Subscribe to Updates
Get the latest creative news from FooBar about art, design and business.
- ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
- ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
- 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
- ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
- ಬೆಂಗಳೂರು: ಆರ್ಟ್ ಆಫ್ ಲಿವಿಂಗ್ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
- ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
- ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
- ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಕಲಬುರಗಿ: ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಈ ತಿಂಗಳಲ್ಲಿ ಮೋದಿಯವರ ಎರಡನೇ ರಾಜ್ಯ ಭೇಟಿ ಇದಾಗಿದೆ. ಪ್ರಧಾನಿಯ ಭೇಟಿಗೆ ಬಿಜೆಪಿ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಮಾಲ್ಖೇಡ್ ನಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿಯವರು ತಾತ್ಕಾಲಿಕವಾಗಿ ನಿರ್ಮಿಸಿರುವ ಮನೆಗಳ ಆಸ್ತಿ ಪತ್ರಗಳನ್ನು 51,900 ತಾಂಡಾ ನಿವಾಸಿಗಳಿಗೆ ವಿತರಿಸಲಿದ್ದಾರೆ. ಕಲಬುರಗಿಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು. ಕಾರ್ಯಕ್ರಮಕ್ಕಾಗಿ ಬೃಹತ್ ಹೆಲಿಪ್ಯಾಡ್ ನಿರ್ಮಿಸಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿಯ ತಮಿಳುನಾಡಿನ ಕಾಂಚೀಪುರಂನಲ್ಲಿ ನಡೆದಿದೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ ಖಾಸಗಿ ಶಾಲೆಯ ಆವರಣದಲ್ಲಿ ಮಾತನಾಡುತ್ತಿದ್ದಾಗ ಐದು ಜನರ ತಂಡವು ಸಂತ್ರಸ್ತೆ ಮತ್ತು ಸ್ನೇಹಿತನಿಗೆ ಚಾಕು ತೋರಿಸಿ ಬೆದರಿಸಿ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಕಾಮುಕರಿಂದ ತಪ್ಪಿಸಿಕೊಂಡ ವಿದ್ಯಾರ್ಥಿ ಮತ್ತು ಆಕೆಯ ಸ್ನೇಹಿತ ತಮ್ಮ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ನಂತರ ಕುಟುಂಬಸ್ಥರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕತ್ತಲಾಗಿದ್ದ ಕಾರಣ ಯಾರನ್ನೂ ಗುರುತಿಸಲು ಸಾಧ್ಯವಾಗಲಿಲ್ಲ ಎಂದು ವಿದ್ಯಾರ್ಥಿ ಪೊಲೀಸರಿಗೆ ತಿಳಿಸಿದ್ದಾಳೆ. ಆದರೆ ಆರೋಪಿಗಳಲ್ಲಿ ಒಬ್ಬರು ಇನ್ನೊಬ್ಬರಿಗೆ ಕರೆ ಮಾಡಿದಾಗ ವಿಮಲ್ ಎನ್ನುತ್ತಿರುವುದು ಕೇಳುತ್ತಿತ್ತು ಎಂದು ಹೇಳಿದ್ದಾಳೆ. ಸಂತ್ರಸ್ತೆಯಿಂದ ಮಾಹಿತಿ ಪಡೆದ ಪೊಲೀಸರು ವಿಮಲನನ್ನು ವಿಪಡು ಗ್ರಾಮದಲ್ಲಿ ಪತ್ತೆ ಹಚ್ಚಿದ್ದಾರೆ.. ವಿಮಲನನ್ನು ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಿದ್ದಾರೆ. ಆರೋಪಿ ವಿಮಲ್ ನನ್ನು ಬಾಯಿ ಬಿಡಿಸಿದ ತಮಿಳುನಾಡು ಪೊಲೀಸರು ಇತರ ನಾಲ್ವರನ್ನು ಬಂಧಿಸಿದ್ದಾರೆ.…
ವಿಜಯನಗರ : ಈ ಬಾರಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ, ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹೊಸಪೇಟೆಯಲ್ಲಿ ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ, ಈ ಬಾರಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ, ಕೊರೊನಾದಿಂದ ಯಾವುದೇ ಅಂತಹ ತೊಂದರೆಯಾಗಲ್ಲ. ಎರಡ್ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರಲಿದೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ ಎಂದಿದ್ದಾರೆ. ಸಂಕ್ರಾಂತಿ, ಯುಗಾದಿಯ ಬಳಿಕ ಮತ್ತೆ ಮಳೆಯಾಗುತ್ತದೆ. ಕಳೆದ ಬಾರಿ ಬಂದ ಹಾಗೆ ಈ ಬಾರಿ ಕೂಡ ಅದೇ ರೀತಿ ಮಳೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಸಂಗೊಳ್ಳಿ ರಾಯಣ್ಣ ಅವರ ಪ್ರಾಮಾಣಿಕತೆ, ದೇಶಪ್ರೇಮ, ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂಗೊಳ್ಳಿ ರಾಯಣ್ಣ ಉತ್ಸವ ಮುಂಬರುವ ದಿನಗಳಲ್ಲಿ ರಾಜ್ಯಮಟ್ಟದ ಉತ್ಸವವಾಗಿ ಬೆಳೆಯಲಿದೆ ಎಂದು ಬೈಲಹೊಂಗಲ ವಿಧಾನಸಭಾ ಮತಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ (ಜ.12) ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ -2023 ರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಕೇವಲ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮ ನಡೆಸುವುದಲ್ಲ. ಸಂಗೊಳ್ಳಿ ರಾಯಣ್ಣ ಉತ್ಸವದಲ್ಲಿ ಎಲ್ಲರೂ ಭಾಗವಹಿಸಿ ರಾಯಣ್ಣನಿಗೆ ಗೌರವ ಸೂಚಿಸುವ ಉದ್ದೇಶವಾಗಿದೆ ಎಂದು ತಿಳಿಸಿದರು. ಇತಿಹಾಸ ಪರಿಚಯಕ್ಕೆ ರಾಕ್ ಗಾರ್ಡನ್ ನಿರ್ಮಾಣ: ರಾಯಣ್ಣನ ಇತಿಹಾಸ ಪರಿಚಯಿಸಲು ಸಂಗೊಳ್ಳಿಯಲ್ಲಿ ಸುಮಾರು 13 ಕೋಟಿ ವೆಚ್ಚದಲ್ಲಿ ಸಂಗೊಳ್ಳಿ ರಾಯಣ್ಣ ರಾಕ್ ಗಾರ್ಡನ್ ನಿರ್ಮಾಣ ಮಾಡಲಾಗಿದೆ. ಅದೇ ರೀತಿಯಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ನಿರ್ಮಾಣ ಮಾಡಲಾಗಿದೆ ಈಗಾಗಲೇ ಶಾಲೆಯಲ್ಲಿ…
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಹೊಸ ದಿಕ್ಕು ಪಡೆದುಕೊಂಡಿದೆ. ಇಂದಿನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೀಸಲಾತಿ ಸಿಗುವವರೆಗೆ ನಿರಂತರವಾಗಿ ಹೋರಾಟ ನಡೆಸಲು ನಿರ್ಧರಿಸಲಾಗಿದೆ. 2ಡಿ ಮೀಸಲಾತಿ ಸಮಾಜದ ಅಸಮಾಧಾನಕ್ಕೆ ಕಾರಣವಾಗಿದ್ದು, ಅದನ್ನು ತಿರಸ್ಕರಿಸಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ಸಲ ಕೊಟ್ಟ ಮಾತು ತಪ್ಪಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಅಣಿಯಾಗಿದ್ದೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಸಂಪೂರ್ಣ ವರದಿ ಕೈ ಸೇರಬೇಕು. ಸರ್ಕಾರ 2ಎ ಮೀಸಲಾತಿ ಘೋಷಿಸುವವರೆಗೂ ನಿರಂತರ ಹೋರಾಟ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠಾಧಿಪತಿ ಜಯಮೃತುಂಜಯ ಸ್ವಾಮೀಜಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಮ್ಮನೇ ಅಣ್ಣನ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಸೋನಿಯಾ ಗಾಂಧಿ ವಾರ್ಡ್ ನಲ್ಲಿ ನಡೆದಿದೆ. ಪರಿಷತ್ ರಾಜ್ (28) ಕೊಲೆಯಾದ ವ್ಯಕ್ತಿ .ನಿತ್ಯ ಕುಡಿದು ಬಂದು ಬಂದು ಕಿರಿಕ್ ಮಾಡುತ್ತಿದ್ದು, ಇದೇ ವಿಚಾರವಾಗಿ ಸಹೋದರ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿದ್ದ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ: ಜನವರಿ 31 ರಂದು ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿ ಏಪ್ರಿಲ್ 6 ರವರೆಗೂ ನಡೆಯಲಿದೆ. ಫೆಬ್ರವರಿ 1 ರಂದು ಬಜೆಟ್ ಮಂಡಿಸಲಾಗುತ್ತದೆ. ಒಟ್ಟು 27 ದಿನಗಳ ಕಾಲ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಧಿವೇಶನದ ಮೊದಲ ಅವಧಿ ಫೆಬ್ರವರಿ 14ರಂದು ಮುಕ್ತಾಯವಾಗಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಗುಂಡ್ಲುಪೇಟೆ: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಳ್ಳದಕೇರಿ ನಿವಾಸಿ ಪವಿತ್ರಾ(27) ಮೃತ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಂದು ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ, ಗುಂಡ್ಲುಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ತುರುವೇಕೆರೆ.ತಾಲೂಕಿನ ಕಸಬಾ ಹೋಬಳಿ, ಕೊಡಗಿಹಳ್ಳಿ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸೂಳೆಕೆರೆ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕರಾದ ಮಸಾಲ ಜಯರಾಮ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಗುದ್ದಲಿ ಪೂಜೆಯಲ್ಲಿ ಆದಿಜಾಂಭವ ಸಮಾಜದ ನಿವೃತ್ತ ಮುಖ್ಯೋಪಾಧ್ಯಾಯರಾದ ಆರ್. ಚಂದ್ರಯ್ಯ ಕೂಡ ಆಗಮಿಸಿದ್ದರು, ಪೂಜೆಯ ನಂತರ ಆರ್ ಚಂದ್ರಯ್ಯ ಮನೆಗೆ ಭೇಟಿಕೊಟ್ಟ ಶಾಸಕ ಮಸಾಲ ಜಯರಾಮ್ ಅವರ ಮನೆಯಲ್ಲಿ ತಂಪು ಪಾನೀಯ ಬಿಸ್ಕೆಟ್ ಸೇವಿಸಿದರು. ತದನಂತರ ಅವರ ಗೃಹದಲ್ಲಿ ಕೆಲವು ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರುಗಳು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಇದೇ ವೇಳೆ ಮಾತನಾಡಿದ ಆರ್.ಚಂದ್ರಯ್ಯ, ಶಾಸಕರು ನಮ್ಮನ್ನು ಗುರುತಿಸಿ ನಮ್ಮ ಸಮಸ್ಯೆಗಳನ್ನು ಆಲಿಸಿ ಅಭಿವೃದ್ಧಿಯತ್ತ ಗಮನ ಕೊಡುತ್ತಿದ್ದು, ಇಂದು ಕೂಡ ನಮ್ಮ ಊರಿನಲ್ಲಿ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಹಾಗಾಗಿ ನಾವು ಬಿಜೆಪಿ ಸಿದ್ದಾಂತವನ್ನು ಒಪ್ಪಿ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಿದ್ದೇವೆ ಎಂದು ಹೇಳಿದರು, ಇದೇ ಸಮಯದಲ್ಲಿ ಆದಿ ಜಾಂಬವ ಸಮಾಜದ ನಾಗರಾಜು, ಬಸವರಾಜು, ಮುನಿಸ್ವಾಮಿ, ಇನ್ನು ಅನೇಕ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ…
ತುರುವೇಕೆರೆ: ಪಟ್ಟಣದ ದಬ್ಬೇಘಟ್ಟ ರಸ್ತೆಗೆ ಹೊಂದಿಕೊಂಡಿರುವ ಮುತ್ತುರಾಯನಗರ ಬಡಾವಣೆಯಲ್ಲಿ ಮಂಜುಳಾ ಅನಂತ್ ಕುಮಾರ್ ಎಂಬುವರ ಮನೆಗೆ ಹಾಡಹಗಲೇ ಕನ್ನ ಹಾಕಿರುವ ಘಟನೆ ನಡೆದಿದೆ ಮಧ್ಯಾಹ್ನ ಸುಮಾರು 2:30 ರಿಂದ ಸಂಜೆ 5:00 ಒಳಗೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಕನ್ನ ಹಾಕಿದ ಕಳ್ಳರು, 100 ರಿಂದ 110 ಗ್ರಾಂ ಚಿನ್ನ, ಒಂದು ಕೆ.ಜಿ. ಬೆಳ್ಳಿ 2,70,000 ನಗದನ್ನು ದೋಚಿ ಪರಾರಿಯಾಗಿದ್ದಾರೆ. ಮನೆಯ ಮಾಲೀಕರಾದ ಮಂಜುಳಾರವರು ಎರಡು ದಿನಗಳ ಹಿಂದೆ ಯಾವುದೋ ಕಾರ್ಯನಿಮಿತ್ತ ತಮ್ಮ ಸಂಬಂಧಿಕರ ಊರಿಗೆ ತೆರಳಿದ್ದಾರೆ ಮನೆಯಲ್ಲಿ ಅವರ ಪತಿ ಆನಂದ್ ಕುಮಾರ್ ಒಬ್ಬರೇ ಇದ್ದು, ಇವರು ಬೆಸ್ಕಾಂ ಇಲಾಖೆಯಲ್ಲಿ ಮೀಟರ್ ರೀಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಎಂದಿನಂತೆ ಅವರು ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದಾರೆ . ಮಧ್ಯಾಹ್ನ 2 ಗಂಟೆಗೆ ಮನೆಗೆ ಊಟಕ್ಕೆಂದು ಬಂದಿದ್ದಾರೆ, ಊಟ ಮುಗಿಸಿಕೊಂಡು ನಂತರ ಮನೆಯ ಬೀಗ ಹಾಕಿಕೊಂಡು ಮೀಟರ್ ರೀಡಿಂಗ್ ಕೆಲಸಕ್ಕೆ ಹೊರಗೆ ಹೋಗಿದ್ದಾರೆ. ಇದನ್ನೇ ಕಾದು ಕುಳಿತು ಕಳ್ಳರು ಮನೆಯ ಮುಖ್ಯ ದ್ವಾರದ…