Subscribe to Updates
Get the latest creative news from FooBar about art, design and business.
- ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
- ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
- ಬಜೆಟ್ ನಲ್ಲಿ ಜಿಲ್ಲೆಗೆ ನಿರಾಶೆ: ಶಾಸಕ ಎಸ್.ಆರ್. ಶ್ರೀನಿವಾಸ್ ಅಸಮಾಧಾನ
- ಗುಬ್ಬಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ‘ಜನಸ್ಪಂದನ: ಸ್ಥಳದಲ್ಲೇ ಪಡಿತರ ಚೀಟಿ ವಿತರಣೆ
- ಬೆಂಕಿ ಆಕಸ್ಮಿಕ: ಪೌರಕಾರ್ಮಿಕನ ಮನೆ ಸುಟ್ಟು ಭಸ್ಮ: ಪರಿಹಾರಕ್ಕೆ ಸಿಪಿಎಂ ಒತ್ತಾಯ
- ಮಹಿಳೆಯರ ಶಕ್ತಿ– ಸಮಾಜದ ಪ್ರಗತಿಯ ನಿಜವಾದ ಅಡಿಪಾಯ
- ಡಿಜಿಟಲ್ ಅರೆಸ್ಟ್: ಹೊಸ ಹೆಸರಿನಲ್ಲಿ ಹಳೆಯ ಮೋಸ –ಜಾಗರೂಕರಾಗಿರಿ
- ಆದಿಶಕ್ತಿ ದೇವತೆಗಳ ಪವಾಡ ರಾಜ್ಯದ ಗಮನ ಸೆಳೆದಿದೆ: ಶಶಾಂಕ್ ರಾಜ್
Author: admin
ಚೀನಾದಲ್ಲಿ ಪ್ರಸ್ತುತ ಕರೋನಾ ಅಲೆಗಳ ಜೊತೆಗೆ ಮೂರು ತಿಂಗಳಲ್ಲಿ ಮೂರು ಅಲೆಗಳು ಬರುವ ಸಾಧ್ಯತೆಯಿದೆ ಎಂದು ಚೈನೀಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಎಚ್ಚರಿಸಿದೆ. ಪ್ರಸ್ತುತ ಕರೋನಾ ಅಲೆಯು ಜನವರಿ ಮಧ್ಯದ ವೇಳೆಗೆ ಕೊನೆಗೊಳ್ಳಲಿದೆ ಎಂದು ಅದು ಹೇಳಿದೆ, ನಂತರ ಪ್ರಕರಣಗಳು ಮತ್ತೆ ಹೆಚ್ಚಾಗಲು ಪ್ರಾರಂಭವಾಗುತ್ತದೆ ಮತ್ತು ಎರಡನೇ ತರಂಗ ಅನುಸರಿಸುತ್ತದೆ. ಮೂರನೇ ತರಂಗ ಫೆಬ್ರವರಿ ಅಂತ್ಯದಲ್ಲಿ ಬರುವ ಅಂದಾಜಿದೆ. ಸಾರ್ವಜನಿಕ ಪ್ರತಿಭಟನೆಯಿಂದಾಗಿ ಚೀನಾದಲ್ಲಿ ಶೂನ್ಯ ಕೋವಿಡ್ ನೀತಿಯನ್ನು ತೆಗೆದುಹಾಕಿದ ನಂತರ, ಅಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಘಾತೀಯವಾಗಿ ಹೆಚ್ಚುತ್ತಿದೆ. ಎಲ್ಲ ಆಸ್ಪತ್ರೆಗಳು ರೋಗಿಗಳಿಂದ ತುಂಬಿ ತುಳುಕುತ್ತಿವೆ. ಹಾಸಿಗೆ ಮತ್ತು ಔಷಧಿಗಳ ಕೊರತೆ ಇದೆ. ಸ್ಮಶಾನಗಳಲ್ಲಿ ರಾಶಿ ಬೀಳುವ ಶವಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು ಹಾಂಗ್ ಕಾಂಗ್ ಪೋಸ್ಟ್ ಇತ್ತೀಚೆಗೆ ವರದಿ ಮಾಡಿದೆ. ಪ್ರತಿದಿನ ಸುಮಾರು 50,000 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…
ಕೇಂದ್ರ ಸಾಹಿತ್ಯ ಅಕಾಡೆಮಿಯು ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಘೋಷಿಸಿದೆ. ಪುಸ್ತಕ ಪ್ರಶಸ್ತಿಗೆ ಕನ್ನಡದ ಲೇಖಕ ಡಾ.ಮೂಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ’ ಕೃತಿ, ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರ ‘ಸೀತಾ:ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ. ಪುಸ್ತಕ ಪ್ರಶಸ್ತಿ 11 ಲಕ್ಷ ನಗದು ಹಾಗೂ ಅನುವಾದ ಪ್ರಶಸ್ತಿ 50,000 ನಗದು, ಸನ್ಮಾನ ಒಳಗೊಂಡಿವೆ. ಮಾರ್ಚ್ನಲ್ಲಿ ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅನುದಾನ ಮತ್ತು ಉಚಿತಗಳನ್ನು ಪರಿಸ್ಥಿತಿಗೆ ಅನುಗುಣವಾಗಿ ಮತ್ತು ಹಣಕಾಸಿನ ನಿಯಮಗಳ ಪ್ರಕಾರ ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. “ಉಚಿತ” ಮತ್ತು ಅನುದಾನಗಳು ಸಾಂದರ್ಭಿಕವಾಗಿರಬೇಕು ಮತ್ತು ಬಜೆಟ್ ವ್ಯವಸ್ಥೆಗಳು ಹಣಕಾಸಿನ ನಿಯಮಗಳಿಗೆ ಅನುಗುಣವಾಗಿದ್ದರೆ ಅಂತಹ ಭರವಸೆಗಳನ್ನು ಯಾರೂ ವಿರೋಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ರಾಜ್ಯಸಭೆಯಲ್ಲಿ ಅನುದಾನಕ್ಕೆ ಪೂರಕ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವರು, ಪಾರದರ್ಶಕತೆ ಮತ್ತು ಶಾಸನಬದ್ಧ ಹಣಕಾಸು ನಿಯಮಗಳು ಮತ್ತು ಶಿಸ್ತಿನ ಅನುಸರಣೆ ಇರಬೇಕು. ಚರ್ಚೆಯ ಸಂದರ್ಭದಲ್ಲಿ, ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು, ಅನುದಾನಕ್ಕಾಗಿ ಪೂರಕ ಬೇಡಿಕೆಗಳಲ್ಲಿನ ಕಲ್ಯಾಣ ಯೋಜನೆಗಳು “ಸಬ್ಸಿಡಿ” ಆಗಿದ್ದರೆ, ಪ್ರತಿಪಕ್ಷಗಳು ಸಾರ್ವಜನಿಕ ಕಲ್ಯಾಣಕ್ಕಾಗಿ ಖರ್ಚು ಮಾಡುವುದನ್ನು ಬಿಜೆಪಿಯು ಉಚಿತವೆಂದು ಪರಿಗಣಿಸಿದೆ ಎಂದು ಹೇಳಿದರು. ಅನುದಾನಗಳು ಮತ್ತು ಉಚಿತಗಳು ಸಾಂದರ್ಭಿಕವಾಗಿರಬೇಕು. ನಿಮ್ಮ ಬಜೆಟ್ನಲ್ಲಿ ಅದನ್ನು ಹಾಕಿದರೆ ಮತ್ತು ನಿಮ್ಮ ಆದಾಯ ಬಂದಾಗ ಅದಕ್ಕೆ ವ್ಯವಸ್ಥೆ ಮಾಡಿದರೆ, ಯಾರಾದರೂ…
ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೋನಾ ಹೆಚ್ಚುತ್ತಿದ್ದು, ರಾಜ್ಯದಲ್ಲೂ ಕೋವಿಡ್ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸುಧಾಕರ್, ಈಗಾಗಲೇ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ. ರಾಜ್ಯದಲ್ಲಿ 3ನೇ ಡೋಸ್ ಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ನಿನ್ನೆ ಮುಖ್ಯಕಾರ್ಯದರ್ಶಿ ಜೊತೆ ಸಭೆ ನಡೆಸಿದ್ದೇನೆ. ಮುಂದಿನ ಕ್ರಮಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗುತ್ತದೆ ಎಂದರು. ಜಿನೋಮಿಕ್ ಟೆಸ್ಟ್ ಗೆ ಸೂಚಿಸಿದ್ದೇನೆ. ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ 3ನೇ ಡೋಸ್ ಲಸಿಕೆ ಪಡೆಯದವರ ಬಗ್ಗೆಯೂ ನಿಗಾ ವಹಿಸುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಸೇರಿ ಐವರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಎಸ್.ಪಿ ಆರ್.ಚೇತನ್ ಅವರನ್ನ ಗುಪ್ತಚರ ವಿಭಾಗದ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೀಮಾ ಲಟ್ಕರ್ ಅವರನ್ನ ವರ್ಗಾಯಿಸಲಾಗಿದೆ. ಶಿವಪ್ರಕಾಶ್ ಅವರನ್ನ ಸಿಸಿಬಿ ಬೆಂಗಳೂರು ವಿಭಾಗದ ಎಐಜಿಪಿಯಾಗಿ, ಎಂ. ಮುತ್ತುರಾಜ್ ಅವರನ್ನ ಮೈಸೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಹಾಗೂ ಬಾಬುಸಾಬ್ ನೇಮೆಗೌಡ ಅವರನ್ನ ಗದಗ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮೀಷನ್ (ಯುಜಿಸಿ) ಇತ್ತೀಚೆಗೆ ದೇಶದಾದ್ಯಂತ ವಿದ್ಯಾರ್ಥಿಗಳು ಶೀಘ್ರದಲ್ಲೇ ತಮ್ಮ ಮಾತೃ ಭಾಷೆಯಲ್ಲಿ ಪರೀಕ್ಷೆಗಳನ್ನು ಬರೆಯುವ ಅವಕಾಶ ಪಡೆದುಕೊಳ್ಳಬಹುದು ಎಂದು ತಿಳಿಸಿದೆ. ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಬಂಗಾಳಿ, ಗುಜರಾತಿ, ತಮಿಳು ಹಾಗೂ ತೆಲುಗು ಸೇರಿದಂತೆ ಒಟ್ಟು ೧೨ ಭಾಷೆಗಳಿಗೆ ವಿವಿಧ ಕೋರ್ಸ್ಗಳ ಪಠ್ಯಪುಸ್ತಕಗಳನ್ನು ಅನುವಾದಿಸುವ ಕಾರ್ಯ ಆರಂಭಿಸುವ ಸಿದ್ಧತೆಗಳು ನಡೆಯುತ್ತಿವೆ. ಕೇಂದ್ರ ಶಿಕ್ಷಣ ಇಲಾಖೆಯ ಅಡಿಯಲ್ಲಿಯುಜಿಸಿ, ಆಂಗ್ಲ ಭಾಷೆಯ ಪಠ್ಯಪುಸ್ತಕಗಳನ್ನು ವಿವಿಧ ಭಾರತೀಯ ಭಾಷೆಗಳಿಗೆ ಅನುವಾದ ಮಾಡಿಸುವ ನಿಟ್ಟಿನಲ್ಲಿ ಹಲವು ಪ್ರಕಾಶರಿಗೆ ಜವಾಬ್ದಾರಿ ವಹಿಸುವ ಕಾರ್ಯವನ್ನು ಆರಂಭಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿರುವ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಬಿ.ಎ., ಬಿ.ಎಸ್ಸಿ, ಅಥವಾ ಬಿ.ಕಾಂ. ವಿದ್ಯಾರ್ಥಿಗಳಿಗೆ ವಿಶೇಷವಾಗಿ ಕನ್ನಡ ಮಾಧ್ಯಮದ ಬೋಧನೆ ಲಭ್ಯವಿಲ್ಲ. ಆದಾಗ್ಯೂ, ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯನ್ನು ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿ ಉತ್ತರಿಸುವ ಆಯ್ಕೆಯನ್ನು ಒದಗಿಸಲಾಗುತ್ತಿದೆ. “ದೆಹಲಿ, ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿ ಈಗಾಗಲೇ ಅನೇಕ ಕೋರ್ಸುಗಳನ್ನು ಅಧಿಕೃತವಾಗಿ ಹಿಂದಿಯಲ್ಲೇ ಬೋಧನೆ ಮಾಡಲಾಗುತ್ತಿದೆ. ತಾಂತ್ರಿಕ ಹಾಗೂ ವೈದ್ಯಕೀಯ ಕೋರ್ಸುಗಳನ್ನು…
ಚೀನಾ ಸೇರಿ ಹಲವು ದೇಶಗಳಲ್ಲಿ ಮಹಾಮಾರಿ ಕೊರೋನಾ ಉಲ್ಪಣವಾಗುತ್ತಿದ್ದು ಭಾರತಕ್ಕೂ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಹಿರಿಯ ಅಧಿಕಾರಿಗಳು ತಜ್ಞರು ಪಾಲ್ಗೊಳ್ಳಲಿದ್ದಾರೆ. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಅವರು ಅಧಿಕಾರಿಗಳು ಮತ್ತು ತಜ್ಞರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಈಗಾಗಲೇ ಕೋವಿಡ್ ತಡೆಗಾಗಿ ಕಟ್ಟಚ್ಚರ ವಹಿಸಿದ್ದು ಚೀನಾದಿಂದ ಬರುವ ಪ್ರವಾಸಿಗರ ಮೇಲೆ ನಿಗಾವಹಿಸಲಾಗುತ್ತಿದೆ. ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆಗೆ ಕೇಂದ್ರ ಆರೋಗ್ಯ ಇಲಾಖೆ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವ ವಿಧಾನವನ್ನು ಸರಳೀಕರಣಗೊಳಿಸಿ, ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಕಂದಾಯ ಸಚಿವರಾದ ಆರ್ ಅಶೋಕ್ ಅವರು ತಿಳಿಸಿದ್ದಾರೆ. ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 95(2)ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಛಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಯು ನಿಯಮಗಳಿಗೆ ಒಳಪಟ್ಟು ಅನುಮತಿಯನ್ನು ನಿರಾಕರಿಸಬಹುದು ಅಥವಾ ತಾನು ಯುಕ್ತವೆಂದು ಆಲೋಚಿಸುವಂತ ಷರತ್ತುಗಳಿಗೆ ಒಳಪಟ್ಟು ಕೊಡಬಹುದಾಗಿದೆ. ಅರ್ಜಿದಾರರು ಭೂ ಪರಿವರ್ತನೆಗೆ ಅರ್ಜಿ ಸಲ್ಲಿಸಿದಾಗ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 96(4)ರನ್ವಯ ಈ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ ಕಂದಾಯ ವಿಧಿಸಲಾಗಿರುವ ಅಥವಾ ಬೇಸಾಯದ ಉದ್ದೇಶಕ್ಕೆ ಹೊಂದಿರುವ ಯಾವುದೇ ಭೂಮಿಯನ್ನು ಯಾವುದೇ ಇತರೆ ಉದ್ದೇಶಕ್ಕಾಗಿ ಜಿಲ್ಲಾಧಿಕಾರಿಯ ಅನುಮತಿಯಿಲ್ಲದೇ ಕಟ್ಟಡಗಳನ್ನು ಕಟ್ಟುವುದು ಅಥವಾ ಉಪಯೋಗ ಮಾಡಿದ್ದಕ್ಕಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ…
ಮರಾಠ ಸಮುದಾಯವನ್ನು 3(ಎ) ಪ್ರವರ್ಗದಿಂದ 2(ಎ) ಪ್ರವರ್ಗಕ್ಕೆ ಸೇರಿಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು. ಆಯೋಗದ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಶೂನ್ಯ ವೇಳೆಯಲ್ಲಿ ಶಾಸಕರಾದ ಆರ್.ವಿ. ದೇಶಪಾಂಡೆ ಅವರು 2012ರಲ್ಲಿ ಶಂಕರಪ್ಪ ಆಯೋಗ ಮರಾಠಿ ಜನಾಂಗ 2ಎಗೆ ಸೇರುವ ಅರ್ಹತೆ ಹೊಂದಿದೆ ಎಂದು ವರದಿ ನೀಡಿದ್ದು ಅದರಂತೆ ಈ ಜನಾಂಗವನ್ನು ಪ್ರವರ್ಗ2ಎ ಗೆ ಸೇರಿಸಲು ಆಗ್ರಹಿಸಿದಾಗ ಮುಖ್ಯಮಂತ್ರಿಗಳು ಯಾವುದೇ ಒಂದು ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿ ಅವಶ್ಯಕವಾಗಿದ್ದು ಶಂಕರಪ್ಪ ವರದಿಯನ್ನು ಮರುಶಿಫಾರಸ್ಸು ಮಾಡಲಾಗುವುದು. ನಂತರ ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಹಿಂದುಳಿದ ವರ್ಗಗಳ 2ಎಗೆ ತೀರ್ಮಾನ ಮಾಡಲಾಗುವುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ಮಗಳ ಹುಟ್ಟುಹಬ್ಬ ಆಚರಿಸಲು ಸುವರ್ಣಸೌಧವನ್ನು ಬಾಡಿಗೆ ಕೊಡಿ ಎಂದು ಸಭಾಪತಿಗಳಿಗೆ ಮತ್ತು ಜಿಲ್ಲಾಧಿಕಾರಿಗೆ ತಂದೆಯೊಬ್ಬರು ಪತ್ರ ಬರೆದ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಘಟಪ್ರಭಾನ ವಕೀಲ ಮಲ್ಲಿಕಾರ್ಜುನ ಚೌಕಾಶಿ ಎಂಬುವರೇ ಪತ್ರ ಬರೆದವರಾಗಿದ್ದಾರೆ. ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ ಅವಳ ಹುಟ್ಟುಹಬ್ಬವನ್ನು ಆಚರಿಸುವುದರೊಂದಿಗೆ ನಮ್ಮ ಭಾಗದಲ್ಲಿ ಚಿಕ್ಕ ಹೆಣ್ಣುಮಕ್ಕಳಿಗೆ ಹುಟ್ಟುಹಬ್ಬ ಮಾಡುವ ಪದ್ಧತಿಯಿದ್ದು, ಆದ್ದರಿಂದ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುವ ಕರ್ನಾಟಕ ಸುವರ್ಣ ವಿಧಾನಸೌಧ ಸಭಾಂಗಣವನ್ನು ಬಾಡಿಗೆ ನೀಡಬೇಕು ಎಂದು ವಿನಂತಿಸಿದ್ದಾರೆ. ಪ್ರತಿ ವರ್ಷ ಚಳಿಗಾಲದ ಅಧಿವೇಶನಕ್ಕೆ ಮಾತ್ರ ಸುವರ್ಣ ವಿಧಾನಸೌಧದ ಬಳಕೆಯಾಗುತ್ತದೆ. ಸರ್ಕಾರ ಹತ್ತು ದಿನ ಅಧಿವೇಶನಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತದೆ.ಈ ಖರ್ಚು ಸರಿ ಹೊಂದಿಸಲು ಬಾಡಿಗೆ ಕೊಟ್ಟರೆ ಒಳ್ಳೆಯದು. ಸದ್ಯಕ್ಕೆ ಅಧಿವೇಶನ…