Subscribe to Updates
Get the latest creative news from FooBar about art, design and business.
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
Author: admin
ಅಧಿಕ ತೂಕವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡುವ ಸಮಸ್ಯೆಯಾಗಿದೆ. ಅಧಿಕ ತೂಕವು ವಿವಿಧ ಆರೋಗ್ಯ ಸಮಸ್ಯೆಗಳನ್ನು ಮಾತ್ರವಲ್ಲದೆ ಖಿನ್ನತೆಯನ್ನು ಉಂಟುಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರು ಸರಿಯಾದ ವ್ಯಾಯಾಮ ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸಬೇಕು. ತೂಕ ಇಳಿಸಿಕೊಳ್ಳಲು ಬಯಸುವವರು ತಮ್ಮ ಆಹಾರದಲ್ಲಿ ಕಡಿಮೆ ಕ್ಯಾಲೋರಿ ರಸವನ್ನು ಸೇರಿಸಿಕೊಳ್ಳಬೇಕು. ಕೆಲವು ಕಡಿಮೆ ಕ್ಯಾಲೋರಿ ಜ್ಯೂಸ್ಗಳನ್ನು ತಿಳಿದುಕೊಳ್ಳೋಣ. ನೆಲ್ಲಿಕಾಯಿ ರಸದಲ್ಲಿ ಕಡಿಮೆ ಕ್ಯಾಲೋರಿ ಇದೆ. ಆದ್ದರಿಂದ ತೂಕ ಇಳಿಸಿಕೊಳ್ಳಲು ಬಯಸುವವರು ನೆಲ್ಲಿಕಾಯಿ ರಸವನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಆರೋಗ್ಯ ಪ್ರಯೋಜನಗಳಿಂದ ಸಮೃದ್ಧವಾಗಿರುವ ನೆಲ್ಲಿಕಾಯಿಯು ಉತ್ಕರ್ಷಣ ನಿರೋಧಕಗಳಲ್ಲಿಯೂ ಸಮೃದ್ಧವಾಗಿದೆ. ಅದೇ ರೀತಿ ತೂಕ ಇಳಿಸಿಕೊಳ್ಳಲು ಬಯಸುವವರು ಆಹಾರದಲ್ಲಿ ಸೌತೆಕಾಯಿ ಅಥವಾ ಸೌತೆಕಾಯಿ ರಸವನ್ನು ಸೇರಿಸಬಹುದು. ಸೌತೆಕಾಯಿಯಲ್ಲಿ ನೀರಿನಂಶ ಹೇರಳವಾಗಿರುವುದರಿಂದ ಕ್ಯಾಲೋರಿಗಳು ತುಂಬಾ ಕಡಿಮೆ. ಕಲ್ಲಂಗಡಿ ಜ್ಯೂಸ್ನಲ್ಲಿ ಕ್ಯಾಲೊರಿ ಕೂಡ ಕಡಿಮೆಯಿದ್ದು, ತೂಕ ಇಳಿಸಿಕೊಳ್ಳಲು ಬಯಸುವವರು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಕಲ್ಲಂಗಡಿ ಹಣ್ಣಿನ ರಸದಲ್ಲಿ ನೀರಿನ ಅಂಶವೂ ಸಮೃದ್ಧವಾಗಿದೆ. ಆದ್ದರಿಂದ, ಒಂದು ಲೋಟ ಕಲ್ಲಂಗಡಿ ರಸವನ್ನು ಕುಡಿಯುವುದರಿಂದ ನಿಮ್ಮ ಹೊಟ್ಟೆಯು…
ಗುಜರಾತ್: ಕೋಟ್ಯಂತರ ರೂಪಾಯಿ ಮೌಲ್ಯದ ಸಂಪತ್ತನ್ನು ತ್ಯಜಿಸಿ ತಪಸ್ಸಿನ ಜೀವನ ನಡೆಸುವವರ ಕಥೆಗಳನ್ನು ನಾವು ಆಗಾಗ್ಗೆ ಕೇಳುತ್ತೇವೆ. ಇದೀಗ 9 ವರ್ಷದ ಬಾಲಕಿಯೊಬ್ಬಳು ತನ್ನ ಆಸ್ತಿಯನ್ನು ಬಿಟ್ಟು ಸನ್ಯಾಸಿಯಾಗಲು ಸಿದ್ಧತೆ ನಡೆಸಿದ್ದಾಳೆ ಎಂದು ವರದಿಯಾಗಿದೆ. ಗುಜರಾತ್ನ ಸೂರತ್ನ ವೆಸು ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವಜ್ರದ ವ್ಯಾಪಾರಿ ಧನೇಶ್ ಮತ್ತು ಅಮಿ ಸಾಂಘ್ವಿ ಅವರ ಇಬ್ಬರು ಪುತ್ರಿಯರಲ್ಲಿ ದೇವಾಂಶಿ ಹಿರಿಯರು. ತಂಗಿಗೆ ನಾಲ್ಕು ವರ್ಷ. ದೇವಾಂಶಿ ಮತ್ತು ಆಕೆಯ ಸಹೋದರಿಯ ತಂದೆ ಧನೇಶ್ ಅವರು ಸೂರತ್ನಲ್ಲಿ ಮೂರು ದಶಕಗಳಷ್ಟು ಹಳೆಯದಾದ ವಜ್ರ ಪಾಲಿಶ್ ಮತ್ತು ರಫ್ತು ಮಾಡುವ ಸಾಂಘ್ವಿ ಮತ್ತು ಸನ್ಸ್ ಅನ್ನು ಹೊಂದಿದ್ದಾರೆ. ದೇವಾಂಶಿ ಅವರು ಜೈನ ಸನ್ಯಾಸಿ ಆಚಾರ್ಯ ವಿಜಯ್ ಕೀರ್ತಿಶೂರಿ ಅವರ ಸಮ್ಮುಖದಲ್ಲಿ ಸನ್ಯಾಸಿನಿ ಜೀವನವನ್ನು ಕೈಗೊಂಡರು. ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ನೂರಾರು ಜನರು ಆಗಮಿಸಿದ್ದರು. ದೇವಾಂಶಿ ಚಿಕ್ಕ ವಯಸ್ಸಿನಿಂದಲೇ ಆಧ್ಯಾತ್ಮಿಕ ಜೀವನದತ್ತ ಒಲವು ತೋರಿದ ಮಗು ಎಂದು ಸಂಬಂಧಿಕರು ತಿಳಿಸಿದ್ದಾರೆ. ದೇವಾಂಶಿ ಅವರು ಆಧ್ಯಾತ್ಮಿಕ ಜೀವನವನ್ನು…
ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದ್ವೇಷವನ್ನು ಹರಡುವುದು ರಾಷ್ಟ್ರದ ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ. ಕಾಶ್ಮೀರಿ ಪಂಡಿತರ ಗಾಯಗಳನ್ನು ಗುಣಪಡಿಸಲು ದ್ವೇಷದ ಬದಲು ಪ್ರೀತಿಯನ್ನು ನೀಡಬೇಕು ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಸಕ್ರಿಯವಾಗಿದ್ದು, ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಿದರೆ ಮಾತ್ರ ಅದನ್ನು ತಡೆಯಲು ಸಾಧ್ಯ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ದೇಶದಲ್ಲಿ ಭಯೋತ್ಪಾದನೆ ಸಕ್ರಿಯವಾಗಿದೆ. ಪಾಕಿಸ್ತಾನ ಮಾತುಕತೆಗೆ ಸಿದ್ಧವಾಗುವವರೆಗೆ ಇದು ನಿಲ್ಲುವುದಿಲ್ಲ. 16 ಬಾರಿ ನಮ್ಮ ಗಡಿ ದಾಟಿದ ಚೀನಾದೊಂದಿಗೆ ಮಾತನಾಡಬಹುದಾದ ನೀವು ಪಾಕಿಸ್ತಾನದೊಂದಿಗಿನ ಮಾತುಕತೆಯಿಂದ ಏಕೆ ಹಿಂದೆ ಸರಿಯುತ್ತಿದ್ದೀರಿ?ಭಯೋತ್ಪಾದನೆಯನ್ನು ಕೊನೆಗೊಳಿಸಲು ಪ್ರಯತ್ನಗಳು ಮುಂದುವರಿಯಬೇಕು ಎಂದು ಹೇಳಿದ್ದಾರೆ. ಆದರೆ ಬಿಜೆಪಿ ಸರಕಾರ ಹಿಂದೇಟು ಹಾಕುತ್ತಿದೆ. ಬಿಜೆಪಿ ವೋಟ್ ಬ್ಯಾಂಕ್ ಗುರಿಯಾಗಿಟ್ಟುಕೊಂಡು ದ್ವೇಷ ಹರಡುತ್ತಿದೆ. ಪಾಕಿಸ್ತಾನದಲ್ಲಿ ವಾಸಿಸುವ ಹಿಂದೂಗಳು ಮತ್ತು ಭಾರತದಲ್ಲಿ ಮುಸ್ಲಿಮರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದೆ ದ್ವೇಷವನ್ನು ಹರಡಲಾಗುತ್ತದೆ. ಜನರ ಹೃದಯದಿಂದ ದ್ವೇಷವನ್ನು ತೊಡೆದುಹಾಕದಿದ್ದರೆ, ಭಾರತದ ಅಖಂಡತೆಗೆ ಧಕ್ಕೆ ಬರುತ್ತದೆ ಎಂದು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದ ಸಾಮೂಹಿಕ ಆತ್ಮಹತ್ಯೆ ಪ್ರಕರಣವು ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. 18ರಿಂದ 24 ವರ್ಷದೊಳಗಿನ ಮೂವರು ಸಹೋದರಿಯರು ನೇಣಿಗೆ ಕೊರಳೊಡ್ಡಿದ್ದು, ಮೂರು ಅಮಾಯಕ ಜೀವ ಬಲಿಗೆ ಇಡೀ ಗ್ರಾಮಸ್ಥರು ಕಣ್ಣೀರಾಗಿದ್ದಾರೆ. ತಂದೆ, ತಾಯಿ, ಅಜ್ಜಿಯನ್ನು ಕಳೆದುಕೊಂಡು ಅನಾಥರಾಗಿದ್ದ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವುದು ಸಾರ್ವಜನಿಕರ ಹೃದಯ ಕರಗಿಸಿದೆ. ರಂಜಿತಾ(24), ಬಿಂದು(21) ಚಂದನಾ(18) ಮೃತಪಟ್ಟ ಸಹೋದರಿಯರಾಗಿದ್ದಾರೆ. ಸುಮಾರು 9 ದಿನಗಳ ಹಿಂದೆಯೇ ಸಹೋದರಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆನ್ನಲಾಗಿದೆ. ಜನವರಿ 19ರಂದು ಈ ದುರ್ಘಟನೆ ಬೆಳಕಿಗೆ ಬಂದಿದೆ. ಈ ಮೂವರು ಸಹೋದರಿಯರ ಪೈಕಿ ಇಬ್ಬರು ಕಿಬ್ಬನಹಳ್ಳಿಯ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಅವರು ಏಕಾಏಕಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಎಎಸ್ ಪಿ ಸಿದ್ಧಾರ್ಥ್ ಗೋಯಲ್, ಸಿಪಿಐ ನಿರ್ಮಲಾ, ಪಿಎಸ್ ಐ ಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
ಮೈಸೂರು: ಗಾಂಜಾ ಸೇವನೆ ಆರೋಪ ಪೊಲೀಸ್ ವಿಚಾರಣೆಗೆ ಹೆದರಿ ಫೋಟೊಗ್ರಾಫರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಭಿಷೇಕ ನೇಣಿಗೆ ಶರಣಾದ ಯುವಕ. ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ನೇಹಿತನೊಬ್ಬನಿಂದ ಬರಬೇಕಿದ್ದ ಸಾಲದ ಹಣ ಪಡೆಯಲು ತೆರಳಿದ್ದೆ. ಕೆಲವರು ಗಾಂಜಾ ಸೇವನೆ ಮಾಡಿದ್ದರು. ಆ ಸಮಯದಲ್ಲಿ ಆ ಸ್ಥಳಕ್ಕೆ ಪೊಲೀಸರು ಬಂದರು. ನನ್ನನ್ನು ಅವರೊಂದಿಗೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ನೀನು ಗಾಂಜಾ ವ್ಯಸನಿಯೇ ಎಂದು ಕೀಳಾಗಿ ನೋಡಿ ಹಿಯಾಳಿಸಿದರು ಎಂದು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ. ನನ್ನಿಂದ ಈ ರೀತಿ ಜೀವಿಸಲು ಸಾಧ್ಯವಿಲ್ಲ. ಈ ತರಹದ ದೂರುಗಳು ಸಹಿಸಲು ಅಸಾಧ್ಯ. ನನ್ನನ್ನು ದಯವಿಟ್ಟು ಕ್ಷಮಿಸಿ, ಏನೇ ಕಷ್ಟ ಬಂದರು ಇದುವರೆಗೂ ಹೇಡಿತನ ಮಾಡದೆ ಇದ್ದಿದಕ್ಕೆ ನನಗೆ ಸಿಕ್ಕ ಪ್ರತಿಫಲ. ಕೊಲೆಯಾದ ಸ್ಥಳದಲ್ಲಿ ಇದ್ದ ಮಾತ್ರಕ್ಕೆ ಯಾರು ಕೊಲೆಗಾರ ಆಗುವುದಿಲ್ಲ. ಇನ್ನೊಂದು ಜನ್ಮ ಇದ್ದರೆ ನಿಮ್ಮ ಹೊಟ್ಟೆಯಲ್ಲಿ ಹುಟ್ಟಿ ನಿಮ್ಮನ್ನು ಚೆನ್ನಾಗಿ…
ಮೈಸೂರು: ಒಡನಾಡಿ ಸಂಸ್ಥೆ ಮುಖ್ಯಸ್ಥರು ಹಾಗೂ ಸ್ಯಾಂಟ್ರೋ ರವಿ ಪತ್ನಿ ಜೊತೆ ನಟ ಚೇತನ್ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ನಟ ಚೇತನ್, ಒಡನಾಡಿ ಸಂಸ್ಥೆ 32 ವರ್ಷಗಳಿಂದ ಅನ್ಯಾಯದ ವಿರುದ್ಧ ಕೆಲಸ ಮಾಡಿಕೊಂಡು ಬಂದಿದೆ. ಬಲಹೀನರ ಪರ ನಿಂತು ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಮುರುಘಾ ಮಠ ಹಾಗೂ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾನು ಕುಟುಂಬ ಸಮೇತ ಅವರನ್ನು ನೋಡಲು ಬಂದಿದ್ದೇನೆ. ಇದು ಕೇವಲ ಸೇವೆಯಲ್ಲ, ರಚನಾತ್ಮಕ ಹೋರಾಟ ಆಗಿದೆ. ನಾನು ಎಂದೆಂದಿಗೂ ಅವರ ಜೊತೆ ಇರುತ್ತೇನೆ. 2018ರಲ್ಲಿ ಮೀಟೂ ಹೋರಾಟ ಆದಾಗ ಮಹಿಳೆಗೆ ಘನತೆ ತರಬೇಕು ಅಂತ ಹೋರಾಡಿದ್ದೇವೆ. ಮಹಿಳೆಗೆ ಅನ್ಯಾಯ ಆದಾಗ ಆಕೆಯನ್ನ ಅವಮಾನ ಮಾಡಿ ನಿಂದಿಸೋರು ಇದ್ದಾರೆ. ಮುರುಘಾ ಪ್ರಕರಣದಲ್ಲೂ ಹೆಣ್ಣು ಮಕ್ಕಳ ಜೊತೆ ನಿಂತು ನ್ಯಾಯ ಒದಗಿಸುವ ಕೆಲಸವನ್ನ ಒಡನಾಡಿ ಸಂಸ್ಥೆ ಮಾಡಿದೆ. ಇಂತಹ ಸಂಸ್ಥೆಗಳು ರಾಜ್ಯದಲ್ಲಿ ಹೆಚ್ಚು ಹೆಚ್ಚು ಬೆಳೆಯಬೇಕು ಎಂದರು. ಪಠಾಣ್ ಸಿನಿಮಾದಲ್ಲಿ ಕೇಸರಿ…
ಹಾವೇರಿ :ಈ ಸರ್ಕಾರದಲ್ಲಿ ಏನೇ ಕೆಲಸವಾಗಬೇಕಾದರೂ ಲಂಚ ಕೊಡಬೇಕು. ಹೀಗಾಗಿ ಜನರೇ ಬಿಜೆಪಿಗೆ ಬೆಂಬಲ ಕೊಡುವ ಮುನ್ನ ಯೋಚಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಬೊಮ್ಮಾಯಿ ಅವರೇ ನಿಮ್ಮ ಸರ್ಕಾರ ಎರಡು ತಿಂಗಳು ಮಾತ್ರ ಇರೋದು. ಎರಡು ತಿಂಗಳ ಬಳಿಕ ಈ ವೇದಿಕೆ ಮೇಲೆ ಕುಳಿತವರ ಸರ್ಕಾರವಿರುತ್ತೆ ಎಂದರು. 40 ಪರ್ಸೆಂಟ್ ಕಮಿಷನ್ ಕೊಡಲು ಬಿಜೆಪಿಗೆ ಬೆಂಬಲ ಕೊಡಬೇಕಾ..? ರಾಜ್ಯದಲ್ಲಿ ನಿರುದ್ಯೋಗ ಸೃಷ್ಠಿ ಮಾಡಿದ ಬಿಜೆಪಿಗೆ ಬೆಂಬಲ ಕೊಡಬೇಕಾ..?ಬಿಜೆಪಿಗೆ ಬೆಂಬಲ ಕೊಡುವ ಮುನ್ನ ಜನರು ಯೋಚಿಸಿ. ಏನೇ ಕೆಲಸ ಆಗಬೇಕಾದರೂ ಲಂಚ ಕೊಡಬೇಕು ಎಂದು ಕಿಡಿಕಾರಿದರು.ಕಲಬುರ್ಗಿಯಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ನೀಡಿದ್ದಾರೆ. ತಾಂಡಾಗಳನ್ನ ಕಂದಾಯ ಗ್ರಾಮ ಮಾಡಿದ್ದು ನಮ್ಮ ಸರ್ಕಾರ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಹಾವೇರಿ ಜಿಲ್ಲೆ ಶಾಸಕರು ಕಾಂಗ್ರೆಸ್ ಬರುವುದಕ್ಕೆ ಸಿದ್ದರಾಗಿದ್ದಾರೆ. ಸಮಯ ಬರಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಡಿ.ಕೆ…
ಬೆಳಗಾವಿ : ಪ್ರಸ್ತುತ ದಿನಗಳಲ್ಲಿ ಜಗತ್ತಿನಾದ್ಯಂತ ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಸೇವೆ ಮತ್ತು ಉತ್ಪಾದನಾ ವಲಯದಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ. ಉದ್ಯೋಗಾಕಾಂಕ್ಷಿಗಳು ಕಾಲಕ್ಕೆ ತಕ್ಕಂತೆ ಕೌಶಲ್ಯವನ್ನು ಬೆಳೆಸಿಕೊಂಡು ತಾವು ಆಯ್ಕೆ ಮಾಡಿಕೊಂಡ ಕ್ಷೇತ್ರದಲ್ಲಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕರೆ ನೀಡಿದರು. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ನಗರದ ಮರಾಠಾ ಮಂಡಲದ ಕಲಾ, ವಿಜ್ಞಾನ ಹಾಗೂ ಗೃಹವಿಜ್ಞಾನ ಮಹಾವಿದ್ಯಾಲಯದಲ್ಲಿ ಸರ್ವರಿಗೂ ಉದ್ಯೋಗ ಅಭಿಯಾನದಡಿಯಲ್ಲಿ ಗುರುವಾರ (ಜ.19) ನಡೆದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ತಮ್ಮದೇ ಉದಾಹರಣೆ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ವಿಜಯಪುರ ಜಿಲ್ಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತರೂ ನಿರಂತರ ಪ್ರಯತ್ನದ ಫಲವಾಗಿ ನಾಗರಿಕ ಸೇವೆಯಂತಹ ಉನ್ನತ ಹುದ್ದೆ ಪಡೆಯಲು ಸಾಧ್ಯವಾಯಿತು ಎಂದು ಹೇಳಿದರು. ಸರಕಾರಿ ಹಾಗೂ ಖಾಸಗಿ ಕಂಪನಿಯಲ್ಲಿ ಅನೇಕ ಕೆಲಸಗಳು ದೊರೆತವು. ವಿದೇಶಗಳಿಗೆ…
ಬೆಳಗಾವಿ : ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ಚುನಾವಣೆಯನ್ನು ನಿಗದಿಪಡಿಸಲಾಗಿದ್ದು, ಫೆಬ್ರುವರಿ 6, 2023 ರಂದು ಮಧ್ಯಾಹ್ನ್ಹ 3 ಗಂಟೆಗೆ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಗೃಹದಲ್ಲಿ ಚುನಾವಣೆ ನಡೆಯಲಿದೆ. ಮಹಾಪೌರರ ಸ್ಥಾನವು ಸಾಮಾನ್ಯ ಮಹಿಳೆಯರಿಗೆ ಹಾಗೂ ಉಪಮಹಾಪೌರ ಸ್ಥಾನವು ಹಿಂದುಳಿದ ವರ್ಗದ ಮಹಿಳೆಯರಿಗೆ ಮೀಸಲಾಗಿದೆ. ಚುಣಾವಣೆ ವೇಳಾಪಟ್ಟಿ: ಫೆಬ್ರುವರಿ 6, 2023 ರಂದು ಮುಂಜಾನೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಹಾಪೌರ, ಉಪಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭವಾಗುವುದು. ಮಧ್ಯಾಹ್ನ 3 ಗಂಟೆಯ ನಂತರ ಮಹಾಪೌರ, ಉಪಮಹಾಪೌರ ಸ್ಥಾನಕ್ಕೆ ಚುನಾವಣೆ ಪ್ರಾರಂಭವಾಗಲಿದ್ದು, ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸುವುದು, ಹಾಗೂ ಮತಗಳಎಣಿಕೆ ಮತ್ತು ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು…
ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ಎಮರ್ಜೆನ್ಸಿ ಡೋರ್ ಓಪನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪ್ರತಿಕ್ರಿಯಿಸಿದರು. ತೇಜಸ್ವಿ ಸೂರ್ಯ ಡೋರ್ ಓಪನ್ ಮಾಡಿಲ್ಲ, ಅದನ್ನ ರೊಟೇಟ್ ಮಾಡಿ ಓಪನ್ ಮಾಡ್ಬೇಕು, ಸಂಸದ, ಬುದ್ಧಿವಂತ, ಜವಾಬ್ದಾರಿ ಸ್ಥಾನದಲ್ಲಿದ್ದಾರೆ ಅವರು ಡೋರ್ ಓಫನ್ ಮಾಡಿಲ್ಲ ಎಂದು ಸಮರ್ಥಿಸಿದರು. ಅವರು ಕೂತಿದ್ದು ಎಮರ್ಜೆನ್ಸ್ ಎಕ್ಸಿಟ್ ಸೀಟಿನಲ್ಲಿ, ಎಟಿಆರ್ ಫ್ಲೈಟ್ ಸೀಟಲ್ಲಿ ಹ್ಯಾಂಡ್ ರೆಸ್ಟ್ ಇರಲ್ಲ. ಅಲ್ಲಿ ಎಕ್ಸಿಟ್ ಡೋರ್ ನಲ್ಲಿ ಬ್ಲಿಡಿಂಗ್ ಸ್ವಲ್ಪ ಓಪನ್ ಇತ್ತು, ಅದನ್ನ ಏರ್ ಹಾಸ್ಟೆಸ್ ಗಮನ ತಂದ್ರು, ಪೈಲೆಟ್ ಬಂದು ಡಿಬೋರ್ಡಿಂಗ್ ಮಾಡಿ, ಸರಿಯಾಗಿ ಫಿಟ್ ಮಾಡಿದ್ರು, ಅಲ್ಲಿ ತೇಜಸ್ವಿ ಇನ್ಸಟೆಂಟ್ ರಿಪೋರ್ಟ್ ಕೊಟ್ರು ಎಂದರು. ತೇಜಸ್ವಿ ಸೂರ್ಯ ಡೋರ್ ನ ಪುಲ್ ಮಾಡಿಲ್ಲ, ತೇಜಸ್ವಿ ಸೂರ್ಯ ಇತರೇ ಪ್ಯಾಸೆಂಜರ್ಗೆ ಕ್ಷಮೆ ಕೋರಿದ್ದಾರೆ ಇಂಡಿಗೋ ಅವರೇ ಕ್ಲಾರಿಫಿಕೇಶನ್ ಮಾಡಿ, ಇನ್ಸಟೆಂಟ್ ರಿಪೋರ್ಟ್ ಬಿಡುಗಡೆ ಮಾಡಿದ್ದಾರೆ ಎಂದು ಅಣ್ಣಾಮಲೈ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…