Subscribe to Updates
Get the latest creative news from FooBar about art, design and business.
- ತುಮಕೂರು–ಬೆಂಗಳೂರು ಮೆಟ್ರೋ ಸಂಪರ್ಕ ಯೋಜನೆ: ಕೇಂದ್ರದ ಅನುಮತಿಗೆ ರಾಜ್ಯ ಸರ್ಕಾರ ಪತ್ರ!
- ಅಂಗನವಾಡಿ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ: ನಾಲ್ವರು ಮಕ್ಕಳು, ಕಾರ್ಯಕರ್ತೆಗೆ ಗಾಯ
- RSS ಅಷ್ಟೊಂದು ಉತ್ತಮವಾಗಿದ್ದರೆ, ಬಿಜೆಪಿ ನಾಯಕರ ಮಕ್ಕಳು ಏಕೆ ಸ್ವಯಂ ಸೇವಕರಾಗುತ್ತಿಲ್ಲ?: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
- ಸತ್ತವರು ಬೇಟೆಗಾರರಲ್ಲ, ರೈತರು: ಹನೂರು ಶೂಟೌಟ್ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿ ವಿರುದ್ಧ ಮೃತರ ಕುಟುಂಬಸ್ಥರ ಗಂಭೀರ ಆರೋಪ
- ತುಮಕೂರಿಗೆ ಏರ್ ಪೋರ್ಟ್, ಮೆಡಿಕಲ್ ಕಾಲೇಜು: ಶೀಘ್ರ ಸಿಎಂ ಭೇಟಿ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
- 80ನೇ ಸ್ವಾತಂತ್ರ್ಯ ದಿನಾಚರಣೆ: ಹುತಾತ್ಮರ ಕನಸಿನ ಭಾರತ ನಿರ್ಮಿಸಲು ವಿದ್ಯಾರ್ಥಿಗಳಿಂದ ಪ್ರತಿಜ್ಞೆ!
- ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ
- ಪ್ರಾಣತ್ಯಾಗ ಬಲಿದಾನದಿಂದ ಬಂದ ಸ್ವಾತಂತ್ರ್ಯವನ್ನ ಇವತ್ತೀನ ಯುವ ಪೀಳಿಗೆ ಅರಿಯಬೇಕು: ತಹಶೀಲ್ದಾರ್ ಮಂಜುನಾಥ್
Author: admin
ತುಮಕೂರು : ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಾಳಲ್ಲೂ ಶಿಕ್ಷಣದ ಬೆಳಕು ಮೂಡಬೇಕೆಂದು ತಮ್ಮ 111 ವರ್ಷಗಳ ಸುದೀರ್ಘ ಆಯಸ್ಸನ್ನು ಮುಡುಪಾಗಿಟ್ಟ ನಾಡಿನ ಮಹಾಬೆಳಕು ಸಿದ್ದಗಂಗಾ ಶ್ರೀಗಳು ಎಂದು ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್ ಹೇಳಿದರು. ಸಿದ್ಧಗಂಗಾಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಮಾಡುವ “ಸಿದ್ಧಗಂಗಾಶ್ರೀ’ ‘ಸಂಘ ಸಿರಿ’ ಪ್ರಶಸ್ತಿ ಸಮಾರಂಭದಲ್ಲಿ ಸಂಘದ ಪರವಾಗಿ ಅನಿಸಿಕೆ ಕುರಿತು ಅವರು ಮಾತನಾಡಿದರು. ನಮ್ಮ ರಾಜ್ಯದ ಹಿರಿಯ ಸಂಘಟನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಳೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳ ಸಂಘಕ್ಕೆ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ ಮಿಂಚಿನ ಸಂಚಾರ ಎಲ್ಲರಿಗೂ ಚೈತನ್ಯದಾಯಕವಾಗಿದೆ ಎಂದರು. ಮಂಡ್ಯದಲ್ಲಿ ಪೂಜ್ಯರ ಉದ್ಯಾನವನ ನಿರ್ಮಾಣಗೊಳಿಸಲು ಸಂಪೂರ್ಣವಾಗಿ ಆಶೀರ್ವದಿಸಿ ಪೂಜ್ಯರ ಪುತ್ಥಳಿಯನ್ನು ದಯಪಾಲಿಸಿದ ಮಹಾ ಕರುಣಾಮಯಿ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರ ಕಾಯಕ ನಿಷ್ಠೆ ಸಮಾಜಕ್ಕೆ ಸ್ಪೂರ್ತಿದಾಯಕ ಎಂದು ಬಣ್ಷಿಸಿದರು. ಸಸ್ಯಾಂದೋಲನ : ರೈತರು ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ…
ತುಮಕೂರು : ಶ್ರೀಮಠದ ಬೆಳವಣಿಗೆಯ ಪ್ರತಿ ಹಂತದಲ್ಲು ಶ್ರೀಗಳ ಶ್ರಮ ಇದೆ. ಮಠದ ಮಕ್ಕಳ ಶ್ರೇಯೋಭಿವೃದ್ಧಿ ಗಾಗಿ ಅವರ ಜೀವನವನ್ನೇ ಸಮರ್ಪಿಸಿಕೊಂಡಿದ್ದರು. ಶಿವಕುಮಾರ ಶ್ರೀಗಳ ಮೇಲಿನ ಭಕ್ತಿ, ಶ್ರದ್ಧೆ, ಅಭಿಮಾನ, ಪ್ರೀತಿಯಿಂದ ಹಳೆಯ ವಿದ್ಯಾರ್ಥಿಗಳು ಈ ಸಮಾವೇಶಕ್ಕೆ ನಾಡಿನೆಲ್ಲಡೆಯಿಂದ ಆಗಮಿಸಿದ್ದಾರೆ. ಇದೊಂದು ಕೃತಜ್ಞತಾ ಸಭೆ ಅಂದರೆ ತಪ್ಪಾಗಲಾರದು. ಶ್ರೀಮಠವು ಎಂದೂ ಏನನ್ನೂ ಬೇಡುವುದಿಲ್ಲ. ಸಂಘಕ್ಕೆ ಯಾವ ನಿಧಿಯು ಬೇಡ. ಹಳೆಯ ವಿದ್ಯಾರ್ಥಿಗಳೇ ನಮ್ಮ ಪಾಲಿನ ನಿಧಿ ಎಂದು ಸಿದ್ದಗಂಗಾ ಮಠಾಧ್ಯಕ್ಷ ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು. ಸಿದ್ಧಗಂಗಾಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಮಾಡುವ “ಸಿದ್ಧಗಂಗಾಶ್ರೀ’ ‘ಸಂಘ ಸಿರಿ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಮಾತನಾಡಿದ ಅವರು, ಪರಮಪೂಜ್ಯರಿಗೆ ಹಳೆಯ ವಿದ್ಯಾರ್ಥಿಗಳ ಕಂಡರೆ ಅಭಿಮಾನ, ಪ್ರೀತಿ ಇತ್ತು. ನಿಮ್ಮಲ್ಲಿ ಪೂಜ್ಯರನ್ನು ಕಂಡಷ್ಟು ಖುಷಿ ಯಾಗುತ್ತಿದೆ ಎಂದರು. ಶ್ರೀಮಠದ ಬೆಳವಣಿಗೆಯ ಪ್ರತಿ ಹಂತದಲ್ಲು ಶ್ರೀಗಳ ಶ್ರಮ ಇದೆ. ಮಠದ…
ದಾವಣಗೆರೆ: ನಟ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರಕ್ಕೆ ಭೇಟಿ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ದರ್ಶನ್ ಅವರ ಅನುಪಸ್ಥಿತಿಯಲ್ಲಿ ಕೆಲವರು ಅವರ ವಿರುದ್ಧ ಮತ್ತು ಅಭಿಮಾನಿಗಳ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. “ದರ್ಶನ್ ಅವರು ಬೆಂಗಳೂರಿನಲ್ಲಿದ್ದಾಗ ಮಾತನಾಡದವರು, ಈಗ ಅವರು ಇಲ್ಲದ ಸಮಯದಲ್ಲಿ ವೇದಿಕೆಗಳ ಮೇಲೆ ಮತ್ತು ಸುದ್ದಿ ವಾಹಿನಿಗಳಲ್ಲಿ ಕುಳಿತು ಮಾತನಾಡುತ್ತಿದ್ದಾರೆ. ಆದರೆ ಅಭಿಮಾನಿಗಳು ಇಂತಹ ಟೀಕೆಗಳಿಗೆ ತಲೆಕೆಡಿಸಿಕೊಳ್ಳಬಾರದು. ಯಾವುದೇ ಕಾರಣಕ್ಕೂ ಉದ್ವೇಗಕ್ಕೆ ಒಳಗಾಗದೆ ಶಾಂತಿಯುತವಾಗಿ ಇರಬೇಕು” ಎಂದು ಅವರು ಅಭಿಮಾನಿಗಳಿಗೆ ಕರೆ ನೀಡಿದರು. ಇದೇ ಸಂದರ್ಭದಲ್ಲಿ ‘ಡೆವಿಲ್’ ಚಿತ್ರಕ್ಕೆ ಸಿಗುತ್ತಿರುವ ಅಭೂತಪೂರ್ವ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಅವರು, ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಮತ್ತು ಪೈರಸಿಯನ್ನು ಪ್ರೋತ್ಸಾಹಿಸಬೇಡಿ ಎಂದು ಮನವಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಚಿತ್ರದ ನಟಿ ರಚನಾ ರೈ ಮತ್ತು ಹಾಸ್ಯ ನಟ ಹುಲಿ ಕಾರ್ತಿಕ್ ಕೂಡ…
ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಭೀಕರ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಸಮುದಾಯದ ಯುವಕ ವಿವೇಕಾನಂದ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದ 19 ವರ್ಷದ ಮಾನ್ಯ ಪಾಟೀಲ ಎಂಬಾಕೆಯನ್ನು ಆಕೆಯ ತಂದೆ ವೀರನಗೌಡ ಪಾಟೀಲ ಮತ್ತು ಸಂಬಂಧಿಕರು ಸೇರಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಕೊಲೆಯಾದ ಮಾನ್ಯ ಏಳು ತಿಂಗಳ ಗರ್ಭಿಣಿಯಾಗಿದ್ದು, ಇತ್ತೀಚೆಗಷ್ಟೇ ಗ್ರಾಮಕ್ಕೆ ಮರಳಿದ್ದರು. ಮಗಳ ಅಂತರ್ಜಾತಿ ವಿವಾಹದಿಂದ ಆಕ್ರೋಶಗೊಂಡಿದ್ದ ತಂದೆ ಮತ್ತು ಸಂಬಂಧಿಕರು ಭಾನುವಾರ ಸಂಜೆ ದಂಪತಿಯ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ವೇಳೆ ಪತ್ನಿಯ ರಕ್ಷಣೆಗೆ ಬಂದ ಪತಿ ವಿವೇಕಾನಂದ ಹಾಗೂ ಆತನ ಪೋಷಕರ ಮೇಲೂ ಹಲ್ಲೆ ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಮಾನ್ಯ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ವೀರನಗೌಡ ಸೇರಿದಂತೆ ಮೂವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು : ಜಿಲ್ಲೆಯ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾ ಬಂಜಾರ ಭವನ ಉದ್ಘಾಟನೆಯ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಬಂಜಾರ ಸಮುದಾಯದ ಕಾರ್ಯಕ್ರಮಗಳ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷರಾದ ನಾರಾಯಣ ನಾಯ್ಕ ಡಿ., ಬರುವ ಏಪ್ರಿಲ್ ತಿಂಗಳಲ್ಲಿ ಬಂಜಾರ ಜನಾಂಗದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಇದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ನೆರವಾಗುವ ಜೊತೆಗೆ ಸಮುದಾಯದ ಒಗ್ಗಟ್ಟಿಗೂ ಬಲ ಸಿಗಲಿದೆ ಎಂದರು. ಇದೇ ವೇಳೆ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ನೀಡುವ ಯೋಜನೆಯನ್ನೂ ರೂಪಿಸಲಾಗುತ್ತದೆ ಎಂದು ಹೇಳಿದರು. ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಗಳಿಗೆ ಸಿದ್ಧರಾಗಲು ಮಾರ್ಗದರ್ಶನ, ತರಬೇತಿ ಶಿಬಿರಗಳು ಹಾಗೂ ಅಧ್ಯಯನ ಸಹಾಯವನ್ನು ಒದಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಭೆಯಲ್ಲಿ ಬಂಜಾರ ಭವನದ ನಿರ್ವಹಣೆ, ಉದ್ಘಾಟನೆಗೆ ಸಂಗ್ರಹವಾದ ಹಣಕಾಸಿನ ಜಮಾ–ಖರ್ಚಿನ ವಿವರಗಳ ಮಂಡನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ಸಮುದಾಯದ ಹಿರಿಯರು, ಮುಖಂಡರು ಹಾಗೂ ಸದಸ್ಯರು ತಮ್ಮ…
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಈ ವಾರ ನಡೆದ ಬೆಳವಣಿಗೆಗಳು ಪ್ರೇಕ್ಷಕರಿಗೆ ಭಾರಿ ಅಚ್ಚರಿ ಮೂಡಿಸಿವೆ. ವೋಟಿಂಗ್ ಇಲ್ಲದಿದ್ದರೂ ವೈಲ್ಡ್ ಕಾರ್ಡ್ ಸ್ಪರ್ಧಿಗಳಾದ ರಜತ್ ಮತ್ತು ಚೈತ್ರಾ ಕುಂದಾಪುರ ಅವರು ಮನೆಯಿಂದ ಅನಿರೀಕ್ಷಿತವಾಗಿ ಹೊರಬಂದಿದ್ದಾರೆ. ಈ ಅನಿರೀಕ್ಷಿತ ಎಲಿಮಿನೇಷನ್ಗೆ ಕಿಚ್ಚ ಸುದೀಪ್ ಅವರು ‘ವಾರದ ಕಥೆ ಕಿಚ್ಚನ ಜೊತೆ’ ಕಾರ್ಯಕ್ರಮದಲ್ಲಿ ಸ್ಪಷ್ಟನೆ ನೀಡಿದ್ದಾರೆ. ರಜತ್ ಮತ್ತು ಚೈತ್ರಾ ಅವರು ಕೇವಲ ಅತಿಥಿಗಳಾಗಿ ಮನೆಗೆ ಪ್ರವೇಶಿಸಿದ್ದರು ಎಂದು ಸುದೀಪ್ ತಿಳಿಸಿದ್ದಾರೆ. ಮನೆಯಲ್ಲಿರುವ ಇತರ ಸ್ಪರ್ಧಿಗಳಿಗೆ ಸ್ಫೂರ್ತಿ ನೀಡಲು ಮತ್ತು ಆಟದ ವೇಗವನ್ನು ಹೆಚ್ಚಿಸಲು ಇವರಿಬ್ಬರನ್ನು ಕರೆತರಲಾಗಿತ್ತು. ಇವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಂತೆ ಕಂಡರೂ, ಮೂಲತಃ ಇವರು ಕಾರ್ಯಕ್ರಮದ ಸ್ಪರ್ಧಿಗಳಾಗಿರಲಿಲ್ಲ, ಬದಲಾಗಿ ಅತಿಥಿಗಳಾಗಿದ್ದರು. ಅವರ ಉದ್ದೇಶ ಮತ್ತು ಕೆಲಸ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಮನೆಯಿಂದ ಹೊರಗೆ ಕರೆಸಿಕೊಳ್ಳಲಾಗಿದೆ. ಮನೆಯಲ್ಲಿದ್ದ ಅಲ್ಪಾವಧಿಯಲ್ಲೇ ಇಬ್ಬರೂ ಅದ್ಭುತವಾಗಿ ಆಡಿದ್ದಾರೆ ಎಂದು ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಜತ್ ತಮ್ಮ ಆಕ್ರಮಣಕಾರಿ ಆಟದಿಂದ ಗಮನ ಸೆಳೆದರೆ, ಚೈತ್ರಾ ಅವರು…
ಸೌಂದರ್ಯವನ್ನು ಹೆಚ್ಚಿಸುವಲ್ಲಿ ತಲೆಕೂದಲು ಪ್ರಮುಖ ಪಾತ್ರವಹಿಸುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿ ಮತ್ತು ತಪ್ಪು ಅಭ್ಯಾಸಗಳಿಂದಾಗಿ ಅನೇಕರು ಕೂದಲಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅದರಲ್ಲಿಯೂ ಮುಖ್ಯವಾಗಿ ರಾತ್ರಿ ಹೊತ್ತು ಸ್ನಾನ ಮಾಡಿ, ಕೂದಲನ್ನು ಒಣಗಿಸದೇ ಹಾಗೆಯೇ ಒದ್ದೆ ಕೂದಲಿನಲ್ಲಿ ಮಲಗುವುದು ಕೂದಲಿನ ಆರೋಗ್ಯಕ್ಕೆ ಮಾರಕ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಎದುರಾಗುವ ಸಮಸ್ಯೆಗಳೇನು? 1. ಕೂದಲು ತುಂಡಾಗುವಿಕೆ: ಒದ್ದೆಯಾದ ಕೂದಲು ಒಣ ಕೂದಲಿಗಿಂತ ಹೆಚ್ಚು ದುರ್ಬಲವಾಗಿರುತ್ತದೆ. ಒದ್ದೆ ಕೂದಲಿನೊಂದಿಗೆ ಮಲಗಿದಾಗ, ರಾತ್ರಿಯಿಡೀ ಹೊರಳಾಡುವ ವೇಳೆ ಉಂಟಾಗುವ ಘರ್ಷಣೆಯಿಂದ ಕೂದಲು ಸುಲಭವಾಗಿ ಒಡೆಯುತ್ತದೆ. 2. ಕೂದಲ ತುದಿ ಸೀಳುವುದು (Split Ends): ಕೂದಲು ಒದ್ದೆಯಾಗಿದ್ದಾಗ ಹೆಚ್ಚು ಎಲಾಸ್ಟಿಕ್ ಗುಣ ಹೊಂದಿರುತ್ತದೆ. ಈ ವೇಳೆ ಅದು ಎಳೆದಂತಾಗಿ ಹೊರಪದರ ಹಾನಿಗೊಳಗಾಗುತ್ತದೆ, ಇದರಿಂದ ಕೂದಲಿನ ತುದಿ ಸೀಳಲು ಆರಂಭವಾಗುತ್ತದೆ. 3. ಸೋಂಕು ಮತ್ತು ತಲೆಹೊಟ್ಟು: ತೇವಾಂಶವಿರುವ ನೆತ್ತಿ ಮತ್ತು ದಿಂಬು ಬ್ಯಾಕ್ಟೀರಿಯಾ ಹಾಗೂ ಶಿಲೀಂಧ್ರಗಳ (Fungus) ಬೆಳವಣಿಗೆಗೆ ಹೇಳಿ ಮಾಡಿಸಿದ ಜಾಗ. ಇದು ತಲೆಹೊಟ್ಟು ಮತ್ತು…
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ರಸ್ತೆಯ ಚಿನ್ನೇಪಲ್ಲಿ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತೆಯೊಬ್ಬರು ಮೃತಪಟ್ಟಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬಾಗೇಪಲ್ಲಿ ತಾಲೂಕಿನ ಚೆಂಚುರಾಯನಪಲ್ಲಿ ಗ್ರಾಮದ ವರ್ಷಿಣಿ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಅವರ ಪತಿ ಸುರೇಂದ್ರ ಅವರನ್ನು ತಕ್ಷಣವೇ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೇವಲ ಮೂರು ತಿಂಗಳ ಹಿಂದೆಯಷ್ಟೇ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಘಟನೆಯ ವಿವರ: ದಂಪತಿಗಳು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ, ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ವರ್ಷಿಣಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸುರೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದರೂ, ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಬಾಗೇಪಲ್ಲಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಂಭ್ರಮದಿಂದ ಇರಬೇಕಿದ್ದ ಕುಟುಂಬದಲ್ಲಿ ನವವಿವಾಹಿತೆಯ…
ಮಂಡ್ಯ: ವೀರಶೈವ ಲಿಂಗಾಯತ ಸಮಾಜವನ್ನು ರಾಜಕೀಯವಾಗಿ ಒಡೆಯುವ ಷಡ್ಯಂತ್ರಗಳು ನಡೆಯುತ್ತಿವೆ, ಆದರೆ ಯಾವುದೇ ಶಕ್ತಿಯಿಂದ ಈ ಸಮುದಾಯವನ್ನು ವಿಭಜಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಲಾಗಿದ್ದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವದ ಐದನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಧಿಕಾರಕ್ಕಾಗಿ ‘ಕುರ್ಚಿ ಕಾಳಗ’ ನಡೆಯುತ್ತಿರುವ ಈ ಸಮಯದಲ್ಲಿ, ಧಾರ್ಮಿಕ ಕಾರ್ಯಕ್ರಮಕ್ಕೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿರುವುದು ಸಂತಸ ತಂದಿದೆ ಎಂದು ಅವರು ಹೇಳಿದರು. ಸುತ್ತೂರು ಮಠದ ಪರಂಪರೆಯನ್ನು ಸ್ಮರಿಸಿದ ವಿಜಯೇಂದ್ರ, ಮಠವು ಅನ್ನ ಮತ್ತು ಅಕ್ಷರ ದಾಸೋಹದ ಮೂಲಕ ನೊಂದವರ ಬಾಳಿಗೆ ಬೆಳಕಾಗಿದೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಎಲ್ಲ ಮಠಗಳಿಗೆ ಅನುದಾನ ನೀಡಿ, ಬಸವಣ್ಣನವರ ‘ಅನುಭವ ಮಂಟಪ’ ನಿರ್ಮಾಣಕ್ಕೆ ಒತ್ತು ನೀಡಿದ್ದರು. ವೀರಶೈವ ಲಿಂಗಾಯತ ಸಮಾಜವು ಒಳಪಂಗಡಗಳನ್ನು ಮರೆತು ಒಂದಾಗಬೇಕು ಮತ್ತು ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ಶ್ರಮಿಸಬೇಕು ಎಂದು ಅವರು ಕರೆ…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ಸುದ್ದಿ ನೀಡಿದ್ದಾರೆ. ಮುಂದಿನ ವಾರ ಅಂದರೆ ಸೋಮವಾರದಿಂದ ಶನಿವಾರದೊಳಗೆ ಯೋಜನೆಯ 24ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಹಣಕಾಸು ಇಲಾಖೆಯು ಈಗಾಗಲೇ ಹಣ ಬಿಡುಗಡೆಗೆ ಅನುಮೋದನೆ ನೀಡಿದೆ. ಇತ್ತೀಚಿನ ಅಧಿವೇಶನದಲ್ಲಿ ಯೋಜನೆಯ ವಿಳಂಬದ ಬಗ್ಗೆ ಚರ್ಚೆಗಳು ನಡೆದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ತಾಂತ್ರಿಕ ಕಾರಣಗಳಿಂದಾಗಿ ಅಥವಾ ದಾಖಲೆಗಳ ಕೊರತೆಯಿಂದ ಹಣ ಬಾರದೆ ಆತಂಕಗೊಂಡಿದ್ದ ಮಹಿಳೆಯರಿಗೆ ಈ ಸುದ್ದಿ ನೆಮ್ಮದಿ ತಂದಿದೆ. ಇದೇ ವೇಳೆ ಮೃತಪಟ್ಟವರ ಖಾತೆಗಳಿಗೆ ಹಣ ಜಮೆಯಾಗುತ್ತಿರುವ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿದರು. ಮೃತಪಟ್ಟವರ ಖಾತೆಗಳಿಗೆ ಹಣ ಹೋಗುವುದನ್ನು ತಡೆಯಲು ಹೊಸ ಸಾಫ್ಟ್ವೇರ್ ಅಳವಡಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮರಣ ಪ್ರಮಾಣಪತ್ರಗಳ ಪರಿಶೀಲನೆ ನಡೆಸಲಾಗುತ್ತಿದೆ. ಒಂದು ವೇಳೆ ತಪ್ಪಾಗಿ ಹಣ ಸಂದಾಯವಾಗಿದ್ದರೆ, ಅದನ್ನು ವಾಪಸ್…