Subscribe to Updates
Get the latest creative news from FooBar about art, design and business.
- ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆ
- ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
- ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
- ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
- ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
- ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
- ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
- ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ನಲ್ಲಿ ಭರ್ಜರಿ ಕೊಡುಗೆ
Author: admin
ಗುಜರಾತ್ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದ್ದು, ಜನರು ಹಾಗೂ ರಾಜಕೀಯ ನಾಯಕರು ಗಣ್ಯರು ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ. ಅಹಮದಾಬಾದ್ ನ ಸಬರಿಮತಿ ಕ್ಷೇತ್ರದ ರಾಣಿಪ್ ಮತಗಟ್ಟೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು. ಗುಜರಾತ್ ಚುನಾವಣೆ ಜೊತೆಗೆ ದೇಶಾದ್ಯಂತ ಹಲವೆಡೆ ಉಪಚುನಾವಣೆಗಳು ಕೂಡ ನಡೆಯುತ್ತಿವೆ. ಈ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಮನವಿ ಮಾಡಿದರು. ಹಾಗೆಯೇ ಮತದಾನ ಪ್ರಕ್ರಿಯೆಯೆಲ್ಲಿ ಭಾಗಿಯಾಗುತ್ತಿರುವ ಜನತೆಗೆ ಧನ್ಯವಾದ . ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಎಲ್ಲರ ಹಕ್ಕು. ಶಾಂತಿಯುತ ಮತದಾನಕ್ಕೆ ವ್ಯವಸ್ಥೆ ಮಾಡಿದ ಚುನಾವಣಾ ಆಯೋಗಕ್ಕೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರಿನ ವಿದ್ಯಾರ್ಥಿ ಭವನ ಯಾರಿಗೆ ಗೊತ್ತಿಲ್ಲ. ಸುಮಾರು ಎಂಟು ದಶಕಗಳಷ್ಟು ಹಳೆಯ ಬೆಂಗಳೂರಿನ ಈ ಹೊಟೆಲ್ ಬೆಂಗಳೂರು ಮಾತ್ರವಲ್ಲದೇ, ಇಡೀ ದೇಶ ಹಾಗೂ ವಿದೇಶಗಳಲ್ಲಿಯೂ ಪ್ರಖ್ಯಾತಿಯನ್ನು ಗಳಿಸಿದೆ. ಅದರಲ್ಲಿಯೂ ವಿದ್ಯಾರ್ಥಿ ಭವನದ ಮಸಾಲೆ ದೋಸೆಗೆ ಮಾರು ಹೋಗುವವರೇ ಇಲ್ಲ ಎನ್ನಬಹುದು. ಅನೇಕ ಗಣ್ಯರು ಆಗಾಗ ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ಉಪಹಾರ ಸೇವಿಸುವುದು ಸಾಮಾನ್ಯವಾಗಿದೆ. ಬೆಂಗಳೂರು ಮೂಲದ ಅನಿವಾಸಿ ಭಾರತೀಯರು ಬೆಂಗಳೂರಿಗೆ ಬಂದಾಗಿ ಇಲ್ಲಿಗೆ ಬರದೇ ಇರುವುದಿಲ್ಲ. ಬ್ರಿಟಿಷ್ ಡೆಪ್ಯೂಟಿ ಹೈ ಕಮೀಷನರ್ ಚಂದ್ರ ಅಯ್ಯರ್ ಅವರು ಬೆಂಗಳೂರಿನಲ್ಲಿ ಒಂದು ವಾರದ ಕಾಲ ತಂಗಿದ್ದರು. ಶನಿವಾರದಂದು ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿ ರುಚಿಯಾದ ಮಸಾಲೆ ದೋಸೆ, ಕಾಫಿ ಸವಿದರು. ವಿದ್ಯಾರ್ಥಿ ಭವನದ ಅರುಣ್ ಅಡಿಗ ಅವರು ಅಯ್ಯರ್ ಹಾಗೂ ರಾಜಕೀಯ ಆರ್ಥಿಕ ಸಲಹಾಗಾರರಾದ ಮಂಜುನಾಥ್ ಕೆ.ಎಸ್ ಅವರನ್ನು ಉಪಚರಿಸಿದರು. ಜೊತೆಗೆ ಹೋಟೆಲ್ ಚರಿತ್ರೆ ಹಾಗೂ ಖಾದ್ಯದ ವಿಶೇಷತೆಗಳ ಕುರಿತು ವಿವರಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೊರಟಗೆರೆ: ಪಂಚರತ್ನ ಯೋಜನೆಯಿಂದ ಕರ್ನಾಟಕ ರಾಜ್ಯದ ಅಭಿವೃದ್ದಿ ಸಾಧ್ಯ. ಗ್ರಾಮೀಣ ಜನತೆಯ ಆರ್ಥಿಕ ಸದೃಢತೆಗೆ ಶಿಕ್ಷಣ, ವಸತಿ, ಆರೋಗ್ಯ, ರೈತ ಚೈತನ್ಯ ಮತ್ತು ಯುವ ನವಮಾರ್ಗ, ಮಹಿಳಾ ಸಬಲೀಕರಣ ಅಗತ್ಯ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಸ್ತ್ರೀ ಶಕ್ತಿ ಸಂಘದ ಸಾಲದಿಂದ ಋಣಮುಕ್ತ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವಾರ, ಹೊಳವನಹಳ್ಳಿ, ಕೋಳಾಲ, ಕಸಬಾ, ತೋವಿನಕೆರೆ ಮತ್ತು ಕೊರಟಗೆರೆ ಪಟ್ಟಣದಲ್ಲಿ ಜಾತ್ಯಾತೀತ ಜನತಾ ದಳ ಪಕ್ಷದಿಂದ ಶನಿವಾರ ಏರ್ಪಡಿಸಲಾಗಿದ್ದ ಪಂಚರತ್ನ ರಥಯಾತ್ರೆ ಸಂಚಾರದ ವೇಳೆ ಮಾತನಾಡಿದರು. ಗುಣಮಟ್ಟದ ಶಿಕ್ಷಣವೇ ಆಧುನಿಕ ಶಕ್ತಿ, ಬಡವರಿಗೆ ವಸತಿಯ ಆಸರೆ, ಪ್ರತಿ ಗ್ರಾ.ಪಂ.ಗೆ ಹೈಟೆಕ್ ಆಸ್ಪತ್ರೆ, ಆಧುನಿಕ ತಂತ್ರಜ್ಞಾನದ ಕೃಷಿ ಚೈತನ್ಯ, ಯುವ ಜನತೆಗೆ ನವಮಾರ್ಗ ಮತ್ತು ಮಹಿಳೆಯರಿಗೆ ಉದ್ಯೋಗಕ್ಕಾಗಿ ಜೆಡಿಎಸ್ ಪಕ್ಷವು ಪಂಚರತ್ನ ಯೋಜನೆ ರೂಪಿಸಿದೆ. ರಾಜ್ಯ ಸರಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ, ಕಾರ್ಯಕ್ರಮದ ಹೆಸರಿನಲ್ಲಿ ಜನರ ಹಣವು ಲೂಟಿ ಆಗುತ್ತಿದೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ…
ಶಿವಮೊಗ್ಗ : ಮುಸ್ಲಿಂ ಮಹಿಳೆಯರಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ ಸಂಬಂಧ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಂ ಕಾಲೇಜಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜಿಗೆ ಅವಕಾಶ ಇಲ್ಲ. ನಾನು ಯಾವುದೇ ಇಲಾಖೆ ಅಧಿಕಾರಿ, ಅಂಟೆಂಡರ್ ನಂಬುವುದಿಲ್ಲ. ಮುಸ್ಲಿಂ ಕಾಲೇಜು ವಿಚಾರದಲ್ಲಿ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲ್ಲ ಎಂದು ಹೇಳಿದ್ದಾರೆ ಎಂದರು. ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಮುಸ್ಲಿಂರಿಗಾಗಿ ಪ್ರತ್ಯೇಕ ಮಹಿಳಾ ಕಾಲೇಜು ಸ್ಥಾಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎನ್ನಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ಗಡಿ ವಿವಾದದ ಹೊತ್ತಲ್ಲೇ ಮಹಾರಾಷ್ಟ್ರ ಸಚಿವರು ನಾಳೆ ಬೆಳಗಾವಿಗೆ ಭೇಟಿ ನೀಡುತ್ತಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಶಾಂತಿ ಕದಡಲು ಬಿಡುವುದಿಲ್ಲ. ಭಾವನಾತ್ಮಕವಾಗಿ ಕೆರಳಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದು ಏನು ಮಾಡಬಹುದು ಎಂದು ನೋಡೋಣ. ಬೆಳಗಾವಿ ಎರಡು ರಾಜ್ಯಗಳ ಯುದ್ಧರಂಗ ಅಲ್ಲ. ನೆಲ, ಜಲ ಕಾಪಾಡುವ ದೃಷ್ಟಿಯಿಂದ ನಾವು ಕ್ರಮಕ್ಕೆ ಮುಂದಾಗಿದ್ದೇವೆ. ಮಹಾರಾಷ್ಟ್ರ ಸಚಿವರು ಕಾನೂನು ಉಲ್ಲಂಘನೆ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಮತ್ತು ಗಡಿ ವಿವಾದದ ಮಹಾರಾಷ್ಟ್ರ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ ಧೈರ್ಯಶೀಲ್ ಮಾನೆ ಅವರು ಡಿಸೆಂಬರ್ 6 ರಂದು ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರನ್ನು ಭೇಟಿಯಾಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy…
ತುರುವೇಕೆರೆ: ಪಕ್ಷದಲ್ಲಿ ದಲಿತರಿಗೆ ಸಲತ್ತುಗಳನ್ನು ಕೊಡಲು ಹಾಲಿ ಶಾಸಕರು ತಾರತಮ್ಯ ಮಾಡಿದ್ದಾರೆ ಅದರಿಂದ ಬೇಸತ್ತು ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ. ಅವರನ್ನು ಮುಂದೆ ಗೌರವಯುತವಾಗಿ ನೋಡಿಕೊಳ್ಳುತ್ತೇನೆ ಎಂದು ಮಾಜಿ ಶಾಸಕ ಕೃಷ್ಣಪ್ಪ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ಜೆಡಿಎಸ್ ಗೆ ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, ಕಳೆದ ಬಾರಿ ಬಿಜೆಪಿಯಲ್ಲಿ ಮಾಜಿ ಜಿಲ್ಲಾ ಘಟಕದ ಎಸ್ ಸಿ ಮೋರ್ಚಾದ ಪದಾಧಿಕಾರಿಯಾಗಿದ್ದ ಜುಂಜಪ್ಪ ಸ್ವಾಮಿ ಅವರು 25 ಜನ ದಲಿತ ಮುಖಂಡರ ಜೊತೆ ಬಿಜೆಪಿಯನ್ನು ಬಿಟ್ಟು ಜೆಡಿಎಸ್ ಸೇರುತ್ತಿದ್ದಾರೆ. ಬಿಜೆಪಿ ಪಕ್ಷದಲ್ಲಿ ದಲಿತರಿಗೆ ಸವಲತ್ತುಗಳನ್ನು ಕೊಡಲು ಹಾಲಿ ಶಾಸಕರು ತಾರತಮ್ಯ ಮಾಡಿದ್ದಾರೆ ಅದರಿಂದ ಬೇಸತ್ತು ಬಿಜೆಪಿ ಬಿಟ್ಟು ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ ಎಂದು ಅವರು ತಿಳಿಸಿದರು. ನಾನು ಶಾಸಕನಾಗಿದ್ದ ಕಾಲದಲ್ಲಿ 285 ಬೋರ್ವೆಲ್ ಗಳನ್ನು ಒಂದೇ ಬಾರಿಗೆ ಅನುಮೋದನೆ ಪಡೆದುಕೊಂಡು ಬಂದಿದ್ದೆ. ಬಹಳಷ್ಟು ಬೋರ್ವೆಲ್ ಗಳನ್ನು ಕೇಳುವವರೇ ಇರಲಿಲ್ಲ. ಒಬ್ಬರಿಗೆ ಎರಡೆರಡು ಬೋರ್ವೆಲ್ ಗಳನ್ನು ಕೊರೆಸಿಕೊಟ್ಟಿದ್ದೇನೆ ಎಂದರು. ದಲಿತ ಮುಖಂಡ ಜುಂಜಪ್ಪಸ್ವಾಮಿ ಮಾತನಾಡಿ, ತಾಲೂಕಿನ ಹಲವಾರು…
ಕಾರವಾರ: ಜಿಲ್ಲಾ ಪಂಚಾಯಿತಿ ನೌಕರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಕಾಳಿ ನದಿ ಸೇತುವೆ ಬಳಿ ನಡೆದಿದೆ. ಶ್ರೀಕಾಂತ ಮೇಲಿನಮನೆ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಕಾರವಾರ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಾಜೆಕ್ಟ್ ಆಫೀಸರ್ ಆಗಿದ್ದ ಶ್ರೀಕಾಂತ ಕಾಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕ ಕೆಲಸದ ಒತ್ತಡ, ಮೇಲಾಧಿಕಾರಿಗಳ ಕಿರುಕುಳದಿಂದ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ತಮ್ಮಣ್ಣ ಚನ್ನಬಸಪ್ಪ ಮೇಲಿನಮನೆ ಅವರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 6 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರತ್ನಲಂ ಜಿಲ್ಲೆಯಲ್ಲಿ ಸಂಭವಿಸಿದೆ. ರಟ್ಲಂ ಜಿಲ್ಲೆಗೆ 35 ಕಿ.,ಮೀ. ದೂರದ ಸತ್ರುದ್ರ ಬಳಿಯ ರಟ್ಲಂ ಲೆಬ್ಡ್ ರಸ್ತೆಯಲ್ಲಿ ಭಾನುವಾರ ಈ ದುರ್ಘಟನೆ ಸಂಭವಿಸಿದೆ. ಅಪಘಾತದಿಂದ ಸಂಚಾರಿ ದಟ್ಟಣೆ ಉಂಟಾಗಿದೆ. ರಟ್ಲಂನಿಂದ ಬದ್ವಾರ್ ಗೆ ಹೋಗುತ್ತಿದ್ದ ಟ್ರಕ್ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡು ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದಿದೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಶಕ್ತೀಕರಣ ನಿರ್ದೇಶನಾಲಯದಿಂದ ಆಯೋಜಿಸಿದ್ದ ವಿಶ್ವಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಿದ್ದು, 5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ. ಅಂಗವಿಕಲರು ಯಶಸ್ವಿಯಾಗಿ ಬದುಕು ನಡೆಸಲು ಸರಕಾರ ನಿರ್ಮಿಸುವ ಮನೆಗಳಲ್ಲಿ ಶೇ. 3ರಷ್ಟು ಮೀಸಲಾತಿ ನೀಡಲಾಗುವುದು. ಬುದ್ಧಿಮಾಂದ್ಯ ಮಕ್ಕಳಿಗೆ ವರ್ಕ್ ಶಾಪ್ ಸ್ಥಾಪಿಸಲು ಸರಕಾರ ಬದ್ಧವಾಗಿದೆ. ಜತೆಗೆ ಅಂಗ ವಿಕಲರಿಗೆ ಮಾ. 31ರೊಳಗೆ ಎರಡು ಸಾವಿರ ವಿದ್ಯುತ್ಛಕ್ತಿಚಾಲಿತ ಟ್ರೈಸಿಕಲ್ ನೀಡಲಾಗುತ್ತದೆ. ಅದಕ್ಕಾಗಿ ಈಗಾಗಲೇ 15 ಕೋಟಿ ರೂ. ನೀಡ ಲಾಗಿದ್ದುಎಂದು ಬೊಮ್ಮಾಯಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರ ಸಚಿವರು ಪ್ರವೇಶಿಸುವುದಕ್ಕೆ ಬಿಡುವುದಿಲ್ಲ. ಮಹಾರಾಷ್ಟ್ರ ಸಚಿವರು ಭಯೋತ್ಪಾದನೆಗೆ ಸೇರಿದವರಾಗಿದ್ದಾರೆ. ಅಂತಹ ರಾಷ್ಟ್ರ ದ್ರೋಹಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಪ್ರವೇಶಿಸಲು ಬಿಡುವುದಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 6ರಂದು ಬೆಂಗಳೂರಿನಿಂದ 100 ವಾಹನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿಗೆ ಆಗಮಿಸಲಿದ್ದಾರೆ. ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರುವುದಕ್ಕೆ ಜಿಲ್ಲಾಡಳಿತ ಅವಕಾಶ ಕೊಟ್ಟರೂ ನಾವು ಕೊಡುವುದಿಲ್ಲ. ಬೆಳಗಾವಿ ಗಡಿಯಲ್ಲಿ ಸಚಿವರನ್ನು ತಡೆಯುವ ಕೆಲಸ ಮಾಡುತ್ತೇವೆ ಎಂದರು. ಮಹಾರಾಷ್ಟ್ರ ಸಚಿವರು ಭಯೋತ್ಪಾಕದ ಕುಲಕ್ಕೆ ಸೇರಿದವರು. ಭಯೋತ್ಪಾದನೆ ಉಂಟು ಮಾಡುವಂಕ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅಂತಹ ರಾಷ್ಟ್ರದ್ರೋಹಿಗಳು ಕರ್ನಾಟಕ ಪ್ರವೇಶಿಸುವುದು ಬೇಡ. ಹೀಗಾಗಿ ಗಡಿಯಲ್ಲೇ ಅವರನ್ನು ತಡೆಯುವಂತೆ ಕೆಲಸವನ್ನು ನಮ್ಮಕರವೇ ಕಾರ್ಯಕರ್ತರು ಮಾಡಲಿದ್ದಾರೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz