Subscribe to Updates
Get the latest creative news from FooBar about art, design and business.
- ಕೊಡಿಗೇನಹಳ್ಳಿ: ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ಚಿನ್ನದ ನೆಕ್ಲೇಸ್ ಕದ್ದ ಮಹಿಳೆ ಬಂಧನ
- ಕುಣಿಗಲ್ ಬಳಿ ಭೀಕರ ರಸ್ತೆ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸೇರಿ ನಾಲ್ವರು ಸಾವು
- ಮೇ 12 ರಂದು ಡಾ.ಜಿ.ಎಸ್.ಸಿದ್ದಲಿಂಗಯ್ಯನವರ ಬದುಕು–ಬರಹ ವಿಚಾರ ಸಂಕಿರಣ, ದತ್ತಿ ಪ್ರಶಸ್ತಿ ಸಮಾರಂಭ
- ಸಿರಾ: ಶಿಕ್ಷಕರ ತರಬೇತಿ ಸಂಸ್ಥೆ ದಾಖಲಾತಿ ಪ್ರಾರಂಭ
- ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ
- ತೆರೆ ಮೇಲೆ ರಾಜ್ ಕುಮಾರ್, ಅಂತರಂಗದಲ್ಲಿ ಮುತ್ತುರಾಜ್ ಇದ್ದರು: ಆರ್. ಮಂಜುನಾಥ್ ಚವಾಣ್, ನಾದಯೋಗಿ ಡಾ.ರಾಜಕುಮಾರ್ ಪುಸ್ತಕ ಬಿಡುಗಡೆ
- ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ
- ಧಾರವಾಡ: ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ
Author: admin
ಕಾರವಾರ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಅರುಣ್ ಪಾಂಡ್ಯನ್, ನಿಪುಲ್, ಮೊಹಮ್ಮದ್ ಶೇಖರನ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಮೃತರು ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ. ಗೋವಾದಲ್ಲಿ ಪಾರ್ಟಿ ಮುಗಿಸಿಕೊಂಡು ಅಂಕೋಲ ಭಾಗದಿಂದ ಯಲ್ಲಾಪುರ ಕಡೆಗೆ ಕಾರು ತೆರಳುತ್ತಿದ್ದು, ಈ ವೇಳೆ ಹುಬ್ಬಳ್ಳಿಯಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಮುಖಾಮುಖಿ ಡಿಕ್ಕಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ರಜೌರಿ: ನಂತರ ಶಂಕಿತ ಉಗ್ರರ ಗುಂಡಿನ ದಾಳಿಯ ಪರಿಣಾಮ ಮೂವರು ನಾಗರಿಕರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಇಲ್ಲಿನ ಡ್ಯಾಂಗ್ರಿ ಗ್ರಾಮದಲ್ಲಿ ಇಬ್ಬರು ಶಂಕಿತ ಉಗ್ರರು ಗ್ರಾಮಸ್ಥರ ಮನೆಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಮೂರು ಮನೆಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, 8 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ರಜೌರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕರೆದೊಯ್ಯುಲಾಗಿದೆ. ಕಳೆದ ಎರಡು ವಾರಗಳಲ್ಲಿ ರಜೌರಿ ಜಿಲ್ಲೆಯಲ್ಲಿ ನಡೆದಿರುವ ಎರಡನೇ ಘಟನೆಯಾಗಿದೆ. ಡಿಸೆಂಬರ್ 16 ರಂದು ಸೇನಾ ಶಿಬಿರ ಹೊರಗಡೆ ನಡೆದ ದಾಳಿಯಲ್ಲಿ ಇಬ್ಬರು ನಾಗರಿಕರು ಸಾವನ್ನಪ್ಪಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ ಅವರ ಹೊಸ ಪಕ್ಷ ‘ಕಲ್ಯಾಣ ರಾಜ್ಯ ಪ್ರಗತಿ’(ಕೆಆರ್ ಪಿ) ಇತ್ತೀಚೆಗೆ ಘೋಷಣೆಯಾಗಿತ್ತು. ಇದೀಗ ಪಕ್ಷದ ಬಾವುಟವನ್ನು ಅಧಿಕೃತವಾಗಿ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಬಿಡುಗಡೆಗೊಳಿಸಿದ್ದಾರೆ. ಬೆಣಕಲ್ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅರುಣಾ ಲಕ್ಷ್ಮೀ ಪಕ್ಷದ ಬಾವುಟವನ್ನು ಬಿಡುಗಡೆ ಮಾಡಿದರು. ಹಸ್ತಲಾಘವ ಹೊಂದಿರುವ ಸಹಕಾರ ಮಾದರಿಯ ಚಿಹ್ನೆಯನ್ನು ಬಾವುಟದಲ್ಲಿ ಬಳಕೆ ಮಾಡಲಾಗಿದೆ. ಬಾವುಟ ಬಿಡುಗಡೆಯ ಬಳಿಕ ಮಾತನಾಡಿದ ಅರುಣಾ ಲಕ್ಷ್ಮೀ, ಇಡೀ ರಾಜ್ಯ ಕಲ್ಯಾಣ ಕರ್ನಾಟಕ ಆಗಬೇಕೆಂಬುದು ಜನಾರ್ದನ್ ರೆಡ್ಡಿಯವರ ಬಯಕೆಯಾಗಿದೆ. ತಾವು ಹುಟ್ಟಿ ಬೆಳೆದ ಬಳ್ಳಾರಿ ಪ್ರಚಂಚದ ಭೂಪಟದಲ್ಲಿ ಕಾಣಬೇಕು. ಅವರ ಆಶಯದಂತೆ ಕೆಲಸ ಮಾಡುವುದು ನನ್ನ ಜವಾಬ್ದಾರಿ ಆಗಿದೆ ಎಂದರು. ಜನಾರ್ದನ್ ರೆಡ್ಡಿ ಅವರಿಗೆ ಕೋರ್ಟ್ ನಿರ್ಬಂಧ ಇರುವುದರಿಂದ ನಾನು ಬೆಣಕಲ್ ಗ್ರಾಮಕ್ಕೆ ಬಂದಿದ್ದೇನೆ. ಕುರುಬ ಸಮಾಜದ ಜನರ ಆಶೀರ್ವಾದ ನಮ್ಮ ಮೇಲಿದ್ದರೆ ಚುನಾವಣೆ ಗೆದ್ದೇ ಗೆಲ್ಲುತ್ತೇವೆ ಎಂಬುದು ನನ್ನ ಪತಿಯ ನಂಬಿಕೆ ಆಗಿದೆ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ…
ತುರುವೇಕೆರೆ: ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಎ ವಿ ಎಸ್ ಎಸ್ ಕಚೇರಿಯಲ್ಲಿ ಛಲವಾದಿ ಮಹಾಸಭಾ ಹಾಗೂ ದಲಿತ ಸಂಘರ್ಷ ಸಮಿತಿಯ ವತಿಯಿಂದ ಭೀಮ ಕೊರೆಗಾಂವ್ ವಿಜಯ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭೀಮ ಕೊರೆಗಾಂವ್ ಸ್ಮಾರಕದ ಹಾಗೂ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಇರಿಸಿ ಚಲವಾದಿ ಮಹಾಸಭಾ ಹಾಗೂ ದಲಿತ ಸಂಘರ್ಷ ಸಮಿತಿಯ ಹೋರಾಟಗಾರರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ತಮ್ಮ ಪೂರ್ವಜರನ್ನು ಸ್ಮರಿಸಿದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಚಲವಾದಿ ಮಹಾಸಭಾ ಅಧ್ಯಕ್ಷರಾದ ಡೊಂಕಿಹಳ್ಳಿ ರಾಮಣ್ಣ, ಪೇಶ್ವೆಗಳ ವಿರುದ್ಧ ಶೋಷಿತ ಮಹರ್ ಸೈನಿಕರು ಹೋರಾಡಿ ಗೆದ್ದ ದಿನವನ್ನು ಭೀಮ ಕೊರೆಗಾಂವ್ ವಿಜಯೋತ್ಸವ ಎಂಬುದಾಗಿ ಆಚರಣೆ ಮಾಡುತ್ತಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಇದನ್ನು ಆಚರಣೆಗೆ ತಂದಿದ್ದರು ಎಂದರು. ಈ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕರಾದ ಕುಣಿಕೇನಹಳ್ಳಿ ಜಗದೀಶ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೊಡಗಿಹಳ್ಳಿ ಹನುಮಂತಯ್ಯ, ಬೀಚನಹಳ್ಳಿ ಸೀನಪ್ಪ, ಮಾದಿಗ ದಂಡೋರದ ಜಿಲ್ಲಾಧ್ಯಕ್ಷ ಸೋಮೇನಹಳ್ಳಿ ಜಗದೀಶ್, ಪುರರಾಮಚಂದ್ರ,…
ಬೆಂಗಳೂರು: ಕರ್ನಾಟಕದ ನಂದಿನಿಯನ್ನು ಗುಜರಾತ್ ನ ಅಮುಲ್ ಜೊತೆಗೆ ವಿಲೀನ ಮಾಡುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಗೃಹ ಸಚಿವ ಅಮಿತ್ ಶಾ ನಂದಿನಿ ಹಾಗೂ ಅಮೂಲ್ ವಿಲೀನ ವಿಚಾರವನ್ನು ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಸೃಷ್ಟಿಯಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ನಂದಿನಿ ವಿಲೀನವಾಗಲಿದೆ ಎಂದು ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ನಂದಿನಿ ತನ್ನ ಸ್ವಂತ ಅಸ್ಥಿತ್ವ ಉಳಿಸಿಕೊಳ್ಳಲಿದೆ. ಅಮುಲ್ ನೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ ಎಂದಿದ್ದಾರೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ನಂದಿನಿ ಮತ್ತು ಅಮುಲ್ ತಾಂತ್ರಿಕ ವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದು ಸಮರ್ಥಿಸಿಕೊಂಡರು. ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ…
ಪಾವಗಡ : ಪಾವಗಡ ಪಟ್ಟಣದ ಹಿಂದೂಪುರ ರಸ್ತೆಯ ಬದಿಯ ಗುಡಿಸಲುಗಳಲ್ಲಿ ವಾಸಿಸುತ್ತಿರುವ ನಿರ್ಗತಿಕರ ಜೊತೆಯಲ್ಲಿ ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಹಾಗೂ ತಂಡ ಕೇಕ್ ಕತ್ತರಿಸಿ, ಗುಡಿಸಲು ವಾಸಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸಿ ವಿಭಿನ್ನವಾಗಿ ಹೊಸ ವರ್ಷವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ಪ್ ಸೊಸೈಟಿ ಮಾರ್ಗದರ್ಶಕರಾದ ಸಂಧ್ಯಾ ಮಾನಂ ಶಶಿಕಿರಣ್, ಇಂದು ನಿರ್ಗತಿಕರು ಚಳಿ, ಮಳೆ, ಬಿಸಿಲನ್ನದೇ ತಮ್ಮ ಜೀವನೋಪಯವನ್ನು ನಡೆಸುತ್ತಿದ್ದೂ, ಇಂತವರ ಮುಖದಲ್ಲಿ ಮಂದಹಾಸವನ್ನು ನೋಡುವ ಸಲುವಾಗಿ ಹೊಸ ವರ್ಷ ದಲ್ಲಿ ಇವರ ಜೊತೆಯಲ್ಲಿ ಕೇಕ್ ಕತ್ತರಿಸಿ ಶುಭಾಶಯಗಳನ್ನು ತಿಳಿಸಿ, ಇವರ ಜೀವನ ಸುಖಕರವಾಗಿರಲೆಂದು ಆಶಿಸಿ, ಇಲ್ಲಿ ನೆಲೆಸಿರುವ ನಿರ್ಗತಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಲಾ ಬ್ಯಾಗ್ ವಿತರಿಸಿ ಮಕ್ಕಳನ್ನು ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಪೋಷಕರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ರೂವಾರಿಗಳು ಅಧ್ಯಕ್ಷರು ಆದಂತಹ ಮಾನಂ ಶಶಿಕಿರಣ್,ಚಿರಂಜೀವಿ ಫ್ಯಾನ್ಸ್ ಕ್ಲಬ್ ನ ವೀರ, ಹೆಲ್ಪ್ ಸೊಸೈಟಿ ತಂಡದ…
ಪಾವಗಡ: ಕನ್ನಡದಲ್ಲಿ ವೈವಿಧ್ಯಮಯವಾದ ಕತೆ, ಕವನ, ಮಹಾಕಾವ್ಯ ಇತ್ಯಾದಿಗಳ ಮೂಲಕ ರಸ ಸಾಹಿತ್ಯವನ್ನು ಕಟ್ಟಿಕೊಟ್ಟ ರಸಋಷಿ ಕವಿ ಕುವೆಂಪು ಎಂದು ಉಪನ್ಯಾಸಕರಾದ ಆಂಜನೇಯಲು ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕವು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆಯ ಕುವೆಂಪು ಗೀತಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವ ವಿಶ್ವಮಾನವನಾಗುವುದು ಹೇಗೆ? ಎಂಬ ಅಂಶಗಳನ್ನು ಕವಿ ತನ್ನ ಸಾಹಿತ್ಯದಲ್ಲಿ ಸ್ಪಷ್ಟವಾಗಿ ತಿಳಿಸಿಕೊಟ್ಟಿದ್ದಾರೆ. ಅವರಲ್ಲಿನ ದೂರದೃಷ್ಟಿ ಮತ್ತು ವೈಚಾರಿಕತೆ ಬರಹಗಳು ಮಾನವನ ಜೀವನವನ್ನೇ ಬದಲಿಸುತ್ತವೆ. ಹಾಗಾಗಿ ಪ್ರತಿಯೊಬ್ಬರು ಕುವೆಂಪುರವನ್ನು ಓದಬೇಕು ಎಂದರು. ಕನ್ನಡ ಉಪನ್ಯಾಸ ಅನಿಲ್ ಕುಮಾರ್ ಮಾತನಾಡಿ, ರಾಷ್ಟಕವಿ ಕುವೆಂಪುರವರು ವಿಶ್ವಮಾನವ ಸಂದೇಶವನ್ನು ಸಾಹಿತ್ಯದ ಮೂಲಕ ನೀಡಿದ್ದಾರೆ. ಅವರ ಪಂಚಮಂತ್ರಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡು ಸಾಗಬೇಕು ಎಂದರು. ಕಸಾಪ ಹೋಬಳಿ ಅಧ್ಯಕ್ಷ ಹೊ.ಮ.ನಾಗರಾಜು, ಕಾರ್ಯದರ್ಶಿ ಚಂದ್ರಶೇಖರ್ ಮುದ್ರಾಡಿ, ಶಿಕ್ಷಕಿ ವಿದ್ಯಾಶ್ರೀ ಮಾತನಾಡಿದರು. ವಾಸವಿ ವಿದ್ಯಾನಿಕೇತನ ಮತ್ತು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಕುವೆಂಪು ಗೀತಗಳ ಗಾಯನ ಮಾಡಿದರು. ಇದೇ ವೇಳೆ ಶಾಲಾ ಗ್ರಂಥಾಲಯಕ್ಕೆ…
ಚಿಕ್ಕಮಗಳೂರು: ಜಿಲ್ಲೆಯ ತರೀಕರೆ ತಾಲೂಕಿನ ನಂದಿಬಟ್ಲು ಗ್ರಾಮದಲ್ಲಿ ಗಜಪಡೆ ದಾಂಧಲೆಯಿಂದ ರೈತರು ಕಂಗೆಟ್ಟಿದ್ದು, ಕಾಡಾನೆಗಳು ಕೃಷಿ ಭೂಮಿಗೆ ದಾಳಿಯಿಟ್ಟು ನಾಶ ಮಾಡುತ್ತಿರುವುದು ರೈತರಿಗೆ ಸಂಕಷ್ಟವಾಗಿ ಪರಿಣಮಿಸಿದೆ. ಕಾಡಾನೆ ದಾಂಧಲೆಯಿಂದ ಸುಮಾರು ನಾಲ್ಕು ಎಕರೆ ಅಡಿಕೆ, ಬಾಳೆ ನಾಶವಾಗಿದ್ದು, ಹಿಂಡು—ಹಿಂಡಾಗಿ ಬರುವ ಆನೆಗಳು ಕೃಷಿ ಭೂಮಿಯನ್ನು ಧ್ವಂಸ ಮಾಡುತ್ತಿವೆ.ಘಟನೆ ಹಿನ್ನೆಲೆಯಲ್ಲಿ ತಣಿಗೆಬೈಲು ಭದ್ರಾ ವನ್ಯಜೀವಿ ವಿಭಾಗದ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಬೆಳೆ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು. ಇನ್ನೂ ಆನೆಗಳ ಉಪಟಳ ನಿಯಂತ್ರಿಸಲು ಸರ್ಕಾರ ಕ್ರಮಕೈಗೊಳ್ಳಬೇಕು. ನಿರಂತರವಾಗಿ ಆನೆಗಳ ದಾಳಿ ನಡೆಯುತ್ತಿದ್ದರೂ, ಇಲಾಖೆ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ತಕ್ಷಣವೇ ಆನೆ ದಾಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಗಳೂರು: ರಜೆಯಲ್ಲಿ ಊರಿಗೆ ಆಗಮಿಸಿದ್ದ ಬಿಎಸ್ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರದ ಕುಲಶೇಖರ ಸಮೀಪದ ಉಮಿಕಾನ ನಿವಾಸಿ ಹರೀಶ್ ಕುಮಾರ್(43) ಮೃತಪಟ್ಟ ಬಿಎಸ್ಎಫ್ ಯೋಧರಾಗಿದ್ದಾರೆ. ಮೃತರು ಪತ್ನಿ, 6 ವರ್ಷದ ಪುತ್ರ, ಒಂದೂವರೆ ವರ್ಷದ ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದರು. 142ನೇ ಬಟಾಲಿಯನ್ ಒಡಿಶಾದಲ್ಲಿ ಕರ್ತವ್ಯದಲ್ಲಿದ್ದು, ರಜೆಯ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದ್ದರು. ಶನಿವಾರ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಕೊನೆಯುಸಿರೆಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸರಗೂರು: ವಿಕಲಚೇತನ ಮಕ್ಕಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸಲು ಹಾಗೂ ಕೌಶಲ್ಯಯುತರನ್ನಾಗಿಸಲು ಅಂಗವಿಕಲ ಮಕ್ಕಳ ಶಿಶು ಕೇಂದ್ರಿಕೃತ ಶೈಕ್ಷಣಿಕ ಯೋಜನೆ ಸಹಕಾರಿಯಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಹೇಳಿದರು. ಸರಗೂರು ತಾಲ್ಲೂಕಿನ ಹಾದನೂರು ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ವಿಕಲಚೇತನರ ಗ್ರಾಮ ಸಭೆಯನ್ನು ಶುಕ್ರವಾರ ಹಮ್ಮಿಕೊಂಡಿದ್ದ ವಿಕಲಚೇತನರ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯಲ್ಲಿ ವಿಕಲಚೇತನರಿಗೆ ಮೀಸಲಿಟ್ಟಿರುವ ಶೇ.5ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಸಲಹೆ ನೀಡಿದರು. ಡಿಸೆಂಬರ್ನಲ್ಲಿ ತಿಂಗಳಲ್ಲಿ ಅಂಗವಿಕಲರಿಗೆ ಸಮನ್ವಯ ಗ್ರಾಮಸಭೆ ನಡೆಸಬೇಕು. ಗ್ರಾಮ ಪಂಚಾಯಿತಿಗಳ ಅನುದಾನದಲ್ಲಿ ಶೇ 5 ರಷ್ಟು ಮೀಸಲಿಟ್ಟು, ಮಾರ್ಗಸೂಚಿಗಳಂತೆ ಖರ್ಚು ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ–2016 ಹೇಳುತ್ತದೆ ಎಂದು ತಿಳಿಸಿದರು. ನಂತರ ತಾಲ್ಲೂಕು ಎಂಆರ್ಡಬ್ಲೂಯು ದೇವರಾಜು ಮಾತನಾಡಿ, ಪಂಚಾಯಿತಿ ಹಂತದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮತ್ತು ತಾಲ್ಲೂಕು ಪಂಚಾಯಿತಿಗಳಲ್ಲಿ ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರನ್ನು ವಿಕಲಚೇತನರ ಗ್ರಾಮಸಭೆಗಳಿಗೆ ಕಡ್ಡಾಯವಾಗಿ ಆಹ್ವಾನಿಸಬೇಕು. ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ ಅಧಿಕಾರಿ…