Subscribe to Updates
Get the latest creative news from FooBar about art, design and business.
- ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
- ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
- 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
- ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
- ಬೆಂಗಳೂರು: ಆರ್ಟ್ ಆಫ್ ಲಿವಿಂಗ್ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
- ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
- ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
- ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಹಲಗೂರು: ನಿವೃತ್ತಿ ಆದವರಿಗೆ ಸನ್ಮಾನ ಕಾರ್ಯಕ್ರಮ ಸ್ವಾಮಿ ವಿದ್ಯಾಸಂಸ್ಥೆ ಜೆಪಿಎಂ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಕಾಲೇಜು, ಹಲಗೂರು ಕಾಲೇಜು ಆವರಣದಲ್ಲಿ ನಡೆಯಿತು. ಮಳವಳ್ಳಿ ಕ್ಷೇತ್ರ ದ ಶಾಸಕರಾದ ಡಾ.ಕೆ.ಅನ್ನದಾನಿ ಮಾತನಾಡಿ, ಹೈಸ್ಕೂಲ್ ವಿದ್ಯಾಭ್ಯಾಸ ಮುಗಿಸಿ ಕಾಲೇಜಿನಲ್ಲಿ ಹಂತದಲ್ಲಿ ವಿದ್ಯಾಭ್ಯಾಸ ಕಲಿಯುತ್ತಿದ್ದೀರಿ. ಒಳ್ಳೆಯ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಉದ್ಯೋಗಕ್ಕೆ ಹೋಗಬೇಕು . ನಮ್ಮ ಪ್ರಜಾಪ್ರಭುತ್ವದಲ್ಲಿ ಉತ್ತಮ ಪ್ರಜೆಯನ್ನು ಆಯ್ಕೆ ಮಾಡುವ ಹಕ್ಕು ನಿಮ್ಮದಾಗಿದೆ. ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ ಹಾಕುವ ಪಟ್ಟಿಯಲ್ಲಿ ಸೇರಬೇಕು, ನೀವು ಹಾಕುವ ಮತ ಮೊದಲನೆಯದು ನಮಗೆ ಮತ ಹಾಕಬೇಕು. ನಿಮ್ಮ ಸೇವೆ ಮಾಡಲು ನನಗೆ ಮತ ಹಾಕಿ ಬೆಂಬಲಿಸಬೇಕು ಎಂದರು. ನಂತರ ಶಾಲೆಯ ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಹಾಡನ್ನು ಹಾಡಿ ರಂಜಿಸಿದರು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ನೀವು ಅಬ್ದುಲ್ ಕಲಾಂ ಹೆಸರು ಕೇಳಿದ್ದೀರಿ, ಅವರು ಒಂದು ಬಡ ಕುಟುಂಬದಲ್ಲಿ ಹುಟ್ಟಿ ಹಾರುವ ಹಕ್ಕಿಯಾಗಿ ಆಗಬೇಕು ಎಂದು ಕನಸು ಕಂಡವರು. ಹಾಗೆಯೇ…
ಪಾಂಡವಪುರ: ಪುರಾತತ್ವ ಪರಂಪರೆಯ ಸಂಗ್ರಹಾಲಯ ಇಲಾಖೆ ವತಿಯಿಂದ 2 ಕೋಟಿ 60 ಲಕ್ಷದ ವೆಚ್ಚದಲ್ಲಿ ಮೇಲುಕೋಟೆ ಶ್ರೀ ಚೆಲುವ ನಾರಾಯಣ ಸ್ವಾಮಿಯ ದೇವಾಲಯದ ಅರಮನೆ ಮೈದಾನಕ್ಕೆ ಜೀರ್ಣೋದ್ಧಾರಕ್ಕಾಗಿ ಹಾಗೂ ಅಕ್ಕತಂಗಿ ಕೊಳಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಇಂದು ಭೂಮಿ ಪೂಜೆ ಕೈಕೊಂಡಿದ್ದೇನೆಂದು ಶಾಸಕ ಸಿ.ಎಸ್.ಪುಟ್ಟರಾಜು ಹೇಳಿದರು. ಮೇಲುಕೋಟೆಯಲ್ಲಿ ಭೂಮಿ ಪೂಜೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಇತಿಹಾಸ ಪ್ರಸಿದ್ಧ ಮೇಲುಕೋಟೆ ಶ್ರೀ ಚೆಲುವ ನಾರಾಯಣ ಸ್ವಾಮಿ ದೇವಾಲಯ ಭವ್ಯ ಗಾಜಿನ ಅರಮನೆಯನ್ನು ಯಥಾಸ್ಥಿತಿಯಂತೆ ಅಭಿವೃದ್ಧಿಗೊಳಿಸಿ ಸುತ್ತಲೂ ಉದ್ಯನವನ ನಿರ್ಮಾಣಕ್ಕೆ ಹಾಗೂ ಅಕ್ಕತಂಗಿ ಕೊಳ ಸೇರಿ ಐದು ಕೊಳಗಳ ಅಭಿವೃದ್ಧಿ 2 ಕೋಟಿ 60 ಲಕ್ಷ ಅನುದಾನ ಬಿಡುಗಡೆ ಗೊಳಿಸಲಾಗಿದೆ. ಜತೆಗೆ ಸಣ್ಣ ನೀರಾವರಿ ಇಲಾಖೆಯಿಂದ 32 ಕೋಟಿ ವೆಚ್ಚದಲ್ಲಿ ಮೇಲುಕೋಟೆ ಎಲ್ಲಾ ಕಲ್ಯಾಣಿಗಳ ಅಭಿವೃದ್ಧಿ ಮಾಡಲಾಗುವುದು ಎಂದರು. ಈ ವೇಳೆ ಇಲಾಖೆ ಸಿ.ಟಿ.ಮಹೇಶ್, ಸತೀಶ್, ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್, ಉಪಾಧ್ಯಕ್ಷ ತಿರುಮಲೆ, ಮಾಜಿ ಅಧ್ಯಕ್ಷ ಅವ್ವಗಂಗಾಧರ್, ದೇವಾಲಯದ ಇಒ ಮಹೇಶ್ ಸದಸ್ಯರಾದ…
ಭಾನುವಾರ ನಡೆದ 18ನೇ ಆವೃತ್ತಿಯ ಟಾಟಾ ಮುಂಬೈ ಮ್ಯಾರಥಾನ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ವಿವಿಧೆಡೆಯಿಂದ ಬಂದ ಜನರು ಅಲ್ಲಿ ಜಮಾಯಿಸಿದ್ದರು. ಮ್ಯಾರಥಾನ್ನಲ್ಲಿ ಮಕ್ಕಳು ಮತ್ತು ವಯಸ್ಕರು ಭಾಗವಹಿಸಿದ್ದರು. ಆದರೆ 80ರ ಹರೆಯದ ಅಜ್ಜಿಇಷ್ಟೊಂದು ಉತ್ಸಹದಿಂದ ಭಾಗವಹಿಸುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. 80ರ ಹರೆಯದ ಭಾರ್ತಿ ಅವರ ಮೊಮ್ಮಗಳು ಡಿಂಪಲ್ ಮೆಹ್ತಾ ಫೆರ್ನಾಂಡಿಸ್ ಈ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ವೀಡಿಯೊದಲ್ಲಿ, ಅವರು ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಸೀರೆ ಮತ್ತು ಸ್ನೀಕರ್ಸ್ನಲ್ಲಿ ಓಡುತ್ತಿರುವುದನ್ನು ಕಾಣಬಹುದು. 80 ವರ್ಷದ ಅವರು 51 ನಿಮಿಷಗಳಲ್ಲಿ 4.2 ಕಿಲೋಮೀಟರ್ ಓಡಿದರು.ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಹುಬೇಗನೆ ಗಮನ ಸೆಳೆದಿತ್ತು. ವಿಡಿಯೋದ ಕೆಳಗೆ ಹಲವರು ಅಜ್ಜಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವಯಸ್ಸನ್ನು ವಿರೋಧಿಸುವ ನೋಟ ಯಾವಾಗಲೂ ಹೆಚ್ಚು ಸ್ವಾಗತಾರ್ಹವಾಗಿದೆ ಎಂದು ಹೇಳಲಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉತ್ತರ ಪ್ರದೇಶ: ಎಂಟು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಬಿಜೆಪಿ ಶಾಸಕ ದುಡ್ಡಿ ರಾಮದುಲರ್ ಗೌರ್ ವಿರುದ್ಧ ವಾರೆಂಟ್ ಜಾರಿಯಾಗಿದೆ. ಅವರು ದಿನಗಟ್ಟಲೆ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಗುರುವಾರ ನಡೆದ ವಿಚಾರಣೆ ವೇಳೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ II ಅವರನ್ನು ಬಂಧಿಸುವಂತೆ ಆದೇಶಿಸಿದರು. ದುಡ್ಡಿ ಶಾಸಕ ರಾಮದುಲರ್ ಗೌರ್ ಅವರನ್ನು ಬಂಧಿಸಿ ಜನವರಿ 23 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲು ಸೋನಭದ್ರ ಎಸ್ಪಿ ಆದೇಶಿಸಿದ್ದಾರೆ. ಸಹಾಯಕ ಜಿಲ್ಲಾ ಸರ್ಕಾರಿ ವಕೀಲ ಸತ್ಯಪ್ರಕಾಶ್ ತ್ರಿಪಾಠಿ ಮಾತನಾಡಿ, ನವೆಂಬರ್ 4, 2014 ರಂದು, ಮೇಯರ್ಪುರ ಪ್ರದೇಶದ ವ್ಯಕ್ತಿಯೊಬ್ಬರು ಅಂದಿನ ಗ್ರಾಮದ ಮುಖ್ಯಸ್ಥನ ಪತಿ ರಾಮದುಲರ್ ತನ್ನ ಸಹೋದರಿಯನ್ನು ಹಲವಾರು ಬಾರಿ ಬೆದರಿಕೆ ಮತ್ತು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ತ್ರಿಪಾಠಿ ಅವರು ರಾಮ್ದುಲರ್ ಅವರಿಗೆ ನ್ಯಾಯಾಲಯವು ಹಲವು ಬಾರಿ ಸಮನ್ಸ್ ಕಳುಹಿಸಿದ್ದರೂ ಅವರು ಆರೋಗ್ಯದ ಕಾರಣದಿಂದ ಹಾಜರಾಗಲಿಲ್ಲ ಎಂದು ಹೇಳಿದರು. ವಿಸ್ತೃತ ತನಿಖೆ ಬಳಿಕ…
ಬ್ರಿಟಿಷ್ ರಾಜಕುಮಾರಿ ಡಯಾನಾ ಅವರ ಪ್ರಸಿದ್ಧ ನೇರಳೆ ಗೌನ್ ಹರಾಜು ಮಾಡಲು ನಿರ್ಧರಿಸಲಾಗಿದೆ. ಡಯಾನಾ ಸತ್ತು 25 ವರ್ಷಗಳಾದರೂ ಇಂದಿಗೂ ಜನರ ಮನಸ್ಸಿನಲ್ಲಿ ಉಳಿದಿದ್ದಾರೆ. ಫ್ಯಾಷನ್ ಲೋಕ ಸೇರಿದಂತೆ ಡಯಾನಾ ಇನ್ನೂ ಚರ್ಚೆಯ ಬಿಸಿ ವಿಷಯವಾಗಿದೆ. ಇದೀಗ ಡಯಾನಾ ಮತ್ತೆ ಸುದ್ದಿಯಲ್ಲಿದ್ದಾರೆ. ಕೊನೆಯ ಫೋಟೋಶೂಟ್ ನಲ್ಲಿ ಧರಿಸಿದ್ದ ಗೌನ್ ಡಯಾನಾ ಅವರನ್ನು ಮತ್ತೆ ಟಾಕ್ ಆಫ್ ಟೌನ್ ಮಾಡುತ್ತಿದೆ. ಕೊನೆಯ ಫೋಟೋ ಶೂಟ್ನಲ್ಲಿ ಡಯಾನಾ ಡೀಪ್ ಪರ್ಪಲ್ ಸಿಲ್ಕ್ ವೆಲ್ವೆಟ್ ಡ್ರೆಸ್ ಧರಿಸಿದ್ದರು.ಫ್ಯಾಷನ್ ಲೋಕದ ಲೇಟೆಸ್ಟ್ ಸುದ್ದಿ ಏನೆಂದರೆ ಈ ಗೌನ್ ಹರಾಜಾಗಿದೆ. ಈ ಬಾಲ್ ಗೌನ್ ಅನ್ನು ಬ್ರಿಟಿಷ್ ಡಿಸೈನರ್ ವಿಕ್ಟರ್ ಎಡೆಲ್ಸ್ಟೈನ್ ವಿನ್ಯಾಸಗೊಳಿಸಿದ್ದಾರೆ. ವಿಕ್ಟರ್ಸ್ ಫಾಲ್ 1989 ರ ಸಂಗ್ರಹದ ಭಾಗವಾಗಿರುವ ಈ ಗೌನ್ ಧರಿಸಿ ಡಯಾನಾ 1991 ರ ಭಾವಚಿತ್ರಕ್ಕೆ ಪೋಸ್ ನೀಡಿದರು. 1997 ರ ವ್ಯಾನಿಟಿ ಫೇರ್ ಫೋಟೋ ಶೂಟ್ನಲ್ಲಿ ಡಯಾನಾ ಈ ಉಡುಪಿನಲ್ಲಿ ಬೆರಗುಗೊಳಿಸಿದರು. ಸಾಯುವ ಮುನ್ನ ಡಯಾನಾ ಅವರ ಕೊನೆಯ ಫೋಟೋ ಶೂಟ್…
ಅಧಿಕ ತೂಕವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡುವ ಸಮಸ್ಯೆಯಾಗಿದೆ. ಅಧಿಕ ತೂಕವು ವಿವಿಧ ಆರೋಗ್ಯ ಸಮಸ್ಯೆಗಳನ್ನು ಮಾತ್ರವಲ್ಲದೆ ಖಿನ್ನತೆಯನ್ನು ಉಂಟುಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರು ಸರಿಯಾದ ವ್ಯಾಯಾಮ ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸಬೇಕು. ತೂಕ ಇಳಿಸಿಕೊಳ್ಳಲು ಬಯಸುವವರು ತಮ್ಮ ಆಹಾರದಲ್ಲಿ ಕಡಿಮೆ ಕ್ಯಾಲೋರಿ ರಸವನ್ನು ಸೇರಿಸಿಕೊಳ್ಳಬೇಕು. ಕೆಲವು ಕಡಿಮೆ ಕ್ಯಾಲೋರಿ ಜ್ಯೂಸ್ಗಳನ್ನು ತಿಳಿದುಕೊಳ್ಳೋಣ. ನೆಲ್ಲಿಕಾಯಿ ರಸದಲ್ಲಿ ಕಡಿಮೆ ಕ್ಯಾಲೋರಿ ಇದೆ. ಆದ್ದರಿಂದ ತೂಕ ಇಳಿಸಿಕೊಳ್ಳಲು ಬಯಸುವವರು ನೆಲ್ಲಿಕಾಯಿ ರಸವನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿರುವ ನೆಲ್ಲಿಕಾಯಿಯು ಉತ್ಕರ್ಷಣ ನಿರೋಧಕಗಳಲ್ಲಿಯೂ ಸಮೃದ್ಧವಾಗಿದೆ. ಅದೇ ರೀತಿ ತೂಕ ಇಳಿಸಿಕೊಳ್ಳಲು ಬಯಸುವವರು ಆಹಾರದಲ್ಲಿ ಸೌತೆಕಾಯಿ ಅಥವಾ ಸೌತೆಕಾಯಿ ರಸವನ್ನು ಸೇರಿಸಬಹುದು. ಸೌತೆಕಾಯಿಯಲ್ಲಿ ನೀರಿನಂಶ ಹೇರಳವಾಗಿರುವುದರಿಂದ ಕ್ಯಾಲೋರಿಗಳು ತುಂಬಾ ಕಡಿಮೆ. ಕಲ್ಲಂಗಡಿ ಜ್ಯೂಸ್ನಲ್ಲಿ ಕ್ಯಾಲೊರಿ ಕೂಡ ಕಡಿಮೆಯಿದ್ದು, ತೂಕ ಇಳಿಸಿಕೊಳ್ಳಲು ಬಯಸುವವರು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಕಲ್ಲಂಗಡಿ ಹಣ್ಣಿನ ರಸದಲ್ಲಿ ನೀರಿನ ಅಂಶವೂ ಸಮೃದ್ಧವಾಗಿದೆ. ಆದ್ದರಿಂದ, ಒಂದು ಲೋಟ ಕಲ್ಲಂಗಡಿ ರಸವನ್ನು ಕುಡಿಯುವುದರಿಂದ ನಿಮ್ಮ ಹೊಟ್ಟೆಯು…
ಗುಜರಾತ್: ಕೋಟ್ಯಂತರ ರೂಪಾಯಿ ಮೌಲ್ಯದ ಸಂಪತ್ತನ್ನು ತ್ಯಜಿಸಿ ತಪಸ್ಸಿನ ಜೀವನ ನಡೆಸುವವರ ಕಥೆಗಳನ್ನು ನಾವು ಆಗಾಗ್ಗೆ ಕೇಳುತ್ತೇವೆ. ಇದೀಗ 9 ವರ್ಷದ ಬಾಲಕಿಯೊಬ್ಬಳು ತನ್ನ ಆಸ್ತಿಯನ್ನು ಬಿಟ್ಟು ಸನ್ಯಾಸಿಯಾಗಲು ಸಿದ್ಧತೆ ನಡೆಸಿದ್ದಾಳೆ ಎಂದು ವರದಿಯಾಗಿದೆ. ಗುಜರಾತ್ನ ಸೂರತ್ನ ವೆಸು ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವಜ್ರದ ವ್ಯಾಪಾರಿ ಧನೇಶ್ ಮತ್ತು ಅಮಿ ಸಾಂಘ್ವಿ ಅವರ ಇಬ್ಬರು ಪುತ್ರಿಯರಲ್ಲಿ ದೇವಾಂಶಿ ಹಿರಿಯರು. ತಂಗಿಗೆ ನಾಲ್ಕು ವರ್ಷ. ದೇವಾಂಶಿ ಮತ್ತು ಆಕೆಯ ಸಹೋದರಿಯ ತಂದೆ ಧನೇಶ್ ಅವರು ಸೂರತ್ನಲ್ಲಿ ಮೂರು ದಶಕಗಳಷ್ಟು ಹಳೆಯದಾದ ವಜ್ರ ಪಾಲಿಶ್ ಮತ್ತು ರಫ್ತು ಮಾಡುವ ಸಾಂಘ್ವಿ ಮತ್ತು ಸನ್ಸ್ ಅನ್ನು ಹೊಂದಿದ್ದಾರೆ. ದೇವಾಂಶಿ ಅವರು ಜೈನ ಸನ್ಯಾಸಿ ಆಚಾರ್ಯ ವಿಜಯ್ ಕೀರ್ತಿಶೂರಿ ಅವರ ಸಮ್ಮುಖದಲ್ಲಿ ಸನ್ಯಾಸಿನಿ ಜೀವನವನ್ನು ಕೈಗೊಂಡರು. ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ನೂರಾರು ಜನರು ಆಗಮಿಸಿದ್ದರು. ದೇವಾಂಶಿ ಚಿಕ್ಕ ವಯಸ್ಸಿನಿಂದಲೇ ಆಧ್ಯಾತ್ಮಿಕ ಜೀವನದತ್ತ ಒಲವು ತೋರಿದ ಮಗು ಎಂದು ಸಂಬಂಧಿಕರು ತಿಳಿಸಿದ್ದಾರೆ. ದೇವಾಂಶಿ ಅವರು ಆಧ್ಯಾತ್ಮಿಕ ಜೀವನವನ್ನು…
ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದ್ವೇಷವನ್ನು ಹರಡುವುದು ರಾಷ್ಟ್ರದ ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ. ಕಾಶ್ಮೀರಿ ಪಂಡಿತರ ಗಾಯಗಳನ್ನು ಗುಣಪಡಿಸಲು ದ್ವೇಷದ ಬದಲು ಪ್ರೀತಿಯನ್ನು ನೀಡಬೇಕು ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಸಕ್ರಿಯವಾಗಿದ್ದು, ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಿದರೆ ಮಾತ್ರ ಅದನ್ನು ತಡೆಯಲು ಸಾಧ್ಯ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ದೇಶದಲ್ಲಿ ಭಯೋತ್ಪಾದನೆ ಸಕ್ರಿಯವಾಗಿದೆ. ಪಾಕಿಸ್ತಾನ ಮಾತುಕತೆಗೆ ಸಿದ್ಧವಾಗುವವರೆಗೆ ಇದು ನಿಲ್ಲುವುದಿಲ್ಲ. 16 ಬಾರಿ ನಮ್ಮ ಗಡಿ ದಾಟಿದ ಚೀನಾದೊಂದಿಗೆ ಮಾತನಾಡಬಹುದಾದ ನೀವು ಪಾಕಿಸ್ತಾನದೊಂದಿಗಿನ ಮಾತುಕತೆಯಿಂದ ಏಕೆ ಹಿಂದೆ ಸರಿಯುತ್ತಿದ್ದೀರಿ?ಭಯೋತ್ಪಾದನೆಯನ್ನು ಕೊನೆಗೊಳಿಸಲು ಪ್ರಯತ್ನಗಳು ಮುಂದುವರಿಯಬೇಕು ಎಂದು ಹೇಳಿದ್ದಾರೆ. ಆದರೆ ಬಿಜೆಪಿ ಸರಕಾರ ಹಿಂದೇಟು ಹಾಕುತ್ತಿದೆ. ಬಿಜೆಪಿ ವೋಟ್ ಬ್ಯಾಂಕ್ ಗುರಿಯಾಗಿಟ್ಟುಕೊಂಡು ದ್ವೇಷ ಹರಡುತ್ತಿದೆ. ಪಾಕಿಸ್ತಾನದಲ್ಲಿ ವಾಸಿಸುವ ಹಿಂದೂಗಳು ಮತ್ತು ಭಾರತದಲ್ಲಿ ಮುಸ್ಲಿಮರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದೆ ದ್ವೇಷವನ್ನು ಹರಡಲಾಗುತ್ತದೆ. ಜನರ ಹೃದಯದಿಂದ ದ್ವೇಷವನ್ನು ತೊಡೆದುಹಾಕದಿದ್ದರೆ, ಭಾರತದ ಅಖಂಡತೆಗೆ ಧಕ್ಕೆ ಬರುತ್ತದೆ ಎಂದು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದ ಸಾಮೂಹಿಕ ಆತ್ಮಹತ್ಯೆ ಪ್ರಕರಣವು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. 18ರಿಂದ 24 ವರ್ಷದೊಳಗಿನ ಮೂವರು ಸಹೋದರಿಯರು ನೇಣಿಗೆ ಕೊರಳೊಡ್ಡಿದ್ದು, ಮೂರು ಅಮಾಯಕ ಜೀವ ಬಲಿಗೆ ಇಡೀ ಗ್ರಾಮಸ್ಥರು ಕಣ್ಣೀರಾಗಿದ್ದಾರೆ. ತಂದೆ, ತಾಯಿ, ಅಜ್ಜಿಯನ್ನು ಕಳೆದುಕೊಂಡು ಅನಾಥರಾಗಿದ್ದ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವುದು ಸಾರ್ವಜನಿಕರ ಹೃದಯ ಕರಗಿಸಿದೆ. ರಂಜಿತಾ(24), ಬಿಂದು(21) ಚಂದನಾ(18) ಮೃತಪಟ್ಟ ಸಹೋದರಿಯರಾಗಿದ್ದಾರೆ. ಸುಮಾರು 9 ದಿನಗಳ ಹಿಂದೆಯೇ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆನ್ನಲಾಗಿದೆ. ಜನವರಿ 19ರಂದು ಈ ದುರ್ಘಟನೆ ಬೆಳಕಿಗೆ ಬಂದಿದೆ. ಈ ಮೂವರು ಸಹೋದರಿಯರ ಪೈಕಿ ಇಬ್ಬರು ಕಿಬ್ಬನಹಳ್ಳಿಯ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಅವರು ಏಕಾಏಕಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಎಎಸ್ ಪಿ ಸಿದ್ಧಾರ್ಥ್ ಗೋಯಲ್, ಸಿಪಿಐ ನಿರ್ಮಲಾ, ಪಿಎಸ್ ಐ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
ಮೈಸೂರು: ಗಾಂಜಾ ಸೇವನೆ ಆರೋಪ ಪೊಲೀಸ್ ವಿಚಾರಣೆಗೆ ಹೆದರಿ ಫೋಟೊಗ್ರಾಫರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಭಿಷೇಕ ನೇಣಿಗೆ ಶರಣಾದ ಯುವಕ. ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ನೇಹಿತನೊಬ್ಬನಿಂದ ಬರಬೇಕಿದ್ದ ಸಾಲದ ಹಣ ಪಡೆಯಲು ತೆರಳಿದ್ದೆ. ಕೆಲವರು ಗಾಂಜಾ ಸೇವನೆ ಮಾಡಿದ್ದರು. ಆ ಸಮಯದಲ್ಲಿ ಆ ಸ್ಥಳಕ್ಕೆ ಪೊಲೀಸರು ಬಂದರು. ನನ್ನನ್ನು ಅವರೊಂದಿಗೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ನೀನು ಗಾಂಜಾ ವ್ಯಸನಿಯೇ ಎಂದು ಕೀಳಾಗಿ ನೋಡಿ ಹಿಯಾಳಿಸಿದರು ಎಂದು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ. ನನ್ನಿಂದ ಈ ರೀತಿ ಜೀವಿಸಲು ಸಾಧ್ಯವಿಲ್ಲ. ಈ ತರಹದ ದೂರುಗಳು ಸಹಿಸಲು ಅಸಾಧ್ಯ. ನನ್ನನ್ನು ದಯವಿಟ್ಟು ಕ್ಷಮಿಸಿ, ಏನೇ ಕಷ್ಟ ಬಂದರು ಇದುವರೆಗೂ ಹೇಡಿತನ ಮಾಡದೆ ಇದ್ದಿದಕ್ಕೆ ನನಗೆ ಸಿಕ್ಕ ಪ್ರತಿಫಲ. ಕೊಲೆಯಾದ ಸ್ಥಳದಲ್ಲಿ ಇದ್ದ ಮಾತ್ರಕ್ಕೆ ಯಾರು ಕೊಲೆಗಾರ ಆಗುವುದಿಲ್ಲ. ಇನ್ನೊಂದು ಜನ್ಮ ಇದ್ದರೆ ನಿಮ್ಮ ಹೊಟ್ಟೆಯಲ್ಲಿ ಹುಟ್ಟಿ ನಿಮ್ಮನ್ನು ಚೆನ್ನಾಗಿ…