Author: admin

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಮಹಾರಾಷ್ಟ್ರದ ಗಡಿಯಲ್ಲಿ ಶುಕ್ರವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಪುಣೆಯಿಂದ ಅಥಣಿಗೆ ಸಂಚರಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜು ಹಾಗೂ ಎರಡು ಕಿಟಕಿ ಒಡೆದಿವೆ. ಬಸ್ ಸಂಚರಿಸುವಾಗ ರಸ್ತೆಗೆ ಅಡ್ಡಬಂದ ಕಿಡಿಗೇಡಿಗಳು ಕಲ್ಲು ತೂರಿ ಪರಾರಿಯಾಗಿದ್ದಾರೆ. ಬಸ್ಸಿನ ಚಾಲಕ ಕುಳಿತಿದ್ದ ಭಾಗದ ಗಾಜು ಒಡೆದು ಹೋದರೂ ಚಾಲಕ ವಾಹನ ನಿಲ್ಲಿಸದೇ ಸುರಕ್ಷಿತವಾಗಿ ಗಡಿ ದಾಟಿಸಿದ್ದಾರೆ. ಮೀರಜ್ ಮಾರ್ಗವಾಗಿ ಸಂಚರಿಸುವ ಕರ್ನಾಟಕದ ಎಲ್ಲ ಬಸ್ ಸಂಚಾರವನ್ನು ಶನಿವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಾಗವಾಡ ಮಾರ್ಗವಾಗಿ ಪ್ರತಿ ದಿನ ಸಾವಿರಾರು ಪ್ರಯಾಣಿಕರು ಮಹಾರಾಷ್ಟ್ರಕ್ಕೆ ತೆರಳುತ್ತಾರೆ. ಕಿಡಿಗೇಡಿಗಳು ಇದೇ ಬಸ್ಸುಗಳನ್ನು ಗರಿಯಾಗಿಸಿ ಕಲ್ಲು ತೂರಿದ್ದಾರೆ. ರಾಜ್ಯದ ಬಸ್ಸುಗಳ ಮೇಲೆ ಮಹಾರಾಷ್ಟ್ರದಲ್ಲಿ ದಾಳಿ ಮುಂದುವರಿದ ಕಾರಣ ಈ ಮಾರ್ಗದ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಲಂಚ ತೆಗೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಪೊಲೀಸ್‌ ಬಲೆಗೆ ಬಿದ್ದಿರುವ ಚನ್ನಮ್ಮನ ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಹಾಲಗಿ ಹಾಗೂ ಗುಮಾಸ್ತ ಜಿ.ಪ್ರಸನ್ನ ಅವರನ್ನು ಲೋಕಾಯುಕ್ತ ಪೊಲೀಸರು ಹಿಂಡಲಗಾ ಜೈಲಿಗೆ ಅಟ್ಟಿದ್ದಾರೆ. ಪೊಲೀಸ್ ವಾಹನದಲ್ಲಿ ಜೈಲಿಗೆ ಬಂದ ಇಬ್ಬರೂ ಆರೋಪಿಗಳು ಮಾಧ್ಯಮದವರನ್ನು ಕಂಡ ತಕ್ಷಣ ತಮ್ಮ ಬ್ಯಾಗುಗಳನ್ನು ಮುಖಕ್ಕೆ ಮುಚ್ಚಿಕೊಂಡು ಒಳಗೆ ಹೋಗಿದ್ದಾರೆ. ಖೋದಾನಪುರ ರೈತ ರಾಜೇಂದ್ರ ಇನಾಮದಾರ ಅವರ ಜಮೀನು ಖಾತೆ ಮಾಡಲು ಆರೋಪಿಗಳು 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಶುಕ್ರವಾರ ರಾತ್ರಿ 2 ಲಕ್ಷ ರೂ. ಲಂಚ ತೆಗೆದುಕೊಳ್ಳುವ ವೇಳೆ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಪೊಲೀಸರು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಇಬ್ಬರೂ ಆರೋಪಿಗಳನ್ನು ಸೋಮವಾರರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ಮಂಗಳೂರಿನ ನಂತೂರಿನಲ್ಲಿ ಹಿಂದೂ ಯುವತಿಯ ಜೊತೆಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಕಾರ್ಕಳ ತಾಲೂಕಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಎಂದು ಗುರುತಿಸಲಾಗಿದೆ. ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ರಶೀಮ್‌ ಯುವತಿ ಜೊತೆ ಪ್ರಯಾಣಿಸುತ್ತಿದ್ದರು.ಬಸ್ ನಂತೂರು ಜಂಕ್ಷನ್‌ತಲುಪಿದಾಗ ನಾಲ್ಕೈದು ಯುವಕರು ಬಸ್ಸಿನೊಳಗೆ ನುಗ್ಗಿ ಏಕಾಏಕಿಯಾಗಿ ನಿಂದಿಸಿ ಬಸ್‌ನಿಂದ ಕೆಳಗೆ ಇಳಿಸಿ ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿದ್ದಾರೆ. ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ತಿಳಿಸಿದ್ದಾರೆ. ಎಡಿಜಿಪಿ (ಕಾನೂನು ಸುವ್ಯವಸ್ಥೆ) ಅಲೋಕ್‌ಕುಮಾರ್‌, ಈ ಘಟನೆಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಟಿಕೆಟ್ ಬುಕಿಂಗ್ ಆ್ಯಪ್ ಟ್ರೈನ್​ಮ್ಯಾನ್ ಮೂಲಕ ಕಾಯ್ದಿರಿಸಿದ ರೈಲು ಟಿಕೆಟ್​ ವೇಟಿಂಗ್​ ಲಿಸ್ಟ್​ನಲ್ಲಿದ್ದು ಕೊನೆಗೂ ಕನ್​ಫರ್ಮ್ ಆಗದಿದ್ದರೆ ಅಂಥ ಪ್ರಯಾಣಿಕರು ಉಚಿತವಾಗಿ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ದೂರದ ರೈಲು ಪ್ರಯಾಣಕ್ಕೆ ಕಾಯ್ದಿರಿಸಿದ ಟಿಕೆಟ್ ವೇಟಿಂಗ್ ಲಿಸ್ಟ್​ನಲ್ಲಿದ್ದು, ಕೊನೆಯ ಕ್ಷಣದಲ್ಲಿ ರದ್ದಾದರೆ ಉಚಿತವಾಗಿ ವಿಮಾನ ಪ್ರಯಾಣದ ಟಿಕೆಟ್ ಸಿಗಲಿದೆ. ಟ್ರಿಪ್ ಅಶ್ಯೂರೆನ್ಸ್ ಅಥವಾ ಪ್ರಯಾಣದ ಖಾತರಿ ಎಂಬ ಹೊಸ ಆಯ್ಕೆಯನ್ನು ಟ್ರೈನ್​ಮ್ಯಾನ್ ಆ್ಯಪ್ ಗ್ರಾಹಕರಿಗೆ ಒದಗಿಸುತ್ತಿದೆ. ವೈಟಿಂಗ್​​ಲಿಸ್ಟ್​ನಲ್ಲಿರುವ ಪ್ರಯಾಣಿಕರಿಗೆ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ಬಗ್ಗೆ ಈ ಆಯ್ಕೆಯ ಮೂಲಕ ಆ್ಯಪ್ ಖಾತರಿ ನೀಡುತ್ತದೆ. ಕಾಯ್ದಿರಿಸಿದ ಟಿಕೆಟ್​ನ ಸ್ಥಿತಿಗತಿ ಏನಿದೆ ಎಂಬುದನ್ನು ಪರಿಶೀಲಿಸುವ ಆಯ್ಕೆಯೂ ಈ ಆ್ಯಪ್​ನಲ್ಲಿದೆ. ವೇಟಿಂಗ್ ಲಿಸ್ಟ್​ನಲ್ಲಿರುವ ಟಿಕೆಟ್ ಸಿಗುವ ಸಾಧ್ಯತೆ ಎಷ್ಟರಮಟ್ಟಿಗಿದೆ ಎಂಬುದನ್ನು ತೋರಿಸುವ ‘ಪ್ರೆಡಿಕ್ಷನ್ ಮೀಟರ್’ ಆ್ಯಪ್​ನಲ್ಲಿದೆ. ಚಾರ್ಟ್ ಸಿದ್ಧಪಡಿಸಿದ ಬಳಿಕವೂ ಟಿಕೆಟ್ ಕನ್​ಫರ್ಮ್ ಆಗಿಲ್ಲವೆಂದಾದರೆ ಆಗ ‘ಟ್ರಿಪ್ ಅಶ್ಯೂರೆನ್ಸ್’ ಆಯ್ಕೆಯು ಪ್ರಯಾಣಿಕರ ನೆರವಿಗೆ ಬರುತ್ತದೆ. ಕೊನೆಯ ಕ್ಷಣದ ಪರ್ಯಾಯ ಪ್ರಯಾಣದ ಆಯ್ಕೆಯನ್ನು ಪ್ರಯಾಣಿಕರಿಗೆ ಅದು ನೀಡುತ್ತದೆ. ಪ್ರಯಾಣಿಕರ…

Read More

ನೋಟು ರದ್ದತಿ ನೀತಿ ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಒಕ್ಕೂಟ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಟಾರ್ನಿ ಜನರಲ್ (ಎಜಿ) ಆರ್ ವೆಂಕಟರಮಣಿ, ಅದೊಂದು ವಿಫಲ ಯೋಜನೆ ಎಂದು ಒಪ್ಪಿಕೊಂಡಿದ್ದು, ವಿಫಲವಾದ ಮಾತ್ರಕ್ಕೆ ಅವರ ಉದ್ದೇಶ ದೋಷಪೂರಿತ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್, ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ. ರಾಮಸುಬ್ರಮಣ್ಯಂ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠವು ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ. ಸುಪ್ರೀಂ ಕೋರ್ಟ್ ಅಕ್ಟೋಬರ್ 12 ರಂದು ಪ್ರಾಥಮಿಕ ವಿಚಾರಣೆಯನ್ನು ನಡೆಸಿತ್ತು. ಹಿರಿಯ ವಕೀಲ, ನಾಲ್ಕು ಬಾರಿ ಹಣಕಾಸು ಸಚಿವರಾಗಿದ್ದ ಪಿ. ಚಿದಂಬರಂ ನೋಟು ರದ್ದತಿ ನೀತಿಯು ಅಸಾಂವಿಧಾನಿಕ ಎಂದು ವಾದಿಸಿದ್ದರು. ಬ್ಯಾಂಕ್ ಆಫ್ ಇಂಡಿಯಾ ಕಾಯಿದೆಯ ಮೀಸಲು ಸೆಕ್ಷನ್ 26 (2) ರ ವ್ಯಾಪ್ತಿಯನ್ನು ಪ್ರಶ್ನಿಸಿದ್ದರು. 500 ಮತ್ತು 1,000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ,…

Read More

ಬೆಳಗಾವಿ : ಕರ್ನಾಟಕ – ಮಹಾರಾಷ್ಟ್ರ ಗಡಿಭಾಗದಲ್ಲಿರುವ ಕಿತವಾಡ ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಬೆಳಗಾವಿ ಮೂಲದ ನಾಲ್ವರು ಯುವತಿಯರು ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಬೆಳಗಾವಿಯಿಂದ 40 ಯುವತಿಯರು ಟ್ರಿಪ್‌ಗೆ ತೆರಳಿದ್ದರು. ಅನಗೋಳದ ಕುದ್‌ಶೀಯಾ ಹಾಸಂ ಪಟೇಲ್ (20), ಉಜ್ವಲ್ ನಗರ ಆಸೀಯಾ ಮುಜಾವರ್ (17), ಝಟ್‌ಪಟ್ ಕಾಲೋನಿಯ ರುಕ್ಕಶಾರ್ ಭಿಸ್ತಿ (20) ಮತ್ತು ತಸ್ಮಿಯಾ (20) ಮೃತಪಟ್ಟ ಯುವತಿಯರಾಗಿದ್ದಾರೆ. ಕಿತವಾಡ ಫಾಲ್ಸ್‌ಗೆ ಬೆಳಗಾವಿಯಿಂದ 40 ಯುವತಿಯರು ಟ್ರಿಪ್‌ಗೆ ತೆರಳಿದ್ದರು. ಸೆಲ್ಫಿ ತಗೆದುಕೊಳ್ಳುವ ವೇಳೆ ಯುವತಿಯರು ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಬಿಮ್ಸ್ ಶವಗಳನ್ನು ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರಿಗೆ ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನದ ಸಾಧನೆ ಗುರುತಿಸಿ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ. ನೂರಾರು ಸಿನಿಮಾಗಳಲ್ಲಿ ನಟನೆ, 40ಕ್ಕೂ ಹೆಚ್ಚು ಸಿನಿಮಾ ನಿರ್ಮಾಣ ಮಾಡಿ ಸುಮಾರು 50ಕ್ಕೂ ಹೆಚ್ಚು ವರ್ಷಗಳಿಂದ ಚಿತ್ರರಂಗದಲ್ಲಿ ಸಾಧನೆ ಮಾಡಿರುವ ದ್ವಾರಕೀಶ್ ಅವರಿಗೆ ಬೆಂಗಳೂರು ವಿವಿ 57ನೇ ಘಟಿಕೋತ್ಸವದಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಡಿಸೆಂಬರ್ 5ರಂದು ಬೆಂಗಳೂರಿನ ಜ್ಞಾನಭಾರತಿ ಅಡಿಟೋರಿಯಂನಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ದ್ವಾರಕೀಶ್ ಅಲ್ಲದೇ ಕಾನೂನು ಅಟಾರ್ನಿ ಹಾಗೂ ನ್ಯಾಯ ಸಲಹೆಗಾರರು ವಿಭಾಗ ಅಮರನಾಥ ಗೌಡ, ವರ್ಣ ಚಿತ್ರಕಾರ ಡಾ.ಟಿ. ಅನಿಲ್ ಕುಮಾರ್ ಮುಂತಾದವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಾರ್ಗಶಿರ ಮಾಸ ಯಾವುದೇ ಪುಣ್ಯ ಮಾಸಗಳಲ್ಲಿ ಶಿವ ಮತ್ತು ವಿಷ್ಣುವಿನ ಆರಾಧನೆಯನ್ನು ಭಕ್ತಿಯಿಂದ ಮಾಡಿದರೆ ಸಕಲ ಪಾಪಗಳು ಪರಿಹಾರ ಆಗುವುದರೊಂದಿಗೆ ಸಾಕಷ್ಟು ಪುಣ್ಯವನ್ನು ಸಂಪಾದಿಸಬಹುದು. ಜೇಷ್ಟಾದೇವಿ ಒಂದು ದಿನ ಶ್ರೀ ಹರಿಯು ಅಳುತ್ತಿರುವ ಜೇಷ್ಟಾ ದೇವಿಯನ್ನು ಸಮಾಧಾನಪಡಿಸಿ, ಜೇಷ್ಟಾ ನೋಡು ಈ ಅರಳಿ ಮರದಲ್ಲಿ ನನ್ನ ಸನ್ನಿಧಿ ಇರುತ್ತದೆ. ಆದ್ದರಿಂದ ನೀನು ಈ ವೃಕ್ಷದ ಮೂಲದಲ್ಲಿ ನೆಲೆಸು. ನಿನ್ನನ್ನು ಪ್ರತಿ ವರ್ಷ ಯಾರು ಪೂಜಿಸುತ್ತಾರೋ, ಅವರಿಗೆ ಲಕ್ಷ್ಮಿ ಒಲಿಯುತ್ತಾಳೆ ಎಂದನು. ಹೀಗೆ ಶನಿವಾರ ಅರಳೀವೃಕ್ಷವನ್ನು ಯಾರು ಶ್ರದ್ಧಾ ಭಕ್ತಿಗಳಿಂದ ಪೂಜಿಸಿ ಪ್ರದಕ್ಷಿಣಾ ಹಾಕುತ್ತಾರೋ ಲಕ್ಷ್ಮಿ ಕಟಾಕ್ಷವಾಗುತ್ತದೆ ಎಂಬುದು ಭಗವಂತನ ಮಾತು. ಇಂಥ ಪುಣ್ಯಪ್ರದವಾದ ಕಥೆಗಳನ್ನು ಯಾರು ಹೇಳಿ ಕೇಳುತ್ತಾರೋ ಅವರು ಸಕಲ ಪಾಪಗಳನ್ನು ಕಳೆದುಕೊಂಡು ವಿಷ್ಣು ಸಾಯುವ್ಯ ಪದವಿಯನ್ನು ಪಡೆಯುವರು ಎಂಬುದು ಮಹಾಮಹಿಮರ ಅಭಿಪ್ರಾಯವಾಗಿದೆ. ಅಶ್ವತ್ಥಮರ ಅಶ್ವತ್ಥಮರದಲ್ಲಿ ಭಗವಂತನು ಹಯಗ್ರೀಯ ರೂಪದಿಂದ ವಿಶೇಷವಾಗಿ ಅಭಿವ್ಯಕ್ತನಾಗಿ ಈ ಮರವು ಉಳಿದೆಲ್ಲಾ ಮರಗಳಿಗಿಂತ ಹೆಚ್ಚು ಯೋಗ್ಯವೆಂದು ತೋರಿಸುತ್ತಾನೆ. ಜನಮನ್ನಣೆಗಳಿಸಿರುವ 22 ವರ್ಷಗಳಿಂದ ಸುದೀರ್ಘ ಅನುಭವ…

Read More

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಥಳಿಸಿ ಕೈ ಮುರಿದಿರುವ ಘಟನೆ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಅಮೃತ್ ಕೈಗೆ ಗಂಭೀರ ಗಾಯವಾಗಿದೆ. ಅಮೃತ್​ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಕಾರಣಕ್ಕೆ ಶಿಕ್ಷಕ ಸಿದ್ದರಾಜು ಸ್ಟೀಲ್ ಸ್ಕೇಲ್​​ನಿಂದ ಹೊಡೆದಿದ್ದಾನೆ. ಇದರಿಂದ ಅಮೃತ್​ ಕೈ ಕಟ್​ ಆಗಿದೆ. ಇದನ್ನು ಕಂಡ ಶಿಕ್ಷಕ ಸಿದ್ದರಾಜು, ಆತನ ಪೋಷಕರಿಗೆ ಕಟರ್​ನಿಂದ ಅಮೃತ್‌ ಕೈಕಟ್ ಮಾಡಿಕೊಂಡಿರುವುದಾಗಿ ಸುಳ್ಳು ಮಾಹಿತಿ ನೀಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ತಾಲೂಕು ಶಿಕ್ಷಣಾಧಿಕಾರಿ ಉದಯಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪ್ರತಿದಿನ ಕುಡಿದು ಬಂದು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬರು ಮಗನನ್ನೇ ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿಪೊಲೀಸ್ ಠಾಣೆ ವ್ಯಾಪ್ತಿ ದೇವಾಲಪುರದಲ್ಲಿ ಮುನಿಸ್ವಾಮಿ ಎಂಬವರು ಕಿರುಕುಳ ನೀಡುತ್ತಿದ್ದ ಮಗ ತ್ಯಾಗರಾಜ ಎಂಬವನನ್ನು ಕೊಲೆ ಮಾಡಿದ್ದಾರೆ. ತ್ಯಾಗರಾಜುಪ್ರತಿ ದಿನ ಕುಡಿದು ಬಂದು ತಂದೆ ಮುನಿಸ್ವಾಮಿ ಮತ್ತು ತಾಯಿ ಜತೆಗೆ ಜಗಳ ತೆಗೆಯುತ್ತಿದ್ದ. ಕುಡಿಯಲು ದುಡ್ಡು ಕೊಡದಿದ್ದರೆ ಹಲ್ಲೆ ಮಾಡುತ್ತಿದ್ದ. ಕೂಲಿ ಮಾಡಿ ಜೀವನ‌ ಸಾಗಿಸುತ್ತಿದ್ದ ಮುನಿಸ್ವಾಮಿ ದಂಪತಿ ಮಗನ‌ ಕಿರುಕುಳದಿಂದ ಬೇಸತ್ತು, ಮಗಳ ಮನೆ ಸೇರಿಕೊಂಡಿದ್ದರು. ಅಲ್ಲಿಗೂ ಬಂದು ತಂದೆ ಮೇಲೆಯೇ ಹಣಕ್ಕಾಗಿ ಹಲ್ಲೆಗೆ ಮುಂದಾಗಿದ್ದ. ಮಗನ ಕಿರುಕುಳದಿಂದ ಬೇಸರಗೊಂಡಿದ್ದ ತಂದೆ ಜಿಮ್ ನಲ್ಲಿ ಬಳಸುವ ಡಂಬಲ್ ನಿಂದ ತಲೆಗೆ ಚಚ್ಚಿ ಕೊಲೆ ಮಾಡಿದ್ದಾರೆ. ನಂತರ ಅನುಗೊಂಡನಹಳ್ಳಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿದ ಅಡಿಶನಲ್ ಎಸ್ಪಿ ಪುರುಷೋತ್ತಮ ಪರೀಶೀಲನೆ ನಡೆಸಿದ್ದಾರೆ. ಅನುಗೊಂಡನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More