Author: admin

ಮಾಜಿ ಮುಖ್ಯಮಂತ್ರಿ ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ಮುಂದಿನ ವಾರ ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ.ತಾವು ಬಿಜೆಪಿ ಸೇರುವುದರ ಜೊತೆಗೆ ಅಮರಿಂದರ್ ಸಿಂಗ್ ತಾವು ಹೊಸದಾಗಿ ರಚಿಸಿದ್ದ ಪಂಜಾಬ್ ಲೋಕ ಕಾಂಗ್ರೆಸ್ (PLC) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ. ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗಾಗಿ ಲಂಡನ್‌ಗೆ ತೆರಳಿದ್ದ ಪಂಜಾಬ್ ಮಾಜಿ ಸಿಎಂ, ಕ್ಯಾಪ್ಟನ್ ಅಮರಿಂದರ್ ಸಿಂಗ್ (80) ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.ಮಾಜಿ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಕಳೆದ ವರ್ಷ ನವೆಂಬರ್ ಆರಂಭದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ರಾಜೀನಾಮೆ ನೀಡಿ ಒಂದೂವರೆ ತಿಂಗಳ ನಂತರ ಕಾಂಗ್ರೆಸ್ ನಾಯಕತ್ವವು ಚರಂಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಆಗಿ ನೇಮಿಸಿತು. ಆಗ ಪಂಜಾಬ್ ರಾಜ್ಯದ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಆಗಿದ್ದರು. ಕಾಂಗ್ರೆಸ್ ತೊರೆದ ನಂತರ, ಫೆಬ್ರವರಿ 20 ರ ಪಂಜಾಬ್ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಅಮರಿಂದರ್ PLC…

Read More

ಬೈಲಹೊಂಗಲ: ಸತತ ಪರಿಶ್ರಮ ಹಾಗೂ ದೃಢಸಂಕಲ್ಪದಿಂದ ಅಂದುಕೊಂಡದ್ದನ್ನು ವಿದ್ಯಾರ್ಥಿ ಜೀವನದಲ್ಲಿ ಸಾಧಿಸಬಹುದು ಎಂದು ನ್ಯಾ.ಎಫ್.ಎಸ್.ಸಿದ್ದನಗೌಡರ ಹೇಳಿದರು. ಸಮೀಪದ ಸುಕ್ಷೇತ್ರ ಇಂಚಲಶಿವಯೋಗಿಶ್ವರ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಾವಿದ್ಯಾಲಯ ಅಂತಿಮ ವರ್ಷದ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಹಾಗೂ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿ, ಜೀವನದಲ್ಲಿ ತುಂಬಾ ಕಷ್ಟಪಟ್ಟು ಮೇಲೆರಿದವರಿದ್ದಾರೆ. ಅಂಥವರ ಜೀವನವೇ ವಿದ್ಯಾರ್ಥಿಗಳಿಗೆ ಒಂದು ಸ್ಪೂರ್ತಿಧಾಯಕ ನಿದರ್ಶನ. ವಿದ್ಯಾರ್ಥಿಗಳು ಜೀವನದಲ್ಲಿ ಇಟ್ಟುಕೊಂಡ ಗುರಿಸಾಧನೆಗೆ ದಿನ ರಾತ್ರಿ ಎನ್ನದೆ ದೃಷ್ಟಿ ಎಲ್ಲವನ್ನು ಗುರಿಯಮೇಲಿರಿಸಿ ಇನ್ನೊಂದು ವಿಚಾರದ ಬಗ್ಗೆ ಕನಸ್ಸಿನಲ್ಲೂ ಯೋಚಿಸದೆ ಅಂದುಕೊಂಡ ಗುರಿ ಸಾಧನೆಯ ಹಾದಿಯಲ್ಲಿ ದೇಹದ ಕಷ್ಟುಗಳನ್ನು ಮರೆಯುತಾ ಸತತ ಪರಿಶ್ರಮದಿಂದ ಅಂದುಕೊಂಡ ಎಂತಹ ದೊಡ್ಡದಾದ ಗುರಿಯನ್ನು ಮುಟ್ಟಬಹುದು ಎಂದರು. ಇಂದಿನ ಶಿಕ್ಷಣ ಕಲಿತ ಪ್ರತಿಯೊಬ್ಬ ವಿದ್ಯಾರ್ಥಿಗಳು ನೌಕರಿಗಾಗಿ ಶಿಕ್ಷಣ, ಹೊಟ್ಟೆಗಾಗಿ ನೌಕರಿ ಎನ್ನದೆ ಉನ್ನತ ಶಿಕ್ಷಣ ಪಡೆಯುವತ್ತ ವಿದ್ಯಾರ್ಥಿಗಳ ಗಮನ ಇರಬೇಕು. ಜ್ಞಾನ ಪಡೆದ ವಿದ್ಯಾರ್ಥಿಗಳು ಸ್ವತಃ ತಾವೇ ತಮ್ಮ ಜೀವನದ ಶಿಲ್ಪಿಗಳಾಗಬೇಕು. ಪ್ರಪಂಚದಲ್ಲಿ ಸೋಲಿನಿಂದ…

Read More

ಬೆಂಗಳೂರು, ಸೆಪ್ಟೆಂಬರ್ 17: ಬೆಂಗಳೂರು ನಗರದಲ್ಲಿ ಸ್ಥಗಿತ ಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿ ಗೊಳಿಸುವ ಯಾವುದೇ ಪ್ರಸ್ತಾವನೆ, ಸದ್ಯಕ್ಕೆ, ಸರಕಾರದ ಮುಂದಿಲ್ಲ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ, ಜಾರಿಗೊಳಿಸುವ ಬಗ್ಗೆ, ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು, ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನ ವಾಗಿಲ್ಲ, ಸಾರ್ವಜನಿಕರಿಂದ, ಟೋಯಿಂಗ್ ವ್ಯವಸ್ಥೆ ಬಗ್ಗೆ ಇದ್ದ ಜನಾಕ್ರೋಶ ಹಾಗೂ ಕಿರುಕುಳಗಳ ಬಗ್ಗೆ ಬಂದ ದೂರುಗಳ ಇರುವ ಹಿನ್ನೆಲೆಯಲ್ಲಿ, ಸ್ಥಗಿತಗೊಳಿ ಸಲಾಗಿತ್ತು ಎಂದು ನೆನಪಿಸಿದ ಸಚಿವರು, ಹಳೆಯ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸಲಾಗುವುದಿಲ್ಲ ಎಂದು, ತಿಳಿಸಿದ್ದಾರೆ. ನಗರ ಪೊಲೀಸ್‌ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದರುಹೈಕೋರ್ಟ್ ಟೋಯಿಂಗ್ ಬಗ್ಗೆ ಪರಿಶೀಲನೆ ಕಾಲಾವಕಾಶ ನೀಡಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಟೋಯಿಂಗ್…

Read More

ದೇವನಹಳ್ಳಿ, ಸೆಪ್ಟೆಬಂರ್ 17: ಪ್ರೀತಿಸಿದ ಯುವತಿ ಕೈಕೊಟ್ಟು ಮತ್ತೊಬ್ಬನ್ನು ವಿವಾಹವಾಗಿದ್ದಕ್ಕೆ ಮನನೊಂದಿದ್ದ ಪಾಗಲ್ ಪ್ರೇಮಿಯೊಬ್ಬ ಹಳೇಯ ಪ್ರೇಯಸಿಗೆ 20ಕ್ಕೂ ಹೆಚ್ಚು ಸಲ ಚಾಕುವಿನಿಂದ ಇರಿದು ಕೊಂದಿದ್ದಾನೆ. ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಪ್ರೀತಿಸಿದಾಗಿ ನವವಧುವಾಗಿ 15 ದಿನಗಳಷ್ಟೇ ಕಳೆದಿತ್ತು. ಪ್ರೀತಿಸಿದ್ದ ಹುಡುಗ ತನ್ನ ಪ್ರೇಯಸಿ ಕೈಕೊಟ್ಟು ಮತ್ತೊಬ್ಬನ ಪಲ್ಲಂಗದಲ್ಲಿ ಪವಣಿಸುತ್ತಿರುವುದನ್ನು ಸಹಿಸದೇ ಪಾಗಲ್ ಆಗಿದ್ದ. ಪತಿಯ ಮನೆಯಿಂದ ತವರು ಮನೆಗೆ ಬಂದಿದ್ದ ಪ್ರೇಯಸಿಯ ವಿಚಾರ ಅದು ಹೇಗೋ ಪಾಗಲ್ ಪ್ರೇಮಿಗೆ ತಿಳಿದಿದೆ. ಪ್ರೇಯಸಿಯನ್ನು ಮಾತನಾಡಿಸುವ ಸೋಗಿನಲ್ಲಿ ಬಂದು ಕೊಟ್ಟಿಗೆಯಲ್ಲಿ 20ಕ್ಕೂ ಹೆಚ್ಚು ಸಲ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ. ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು. ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ 23 ವರ್ಷದ ಸೌಮ್ಯ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ, ಚಾಕುವಿನಿಂದ ಇರಿದುಪಾಗಲ್ ಪ್ರೇಮಿ ತಾನೂ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪಾಗಲ್‌ ಪ್ರೇಮಿಯನ್ನು ಬಂಧಿಸಲು ಹೋದ ಪೊಲೀಸರೇ ಆರೋಪಿ ಸುಬ್ರಮಣ್ಯನನ್ನು…

Read More

ಯಡಿಯೂರಪ್ಪ ಅವರ ವಿರುದ್ಧ ಈ ಹಿಂದೆ ಇಂತಹ ಹಲವು ಕೇಸ್​ಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಈ ಕೇಸ್ ಕೂಡಾ ವಿಫಲವಾಗಲಿದೆ ಎಂದು ಹೇಳಿದರು. ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 2022 ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಬಿಡಿಎ ವಸತಿ ಯೋಜನೆ ಅವ್ಯವಹಾರ ವಿಷಯವಾಗಿ ಮಾಜಿ ಮುಖ್ಯಮಂತ್ರಿ ಯಡಿಯುರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವಾಗ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ ಲೋಕಾಯುಕ್ತದಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್​ ದಾಖಲಾಗಿದೆ. ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಇದು ಕೂಡಾ ಒಂದು. ಯಡಿಯೂರಪ್ಪ ಇದರಲ್ಲಿಯೂ ಆರೋಪ ಮುಕ್ತರಾಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಂಪುಟ ವಿಸ್ತರಣೆ ವಿಷಯವಾಗಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಸಿನಿಮಾ ಸೆಟ್‌ನಲ್ಲಿ ಆರೋಗ್ಯಕರ ವಾತಾವರಣವೇ ಇರಲಿಲ್ಲ ಎಂದು ಸ್ಯಾಂಡಲ್‌ವುಡ್ ನಟಿ ಆಶಿತಾ ಮೀಟೂ ಆರೋಪ ಮಾಡಿದ್ದಾರೆ. ‘ಸಿನಿಮಾಗಳಲ್ಲಿ ನಟನೆಗೆ ಅವಕಾಶ ನೀಡಲು ನೀವು ಇದನ್ನು ಮಾಡಿದರೆ ಮಾತ್ರ ಅವಕಾಶ ಕೊಡ್ತೀವಿ. ಇದನ್ನು ಮಾಡಿದ್ರೆ ಮಾತ್ರ ಎಕ್ಸ್ಟ್ರಾ ಅಮೌಂಟ್ ಕೊಡ್ತೀವಿ ಅಂತ ಹೇಳ್ತಾಯಿದ್ದರು’ ಎಂದು ಆಶಿತಾ ಹೇಳಿಕೊಂಡಿದ್ದಾರೆ. ಖಾಸಗಿ ಸಂದರ್ಶನದಲ್ಲಿ ನಿರ್ದೇಶ ರಘುರಾಮ್ ಅವರೊಂದಿಗೆ ಮಾತನಾಡುವಾಗ ನಟಿ ಆಶಿತಾ ಅವರು ಗಂಭೀರ ಆರೋಪ ಮಾಡಿದ್ದಾರೆ. ನಿರ್ದೇಶ ರಘುರಾಮ್ ಅಶಿತಾ ಸಂದರ್ಶನದ ವೇಳೆ ಸಿನಿಮಾದಿಂದ ದೂರ ಉಳಿಯಲು ಕಾರಣ ಕೇಳಿದ ಸಂದರ್ಭದಲ್ಲಿ ಅಶಿತಾ ಮೀಟೂ ಆರೋಪ ಮಾಡಿದ್ದಾರೆ. ಅಶಿತಾ ತಮ್ಮ ಸಿನಿ ಜರ್ನಿಯನ್ನು ಮೆಲುಕು ಹಾಕುವಾಗ ಹೇಳಿದ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಸ್ಯಾಂಡಲ್‌ವುಡ್ ನಟಿ ಆಶಿತಾ ದೊಡ್ಡ ಆರೋಪವನ್ನು ಮಾಡಿದ್ದಾರೆ. ತಾವು ಸಿನಿಮಾ ಇಂಡಸ್ಟ್ರಿಯಿಂದ ದೂರವಾಗಲು ಕಾರಣವನ್ನು ನೀಡಿದ್ದಾರೆ. ಸ್ಯಾಂಟಲ್‌ವುಡ್‌ನಲ್ಲಿ ಇನ್ನೂ ಕೂಡ ಸುರಕ್ಷಿತತೆ ಇಲ್ಲ. ಸಾಕಷ್ಟು ಸೆಟ್‌ನಲ್ಲಿ ಆರೋಗ್ಯಕರ ವಾತಾವರಣ ಇರಲಿಲ್ಲ. ತಮಗೂ ತೊಂದರೆಯಾಗಿದೆ ಎಂದು ಹೇಳಿದ್ದಾರೆ. ಆದರೆ ಆಶಿತಾ ಯಾವ…

Read More

2022-23ನೇ ಸಾಲಿನ ಬೆಳಗಾವಿ ತಾಲೂಕ ಆದರ್ಶ ಶಿಕ್ಷಕಿಯಾಗಿ ಶ್ರೀಮತಿ ಹೇಮಾವತಿ ಐ.ಬಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಗಡಿ ಗ್ರಾಮ ಕನ್ನಡ ಶಾಲೆ ಶಿಕ್ಷಕಿ ಹೇಮಾವತಿ ಐ.ಬಿ ಅವರನ್ನು ಕನ್ನಡ ಮರಾಠಿ ಗಡಿಭಾಗದ ಕನ್ನಡ ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯ ಉಪಾಧ್ಯಯರಾದ ರೇಣುಕಾ. ಅಳ್ಳಾವರ ಹಾಗೂ ಶಿಕ್ಷಕ ವೃಂದ ಶಾಲೆಯ ವತಿಯಿಂದ ಸನ್ಮಾನಿಸಿದರು. ಈ ವೇಳೆ ಸುನಂದ ಹಿರೇಮಠ ಮಾತನಾಡಿ, ಶಾಲೆಯ ಮತ್ತು ನಮ್ಮ ಗ್ರಾಮದ ಗೌರವ ತರುವ ಸಂದರ್ಭವಾಗಿದೆ. ಅದಕ್ಕೆ ನಾನು ಶ್ರೀಮತಿ ಹೇಮಾವತಿ ಅವರಿಗೆ ನಾನು ಅಭಿನಂದರಿಸುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮರಾಠಿ ಮಾದರಿ ಶಾಲೆ ಎಲ್ಲೂರು ಎನ್. ಜಿ .ಎಚ್. ಎಮ್ . ಮುಖ್ಯ ಉಪಾಧ್ಯಯರಾದ ಮೋಹನ್ ಪಾಟೀಲ್ ಹಾಗೂ ಅವರ ಸಿಬ್ಬಂದಿ ವರ್ಗ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು, ಈ ಕಾರ್ಯಕ್ರಮದಲ್ಲಿ ಹಾಜರಿದ್ದು ಆದರ್ಶ ಶಿಕ್ಷಕರಿಗೆ ಗೌರವ ಸನ್ಮಾನ ಮಾಡಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಸಾಮಾಜಿಕ ಜಾಲತಾಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದವರ ವಿರುದ್ಧ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಓಬಿಸಿಗಳು, ಒಬ್ಬನೇ ಒಬ್ಬ ಬ್ರಾಹ್ಮಣ ಸಾಯಲಿಲ್ಲ. ಆದರೆ, ಈಗ ಮಂದಿರದ ಟ್ರಸ್ಟ್‌ನ ಪದಾಧಿಕಾರಿಗಳೆಲ್ಲ ಬ್ರಾಹ್ಮಣರು, ಒಬ್ಬನು ಓಬಿಸಿ ಇಲ್ಲ ಎಂದು ಕೀಡಿಗೇಡಿಗಳು ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಮಾಡಿದವರ ಕುರಿತು ಸೂಕ್ತ ತನಿಖೆ ನಡೆಸಬೇಕು ಅಂತಾ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ವಿಜಯ ತಳವಾರ ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಕೆಡಿಸಲು ಹುನ್ನಾರ ಮಾಡಲಾಗಿದೆ ಎಂದು ಅವರ ಅಭಿಮಾನಿಗಳು ಕಿಡಿಕಾರಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಸ್ಮಾರ್ಟ್ ವಾಚ್ ಬಳಸಿ ಕೆಪಿಟಿಸಿಎಲ್ ಪರೀಕ್ಷೆ ಬರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮಕ್ಕೆ ಬಳಸಲು ಎಲೆಕ್ಟ್ರಾನಿಕ್ ಡಿವೈಸ್‌ಗಳನ್ನು ಮಾರ್ಪಾಡು ಮಾಡಿ, ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದ ಮೂವರನ್ನು ಬೆಳಗಾವಿ ಜಿಲ್ಲಾ ಪೊಲೀಸರು ಶುಕ್ರವಾರ ಬಂಧಿಸಿದ್ದು, ಬಂಧಿತರ ಸಂಖ್ಯೆ 19ಕ್ಕೆ ಏರಿದೆ. ಅರಭಾಂವಿಯ ಅಕ್ಷಯ ದುಂದಪ್ಪ ಭಂಡಾರಿ (33), ಬಿರಣಗಡ್ಡಿಯ ಬಸವರಾಜ ರುದ್ರಪ್ಪ ದುಂದನಟ್ಟಿ (34) ಹಾಗೂ ರಾಜಾಪುರದ ಶ್ರೀಧರ ಲಕ್ಕಪ್ಪ ಕಟ್ಟಿಕಾರ ಬಂಧಿತರು. ಪ್ರಕರಣದ ಪ್ರಮುಖ ಆರೋಪಿ ಸಂಜು ಭಂಢಾರಿಗೆ ಅಕ್ಷಯ ಬಂಢಾರಿ ಬೆಂಗಳೂರಿನಿಂದ ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು ತಂದು ಕೊಟ್ಟಿದ್ದ ಎನ್ನಲಾಗಿದೆ. ಆರೋಪಿ ಸಂಜು ಭಂಡಾರಿಯಿಂದ ಪಡೆದು ಶ್ರೀಧರ ಕಟ್ಟಿಕಾರ ಅಭ್ಯರ್ಥಿಗಳಿಗೆ ವಿತರಣೆ ಮಾಡಿರುವುದು ಬೆಳಕಿಗೆ ಬಂದಿದೆ. ಇನ್ನು ಬಸವರಾಜ ದುಂದನಟ್ಟಿಯು ಶಿರಹಟ್ಟಿಯಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆಗಳಿಗೆ ಉತ್ತರ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದ್ದು, ಬಂಧಿತರಿಂದ ಮೂರು ಮೊಬೈಲ್​ಫೋನ್​, ಒಂದು ದ್ವಿಚಕ್ರವಾಹನ ಹಾಗೂ 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು 18 ಮಾಡಿಫೈ ಮಾಡಿರುವ ಇಲೆಕ್ಟ್ರಾನಿಕ್ ಡಿವೈಸ್‌ಗಳನ್ನು ಜಪ್ತಿ ಮಾಡಲಾಗಿದ್ದು,…

Read More

ಸರಗೂರು: ಮನುಗನಹಳ್ಳಿ ಪಂಚಾಯಿತಿ ಪಿಡಿಒ ಯೋಗೇಂದ್ರ ದರ್ಪದಿಂದ ಮೆರೆಯುತ್ತಿದ್ದು, ಹಾಡಹಗಲೇ ಸಾರ್ವಜನಿಕರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರನ್ನು ಗದರಿಸಿ ನನಗೆ ಪೆಟ್ರೋಲ್  ಗೆ ಹಣ ಕೊಡಿ,  ಇಲ್ಲವಾದ್ರೆ ನಿಮ್ಮ ಕೆಲಸ ಮಾಡುವುದಿಲ್ಲ ಎಂದು ಜನರನ್ನು ಗದರಿಸುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇ ಸ್ವತ್ತು ಕೊಡಲು ಪಿಡಿಒ ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ. ಹಾಡು ಹಗಲೇ ಈ ರೀತಿಯಲ್ಲಿ ಲಂಚ ದಂಧೆ ನಡೆಯುತ್ತಿದ್ದರೂ ಶಾಸಕ  ಅನಿಲ್ ಚಿಕ್ಕಮಾದು ಅವರು ಕ್ರಮಕೈಗೊಳ್ಳಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲದ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಬಿಲ್ ಮಾಡಿ ಪಿಡಿಒ ಹಣ ಲೂಟಿ ಮಾಡಿದ್ದಾರೆ. ಪಿಡಿಒ ಯೋಗೇಂದ್ರ ಲಂಚ ಸ್ವೀಕರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರೂ ಮೇಲಾಧಿಕಾರಿಗಳು ಅವರ ವಿರುದ್ಧ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಓ ಯೋಗೇಂದ್ರ ವರ್ತನೆಯಿಂದ ಬೇಸತ್ತಿರುವ ಗ್ರಾಮಸ್ಥರು  ಪಂಚಾಯತ್ ಗೆ ಇವರಿಂದ ಯಾವಾಗ ಮುಕ್ತಿ ಸಿಗುತ್ತದೆ ಎಂದು ಕಾಯುವಂತಾಗಿದೆ.…

Read More