Author: admin

ಮೈಸೂರು: ಒಡನಾಡಿ ಸಂಸ್ಥೆ ಮುಖ್ಯಸ್ಥರು ಹಾಗೂ ಸ್ಯಾಂಟ್ರೋ ರವಿ ಪತ್ನಿ ಜೊತೆ ನಟ ಚೇತನ್ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ನಟ ಚೇತನ್, ಒಡನಾಡಿ ಸಂಸ್ಥೆ 32 ವರ್ಷಗಳಿಂದ ಅನ್ಯಾಯದ ವಿರುದ್ಧ ಕೆಲಸ ಮಾಡಿಕೊಂಡು ಬಂದಿದೆ. ಬಲಹೀನರ ಪರ ನಿಂತು ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಮುರುಘಾ ಮಠ ಹಾಗೂ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾನು ಕುಟುಂಬ ಸಮೇತ ಅವರನ್ನು ನೋಡಲು ಬಂದಿದ್ದೇನೆ. ಇದು ಕೇವಲ ಸೇವೆಯಲ್ಲ, ರಚನಾತ್ಮಕ ಹೋರಾಟ ಆಗಿದೆ. ನಾನು ಎಂದೆಂದಿಗೂ ಅವರ ಜೊತೆ ಇರುತ್ತೇನೆ. 2018ರಲ್ಲಿ ಮೀಟೂ ಹೋರಾಟ ಆದಾಗ ಮಹಿಳೆಗೆ ಘನತೆ ತರಬೇಕು ಅಂತ ಹೋರಾಡಿದ್ದೇವೆ. ಮಹಿಳೆಗೆ ಅನ್ಯಾಯ ಆದಾಗ ಆಕೆಯನ್ನ ಅವಮಾನ‌ ಮಾಡಿ ನಿಂದಿಸೋರು ಇದ್ದಾರೆ. ಮುರುಘಾ ಪ್ರಕರಣದಲ್ಲೂ ಹೆಣ್ಣು ಮಕ್ಕಳ ಜೊತೆ ನಿಂತು ನ್ಯಾಯ ಒದಗಿಸುವ ಕೆಲಸವನ್ನ ಒಡನಾಡಿ ಸಂಸ್ಥೆ ಮಾಡಿದೆ. ಇಂತಹ ಸಂಸ್ಥೆಗಳು ರಾಜ್ಯದಲ್ಲಿ ಹೆಚ್ಚು ಹೆಚ್ಚು ಬೆಳೆಯಬೇಕು ಎಂದರು. ಪಠಾಣ್ ಸಿನಿಮಾದಲ್ಲಿ ಕೇಸರಿ…

Read More

ಹಾವೇರಿ :ಈ ಸರ್ಕಾರದಲ್ಲಿ ಏನೇ ಕೆಲಸವಾಗಬೇಕಾದರೂ ಲಂಚ ಕೊಡಬೇಕು. ಹೀಗಾಗಿ ಜನರೇ ಬಿಜೆಪಿಗೆ ಬೆಂಬಲ ಕೊಡುವ ಮುನ್ನ ಯೋಚಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬೊಮ್ಮಾಯಿ ಅವರೇ ನಿಮ್ಮ ಸರ್ಕಾರ ಎರಡು ತಿಂಗಳು ಮಾತ್ರ ಇರೋದು. ಎರಡು ತಿಂಗಳ ಬಳಿಕ ಈ ವೇದಿಕೆ ಮೇಲೆ ಕುಳಿತವರ ಸರ್ಕಾರವಿರುತ್ತೆ ಎಂದರು. 40 ಪರ್ಸೆಂಟ್ ಕಮಿಷನ್ ಕೊಡಲು ಬಿಜೆಪಿಗೆ ಬೆಂಬಲ ಕೊಡಬೇಕಾ..? ರಾಜ್ಯದಲ್ಲಿ ನಿರುದ್ಯೋಗ ಸೃಷ್ಠಿ ಮಾಡಿದ ಬಿಜೆಪಿಗೆ ಬೆಂಬಲ ಕೊಡಬೇಕಾ..?ಬಿಜೆಪಿಗೆ ಬೆಂಬಲ ಕೊಡುವ ಮುನ್ನ ಜನರು ಯೋಚಿಸಿ. ಏನೇ ಕೆಲಸ ಆಗಬೇಕಾದರೂ ಲಂಚ ಕೊಡಬೇಕು ಎಂದು ಕಿಡಿಕಾರಿದರು.ಕಲಬುರ್ಗಿಯಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ನೀಡಿದ್ದಾರೆ. ತಾಂಡಾಗಳನ್ನ ಕಂದಾಯ ಗ್ರಾಮ ಮಾಡಿದ್ದು ನಮ್ಮ ಸರ್ಕಾರ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಹಾವೇರಿ ಜಿಲ್ಲೆ ಶಾಸಕರು ಕಾಂಗ್ರೆಸ್ ಬರುವುದಕ್ಕೆ ಸಿದ್ದರಾಗಿದ್ದಾರೆ. ಸಮಯ ಬರಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಡಿ.ಕೆ…

Read More

ಬೆಳಗಾವಿ : ಪ್ರಸ್ತುತ ದಿನಗಳಲ್ಲಿ ಜಗತ್ತಿನಾದ್ಯಂತ ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಸೇವೆ ಮತ್ತು ಉತ್ಪಾದನಾ ವಲಯದಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ. ಉದ್ಯೋಗಾಕಾಂಕ್ಷಿಗಳು ಕಾಲಕ್ಕೆ ತಕ್ಕಂತೆ ಕೌಶಲ್ಯವನ್ನು ಬೆಳೆಸಿಕೊಂಡು ತಾವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕರೆ ನೀಡಿದರು. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಮರಾಠಾ ಮಂಡಲದ ಕಲಾ, ವಿಜ್ಞಾನ ಹಾಗೂ ಗೃಹವಿಜ್ಞಾನ ಮಹಾವಿದ್ಯಾಲಯದಲ್ಲಿ ಸರ್ವರಿಗೂ ಉದ್ಯೋಗ ಅಭಿಯಾನದಡಿಯಲ್ಲಿ ಗುರುವಾರ (ಜ.19) ನಡೆದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ತಮ್ಮದೇ ಉದಾಹರಣೆ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ವಿಜಯಪುರ ಜಿಲ್ಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತರೂ ನಿರಂತರ ಪ್ರಯತ್ನದ ಫಲವಾಗಿ ನಾಗರಿಕ ಸೇವೆಯಂತಹ ಉನ್ನತ ಹುದ್ದೆ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು. ಸರಕಾರಿ ಹಾಗೂ ಖಾಸಗಿ ಕಂಪನಿಯಲ್ಲಿ ಅನೇಕ ಕೆಲಸಗಳು ದೊರೆತವು. ವಿದೇಶಗಳಿಗೆ…

Read More

ಬೆಳಗಾವಿ : ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ಚುನಾವಣೆಯನ್ನು ನಿಗದಿಪಡಿಸಲಾಗಿದ್ದು, ಫೆಬ್ರುವರಿ 6, 2023 ರಂದು ಮಧ್ಯಾಹ್ನ್ಹ 3 ಗಂಟೆಗೆ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಗೃಹದಲ್ಲಿ ಚುನಾವಣೆ ನಡೆಯಲಿದೆ. ಮಹಾಪೌರರ ಸ್ಥಾನವು ಸಾಮಾನ್ಯ ಮಹಿಳೆಯರಿಗೆ ಹಾಗೂ ಉಪಮಹಾಪೌರ ಸ್ಥಾನವು ಹಿಂದುಳಿದ ವರ್ಗದ ಮಹಿಳೆಯರಿಗೆ ಮೀಸಲಾಗಿದೆ. ಚುಣಾವಣೆ ವೇಳಾಪಟ್ಟಿ: ಫೆಬ್ರುವರಿ 6, 2023 ರಂದು ಮುಂಜಾನೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಹಾಪೌರ, ಉಪಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭವಾಗುವುದು. ಮಧ್ಯಾಹ್ನ 3 ಗಂಟೆಯ ನಂತರ ಮಹಾಪೌರ, ಉಪಮಹಾಪೌರ ಸ್ಥಾನಕ್ಕೆ ಚುನಾವಣೆ ಪ್ರಾರಂಭವಾಗಲಿದ್ದು, ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸುವುದು, ಹಾಗೂ ಮತಗಳಎಣಿಕೆ ಮತ್ತು ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು…

Read More

ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ಎಮರ್ಜೆನ್ಸಿ ಡೋರ್ ಓಪನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪ್ರತಿಕ್ರಿಯಿಸಿದರು. ತೇಜಸ್ವಿ ಸೂರ್ಯ ಡೋರ್ ಓಪನ್ ಮಾಡಿಲ್ಲ, ಅದನ್ನ ರೊಟೇಟ್ ಮಾಡಿ ಓಪನ್ ಮಾಡ್ಬೇಕು, ಸಂಸದ, ಬುದ್ಧಿವಂತ, ಜವಾಬ್ದಾರಿ ಸ್ಥಾನದಲ್ಲಿದ್ದಾರೆ ಅವರು ಡೋರ್ ಓಫನ್ ಮಾಡಿಲ್ಲ ಎಂದು ಸಮರ್ಥಿಸಿದರು. ಅವರು ಕೂತಿದ್ದು ಎಮರ್ಜೆನ್ಸ್ ಎಕ್ಸಿಟ್ ಸೀಟಿನಲ್ಲಿ, ಎಟಿಆರ್ ಫ್ಲೈಟ್ ಸೀಟಲ್ಲಿ ಹ್ಯಾಂಡ್ ರೆಸ್ಟ್ ಇರಲ್ಲ. ಅಲ್ಲಿ ಎಕ್ಸಿಟ್ ಡೋರ್‍ ನಲ್ಲಿ ಬ್ಲಿಡಿಂಗ್ ಸ್ವಲ್ಪ ಓಪನ್ ಇತ್ತು, ಅದನ್ನ ಏರ್ ಹಾಸ್ಟೆಸ್ ಗಮನ ತಂದ್ರು,  ಪೈಲೆಟ್ ಬಂದು ಡಿಬೋರ್ಡಿಂಗ್ ಮಾಡಿ, ಸರಿಯಾಗಿ ಫಿಟ್ ಮಾಡಿದ್ರು, ಅಲ್ಲಿ ತೇಜಸ್ವಿ ಇನ್ಸಟೆಂಟ್ ರಿಪೋರ್ಟ್ ಕೊಟ್ರು ಎಂದರು. ತೇಜಸ್ವಿ ಸೂರ್ಯ ಡೋರ್‍ ನ ಪುಲ್ ಮಾಡಿಲ್ಲ, ತೇಜಸ್ವಿ ಸೂರ್ಯ ಇತರೇ ಪ್ಯಾಸೆಂಜರ್‍ಗೆ ಕ್ಷಮೆ ಕೋರಿದ್ದಾರೆ  ಇಂಡಿಗೋ ಅವರೇ ಕ್ಲಾರಿಫಿಕೇಶನ್ ಮಾಡಿ, ಇನ್ಸಟೆಂಟ್ ರಿಪೋರ್ಟ್ ಬಿಡುಗಡೆ ಮಾಡಿದ್ದಾರೆ ಎಂದು ಅಣ್ಣಾಮಲೈ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಗುಜರಾತ್:      ಪ್ರೀತಿಯ ಸಂಕೇತವಾಗಿ ಪ್ರತಿಮೆಗಳು ಮದುವೆಗೆ ಸಾಕ್ಷಿಯಾಗಿದೆ. ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಆರೋಪಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಣದ 6 ತಿಂಗಳ ನಂತರ, ಕುಟುಂಬವು ವಿಗ್ರಹಗಳನ್ನು ನಿರ್ಮಿಸಿ ಅಲಂಕಾರ ಮಾಡಿ ವಿವಾಹ ಮಾಡಿದ್ದಾರೆ. ಗುಜರಾತ್ನ ತಾಪಿಯಲ್ಲಿ ಈ ಘಟನೆ ನಡೆದಿದೆ.ಆರೋಪಿಗಳು ಕಳೆದ ಆಗಸ್ಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮನೆಯವರು ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಗಣೇಶ್ ಮತ್ತು ರಂಜನಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ನಂತರ, ಕುಟುಂಬವು ದಾದಿಗಳನ್ನು ಮದುವೆಯಾಗಲು ಅವಕಾಶ ನೀಡದಿದ್ದಕ್ಕಾಗಿ ಪಶ್ಚಾತ್ತಾಪಪಟ್ಟಿತು ಮತ್ತು ಅವರಿಬ್ಬರ ಪ್ರತಿಮೆಗಳನ್ನು ನಿರ್ಮಿಸಿತು. ಈ ವಿಗ್ರಹಗಳನ್ನು ಸಕಲ ವಿಧಿವಿಧಾನಗಳೊಂದಿಗೆ ಮದುವೆ ಮಾಡಲಾಯಿತು.ಹುಡುಗ ತನ್ನ ಕುಟುಂಬದೊಂದಿಗೆ ದೂರದ ಸಂಬಂಧ ಹೊಂದಿದ್ದರಿಂದ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹುಡುಗಿಯ ಅಜ್ಜ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವ್ರೆಸ್ಲಿಂಗ್ ಫೆಡರೇಶನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರ್ಮಾ ವಿರುದ್ಧ ವಿನೇಶ್ ಫೋಗಟ್ ಸೇರಿದಂತೆ ಸೂಪರ್ ಸ್ಟಾರ್‌ಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಶಿಬಿರದ ವೇಳೆ ಕೋಚ್ ಮತ್ತು ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಶರ್ಮಾ ಸೇರಿದಂತೆ ಆಟಗಾರರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರು ಎಂದು ಫೋಗಟ್ ಬಹಿರಂಗಪಡಿಸಿದ್ದಾರೆ. ಕೆಲವು ತರಬೇತುದಾರರು ವರ್ಷಗಳಿಂದ ಆಟಗಾರರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ. ಫೆಡರೇಶನ್ ಅಧಿಕಾರಿಗಳಿಂದ ತನಗೆ ಕೊಲೆ ಬೆದರಿಕೆ ಇದೆ ಎಂದು ವಿನೇಶ್ ಫೋಗಟ್ ಆರೋಪಿಸಿದ್ದಾರೆ.ಬ್ರಿಜ್ ಭೂಷಣ್ ಶರ್ಮಾ ತಾರೆಯರ ಆರೋಪಗಳನ್ನು ನಿರಾಕರಿಸಿದರು. ಕುಸ್ತಿ ಒಕ್ಕೂಟದ ಕಾರ್ಯವೈಖರಿ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಆಟಗಾರರು ಶರ್ಮಾ ಮತ್ತು ತರಬೇತುದಾರರ ವಿರುದ್ಧ ಲೈಂಗಿಕ ಆರೋಪಗಳನ್ನು ಮಾಡಿದರು. ಪುರುಷ ಹಾಗೂ ಮಹಿಳಾ ಆಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರಲ್ಲದೆ, ಬಜರಂಗ್ ಪುನಿಯಾ, ಸಂಗೀತಾ ಫೋಗಟ್, ಸೋನಮ್ ಮಲಿಕ್ ಮತ್ತು ಅಂಶು ಸೇರಿದಂತೆ…

Read More

ಉತ್ತರ ಪ್ರದೇಶ:ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಉತ್ತರ ಪ್ರದೇಶದ ಭದೋಹಿ ಎಂಬಲ್ಲಿ ಈ ಘಟನೆ ನಡೆದಿದೆ. ಅನುರಾಧಾ ಬಿಂದ್ ಎಂಬ ಬಾಲಕಿ ಕೊಲೆಯಾದಳು. 22 ವರ್ಷದ ಅರವಿಂದ್ ವಿಶ್ವಕರ್ಮ ತನ್ನ ಸಹೋದರಿ ನಿಶಾ ಜೊತೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಿಂದ ಹಿಂತಿರುಗುತ್ತಿದ್ದ ಅನುರಾಧಾಳ ತಲೆಗೆ ಗುಂಡು ಹಾರಿಸಿದ್ದಾನೆ. ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ.ಪೊಲೀಸ್ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಶೀಘ್ರದಲ್ಲಿ ಅಪರಾಧಿಯನ್ನು ಹಿಡಿಯುತ್ತೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಾಯಗಢ : ಗೋವಾ- ಮುಂಬೈ ಹೆದ್ದಾರಿಯಲ್ಲಿ ವ್ಯಾನ್ ಮತ್ತು ಟ್ರಕ್ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮಗು ಸೇರಿ 9 ಜನರು ಮೃತಪಟ್ಟ ದಾರುಣ ಘಟನೆ ರಾಯಗಡ ಜಿಲ್ಲೆ ರೆಪೊಲಿ ಎಂಬಲ್ಲಿ ನಡೆದಿದೆ. ಘಟನಾ ಸ್ಥಳವಾದ ರೆಪೊಲಿ ಗ್ರಾಮ ಮುಂಬೈಯಿಂದ ಸುಮಾರು 130 ಕಿಲೋ ಮೀಟರ್ ದೂರದಲ್ಲಿದೆ. ಮೃತಪಟ್ಟವರನ್ನು ರತ್ನಗಿರಿ ಜಿಲ್ಲೆಯ ನಿವಾಸಿಗಳೆಂದು ಗುರುತಿಸಲಾಗಿದೆ. ಗಾಯಗೊಂಡ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಅಸುನೀಗಿದ ಜನರ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಉತ್ತರ ಪ್ರದೇಶದ ಹಿಂದೂ ಕಾಲೇಜಿನಲ್ಲಿ ಬುರ್ಖಾ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ. ಯುಪಿಯ ಮೊರಾದಾಬಾದ್‌ನಲ್ಲಿರುವ ಹಿಂದೂ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಾಲೇಜಿನ ಯೂನಿಫಾರ್ಮ್ ಕೋಡ್‌ನಲ್ಲಿ ಬುರ್ಖಾ ಇಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಬುರ್ಖಾ ತೆಗೆದರೆ ಮಾತ್ರ ಕಾಲೇಜಿಗೆ ಪ್ರವೇಶ ನೀಡುತ್ತೇವೆ ಎಂದು ಅಧಿಕಾರಿಗಳು ಪಟ್ಟು ಹಿಡಿದರು ಎನ್ನುತ್ತಾರೆ ವಿದ್ಯಾರ್ಥಿಗಳು. ಆಗ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ,  ನಡೆಯಿತು. ಕಾಲೇಜಿನ ಪ್ರಾಧ್ಯಾಪಕ ಡಾ. ಎಪಿ ಸಿಂಗ್ ಹೇಳಿದರು. ನಂತರ ಕಾಲೇಜು ಸಮವಸ್ತ್ರದಲ್ಲಿ ಬುರ್ಖಾ ಹಾಕಬೇಕು ಎಂದು ಸಮಾಜವಾದಿ ಛಾತ್ರ ಸಭೆ ಮನವಿ ಮೂಲಕ ಮನವಿ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More