Subscribe to Updates
Get the latest creative news from FooBar about art, design and business.
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
Author: admin
ಕೋವಿಡ್ ವೇಳೆ ಹಗರಣವಾಗಿದೆ. ಈ ಕುರಿತು ತನಿಖೆ ಮಾಡುವ ಬಗ್ಗೆ ಸುಧಾಕರ್ ಮಾತೇ ಆಡುವುದಿಲ್ಲ. ತನಿಖೆಯಾದರೇ ಸುಧಾಕರ್ ಮೇಲಿನ ಆರೋಪ ಬಯಲಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಒಂದಂಕಿ ಲಾಟರಿ ಬಗ್ಗೆ ದೇವೇಗೌಡರು ಪ್ರಸ್ತಾಪ ಮಾಡಿದ್ದರು. ನನ್ನ ಮತ್ತು ಕೆಜೆ ಜಾರ್ಜ್ ವಿರುದ್ಧ ಆರೋಪ ಮಾಡಿದರು. ನನ್ನ ಮೇಲೆ ಆರೋಪ ಮಾಡಿದಾಗ ಏನಾದರೂ ದಾಖಲೆ ಕೊಟ್ಟಿರಲಿಲ್ಲ. ಆದರೂ ಆಗ ನಾನು ಕೂಡಲೇ ಸಿಬಿಐ ತನಿಖೆಗೆ ವಹಿಸಿದ್ದೆ. ಡಿ.ಕೆ ರವಿ, ಡಿವೈಎಸ್ ಪಿ.ಗಣಪತಿ ಪ್ರಕರಣವನ್ನೂ ಸಿಬಿಐಗೆ ವಹಿಸಿದ್ದ. ಶ್ವೇತ್ರ ಪತ್ರ ಅನ್ನೋದು ಒಂದು ಸುಳ್ಳಿನ ಕಂತೆ ಎಂದು ಟೀಕಿಸಿದರು. ಬಿಜೆಪಿಯವರೆಲ್ಲರೂ ಭ್ರಷ್ಟಾಚಾರಿಗಳಾಗಿ ಹೆಸರು ಕೆಡಿಸಿಕೊಂಡಿದ್ದಾರೆ. ಅಮಿತ್ ಶಾ ಜೈಲಿಗೆ ಹೋಗಿ ಬಂದಿದ್ದಾರೆ. ಅವರನ್ನ ಕರೆಸಿಕೊಂಡು ಮತ ಕೇಳಿದ್ರೆ ಆಗುತ್ತಾ. ಅಮಿತ್ ಶಾ ಮೋದಿ ನೂರು ಸಾರಿ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಸಿದ್ಧರಾಮಯ್ಯ ಹೇಳಿದರು. ಇನ್ನು ಭ್ರಷ್ಟಾಚಾರ ಮಾಡಿದ್ದರೇ ನೇಣಿಗೆ ಹಾಕಿ…
ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಗೋಪಾಲಯ್ಯರನ್ನ ದಿಢೀರ್ ಬದಲಾವಣೆ ಮಾಡಿ ಸಚಿವ ಅಶೋಕ್ ಗೆ ಜವಾಬ್ದಾರಿ ನೀಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ವಿವಿ ರಸ್ತೆ, ಸುಭಾಷ್ ರಸ್ತೆ ಗೋಡೆ ಮೇಲೆ ‘ಗೋ ಬ್ಯಾಕ್ ಆರ್.ಅಶೋಕ್’ ಮಂಡ್ಯ ಬಿಟ್ಟು ಹೋಗಿ ಅಶೋಕ್ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಇನ್ನು ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಿಸಿದ್ದಕ್ಕೆ ಆರ್.ಅಶೋಕ್ ವಿರುದ್ಧ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಬೇಕಿರಲಿಲ್ಲ. ಅಶೋಕ್ ವಿರುದ್ಧ ಹೊಂದಾಣಿಕೆ ರಾಜಕಾರಣ ಮಾಡಿದ ಆರೋಪವಿದೆ. ಆದರೆ ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಶಿವಕುಮಾರ್, ಮೇಷ್ಟ್ರು ಮನೆ ತುಮಕೂರು: ಮಳೆರಾಯನ ಕೃಪೆಯಿಂದ ಅದ್ಹೇಗೋ, ಕೆರೆತುಂಬಿತು, ಆದ್ರೆ, ತುಂಬಿದ ಕೆರೆಯನ್ನ ಇವರು ಹಾಗೆಯೇ ಇರಲು ಬಿಡ್ತಾರಾ? ಖಂಡಿತಾ ಇಲ್ಲ, ಆ ಕೆರೆ ಈಗ ತ್ಯಾಜ್ಯ ಸುರಿಯುವ, ಕಸ ಎಸೆಯುವ ಸ್ಥಳವಾಗಿ ಮಾರ್ಪಟ್ಟಿದೆ. ಹೌದು…! ಇಂತಹದ್ದೊಂದು ಅನಾಗರಿಕ ಕೃತ್ಯ ನಡೆದಿರುವುದು ತುಮಕೂರು ನಗರಕ್ಕೆ ಹೊಂದಿಕೊಂಡಿರುವ ಮರಳೂರು ಗ್ರಾಮಕ್ಕೆ ಸೇರಿದ ಮರಳೂರು ಕೆರೆಯಲ್ಲಿ. ಈ ಬಾರಿ ವರುಣನ ಕೃಪೆಯಿಂದಾಗಿ ಇಡೀ ಜಿಲ್ಲೆಯ ಕೆರೆಗಳು ತುಂಬಿ ಕೋಡಿ ಹರಿದಿತ್ತು. ಜನಪ್ರತಿನಿಧಿಗಳು ತುಂಬಿದ ಕೆರೆಗೆ ಬಾಗಿನ ಅರ್ಪಿಸಿದ್ದರು. ಆದರೆ, ಮಳೆ ನೀರನ್ನು ಉಳಿಸುವ ಸಾಮಾಜಿಕ ಜವಾಬ್ದಾರಿಯ ಬಗ್ಗೆ ಜನತೆ ಯೋಚನೆ ಮಾಡದಿರುವುದು ವಿಪರ್ಯಾಸವಾಗಿದೆ. ಮಳೆಗಾಲದಲ್ಲಿ ತುಂಬಿದ್ದ ಮರಳೂರು ಕೆರೆ ಇದೀಗ ಸತ್ತ ಕೋಳಿ, ಪ್ರಾಣಿಗಳ ತ್ಯಾಜ್ಯಗಳನ್ನು ಎಸೆಯಲು ಬಳಕೆಯಾಗುತ್ತಿದೆ. ಕೆರೆಯಲ್ಲಿರುವ ಶುದ್ಧ ನೀರು ಪ್ರತಿ ದಿನ ಸುರಿಯುತ್ತಿರುವ ತ್ಯಾಜ್ಯಗಳಿಂದಾಗಿ ಕಲುಶಿತಗೊಳ್ಳುತ್ತಿದೆ. ಇದರಿಂದಾಗಿ ಕೆರೆಯಲ್ಲಿರುವ ಜಲಚರ ಜೀವಿಗಳು ಸಾಯುತ್ತಿವೆ, ಅಂತರ್ಜಲ ಮಾಲಿನ್ಯವಾಗುತ್ತಿದ್ದು, ಪರಿಸರಕ್ಕೆ ಹಾನಿಯಾಗುತ್ತಿದೆ. ಮರಳೂರು ಗ್ರಾಮದ ಬೋರ್ ವೆಲ್ ಗಳಿಗೆ ಈ ಕೆರೆಯ…
ತಿರುವನಂತಪುರಂ: ಮದ್ಯ ಸೇವಿಸಿ ಬಂದು ಹೆತ್ತ ತಾಯಿಗೆ ಥಳಿಸುತ್ತಿದ್ದ ಪಾಪಿ ಮಗನನ್ನು ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೊಟ್ಟಾಯಂನ ಮೀನಾಡೋಮ್ ನಲ್ಲಿ ಈ ಘಟನೆ ನಡೆದಿದ್ದು, 48 ವರ್ಷದ ಪುತ್ರ ಕೊಚುಮೊನ್ ಕುಡಿದು ಬಂದು ತಾಯಿಗೆ ಥಳಿಸುತ್ತಿರುವ ದೃಶ್ಯವನ್ನು ಆತನ ಪತ್ನಿಯೇ ವಿಡಿಯೋ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಿಗೆ ಸಿಗುತ್ತಿದ್ದಂತೆಯೇ, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ಕೊಚುಮೊನ್ ನನ್ನು ಬಂಧಿಸಲು ತೆರಳಿದ ವೇಳೆಯೂ ಆತ ಸ್ಥಳೀಯ ಬಾರ್ ನಲ್ಲಿ ಮದ್ಯ ಸೇವಿಸುತ್ತಿದ್ದ.’ ವಯಸ್ಸಾದ ತಾಯಿಗೆ ಹೊಡೆಯದಂತೆ ನೆರೆಹೊರೆಯವರು ಸಾಕಷ್ಟು ಸಲ ಆತನಿಗೆ ಬುದ್ಧಿ ಹೇಳಿದ್ದರು. ಆದರೆ, ಆತ ಯಾರ ಮಾತುಗಳನ್ನು ಕೇಳುತ್ತಿರಲಿಲ್ಲ, ಅತ್ತೆ ಪ್ರತೀ ದಿನ ಪೆಟ್ಟು ತಿನ್ನುವುದನ್ನು ನೋಡಲಾಗದೇ ಸೊಸೆ, ಈತ ಹಲ್ಲೆ ನಡೆಸುತ್ತಿರುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾಳೆ. ಇದೀಗ ಕೊಚುಮೊನ್ ಜೈಲುಪಾಲಾಗಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಪಾವಗಡ: 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋವನ್ನು ಇಡದೇ ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಿರುವ ಘಟನೆ ನಡೆದಿದೆ. ಪುರಸಭೆ ಅಧಿಕಾರಿಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿ, ಅಂಬೇಡ್ಕರ್ ಭಾವ ಚಿತ್ರವನ್ನಿಡದೆದೇ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಫೋಟೋವನ್ನು ಮಾತ್ರವೇ ಇಟ್ಟು ಗಣರಾಜ್ಯೋತ್ಸವ ಆಚರಣೆಗೆ ಮುಂದಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಘಟನೆಯನ್ನು ಖಂಡಿಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಅಂಬೇಡ್ಕರ್ ಅವರ ಫೋಟೋವನ್ನು ತರಿಸಿ ಇಡಲಾಗಿದೆ. ಇನ್ನೂ ಅಂಬೇಡ್ಕರ್ ಭಾವ ಚಿತ್ರ ಯಾಕೆ ಹಾಕಲಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳು ಮುಖ್ಯಾಧಿಕಾರಿ ಜಗರೆಡ್ಡಿ ಅವರನ್ನು ಪ್ರಶ್ನಿದಾಗ ಏರು ಧ್ವನಿಯಲ್ಲಿ ಮಾತನಾಡುವ ಮೂಲಕ ಉದ್ಧಟತನ ಮೆರೆದಿದ್ದಾರೆ. ಈ ವೇಳೆ ಪುರಸಭೆಯ ಕೆಲವು ಅಧಿಕಾರಿಗಳು ತರಾಟೆಗೆತ್ತಿಕೊಂಡ ಬಳಿಕ ಅಂಬೇಡ್ಕರ್ ಫೋಟೋ ಇಟ್ಟಿದ್ದಾರೆ. ಸಂವಿಧಾನದಡಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಸಂವಿಧಾನ ಶಿಲ್ಪಿಯ ಫೋಟೋ ಇಟ್ಟು ಗೌರವಿಸಲು ಬಹಳ ಕಷ್ಟಕರವಾಗುತ್ತಿದೆ. ಇಂತಹ ಅಧಿಕಾರಿಗಳು ಸರ್ಕಾರಿ ಕೆಲಸದಲ್ಲಿರಲು ಯೋಗ್ಯರೇ ಅನ್ನೋದನ್ನು ಸರ್ಕಾರ ಗಮನಿಸಬೇಕಿದೆ. ಸರ್ಕಾರದ…
ನವದೆಹಲಿ: ದೇಶದಾದ್ಯಂತ 74ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನವದೆಹಲಿಯಲ್ಲಿ ನಡೆಯುತ್ತಿರುವ ಪರೇಡ್ನಲ್ಲಿ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಿತು. ಈ ಬಾರಿಯ ಕರ್ನಾಟಕದ ಸ್ತಬ್ಧಚಿತ್ರ ನಾರಿಶಕ್ತಿ ಎಲ್ಲರ ಗಮನ ಸೆಳೆದಿದೆ. ರಾಜ್ಯದ 3 ಮಹಿಳಾ ಸಾಧಕರ ಅಸಾಧಾರಣ ಸಾಧನೆಗಳನ್ನು ಸಾಂಕೇತಿಕವಾಗಿ ಅನಾವರಣಗೊಳಿಸಿದೆ.ಸೂಲಗಿತ್ತಿ ನರಸಮ್ಮ – ಸೂಲಗಿತ್ತಿ, ತುಳಸಿ ಗೌಡ ಹಾಲಕ್ಕಿ – ವೃಕ್ಷ ಮಾತೆ ಮತ್ತು ಸಾಲುಮರದ ತಿಮ್ಮಕ್ಕ ಅವರು ಸಮಾಜಕ್ಕೆ ಸಲ್ಲಿಸಿದ ಅವರ ನಿಸ್ವಾರ್ಥ ಕೊಡುಗೆಯಿಂದಾಗಿ ಹೆಸರುವಾಸಿಯಾಗಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಜಿಲ್ಲೆಯ ಗಣರಾಜ್ಯೋತ್ಸವ ವೇಳೆ ಮಹಾ ಯಡವಟ್ಟಾಗಿದ್ದು, ಶೂ ಧರಿಸಿಯೇ ಧ್ವಜರೋಹಣ ಮಾಡಿದ ಚಿಕ್ಕೋಡಿ ಉಪವಿಭಾಗಧಿಕಾರಿ ನಡೆಗೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಗಣರಾಜ್ಯೋತ್ಸವದ ಧ್ವಜರೋಹಣ ಕಾರ್ಯಕ್ರಮಕ್ಕೆ ಉಪವಿಭಾಗಧಿಕಾರಿ ಮಾಧವ ಅವರು ಸಮಯ ಮೀರಿ ಬಂದಿದಲ್ಲದೇ , ಶೂ ಧರಿಸಿಯೇ ಧ್ವಜರೋಹಣ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಬಳಿಕ ಮಾಧವ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡೋದಕ್ಕೆ ಮುಂದಾಗಿದ್ದಾರೆ.ಆಗ ಕಾರ್ಯಕ್ರಮದಲ್ಲಿ ಸೇರಿದ ಸಿಬ್ಬಂದಿಗಳು ತಿಳಿಸಿದ ಬಳಿಕ ಅವರು ಶೂ ಅಲ್ಲೆ ಬಿಚ್ಚಿಟ್ಟಿದ್ದಾರೆ.ಈ ಎಲ್ಲಾ ನಡೆಗೆ ಸಾರ್ವಜನಿಕರು ಸಿಟ್ಟಿಗೆದ್ದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಜೀರ್ಣಕ್ರಿಯೆ ಮತ್ತು ಆರೋಗ್ಯಕರ ದೇಹದ ತೂಕವನ್ನು ಕಾಪಾಡಿಕೊಳ್ಳಲು ನಾವು ಆಹಾರದಿಂದ ಪಡೆಯಬೇಕಾದ ವಸ್ತುಗಳಲ್ಲಿ ಫೈಬರ್ ಒಂದಾಗಿದೆ. ನಾವು ತಿನ್ನದೇ ಇರುವುದೂ ಆಗಾಗ ನಿರ್ಲಕ್ಷಿಸುತ್ತೇವೆ. ಓಟ್ಸ್, ಕಾರ್ನ್, ಸೇಬು, ಎಲೆಕೋಸು, ಮಸೂರ, ಬಾದಾಮಿ, ಸೊಪ್ಪು, ಆಲೂಗಡ್ಡೆ, ಸಿಹಿ ಆಲೂಗಡ್ಡೆ, ಕ್ಯಾರೆಟ್ ಮತ್ತು ಬೀನ್ಸ್ಗಳಿಂದ ನಾವು ಫೈಬರ್ ಅನ್ನು ಪಡೆಯುತ್ತೇವೆ. ನಿಮ್ಮ ಆಹಾರದಲ್ಲಿ ಫೈಬರ್ ಭರಿತ ಆಹಾರಗಳನ್ನು ಸೇರಿಸುವ ಐದು ಪ್ರಯೋಜನಗಳನ್ನು ಪರಿಶೀಲಿಸಿ. ಕರುಳಿನಲ್ಲಿರುವ ಜೀರ್ಣಕಾರಿ ಬ್ಯಾಕ್ಟೀರಿಯಾವನ್ನು ರಕ್ಷಿಸುವಲ್ಲಿ ಫೈಬರ್ ಪ್ರಮುಖ ಪಾತ್ರ ವಹಿಸುತ್ತದೆ. ಕರುಳಿನ ಬ್ಯಾಕ್ಟೀರಿಯಾ ಎಂದು ಕರೆಯಲ್ಪಡುವ ಇವುಗಳನ್ನು ರಕ್ಷಿಸಿ ಮತ್ತು ಸರಿಯಾಗಿ ಕಾರ್ಯನಿರ್ವಹಿಸುವುದರಿಂದ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ತೋರಿಸುತ್ತವೆ. ಫೈಬರ್ ಸಮೃದ್ಧವಾಗಿರುವ ಆಹಾರವನ್ನು ತಿನ್ನುವುದು ನಿಮ್ಮ ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆಗಾಗ್ಗೆ ಊಟ ಮತ್ತು ತಿಂಡಿಗಳನ್ನು ದೀರ್ಘಕಾಲದವರೆಗೆ ಅನುಭವಿಸುವ ಮೂಲಕ ಸುಲಭವಾಗಿ ಕಡಿಮೆ ಮಾಡಬಹುದು. ಹೆಚ್ಚಿನ ಫೈಬರ್ ಆಹಾರಗಳು ಕ್ಯಾಲೊರಿಗಳಲ್ಲಿ ತುಲನಾತ್ಮಕವಾಗಿ ಕಡಿಮೆ.ಅವು ತುಂಬಾ ಕಡಿಮೆ ಕ್ಯಾಲೋರಿ, ಕಡಿಮೆ ಶಕ್ತಿ-ದಟ್ಟವಾದ ಆಹಾರಗಳಾಗಿದ್ದರೂ ಸಹ, ಅವರು…
ಜಗತ್ತಿನಾದ್ಯಂತ ಪತ್ರಿಕಾ ಸ್ವಾತಂತ್ರ್ಯಕ್ಕೆ ಬೆಂಬಲದ ಹೇಳಿಕೆಯೊಂದಿಗೆ US. ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿಯವರ ಪಾತ್ರದ ಕುರಿತು ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ನಿಷೇಧಿಸಿರುವ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ನೆಡ್ ಪ್ರೈಸ್ ಅವರು ಈ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಭಾರತದಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸುವುದನ್ನು ಪತ್ರಿಕಾ ಸ್ವಾತಂತ್ರ್ಯದ ಸಮಸ್ಯೆ ಎಂದು ಯುಎಸ್ ಪರಿಗಣಿಸಿದೆಯೇ ಎಂಬ ಪ್ರಶ್ನೆಯಾಗಿತ್ತು. ಯುಎಸ್ ಪ್ರಪಂಚದಾದ್ಯಂತ ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆಯನ್ನು ಬೆಂಬಲಿಸುವ ದೇಶವಾಗಿದೆ. ನಮ್ಮ ಪ್ರಜಾಪ್ರಭುತ್ವವು ಅಭಿವ್ಯಕ್ತಿ ಸ್ವಾತಂತ್ರ್ಯ, ಧರ್ಮದ ಸ್ವಾತಂತ್ರ್ಯ, ನಂಬಿಕೆಯ ಸ್ವಾತಂತ್ರ್ಯ ಮುಂತಾದ ಪ್ರಜಾಸತ್ತಾತ್ಮಕ ತತ್ವಗಳಿಂದ ಬಲಗೊಂಡಿದೆ. ಭಾರತ ಸೇರಿದಂತೆ ನಮ್ಮ ಸಂಬಂಧಗಳಲ್ಲಿ ಇದನ್ನು ಹೈಲೈಟ್ ಮಾಡಲು ನಾವು ಪ್ರಯತ್ನಿಸುತ್ತೇವೆ. ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರು ಹೇಳಿದ್ದಾರೆ. ಆ ಸಾಕ್ಷ್ಯಚಿತ್ರವನ್ನು ನೋಡಿಲ್ಲ. ಸಾಕ್ಷ್ಯಚಿತ್ರದ ಮೇಲಿನ ಭಾರತದ ನಿಷೇಧವು ಪತ್ರಿಕಾ ಸ್ವಾತಂತ್ರ್ಯದ ಸಮಸ್ಯೆಯಾಗಿದೆ. ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ಪರಸ್ಪರ ಹಂಚಿಕೊಳ್ಳುವ ಮೌಲ್ಯಗಳನ್ನು ಯುಎಸ್ ಹಂಚಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ನೆಡ್ ಪ್ರೈಸ್ ಹೇಳಿದ್ದಾರೆ.…
ಇಂದು ಭಾರತದ 74ನೇ ಗಣರಾಜ್ಯೋತ್ಸವ. ದೇಶಕ್ಕೆ ಬಲಿಷ್ಠ ಸಂವಿಧಾನ ಮತ್ತು ಸುಸಜ್ಜಿತ ಸ್ವ-ಆಡಳಿತ ವ್ಯವಸ್ಥೆ ದೊರೆತ ದಿನ. ಇಂದು ಪೂರ್ಣ ಸ್ವರಾಜ್ಯ ಸಾಧ್ಯವಾದ ದಿನದ ಆಚರಣೆಗೆ ದೇಶ ಸಜ್ಜಾಗಿದೆ. ದೆಹಲಿಯಲ್ಲಿ ವರ್ಣರಂಜಿತ ಸಮಾರಂಭಗಳು ಸಿದ್ಧವಾಗಿವೆ. ಇಂದು ರಾಷ್ಟ್ರ ರಾಜಧಾನಿಯಲ್ಲೂ ಕಟ್ಟುನಿಟ್ಟಿನ ಭದ್ರತಾ ತಪಾಸಣೆ ನಡೆಸಲಾಗುವುದು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಈ ವರ್ಷದ ಗಣರಾಜ್ಯೋತ್ಸವದ ಸಂದೇಶವು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರನ್ನು ಸ್ಮರಿಸುವುದಾಗಿದೆ.ಭಾರತ ಏಕತೆಗೆ ಪರಿಪೂರ್ಣ ಉದಾಹರಣೆಯಾಗಿದೆ ದೇಶ ವೇಗವಾಗಿ ಬೆಳೆಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು. ಗಣರಾಜ್ಯೋತ್ಸವದ ಪ್ರಮುಖ ಆಕರ್ಷಣೆ ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ವರೆಗೆ ನಡೆಯುವ ಹೆಮ್ಮೆಯ ಪರೇಡ್. ಬೆಳಗ್ಗೆ ರಾಷ್ಟ್ರಪತಿಗಳು ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ಎಲ್ಲರೂ ಏಕಮನಸ್ಸಿನಿಂದ ಜನಗಮನ ಪಠಣ ಮಾಡುವರು. ಬಳಿಕ ಸಶಸ್ತ್ರ ಸೇನಾ ರೆಜಿಮೆಂಟ್ ನ 21 ಗನ್ ಸೆಲ್ಯೂಟ್ ನಡೆಯಲಿದೆ. ನೌಕಾಪಡೆ ಮತ್ತು ವಾಯುಸೇನೆ ಬಲಿಷ್ಠವಾಗಲಿದೆ. 74ನೇ ಗಣರಾಜ್ಯೋತ್ಸವದಂದು ರಾಜ್ಯದಲ್ಲಿ ಅದ್ದೂರಿ ಆಚರಣೆಗಳು ನಡೆಯಲಿವೆ. ತಿರುವನಂತಪುರಂ ಸೆಂಟ್ರಲ್ ಸ್ಟೇಡಿಯಂನಲ್ಲಿ…