Author: admin

ಮಧುಗಿರಿ: ಅಬಕಾರಿ ಇಲಾಖೆಯಿಂದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಮಧ್ಯ ಬಿಯರ್ ಸೇಂದಿಯನ್ನು ಹಾಗೂ  ಮುಂತಾದ ವಸ್ತುಗಳನ್ನು ಪಟ್ಟಣದ ಹೊರವಲಯದಲ್ಲಿರುವ ಪುರಸಭಾ ಕಸ ವಿಲೇವಾರಿ ಘಟಕದಲ್ಲಿ ನಾಶಪಡಿಸಲಾಯಿತು. ಈ ವೇಳೆ ಅಬಕಾರಿ ನಿರೀಕ್ಷರಾದ  ರಾಮಮೂರ್ತಿ ಮಾಧ್ಯಮದೊಂದಿಗೆ ಮಾತನಾಡಿ, ಒಟ್ಟು 32 ಪ್ರಕರಣಗಳಲ್ಲಿ 638 ಲೀಟರ್ ಮಧ್ಯ, 78 ಲೀಟರ್ ಬಿಯರ್, 123 ಲೀಟರ್ ಸೇಂದಿ ಹಾಗೂ ಒಂದು ಪ್ಲಾಸ್ಟಿಕ್ ಡ್ರಮ್ ಅನ್ನು  ವಶಪಡಿಸಲಾಗಿತ್ತು. ಮರುಬಳಕೆಗೆ  ಅವಕಾಶ ಇಲ್ಲದಿರುವುದರಿಂದ ಅಬಕಾರಿ ಉಪಆಯುಕ್ತರ ಆದೇಶದ ಮೇರೆಗೆ ಇಂದು ಪಟ್ಟಣದ ಹೊರವಲಯದಲ್ಲಿರುವ ಪುರಸಭೆ ಕಸವಿಲೇವಾರಿ ಘಟಕದಲ್ಲಿ ನಾಶ ಪಡಿಸಿದ್ದೇವೆ ಎಂದು ತಿಳಿಸಿದರು. ಈ ವೇಳೆ ಕೆ.ಎಸ್. ಬಿ.ಸಿ.ಎಲ್ ಡಿಪೋ ಮ್ಯಾನೇಜರ್ ವೀರಾರೆಡ್ಡಿ,  ಅಬಕಾರಿ ಉಪನಿರೀಕ್ಷಕರ ಸುರೇಶ ಆರ್,  ಗ್ರೇಟ್-2 ತಾಸಿಲ್ದಾರ್ ತಿಪ್ಪೇಸ್ವಾಮಿ,  ಇನ್ಸ್’ಪೆಕ್ಟರ್ ನಾಗರಾಜು, ಹಾಗೂ ಅಬಕಾರಿ ಸಿಬ್ಬಂದಿ ಹಾಜರಿದ್ದರು. ವರದಿ: ಅಬಿದ್ ಮಧುಗಿರಿ  ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಹೆಚ್. ಡಿ.ಕೋಟೆ ತಾಲ್ಲೂಕಿನಲ್ಲಿ ಗ್ರಾಮೀಣ ದಸರಾ ಪ್ರಯುಕ್ತ ಕೆಸರುಗದ್ದೆ ಓಟ ಆಯೋಜನೆ ಮಾಡಲಾಗಿತ್ತು. ಕೆಸರು ಗದ್ದೆ ಓಟದ ಉಸ್ತುವಾರಿ ವಹಿಸಿದ್ದ  ಕೃಷಿ ಅಧಿಕಾರಿ ರಂಗಸ್ವಾಮಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಕೆಸರು ಗದ್ದೆ ಓಟದಲ್ಲಿ ಹಲವಾರು ಉತ್ಸಾಹಿ ರೈತರು ಮತ್ತು ರೈತ ಮಹಿಳೆಯರು ಭಾಗವಹಿಸಿ ತಮ್ಮ ಕ್ರೀಡಾ ಆಸಕ್ತಿಯನ್ನು ಪ್ರದರ್ಶನ ಗೊಳಿಸಿದ್ದಾರೆ. ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ಒದಗಿಸಿ ಕೊಟ್ಟಿರುವುದು ಸಂತೋಷವನ್ನುಂಟು ಮಾಡಿದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಕೆಸರು ಗದ್ದೆ ಓಟದ ಸ್ಪರ್ದೆಯಲ್ಲಿ  ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.  ತಾಲ್ಲೂಕು ಆಡಳಿತ ಆಯೋಜನೆ ಮಾಡಿದ್ದ ಎಲ್ಲಾ ಕ್ರೀಡಾಕೂಟಗಳಿಗಿಂತ, ವಿಭಿನ್ನವಾಗಿ ಕೃಷಿ ಅಧಿಕಾರಿ ರಂಗಸ್ವಾಮಿ ಕೆಸರುಗದ್ದೆ ಓಟವನ್ನು ಆಯೋಜನೆ ಮಾಡಿರುವುದು ವಿಶೇಷವಾಗಿ ಗಮನ ಸೆಳೆಯಿತು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತುರುವೇಕೆರೆ: ತಾಲೂಕಿನಲ್ಲಿರುವ ಪ್ರವಾಸಿ ಮಂದಿರಕ್ಕೆ ಇಂದು ಲೋಕಾಯುಕ್ತ ಇನ್ಸ್’ಪೆಕ್ಟರ್ ರಾಮರೆಡ್ಡಿ ಹಾಗೂ ತಂಡ ಭೇಟಿ ನೀಡಿ, ಸಾರ್ವಜನಿಕರ ಅಹವಾಲು, ರೈತರ ವಿವಿಧ ಬೇಡಿಕೆಗಳನ್ನು ಆಲಿಸಿದರು. ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಲೋಕಾಯುಕ್ತರ ಬರುವಿಕೆಗಾಗಿ ತಾಲೂಕಿನ ಸರ್ಕಾರಿ ಅಧಿಕಾರಿಗಳು ಕಾಯುತ್ತಿದ್ದರು. ಸಭಾಂಗಣದ ಒಳಗಡೆ ಲೋಕಾಯುಕ್ತರು  ಪ್ರವೇಶಿಸಿದ ತಕ್ಷಣವೇ,  “ನಾವು ಯಾವುದೇ ತರಹದ ಸರ್ಕಾರಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲು ಬಂದಿಲ್ಲ ನಮ್ಮ ಭೇಟಿ ಏನಿದ್ದರೂ ರೈತರು ಸಾರ್ವಜನಿಕರ ಮತ್ತು ಪತ್ರಕರ್ತರು ಜೊತೆಗೆ ಮಾತ್ರ” ಎಂದು ಹೇಳಿದರಲ್ಲದೇ, ಸಭಾಂಗಣದಲ್ಲಿದ್ದ ತಾಲೂಕಿನ ಸರ್ಕಾರಿ ಮೇಲಾಧಿಕಾರಿಗಳನ್ನು  ತಮ್ಮ ತಮ್ಮ ಜವಾಬ್ದಾರಿಯುತ ಕೆಲಸಗಳಿಗೆ ಮರಳಲು ಸೂಚಿಸಿದರು. ತದ ನಂತರ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಅವರು,  ಸುಮಾರು ನಾಲ್ಕು ಗಂಟೆಗಳ ಕಾಲ ಸಾರ್ವಜನಿಕರ, ರೈತರ ವಿವಿಧ ಸಮಸ್ಯೆಗಳನ್ನು ಆಲಿಸಿದರು.  ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಇನ್ನೂ ಮುಂದೆ ಯಾವುದೇ ತರಹದ ಅಕ್ರಮಗಳಾಗಲಿ, ಅಧಿಕಾರಿಗಳ ಬೇಜವಾಬ್ದಾರಿಯಗಲಿ, ರೈತರನ್ನು ಪದೇಪದೇ ವಿನಾಕಾರಣ ಅಲೆಸಿ ತೊಂದರೆ ಕೊಡುವುದು, ಸರಿಯಾದ ಸಮಯಕ್ಕೆ ಸರ್ಕಾರಿ ಅಧಿಕಾರಿಗಳು ಬಾರದೇ ಇರುವುದು,…

Read More

ಮಧುಗಿರಿ: ತಾಲೂಕು ಕಸಬಾ ಹೋಬಳಿ ಸಿದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮುಂಭಾಗದಲ್ಲಿ ಪಂಚಾಯತಿ ವತಿಯಿಂದ ಕಸದ ತೊಟ್ಟಿಯನ್ನು ಇಟ್ಟಿದ್ದು, ಇದರಿಂದ ಶಾಲೆಯ ಸ್ವಚ್ಛ ಆವರಣಕ್ಕೆ ಧಕ್ಕೆಯಾಗುತ್ತಿರುವ ಕುರಿತು ನಮ್ಮತುಮಕೂರು ಮಾಧ್ಯಮ  ಸವಿವರವಾದ ವರದಿಯನ್ನು ಮಾಡಿತ್ತು. ಇದೀಗ ಗ್ರಾಮ  ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮಕೈಗೊಂಡಿದ್ದಾರೆ. ಇದೀಗ ಶಾಲೆಯ ಮುಂಭಾಗದಲ್ಲೇ ಇದ್ದ ಕಸದ ತೊಟ್ಟಿಯನ್ನು ತೆರವುಗೊಳಿಸಲಾಗಿದ್ದು, ಜೊತೆಗೆ ಶಾಲಾ ಮಕ್ಕಳಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದ ತುಕ್ಕು ಹಿಡಿದ ಪೈಪ್ ಲೈನ್ ನ್ನು ಕೂಡ ತೆರವುಗೊಳಿಸುವ ಮೂಲಕ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮಕೈಗೊಳ್ಳಲಾಗಿದೆ. ಹಲವು ಸಮಯಗಳಿಂದ ಬಗೆ ಹರಿಯದೇ ಉಳಿಸಿದ್ದ ಸಮಸ್ಯೆ ನಮ್ಮ ತುಮಕೂರು ವರದಿಯಿಂದ ಕೆಲವೇ ದಿನಗಳಲ್ಲಿ ಬಗೆ ಹರಿದಿದ್ದು, ನಮ್ಮತುಮಕೂರು ಮಾಧ್ಯಮದ ವರದಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಸಮಸ್ಯೆ ಬಗೆ ಹರಿದ ಹಿನ್ನೆಲೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕ, ಹಾಗೂ ಸಹಶಿಕ್ಷರು  ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರಿಗೆ ಅಭಿನಂದನೆಗಳು ತಿಳಿಸಿ ಮುಂದಿನ…

Read More

ಗುಬ್ಬಿ: ವಾಲ್ಮೀಕಿ ಜನಾಂಗದ ಮೀಸಲಾತಿಗಾಗಿ ಮಹಾಸ್ವಾಮಿಗಳು ಹೋರಾಡುತ್ತಿದ್ದು, ಇಂದಿಗೆ 231 ದಿನಗಳ ಕಳೆದರೂ ಈವರೆಗೆ ಸರ್ಕಾರ ಮೀಸಲಾತಿ ಹೆಚ್ಚಿಸದೇ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಸ್ ಸಿ, ಎಸ್ ಟಿ ಸಮುದಾಯಗಳು ಮತ್ತು ತಳ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದ ಮುಖಂಡರು, ಸರ್ಕಾರದ ನಿರ್ಲಕ್ಷ್ಯದ ಧೋರಣೆಯನ್ನು ಖಂಡಿಸಿದರು. ಸ್ವಾಮೀಜಿಗಳು ಆಹೋ ರಾತ್ರಿ ಧರಣಿ ಮಾಡುತ್ತಿದ್ದರೂ, ಸರ್ಕಾರ ಸೌಜನ್ಯಕ್ಕಾದರೂ ಅವರನ್ನು ಭೇಟಿ ಮಾಡುವ ಕೆಲಸ ಮಾಡಿಲ್ಲ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವರದಿ: ಮಂಜುನಾಥ್ ಗುಬ್ಬಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ-ಶಿರಗಾಂವ ರಸ್ತೆಯಲ್ಲಿ ನಡೆದಿದೆ. ಸವದತ್ತಿ ತಾಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ್ (21) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತ ದುರ್ದೈವಿಗಳು. ಇವರಿಬ್ಬರೂ ಶಿರಗಾಂವ ಗ್ರಾಮಕ್ಕೆ ತೆರಳುತ್ತಿದ್ದರು. ಬೈಕ್‍ನಲ್ಲಿ ವೇಗವಾಗಿ ಹೋಗುತ್ತಿದ್ದ ವೇಳೆ ರಸ್ತೆ ಬದಿ ಟ್ರ್ಯಾಕ್ಟರ್ ನಿಲ್ಲಿಸಿರುವುದನ್ನು ಗಮನಿಸದೇ ಡಿಕ್ಕಿ ಹೊಡೆದಿದ್ದಾರೆ. ಇಬ್ಬರ ತಲೆಗೂ ಗಂಭೀರವಾಗಿ ಪೆಟ್ಟು ಬಿದ್ದಿತ್ತು. ಕೂಡಲೇ ಸ್ಥಳೀಯರು ಆಂಬುಲೆನ್ಸ್‌ ಕರೆಸಿ ಆಸ್ಪತ್ರೆಗೆ ರವಾನಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಸಾವನ್ನಪ್ಪಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ತಾಲೂಕಿನ ಸಂತಿ ಬಸ್ತವಾಡ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದೇಮಣ್ಣ ನಾಯ್ಕ ಜಯ ಗಳಿಸಿದ್ದಾರೆ. ಮಂಗಳವಾರ ಅಧ್ಯಕ್ಷ ಸ್ಥಾನಕ್ಕೆ ನಡೆದ ತುರುಸಿನ ಸ್ಪರ್ಧೆಯಲ್ಲಿ ಒಟ್ಟು 15 ಮತಗಳ ಪೈಕಿ ದೇಮಣ್ಣ ನಾಯ್ಕ 8 ಮತ ಗಳಿಸಿ ಜಯ ಸಾಧಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭರಮ ಗುದುಮ್ಕೇರಿ ಅವರು 7 ಮತ ಗಳಿಸಿ ಸೋಲನುಭವಿಸಿದರು. ಅಧ್ಯಕ್ಷ ಸ್ಥಾನಕ್ಕೇರಿದ ಕಾಂಗ್ರೆಸ್ ಅಭ್ಯರ್ಥಿ ದೇಮಣ್ಣ ನಾಯ್ಕ ಹಾಗೂ ಆಯ್ಕೆಯಾಗಲು ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ. ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬಾಗಲಕೋಟೆ: ಮುಧೋಳ ನಗರದಲ್ಲಿ ಏರ್ಪಡಿಸಲಾಗಿದ್ದ ವಿಧಾನ್​ ಪರಿಷತ್ ಸದಸ್ಯ, ಆರ್​ ಬಿ ತಿಮ್ಮಾಪುರ ಜನ್ಮದಿನೋತ್ಸವ ಕಾರ್ಯಕ್ರಮದ ವೇದಿಕೆ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಗ್ಗರಿಸಿ ಬಿದ್ದಿದ್ದಾರೆ. ಸಿದ್ದರಾಮಯ್ಯ ಆಸನದ ಮೇಲೆ ಕೂರೋದಕ್ಕೆ ಬರುವ ವೇಳೆ ಎಡವಿ ಮುಗ್ಗಿರಿಸಿ ಟಿಪಾಯ್ ಮೇಲೆ ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸಿದ್ದರಾಮಯ್ಯ ಆಪ್ತರು ಮೇಲೆಬ್ಬಿಸಿದ್ದಾರೆ. ಮಾಜಿ ಕೇಂದ್ರ ಸಚಿವ ದಿವಂಗತ ಸಿದ್ದು ನ್ಯಾಮಗೌಡ ಪುತ್ಥಳಿ ಅನಾವರಣ ಹಾಗೂ ಮಾಜಿ ಸಚಿವ ತಿಮ್ಮಾಪುರ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಗೆ ಆಗಮಿಸಿದ್ದರು. ಹೀಗಾಗಿ ಸಚಿವ ಮುರಗೇಶ್ ನಿರಾಣಿ, ಸಹೋದರ ಸಂಗಮೇಶ್ ನಿರಾಣಿ ಸಿದ್ದರಾಮಯ್ಯ ಅವರನ್ನು ಮನೆಗೆ ಆಹ್ವಾನಿಸಿದರು. ಮನೆಗೆ ತೆರಳಿ ಮನೆಯಲ್ಲಿ ಕಾಫೀ ಸೇವಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಧುಗಿರಿ  : ಶಾಲೆ ಮುಗಿದ ನಂತರ ಆಟೋದಲ್ಲಿ ಹಿಂದಿರುಗುತ್ತಿದ್ದ ವೇಳೆ ಆಟೋದಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪಟ್ಟಣದ ಲಿಂಗೇನಹಳ್ಳಿ ಸಮೀಪ ಮಂಗಳವಾರ ಸಂಜೆ ನಡೆದಿದೆ. ಪಟ್ಟಣದ ವಿವೇಕಾನಂದ ವಿದ್ಯಾಮಂದಿರ ಶಾಲೆಯ ಮೂರನೇ ತರಗತಿಯ 9 ವರ್ಷದ ವಿದ್ಯಾರ್ಥಿ ಕುಶಲ್ ಮೃತಪಟ್ಟ ದುರ್ದೈವಿ. ಶಾಲೆ ಮುಗಿಸಿಕೊಂಡು ಬೆಂಕಿಪುರದಲ್ಲಿರುವ ಮನೆಗೆ ಹಿಂದಿರುಗುತ್ತಿದ್ದಾಗ  ಮೂಡ್ಲಪ್ಪ ಹೋಟೆಲ್ ಬಳಿ ವಿದ್ಯಾರ್ಥಿ ಆಟೋದಿಂದ  ಇಳಿಯುವುದಕ್ಕೂ ಮುಂಚೆ ಆಟೋ ಮುಂದಕ್ಕೆ ಚಲಿಸಿದ್ದು, ಈ ವೇಳೆ ವಿದ್ಯಾರ್ಥಿ ಆಯಾ ತಪ್ಪಿ ಬಿದ್ದಿದ್ದು, ಆಟೋದ ಹಿಂಬದಿ ಚಕ್ರ ವಿದ್ಯಾರ್ಥಿಯ ತಲೆ ಮೇಲೆ ಹರಿದು ಸ್ಥಳದಲ್ಲೇ  ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯ ತಾಯಿ ಸರೋಜಮ್ಮ  ಮರುವೇಕೆರೆ ಗ್ರಾಮದ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ತಂದೆ ಅಶ್ವತಪ್ಪನ  ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹವನ್ನು ತಂದಾಗ ವಿದ್ಯಾರ್ಥಿಯ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತು. ಈ ಘಟನೆಗೆ ಸಂಬಂಧಿಸಿ  ಮಧುಗಿರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ… ವರದಿ : ಅಬಿದ್…

Read More

ರಾಮನಗರ, ಸೆಪ್ಟೆಂಬರ್‌, 27: ಫೆಬ್ರವರಿ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಆರೋಗ್ಯ ಕವಚ 108ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿತ್ತು. ಈ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದರು. ಆರೋಗ್ಯ ಸಚಿವರು ಹೇಳಿಕೆ ನೀಡಿ 8 ತಿಂಗಳು ಕಳೆದಿದ್ದು, ಆರೋಗ್ಯ ಕವಚ ಯೋಜನೆಯ ಉನ್ನತೀಕರಣವೂ ಆಗಿಲ್ಲ. ಕಾಲ್ ಸೆಂಟರ್ ಸರ್ವರ್‌ ಸಮಸ್ಯೆಯಿಂದಾಗಿ ತುರ್ತು ಕರೆ ಕನೆಕ್ಟ್ ಆಗದೆ ಆರೋಗ್ಯ ಕವಚ ಹೆಸರಿನ 108 ಆ್ಯಂಬುಲೆನ್ಸ್ ಸೇವೆ ನೊಂದವರಿಗೆ ಸಿಗದೆ ಅನಾರೋಗ್ಯ ಪೀಡಿತವಾಗಿದೆ. ರಾಜ್ಯ ಮಟ್ಟದಲ್ಲಿ 108 ಆ್ಯಂಬುಲೆನ್ಸ್‌ ಉಚಿತ ಕರೆಯ ಸರ್ವರ್‌ ಸಮಸ್ಯೆ ಉಂಟಾಗಿದೆ. ಇದರಿಂದ ತುರ್ತು ಕರೆ ಸಂಪರ್ಕ‌ ಸಿಗದೆ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಹಿಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲೆಯ ವ್ಯಾಪ್ತಿಯಲ್ಲಿ ದಿನದ 24 ಗಂಟೆಗಳ ಕಾಲ ತುರ್ತು ಕರೆಗಳನ್ನು ಸ್ವೀಕರಿಸಲು ಕಂಟ್ರೋಲ್‌ ರೂಂ ಸ್ಥಾಪಿಸಿದೆ. 90363 96689 ಹಾಗೂ 88800…

Read More