Author: admin

ಪ್ರತಿಯೊಬ್ಬರು ಸಮಾಜಕ್ಕೆ ಕೈಲಾದ ಕೊಡುಗೆಯನ್ನು ನೀಡಿ: ನಿವೃತ್ತ ಜಾನುವಾರು ಅಧಿಕಾರಿ ವೆಂಕಟೇಗೌಡ ತುರುವೇಕೆರೆ: ಪ್ರತಿಯೊಬ್ಬರು ಸಮಾಜಕ್ಕೆ ತಮ್ಮ ಕೈಲಾದ ಕೊಡುಗೆ ನೀಡಬೇಕು ನಿವೃತ್ತ ಜಾನುವಾರು ಅಧಿಕಾರಿ ವೆಂಕಟೇಗೌಡ ಹೇಳಿದರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ತುರುವೇಕೆರೆ ನೇತೃತ್ವದಲ್ಲಿ ಪಶು ಆಸ್ಪತ್ರೆ ಮಾಯಸಂದ್ರ ಸಹಯೋಗದೊಂದಿಗೆ ತಾಲೂಕಿನ ದೊಡ್ಡಶೆಟ್ಟಿಕೆರೆ ಗ್ರಾಮದಲ್ಲಿ ಹಾಲು ಉತ್ಪದಕರ ಸಹಕಾರ ಸಂಘದ ಆವರಣದಲ್ಲಿ ಜಾನುವಾರುಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಮಾಜಕ್ಕೆ ತಮ್ಮ ಕೈಲಾದ ಕೊಡುಗೆಯನ್ನು ನೀಡಬೇಕು, ಸಮಾಜವೇ ಕೊಡುಗೆದಾರರನ್ನು ಗೌರವಿಸುತ್ತದೆ ನಿವೃತ್ತ ಅಧಿಕಾರಿಯಾದರೂ ಸಹ ಇಂದಿಗೂ ಸಹ ಜಾನುವಾರುಗಳ ಕಾಯಿಲೆ ಮುಂತಾದ ಸಮಸ್ಯೆಗಳಿಗೆ ಸಾರ್ವಜನಿಕರು ಕರೆ ಮಾಡುತ್ತಾರೆ, ನಾವು ಸಹ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ತುರ್ತು ಸಂದರ್ಭದಲ್ಲಿ ಜಾನುವಾರಗಳನ್ನು ಪರೀಕ್ಷಿಸುವ ಮೂಲಕ ಉತ್ತಮ ಚಿಕಿತ್ಸೆ ನೀಡುವ ಕಾರ್ಯವನ್ನು ಮುಂದುವರಿಸಿದ್ದೇನೆ. ರೈತರಿಗೆ ಉಪಯುಕ್ತ ಮಾಹಿತಿಗಳನ್ನು ತಿಳಿಸಿದ್ದೇನೆ, ನನ್ನ ಸೇವೆಗೆ ಸಮಾಜ ಗುರುತಿಸಿರುವುದು ನನ್ನ ಸೌಭಾಗ್ಯ ಎಂದರು. ಈ ವೇಳೆ ಮಹಿಳಾ ಹಾಲು…

Read More

ಚೀನಾದ ಬ್ಯುಸಿನೆಸ್ ಮ್ಯಾಗ್ನೇಟ್ ಝಾಂಗ್ ಲಿ ತನ್ನ ಸ್ವಂತ ಮನೆಯನ್ನು ಜೈಲಾಗಿ ಪರಿವರ್ತಿಸಿದ. ಲಂಚದ ಆರೋಪದ ಮೇಲೆ ಅವರನ್ನು ಅಮೆರಿಕಕ್ಕೆ ಹಸ್ತಾಂತರಿಸುವಂತೆ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ಆದೇಶದಲ್ಲಿ, ಲಂಡನ್ ಜೈಲಿನಲ್ಲಿ ಉಳಿಯಲು ನಿರಾಕರಿಸಿದ ಚೀನಾ ಅಧ್ಯಕ್ಷರು ತಮ್ಮದೇ ಆದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಬೀಗ ಹಾಕಲ್ಪಟ್ಟರು. ಜಾಂಗ್ ಲಿ ಜಾಮೀನು ಸಮಸ್ಯೆ ಬಗೆಹರಿಯುವವರೆಗೂ ಜಾಂಗ್ ಲಿ ಅವರ ಮನೆಯಲ್ಲೇ ಇರಲು ಅವಕಾಶ ನೀಡುವಂತೆ ಜಾಂಗ್ ಲಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊಚ್ಚಿ: ಆಹಾರ ಸುರಕ್ಷತಾ ಇಲಾಖೆಯ ತನಿಖೆ ಒಂದೆಡೆ ಮುಂದುವರಿದಿರುವಾಗಲೇ ತಮಿಳುನಾಡಿನಿಂದ ಕೊಚ್ಚಿ ಸೇರಿದಂತೆ ನಗರಗಳಿಗೆ ‘ಸುನಾಮಿ ಮಾಂಸ’ ಆಗಮಿಸಿದೆ. ಸುನಾಮಿ ಮೀಟ್ ಎಂದರೆ ತಮಿಳುನಾಡಿನ ಕೋಳಿ ಫಾರಂಗಳಿಂದ ಸತ್ತ ಕೋಳಿಗಳನ್ನು ಕಡಿಮೆ ವೆಚ್ಚದಲ್ಲಿ ಮಾಂಸವಾಗಿ ಕೇರಳಕ್ಕೆ ತರುವುದು. ವಿವಿಧೆಡೆ 500 ಕೆಜಿ ಕೊಳೆತ ಮಾಂಸವನ್ನು ವಶಪಡಿಸಿಕೊಂಡು ನಾಶಪಡಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕಲಬುರಗಿ : ಇದೇ ಜನವರಿ 19ಕ್ಕೆ 30 ಸಾವಿರ ಸೇರಿದಂತೆ ವಿವಿಧ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಮಳಖೇಡ ಬಳಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ಸುಮಾರು 60 ಎಕರೆ ವಿಶಾಲ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪ್ರಧಾನಮಂತ್ರಿಗಳು ಅಂದು ಕಲಬುರಗಿ ಸೇರಿದಂತೆ ಯಾದಗಿರಿ, ಬೀದರ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮತ್ತು ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು : ಇಂದು ವಿಧಾನಸೌಧದ ಮುಂದೆ ಜಗಜ್ಯೋತಿ ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಸಲಿದ್ದಾರೆ. 24 ಅಡಿ ಎತ್ತರದ ಬಸವಣ್ಣ ಮತ್ತು ಕೆಂಪೇಗೌಡ ಪುತ್ಥಳಿಗಳನ್ನು 8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ. ಈ ಸಂಬಂಧ ಕಂದಾಯ ಸಚಿವ ಆರ್. ಅಶೋಕ್ ಸ್ಥಳಪರಿಶೀಲನೆ ನಡೆಸಿದ್ದರು. ಸಂವಿಧಾನಶಿಲ್ಪಿ ಅಂಬೇಡ್ಕರ್ ಹಾಗೂ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಪ್ರತಿಮೆಗಳಿವೆ. ಇವೆರಡು ಪ್ರತಿಮೆಗಳ ನಡುವೆ ಬಸವಣ್ಣ ಮತ್ತು ಕೆಂಪೇಗೌಡ ಪ್ರತಿಮೆ ನಿರ್ಮಾಣವಾಗಲಿವೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪರಮಪೂಜ್ಯರಾದ ಮಹಾ ತಪಸ್ವಿ ಚಿಮ್ಮಲಗಿ ಅರಳಲೇ ಕಟ್ಟಿಮನಿ. ಹಿರೇಮಠದ ಷಟಸ್ಥಲ ಬ್ರಹ್ಮ ನೀಲಕಂಠ ಶಿವಾಚಾರ್ಯ ಮಹಾಸ್ವಾಮಿಯವರು ಚಿಮ್ಮಲಗಿಯ ಶ್ರೀಮಠದಲ್ಲಿ ರಾತ್ರಿ 10: 02 ನಿಮಿಷಕ್ಕೆ ಲಿಂಗೈಕ್ಯರಾಗಿರುತ್ತಾರೆ. ಶುಕ್ರವಾರ 13/01/2023ರ ಸಂಜೆ ನಾಲ್ಕು ಗಂಟೆಗೆ ಲಿಂಗೈಕ್ಯ ಪೂಜ್ಯರ ಅಂತಿಮ ವಿಧಿ ವಿಧಾನಗಳು ನಡೆಯಲಿದೆ ಎಂದು ಶ್ರೀ ಮಠದ ಭಕ್ತಾಧಿಗಳು ತಿಳಿಸಿದ್ದಾರೆ. 15 ದಿನಗಳಿಂದ ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ಶ್ರೀಗಳ ಅಂತ್ಯಕ್ರಿಯೆ ಜನವರಿ 13ರಂದು ಸಂಜೆ 4ಕ್ಕೆ ಚಿಮ್ಮಲಗಿ ಭಾಗ-2ರಲ್ಲಿ ನಡೆಯಲಿದೆ. ಶ್ರೀಗಳು ಕಳೆದ ವರ್ಷವಷ್ಟೇ ಮಠಕ್ಕೆ ಸಿದ್ಧ ರೇಣುಕ ದೇವರನ್ನು ತಮ್ಮ ಮುಂದಿನ ಪೀಠಾಧಿಕಾರಿಯನ್ನಾಗಿ ನೇಮಿಸಿ ಪಟ್ಟಾಭಿಷೇಕ ಮಾಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಶರದ್ ಯಾದವ್ (75)  ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ನಿಧನರಾಗಿದ್ದಾರೆ. ಶರದ್ ಯಾದವ್ ಅವರ ಪುತ್ರಿ ಸುಭಾಷಿಣಿ ಯಾದವ್ ಅವರು ತಂದೆಯ ಅಗಲಿಕೆಯ ಕುರಿತು ಟ್ವೀಟ್ ಮಾಡಿದ್ದಾರೆ. ಅಪ್ಪ ಇನ್ನಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಶರದ್ ಯಾದವ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದು, ಎರಡೂ ಸಮುದಾಯಗಳ ಬಹುವರ್ಷಗಳ ಮೀಸಲಾತಿ ಬೇಡಿಕೆಯು ಈಡೇರಿದಂತಾಗಿದೆ. ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳು ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಕುರಿತು ಜನವರಿ 12ರಂದು ವಿಶೇಷ ರಾಜ್ಯಪತ್ರ ಹೊರಡಿಸಿದ್ದಾರೆ. ಎಸ್ಸಿ ಸಮುದಾಯಕ್ಕೆ ಈ ಹಿಂದೆ ಇದ್ದ ಶೇ. 15 ಮೀಸಲಾತಿಯನ್ನು ಶೇ. 17 ಕ್ಕೆ ಹಾಗೂ ಎಸ್ಟಿ ಸಮುದಾಯಕ್ಕೆ ಈ ಹಿಂದೆ ಇದ್ದ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ ಶೇ.7ಕ್ಕೆ ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿದ್ದ ಸರ್ಕಾರ, ಈ ಹಿಂದೆಯೇ ಸುಗ್ರೀವಾಜ್ಞೆ ಹೊರಡಿಸಿತ್ತು. ಈಗ ವಿಧೇಯಕಕ್ಕೆ ರಾಜ್ಯಪಾಲರ ಮುದ್ರೆಯೂ ಬಿದ್ದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಉದ್ಘಾಟನೆಗೆ ಸಿದ್ಧವಾಗಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಕಿಡಿಗೇಡಿಗಳು ಕಲ್ಲೆಸೆದ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದ್ದು, ಪರಿಣಾಮವಾಗಿ ಕಿಟಕಿ ಗಾಜು ಪುಡಿಪುಡಿಯಾಗಿದೆ. ಘಟನೆ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಕಂದರಾಬಾದ್ ಮತ್ತು ವಿಶಾಖಪಟ್ಟಣ ನಡುವೆ ಸಂಚರಿಸುವ ಈ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಜನವರಿ 15ರಂದು  ಪ್ರಧಾನಿ ಮೋದಿ ಚಾಲನೆ ನೀಡಬೇಕಿತ್ತು. ಕಂಚರಪಾಲೆಂನ ಕೋಚ್ ಸಂಕೀರ್ಣದಲ್ಲಿ ನಿಂತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಕಿಟಕಿಗಳ ಮೇಲೆ ಮೂವರು ಆರೋಪಿಗಳು ಕಲ್ಲುಗಳನ್ನೆಸೆದಿದ್ದು, ಪರಿಣಾಮವಾಗಿ ರೈಲಿನ ಗಾಜುಗಳು ಒಡೆದಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

Read More

ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಶಾಸಕ ಸಿ.ಟಿ ರವಿ, ಸಿದ್ಧರಾಮಯ್ಯಗೆ ಮೈಸೂರು ಭಾಗದಲ್ಲಿ ಗೆಲ್ಲುವ ವಿಶ್ವಾಸವಿಲ್ಲ. ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ವಿಶ್ವಾಸ ಕಳೆದು ಕೊಂಡಿದ್ದಾರೆ. ಈಗ ಬಾದಾಮಿ ಕ್ಷೇತ್ರದಲ್ಲಿ 2ನೇ ಬಾರಿ ಗೆಲ್ಲುವ ವಿಶ್ವಾಸವಿಲ್ಲ. ಹೀಗಾಗಿ ಕೋಲಾರ ಕ್ಷೇತ್ರಕ್ಕೆ ಹೋಗಿದ್ದಾರೆ ಎಂದು ಟಾಂಗ್ ನೀಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವನ್ನೂ ಜನರು ನಿರ್ಧರಿಸುತ್ತಾರೆ. ಜನರ ತೀರ್ಮಾನದ ಬಗ್ಗೆ ನಾನೇನು ಹೇಳುವುದಿಲ್ಲ. ಎಂದು ಶಾಸಕ ಸಿಟಿ ರವಿ ತಿಳಿಸಿದರು. ಸಿದ್ಧರಾಮಯ್ಯಗೆ 40 ವರ್ಷದ ರಾಜಕೀಯ ಅನುಭವವಿದೆ. ಈಗಲೂ ಕ್ಷೇತ್ರದ ಹುಡುಕಾಟ ನಡೆಸುತ್ತಿರುವುದು ದುರಂತದ ವಿಚಾರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಲೇವಡಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More