Subscribe to Updates
Get the latest creative news from FooBar about art, design and business.
- ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
- ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
- 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
- ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
- ಬೆಂಗಳೂರು: ಆರ್ಟ್ ಆಫ್ ಲಿವಿಂಗ್ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
- ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
- ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
- ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಮಧುಗಿರಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಸ್ಥಾನಗಳನ್ನು ಗಳಿಸಬಹುದು. ಪದವಿಯ ಜೊತೆಗೆ ಹಲವಾರು ಕೌಶಲಗಳನ್ನು ಕರಗತ ಮಾಡಿಕೊಳ್ಳಬೇಕು. ಜೀವನದಲ್ಲಿ ಬರುವ ಹಲವಾರು ಅಡೆತಡೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಸದೃಢ ಜೀವನ ಕಟ್ಟಿಕೊಳ್ಳಬೇಕು. ಜೀವನದಲ್ಲಿ ಅವಕಾಶವಂಚಿತರಾಗಿ ಹತಾಶರಾಗುವ ಬದಲು, ಸಾಧನೆಗೆ ಹಾತೊರೆಯಬೇಕು. ಭವಿಷ್ಯದ ಬಗ್ಗೆ ಆಶಾವಾದಿಯಾಗಿರಬೇಕೆಂದು ಬೆಂಗಳೂರಿನ ಪ್ರತಿಷ್ಟಿತ ಸರ್ಕಾರಿ ಆರ್.ಸಿ.ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೆ.ಜಯಲಕ್ಷ್ಮಮ್ಮ ಕರೆನೀಡಿದರು. ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಎಂ.ಕಾಂ. ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಓರಿಯೆಂಟೇಶನ್ ಮತ್ತು ವಿಶೇಷ ಉಪನ್ಯಾಸ ಮತ್ತು ಸ್ವಾಗತ ಕಾರ್ಯಕ್ರಮನ್ನುದ್ದೇಶಿಸಿ ಮಾತನಾಡಿದ ಅವರು, ಆಳವಾದ ಅಧ್ಯಯನ, ಸತತ ಪರಿಶ್ರಮದಿಂದ ಯಶಸ್ಸಿನ ಮಂತ್ರ ಅಡಗಿದೆ. ಪ್ರಸಕ್ತ ದಿನಗಳಲ್ಲಿ ಯುಜಿಸಿ, ಐ.ಸಿ.ಎಸ್.ಎಸ್.ಆರ್ ಮತ್ತು ಸರ್ಕಾರಿ ಮತ್ತು ಖಾಸಗೀ ಸಂಶೋಧನಾ ಕೇಂದ್ರಗಳು ಸಂಶೋಧನೆಗೆ ಒತ್ತು ನೀಡಿದ್ದು, ಸ್ನಾತಕೋತ್ತರ ಪದವಿ ಅಧ್ಯಯನ ಜೊತೆಗೆ ಕಿರು ಸಂಶೋಧನೆ ಕೈಗೊಳ್ಳಬೇಕು. ಪದವಿ ಜೊತೆಗೆ ಡ್ಯುಯಲ್ ಡಿಗ್ರಿ ಮಾಡುವ ಅವಕಾಶವಿದೆ. ಸ್ವಯಂ,…
ತುರುವೇಕೆರೆ: ತಾಲೂಕಿನ ಮಾದಿಹಳ್ಳಿ ಮಾದಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕೋನಹಳ್ಳಿ ಗ್ರಾಮದಲ್ಲಿ ಬಿ ಜೆ ಪಿ ಪಕ್ಷದ ವತಿಯಿಂದ “ವಿಜಯ ಸಂಕಲ್ಪ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿತ್ತು . ಈ ಅಭಿಯಾನದಲ್ಲಿ ಬಿಜೆಪಿ ಪಕ್ಷಕ್ಕೆ ನೋಂದಣಿಯನ್ನು ಮಾಡಿಕೊಳ್ಳಲಾಯಿತು ಮತ್ತು ನೋಂದಣಿಯಾದ ಸದಸ್ಯರುಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನ ಮುದ್ರಿತ ಕರಪತ್ರಗಳನ್ನು ಹಂಚಲಾಯಿತು ಹಾಗೂ ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಮುದ್ರಿತ ಪ್ರತಿಗಳನ್ನು ನೀಡಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾಜಿ ಎಂ.ಡಿ.ಲಕ್ಷ್ಮೀನಾರಾಯಣ್, ತುರುವೇಕೆರೆ ಮಂಡಲದ ಅಧ್ಯಕ್ಷರಾದ ಶ್ರೀ ಮೃತ್ಯುಂಜಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಯಶಸ್, ಮಾದಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್, ಹಾಗೂ ಎಲ್ಲಾ ಬಿಜೆಪಿ ಪದಾಧಿಕಾರಿಗಳು, ಮುಖಂಡರು, ಗ್ರಾಮಸ್ಥರುಗಳು ಪಾಲ್ಗೊಂಡಿದ್ದರು. ವರದಿ: ಸುರೇಶ್ ಬಾಬು ಎಂ, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ತುರುವೇಕೆರೆ: ಪಟ್ಟಣದ ಬಾಣಸಂದ್ರ ವೃತ್ತದಲ್ಲಿ ಶಾಸಕ ಮಸಾಲ ಜಯರಾಮ್ ರವರು ಎಂಎಂಎಲ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ ಇಂದು ಪಟ್ಟಣಕ್ಕೆ ಆಗಮಿಸಿದ್ದರು. ಬೆಳಿಗ್ಗೆ 10 ಗಂಟೆಯಿಂದಲೂ ನೂರಾರು ಕಾರ್ಯಕರ್ತರು ಹಾರ ತುರಾಯಿಗಳನ್ನು ಹಿಡಿದು ತಮ್ಮ ನೆಚ್ಚಿನ ನಾಯಕನ ಬರುವಿಕೆಯನ್ನು ಕಾಯುತ್ತಾ ಜಮಾವಣೆಗೊಂಡಿದ್ದರು. ಪಟ್ಟಣಕ್ಕೆ ಸರ್ಕಾರಿ ವಾಹನದಲ್ಲಿ ಆಗಮಿಸಿದ ಶಾಸಕರನ್ನು ತಾವು ತಂದಿದ್ದ ಹಾರಗಳನ್ನು ಹಾಕುವ ಮೂಲಕ ತಮ್ಮ ತಮ್ಮ ನೆಚ್ಚಿನ ನಾಯಕರನ್ನು ಸ್ವಾಗತಿಸಿ. ಜೈಕಾರ ಕೂಗಿದರು ಮತ್ತು ತೆರೆದ ವಾಹನದಲ್ಲಿ ಪಟ್ಟಣದ ಮುಖ್ಯ ಬೀದಿಗಳಲ್ಲಿ ಸಂಚರಿಸಿ ಬಿಜೆಪಿ ಬಾವುಟವನ್ನು ಹಾರಾಟ ಮಾಡಿ, ಪಟಾಕಿ ಸಿಡಿಸಿ ರಸ್ತೆ ಉದ್ದಕ್ಕೂ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಅದ್ದೂರಿ ಭವ್ಯ ಸ್ವಾಗತವನ್ನು ಕೋರಿದರು. ಈ ಸಂದರ್ಭದಲ್ಲಿ ಕೊಂಡಜ್ಜಿ ವಿಶ್ವನಾಥ್, ವಿ ಬಿ ಸುರೇಶ್ ,ನಾಗಲಾಪುರ ಮಂಜುನಾಥ್, ಇನ್ನು ಹಲವಾರು ಮುಖಂಡರುಗಳು ಹಾಗೂ ಪಕ್ಷದ ಬೆಂಬಲಿಗರು ಹಾಜರಿದ್ದರು. ವರದಿ: ಸುರೇಶ್ ಬಾಬು ಎಂ, ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ಕೊಡಿ ನಾಗಸಂದ್ರ ಟಿ.ಬಿ.ಕ್ರಾಸ್ ನಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಕಲಿಕಾ ಹಬ್ಬವನ್ನು ಆಯೋಜನೆ ಮಾಡಲಾಗಿತ್ತು. ನೂರಾರು ವಿದ್ಯಾರ್ಥಿಗಳು ವಿವಿಧ ವೇಷ ಭೂಷಣಗಳನ್ನು ತೊಟ್ಟು ಶಾಲೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಊರಿನ ಪ್ರಮುಖ ಬೀದಿಗಳಲ್ಲಿ ಪಥಸಂಚಲನದೊಂದಿಗೆ ಸಂಚರಿಸಿ ಪುನಃ ಶಾಲಾ ಆವರಣಕ್ಕೆ ಆಗಮಿಸಿ ಶಾಲಾ ಆವರಣದಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.. ಇನ್ನು ಈ ಕಾರ್ಯಕ್ರಮವನ್ನು ಸೊರವನಹಳ್ಳಿ ಕ್ಲಸ್ಟರ್ ಸಿ.ಆರ್.ಪಿ .ಕಂಬಯ್ಯ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು ಇವರ ಜೊತೆಗೆ ಸುರೇಶ್ ಹಾಗೂ ವಿದ್ಯಾರ್ಥಿಗಳು ಜೊತೆಗೂಡಿದರು ಈ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಹನ್ನೊಂದು ಶಾಲೆಗಳು ಅದರಲ್ಲಿ ಎಂಟು ಕಿರಿಯ ಪ್ರಾಥಮಿಕ ಶಾಲೆ ಎರಡು ಹಿರಿಯ ಪ್ರಾಥಮಿಕ ಶಾಲೆ ಒಂದು ಉರ್ದು ಮಾಧ್ಯಮ ಶಾಲೆ ಭಾಗವಹಿಸಿದ್ದರು ನೂರಕ್ಕೂ ಹೆಚ್ಚು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿ ಆರ್ ಪಿ ಕಂಬಯ್ಯ, ಕಲಿಕಾ ಹಬ್ಬವನ್ನು ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ…
ಪಾವಗಡ: ಕಳೆದ 11 ದಿನಗಳಿಂದ ಪಾವಗಡ ವ್ಯಾಪ್ತಿಯ ವಿವಿಧ ಕಡೆ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಶಾಲಾ ಕಾಲೇಜು, ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಪಾವಗಡ ಸಿ.ಐ.ಅಜಯ್ ಸಾರಥಿ ತಿಳಿಸಿದರು. ಪಾವಗಡ ಪೊಲೀಸ್ ಇಲಾಖೆ ವತಿಯಿಂದ ಇಂದು ಪಟ್ಟಣದ ಶನಿಮಹಾತ್ಮಾ ವೃತ್ತ ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ರಸ್ತೆಯಲ್ಲಿ ವಾಹನ ಚಾಲನೆ ಮಾಡುವಾಗ ರಸ್ತೆಯ ನಿಯಮಗಳನ್ನು ಎಲ್ಲರೂ ಪಾಲಿಸುವ ಮೂಲಕ ಅಮೂಲ್ಯ ಜೀವ ಉಳಿಸಿಕೊಳ್ಳುವಂತೆ ಅವರು ಇದೇ ವೇಳೆ ಕರೆ ನೀಡಿದರು. ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿ, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಬೇಡ, ಒಂದೇ ಬೈಕಿನಲ್ಲಿ ಮೂವರ ಪ್ರಯಾಣ ಬೇಡ ಎಂದು ಜಾಗೃತಿ ಮೂಡಿಸಿದರಲ್ಲದೇ, ಕಡ್ಡಾಯವಾಗಿ ಡಿ.ಎಲ್., ಹೊಂದಿರುವಂತೆ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗುರುನಾಥ್,…
ಪಾವಗಡ : ಸಂವಿಧಾನ ನೀಡಿರುವ ಹಲವಾರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ನಮ್ಮ ಸಮುದಾಯ ಮುಖ್ಯ ವಾಹಿನಿಗೆ ಬರಬೇಕೆಂದು ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ ತಿಳಿಸಿದರು. ತಾಲ್ಲೂಕಿನ ನಿಡಗಲ್ ಹೋಬಳಿಯ ಚಿನ್ನಮ್ಮನಹಳ್ಳಿ ಗ್ರಾಮದಲ್ಲಿ ಭಾನುವಾರ ಹೋಬಳಿ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ರವರ 132 ನೇ ‘ಜೈ ಭೀಮೋಸ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡದ ಹೊರತು ನಮ್ಮ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ, ಸಂವಿಧಾನವನ್ನು ಅರ್ಥ ಮಾಡಿಕೊಳ್ಳಲು ಮತ್ತು ಒಳ್ಳೆಯ ಸಮಾಜ ಕಟ್ಟಲು ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡಿ ಎಂದು ಕರೆ ನೀಡಿದರು. ಪಾರದರ್ಶಕವಾದ ಆಡಳಿತ ನಡೆಸುವುದರಿಂದ ಭ್ರಷ್ಟಾಚಾರ ರಹಿತವಾದ ಸರ್ಕಾರವನ್ನು ನಡೆಸಬಹುದು. ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ಮೊದಲನೇ ಬಾರಿಗೆ ಗ್ರಾಮ ಪಂಚಾಯತಿ ಸದಸ್ಯನಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದೆ. ಇಲ್ಲಿವರೆಗೂ ಸಂವಿಧಾನ ನಮಗೆ ನೀಡಿರುವ ಅನೇಕ ಸೌಲಭ್ಯಗಳನ್ನು ಜನರ ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಸಮಾಜ ಸೇವಕಿಯಾದ…
ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ಬಳ್ಳೆ ಹಾಡಿ ನಿವಾಸಿ ಹದಿನೆಂಟು ವರ್ಷದ ಮಂಜು ಬಿನ್ ಬೆಟ್ಚದ ಹುಲಿ ಅಲಿಯಾಸ್ ಬಿ.ಕಾಳ ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ. ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಕಾಡಿನ ಒಳಭಾಗದಲ್ಲಿ ಹುಲಿ ದಾಳಿ ನಡೆಸಿದ್ದು, ಹುಲಿಯ ದಾಳಿಗೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ವ್ಯಕ್ತಿಯ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆಯ ಶವಾಗಾರದಲ್ಲಿ ಇಡಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಿವೈಎಸ್ ಪಿ ಮಹೇಶ್, ಉಪನೀರಿಕ್ಷಕ ತಮ್ಮೇಗೌಡ, ತಂಗರಾಜು, ಕಿರಣ್ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಘಟನೆಯನ್ನು ಖಂಡಿಸಿ ಬಳ್ಳೆ ಗ್ರಾಮದಲ್ಲಿ ಮೃತ ವ್ಯಕ್ತಿಯ ಪೋಷಕರು ಹಾಗೂ ಹಾಡಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಮೈಸೂರು ಮಾನಂದವಾಡಿ ಹೆದ್ದಾರಿಯಲ್ಲಿ ಸಂಚಾರ ಕೆಲ ಕಾಲ ಅಡಚಣೆ ಉಂಟಾಗಿತ್ತು. ಪ್ರತಿಭಟನೆ ನಿರತರನ್ನು ಮನವೊಲಿಸಲು ಡಿವೈಎಸ್ ಪಿ ತೆರಳಿದ್ದಾರೆ. ಇನ್ನೂ ಪ್ರಕರಣ ದಾಖಲಾಗದ ಹಿನ್ನಲೆ ಮರಣೋತ್ತರ ಪರೀಕ್ಷೆಯನ್ನು ಮಾಡಿಲ್ಲ. ದಾಳಿ ಮಾಡಿದ ಹುಲಿಯು ನಾಲ್ಕು ಮರಿಗಳ ತಾಯಿ ಬ್ಯಾಕ್ ವಾಟರ್…
ಬೆಂಗಳೂರು: ರೈತರ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಕಾರ್ಯಕ್ರಮದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಕಂದಾಯ ಸಚಿವ ಆರ್ ಅಶೋಕ್, ಗಿರಿಜಮ್ಮ, ಮುನಿಯಪ್ಪ ದಂಪತಿ ಮನೆಯಲ್ಲಿ ಉಪಹಾರ ಸೇವಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ರೈತ ಕುಟುಂಬಗಳು ತಮ್ಮ ಆಸ್ತಿ ಭಾಗ ಮಾಡಿಕೊಳ್ಳುವುದು ಸವಾಲಿನ ಕೆಲಸವಾಗಿತ್ತು. ಪೌತಿಖಾತೆ ಆಂದೋಲನದ ಮೂಲಕ ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆಗಳು ಬರುತ್ತಿವೆ.ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆಗಳನ್ನು ತಲುಪಿಸುವ ಮಹತ್ವದ ಸುಧಾರಣೆ ಕ್ರಮವನ್ನು ರಾಜ್ಯ ಸರ್ಕಾರ ತಂದಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಬಿಜೆಪಿ ಪ್ರತಿ ಮತದಾರರಿಗೆ 6000 ರೂ ಹಣ ನೀಡಲಿದೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಾಗ್ಧಾಳಿ ನಡೆಸುವ ಭರದಲ್ಲಿ ನಾನು ನಿಮಗೆ 6 ಸಾವಿರ ರೂಪಾಯಿ ನೀಡುತ್ತೇನೆ ಎಂದು ಹೇಳಿದ್ದರು. ಇದುವರೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಸಾವಿರಾರು ರೂಪಾಯಿಯ ಗಿಫ್ಟ್ ನೀಡಿದ್ದಾರೆ, ಎಲ್ಲ ಸೇರಿ 3000 ಆಗಬಹುದು, ನಾನು ಪ್ರತಿ ಮತದಾರರಿಗೆ 6 ಸಾವಿರ ರೂ ನೀಡುತ್ತೇನೆ. ಒಂದು ವೇಳೆ ಕೊಡದಿದ್ದರೆ ನನಗೆ ಓಟು ಹಾಕಬೇಡಿ ಎಂದು ಹೇಳಿದರು. ಈ ಹೇಳಿಕೆ ವಿವಾದ ಪಡೆಯುತ್ತಿದ್ದಂತೆ ಬಿಜೆಪಿ ರಮೇಶ್ ಜಾರಕಿಹೊಳಿಯಿಂದ ಅಂತರ ಕಾಯಿದುಕೊಂಡಿದೆ ಎಂಬ ಗುಸುಗುಸು ಕೇಳಿಬರುತ್ತಿದೆ. ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದು, ಇದಕ್ಕೆಲ್ಲಾ ನಮ್ಮ ಪಕ್ಷದಲ್ಲಿ ಅವಕಾಶ ಇಲ್ಲ, 2023 ರಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು ಬೆಂಗಳೂರಿನ 300 ಸ್ಥಳಗಳಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ. ಇಂದು 51 ಮೆಟ್ರೋ ನಿಲ್ದಾಣಗಳು, 26 ಫ್ಲೈಓವರ್, 200 ಟ್ರಾಫಿಕ್ ಸಿಗ್ನಲ್ ಗಳಲ್ಲಿ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಘೋಷವಾಕ್ಯದಡಿ ಮೂರು ತಾಸು ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.ಬೆಂಗಳೂರಿನ ಎಲ್ಲ 28 ಕ್ಷೇತ್ರಗಳಲ್ಲಿ ಶಾಸಕರು, ಮಾಜಿ ಶಾಸಕರು ಸೇರಿದಂತೆ ಕಾಂಗ್ರೆಸ್ ಮುಖಂಡರು 300 ಕಡೆಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy