Author: admin

ಕೋಡಿಗೇನಹಳ್ಳಿ: ಅಖಿಲ ಭಾರತ ರಾಷ್ಟ್ರೀಯ ಔಷಧ ವ್ಯಾಪಾರಿಗಳ ಮುಷ್ಕರ ಪ್ರಯುಕ್ತ ನಾವು ಗ್ರಾಮದಲ್ಲಿ ವ್ಯಾಪಾರವಹಿವಾಟು ಬಂದ್ ಮಾಡಿದ್ದು ಎನ್‌ ಐಸಿಡಿಗೆ ಬೆಂಬಲವಾಗಿದ್ದೇವೆ ಎಂದು ರಾಧಕೃಷ್ಣರೆಡ್ಡಿ ತಿಳಿಸಿದರು ಕೋಡಿಗೇನಹಳ್ಳಿ ಗ್ರಾಮದಲ್ಲಿ ಎನ್‌ ಐಸಿಡಿ ಬಂದ್ ಬೆಂಬಲಿಸಿ ಮಾತನಾಡಿದ ಇವರು ಆನ್‌ಲೈನ್ ಮೂಲಕ ಔಷಧ ವ್ಯಾಪಾರ ನಿಲ್ಲಿಸಬೇಕು ಇದರಿಂದ ಎನ್.ಡಿ.ಪಿ.ಎಸ್. ಅಮಲು ಬರುವ ಔಷಧಗಳು ಸಾರ್ವಜನಿಕರಿಗೆ ಸಿಗದಂತೆ ಮಾಡಬಹುದು. ಈ ಸಂಬಂಧ ಕೇಂದ್ರ ಸರ್ಕಾರ ಕೋವಿಡ್ ಸಮಯದಲ್ಲಿ ಹೊರಡಿಸಿರುವ ಆದೇಶಗಳನ್ನು ಹಿಂಪಡೆಯಬೇಕು, ಜಿ.ಎಸ್.ಆರ್.817 ದಿ:20–08–2018 ಮತ್ತು ಜಿ.ಎಸ್.ಆರ್220. ದಿ:26—03–2020 ಹಾಗೆ ಕಾರ್ಪೋರೇಟ್ ಕಂಪನಿಗಳಿಂದ ನಡೆಯುತ್ತಿರುವ ಡಿಸ್ಕೌಂಟ್ ವ್ಯಾಪಾರ ನಿಲ್ಲಿಸಿ ದೇಶದಲ್ಲಿ ಆರೋಗ್ಯಕರ ವ್ಯಾಪಾರದ ವಾತಾವರಣ ಸೃಷ್ಟಿಸಿ ಸ್ಪೂರಿಯಸ್ ಮಿಸ್ ಬ್ರಾಂಡೆಡ್, ನಕಲಿ ಔಷಧಗಳ ಹಾವಳಿ ನಿಲ್ಲಿಸಿ ಸರಳ ಕಾನೂನುಗಳಿಂದ ನಮ್ಮೆಡನೆ ಸಹಕರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ರಾಷ್ಟ್ರೀಯ, ರಾಜ್ಯ ಹಾಗೂ ನಮ್ಮ ಜಿಲ್ಲಾ ಸಂಸ್ಥೆಗೆ ಬಂದ್‌ಗೆ ಸಮ್ಮತಿಸುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಔಷಧ ವ್ಯಾಪಾರಿಗಳಾದ ನರಸಿಂಹಮೂರ್ತಿ, ಸುದರ್ಶನ್‌ ರೆಡ್ಡಿ, ನರಸಿಂಮೂರ್ತಿ, ಪರಮೇಶ್ವರ,…

Read More

ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಅಡವಿನಾಗೇನಹಳ್ಳಿ ಗ್ರಾಮದ ಸರ್ವೆ ನಂಬರ್ 234 ರಲ್ಲಿ 4 ಎಕರೆ 28 ಗುಂಟೆ ಖಾತೆ ಮಾಡುವುದರ ಬದಲಿಗೆ ಸರ್ಕಾರಿ ಗೋಮಾಳದ ಜಮೀನು ಸೇರಿ 18 ಎಕರೆ 27 ಗುಂಟೆಗೆ ಅಕ್ರಮವಾಗಿ ಖಾತೆ ಮಾಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಗೆ ಮನವಿ ಪತ್ರ ಸಲ್ಲಿಸಿದರು. ಕೊಡಿಗೇನಹಳ್ಳಿ ಹೋಬಳಿಯ ಅಡವಿನಾಗೇನಹಳ್ಳಿ ಗ್ರಾಮದ ಸರ್ವೆ ನಂಬರ್ 234 ವಿಸ್ತೀರ್ಣ 18 ಎಕರೆ 27 ಗುಂಟೆ ಜಮೀನು ಮೂಲತಃ ಸರ್ಕಾರಿ ಗೋಮಾಳ ಜಮೀನಾಗಿದೆ. ಇದರ ಪೈಕಿ 4 ಎಕರೆ 28 ಗುಂಟೆ ಜಮೀನನ್ನು ಸಿ. ಶ್ರೀನಿವಾಸ್ ರಂಗಾಚಾರಿ ಎಂಬುವವರು ಬೆಂಗಳೂರು ಜಿಲ್ಲಾಧಿಕಾರಿ ರವರಿಂದ ಮಂಜೂರು ಮಾಡಿಸಿಕೊಂಡಿದ್ದಾರೆ. ಮಂಜೂರಾತಿಯಂತೆ ಎಂ ಆರ್ ನಂಬರ್ 15ಅ/1985-86 ರವರೆಗೆ ವಿಸ್ತೀರ್ಣ 18 ಎಕರೆ 27 ಗುಂಟೆ ಎಂದು ಜಂಟಿಯಾಗಿ ಮುಂದುವರೆದಿದ್ದು, ತದನಂತರ ಎಂ. ಆರ್.ಸಂ:15ಅ/1985/86 ನ್ನು ತಿರುಚಿ ಮಧುಗಿರಿ ತಹಸಿಲ್ದಾರ್ ರವರ ಮುಂದೆ RRT-CR1961/06-07 ರಲ್ಲಿ 4 ಎಕರೆ 28 ಗುಂಟೆ ಬದಲಿಗೆ 18…

Read More

ಕೊರಟಗೆರೆ: ಅತೀ ವೇಗ ಮತ್ತು ಅಜಾಗ್ರತೆಯಿಂದ ಸಂಚರಿಸುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲೇ ಸಾವಿಗೀಡಾದ ಘಟನೆ ಪಟ್ಟಣದ ವಡ್ಡಗೆರೆ ಬೈಪಾಸ್‌ ನಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮಧುಗಿರಿ ತಾಲೂಕಿನ ದೊಡ್ಡಹೊಸಹಳ್ಳಿ ಗ್ರಾಮದ ನಿವಾಸಿ ತಿಮ್ಮಣ್ಣ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಕೊರಟಗೆರೆ ಪಟ್ಟಣದ ಸಾದರ ಸಮುದಾಯ ಭವನದ ಮುಂಭಾಗದ ರಸ್ತೆಯಲ್ಲಿ ಟೀ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ವೇಗವಾಗಿ ಬಂದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಈ ವೇಳೆ ರಸ್ತೆಬದಿಯಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆಯೇ ಗೂಡ್ಸ್ ವಾಹನ ಉರುಳಿದ್ದು, ಅದರಡಿ ಸಿಲುಕಿದ ತಿಮ್ಮಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊರಟಗೆರೆ ಸಿಪಿಐ ಪುರುಷೋತ್ತಮ್ ಹಾಗೂ ಪಿಎಸ್‌ ಐ ತೀರ್ಥೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು: ನಗರದಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಿಸಬೇಕೆಂದು ಮಾಡಿದ ಪ್ರಸ್ತಾಪ ರೈತ ವಿರೋಧಿ ಹಾಗೂ ಜಿಲ್ಲೆಗಿರುವ ಐತಿಹಾಸಿಕ ಹೆಸರಿಗೆ ಮಸಿ ಬಳಿಯುವ ಕುತಂತ್ರವೆನಿಸಿದೆ ಎಂದು ಶಾಸಕ ಬಿ. ಸುರೇಶ್‌ ಗೌಡ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಜಿಲ್ಲೆಯಿಂದ ರಾಜಕೀಯವಾಗಿ ಎಲ್ಲವನ್ನೂ ಗಳಿಸಿದ, ಅನೇಕ ಶಿಕ್ಷಣ ಸಂಸ್ಥೆಗಳ ಒಡೆತನ ಹೊಂದಿರುವ ಸಚಿವ ಪರಮೇಶ್ವರ್ ಅವರು ಇದ್ದಕ್ಕಿದ್ದಂತೆ ಈ ಆಗ್ರಹ ಮಾಡಿರುವುದರ ಹಿಂದೆ ಈ ಸರ್ಕಾರದಲ್ಲಿ ಇರುವ ರಿಯಲ್ ಎಸ್ಟೇಟ್ ಹಿತಾಸಕ್ತಿಗಳ ಕೈವಾಡ ಎದ್ದು ಕಾಣುತ್ತದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ರಾಮನಗರ ಜಿಲ್ಲೆಯಾಗಿದ್ದು ಅವರು ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಘೋಷಿಸುವಲ್ಲಿ ಅವರಿಗೆ ಇದ್ದ ರಿಯಲ್ ಎಸ್ಟೇಟ್ ಹಿತಾಸಕ್ತಿಯೇ ಕಾರಣವಾಗಿತ್ತು ಎಂದರು. ತುಂಬೆ ಹೂವಿಗೆ ಪ್ರಸಿದ್ಧವಾಗಿದ್ದ ಕಲ್ಪತರು ನಾಡು ಎನಿಸಿರುವ ತುಮಕೂರು ಇಲ್ಲಿನ ಸಿದ್ದಗಂಗಾ ಮಠ, ಶಿವಗಂಗೆ ಬೆಟ್ಟ, ದೇವರಾಯನದುರ್ಗ,…

Read More

ತುಮಕೂರು: ತಾಲ್ಲೂಕಿನ ಗೂಳೂರು ಹೋಬಳಿ, ಗೂಳೂರು ಗ್ರಾಮದ ಸ.ನಂ. 119/2ಆ ರಲ್ಲಿ 2–16 ಗುಂಟೆ, 119/2ಬಿ ರಲ್ಲಿ 3–03 ಗುಂಟೆ, 119/2ಬಿ1 ರಲ್ಲಿ 1–05 ಗುಂಟೆ ಹಾಗೂ 119/2ಬಿ1 ರಲ್ಲಿ 1–10 ಗುಂಟೆ ಒಟ್ಟು 7–34 ಗುಂಟೆ ಜಮೀನು ಆಶ್ರಯ ನಿವೇಶನಕ್ಕೆ ರಾಜ್ಯಪಾಲರ ಹೆಸರಿಗೆ ಪಹಣಿ ಇರುತ್ತದೆ. ಇದರಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಿ ಮನೆ ಮತ್ತು ನಿವೇಶನ ಇಲ್ಲದವರಿಗೆ ಮಂಜೂರು ಮಾಡಿಕೊಡುವಂತೆ ದಲಿತ ಸೇನೆ ರಾಮ್ ವಿಲಾಸ್ ಸಂಘಟನೆ ವತಿಯಿಂದ ಮಾನ್ಯ ತುಮಕೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಪತ್ರ ಸಲ್ಲಿಸಿ ಗೂಳೂರು ಸಿದ್ದರಾಜು ಮಾತನಾಡಿ, ಮೇಲ್ಕಂಡ ಸರ್ವೇ ನಂಬರುಗಳಲ್ಲಿ ಕಳೆದ 30 ವರ್ಷಗಳಿಂದ ಹಿಂದೆ ಹಕ್ಕುಪತ್ರ ಪಡೆದಿದ್ದು, ಇಲ್ಲಿಯವರೆಗೆ ಪಂಚಾಯಿತಿಯಲ್ಲಿ ಯಾವುದೇ ತರಹದ ಪಹಣಿ ಮಾಡಿಸಿಕೊಂಡು ಮನೆ ಕಟ್ಟಿರುವುದಿಲ್ಲ ಮತ್ತು ವಾಸವೂ ಇರುವುದಿಲ್ಲ. ಈ ಹಕ್ಕು ಪತ್ರವನ್ನು ಪಡೆದಿರುವವರು ಮನೆ ಮತ್ತು ನಿವೇಶನ ಹೊಂದಿರುತ್ತಾರೆ. ಇವರುಗಳು ಆರ್ಥಿಕವಾಗಿ ಸಬಲರಾಗಿರುತ್ತಾರೆ. ಆದುದರಿಂದ ಈ ಮೇಲ್ಕಂಡ…

Read More

ಕುಣಿಗಲ್: ತಾಲೂಕಿನ ಬಿಳಿದೇವಾಲಯ ಗ್ರಾಮ ಪಂಚಾಯಿತಿಗೆ ಸೇರಿದ ಜಾಗದಲ್ಲಿ ಬಲಾಢ್ಯ ವ್ಯಕ್ತಿಗಳು ಅಕ್ರಮವಾಗಿ ನಿರ್ಮಾಣ ಮಾಡಿಕೊಂಡಿರುವ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ ಆ ಸ್ಥಳದಲ್ಲಿ ಗ್ರಂಥಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡುವಂತೆ ಒತ್ತಾಯಿಸಿ ತಾಲೂಕು ದಲಿತ ಸಂಘಟನೆಗಳ ಒಕ್ಕೂಟ, ಬೋರಲಿಂಗನಪಾಳ್ಯ ಗ್ರಾಮಸ್ಥರು ಇಲ್ಲಿನ ತಾಲೂಕು ಪಂಚಾಯಿತಿ ಮುಂಭಾಗ ತಮಟೆ ಹೊಡೆಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ನಂತರ ತಾಪಂ ಇಒ ವಸಂತ್ ಕುಮಾರ್‌ಗೆ ಮನವಿ ಸಲ್ಲಿಸಿ, ಒತ್ತುವರಿ ತೆರವಿಗೆ ಆಗ್ರಹಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ತಾ.ಪಂ ಇಒ ವಸಂತ್‌ಕುಮಾರ್, ಗ್ರಾ.ಪಂಗೆ ಸೇರಿದ ಜಾಗದಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಅಂಗಡಿಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ ಎಂದು ಗ್ರಾ.ಪಂ ಆಡಳಿತ ಹಾಗೂ ಗ್ರಾಮಸ್ಥರಿಂದ ದೂರು ಬಂದ ಕಾರಣ ದಾಖಲೆಗಳನ್ನು ಪರಿಶೀಲಿಸಲಾಗಿ ಈ ಜಾಗ ಪಂಚಾಯ್ತಿ ಸ್ವತ್ತಾಗಿದೆ. ಈ ಹಿಂದೆ ಈ ಜಾಗದಲ್ಲಿ ಗ್ರಾ.ಪಂ. ಕಟ್ಟಡ ಇರುವ ಬಗ್ಗೆ ಫೋಟೋ ಸಹ ಇದೆ. ಮಳಿಗೆ ತೆರವು ಗೊಳಿಸಲಾಗುವುದು ಎಂದರು. ತಾ.ಪಂ. ಇಒ ವಸಂತ್‌ ಕುಮಾರ್…

Read More

ತುಮಕೂರು: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಹಾಗೂ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಡಿಯಲ್ಲಿ ನಡೆಯುತ್ತಿರುವ ಎಸ್.ಬಿ.ಐ. ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಪಂಡಿತನಹಳ್ಳಿ ಗೇಟ್, ತುಮಕೂರು ಈ ಸಂಸ್ಥೆಯು ಜೂನ್ 1 ರಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉಚಿತ ಊಟ, ವಸತಿಯೊಂದಿಗೆ 45 ದಿನಗಳ ಕಂಪ್ಯೂಟರ್ ಡಿಟಿಪಿ ತರಬೇತಿ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತುಮಕೂರು ಜಿಲ್ಲಾ ವ್ಯಾಪ್ತಿಯ ಕನ್ನಡ ಓದಲು ಮತ್ತು ಬರೆಯಲು ಬಲ್ಲವಂತವರು 18 ರಿಂದ 50 ವರ್ಷದೊಳಗಿನವರು ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಹಿರೇಹಳ್ಳಿ–572104 ಇಲ್ಲಿಗೆ ತಲುಪಿಸುವಂತೆ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9738351048 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು: ವಿಶ್ವವಿದ್ಯಾನಿಲಯದ ಸಿರಾ ಸ್ನಾತಕೋತ್ತರ ಕೇಂದ್ರದಲ್ಲಿ 2026-27ನೇ ಸಾಲಿನ ಪ್ರಥಮ ಬಿ.ಸಿ.ಎ ಪದವಿಗಳಿಗೆ ಪ್ರವೇಶ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್ ಲೈನ್ tumkuruniversity.ac.in ನಲ್ಲಿ ಮೇ 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸಲ್ಲಿಸಿದ ಅರ್ಜಿ ಪ್ರತಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಇತ್ತೀಚಿನ ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ ಲಗತ್ತಿಸಿ ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿಗೆ ಸಲ್ಲಿಸಬೇಕು. ಬಿ.ಸಿ.ಎ. ಮೊದಲನೇ ಸುತ್ತಿನ ಕೌನ್ಸಿಲಿಂಗ್ ಮೇ 25ರಂದು ನಡೆಯಲಿದ್ದು, ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಕೌನ್ಸಿಲಿಂಗ್ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ucst.ac.in ಗೆ ಭೇಟಿ ನೀಡಬಹುದಾಗಿದೆ ಎಂದು ಸಿರಾ ಸ್ನಾತಕೋತ್ತರ ಕೇಂದ್ರದ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಕುಣಿಗಲ್ ಪುರಸಭಾ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರಿಗಾಗಿ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ. 2026–27ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಯೋಜನೆ(ಶೇ 24.10), ಇತರೆ ಬಡ ಜನರ ಕಲ್ಯಾಣ ಯೋಜನೆ(ಶೇ.7.25) ಹಾಗೂ ವಿಕಲಚೇತನ(ಶೇ.5)ಯಡಿ ವ್ಯಕ್ತಿ ಸಂಬಂಧಿತ ಕಾರ್ಯಕ್ರಮಗಳಾದ ಕುಣಿಗಲ್ ಪಟ್ಟಣ ವ್ಯಾಪ್ತಿಯಲ್ಲಿ ಬರುವ ವಿಕಲಚೇತನ ರೋಗಿಗಳಿಗೆ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಗೆ ಧನ ಸಹಾಯ, ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ಇತರೆ ಬಡಜನರ ವಿದ್ಯಾರ್ಥಿಗಳಿಗೆ ಸಹಾಯಧನದ ನೆರವು, ಸಮುದಾಯ ಸಂಬಂಧಿಸಿದ ಕಾರ್ಯಕ್ರಮಗಳಾದ ಕುಣಿಗಲ್ ಪಟ್ಟಣ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯಡಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಎಸ್ಸಿ/ಎಸ್ಟಿ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ Spoken English (Personality Development) ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಮೇ 30ರೊಳಗಾಗಿ ಪುರಸಭಾ ಕಾರ್ಯಾಲಯಕ್ಕೆ ಸಲ್ಲಿಸಬೇಕು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ತುಮಕೂರು: ಸ್ಕೈ ಆರ್ಟ್ ಮೀಡಿಯಾ ಅರ್ಪಿಸುತ್ತಿರುವ ರಾಜಶೇಖರ್ ರಚಿಸಿ ನಿರ್ದೇಶಿಸುತ್ತಿರುವ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಮುಹೂರ್ತ ಸಮಾರಂಭ ತುಮಕೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ತುಮಕೂರು ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದ್ದು ಇದರ ಮುಹೂರ್ತ ಸಮಾರಂಭ ತುಮಕೂರಿನ ಕೋಟೆ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸುವುದರೊಂದಿಗೆ ಆರಂಭವಾಯಿತು. ಕಲಾಶ್ರೀ ಲಕ್ಷ್ಮಣದಾಸ್, ಉಗಮ ಶ್ರೀನಿವಾಸ್, ಟೈಗರ್ ನಾಗ್, ಬೇಬಿ ಜಾನ್ಹವಿ, ಬೇಬಿ ಸಂಧ್ಯಾ ಮಾಸ್ಟರ್ ಚರಣ್, ಮಾಸ್ಟರ್ ಗೌತಮ್, ಮಾಸ್ಟರ್ ಪೋಷಿತ್, ರಾಜಣ್ಣ, ವೈಷ್ಣವಿ ರಾಜ್, ಇಂದ್ರಕುಮಾರ್ ಮತ್ತಿತರರು ಈ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. ಭಾಗ್ಯ ಶೇಖರ್ ಅವರು ನಿರ್ಮಿಸುತ್ತಿರುವ ಇವರ ಜೊತೆಗೆ ಸಹ ನಿರ್ಮಾಪಕರಾಗಿರುವ ಯಲ್ಲಯ್ಯ ಮತ್ತು ಡಿಸಿ ಕುಮಾರ್ ಅವರು ಹಾಜರಿದ್ದರು. ಈ ಸಿನಿಮಾಕ್ಕೆ ಸಂಭಾಷಣೆ ಮತ್ತು ಸಹ ನಿರ್ದೇಶನದ ಜವಾಬ್ದಾರಿಯನ್ನು ಮಂಜುನಾಥ್ ಕೋಟೇಕೆರೆ ಹೊತ್ತಿದ್ದಾರೆ. ಈ ಸಿನಿಮಾದ ಸ್ಕ್ರಿಪ್ಟ್ ಅನ್ನು ಉಗಮ ಶ್ರೀನಿವಾಸ್ ನೀಡಿದರೆ ಕ್ಯಾಮರಾವನ್ನು ಲಕ್ಷ್ಮಣದಾಸ್ ಆನ್ ಮಾಡಿದರು. ಇದೊಂದು ಸಮಾಜಕ್ಕೆ ಅತ್ಯುತ್ತಮ ಸಂದೇಶ ನೀಡುವ ಸಿನಿಮಾ ಎಂದು…

Read More