Subscribe to Updates
Get the latest creative news from FooBar about art, design and business.
- ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
Author: admin
ಶ್ರೀರಾಮ ಮತ್ತು ಜಾನಕಿ ದೇವಿಯ ವಿಗ್ರಹವನ್ನು ಕೆತ್ತಲು ಮತ್ತು ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲು ಎರಡು ಅಪರೂಪದ ಬಂಡೆಗಳನ್ನು ಅಯೋಧ್ಯೆಗೆ ತರಲಾಯಿತು. 60 ಮಿಲಿಯನ್ ವರ್ಷಗಳಷ್ಟು ಹಳೆಯದಾದ ಅಪರೂಪದ ಸಾಲಿಗ್ರಾಮ ಶಿಲೆಗಳು ನೇಪಾಳದಿಂದ ಬುಧವಾರ ತಡರಾತ್ರಿ ಅಯೋಧ್ಯೆಗೆ ತಲುಪಿವೆ. ಪವಿತ್ರ ನಗರದ ಸನ್ಯಾಸಿಗಳು ಇಂದು ವಿಗ್ರಹಗಳನ್ನು ಪೂಜಿಸುತ್ತಾರೆ ಮತ್ತು ಪ್ರತಿಷ್ಠಾಪಿಸುತ್ತಾರೆ. 60 ಮಿಲಿಯನ್ ವರ್ಷಗಳಷ್ಟು ಹಳೆಯದಾದ ಈ ಸಾಲಿಗ್ರಾಮ ಶಿಲೆಗಳನ್ನು ನೇಪಾಳದಿಂದ ಎರಡು ಪ್ರತ್ಯೇಕ ಟ್ರಕ್ಗಳಲ್ಲಿ ಅಯೋಧ್ಯೆಗೆ ತರಲಾಯಿತು. ಒಂದು ಬಂಡೆಯ ತೂಕ 26 ಟನ್ ಮತ್ತು ಇನ್ನೊಂದು 14 ಟನ್. ನೇಪಾಳದ ಮುಸ್ತಾಂಗ್ ಜಿಲ್ಲೆಯಿಂದ ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಪಂಕಜ್ ಅವರನ್ನು ಕರೆತಂದರು. ಸನ್ಯಾಸಿಗಳು ಮತ್ತು ಸ್ಥಳೀಯರು ವಿಧಿವಿಧಾನಗಳನ್ನು ನೀಡುವ ಮೂಲಕ ಮತ್ತು ಹೂಮಾಲೆಗಳಿಂದ ಅಲಂಕರಿಸುವ ಮೂಲಕ ಕಲ್ಲುಗಳನ್ನು ಸ್ವೀಕರಿಸಿದರು. ನೇಪಾಳದ ಮುಸ್ತಾಂಗ್ ಜಿಲ್ಲೆಯ ಸಾಲಿಗ್ರಾಮದ ಬಳಿ ಗಂಡಕಿ ನದಿಯಲ್ಲಿ ಈ ಬಂಡೆಗಳು ಪತ್ತೆಯಾಗಿವೆ. ಈ ಕಲ್ಲಿನಿಂದ ಕೆತ್ತಿದ ಶ್ರೀರಾಮನ ವಿಗ್ರಹವನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುವುದು…
ಅಣ್ಣಾ ಡಿಎಂಕೆ ನಾಯಕತ್ವ ವಿವಾದಕ್ಕೆ ಸಂಬಂಧಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಕಳೆದ ವರ್ಷ ಜುಲೈ 11 ರಂದು ನಡೆದ ಜನರಲ್ ಕೌನ್ಸಿಲ್ ಸಭೆಯ ವಿರುದ್ಧ ಓ ಪನ್ನೀರಸೆಲ್ವಂ ಬಣ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿ.ಈ ಸಭೆಯಲ್ಲಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಜಯಲಲಿತಾ ಅವರ ನಿಧನದ ನಂತರ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ತೆಗೆದುಹಾಕಲಾಯಿತು ಮತ್ತು ಸಂಯೋಜಕ ಮತ್ತು ಉಪ ಸಮನ್ವಯಾಧಿಕಾರಿ ಹುದ್ದೆಗಳನ್ನು ಈ ಹಿಂದೆ ಉಳಿಸಿಕೊಂಡು ಪಕ್ಷದ ಬೈಲಾಗಳಲ್ಲಿ ಬದಲಾವಣೆಗಳನ್ನು ಮಾಡಲಾಯಿತು. ಇದನ್ನು ಸರಿಪಡಿಸಿ ಮತ್ತೆ ಪ್ರಧಾನ ಕಾರ್ಯದರ್ಶಿ ಹುದ್ದೆ ತಂದಿರುವ ಪಳನಿಸಾಮಿ ವಿಭಾಗ ನಡೆಸಿದ ಜನರಲ್ ಕೌನ್ಸಿಲ್ ಸಿಂಧುವಾಗಿಲ್ಲ ಎಂಬುದು ಒಪಿಎಸ್ ವಿಭಾಗದ ವಾದ. ಇಪಿಎಸ್ ವಿಭಾಗದ ಪರವಾಗಿ ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದ ನಂತರ ಒಪಿಎಸ್ ವಿಭಾಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿರುವುದರಿಂದ ಜುಲೈ 11ರ ಜನರಲ್ ಕೌನ್ಸಿಲ್ ಯೋಗ ನಿರ್ಧಾರಗಳನ್ನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ಚುನಾವಣಾ…
ಜಮ್ಮುವಿನಲ್ಲಿ ನಡೆದ ಅವಳಿ ಸ್ಫೋಟದ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂಬ ಮಾಹಿತಿ. ಈ ದೃಢೀಕರಣವು ಇಂದು ಜಮ್ಮುವಿನಲ್ಲಿ ಬಂಧಿತ ಉಗ್ರರಿಂದ ಪಡೆದ ಸಾಕ್ಷ್ಯವನ್ನು ಆಧರಿಸಿದೆ. ಸುಮಾರು 5 ಲಕ್ಷ ದೂರವಾಣಿ ಕರೆಗಳನ್ನು ಪರಿಶೀಲಿಸಿದ ನಂತರ 9 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಇದರಿಂದ ನಮಗೆ ಮೂರು ಜನರ ಸುಳಿವು ಸಿಕ್ಕಿದೆ. ನಂತರ ಅವರನ್ನು ಬಂಧಿಸಲಾಯಿತು. ಈ ಸಂಬಂಧ ಇನ್ನಷ್ಟು ಮಂದಿಯನ್ನು ಬಂಧಿಸಬೇಕಿದೆ. ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮೂರು ಜನರಿಗೆ ಸಂಬಂಧಿಸಿದಂತೆ, ಅವರು ಭಯೋತ್ಪಾದಕ ಸಂಘಟನೆಗಳು ಮತ್ತು ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಇಸ್ಲಾಮಿಕ್ ಸ್ಟೇಟ್ನೊಂದಿಗೆ ಸಂಪರ್ಕ ಹೊಂದಿದ್ದಾರೆ. ಈ ಪ್ರಕರಣದಲ್ಲಿ, ಅವರೊಂದಿಗೆ ಸಂಪರ್ಕ ಹೊಂದಿದ ಜನರೊಂದಿಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ. ದೊಡ್ಡ ಸ್ಫೋಟಗಳು ನಡೆದಿದ್ದು, ಅದರ ಭಾಗವಾಗಿಯೇ ಈ ಡಬಲ್ ಬ್ಲಾಸ್ಟ್ ನಡೆಸಲಾಗಿದೆ ಎಂಬುದು ಪೊಲೀಸರ ತೀರ್ಮಾನ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಪಟ್ಟಲಚಿಂತಿ ಗ್ರಾಮದಲ್ಲಿ ಮದುವೆ ಬಳಿಕ ಆಸ್ತಿ ಹಂಚಿಕೆ ಮಾಡುವೆ ಎಂದ ಅಣ್ಣನನ್ನು ತಮ್ಮ ಕೊಲೆ ಮಾಡಿದ ಘಟನೆ ನಡೆದಿದೆ. ಯಮನೂರಪ್ಪ ಬಸಪ್ಪ ಕಡಿವಾಲರ್ (35) ಕೊಲೆಯಾದ ವ್ಯಕ್ತಿಯಾಗಿದ್ದು, ಮಲ್ಲಪ್ಪ ಕಡಿವಾಲರ್ (30) ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಪಟ್ಟಣಚಿಂತಿ ಗ್ರಾಮದ ಬಸಪ್ಪ ಕಡಿವಾಲರ್ ಅವರಿಗೆ ನಾಲ್ವರು ಗಂಡು ಮಕ್ಕಳಿದ್ದು, ಕೊಲೆ ಆರೋಪಿ ಮಲ್ಲಪ್ಪ ಕೊನೆ ಮಗ. ಈತನನ್ನು ಹೊರತು ಪಡಿಸಿ ಮೂವರ ಮದುವೆಯಾಗಿತ್ತು. ಇವರ ಪಿತ್ರಾರ್ಜಿತವಾಗಿ ಬಂದ 16 ಎಕರೆ ಆಸ್ತಿಯಲ್ಲಿ ತನಗೆ ಸೇರಬೇಕಾದ ಆಸ್ತಿ ಹಂಚಿಕೆಗೆ ಅಣ್ಣ ಯಮನೂರಪ್ಪನನ್ನು ಒತ್ತಾಯಿಸುತ್ತಿದ್ದ. ಆದರೆ ಯಮನೂರಪ್ಪ ಮಲ್ಲಪ್ಪನಿಗೆ ಮದುವೆಯಾಗಲಿ ನಂತರ ಆಸ್ತಿ ಹಂಚಿಕೆ ಮಾಡಿಕೊಳ್ಳೋಣ ಎಂದು ದಿನದೂಡುತ್ತಿದ್ದ. ಇತ್ತ ಮದುವೆ ಇಲ್ಲದೇ ಮಲ್ಲಪ್ಪ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಅಣ್ಣನೊಂದಿಗೆ ಮಲ್ಲಪ್ಪ ಏಕಾಏಕಿ ಜಗಳಕ್ಕೆ ಇಳಿದಿದ್ದಾನೆ. ಮಾತಿಗೆ ಮಾತು ಬೆಳೆದು ತಳ್ಳಾಟ, ನೂಕಾಟ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಸ್ನಾನದ ಕೊಠಡಿಯಲ್ಲಿ ಕಟ್ಟಿಗೆಯಿಂದ ಅಣ್ಣನನ್ನು ಭೀಕರವಾಗಿ ಹೊಡೆದು ಬಳಿಕ ಚಾಕುವಿನಿಂದ…
ಬೆಳಗಾವಿ: ಪ್ರೀತಿಸಿ ಮದುವೆಯಾಗುತ್ತೇನೆಂದು ನಂಬಿಸಿ ಯುವಕ ವಂಚನೆ ಮಾಡಿದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಗೆ ಶರಣಾದ ಬೆಳಗಾವಿ ಜಿಲ್ಲೆಯ ಯುವತಿ ಲವ್ ಜಿಹಾದ್ಗೆ ಬಲಿಯಾದಳಾ? ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ತೇಜಸ್ವಿನಿ ಗಂಗಪ್ಪ ಗುಜ್ಜರ್ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣದಲ್ಲಿ ಯುವತಿಗೆ ವಂಚನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ದೇಶದಾದ್ಯಂತ ಸಾವಯವ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ 5,300 ಕೋಟಿ ರೂ.ಗಳ ಅನುದಾನ ನೀಡಿರುವುದು ರಾಜ್ಯದ ರೈತರಿಗೆ ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಬಜೆಟ್ನ್ನು ಸ್ವಾಗತಿಸಿದ್ದಾರೆ. ಇಂದು ಕೇಂದ್ರ ಸರ್ಕಾರ ಮಂಡಿಸಿರುವ ಅಮೃತ ಕಾಲ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿದ ಈರಣ್ಣ ಕಡಾಡಿ ಅವರು, 2023-24ನೇ ಸಾಲಿನ ಬಜೆಟ್ ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಪೂರಕವಾಗಿದೆ ಎಂದಿದ್ದಾರೆ. ರಾಗಿ ಸೇರಿದಂತೆ ಸಿರಿಧಾನ್ಯಗಳ ಬೆಳೆ ಪದ್ಧತಿ ಸುಧಾರಣೆಗಾಗಿ ಕ್ರಮ ವಹಿಸಲಾಗಿದೆ. ಸಂಶೋಧನೆ ನಡೆಸಲು ಹಾಗೂ ಉತ್ತಮ ಬೆಳೆ ಪದ್ಧತಿಯ ದಾಖಲಾತಿಗಾಗಿ ‘ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಿಲೆಟ್ ರೀಸರ್ಚ್’ ಸಂಸ್ಥೆಗೆ ಅಗತ್ಯ ನೆರವು ನೀಡಲಾಗಿದೆ. ತೋಟಗಾರಿಕೆ…
ಪಾವಗಡ: ಕೆಎಸ್ ಆರ್ ಟಿಸಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ ಘಟನೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಹೋಬಳಿಯ ಬೂದಿ ಬೆಟ್ಟ ಗ್ರಾಮದ ಸಮೀಪ ಬುಧವಾರ ನಡೆದಿದೆ. ವೈ ಎನ್ ಹೊಸಕೋಟೆ ದಿಂದ ಪಾವಗಡಕ್ಕೇ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸ್ಥಳೀಯ ಯುವಕರು ದಾಖಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಬೀದರ್: ಫೆಬ್ರವರಿ 4ರಂದು ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಔರಾದ ತಾಲೂಕಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಡಾ.ಭೀಮಸೇನರಾವ್ ರಾವ್ ಸಿಂಧೆ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಬೀದರ ಜಿಲ್ಲಾ ಔರಾದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಡಾ. ಭೀಮಸೇನರಾವ್ ರಾವ್ ಸಿಂಧೆ ಕಾರ್ಯಕ್ರಮಕ್ಕೆ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರು ಈ ಸಮಾವೇಶಕ್ಕೆ ಆಗಮಿಸಿ, ಪ್ರಜಾಧ್ವನಿಗೆ ಧ್ವನಿಗೂಡಿಸುವಂತೆ ಅವರು ಇದೇ ವೇಳೆ ಮನವಿ ಮಾಡಿಕೊಂಡರು. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಅರವಿಂದ ಮಲ್ಲಿಗೆ ಬೀದರ್: ನಮ್ಮತುಮಕೂರು ಮಾಧ್ಯಮವು ತುಮಕೂರು ಜಿಲ್ಲೆ ಮಾತ್ರವಲ್ಲದೇ ರಾಜ್ಯಾದ್ಯಂತ ಪ್ರಭಾವ ಬೀರುತ್ತಿದ್ದು, ಬೀದರ್ ಜಿಲ್ಲೆಯ ಕಮಲ್ ನಗರ್ ಹಾಗೂ ಔರಾದ್ ಬಿ ತಾಲೂಕಿನ ಆ್ಯಂಬುಲೆನ್ಸ್ ಸಮಸ್ಯೆಯ ಕುರಿತಂತೆ ಮಾಧ್ಯಮ ಬೆಳಕು ಚೆಲ್ಲಿದ ಬೆನ್ನಲ್ಲೇ ಇದೀಗ ಜಿಲ್ಲಾ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಕಮಲ್ ನಗರ್ ಹಾಗೂ ಔರಾದ್ ಬಿ ತಾಲೂಕಿನಲ್ಲಿ ತುರ್ತು ಸೇವೆಗಾಗಿ 3 ಆ್ಯಂಬುಲೆನ್ಸ್ ಗಳಿದ್ದವು. ಆದರೆ ಇದು ಸರಿಯಾಗಿ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ತಾಲೂಕಿನ ಅನೇಕ ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು. ಈ ನಡುವೆ ಬೀದರ್ ಜಿಲ್ಲಾ ಭೀಮ್ ಆರ್ಮಿ ಇದರ ವಿರುದ್ಧ ಧ್ವನಿಯೆತ್ತಿದ್ದು, ತಾಲೂಕು ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಅಧಿಕಾರಿಗಳಿಗೆ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮಾಡಿತ್ತು. ಇಲ್ಲಿನ ಆ್ಯಂಬುಲೆನ್ಸ್ ಸಮಸ್ಯೆಯ ಬಗ್ಗೆ ನಮ್ಮತುಮಕೂರು ಮಾಧ್ಯಮ ಸಂಪೂರ್ಣವಿವರದೊಂದಿಗೆ ವರದಿ ಮಾಡಿದ್ದು, ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಔರಾದ್ ಬಿ ತಾಲ್ಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್…
ಸಿನಿಮಾ ರಂಗದಲ್ಲಿ ಲೈಂಗಿಕ ಕಿರುಕುಳದ ವಿಚಾರಕ್ಕೆ ಸಂಬಂಧಿಸಿದಂತೆ ಲೇಡಿ ಸೂಪರ್ ಸ್ಟಾರ್ ಎಂದು ಕರೆಯಲ್ಪಡುವ ನಟಿ ನಯನತಾರಾ ಮಾತನಾಡಿದ್ದು, ಈ ಬಗ್ಗೆ ಪತ್ರಿಕೆಯೊಂದರ ಸಂದರ್ಶನದ ವೇಳೆ ಅವರು ವಿಷಯ ಬಹಿರಂಗ ಮಾಡಿದ್ದಾರೆ. ದೊಡ್ಡ ಚಲನ ಚಿತ್ರವೊಂದರಲ್ಲಿ ನಟಿಸಲು ಆಫರ್ ನೀಡಿದ ಡೈರೆಕ್ಟರ್ ವೋರ್ವ, ಅವಕಾಶಕ್ಕೆ ಪ್ರತಿಯಾಗಿ ತನ್ನೊಂದಿಗೆ ದೈಹಿಕವಾಗಿ ಸಹಕರಿಸಬೇಕು ಎಂದು ಕೇಳಿದ್ದು, ಆತನ ಮಾತನ್ನು ತಿರಸ್ಕರಿಸಿದ ನಯನತಾರಾ, ಖಡಕ್ ಆಗಿ ಪ್ರತ್ಯುತ್ತರ ನೀಡಿದ್ದರಂತೆ! ನನಗೆ ನನ್ನ ನಟನಾ ಸಾಮರ್ಥ್ಯದ ಬಗ್ಗೆ ವಿಶ್ವಾಸವಿದೆ. ಚಿತ್ರದಲ್ಲಿ ಪಾತ್ರ ನೀಡುವ ವಿಚಾರದಲ್ಲಿ ಬೇರೆ ಯಾವುದನ್ನೂ ನನ್ನಿಂದ ನಿರೀಕ್ಷೆ ಮಾಡಬೇಡಿ ಎಂದು ನೇರವಾಗಿ ಹೇಳಿರುವುದಾಗಿ ನಯನತಾರಾ ಹೇಳಿದರು. ಸದ್ಯ ನಟಿ ನಯನತಾರಾ ಜವಾನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಜೊತೆಗೆ ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ, ಪ್ರಿಯಾಮಣಿ, ಸೋನಿಯಾ ಮಲ್ಹೋತ್ರಾ ಸುನೀಲ್ ಗ್ರೋವರ್ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…