಣದ ಅವಶ್ಯಕತೆ ಇರುತ್ತದೆ. ಪ್ರತಿ ಕೊಠಡಿಗಳಿಗೆ ರೂ.2…

Read More

ಹಳೆಯ ಪಿಂಚಣಿ ಯೋಜನೆ ಜಾರಿ ತರುವ ಪ್ರಸ್ತಾವನೆಯು ಸರ್ಕಾರದ ಮುಂದಿರುವುದಿಲ್ಲ. ಹಣಕಾಸಿನ ನೆರವು ನೋಡಿಕೊಂಡು ಒಪಿಎಸ್ ಜಾರಿ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಮತ್ತು ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಹೇಳಿದರು. ರಾಜ್ಯ ಸರ್ಕಾರಿ ನೌಕರರಿಗೆ ಜಾರಿಗೆ ತಂದಿರುವ ಎನ್‍ಪಿಎಸ್ ನಿಂದ ಓಪಿಎಸ್‍ಗೆ ಪರಿವರ್ತನೆ ಕುರಿತು ಸರ್ಕಾರದ ನಿಲುವೇನು ಎಂದು ಸದಸ್ಯ ತಳವಾರ ಸಾಬಣ್ಣ ಅವರು ಕೇಳಿದ ಪ್ರಶ್ನೆಗೆ ಪರಿಷತ್ತಿನಲ್ಲಿ ಮುಖ್ಯಮಂತ್ರಿಗಳ ಪರವಾಗಿ ಮಾತನಾಡಿದ ಜೆ.ಸಿ.ಮಾಧುಸ್ವಾಮಿ ಅವರು, ಹಳೆಯ ಪಿಂಚಣಿ ಯೋಜನೆಯ ಜಾರಿ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇರುವುದಿಲ್ಲ. ಓಪಿಎಸ್ ಜಾರಿಗೆ ಪದೆಪದೇ ಒತ್ತಾಯಿಸುವುದು ಸರಿಯಲ್ಲ. ಒಪಿಎಸ್ ಜಾರಿ ಸಂಬಂಧ ಪರಿಶೀಲಿಸಲು ಈಗಾಗಲೇ ಮೂರು ಸಭೆಗಳು ನಡೆದಿವೆ. ಹೊಸ ಪಿಂಚಣಿ ವ್ಯಾಪ್ತಿಗೆ ಬರುವ ನೌಕರರಿಗೆ ಈಗಾಗಲೇ ಹಲವಾರು ಸೌಲಭ್ಯ ನೀಡಲಾಗಿದೆ. ಒಪಿಎಸ್ ನೀಡುವ ಅವಶ್ಯಕತೆಯಿಲ್ಲ ಎಂದು ಸಮಿತಿಯು ವರದಿ ನೀಡಿದೆ ಎಂದು ತಿಳಿಸಿದರು. ಹಳೆಯ…

Read More

ಚಾಮರಾಜನಗರ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗ್ತಾರೆ. ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೆಹರುಯಿಂದ ಹಿಡಿದು ಮನಮೋಹನ್ ಸಿಂಗ್ ನವರೆಗೆ ಕಾಂಗ್ರೆಸ್ ಪ್ರಧಾನ ಮಂತ್ರಿಗಳ ಕಾಲದಲ್ಲಿ ಅತಿ ಹೆಚ್ಚು ಹಗರಣಗಳು ನಡೆದಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು . ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್, ಇಂದಿರಾಗಾಂಧಿ ಕಾಲದಿಂದ ಭಯೋತ್ಪಾದನೆ ಶುರುವಾಯಿತು, ಆಗ ಬಾಂಬ್ ನ ಕಾರ್ಖಾನೆಗಳು ಆರಂಭವಾಗಿದ್ದು ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ : ಕಳಸಾ ಭಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಅನುಮತಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಉತ್ತರ ಕರ್ನಾಟಕ ಭಾಗದ ಜನರಿಗೆ ಪ್ರಧಾನಿ ಮೋದಿಯವರ ಕೊಡುಗೆ ಇದಾಗಿದೆ ಎಂದರು. ಬಹಳ ವರ್ಷದ ಕನಸು ನನಸಾಗಿದೆ. ಇಡೀ ಕರ್ನಾಟಕ ಜನತೆ ಹಾಗೂ ಎಲ್ಲಾ ಸದಸ್ಯರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೀರಾವರಿ ಸಚಿವ ಗೋವಿಂದ್ ಕಾರಜೋಳ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು. ಇನ್ನು ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಕಳಸಾ ಭಂಡೂರಿ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ , ನಿಕಟಪೂರ್ವ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರಿಗೆ ಹಾಗೂ…

Read More

ಉತ್ತರಖಂಡ್ ನ ಹರಿದ್ವಾರ ಮಂಗಳೌರ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಗಂಭೀರ ಗಾಯಗೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ ಮನ್  ರಿಷಬ್ ಪಂತ್  ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ನಿವಾಸಕ್ಕೆ  ತೆರಳುತ್ತಿದ್ದಾಗ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾಗಿದೆ. ರಾಷ್ಟ್ರೀಯ ಹೆದ್ದಾರಿ 58ರಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನ ಗ್ಲಾಸ್ ಒಡೆದು ರಿಷಬ್ ಪಂತ್ ಹೊರಗೆ ಬಂದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ದೆಹಲಿಯ ಏಮ್ಸ್ ನಲ್ಲಿ ರಿಷಬ್ ಪಂತ್ ಗೆ ಚಿಕಿತ್ಸೆ ನೀಡಲಾಗುತ್ತಿದ್ದು ಬೆನ್ನುಕಾಲು ತಲೆಗೆ ಗಾಯಗಳಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು  ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ನಿಧನರಾಗಿದ್ದಾರೆ. ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿದ್ದರು. ಹೀರಾಬೆನ್‌ ನಿಧನಕ್ಕೆ ಗಣ್ಯರೆಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅವರ ನಿಧನಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್, ಗುಜರಾತ್​ ಸಿಎಂ ಭೂಪೇಂದ್ರ ಪಟೇಲ್​​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ರಾಜ್ಯದಲ್ಲಿ ನಡೆದ ಎಲ್ಲಾ ನೇಮಕಾತಿ ಪರೀಕ್ಷೆಗಳು ವ್ಯಾಪಕ ಭ್ರಷ್ಟಾಚಾರ, ಅವ್ಯವಹಾರ ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಾಕ್ಷಿಯಾಗಿವೆ. ಇದರ ನೇರ ಪರಿಣಾಮ ಅನುಭವಿಸಿದ್ದು ನಮ್ಮ ನಾಡಿನ ಲಕ್ಷಾಂತರ ಉದ್ಯೋಗಕಾಂಕ್ಷಿ ಯುವಕರು. ಇದನ್ನು ತಡೆಗಟ್ಟಲು, ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಅನೇಕ ಕ್ರಮಗಳ ಅನಿವಾರ್ಯತೆಯಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನೇಮಕಾತಿ ಪರೀಕ್ಷೆಗಳಲ್ಲಿನ ಭ್ರಷ್ಟಾಚಾರವನ್ನ ತಡೆಯಲು ಸದನದಲ್ಲಿಂದು ಖಾಸಗಿ ಮಸೂದೆಯನ್ನ ಜಾರಿಗೆ ತರಲು ಸಭಾಪತಿಗಳಿಗೆ ಸಲ್ಲಿಸಿದ್ದೇನೆ.  ಇದರ ಅವಶ್ಯಕತೆ ಲೂಟಿ ಹೊಡೆಯಲೇ ಬಂದಿರುವ ಸರ್ಕಾರಕ್ಕೆ ಇಲ್ಲದಿರಬಹುದು, ಆದರೆ ತಮ್ಮ ಜೀವನವನ್ನು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿರುವ ನಮ್ಮ ಯುವಕರಿಗೆ, ಸುಗಮ ಹಾಗೂ ಸ್ಪೂರ್ತಿ ತುಂಬಿದ ಆಡಳಿತ ಬಯಸುತ್ತಿರುವ ಜನ ಸಾಮಾನ್ಯರಿಗೆ ಖಂಡಿತ ಇದೆ ಎಂದು ಅವರು ಹೇಳಿದ್ದಾರೆ. ನಮ್ಮ ನಾಡಿನ ಯುವಕರಿಗೆ ನ್ಯಾಯಯುತವಾಗಿ ಉದ್ಯೋಗ ಕಲ್ಪಿಸಲು ಸರ್ವ ಪ್ರಯತ್ನಗಳನ್ನೂ ನಾನು ನನ್ನ ಕ್ಷಮತೆ ಮೀರಿ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ ಎಂದು ಪ್ರಿಯಾಂಕ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ‘ಕಾಂಗ್ರೆಸ್ ವಿಷನ್ 2023’ ವೆಬ್ ಸೈಟ್ ಅನ್ನು ಗುರುವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ ಅವರು ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ಪ್ರೋ. ರಾಧಾಕೃಷ್ಣ, ಮಧು ಬಂಗಾರಪ್ಪ, ಸಮಿತಿಯ ಸದಸ್ಯರಾದ ಹುಸೇನ್ ಹಾಗೂ ರಾಜು ಗೌಡ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರ್, ‘ನಾವು ಆಡಳಿತಕ್ಕೆ ಬಂದರೆ ಜನರಿಗೆ ಏನು ಕೊಡುತ್ತೇವೆ ಎಂಬ ಭರವಸೆಗಳನ್ನು ತಿಳಿಸುವುದು ಬಹಳ ಮುಖ್ಯ. ಆ ದೃಷ್ಟಿಯಲ್ಲಿ ಕಾಂಗ್ರೆಸ್ ಪಕ್ಷ ಪ್ರತಿ ಬಾರಿ ಚುನಾವಣೆಗೆ ಹೋಗುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ತಿಳಿಸುತ್ತದೆ. ನಾವು ಕೊಟ್ಟ ಭರವಸೆಗಳು ಈಡೇರಿಸುವ ಭರವಸೆಗಳು. ನಾವು ಕೊಡುವ ಭರವಸೆ ಸಂಪೂರ್ಣವಾಗಿ ಕಾರ್ಯಗತಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ ವಿಭಿನ್ನವಾಗಿ ನಡೆದುಕೊಳ್ಳುತ್ತದೆ. 2013ರಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುವ ಮುನ್ನ ರಾಜ್ಯದ ಜನತೆಗೆ 160 ಭರವಸೆಗಳನ್ನು ನೀಡಿದ್ದೆವು. ಆ…

Read More

ಬೆಳಗಾವಿ : ಕಳಸಾ ಬಂಡೂರಿ ಯೋಜನೆಗೆ ಅಂತಿಮವಾಗಿ ವಿಸ್ತೃತ ಯೋಜನಾ ವರದಿಗೆ ಒಪ್ಪಿಗೆ ದೊರೆತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 1988ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರು ಅಂದಿನ ಮುಖ್ಯಮಂತ್ರಿ ರಾಣೆ ಯವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು. ನಂತರ ಗೋವಾದಲ್ಲಿ ಬಂದ ಸರ್ಕಾರಗಳು ಇದನ್ನು ಕಾರ್ಯಗತಗೊಳಿಸದೆ ವಿರೋಧಿಸಿದ್ದರು.  ಒಟ್ಟಾರೆ ಮಹದಾಯಿ ಯೋಜನೆಗೆ ಮೊದಲು ಚಿಂತನೆ ಮಾಡಿದ್ದು ಬದಾಮಿ ಶಾಸಕ ಬೆಟಗೇರಿ ಹಾಗೂ ಆರ್.ಟಿ. ದೇಸಾಯಿಯವರು. ಬೆಟಗೇರಿ ಯವರು ಬದಾಮಿಯಿಂದ ಪಾದಯಾತ್ರೆ ಮಾಡಿದ್ದರು. ನಂತರ ಕರ್ನಾಟಕಕ್ಕೆ ನೀರು ಮತ್ತು ಅವರಿಗೆ ವಿದ್ಯುತ್ ನೀಡುವುದು ಎಂದಾಗಿತ್ತು. ಇದು ಮೂಲ ಕೆಪಿಸಿ ಆರಂಭಿಸಿದ ಯೋಜನೆ. ನಂತರ ನಮಗೆ ನೀರಿನ ಕೊರತೆಯಾಗುತ್ತಿತ್ತು ಎಂದರು. ಮಲಪ್ರಭಾ ನದಿ ಕಾಕಂಬಿಯಲ್ಲಿ ಹುಟ್ಟಿ, ಮಹದಾಯಿ ನದಿಗೆ ತಿರುವು ನೀಡಬೇಕೆಂದು ನಿರ್ಧಾರವಾಗಿತ್ತು. ಮುಂದೆ ವಿರೋಧ ಎದುರಾದಾಗ ನಂತರ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯಾಗಿತ್ತು. ಹೆಚ್.ಕೆ.ಪಾಟೀಲ‌ ಅವರು ಆಗ ನೀರಾವರಿ ಸಚಿವರಾಗಿದ್ದರು. ಅದಕ್ಕೂ…

Read More