Subscribe to Updates
Get the latest creative news from FooBar about art, design and business.
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
- ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆ
- ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
- ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
- ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
- ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
- ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
- ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
Author: admin
ಬಿಜೆಪಿಗೆ ರೌಡಿಗಳು, ದುಡ್ಡಿರುವವರು ಕಾಣುತ್ತಾರೆ, ಹಿಂದುತ್ವಕ್ಕಾಗಿ ದುಡಿದ ನಮ್ಮಂಥವರು ಕಾಣುವುದಿಲ್ಲ ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ರೌಡಿಗಳ ಸೇರ್ಪಡೆ ವಿಚಾರ ಬಿಜೆಪಿ ಪಕ್ಷಕ್ಕೆ ಶೋಭೆ ತರುವುದಿಲ್ಲ. ಹಣ ಇದ್ದವರನ್ನು, ರೌಡಿಗಳನ್ನು, ಗೂಂಡಾಗಳನ್ನು ಪಕ್ಷದೊಳಗೆ ಸೇರಿಸಿಕೊಳ್ಳುತಿದ್ದಾರೆ. ತ್ಯಾಗ, ಬಲಿದಾನ ಮಾಡಿ ಶ್ರಮ ವಹಿಸಿ ದುಡಿದ ಹಿಂದೂ ಕಾರ್ಯಕರ್ತರು ಅವರಿಗೆ ಕಾಣುತ್ತಿಲ್ಲ. ನಮ್ಮ ಶ್ರೀರಾಮಸೇನೆಯ ಸಿದ್ಧಲಿಂಗ ಶ್ರೀ ಹಾಗೂ ನಾನು ರಾಜಕೀಯ ಪ್ರವೇಶಕ್ಕೆ ನಿರ್ಧಾರ ಮಾಡಿದರೆ ನಿಮಗೆ ಕಾಣುವುದಿಲ್ಲ. ಇಡೀ ಸಮಾಜದ ಸ್ವಾಸ್ಥ್ಯವನ್ನು, ನೈತಿಕತೆಯನ್ನು ಕೆಡಿಸುತ್ತಿರೋದು ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ. ಹಿಂದೂ ಸಂಘಟನೆಗಳ ಒಕ್ಕೂಟದಿಂದ 25 ಹಿಂದೂವಾದಿ ಅಭ್ಯರ್ಥಿಗಳನ್ನು ಈ ಬಾರಿಯ ಚುನಾವಣೆಯಲ್ಲಿ ಕಣಕ್ಕಿಸುತ್ತೇವೆ. ಇದರಲ್ಲಿ ಐದು ಸ್ವಾಮೀಜಿಗಳು ಈಗಾಗಲೇ ತಯಾರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು. ಅಂಜನಾದ್ರಿ ಕ್ಷೇತ್ರದ ಆವರಣದಲ್ಲಿ 500 ಮೀಟರ್ ಅಂತರದಲ್ಲಿ ಅನ್ಯ ಧರ್ಮೀಯರ ವ್ಯಾಪಾರ, ವ್ಯವಹಾರಕ್ಕೆ ಅವಕಾಶ ಕೊಡಬಾರದು. ಅವಕಾಶ ಕೊಟ್ಟರೆ ಹನುಮ ಭಕ್ತರು ಅದಕ್ಕೆ ಉತ್ತರ ಕೊಡುತ್ತಾರೆ ಎಂದಿದ್ದಾರೆ. ಚುನಾವಣೆಗಾಗಿ ಅದು ಮಾಡ್ತೀವಿ, ಇದು…
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಗವಾನ್ (89) ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯ ನಿರ್ದೇಶಕ ಭಗವಾನ್ ಅವರನ್ನು ಸೋಮವಾರ ಸಂಜೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1966 ರಲ್ಲಿ ತೆರೆಕಂಡ ‘ಸಂಧ್ಯಾರಾಗ’ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾದರು. ಬಳಿಕ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರರಾಗಿ ಚಿತ್ರನಿರ್ದೇಶಿಸಲು ಪ್ರಾರಂಭಿಸಿದರು. ದೊರೆ-ಭಗವಾನ್ ಎಂದೇ ಖ್ಯಾತರಾದ ಈ ಜೋಡಿ ಕನ್ನಡ ಚಿತ್ರರಂಗದ ಮತ್ತೋರ್ವ ನಿರ್ದೇಶಕರಾದ ದೊರೈರಾಜ್ ಜೊತೆಗೂಡಿ ಚಿತ್ರಗಳನ್ನು ನಿರ್ದೇಶಿಸಿದರು. ಈ ಜೊಡಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಡಾ.ರಾಜ್ ಕುಮಾರ್ ಜೊತೆ ಅತೀ ಹೆಚ್ಚು 30 ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ರೈತರಿಗೆ ಸರ್ಕಾರ ಎಥೆನಾಲ್ ಮೇಲಿನ ಲಾಭಾಂಶ ನೀಡಲು ನಿರ್ಧರಿಸಿದೆ. ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು.ರೈತರ ಒತ್ತಡಕ್ಕೆ ಮಣಿದು ಸರ್ಕಾರ ಪ್ರತಿ ಟನ್ ಕಬ್ಬಿಗೆ 50 ರೂ. ನಂತೆ ನೀಡಲು ನಿರ್ಧರಿಸಲಾಗಿದೆ. ವಿಕಾಸಸೌಧದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆಸಿದ , ಎಫ್ಆರ್ ಪಿ ದರ ಪಾವತಿ ಬಳಿಕ ಪ್ರತಿ ಟನ್ ಗೆ ಹೆಚ್ಚುವರಿಯಾಗಿ 50 ರೂ. ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಿದೆ. ಇಂದೇ ಆದೇಶ ಹೊರಡಿಸುವಂತೆ ಕಬ್ಬು ಅಭಿವೃದ್ದಿ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿರುವ ಎಂಎಸ್ಸಿ ಪದವೀಧರೆ ಪತ್ನಿಯ ಬರ್ತ್ ಡೇ ದಿನವೇ ಆಕೆಯನ್ನು ಗಂಡನೇ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ನಗರದ ಐಯುಡಿಪಿ ಬಡಾವಣೆಯ ಮನೆಯಲ್ಲಿ ಕೆಳಗೋಟೆ ಬಡಾವಣೆಯ ಕಿರಣ್ ಪತ್ನಿ ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿಯ ವಿನುತಾರ ಮೃತದೇಹ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಡುವೆ ಪ್ರೇಮಾಂಕುರ ಆಗಿತ್ತು. ಚಿತ್ರದುರ್ಗದಲ್ಲಿ ಎಂಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿನುತಾ, ಡಿಪ್ಲೋಮಾ ಓದುತ್ತಿದ್ದ ಕಿರಣ್ ನನ್ನು ಪ್ರೀತಿಸಿ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಒಂದೂವರೆ ವರ್ಷದ ಗಂಡು ಮಗುವಿದೆ. ಆರು ತಿಂಗಳಿಂದ ಕಿರಣ್ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡಲು ಆರಂಭಿಸಿ ಹೊಡೆದು ತವರು ಮನೆಗೆ ಕಳಿಸಿದ್ದಾನೆ. ಸೋಮವಾರ ವಿನುತಾ ಬರ್ತ್ ಡೇ ಆಗಿದ್ದು ಸಂಜೆಗೆ ದೇಗುಲಕ್ಕೆ ಹೋಗಿ ಬರೋಣವೆಂದು ಕರೆದಿದ್ದಾಳೆ. ಗಲಾಟೆ ಮಾಡಿದ ಆಕೆಯನ್ನು ಹೊಡೆದು ಸಾಯಿಸಿ ನೇಣು ಬಿಗಿದಿದ್ದು ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾನೆ. ಒಂದೂವರೆ ವರ್ಷದ ಮಗು ವಿನುತಾ(27) ನೇಣಿಗೀಡಾದ ಸ್ಥಳದಲ್ಲಿ ಕಾಲ ಬಳಿಯಲ್ಲೇ ಇದೆ. ಕಿರಣ್ ಗೆ…
ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬೀಗ ಹಾಕಿದ ಬಾಡಿಗೆ ಮನೆಯೊಳಗೆ ಇರಿಸಲಾಗಿದ್ದ ಡ್ರಮ್ನಲ್ಲಿ ಮಹಿಳೆಯ ಮೃತದೇಹದ ಭಾಗಗಳು ಪತ್ತೆಯಾಗಿವೆ. ಆ ಮೃತದೇಹ ವರ್ಷದಿಂದ ಅದೇ ಡ್ರಮ್ನಲ್ಲಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ. ವಿಶಾಖಪಟ್ಟಣಂನ ಮಧುರವಾಡದಲ್ಲಿ ಹಲವು ತಿಂಗಳುಗಳಿಂದ ಬಾಡಿಗೆದಾರರು ಬಾಡಿಗೆಯನ್ನು ಪಾವತಿಸದ ಕಾರಣ ಮನೆಯ ಮಾಲೀಕರು ಮನೆಯ ಬಾಗಿಲು ಒಡೆದು ನೋಡಿದಾಗ ಡ್ರಮ್ ಒಳಗೆ ಮಹಿಳೆಯ ಮೃತದೇಹದ ಭಾಗಗಳು ಪತ್ತೆಯಾಗಿವೆ. ಬಾಡಿಗೆ ಕೊಡದ ಹಿನ್ನೆಲೆಯಲ್ಲಿ ಆ ಮನೆಯಲ್ಲಿದ್ದ ಸಾಮಾನುಗಳನ್ನು ಹೊರಗೆ ಹಾಕಲು ಮನೆಯ ಮಾಲೀಕರು ಬಲವಂತವಾಗಿ ಮನೆಯೊಳಗೆ ಪ್ರವೇಶಿಸಿದಾಗ ಶವವನ್ನು ಬಚ್ಚಿಟ್ಟಿರುವುದು ಗೊತ್ತಾಗಿದೆ. 2021ರ ಜೂನ್ನಲ್ಲಿ ಬಾಡಿಗೆದಾರ ಹೆಂಡತಿ ಗರ್ಭಿಣಿ ಎಂದು ಹೇಳಿ ಊರಿಗೆ ಹೋಗಿದ್ದ. ಬಳಿಕ ಮನೆ ಬಾಡಿಗೆಯನ್ನು ಕಟ್ಟಿರಲಿಲ್ಲ. ಒಂದೆರಡು ಬಾರಿ ಆ ಮನೆಗೆ ಬಂದಿದ್ದರೂ ಬಾಡಿಗೆಯನ್ನು ಕೊಟ್ಟಿರಲಿಲ್ಲ. 1 ವರ್ಷಕ್ಕೂ ಹೆಚ್ಚು ಕಾಲ ಕಾದ ಬಳಿಕ ಮಾಲೀಕ ಮನೆಗೆ ನುಗ್ಗಿ ಬಾಡಿಗೆದಾರನ ಸಾಮಾನುಗಳನ್ನು ಹೊರಗೆ ಹಾಕಿದ್ದಾರೆ. ಆಗ ಮನೆಯೊಳಗೆ ಇದ್ದ ಡ್ರಮ್ನಲ್ಲಿ ಮಹಿಳೆಯ ಕೊಳೆತ ದೇಹದ ಭಾಗಗಳು ಪತ್ತೆಯಾಗಿವೆ. ಆ ಶವ…
ಗಡಿ ವಿವಾದದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಭೇಟಿ ನೀಡಬೇಕಿತ್ತು. ಆದರೆ ರಾಜ್ಯ ಸರ್ಕಾರ ಮಹಾರಾಷ್ಟ್ರದ ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿ ಭೇಟಿ ರದ್ದಾಗಿದೆ. ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ, ಬೆಳಗಾವಿ ಭೇಟಿಗಾಗಿ ಕರ್ನಾಟಕ ಸರ್ಕಾರ ಅವಕಾಶ ನೀಡಿಲ್ಲ. ಡಿಸೆಂಬರ್ 3 ರಂದು ಭೇಟಿ ಮಾಡಲು ನಿರ್ಧರಿಸಿದ್ದೇವು. ಆದರೆ ಕೆಲ ದಲಿತ ಸಂಘಟನೆಗಳು ಡಿಸೆಂಬರ್ 6 ರಂದು ಬೆಳಗಾವಿಗೆ ಬರುವಂತೆ ಮನವಿ ಮಾಡಿದ್ದರು. ಇಂದು ಡಾ.ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನವಾಗಿದ್ದು, ಶ್ರದ್ಧಾಂಜಲಿ ಸಲ್ಲಿಕೆ ವೇಳೆ ಅಹಿತಕರ ಘಟನೆ ನಡೆಯಬಾರದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಬಾರದು ಎಂದು ಬೆಳಗಾವಿ ಭೇಟಿ ಕ್ಯಾನ್ಸಲ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರ ಸಚಿವ ಚಂದ್ರಕಾಂತ ಪಾಟೀಲ್, ಅಬಕಾರಿ ಸಚಿವ ಶಂಬುರಾಜ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಅವರು ಬೆಳಗಾವಿಗೆ ಭೇಟಿ ನೀಡಿ ಪ್ರಚೋದನಾಕಾರಿ ಭಾಷಣ ಅಥವಾ ಪ್ರಚೋದನಾಕಾರಿ ಹೇಳಿಕೆ ನೀಡುವ ಸಾಧ್ಯತೆಗಳು ಇವೆ. ಈ…
ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೇಲ್ವರ್ಗಗಳಿಗೆ ನೀಡಲಾಗಿರುವ ಶೇ.10 ಮೀಸಲನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಕೋರಿ ಡಿಎಂಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಮೀಸಲು ಜಾತಿ ತಾರತಮ್ಯವನ್ನು ಕಾನೂನುಬದ್ಧಗೊಳಿಸುತ್ತದೆ ಎಂದು ವಾದಿಸಿದೆ. ಶೇ.10 ಮೀಸಲಾತಿ ಸರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಆದರೆ ಇದು ಮಂಡಲ್ ತೀರ್ಪು ಎಂದೇ ಜನಪ್ರಿಯತೆ ಪಡೆದುಕೊಂಡಿರುವ 1992ರ 9 ನ್ಯಾಯಾಧೀಶರ ಸಾಂವಿಧಾನಿಕ ಪೀಠ ನೀಡಿದ ಆದೇಶದ ಉಲ್ಲಂಘನೆಯಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಇಂದ್ರಾ ಸಾಹ್ನಿ ವರ್ಸಸ್ ಕೇಂದ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ ಸಂವಿಧಾನದ ಮೂಲ ರೂಪಕ್ಕೆ ಧಕ್ಕೆ ತರಬಾರದು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಆದರೆ ಶೇ.10ರಷ್ಟು ಮೀಸಲನ್ನು ಮಾನ್ಯ ಮಾಡುವ ಮೂಲಕ ಇದನ್ನು ಉಲ್ಲಂಘಿಸಲಾಗಿದೆ. ಆರ್ಥಿಕ ಅಂಶವನ್ನು ಮಾನದಂಡವಾಗಿಟ್ಟುಕೊಂಡು ಮೀಸಲು ನೀಡುವುದು ಸಂವಿಧಾನಕ್ಕೆ ವಿರೋಧವಾಗಿದೆ ಎಂದು ಡಿಎಂಕೆ ತಿಳಿಸಿದೆ. ಈ ಹಿಂದೆ ಕಾಂಗ್ರೆಸ್ ಕೂಡ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೇಲ್ವರ್ಗದ ಆರ್ಥಿಕ ಹಿಂದುಳಿದವರ ಮೀಸಲು, ಆರ್ಥಿಕತೆ ಹಾಗೂ ಗಡಿಗಳ ಪರಿಸ್ಥಿತಿ ಮೊದಲಾದ ವಿಚಾರಗಳ…
ಬಿಜೆಪಿ ವಿಧಾನ ಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಸದ್ಯದಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಅವರು ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಪುತ್ರ ಪೂರ್ವಜ್ ವಿಶ್ವನಾಥ್ ಈಗಾಗಲೇ ಕಾಂಗ್ರೆಸ್ ಜತೆ ಗುರುತಿಸಿಕೊಂಡಿರುವುದರಿಂದ ಸದ್ಯದಲ್ಲೇ ವಿಶ್ವನಾಥ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ವಿಶ್ವನಾಥ್ ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪಕ್ಷ ಸೇರಿ ರಾಜ್ಯಾಧ್ಯಕ್ಷರೂ ಆಗಿದ್ದರು. ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆಪರೇಷನ್ ಕಮಲದ ವೇಳೆ ಬಿಜೆಪಿಗೆ ಹಾರಿದ್ದ ಅವರು ಉಪ ಚುನಾವಣೆಯಲ್ಲಿ ಸೋತಿದ್ದರು. ಪರಿಷತ್ ಸದಸ್ಯರಾಗಿದ್ದ ಅವರಿಗೆ ಬಿಜೆಪಿ ಕೊಟ್ಟ ಮಾತಿನಂತೆ ಸಚಿವ ಸ್ಥಾನ ನೀಡಿಲ್ಲ ಎಂಬ ಅಸಮಾಧಾನವಿದೆ. ಪಠ್ಯ ಪರಿಷ್ಕರಣೆ ವಿಚಾರ, ಹಿಜಾಬ್ ವಿಚಾರ ಸೇರಿದಂತೆ ಹಲವು ವಿಚಾರಗಳಲ್ಲಿ ಬಿಜೆಪಿಗೆ ವಿರುದ್ಧವಾದ ಹೇಳಿಕೆ ನೀಡುತ್ತಿದ್ದ ವಿಶ್ವನಾಥ್ ಇತ್ತೀಚೆಗೆ ಬಿಜೆಪಿ ಜತೆ ಅಂತರ ಕಾಯ್ದುಕೊಂಡಿದ್ದರು. ವಿಶ್ವನಾಥ್ ಪುತ್ರ ಪೂರ್ವಜ್ ನಂಜನಗೂಡು ತಾಲೂಕು ತಗಡೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ…
ಮಹಾರಾಷ್ಟ್ರದ ಸಚಿವರಿಗೆ, ಸಂಸದರಿಗೆ ಬೆಳಗಾವಿ ಗಡಿ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಇಬ್ಬರು ಸಚಿವರು ಮತ್ತು ಓರ್ವ ಸಂಸದರ ಪ್ರವಾಸ ಪಟ್ಟಿ ಬಂದಿದೆ. ಈ ಮುಂಚೆ ಡಿಸೆಂಬರ್ 3ಕ್ಕೆ ಬರುವುದಾಗಿ ಹೇಳಿದ್ದರು. ಇದೀಗ ಡಿಸೆಂಬರ್ 6ಕ್ಕೆ ಬರುವುದಾಗಿ ಹೇಳಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಪರಿಸ್ಥಿತಿ ತುಂಬಾ ಬಿಗಡಾಯಿಸಿದೆ. ಅವರಾಗೇ ಪ್ರವಾಸ ರದ್ದು ಪಡಿಸುವ ನಿರೀಕ್ಷೆ ಇದೆ. ಇಲ್ಲವಾದರೆ ನಾವೇ ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು. ಸಚಿವರು ಮತ್ತು ಸಂಸದರ ಭೇಟಿ ಸಂಬಂಧ ಈ ಹಿಂದೆ ಹೇಗೆ ಆದೇಶ ಹೊರಡಿಸಿ ತಡೆಯಲಾಗಿತ್ತೋ ಅದೇ ರೀತಿ ಬೆಳಗಾವಿ ನಿಷೇಧ ಆದೇಶ ಹೊರಡಿಸಲಾಗುವುದು. ಐಪಿಸಿ ಸೆಕ್ಷನ್ 143 ಪ್ರಕಾರ ಪ್ರತಿಬಂಧಕ ಕಾಯ್ದೆ ಹೊರಡಿಸುತ್ತೇವೆ. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದರೆ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಕರ್ನಾಟಕದ ಸಿಎಸ್ ಸಂದೇಶ ಕಳುಹಿಸಿದ್ದಾರೆ. ಬೆಳಗಾವಿಯ ಎಲ್ಲ ಗಡಿಭಾಗದಲ್ಲಿಯೂ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ ಎಂದು…
ಬೆಂಗಳೂರು; ಜಯನಗರ ನ್ಯಾಷನಲ್ ಕಾಲೇಜಿನಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ ಅಂಕ ಗಳಿಸಿದ ಒಟ್ಟು 7 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಲಾಯಿತು. ಘಟಿಕೋತ್ಸವದಲ್ಲಿ ಪದವಿ ವಿಭಾಗದ 222 ಮತ್ತು ಸ್ನಾತಕೋತ್ತರ ವಿಭಾಗದ 52 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 274 ವಿದ್ಯಾರ್ಥಿಗಳು ಪದವಿ, ಪ್ರಮಾಣ ಪತ್ರ ಪಡೆದರು. ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಪ್ರೊ. ಪಿ. ಬಲರಾಮ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ವಿಜ್ಞಾನ ಪ್ರತಿಯೊಬ್ಬರ ಜೀವನದಲ್ಲೂ ಬಹು ಮುಖ್ಯ. ನೀವೆಲ್ಲಾ ಕೋವಿಡ್ ಕಾಲದ ಪದವೀಧರರು. ಆ ಸಮಯದಲ್ಲಿ ವಿಜ್ಞಾನ ಲೋಕದಲ್ಲಿ ಅನೇಕ ಸಂಶೋಧನೆಗಳನ್ನು ಕಂಡಿದ್ದೀರಿ. ಈ ಪ್ರಕೃತಿಯಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರಿಗೂ ವಿಜ್ಞಾನದ ಮಹತ್ವ ತಿಳಿದಿರಬೇಕು” ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಿ ವೈಜ್ಞಾನಿಕ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ಬದುಕಿಗೂ ಅನಿವಾರ್ಯ ಮತ್ತು ಡಾ. ಎಚ್. ನರಸಿಂಹಯ್ಯನವರ ಕನಸೂ ಹೌದು” ಎಂದರು. ಪ್ರಥಮ ಅಂಕ ಪಡೆದ ಪದವಿ ವಿದ್ಯಾರ್ಥಿಗಳಾದ ಪ್ರಿಯಾಂಕ…