Author: admin

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1137 ಸಿವಿಲ್ ಕಾನಸ್ಟೇಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅಕ್ಟೋಬರ್ 20 ರಿಂದ ನವೆಂಬರ್ 21 ರವರೆಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ನಲ್ಲಿ ಅಧಿಕೃತ ಬ್ಯಾಂಕ್ ಶಾಲೆಗಳಲ್ಲಿ ಶುಲ್ಕ ಪಾವತಿ ಮಾಡಲು ನವೆಂಬರ್ 23 ಕೊನೆಯ ದಿನಾಂಕವಾಗಿದೆ. ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು. ಹುದ್ದೆಗಳ ಸಂಖ್ಯೆ : ಒಟ್ಟು 1137 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ 21/11/2022 ಹೊಂದಿರಬೇಕು. ವಯೋಮಾನ : ದಿನಾಂಕ 21 ನವೆಂಬರ್, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ, ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು…

Read More

ಕೊಪ್ಪಳ:  ಬಿಜೆಪಿ ಸಂಕಲ್ಪ ಯಾತ್ರೆಯಲ್ಲೂ ಸಹ ಕಳ್ಳರು ತಮ್ಮ ಕರಾಮತ್ತು ತೋರಿಸಿದ್ದಾರೆ. ಜಿಲ್ಲೆಯ ಕುಷ್ಟಗಿಯಲ್ಲಿ ಆಯೋಜಿಸಿದ್ದ ಜನಸಂಕಲ್ಪಯಾತ್ರೆಯಲ್ಲಿ ಹಣ,‌ ಮೊಬೈಲ್ ಕಳ್ಳತನವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ನೂರಾರು ಪೊಲೀಸರು ಇದ್ದರೂ ಸಹ ನಾಲ್ವರು ಪತ್ರಕರ್ತರು ಸೇರಿ 26 ಜನರ ಹಣ,‌ ಮೊಬೈಲ್ ಕಳ್ಳತನವಾಗಿದ್ದು, ಈ ಬಗ್ಗೆ 26 ಜನರು ಕುಷ್ಟಗಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಭೆಯಲ್ಲಿ ಬಹಳಷ್ಟು ಜನಸಂಖ್ಯೆ ಸೇರಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು, ಸಮಾವೇಶಕ್ಕೆ ಆಗಮಿಸಿದ್ದವರ ಹಣ,‌ ಮೊಬೈಲ್ ಕಳ್ಳತನ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೈಲಹೊಂಗಲ: ಕೃಷಿ ಚುಟುವಟಿಕೆಗೆ ಮಾಡಿದ ಸಾಲ ಮಾಡಿ ಅದನ್ನು ತೀರಿಸಲಾಗದೆ ಬೆಳಗಾವಿಯ ವಿನಾಯಕ ನಗರದಲ್ಲಿ ತನ್ನ ಬಾಡಿಗೆ ಮನೆಯಲ್ಲಿ ನಿನ್ನೆ ತನ್ನ ಒಂದು ವರ್ಷದ ಮಗುವಿಗೆ ಕಟ್ಟಿದ್ದ ಜೋಳಿಗೆಗೆ ನೇಣು ಹಾಕಿಕೊಂಡು ರೈತನೋರ್ವ ದಾರುಣ ಸಾವು ಕಂಡಿದ್ದಾನೆ. ಸಮೀಪದ ಹೊಸೂರ ಗ್ರಾಮದ ಯುವ ರೈತ ರಾಜಶೇಖರ ಫಕೀರಪ್ಪ ಬೋಳೆತ್ತಿನ (34) ಮೃತ ದುರ್ದೈವಿ. ಗ್ರಾಮದಲ್ಲಿ ತನ್ನ ತಂದೆಯ‌ ಹೆಸರಿನಲ್ಲಿದ್ದ ಜಮಿನಿನಲ್ಲಿ ಕೃಷಿ ಮಾಡಿ ಅತಿವೃಷ್ಟಿ ಹಾಗೂ ಕೊರೊನಾ ಹಾವಳಿ ಮತ್ತು ಈ ವರ್ಷದ ವಿಪರೀತ ಮಳೆಯಿಂದ ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್ ಬೆಳೆಯು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಕಂಗಾಲಾಗಿದ್ದಾರೆ. ತಂದೆಯ ಹೆಸರಿನಲ್ಲಿ ಕೈಗಡ, ಬ್ಯಾಂಕ್ ಮತ್ತು ಇದ್ದ ಜಮೀನಿನಲ್ಲಿ ಕೆಲ ಭಾಗ ಬೇರೆಯವರಿಗೆ ಗಿರವಿ ಇಟ್ಟು ಲಕ್ಷಾಂತರ ರೂಪಾಯಿ ಮಾಡಿದ ಸಾಲಬಾಧೆಗಳಿಂದ ಹೆದರಿ ತನ್ನ ಮಗನ ಪ್ರಥಮ ಹುಟ್ಟುಹಬ್ಬ ಆಚರಿಸಿ ಮರುದಿನವೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಬೆಂಗಳೂರಿನಲ್ಲಿ ಡಿನೋಟಿಫಿಕೇಶನ್ ಅಕ್ರಮ ಆರೋಪ ಸಂಬಂಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಸಿದ್ದಾಪುರ ಮತ್ತು ಭೂಪಸಂದ್ರದಲ್ಲಿ ಸಿದ್ದಾಪುರ-200 ಕೋಟಿ ಅಕ್ರಮ ಮತ್ತು ಭೂಪಸಂದ್ರದಲ್ಲಿ 350 ಕೋಟಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಈಗ ಡಿನೋಟಿಫಿಕೇಶನ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳ ಸಮೇತ ಬಿಜೆಪಿ ನಾಯಕ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ಸತೀಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಕಡೆಗಣಿಸುವ ಮೂಲಕ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಬುಧವಾರ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ 3ನೇ ರೈಲ್ವೆ ಗೇಟ್ ಫ್ಲೈ ಓವರ್ ಉದ್ಘಾಟನೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬಹಿಷ್ಕರಿಸಿದರು. ರೈಲ್ವೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರನ್ನೂ ಕಡೆಗಣಿಸುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾನು ಕಾರ್ಯಕ್ರಮಕ್ಕೆ ಹಾಜರಾಗದೆ ನನ್ನ ಪ್ರತಿಭಟನೆಯನ್ನು ದಾಖಲಿಸುತ್ತಿದ್ದೇನೆ. ಈ ಕುರಿತು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕೋರಲಾಗುವುದು ಎಂದು ಚನ್ನರಾಜ ಹಟ್ಟಿಹೊಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಂಡ್ಯ: ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ಧ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಾಂತರಾಜು ಬಂಧಿತ ಆರೋಪಿ. 9 ವರ್ಷದ ಬಾಲಕಿ ನಿನ್ನೆ ಟ್ಯೂಷನ್ ಗೆಂದು ತೆರಳಿದ್ದಳು. ಬಾಲಕಿ ವಾಪಸ್ ಮನೆಗೆ ಬಾರದೆ ಇದ್ದಾಗ ಕುಟುಂಬದವರು ಹುಡುಕಾಟ ನಡೆಸಿದ್ದರು. ನಂತರ ಸಂಪ್ ನಲ್ಲಿ ಬಾಲಕಿಯ ಶವ ಅನುಮಾನಸ್ಪದವಾಗಿ ಪತ್ತೆಯಾಗಿತ್ತು. ಇದೀಗ ಟ್ಯೂಷನ್ ನಡೆಸುತ್ತಿದ್ದ ಕಾಂತರಾಜು ಎಂಬುವವನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.  ಬಾಲಕಿಯ  ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಬಳಿಕ ಆರೋಪಿ ಕಾಂತರಾಜು ಶವವನ್ನ ಸಾಗಿಸಲು ಯತ್ನಿಸಿದ್ದು ನಂತರ ಸಂಪ್ ನಲ್ಲಿ ಎಸೆದು ಪರಾರಿಯಾಗಿದ್ದ ಎನ್ನಲಾಗಿದೆ. ಇದೀಗ ಆರೋಪಿ ಕಾಂತರಾಜುನನ್ನ ಮಳವಳ್ಳಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಹಿರಿಯೂರು:  ನಗರದ  ಗಾಂಧಿ ಸರ್ಕಲ್ ಬಳಿಯ ನೆಹರು ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನೂ ಒದಗಿಸದೇ ಹಿರಿಯೂರು ನಗರಸಭೆ ನಿರ್ಲಕ್ಷ್ಯವಹಿಸಿದೆ ಎಂದು ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾರುಕಟ್ಟೆಯನ್ನು ನಿರ್ವಹಿಸುವಲ್ಲಿ ಹಿರಿಯೂರು ನಗರ ಸಭೆ ವಿಫಲವಾಗಿದ್ದು, ನಗರದಲ್ಲಿ ಮಳೆ ಸುರಿದರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳಿಗೆ ನಿಂತುಕೊಳ್ಳಲು ಕೂಡ ಯಾವುದೇ ವ್ಯವಸ್ಥೆಗಳಿಲ್ಲ. ನಗರಸಭೆಗೆ ವ್ಯಾಪಾರಿಗಳು ಬಾಡಿಗೆ ಪಾವತಿ ಮಾಡುತ್ತಿದ್ದರೂ, ಕನಿಷ್ಠ ಮೂಲಭೂತ ಸೌಲಭ್ಯ ಒದಗಿಸದೇ ನಿರ್ಲಕ್ಷ್ಯವಹಿಸಲಾಗಿದೆ ಅನ್ನೋ ಆರೋಪಗಳು ಕೇಳಿ ಬಂದಿವೆ. ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಮಾರುಕಟ್ಟೆಯ ಬೀದಿ ಬದಿ ವ್ಯಾಪಾರಸ್ಥರ ಪಾಡು ಹೇಳ ತೀರದಂತಾಗಿದೆ. ಮಳೆ ಸುರಿದರೆ, ಮಾರುಕಟ್ಟೆಯ ದುಸ್ಥಿತಿ ನೋಡಲಾಗದೇ ಸಾರ್ವಜನಿಕರು ಮಾರುಕಟ್ಟೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಕಂಡೂ ಕಾಣದಂತಿರುವ ನಗರಸಭೆ ಇನ್ನಾದರೂ ಎಚ್ಚೆತ್ತುಕೊಂಡು, ಮಾರುಕಟ್ಟೆಗೆ ಮೂಲಭೂತ ಸೌಕರ್ಯ ಒದಗಿಸಲು ಮುಂದಾಗಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇನ್ನೂ ನೆಹರು ಮಾರುಕಟ್ಟೆ ದುಸ್ಥಿತಿಯ ಕುರಿತು ಜನಪ್ರತಿನಿಧಿಗಳು ಮೌನವಾಗಿದ್ದಾರೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದು, ತಕ್ಷಣವೇ ಜನ ಪ್ರತಿನಿಧಿಗಳು ಈ ಬಗ್ಗೆ…

Read More

ಮಧುಗಿರಿ: ತಾಲೂಕು ಕಸಬಾ  ಹೋಬಳಿ ಕಂಬದಹಳ್ಳಿ  ಗ್ರಾಮದಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ ಮತ್ತು ತುಮುಲ್ ನಿರ್ದೇಶಕರಾದ  ಕೊಂಡವಾಡಿ ಚಂದ್ರಶೇಖರ್  ಟೇಪ್   ಕತ್ತರಿಸುವ ಮೂಲಕ   ಹಾಲು  ಉತ್ಪಾದಕರ ನೂತನ ಸಂಘದ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ.ವಿ.ವೀರಭದ್ರಯ್ಯ, ರೈತರು ಆರ್ಥಿಕವಾಗಿ ಮುಂದುವರಿಯಲು ಹಾಲು ಉತ್ಪಾದನೆ ಬಹಳ ಮುಖ್ಯವಾಗಿದ್ದು, ಬೇಸಾಯ ಕೈಕೊಟ್ಟ ಸಂದರ್ಭದಲ್ಲಿ ಉಪಕಸುಬುಗಳಿಂದ ಹಳ್ಳಿಗಳಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತದೆ  ಎಂದರು. ಮಳೆಯನ್ನೇ ನಂಬಿಕೊಂಡು ವ್ಯವಸಾಯ ಮಾಡುವವರ ಪರಿಸ್ಥಿತಿ ಕಷ್ಟಕರವಾಗಿದೆ. ಹೈನುಗಾರಿಕೆಯು ಬಹಳ ದೊಡ್ಡ ಉದ್ಯಮವಾಗಿ ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿ ಕೊಟ್ಟಿದೆ. ರೈತರಿಗೆ ವ್ಯವಸಾಯ ಕೈ ಕೊಟ್ಟಾಗ ಹಾಲು ಉತ್ಪಾದನೆಯು ಸಹಕಾರಿಯಾಗಿದೆ. ಕೊಂಡವಾಡಿ ಚಂದ್ರಶೇಖರ್ ರವರು ತುಮುಲ್ ಅಧ್ಯಕ್ಷರಾಗಿದ್ದ ಸಂಧರ್ಭದಲ್ಲಿ ಹಾಲು ಉತ್ಪಾದಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಹಾಗೂ ರೈತರು ಸಹಕಾರ…

Read More

ಕೊರಟಗೆರೆ: ವಿದ್ಯುತ್ ಕ್ಷೇತ್ರವನ್ನು ಖಾಸಗಿಕರಣಗೊಳಿಸಿ ಕೃಷಿ ಪಂಪ್ ಸೆಟ್ ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸದಂತೆ ರಾಜ್ಯ ರೈತ ಸಂಘ (ಪುಟ್ಟಣ್ಣ ನವರ ಬಣದಿಂದ) ಕೊರಟಗೆರೆ ತಹಶೀಲ್ದಾರ್ ಮುಖೇನ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು. ವಿದ್ಯುತ್ ಕ್ಷೇತ್ರದ ಖಾಸಗಿಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಕಚೇರಿ ಮುಂದೆ  ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ರಂಗಹನುಮಯ್ಯ, ಕೃಷಿ ಪಂಪ್ಸೆಟ್ಟುಗಳಿಗೆ ಮೀಟರ್ ಅಳವಡಿಸುವ ಹುನ್ನಾರದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದೆ ಸರಿಯಾಬೇಕು. ಅಕ್ರಮ ಸಕ್ರಮ ಯೋಜನೆ ಅಡಿಯಲ್ಲಿ ನೋಂದಣಿಯಾಗಿರುವ ಎಲ್ಲಾ ಪ್ರಕರಣಗಳಲ್ಲಿ ಟ್ರಾನ್ಸ್ ಫಾರಂನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಹಾಗೂ ಬಾಕಿ ಎಲ್ಲಾ ವಿದ್ಯುತ್ ಬಿಲ್ಲುಗಳನ್ನು ಮನ್ನಾ ಮಾಡಬೇಕು. ಕೇಂದ್ರ ಸರ್ಕಾರ ಅಡಿಕೆ ಆಮದಿನ ಮೇಲೆ ಹೆಚ್ಚು ಸುಂಕ ವಿಧಿಸಿ, ಭೂತಾನ್ ಸೇರಿದಂತೆ ಬೇರೆ ಬೇರೆ ರಾಷ್ಟಗಳಿಂದ ಆಮದು ಮಾಡಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ತಿಳಿಸಿದರು. ನಂತರ ಕರ್ನಾಟಕ ರಾಜ್ಯ…

Read More

67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯಲಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ರಾಜ್ಯದ 25 ಲಕ್ಷ ವಿದ್ಯಾರ್ಥಿಗಳು ಮತ್ತು 2 ಲಕ್ಷ ಸ್ವಸಹಾಯ ಸಂಘಗಳ 29 ಲಕ್ಷ ಸದಸ್ಯರು ಸೇರಿದಂತೆ ತಮ್ಮ ಇಲಾಖೆಗಳ ವ್ಯಾಪ್ತಿಯಿಂದ 54 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಲಿದ್ದಾರೆ ಎಂದು ಉನ್ನತ ಶಿಕ್ಷಣ ಮತ್ತು ಜೀವನೋಪಾಯ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲಕುಮಾರ್ ಅವರೊಂದಿಗೆ ಮಂಗಳವಾರ ಅವರು ಸಭೆ ನಡೆಸಿದರು.  ಬಳಿಕ ಮಾತನಾಡಿದ  ಸಚಿವ ಅಶ್ವಥ್ ನಾರಾಯಣ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆರಿಸಿರುವ 6 ಹಾಡುಗಳನ್ನು ರಾಜ್ಯೋತ್ಸವದಂದು ರಾಜ್ಯದ ಎಲ್ಲಾ ಸರಕಾರಿ ಮತ್ತು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಹಾಡಲಾಗುವುದು. ಜತೆಗೆ ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯೆಯರು ಕೂಡ ಈ ಸಂಭ್ರಮದ ಭಾಗವಾಗಲಿದ್ದಾರೆ ಎಂದರು. ಹೋದ ವರ್ಷದ ರಾಜ್ಯೋತ್ಸವದಲ್ಲಿ ‘ಮಾತಾಡ್ ಮಾತಾಡು ಕನ್ನಡ’ ಕಾರ್ಯಕ್ರಮದಲ್ಲಿ 22 ಲಕ್ಷ ಜನ ಪಾಲ್ಗೊಂಡಿದ್ದರು. ಈ ವರ್ಷ ‘ಕೋಟಿ…

Read More