Subscribe to Updates
Get the latest creative news from FooBar about art, design and business.
- ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
- ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆ
- ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
- ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
- ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
- ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
- ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
- ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
Author: admin
ಆಂಟೋನಿ ಬೇಗೂರು ಭೀಮರಾವ್ ರಾಮ್ಜಿ ಅಂಬೇಡ್ಕರ್ ಸ್ವತಂತ್ರ ಭಾರತದ ಮೊದಲ ಕಾನೂನು ಮಂತ್ರಿ ಮತ್ತು ಭಾರತೀಯ ಸಂವಿಧಾನದ ಪಿತಾಮಹ. ಮಹಾತ್ಮಾ ಗಾಂಧಿಯವರ ನಂತರ, ಅವರು ಸ್ವತಂತ್ರ ಭಾರತದ ಶ್ರೇಷ್ಠ ನಾಯಕ ಎಂದು ಪ್ರಶಂಸಿಸಲ್ಪಟ್ಟಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಅಂಬೇಡ್ಕರರು 1955ರಲ್ಲಿ ಹದಗೆಡಲಾರಂಭಿಸಿದರು. ದೀನದಲಿತರಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಬಾಬಾಸಾಹೇಬ್ ಡಾ.ಪಿ.ಆರ್.ಅಂಬೇಡ್ಕರ್ ಅವರು 1956ರ ಡಿಸೆಂಬರ್ 6ರಂದು ದೆಹಲಿಯ ತಮ್ಮ ಮನೆಯಲ್ಲಿ ಮಲಗಿದ್ದಾಗ ಇಹಲೋಕ ತ್ಯಜಿಸಿದರು. ಬೌದ್ಧಧರ್ಮದಲ್ಲಿ ಆಳವಾಗಿ ತೊಡಗಿಸಿಕೊಂಡಿದ್ದರಿಂದ, ಅವರ ದೇಹವನ್ನು ಬೌದ್ಧ ವಿಧಿಗಳ ಪ್ರಕಾರ “ದಾದರ್ ಚೌಪತಿ” ಸಮುದ್ರತೀರದಲ್ಲಿ ದಹಿಸಲಾಯಿತು. ಮರಣೋತ್ತರವಾಗಿ, ಅವರಿಗೆ 1990 ರಲ್ಲಿ ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಯಿತು. ಅಂಬೇಡ್ಕರ್ ಬಹುಮುಖಿ ಅರ್ಥಶಾಸ್ತ್ರಜ್ಞರು, ಪ್ರಾಧ್ಯಾಪಕರು, ಕಾರ್ಮಿಕ ಸಚಿವರು, ವಕೀಲರು, ಷೇರು ಮಾರುಕಟ್ಟೆ ವ್ಯಾಪಾರ ಸಲಹೆಗಾರರಾಗಿದ್ದರು. ಆದರೆ ಇಂದಿಗೂ ಅವರನ್ನು ದಲಿತ ನಾಯಕನ ಸಂಕುಚಿತ ವಲಯದಲ್ಲಿಯೇ ಕಾಣಲಾಗುತ್ತಿದೆ. ಅಂಬೇಡ್ಕರ್ ಬಗ್ಗೆ ಅಷ್ಟಾಗಿ ಗೊತ್ತಿಲ್ಲದವರೂ ಇದನ್ನು ದೃಢವಾಗಿ ನಂಬುತ್ತಾರೆ. ಅಂಬೇಡ್ಕರ್ ಅವರನ್ನು ಸಮಸ್ಯಾತ್ಮಕ ಮತ್ತು ವಿವಾದಾತ್ಮಕ ದೃಷ್ಟಿಕೋನದಿಂದ…
ಆಂಟೋನಿ ಬೇಗೂರು ಡಿಸೆಂಬರ್ 05 ರಂದು ಆಚರಿಸಲಾಗುತ್ತದೆ. ಭೂಮಿಯ ಮೇಲಿನ ಮಣ್ಣಿನ ಮಹತ್ವದ ಬಗ್ಗೆ ಅರಿವು ಮೂಡಿಸಲು ಮತ್ತು ಜನಸಂಖ್ಯೆಯ ವಿಸ್ತರಣೆಯಿಂದಾಗಿ ಬೆಳೆಯುತ್ತಿರುವ ಸಮಸ್ಯೆಯನ್ನು ಎತ್ತಿ ಹಿಡಿಯಲು ಪ್ರತಿ ವರ್ಷ ಡಿಸೆಂಬರ್ 5 ರಂದು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತದೆ. ಜಾಗತಿಕ ಮಣ್ಣು ಪ್ರತಿದಿನ ಜನಸಂಖ್ಯೆಯ ವಿಸ್ತರಣೆಯಿಂದಾಗಿ ಬೆಳೆಯುತ್ತಿರುವ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ. ಆದ್ದರಿಂದ, ಮಣ್ಣಿನ ಸವಕಳಿಯನ್ನು ಕಡಿಮೆ ಮಾಡಲು, ಫಲವತ್ತತೆಯನ್ನು ಕಾಪಾಡಿಕೊಳ್ಳಲು ಮತ್ತು ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಒಂದು ಹೆಜ್ಜೆ ಇಡುವುದು ಅವಶ್ಯಕ. ಮಣ್ಣು ವಿವಿಧ ಪ್ರಮಾಣದಲ್ಲಿ ಖನಿಜಗಳು, ಸಾವಯವ ಪದಾರ್ಥಗಳು ಮತ್ತು ಗಾಳಿಯಿಂದ ಕೂಡಿದೆ. ಇದು ಸಸ್ಯದ ಬೆಳವಣಿಗೆಗೆ ಮಾಧ್ಯಮವನ್ನು ಒದಗಿಸುತ್ತದೆ, ಅನೇಕ ಕೀಟಗಳು ಮತ್ತು ಇತರ ಜೀವಿಗಳಿಗೆ ಆವಾಸಸ್ಥಾನವನ್ನು ಒದಗಿಸುತ್ತದೆ. ಇದು ಮೇಲ್ಮೈ ನೀರು ಮತ್ತು ವಾತಾವರಣದ ಅನಿಲಗಳ ನಿರ್ವಹಣೆಗಾಗಿ ಶೋಧನೆ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ. ನಾಲ್ಕು ಅಗತ್ಯಗಳಲ್ಲಿ ಆಹಾರ, ಬಟ್ಟೆ, ವಸತಿ ಮತ್ತು ಔಷಧ ಸೇರಿವೆ. ಇದು ಮೇಲ್ಮೈ ನೀರು ಮತ್ತು ವಾತಾವರಣದ ಅನಿಲಗಳ ನಿರ್ವಹಣೆಗಾಗಿ ಶೋಧನೆ…
ಬೀಗ ಹಾಕಿದ ಒಂಟಿ ಮನೆಗಳನ್ನು ಗುರುತಿಸಿ ದೋಚುತ್ತಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.ಮೈಸೂರು ಮೂಲದ ರಮ್ಯಾ ಹಾಗೂ ಬೆಂಗಳೂರು ಉತ್ತರಹಳ್ಳಿ ಮೂಲದ ನಾಗರಾಜ್ ಬಂಧಿತ ಆರೋಪಿಗಳು. ರಮ್ಯಾ ಹಾಗೂ ನಾಗರಾಜ್ ಪರಸ್ಪರ ಪರಿಚಯ ಆದ ನಂತರ ಇನ್ಸ್ಟಾಗ್ರಾಮ್ ಮೂಲಕ ಚಾಟ್ ಮಾಡಿಕೊಂಡು ಮತ್ತಷ್ಟು ಸ್ನೇಹ ಬೆಳೆಸಿಕೊಂಡಿದ್ದರು. ಸ್ನೇಹ ಪ್ರೀತಿಗೆ ತಿರುಗಿದ ಬಳಿಕ ಮದುವೆಯಾಗಿದ್ದರು. ಮದುವೆಯ ಬಳಿಕ ಜೀವನ ನಡೆಸಲು ನಾಗರಾಜ್ ಮತ್ತು ರಮ್ಯ ಕಳ್ಳತನ ಮಾಡಲು ಶುರು ಮಾಡಿದ್ದರು. ಇಬ್ಬರು ಪ್ರಮುಖ ರಸ್ತೆಗಳಲ್ಲಿ ತಿರುಗಿ ವಸತಿ ಸ್ಥಳಗಳಲ್ಲಿ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡ್ತಿದ್ರು. ನಾಗರಾಜ್ ಕಳ್ಳತನ ಮಾಡಲು ಮನೆ ಒಳಗೆ ಹೋಗಿದ್ರೆ ರಮ್ಯ ಬಾಗಿಲಲ್ಲಿ ನಿಂತು ಕಾವಲು ನಿಂತಿರುತ್ತಿದ್ದಳು. ಯಾರಾದರೂ ಬಂದರೆ ನಾಗರಾಜ್ಗೆ ಸಿಗ್ನಲ್ ಕೊಟ್ಟು ಪರಾರಿ ಆಗುತ್ತಿದ್ದರು. ಕದ್ದ ಚಿನ್ನವನ್ನು ರಮ್ಯ ಅಡಮಾನ ಇಟ್ಟು ಹಣ ಪಡೆಯುತ್ತಿದ್ದರು. ಹೀಗೆ ಜೀವನ ನಡೆಸುತ್ತಿದ್ದ ಚಾಲಾಕಿ ಜೋಡಿ ಇದೀಗ ಪೊಲೀಸರ ಬಲೆಗೆ ಬಿದ್ದಿದೆ. ಒಂಟಿ ಮನೆಗಳ ಕಳ್ಳತನದ ಬಳಿಕ ಜ್ಞಾನಭಾರತಿ…
ಕಿರುತೆರೆಯ ತಾರಾ ಜೋಡಿಯಾದ ಚಂದನ್ ಕುಮಾರ್ ಮತ್ತು ಕವಿತಾ ಬೆಂಗಳೂರಿನಲ್ಲಿ ತಮ್ಮ ಹೊಸ ಹೋಟೆಲ್ಗೆ ಚಾಲನೆ ನೀಡಿದ್ದಾರೆ. ಸೀರಿಯಲ್, ಸಿನಿಮಾ ಅಂತಾ ಬ್ಯುಸಿಯಾಗಿರುವ ಚಂದನ್ ಮತ್ತು ಕವಿತಾ ದಂಪತಿ ಇದೀಗ ಹೋಟೆಲ್ ಉದ್ಯಮದತ್ತ ಮುಖ ಮಾಡಿದ್ದು, ಮೈಸೂರು ರಸ್ತೆಯಲ್ಲಿ ಮಂಡಿಪೇಟೆ ಪಲಾವ್ ಎಂಬ ಹೊಸ ಹೋಟೆಲ್ ಆರಂಭಿಸಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಬೆಂಗಳೂರು ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್ ತೆರೆದಿದ್ದರು. ಚಂದನ್ ಕುಮಾರ್ ನಟನೆಯ ಜೊತೆ ಹೋಟೆಲ್ ಉದ್ಯಮದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಬಿರಿಯಾನಿ ಹೋಟೆಲ್ನಲ್ಲಿ ಸ್ಯಾಂಡಲ್ವುಡ್ ನಟರಿಂದ ತೊಡಗಿ ರಾಜಕೀಯ ಮುಖಂಡರೂ ಬಿರಿಯಾನಿ ಸವಿದಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರಿನ ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್ ತೆರೆದಿದ್ದರು. ಈಗ ಮೈಸೂರು ರೋಡ್ನಲ್ಲಿ ಮಡಿಪೇಟೆ ಪಲಾವ್ ಎಂಬ ಹೋಟೆಲ್ ತೆರೆದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಚಂದನ್ ಅವರ ಬಿರಿಯಾನಿ ಹೋಟೆಲ್ ನಲ್ಲಿ ಕಳ್ಳತನವಾಗಿತ್ತು. ಈಗ ಮತ್ತಷ್ಟು ಭದ್ರತೆ ಒದಗಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಸಾಫ್ಟ್ವೇರ್ ಎಂಜಿನಿಯರ್ ವೊಬ್ಬರನ್ನು ಅಪಹರಿಸಿ ₹ 8 ಲಕ್ಷ ಹಾಗೂ ಚಿನ್ನಾಭರಣ ಕಿತ್ತುಕೊಂಡಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊರಮಾವು ಪಿಎನ್ಟಿ ಬಡಾವಣೆಯ ತರುಣ್ ಗಣೇಶ್, ಗೋವಿಂದಪುರ ಜಾನಕಿರಾಮ ಬಡಾವಣೆಯ ವಿಘ್ನೇಶ್, ಹಳೇ ಬೈಯಪ್ಪನಹಳ್ಳಿಯ ಜೆ. ಚರೀಶ್ ಹಾಗೂ ಸುಬ್ಬಣ್ಣಪಾಳ್ಯದ ಮಣಿಕಂಠ ಬಂಧಿತರು. ಇವರಿಂದ ಕಾರು, ಮೊಬೈಲ್ ಹಾಗೂ ಚಾಕು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಹೂಡಿ ನಿವಾಸಿ ಎಂಜಿನಿಯರ್ ರಾಹುಲ್ ನ. 26ರಂದು ಕಾರಿನಲ್ಲಿ ಕಲ್ಯಾಣನಗರಕ್ಕೆ ಹೋಗಿ ಅಲ್ಲಿಯೇ ಕಾರು ನಿಲ್ಲಿಸಿ ಪಬ್ಗೆ ತೆರಳಲು ಆಟೊದಲ್ಲಿ ಬ್ರಿಗೇಡ್ ರಸ್ತೆಗೆ ಹೋಗಿದ್ದರು. ಬ್ರಿಗೇಡ್ ರಸ್ತೆಯಲ್ಲಿ ವ್ಯಕ್ತಿಯೊಬ್ಬರ ಪರಿಚಯವಾಗಿತ್ತು. ಕೆಲವು ಯುವತಿಯರ ಫೋಟೊ ತೋರಿಸಿದ್ದ ವ್ಯಕ್ತಿ ಅವರನ್ನು ಪರಿಚಯ ಮಾಡಿಸುವುದಾಗಿ ಹೇಳಿದ್ದ. ತಮಗೆ ಯಾವ ಯುವತಿಯೂ ಬೇಡವೆಂದು ಹೇಳಿದ್ದ ರಾಹುಲ್ ಅಲ್ಲಿಂದ ಆಟೊದಲ್ಲಿ ಪುನಃ ಕಲ್ಯಾಣ ನಗರದತ್ತ ಹೊರಟಿದ್ದರು. ಬ್ರಿಗೇಡ್ ರಸ್ತೆಯಿಂದಲೇ ರಾಹುಲ್ ಅವರನ್ನು ಹಿಂಬಾಲಿಸುತ್ತಿದ್ದ ಆರೋಪಿಗಳು ಮಾರ್ಗಮಧ್ಯೆ ಅಡ್ಡಗಟ್ಟಿ ರಾಹುಲ್ ಅವರನ್ನು ತಮ್ಮ ಕಾರಿನಲ್ಲಿ ಕೂರಿಸಿಕೊಂಡು…
ಮುಂಬೈನ ಕುರ್ಲಾದಲ್ಲಿ ಇತ್ತೀಚೆಗೆ ಭೀಕರ ಗ್ಯಾಂಗ್ ರೇಪ್ ಪ್ರಕರಣ ನಡೆದಿರುವುದು ವರದಿಯಾಗಿದೆ. 42 ವರ್ಷದ ಮಹಿಳೆಯ ಮೇಲೆ ಆಕೆಯ ನಿವಾಸದಲ್ಲಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಮಹಿಳೆಯ ಅಂಗಾಂಗಕ್ಕೆ ಸಿಗರೇಟ್ನಿಂದ ಸುಟ್ಟು, ಹಲ್ಲೆ ಮಾಡಿದ್ದಾರೆ. ಹರಿತವಾದ ಆಯುಧದಿಂದ ಆಕೆಯ ಮೈ ಕೈ ಗಾಯಗೊಳಿಸಿ ಖಾಸಗಿ ಅಂಗಕ್ಕೆ ಸಿಗರೇಟ್ನಿಂದ ಸುಟ್ಟಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅರೋಪಿಗಳು ಹಾಗೂ ಸಂತ್ರಸ್ತೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು ಎಂದೂ ಅಧಿಕಾರಿ ತಿಳಿಸಿದ್ದಾರೆ. ಆರೋಪಿಗಳು ಒಬ್ಬರಾದ ಮೇಲೊಬ್ಬರು ಅಸ್ವಾಭಾವಿಕ ಲೈಂಗಿಕ ಕೃತ್ಯ ನಡೆಸಿದ್ದಾರೆ ಎಂದೂ ಪೊಲೀಸರು ಹೇಳಿದ್ದಾರೆ. ಮಹಿಳೆಯ ಖಾಸಗಿ ಅಂಗಕ್ಕೆ ಸಿಗರೇಟ್ನಿಂದ ಸುಟ್ಟಿದ್ದು, ಎದೆ ಹಾಗೂ ಎರಡೂ ಕೈಗಳಿಗೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದಾರೆ. ಆರೋಪಿಯೊಬ್ಬ ಘಟನೆಯ ವೀಡಿಯೊ ರೆಕಾರ್ಡ್ ಮಾಡಿದ್ದು, ಪೊಲೀಸರಿಗೆ ದೂರು ನೀಡದರೆ ವೀಡಿಯೊ ಹರಿಬಿಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದೂ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಎನ್ಜಿಒ ಒಂದಕ್ಕೆ ಮಹಿಳೆ ಕಷ್ಟಗಳನ್ನು ಹೇಳಿಕೊಂಡಿದ್ದು, ಪೊಲೀಸರಿಗೆ ವಿಷಯ ತಿಳಿದ ಬಳಿಕ ಎಫ್ಐಆರ್…
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಸ್ ತಾಲೂಕಿನ ಅಕ್ಲುಜ್ ಎಂಬ ಗ್ರಾಮದಲ್ಲಿ ಶುಕ್ರವಾರ ಅವಳಿ ಸಹೋದರಿಯರು ಗುರು ಹಿರಿಯರು ಹಾಗೂ ಎರಡೂ ಕುಟುಂಬಗಳ ಒಪ್ಪಿಗೆ ಮೇರೆಗೆ ಶಾಸ್ತ್ರೋಕ್ತವಾಗಿ ಮದುವೆ ಆಗಿದ್ದಾರೆ. ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ಮುಂಬೈನಲ್ಲಿ ಟೆಕ್ಕಿಗಳಾಗಿದ್ದಾರೆ. ಚಿಕ್ಕಂದಿನಿಂದಲೂ ಒಂದೇ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದು, ಇತ್ತೀಚೆಗಷ್ಟೇ ತಂದೆ ನಿಧನರಾಗಿದ್ದರಿಂದ ತಾಯಿ ಜೊತೆ ವಾಸವಾಗಿದ್ದರು. ತಾಯಿಗೂ ಅನಾರೋಗ್ಯ ಕಾಡುತ್ತಿದ್ದು, ಮುಂದೆ ಒಬ್ಬರು ಮದುವೆ ಆದರೆ ಮತ್ತೊಬ್ಬಾಕೆಗೆ ಆಗಲಿಲ್ಲ ಅಂದರೆ ಹೇಗೆ ಬಿಟ್ಟು ಇರುವುದು ಎಂದು ಸಹೋದರಿಯರು ಅತುಲ್ ಎಂಬಾತನನ್ನು ಮದುವೆಯಾಗಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅತುಲ್ ಮೊದಲಿನಿಂದಲೂ ಅವಳಿ ಸಹೋದರಿಯರ ಕುಟುಂಬಕ್ಕೆ ಪರಿಚಿತನಾಗಿದ್ದ. ಯುವತಿಯರ ತಾಯಿಗೆ ಅನಾರೋಗ್ಯ ಕಾಡಲು ಆರಂಭಿಸಿದಾಗ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿಕೊಂಡು ಬರುತ್ತಿದ್ದರು. ಈ ವೇಳೆ ಅತುಲ್ ಅವಳಿ ಸಹೋದರಿಯರ ಜೊತೆ ತುಂಬಾ ಸಲುಗೆ ಬೆಳೆಸಿಕೊಂಡಿದ್ದ…
ಆಂಟೋನಿ ಬೇಗೂರು ಅಂತರಾಷ್ಟ್ರೀಯ ಸ್ವಯಂಸೇವಕರ ದಿನದ ಮುಖ್ಯ ಉದ್ದೇಶವೆಂದರೆ ಪ್ರಪಂಚದಾದ್ಯಂತ ಶಾಂತಿ ಮತ್ತು ಅಭಿವೃದ್ಧಿಗೆ ಬೆಂಬಲ ನೀಡುವ ಸ್ವಯಂಸೇವಕತೆಯನ್ನು ಉತ್ತೇಜಿಸುವುದು … ಮತ್ತು ಯಾವುದೇ ಲಾಭವಿಲ್ಲದೆ ಅಗತ್ಯವಿರುವವರನ್ನು ಉಳಿಸಲು ಸ್ವಯಂಸೇವಕರಾಗಿರುವ ಎಲ್ಲರ ಸೇವೆಯನ್ನು ಗುರುತಿಸುವುದು. ಅನೇಕ ದೇಶಗಳು ಅಭಿವೃದ್ಧಿ ಗುರಿಗಳನ್ನು ಪೂರೈಸಲು ಸ್ವಯಂಸೇವಕ ಕಾರ್ಮಿಕರ ಸೇವೆಗಳ ಮೇಲೆ ಕೇಂದ್ರೀಕರಿಸಿವೆ. ಬಡತನ, ಹಸಿವು, ಅಸ್ವಸ್ಥತೆಗಳು, ಅನಕ್ಷರತೆ, ಹವಾಮಾನ ದೋಷಗಳು ಮತ್ತು ಮಹಿಳೆಯರ ವಿರುದ್ಧದ ತಾರತಮ್ಯದಂತಹ ಸಮಸ್ಯೆಗಳನ್ನು ಎದುರಿಸಲು ಗುರಿಗಳನ್ನು ಹೊಂದಿಸಲು ಸ್ವಯಂಸೇವಕರನ್ನು ಪ್ರೋತ್ಸಾಹಿಸಲಾಗುತ್ತಿದೆ. ಸ್ವಯಂಸೇವಕ ಕಾರ್ಯಕರ್ತರು, ಸಮಿತಿಗಳು, ಸಂಸ್ಥೆಗಳು, ಸ್ಥಳೀಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಗಾಗಿ ತಮ್ಮ ಅತ್ಯುತ್ತಮ ಕೊಡುಗೆಯನ್ನು ನೀಡುತ್ತವೆ. ಸರ್ಕಾರಿ ಏಜೆನ್ಸಿಗಳು, ಲಾಭೋದ್ದೇಶವಿಲ್ಲದ ಸಂಸ್ಥೆಗಳು, ಸಮುದಾಯ ಗುಂಪುಗಳು ಮತ್ತು ಶೈಕ್ಷಣಿಕ ಖಾಸಗಿ ವಲಯದೊಂದಿಗೆ ಅಭಿವೃದ್ಧಿಯಲ್ಲಿ ಹಂಚಿಕೊಳ್ಳಲು ಜನರು ಮತ್ತು ಸ್ವಯಂಸೇವಕರಿಗೆ ಇಂದು ಉತ್ತಮ ಅವಕಾಶವಾಗಿದೆ. ನವೆಂಬರ್ 20, 1997 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2001 ಅನ್ನು ಸ್ವಯಂಸೇವಕರ ಅಂತರರಾಷ್ಟ್ರೀಯ ವರ್ಷವೆಂದು ಘೋಷಿಸಿತು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಡಿಸೆಂಬರ್…
ಬೆಂಗಳೂರು; ಜಯನಗರ ನ್ಯಾಷನಲ್ ಕಾಲೇಜಿನಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ ರ್ಯಾಂಕ್ ಗಳಿಸಿದ ಒಟ್ಟು 7 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಲಾಯಿತು. ಘಟಿಕೋತ್ಸವದಲ್ಲಿ ಪದವಿ ವಿಭಾಗದ 222 ಮತ್ತು ಸ್ನಾತಕೋತ್ತರ ವಿಭಾಗದ 52 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 274 ವಿದ್ಯಾರ್ಥಿಗಳು ಪದವಿ, ಪ್ರಮಾಣ ಪತ್ರ ಪಡೆದರು. ಭಾರತೀಯ ವಿಜ್ಞಾನ ಸಂಸ್ಥೆಯ ವಿಶ್ರಾಂತ ನಿರ್ದೇಶಕರಾದ ಪ್ರೊ. ಪಿ. ಬಲರಾಮ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು “ವಿಜ್ಞಾನ ಪ್ರತಿಯೊಬ್ಬರ ಜೀವನದಲ್ಲೂ ಬಹು ಮುಖ್ಯ. ನೀವೆಲ್ಲಾ ಕೋವಿಡ್ ಕಾಲದ ಪದವೀಧರರು. ಆ ಸಮಯದಲ್ಲಿ ವಿಜ್ಞಾನ ಲೋಕದಲ್ಲಿ ಅನೇಕ ಸಂಶೋಧನೆಗಳನ್ನು ಕಂಡಿದ್ದೀರಿ. ಈ ಪ್ರಕೃತಿಯಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರಿಗೂ ವಿಜ್ಞಾನದ ಮಹತ್ವ ತಿಳಿದಿರಬೇಕು” ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಹೆಚ್ಚಾಗಿ ವೈಜ್ಞಾನಿಕ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ಬದುಕಿಗೂ ಅನಿವಾರ್ಯ ಮತ್ತು ಡಾ. ಎಚ್. ನರಸಿಂಹಯ್ಯನವರ ಕನಸೂ ಹೌದು” ಎಂದರು. ಪ್ರಥಮ ರ್ಯಾಂಕ್ ಪಡೆದ ಪದವಿ ವಿದ್ಯಾರ್ಥಿಗಳಾದ ಪ್ರಿಯಾಂಕ…
ಕಾರವಾರ: ಜಿಲ್ಲಾ ಪಂಚಾಯಿತಿ ನೌಕರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಕಾಳಿ ನದಿ ಸೇತುವೆ ಬಳಿ ನಡೆದಿದೆ. ಶ್ರೀಕಾಂತ ಮೇಲಿನಮನೆ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಕಾರವಾರ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಆಫೀಸರ್ ಆಗಿದ್ದ ಶ್ರೀಕಾಂತ ಕಾಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕ ಕೆಲಸದ ಒತ್ತಡ, ಮೇಲಾಧಿಕಾರಿಗಳ ಕಿರುಕುಳದಿಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ತಮ್ಮಣ್ಣ ಚನ್ನಬಸಪ್ಪ ಮೇಲಿನಮನೆ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy