Subscribe to Updates
Get the latest creative news from FooBar about art, design and business.
- ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
- ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
- 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
- ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
- ಬೆಂಗಳೂರು: ಆರ್ಟ್ ಆಫ್ ಲಿವಿಂಗ್ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
- ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
- ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
- ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಬೆಂಗಳೂರು: ತನ್ನ ಟಾಟಾ ಸುಮೋಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಬೈಕ್ ಸವಾರನನ್ನ ಬೆನ್ನಟ್ಟಿ ಹಿಡಿಯಲು ಹೋದ ಚಾಲಕನನ್ನ ಬೈಕ್ ಸವಾರ 1 ಕಿ.ಮೀ ಎಳೆದೊಯ್ದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಈ ಘಟನೆ ನಡೆದಿದೆ. ಟೋಲ್ ಗೇಟ್ ಬಳಿ ಟಾಟಾ ಸುಮೋಗೆ ಬೈಕ್ ಸವಾರ ಸಾಹಿಲ್ ಎಂಬುವವನು ಡಿಕ್ಕಿ ಹೊಡೆದಿದ್ದು, ಇದನ್ನು ಟಾಟಾ ಸುಮೋ ಚಾಲಕ ಮುತ್ತಪ್ಪ ಪ್ರಶ್ನಿಸಿದ್ದಾರೆ. ಈ ವೇಳೆ ಬೈಕ್ ಏರಿ ಸವಾರ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಮಯದಲ್ಲಿ ಕಾರು ಚಾಲಕ ಮುತ್ತಪ್ಪ ಬೈಕ್ ಹಿಂಭಾಗ ಹಿಡಿದು ಜೋತು ಬಿದ್ದಿದ್ದು, ಬೈಕ್ ಸವಾರ ಸಾಹಿಲ್ ಮುತ್ತಪ್ಪರನ್ನ ಒಂದೂವರೆ ಕಿಲೋ ಮೀಟರ್ ದೂರಕ್ಕೆ ಎಳೆದೊಯ್ದಿದ್ದಾನೆ.ಮಾಗಡಿ ರಸ್ತೆ ಟೋಲ್ ಗೇಟ್ ಬಳಿಯಿಂದ ಹೊಸಳ್ಳಿ ಮೆಟ್ರೋ ನಿಲ್ದಾಣದವರೆಗೆ ಎಳೆದೊಯ್ದಿದ್ದಾನೆ. ವಯಸ್ಸಾದ ಚಾಲಕನನ್ನ ಬೈಕ್ನಲ್ಲಿಎಳೆದೊಯ್ಯುತ್ತಿರುವುದನ್ನು ನೋಡಿದ ಇತರೆ ವಾಹನ ಸವಾರರು ಬೈಕ್ ಅನ್ನು ಅಡ್ಡಹಾಕಿ ಪ್ರಶ್ನಿಸಿ ಸಾಹಿಲ್ ಗೆ ಧರ್ಮದೇಟು ನೀಡಿದ್ದಾರೆ. ಮಾಹಿತಿ ತಿಳಿದ…
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2011ರಲ್ಲಿ ಆಕಾಶ್ ಆಡಿಯೋ ಕಂಪನಿಯ ಎಂ.ಡಿಯಾಗಿದ್ದಂ ಮಧು ಬಂಗಾರಪ್ಪ ಅವರು, ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂ ಬಾಕಿ ಪಾವತಿಗಾಗಿ ಚೆಕ್ ನೀಡಿದ್ದರು. ಈ ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಯು ಮಧು ಬಂಗಾರಪ್ಪ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿತ್ತು. ಈ ನಡುವೆ ಮಧು ಬಂಗಾರಪ್ಪ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಮಧು ಬಂಗಾರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ(ಆರ್) ಹಳಿಯಾಳ ಹಾಗೂ ಜೆಸಿಬಿ ಇಂಡಿಯಾ ಇವರ ಜಂಟಿ ಸಹಯೋಗದಲ್ಲಿ 30 ದಿನಗಳ ಉಚಿತ ರೆಪ್ರೀಜಿರೇಶನ್ & ಎರ್ ಕಂಡಿಶನ್ ರಿಪೇರ್ ತರಬೇತಿ ನೀಡಲಾಗುವುದು. 18 ರಿಂದ 45 ವರ್ಷ ವಯೋಮಿತಿಯ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ತರಬೇತಿ ಅವಶ್ಯಕತೆ ಹಾಗೂ ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಜನವರಿ 31 ರ ಒಳಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿಳಾಸ ಕೆನರಾ ಬ್ಯಾಂಕ್, ದೇಶಪಾಂಡೆ ಆರ್ಸೆಟಿ(ಆರ್) ವಿಸ್ತರಣಾ ಕೇಂದ್ರ ಹಸನ್ಮಾಳ್, ದಾಂಡೇಲಿ-581325. ಅಥವಾ 08284-298547, 9449782425, 9731842849, 9731842849 ಈ ವಾಟ್ಸಪ್ ನಂಬರಿಗು ಅರ್ಜಿ ಸಲ್ಲಿಸಬಹುದು. ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ತರಬೇತಿಯ ನಂತರ ಉದ್ಯೋಗ ನಿಯೋಜನೆಯ ಮಾರ್ಗದರ್ಶನವನ್ನು ನೀಡಲಾಗುತ್ತದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ಬಾಗಲಕೋಟೆ: ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಮಲಪ್ರಭಾ ನದಿಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯಲ್ಲಿ ನಡೆದಿದೆ. ಸೂಳೇಭಾವಿ ಗ್ರಾಮದ ನಿವಾಸಿ ಉಮಾ ಮಾಸರೆಡ್ಡಿ (45), ಸೌಂದರ್ಯ (18) ಹಾಗೂ ಐಶ್ವರ್ಯ (20) ಮೃತ ದುರ್ದೈವಿಗಳು. ಐಶ್ವರ್ಯ ಬೆಂಗಳೂರಿನಲ್ಲಿ ಬಿಇ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದರು. ಸೌಂದರ್ಯ ಬಾಗಲಕೋಟೆಯಲ್ಲಿ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೌಟುಂಬಿಕ ಸಮಸ್ಯೆಯಿಂದ ಡೆತ್ ನೋಟ್ ಬರೆದಿಟ್ಟು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮತಗಿ ಪಟ್ಟಣದ ರಾಮಥಾಳ ಗ್ರಾಮದ ಮಲಪ್ರಭಾ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಲಬುರಗಿ: ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ರೂ. ನೆರವು ನೀಡಲು ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಣೆ ಮಾಡಿದ್ದಾರೆ. ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ 2000 ರೂ. ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿಜಯನಗರ: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ‘ಬಿ’ ರಿಪೋರ್ಟ್ ಹಾಕಿದ ಎಲ್ಲಾ ಪ್ರಕರಣಗಳನ್ನು ಮರು ತನಿಖೆ ನಡೆಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ನಡೆದ ಪ್ರಜಾಧ್ವನಿ ಬಸ್ ಯಾತ್ರೆ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿಯೊಂದು ಪ್ರಕರಣಕ್ಕೂ ‘ಬಿ’ ರಿಪೋರ್ಟ್ ಹಾಕುತ್ತಿದೆ. ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ‘ಬಿ’ ರಿಪೋರ್ಟ್ ಹಾಕಿದ ಎಲ್ಲಾ ಪ್ರಕರಣವನ್ನು ಮರು ತನಿಖೆ ನಡೆಸಲಾಗುತ್ತದೆ ಎಂದಿದ್ದಾರೆ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿರುವ ಸರ್ಕಾರ ಜನರಿಗೆ ಏನು ಕೊಟ್ಟಿದೆ. 600 ಭರವಸೆಗಳಲ್ಲಿ ಶೇ.10 ರಷ್ಟು ಮಾಡಲು ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಅಮೃತಸರ್ : ನನ್ನ ಸಿದ್ಧಾಂತ ಮತ್ತು ಬಿಜೆಪಿ ನಾಯಕ ವರುಣ್ ಗಾಂಧಿಯವರ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಂಜಾಬಿನ ಹೋಶಿಯಾರ್ ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸಿದ್ಧಾಂತವು ಅವರ ಸಿದ್ಧಾಂತಕ್ಕೆ ಹೊಂದಿಕೆಯಾಗುವುದಿಲ್ಲ. ನಾನು ಆರ್ ಎಸ್ ಎಸ್ ಕಚೇರಿಗೆ ಹೋಗಲು ಸಾಧ್ಯವಿಲ್ಲ, ಅದಕ್ಕೂ ಮೊದಲು ನನ್ನ ತಲೆಯನ್ನು ಕತ್ತರಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ನನ್ನ ಕುಟುಂಬಕ್ಕೆ ಒಂದು ಸಿದ್ಧಾಂತವಿದೆ. ವರುಣ್ ಇನ್ನೊಂದನ್ನು ಅಳವಡಿಸಿಕೊಂಡಿದ್ದಾನೆ. ಅವನು ಅಳವಡಿಸಿಕೊಂಡ ಸಿದ್ಧಾಂತವನ್ನು ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಜನವರಿ 25 ರಿಂದ 29 ರವರೆಗೆ ಸಾರ್ವಜನಿಕರಿಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಲು ಅವಕಾಶವಿಲ್ಲ ಎಂದು ರಾಷ್ಟ್ರಪತಿ ಭವನದ ಕಚೇರಿ ತಿಳಿಸಿದೆ. ಇದಕ್ಕೆ ಕಾರಣ ಗಣರಾಜ್ಯೋತ್ಸವ ಪರೇಡ್ ಮತ್ತು ಬೀಟಿಂಗ್ ದಿ ರಿಟ್ರೀಟ್ ಸಮಾರಂಭ. ಗಣರಾಜ್ಯೋತ್ಸವ ಪರೇಡ್ ಮತ್ತು ಬೀಟಿಂಗ್ ರಿಟ್ರೀಟ್ ಸಮಾರಂಭದ ಪೂರ್ವಾಭ್ಯಾಸದಿಂದಾಗಿ 2023 ರ ಜನವರಿ 14 ಮತ್ತು 28 ರ ನಡುವೆ (ಅಂದರೆ 14, 21 ಮತ್ತು 28 ಜನವರಿ) ಗಾರ್ಡ್ ಬದಲಾವಣೆ ಸಮಾರಂಭ ನಡೆಯುವುದಿಲ್ಲ ಎಂದು ರಾಷ್ಟ್ರಪತಿ ಭವನವು ಈ ಹಿಂದೆ ತಿಳಿಸಿತ್ತು. ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್ ಮತ್ತು ಬೀಟಿಂಗ್ ರಿಟ್ರೀಟ್ ಸಮಾರಂಭಗಳು ಸಾಂಕೇತಿಕ ಅರ್ಥವನ್ನು ಹೊಂದಿವೆ. ಕಮಾಂಡರ್-ಇನ್-ಚೀಫ್ ಮುಂದೆ ಮಿಲಿಟರಿ ಸನ್ನದ್ಧತೆಯ ಪ್ರದರ್ಶನವಾಗಿದೆ. ಹಿಂದೆ ಇದು ಸಾಮಾನ್ಯವಾಗಿ ರಾಜನ ಹುಟ್ಟುಹಬ್ಬದಂದು ಇರುತ್ತದೆ. ತಮಗೆ ದೊರೆತ ಹೊಸ ಆಯುಧಗಳನ್ನೆಲ್ಲ ರಾಜನ ಮುಂದೆ ಪ್ರದರ್ಶಿಸುವರು. ಇಂದಿಗೂ ಗಣರಾಜ್ಯೋತ್ಸವ ಪರೇಡ್ನಲ್ಲಿ ಸೇನೆಗೆ ಸಿಕ್ಕಿರುವ ಹೊಸ ಆಯುಧಗಳನ್ನು ಪ್ರದರ್ಶಿಸಲಾಗುತ್ತದೆ. ಪ್ರದರ್ಶನದ ನಂತರ, ಅವರು ವಾದ್ಯಗಳು ಮತ್ತು…
ಬೆಂಗಳೂರು: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆಗಳ ರದ್ದು ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಆಡಳಿತ ಸುಧಾರಣೆಗಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ ಭಾಸ್ಕರ್ ಶಿಫಾರಸು ಜಾರಿಗೆ ಕ್ರಮ ಕೈಗೊಳ್ಳಲಾಗಿದೆ. ಹಿಂದಿನ ವೇತನ ಆಯೋಗದ ಎರಡನೇ ವರದಿಯಲ್ಲಿ ಕಾರ್ಯಾಚರಣೆ ವೃಂದ ಬಲಪಡಿಸಬೇಕು, ಸಹಾಯಕ ಸಿಬ್ಬಂದಿ ವೃಂದ ಕಡಿಮೆ ಮಾಡಬೇಕೆಂಬ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸಹಕಾರ ಇಲಾಖೆಯಲ್ಲಿ 300ಕ್ಕೂ ಹೆಚ್ಚು ಹುದ್ದೆಗಳನ್ನು ರದ್ದು ಮಾಡಲಾಗುತ್ತೆ. ಇವುಗಳಲ್ಲಿ 50 ದ್ವಿತೀಯ ದರ್ಜೆ ಸಹಾಯಕರು, 200 ಡಿ ಗ್ರೂಪ್ ನೌಕರರು, 32 ಶೀಘ್ರ ಲಿಪಿಕಾರರು, 30 ಡೇಟಾ ಎಂಟ್ರಿ ಆಪರೇಟರ್ ಗಳು ಸೇರಿದ್ದಾರೆ. ವಿವಿಧ ಇಲಾಖೆಗಳಲ್ಲಿ ಶೇ. 34 ರಷ್ಟು ಹುದ್ದೆಗಳು ಖಾಲಿ ಇವೆ. ಮಂಜೂರಾದ 7.69 ಲಕ್ಷ ಹುದ್ದೆಗಳಿದ್ದು, 5.11 ಲಕ್ಷ ಮಂದಿ ನೌಕರರಿದ್ದಾರೆ. 2.58 ಲಕ್ಷ ಖಾಲಿ ಹುದ್ದೆಗಳು ಇವೆ ಎಂದು ಹೇಳಲಾಗಿದೆ.ಅನಗತ್ಯ ಹುದ್ದೆಗಳನ್ನು ರದ್ದು ಮಾಡಲಾಗುತ್ತಿದ್ದು, ಸರ್ಕಾರದ ಮೇಲಿನ ಆರ್ಥಿಕ ಹೊರೆ ತಗ್ಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ದೇವನಹಳ್ಳಿ: ಆತ್ಮಹತ್ಯೆ ಮಾಡಿಕೊಳ್ಳಲು ಮರವೇರಿದ ಯುವಕ, ಮರಕ್ಕೆ ಕಟ್ಟಿದ ಪಂಚೆ ಹರಿದು ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ನಗರದ ತಾಲೂಕು ಕಚೇರಿ ವೃತ್ತದ ಬಳಿ ನಡೆದಿದೆ. ಮರಕ್ಕೆ ಹತ್ತಿ ಪಂಚೆಯಲ್ಲಿ ನೇಣು ಹಾಕಿಕೊಳ್ಳಲು ಮುಂದಾಗಿದ್ದ ಯುವಕ ಕೊನೆಯ ಕ್ಷಣದಲ್ಲಿ ನೇಣಿಗೆ ಕೊರಳೊಡ್ಡುವಾಗ ಪಂಚೆಯೇ ಹರಿದುಬಿದ್ದಿದೆ. ಸುಮಾರು 25 ವರ್ಷದ ಯುವಕನ ತಲೆಗೆ ತೀವ್ರ ಪೆಟ್ಟಾದ ಕಾರಣ ರಕ್ತಸ್ರಾವವಾಗಿ ಪ್ರಾಣ ಹೋಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy