Author: admin

ತಿರುಪತಿ ದೇಗುಲದಲ್ಲಿ ವೈಕುಂಠ ಏಕಾದಶಿಯಂದು ಸ್ವರ್ಗ ದ್ವಾರವನ್ನು ತೆರೆಯಲಾಗಿತ್ತು. ಇದಕ್ಕೂ ಮುನ್ನ ಆಗಮ ಪದ್ಧತಿಯ ಪ್ರಕಾರ ವಿಶೇಷ ಪೂಜೆಗಳು ನಡೆದವು, ಅರ್ಚಕರ ಸಮ್ಮುಖದಲ್ಲಿ ಪುರೋಹಿತರು ವೇದ ಮಂತ್ರಗಳನ್ನು ಪಠಿಸಿದರು. ಅದೇ ರೀತಿ, ಚೆನ್ನೈ ಪಕ್ಕದಲ್ಲಿರುವ ತಿರುನೀರ್ಮಲೈ ರಂಗನಾಥ ಪೆರುಮಾಳ್ ದೇವಸ್ಥಾನ ಮತ್ತು ಕೊಯಮತ್ತೂರಿನ ಕರಮಡೈ ಅರಂಗನಾಥ ದೇವಸ್ಥಾನದಲ್ಲಿ ವೈಕುಂಠ  ಏಕಾದಶಿಯ ಸಂದರ್ಭದಲ್ಲಿ ಸ್ವರ್ಗದ ದ್ವಾರವನ್ನು ತೆರೆಯಲಾಯಿತು. ಪುದುಕೊಟ್ಟೈ ಜಿಲ್ಲೆಯ ತಿರುಮಯಂ ಸತ್ಯಮೂರ್ತಿ ಪೆರುಮಾಳ್ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಸಂದರ್ಭದಲ್ಲಿ ಸ್ವರ್ಗದ ದ್ವಾರವನ್ನು ತೆರೆಯಲಾಯಿತು. ಕಾನೂನು ಸಚಿವ ರಘುಪತಿ, ಜಿಲ್ಲಾ ಕಂದಾಯ ಅಧಿಕಾರಿ ಎಂ.ಎಸ್ ಇದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೌದ್ಧ ಧರ್ಮವನ್ನು ನಾಶ ಮಾಡುವ ಚೀನಾದ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ದಲೈಲಾಮಾ ಹೇಳಿದ್ದಾರೆ. ಚೀನಾವು ಬೌದ್ಧ ಧರ್ಮವನ್ನು ನಾಶಮಾಡಲು ಯೋಜಿಸುತ್ತಿದೆ ಮತ್ತು ಪ್ರಯತ್ನಿಸುತ್ತಿದೆ, ಆದರೆ ಅದು ಯಶಸ್ವಿಯಾಗುವುದಿಲ್ಲ ಎಂದು ಟಿಬೆಟಿಯನ್ ಆಧ್ಯಾತ್ಮಿಕ ಗುರು ದಲೈ ಲಾಮಾ ಹೇಳಿದ್ದಾರೆ. ಚೀನಾ ಸರ್ಕಾರ ಪದ್ಮಸಂಭವ ಪ್ರತಿಮೆ ಧ್ವಂಸಗೊಳಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು. ಬೋಧಗಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಲೈಲಾಮಾ ಮಾತನಾಡಿದರು. ಚೀನಾ ಬೌದ್ಧ ಧರ್ಮವನ್ನು ನಾಶಮಾಡಲು ಸಾಧ್ಯವಿರುವ ಎಲ್ಲವನ್ನೂ ಮಾಡಿತು. ಆದರೆ ಬೌದ್ಧ ಧರ್ಮವು ಅದರ ತಳಹದಿಯ ಮೇಲೆ ನಿಂತಿದೆ. ಚೀನಾದಲ್ಲಿ ಬೌದ್ಧ ಧರ್ಮವನ್ನು ನಂಬುವ ಅನೇಕ ಜನರಿದ್ದಾರೆ. ಒಬ್ಬನಿಗೆ ಹಾನಿ ಮಾಡುವುದರಿಂದ ಅವನ ಧರ್ಮಕ್ಕೆ ಅಪಾಯವಿಲ್ಲ. ಚೀನಾದಲ್ಲಿರುವ ಬೌದ್ಧರು ಇಂದಿಗೂ ಬುದ್ಧನನ್ನು ಪ್ರಾರ್ಥಿಸುತ್ತಾರೆ’ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ರಿಕ್ಟರ್ ಮಾಪಕದಲ್ಲಿ 3.2 ಅಳತೆಯ ಭೂಕಂಪವು ಭಾನುವಾರ ರಾತ್ರಿ ಮೇಘಾಲಯದ ನೊಂಗ್ಬೊದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ. ಭಾನುವಾರ ರಾತ್ರಿ 11:28 ಕ್ಕೆ ನೊಂಗ್ಬೋದ ಈಶಾನ್ಯ ಭಾಗದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಭೂಗರ್ಭದಲ್ಲಿ 10 ಕಿ.ಮೀ. ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ. ಭಾನುವಾರ ಬೆಳಗ್ಗೆ ಹರಿಯಾಣದ ಜಜ್ಜರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಅದರ ಅನುರಣನವು ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಡುಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

2016ರಲ್ಲಿ ಸಾವಿರ ರೂ. ಮತ್ತು 500 ರೂ. ಮುಖಬೆಲೆಯ ನೋಟು ನಿಷೇಧಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಇಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಲಿದೆ. 2016ರ ನವೆಂಬರ್ ತಿಂಗಳಲ್ಲಿ ಪ್ರಧಾನಿ ಮೋದಿ ಸರ್ಕಾರದ ನೋಟು ಅಮಾನ್ಯೀಕರಣದ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ 58 ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್‌ ನ ಐವರು ನ್ಯಾಯಾಧೀಶರ ಪೀಠವು ಇಂದು ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸಲಿದೆ. ನೋಟು ಅಮಾನ್ಯೀಕರಣಕ್ಕೆ ಅಗತ್ಯವಾದ ಕಾರ್ಯವಿಧಾನವನ್ನು ಅನುಸರಿಸಲಾಗಿಲ್ಲ ಮತ್ತು ಅನಿಯಂತ್ರಿತ ನಿರ್ಧಾರದಿಂದಾಗಿ ಭಾರತೀಯ ನಾಗರಿಕರ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ ಎಂದು ಸರ್ಕಾರದ ವಿರುದ್ಧ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಅರ್ಜಿದಾರರು ಕೇಂದ್ರ ಸರ್ಕಾರದಿಂದ ಇಂತಹ ಕೃತ್ಯಗಳು ಪುನರಾವರ್ತನೆಯಾಗದಂತೆ ನಿಯಮಗಳನ್ನು ಸ್ಥಾಪಿಸುವಂತೆ ಕೋರಿದ್ದಾರೆ. ನೋಟು ಅಮಾನ್ಯೀಕರಣ ಕುರಿತು ಇಂದು ತೀರ್ಪು ಹೊರ ಬೀಳಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹೊಸ ವರ್ಷ ಆಚರಣೆಗೆ ಆಗಮಿಸಿದ್ದ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿತ್ತು. ಪಾರ್ಥಿವ ಶರೀರ ಇಂದು ಸಂಜೆ 5 ಗಂಟೆಗೆ ಹೊಸನಗರ ಪಟ್ಟಣದಲ್ಲಿರುವ ಮೃತನ ಸ್ವಗೃಹ ತಲುಪಲಿದೆ ಎಂದು ತಿಳಿದು ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿತ್ತು. ಸಂಸದ ರಾಘವೇಂದ್ರ ದೆಹಲಿಗೆ ತೆರಳಿದ್ದ ಹಿನ್ನೆಲೆಯಲ್ಲಿ ಪ್ರಸನ್ನ ಭಟ್‌ ರಜೆಯಲ್ಲಿದ್ದರು. ಭಾನುವಾರ ಸಂಜೆ ರಾಮೇಶ್ವರಕ್ಕೆ ತೆರಳಬೇಕಿದ್ದ ಅವರು ಸಮಯವಿದ್ದ ಕಾರಣ ಆರು ಮಂದಿ ಸ್ನೇಹಿತರೊಂದಿಗೆ ಬೆಳಗ್ಗೆ ಕನಕಪುರದಲ್ಲಿರುವ ಸ್ನೇಹಿತ ಕೌಶಿಕ್‌ ರವರ ಮನೆಗೆ ಬಂದಿದ್ದರು. ಮಾವತ್ತೂರು  ಕೆರೆಯಲ್ಲಿ ಈಜಲು ಪ್ರಸನ್ನ ಮತ್ತು ಸ್ನೇಹಿತರು ನೀರಿಗೆ ಇಳಿದಿದ್ದಾರೆ. ಈಜಲು ಬಾರದ ಕಾರಣ ಕೌಶಿಕ್‌ ನೀರಿಗೆ ಇಳಿದಿರಲಿಲ್ಲ. ಈಜಲು ಹೋದ ಪ್ರಸನ್ನ ಭಟ್‌ ನೀರಿನಿಂದ ಮೇಲಕ್ಕೆ ಬರಲೇ ಇಲ್ಲ. ಇದರಿಂದ ಗಾಬರಿಗೊಂಡ ಕೌಶಿಕ್‌ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ…

Read More

ಬೆಂಗಳೂರು : ಬಾಲ್ಯ ವಿವಾಹ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮಪಂಚಾಯಿತಿಗಳಿಗೆ ವಹಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಬಾಲ್ಯ ವಿವಾಹಗಳು ಹೆಚ್ಚಳವಾಗುತ್ತಿದ್ದು, ಈ ವ್ಯವಸ್ಥೆಯನ್ನು ತಡೆಯಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮದುವೆಯ ನೋಂದಣಿಯನ್ನು ಗ್ರಾಮ ಪಂಚಾಯಿತಿ ಅಧಿಕಾರ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಶಿಫಾರಸು ಮಾಡಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನೋಂದಣಿ ಜವಾಬ್ದಾರಿ ವಹಿಸಿ 250 ರೂ. ಒಳಗೆ ಶುಲ್ಕ ನಿಗದಿ ಮಾಡಿ ನೋಂದಣಿ ಕಡ್ಡಾಯಗೊಳಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಧಾರವಾಡ : ಕುಡಿದ ಮತ್ತಿನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದಕ್ಕೆ ವ್ಯಕ್ತಿಯೊಬ್ಬನಿಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಧಾರವಾಡದ ಸುಭಾಷ್ ನಗರದಲ್ಲಿ ಘಟನೆ ನಡೆದಿದೆ. ಅಷ್ಟೇ ಅಲ್ಲದೇ ಮೊಬೈಲ್‌ ನಂಬರ್‌ ಕೊಡಿ ಎಂದು ಕೇಳಿದಕ್ಕೆ ಚಪ್ಪಲಿಯಿಂದ ಮಹಿಳೆಯೇ ಥಳಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ https://twitter.com/KeypadGuerilla/status/1608713474615701506?t=_nCTlGTiXN5hMLE3w0h8DQ&s=19 ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈತನ ಅನುಚಿತ ವರ್ತನೆಗೆ ಸುತ್ತಮುತ್ತಲಿನ ಜನರೂ ಕೂಡಾ ಆತನಿಗೆ ಚಪ್ಪಲಿಯಿಂದ ಒದ್ದು ಥಳಿಸಿದ್ದಾರೆ. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು:ಅರವಿಂದ ಲಿಂಬಾವಳಿ ಸೇರಿ ಆರು ಜನರ ಹೆಸರು ಬರೆದಿಟ್ಟು ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದೆ. 47 ವರ್ಷದ ಪ್ರದೀಪ್ ಕಾರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್‌ಎಸ್‌ಆರ್ ಲೇಔಟ್ ನಿವಾಸಿಯಾಗಿರುವ ಪ್ರದೀಪ್ , ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ನಲ್ಲಿ ಅವರು ಹಲವು ವಿಷಯ ಪ್ರಸ್ತಾಪಿಸಿದ್ದು, ಆರು ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಬರೆಯಲಾಗಿದೆ. ಹೆಸರುಗಳ ಮುಂದೆ ಮೊಬೈಲ್ ನಂಬರ್ ಬರೆದು ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವ್ಯವಹಾರದಲ್ಲಿ ವಂಚನೆ ಹಿನ್ನೆಲೆ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ವಿಜಯಪುರ: ಆನಾರೋಗ್ಯದಿಂದ ಬಳಲುತ್ತಿರುವ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸೇರಿದ ಅಪಾರ ಸಂಖ್ಯೆಯ ಭಕ್ತರು ಶ್ರೀಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ಶ್ರೀಗಳ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ. ಸಿದ್ದೇಶ್ವರ ಶ್ರೀಗಳಿಗೆ ಮಠದಲ್ಲಿಯೇ ಚಿಕಿತ್ಸೆ ಮುಂದುವರೆದಿದ್ದು, ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಸಿದ್ಧೇಶ್ವರ ಶ್ರೀಗಳ ದರ್ಶನಕ್ಕೆ ನಾಡಿನ ಗಣ್ಯರು, ಮಠಾಧೀಶರು ಹಾಗೂ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡತೊಡಗಿದ್ದಾರೆ. ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ವೈ.ಎನ್.ಹೊಸಕೋಟೆ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಅಂಗವಾಗಿ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಭಾನುವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಉಮಾಕಾಂತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಅಮರ ಶಿಲ್ಪಿ ಜಕಣಾಚಾರಿ ಅವರು ಹಲವಾರು ದೇವರ ಮೂರ್ತಿಗಳು ಮತ್ತು ಶಿಲ್ಪಗಳನ್ನು ಕೆತ್ತನೆ ಮಾಡಿದ್ದಾರೆ. ಇಂತಹ ಕಲೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಮಕ್ಕಳಿಗೆ ಶಿಕ್ಷಣದ ಜೊತೆಗೆ ಶಿಲ್ಪ ಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸವಾಗಬೇಕು. ಇಂತಹ ಕಲೆ ಉಳಿಸಿ ಬೆಳಿಸಿದಾಗ ಮಾತ್ರ ಜಕಣಾಚಾರಿ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಆದಿ ನಾರಾಯಣಾಚಾರಿ, ನಿರ್ದೇಶಕರಾದ ಶಿವಶಂಕರಾಚಾರಿ, ಸತ್ಯನಾರಾಯಣಾಚಾರಿ, ಕೌಶಿಕ್ ಹಾಜರಿದ್ದರು. ವರದಿ: ನಂದೀಶ್ ನಾಯ್ಕ್, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More