Subscribe to Updates
Get the latest creative news from FooBar about art, design and business.
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
Author: admin
ಮಂಡ್ಯ: ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಗೆಲಸದ ಮಹಿಳೆಯೊಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಸಾವಿತ್ರಿ ಮಹದೇವ್(45) ಬಂಧಿತ ಮಹಿಳೆಯಾಗಿದ್ದು, ಇತ್ತೀಚೆಗೆ ಹಲಗೂರು, ಮಂಡ್ಯ, ಕೆ.ಎಂ. ದೊಡ್ಡಿ ವ್ಯಾಪ್ತಿಗಳಲ್ಲಿ ಕಳವು ನಡೆದಿತ್ತು. ಈ ಸಂಬಂಧ ಸಬ್ ಇನ್ಸ್ ಪೆಕ್ಟರ್ ರವಿ ಕುಮಾರ್ ಅವರು ತಂಡ ರಚಿಸಿ ತನಿಖೆ ನಡೆಸಿದ್ದು, ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ ಪೊಲೀಸರು 7 ಲಕ್ಷ ರೂ. ಬೆಲೆಬಾಳುವ 123 ಗ್ರಾಮ್ ಚಿನ್ನ ವಶಪಡಿಸಿಕೊಂಡಿದ್ದಾರೆ. ಮಹಿಳೆಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮಂಡ್ಯ ಜಿಲ್ಲಾ ಪೊಲೀಸ್ ಅಭಿಕ್ಷಕರದ ಯತೀಶ್, DSP ನವೀನ್ ಕುಮಾರ್, ಸಿಪಿಐ ಶ್ರೀಧರ್ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು. ರಿಯಾಜ್ ಪಾಷಾ, ನಾಗೇಂದ್ರ, ಸಿದ್ದರಾಜು, ಜಯಕುಮಾರ್, ಮಹೇಶ್, ಸಿದ್ದೇಗೌಡ, ಮಲ್ಲಿಕಾರ್ಜುನ ಚಳುಕಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ವರದಿ: ಶ್ರೀನಿವಾಸ್ ಮಂಡ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಕೇರಳ : ಮಧ್ಯ ತಿರುವಾಂಕೂರಿನ ಪ್ರಮುಖ ರೈತ ಹೋರಾಟಗಳಲ್ಲಿ ಒಂದಾದ ಸೂರನಾಡ್ ಕ್ರಾಂತಿಯ ಎಪ್ಪತ್ಮೂರು ವರ್ಷಗಳು. ಕೇರಳ ರಚನೆಗೂ ಮುನ್ನ ಜನ್ಮಿ ಆಡಳಿತದ ವಿರುದ್ಧ ಸೂರನಾಡಿನ ಕ್ರಾಂತಿ ಇತಿಹಾಸ ಪುಸ್ತಕಗಳಲ್ಲಿ ಜ್ವಲಂತ ನೆನಪು. ಸೂರನಾಡ್ ಮಧ್ಯ ತಿರುವಾಂಕೂರಿನ ರಾಜಕೀಯ ಇತಿಹಾಸದ ಮೇಲೆ ಕಾಲವು ಬರೆದ ಕೆಂಪು ಅಧ್ಯಾಯವಾಗಿದೆ.ಸೂರನಾಡ್ ಕ್ರಾಂತಿಯು ಒಂದು ದೇಶ ಮತ್ತು ಅದರ ಹತಾಶ ಜನರು ಸ್ಥಳೀಯ ಆಡಳಿತದ ವಿರುದ್ಧ ತಮ್ಮ ಪ್ರಾಣವನ್ನು ರಕ್ಷಿಸುವ ನೆನಪುಗಳನ್ನು ಹೇಳಬೇಕಾಗಿದೆ. ಜನ್ಮಿ ಆಡಳಿತದ ವಿರುದ್ಧಸೂರನಾಟೆಯ ರೈತರು ಮತ್ತು ಕಾರ್ಮಿಕರಲ್ಲಿ ರೂಪುಗೊಂಡ ಪ್ರತಿಭಟನೆಯು ಶೀಘ್ರವಾಗಿ ಬಲವನ್ನು ಪಡೆಯಿತು. ಜನನ ನಿಷೇಧದ ಅಂಗವಾಗಿ ಮೀನು ಮಾರಾಟಕ್ಕೆ ಸಂಬಂಧಿಸಿದ ಮುಷ್ಕರದಲ್ಲಿ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ತಿರುಕೊಚ್ಚಿಯ ಪ್ರಧಾನಿ ಪರವೂರು ಟಿ.ಕೆ.ನಾರಾಯಣಪಿಳ್ಳ ಅವರು ಕೇರಳದ ಭೂಪಟದಲ್ಲಿ ಸೂರನಾಡು ಎಂಬ ನಾಡು ಇರಬಾರದು ಎಂದು ಘೋಷಿಸಿದರು. ನಂತರ ನಡೆದ ರಕ್ತಸಿಕ್ತ ಹೋರಾಟ ಮತ್ತು ಪೊಲೀಸ್ ದೌರ್ಜನ್ಯವು ಏಳು ದಶಕಗಳಿಗೂ ಹೆಚ್ಚು ಕಾಲದ…
ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರದಿದ್ದರೇ 2028ಕ್ಕೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಸಿಂದಗಿಯಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ, ಈ ಬಾರಿ ಅಧಿಕಾರಕ್ಕೆ ಬರದಿದ್ದರೇ 2028ಕ್ಕೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ. 2028ರ ಬಳಿಕ ನಿಮ್ಮ ಬಳಿ ಮತ ಕೇಳಲು ಬರಲ್ಲ. ನಮ್ಮ ತಪ್ಪಿನಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದೇವೆ . ಹೆಚ್.ಡಿ. ದೇವೆಗೌಡರ ಮೇಲೆ ನೀವು ಇಟ್ಟಿರುವ ಪ್ರೀತಿಯನ್ನ ಮರೆತಿಲ್ಲ. ಪಂಚರತ್ನ ಯೋಜನೆಗೆ ಜಾತಿ ಧರ್ಮ ಇಲ್ಲ. ಈ 5 ಕಾರ್ಯಕ್ರಮಗಳು ಜಾರಿಯಾದರೇ ರಾಮರಾಜ್ಯವಾಗುತ್ತದೆ ಎಂದು ಹೇಳಿದರು. ಬಿಜೆಪಿಯವರು ರಾಜ್ಯದ ಜನರ ಹಣವನ್ನ ಲೂಟಿ ಮಾಡಿದ್ದಾರೆ. ಕಾಂಗ್ರೆಸ್ ಬಿಜೆಪಿ ರೈತರಿಗೆ ಯಾವುದೇ ಯೋಜನೆ ಜಾರಿ ಮಾಡಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನ್ಯೂಜಿಲೆಂಡ್ : ಪ್ರಧಾನಿ ಜೆಸಿಂತಾ ಅರ್ಡೆರ್ನ್ ರಾಜೀನಾಮೆ ನೀಡಲು ಸಿದ್ಧತೆ ನಡೆಸಿದ್ದಾರೆ. ಮುಂದಿನ ತಿಂಗಳು ರಾಜೀನಾಮೆ ನೀಡುವುದಾಗಿ ಸ್ವತಃ ಜೆಸಿಂತಾ ಘೋಷಿಸಿದ್ದಾರೆ. ಜೆಸಿಂತಾ ಅರ್ಡೆರ್ನ್ ಅವರ ರಾಜೀನಾಮೆ ಘೋಷಣೆ ಅಕ್ಟೋಬರ್ 14 ರಂದು ನ್ಯೂಜಿಲೆಂಡ್ನಲ್ಲಿ ನಡೆಯಲಿದೆ. ಇನ್ನು ಒಂದು ಚುನಾವಣೆಯನ್ನು ಎದುರಿಸುವ ಶಕ್ತಿ ತನಗಿಲ್ಲ ಮತ್ತು ಪ್ರಧಾನಿಯ ಅವಧಿ ಅವರಿಂದ ಸಾಕಷ್ಟು ಕಸಿದುಕೊಂಡಿದೆ ಎಂದು ವಿವರಿಸುವ ಮೂಲಕ ಜೆಸಿಂತಾ ರಾಜೀನಾಮೆ ಘೋಷಣೆಯನ್ನು ವಿವರಿಸಿದ್ದಾರೆ. ಜೆಸಿಂತಾ ಅರ್ಡೆರ್ನ್ ಅವರು ಲೇಬರ್ ಪಕ್ಷದ ನಾಯಕಿ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ. ತಾನು ಯಾವುದೇ ಭವಿಷ್ಯದ ಯೋಜನೆಗಳನ್ನು ನಿರ್ಧರಿಸಿಲ್ಲ ಮತ್ತು ಪ್ರಸ್ತುತ ತನ್ನ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುತ್ತೇನೆ ಎಂದು ಜೆಸಿಂತಾ ಹೇಳಿದರು. 2017 ರಲ್ಲಿ, 37 ವರ್ಷ ವಯಸ್ಸಿನ ಜೆಸಿಂತಾ ಅವರು ನ್ಯೂಜಿಲೆಂಡ್ ಪ್ರಧಾನಿಯಾಗಿ ಆಯ್ಕೆಯಾದಾಗ ವಿಶ್ವದ ಅತ್ಯಂತ ಕಿರಿಯ ಪ್ರಧಾನಿಯಾದರು. ಜೆಸಿಂತಾ ಅವರು ಅಧಿಕಾರದಲ್ಲಿದ್ದಾಗ ತಾಯಿಯಾದ ಎರಡನೇ ವಿಶ್ವ ನಾಯಕಿಯಾಗಿದ್ದಾರೆ. ನ್ಯೂಜಿಲೆಂಡ್ನಲ್ಲಿ ನಡೆದ ಅನೇಕ ಘಟನೆಗಳನ್ನು ಉಲ್ಲೇಖಿಸಿ ಜಗತ್ತು ಜೆಸಿಂತಾ ಅವರ ಆದರ್ಶಪ್ರಾಯ…
ಬೆಳಗಾವಿ: 2022-23ನೇ ಸಾಲಿನಲ್ಲಿ ನಶಿಸಿ ಹೋಗುತ್ತಿರುವ ತಳ ಸಮುದಾಯದ ವಿಶಿಷ್ಟ ಮುನ್ನೆಲೆಗೆ ತರಲು ಜಿಲ್ಲೆಯ 50 ಜನ ಪುರುಷ/ಮಹಿಳಾ ಅಭ್ಯರ್ಥಿಗಳಿಗೆ 20 ದಿನಗಳ ಕಾಲ ತರಬೇತಿ ನೀಡಲಾಗುವುದು, ಆಸಕ್ತ ಅಭ್ಯರ್ಥಿಗಳು ಜನ್ಮ ದಿನಾಂಕ ದಾಖಲೆ, ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರದೊಂದಿಗೆ ಜನವರಿ 21-2023 ರೊಳಗಾಗಿ ಅರ್ಜಿ ಸಲ್ಲಿಸಬೇಕು. 2022-23ನೇ ಸಾಲಿನಲ್ಲಿ ಸಾಮಾಜಿಕ ಅರಿವು ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ನೀಡಬಯಸುವ ಜಿಲ್ಲೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಆಸಕ್ತ ಕಲಾತಂಡಗಳು ಜನ್ಮ ದಿನಾಂಕ ದಾಖಲೆ, ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರದೊಂದಿಗೆ ಜನವರಿ 21-2023 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0831-2474649 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕ್ರತಿಕ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಲೈಂಗಿಕ ದೌರ್ಜನ್ಯ, ಅಪೌಷ್ಟಿಕತೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಭಿಕ್ಷಾಟನೆ ಸೇರಿದಂತೆ ವಿವಿಧ ಬಗೆಯಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ಕರೆತರಲು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ(ಜ.18) ನಡೆದ ಬಾಲನ್ಯಾಯಾಲಯ ಕಾಯ್ದೆ, ಆರ್.ಟಿ.ಇ. ಕಾಯ್ದೆ, ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣಾ ಕಾಯ್ದೆ(ಪೋಕ್ಸೊ) ಅನುಷ್ಠಾನ ಕುರಿತು ಜಿಲ್ಲೆಯ ಎಲ್ಲ ಭಾಗೀದಾರರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಲವು ಶಾಲೆಗಳಲ್ಲಿ ಶಿಕ್ಷಕರಿಂದ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ತಂದೆಯ ವಯಸ್ಸಿನ ವ್ಯಕ್ತಿಯಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ಖೇದಕರ. ಇಂತಹ ಸನ್ನಿವೇಶದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಹೊಣೆ ನಮ್ಮೆಲ್ಲರ ಮೇಲಿದೆ. ಶಾಲೆಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವರೆಗೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು. ಶಾಲಾಮಕ್ಕಳಲ್ಲಿ ಲೈಂಗಿಕ ದೌರ್ಜನ್ಯ ಕಂಡುಬಂದ…
ಗದಗ : ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಿಮ್ಮ ಪಾಪದ ಕೊಡ ತುಂಬಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಗದಗನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಅಧಿಕಾರಕ್ಕೆ ಬರುವುದು ಲೂಟಿ ಹೊಡೆಯೋದಕ್ಕೆ ಅಲ್ಲ, ಬೊಮ್ಮಾಯಿ ಅವರೇ ನಿಮ್ಮ ಪಾಪದ ಕೊಡ ತುಂಬಿದೆ, ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಒಂದು ವಿಶೇಷ ತನಿಖಾ ಆಯೋಗ ರಚನೆ ಮಾಡಿ ತಕ್ಕ ಪಾಠ ಕಲಿಸುವಂತೆ ಜನರಿಗೆ ಮನವಿ ಮಾಡುತ್ತೇನೆ, ಯಾರು ಲೂಟಿ ಹೊಡೆದಿದ್ದಾರೋ ಅವರಿಗೆ ಶಿಕ್ಷೆ ಕಾದಿದೆ ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ವಿಜಯನಗರ ನಿವಾಸಿ ಕುಲದೀಪ್ ಬಗರೇಚಾ ಮೃತಪಟ್ಟ ಬೈಕ್ ಸವಾರ. ಬೈಕ್ಗೆ ಬಿಎಂಟಿಎಸ್ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಸ್ ಚಾಲಕ ಆನಂದ್ ರಾವ್ ಹಾಗು ಬಸ್ ನ್ನು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಿಕ್ಕಮಗಳೂರು: ದಲಿತರು ಹಾಗೂ ಅಲ್ಪಸಂಖ್ಯಾತರನ್ನು ದೂರವಿಟ್ಟು ಜಿಲ್ಲಾ ಉತ್ಸವ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿಗಳ ಬಳಿಗೆ ತೆರಳಿ ಮನವಿ ಸಲ್ಲಿಸಲು ಯತ್ನಸಿದ ದಲಿತ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಜಿಲ್ಲಾ ಉತ್ಸವದ ಯಾವುದೇ ಸಮಿತಿಗಳಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವ್ಯಕ್ತಿಗಳನ್ನು ಸೇರಿಸಿಕೊಂಡಿಲ್ಲ, ದಲಿತ ಕಲಾ ಮಂಡಳಿಗಳಿಗೆ ಅವಕಾಶ ನೀಡದೇ ತಾರತಮ್ಯ ಮಾಡಲಾಗಿದೆ ಎಂದು ಜಿಲ್ಲಾಡಳಿತದ ವಿರುದ್ಧ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಆರೋಪಿಸಿದರು. ಕಾರ್ಯಕ್ರಮಕ್ಕೆ ಭಾಗವಹಿಸಲು ಮುಖ್ಯಮಂತ್ರಿಗಳು ಬಂದಾಗ ಜಿಲ್ಲಾಡಳಿತದ ವಿರುದ್ಧ ದೂರು ಸಲ್ಲಿಸಲು ಮುಂದಾದಾಗ ದಲಿತ ಸಂಘಟನೆಗಳ ಮುಖಂಡರುಗಳಾದ ಶ್ರೀನಿವಾಸ್ ಅಣ್ಣಯ್ಯ, ಹೊನ್ನೇಶ್, ಯಲಗುಡಿಗೆ ಹೊನ್ನಪ್ಪ, ರಮೇಶ್, ಅಂಗಡಿ ಚಂದ್ರು, ಜಗದೀಶ್, ಹುಣಸೇಮಕ್ಕಿ ಲಕ್ಷ್ಮಣ್ ಇತರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: 75ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ ಕುಶಲಕರ್ಮಿಗಳಿಗಾಗಿ ಸಾಲ ಸಹಾಯಧನ (ಸಬ್ಸಿಡಿ) ಯೋಜನೆಯಲ್ಲಿ ಸೌಲಭ್ಯ ಪಡೆಯಲು ಬೆಳಗಾವಿ ಜಿಲ್ಲೆಯ ವಿವಿಧ ವರ್ಗಗಳ ಕುಶಲಕರ್ಮಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಹಾಕಲು ಬಯಸುವ ಅಭ್ಯರ್ಥಿಗಳು ವಾಣಿಜ್ಯ ಬ್ಯಾಂಕ್ ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಗಳಿಂದ ಮಂಜೂರಾದ ರೂ 50 ಸಾವಿರವರೆಗೆ ಸಾಲದ ಮೇಲೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಶೇ 30% ರಷ್ಟು ಗರಿಷ್ಟ 15 ಸಾವಿರದ ವರೆಗೆ ಸಹಾಯಧನ ನೀಡಲಾಗುವುದು. ಕುಶಲಕರ್ಮಿಗಳು ಕನಿಷ್ಠ 18 ವರ್ಷ ತುಂಬಿರಬೇಕು. ಕುಶಲವೃತ್ತಿಗಾಗಿ ಬ್ಯಾಂಕಿನಿಂದ ಪಡೆದ ಸಾಲಕ್ಕೆ ಒಬ್ಬರಿಗೆ ಒಂದು ಬಾರಿ ಮಾತ್ರ ಸಹಾಯಧನ ನೀಡಲಾಗುವುದು. ಕುಶಲಕರ್ಮಿಗಳು ರಾಜ್ಯ ಕುಶಲಕರ್ಮಿ ಅಭಿವೃದ್ಧಿ ನಿಗಮ/ ಅಭಿವೃದ್ಧಿ ಆಯುಕ್ತರು (ಕರಕುಶಲ) ಕಚೇರಿಯಲ್ಲಿ ನೋಂದಣಿ ಆಗಿರಬೇಕು. ಅಥವಾ ಕೈಗಾರಿಕಾ ವಿಸ್ತರಣಾಧಿಕಾರಿಗಳು, ಜಿಲ್ಲಾ ಕೈಗಾರಿಕಾ ಕೇಂದ್ರ ಅಥವಾ ಸಂಬಂಧಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರ ( ಪಿಡಿಓ ) ರವರಿಂದ ಕರಕುಶಲರೆಂದು ದೃಡೀಕರಣ…