Subscribe to Updates
Get the latest creative news from FooBar about art, design and business.
- ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
- ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
- ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್ ಆರ್ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
- ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ
- ರೈತರ ಮೇಲಿನ ಶೋಷಣೆಯನ್ನು ಖಂಡಿಸಿ ಮಾ.9 ಧರಣಿ ಸತ್ಯಾಗ್ರಹಕ್ಕೆ ಹಸಿರು ಸೇನೆ ಕರೆ
- ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
- ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
- ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
Author: admin
ಸುರಂಗ ಕೊರೆದ ದುಷ್ಕರ್ಮಿಗಳು ರೈಲ್ವೆ ಯಾರ್ಡ್ ಗೆ ದುರಸ್ತಿಗೆ ಬರುತ್ತಿದ್ದ ರೈಲ್ವೆ ಇಂಜಿನ್ ಬಿಡಿಭಾಗ ಕದ್ದಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬೆಗಸುರಯ್ ಜಿಲ್ಲೆಯ ರೈಲ್ವೆ ಯಾರ್ಡ್ ಗೆ ಸುರಂಗ ಕೊರೆದ ದುಷ್ಕರ್ಮಿಗಳು ಒಂದೊಂದೇ ಬಿಡಿ ಭಾಗಗಳಂತೆ ಇಡೀ ಡೀಸೆಲ್ ಇಂಜಿನ್ ಅನ್ನು ದೋಚಿದ್ದಾರೆ. ರೈಲ್ವೆ ಯಾರ್ಡ್ ಗೆ ಸುರಂಗ ಕೊರೆದ ದುಷ್ಕರ್ಮಿಗಳು ದುರಸ್ಥಿಗೆ ಬರುತ್ತಿದ್ದ ರೈಲ್ವೆ ಇಂಜಿನ್ ನ ಬಿಡಿಭಾಗಗಳನ್ನು ಹಂತ ಹಂತವಾಗಿ ಇಡೀ ರೈಲನ್ನು ದೋಚಿರುವುದು ತಡವಾಗಿ ಬೆಳಕಿಗೆ ಬಂದಿದೆ. ಗರ್ಹಾರ ಯಾರ್ಡ್ ನಲ್ಲಿ ಡೀಸೆಲ್ ಇಂಜಿನ್ ಅನ್ನು ಕದಿಯಲಾಗಿದೆ ಎಂದು ಬರನುಯಿ ರೈಲ್ವೆ ನಿಲ್ದಾಣಕ್ಕೆ ರೈಲ್ವೆ ಅಧಿಕಾರಿಗಳು ದೂರು ನೀಡಿದ್ದಾರೆ. ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಮುಜಾಫರ್ ಪುರ್ ಜಿಲ್ಲೆಯಿ ಪ್ರಭಾತ್ ನಗರದ ಸ್ಕ್ರ್ಯಾಪ್ ಗೋಡಾನ್ ನಲ್ಲಿ ರೈಲಿನ 13 ಬೋಗಿಗಳ ಬಿಡಿಭಾಗಗಳು ವಶಕ್ಕೆ ಪಡೆಯಲಾಗಿದೆ. ರೈಲಿಗೆ ಗಟ್ಟಿಯಾದ ಕಬ್ಬಿಣ ವಸ್ತುಗಳಿಂದ ತಯಾರಿಸಿದ ರೈಲಿನ ಇಂಜಿನ್ ಬಿಡಿಭಾಗಗಳು, ಚಕ್ರಗಳು ವಶಪಡಿಸಿಕೊಳ್ಳಗಿದೆ. ಈ ಗ್ಯಾಂಗ್ ರೈಲ್ವೆ…
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ)ಗೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರ ಶಾರೀಕ್ ಈಗಾಗಲೇ ಪೊಲೀಸರ ವಶದಲ್ಲಿದ್ದು, ತನಿಖೆಯಲ್ಲಿ ದೇವಸ್ಥಾನ, ಪೊಲೀಸರನ್ನು ಗುರಿಯಾಗಿಸಿ ದಾಳಿ ನಡೆಸುವುದು ಸೇರಿದಂತೆ ಹಲವಾರು ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತನಿಖೆಯನ್ನು ಎನ್ ಐಗೆ ಹಸ್ತಾಂತರಿಸಿದೆ. ಒಂದು ವೇಳೆ ಆಟೋದಲ್ಲಿ ಕುಕ್ಕರ್ ಬ್ಲಾಸ್ಟ್ ಆಗದೇ ಇದ್ದಿದ್ರೆ ಮಂಗಳೂರಿನ ಪ್ರಸಿದ್ಧ ದೇಗುಲಗಳು, ಬಸ್ ನಿಲ್ದಾಣ ಹಾಗೂ ಆರ್ಎಸ್ಎಸ್ ಕಚೇರಿ ಶಾರೀಕ್ನ ಟಾರ್ಗೆಟ್ ಆಗಿತ್ತು ಎನ್ನುವ ಆಘಾತಕಾರಿ ಅಂಶಗಳು ಪೊಲೀಸ್ ತನಿಖೆ ವೇಳೆ ಹೊರಬಂದಿವೆ. ಉಗ್ರ ಶಾರೀಕ್ ವಿರುದ್ಧ UAPA ಕಾಯ್ದೆ ಅನ್ವಯ ಕೇಸ್ ದಾಖಲು ಮಾಡಲಾಗಿದ್ದು, ಪ್ರಕರಣದ ತೀವ್ರತೆ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ NIAಗೆ ಕೇಸ್ ವರ್ಗಾವಣೆ ಮಾಡಲಾಗಿದ್ದು, ಇಂದು NIA ಅಧಿಕಾರಿಗಳು ಶಾರೀಕ್ ನ ತೀವ್ರ ವಿಚಾರಣೆ ಒಳಪಡಿಸಿದ್ದಾರೆ. ಮಂಗಳೂರಿನಲ್ಲಿ ಎನ್ ಐಎ ಘಟಕ ಸ್ಥಾಪನೆ? ಕಂಕನಾಡಿಯಲ್ಲಿ ಇತ್ತೀಚೆಗೆ…
ಹುಬ್ಬಳ್ಳಿ : ಬೈಕ್ ಸವಾರನಿಗೆ ಬರೋಬ್ಬರಿ 17, 500 ರೂಪಾಯಿ ದಂಡ ಬಿದ್ದಿದ್ದು, ದಂಡಕ್ಕೆ ಬೆಚ್ಚಿದ ಸವಾರ, ಬೈಕ್ನನ್ನು ಸಂಚಾರಿ ಪೊಲೀಸರಿಗೆ ಒಪ್ಪಿಸಿ ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 23 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಬೈಕ್ ಸವಾರನಿಗೆ 17,500 ಸಾವಿರ ದಂಡ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಉತ್ತರ ಸಂಚಾರ ಠಾಣೆ ಪೊಲೀಸರಿಂದ ಬೈಕ್ ಸವಾರನಿಗೆ ದಂಡ ಕಟ್ಟುವಂತೆ ಸೂಚಿಸಲಾಗಿದೆ. ಪದೇ ಪದೇ ಸಂಚಾರಿ ನಿಯಮ ಉಲ್ಲಂಘಿಸಿ, ಭಾರಿ ದಂಡ ಹಾಕಿಸಿಕೊಂಡ ವ್ಯಕ್ತಿಯನ್ನು ಹುಬ್ಬಳ್ಳಿಯ ಮಹ್ಮದ್ ರಫೀಕ್ ಗುಡಗೇರಿ ಎಂದು ಗುರುತಿಸಲಾಗಿದೆ. ಹಣ ಈಗಲೇ ಪಾವತಿಸಲು ಸಾಧ್ಯವಿಲ್ಲ ಎಂದು ಬೈಕ್ ಚಾವಿ ಕೊಟ್ಟು ರಫೀಕ್ ಹೊರಟು ಹೋಗಿದ್ದಾನೆ. ಸದ್ಯ ರಫೀಕ್ ಬೈಕ್ ನ್ನು ಸಂಚಾರಿ ಠಾಣೆಗೆ ತೆಗೆದುಕೊಂಡು ಹೋಗಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ : ಖಾತಾ ವರ್ಗಾವಣೆಗೆ 5 ಲಕ್ಷ ರೂ. ಹಣ ಬೇಡಿಕೆಯಿಟ್ಟಿದ್ದ ತಹಶಿಲ್ದಾರರ ಹಾಗೂ ಕಚೇರಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ತಡರಾತ್ರಿ ನಡೆದಿದೆ. ಜಿಲ್ಲೆಯ ಚನ್ನಮ್ಮ ಕಿತ್ತೂರು ತಹಶಿಲ್ದಾರ್ ಸೋಮಲಿಂಗಪ್ಪ ಹಾಲಗಿ ಹಾಗೂ ನೌಕರ ಪ್ರಸನ್ನ ಜಿ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ದೂರುದಾರ ರಾಜೇಂದ್ರ ಇನಾಂದಾರ ಅವರ ತಂದೆ ಹೆಸರಿನಲ್ಲಿದ್ದ 10 ಎಕರೆ ಭೂಮಿಯನ್ನು ರಾಜೇಂದ್ರ ಹೆಸರಿಗೆ ವರ್ಗಾಯಿಸಲು 5 ಲಕ್ಷ ರೂ ಹಣದ ಬೇಡಿಕೆಯಿಟ್ಟದ್ದರು. ಮೊದಲ ಹಂತದಲ್ಲಿ ಎರಡು ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಲಂಚದ ಹಣ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ನಡೆದಿದ್ದಂತ ಅಕ್ರಮ ಸಂಬಂಧ, ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕ್ ನ ಶಹರ ಠಾಣೆಯ ಪೊಲೀಸರು, ಮೂಡಲಗಿ ತಾಲೂಕಿನ ರಾಜಾಪುರ ನಿವಾಸಿಯಾಗಿರುವಂತ ಬಾಳೇಶ್ ಕಟ್ಟಿಕಾರ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಬಾಳೇಶ್ ಕಟ್ಟಿಕಾರ್ ಅವರು ಆಗಸ್ಟ್ 7, 2022ರಂದು ನಡೆದಿದ್ದಂತ ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ಅಕ್ರಮಕ್ಕಾಗಿ ಎಲೆಕ್ಟ್ರಾನಿಕ್ ಡಿವೈಸರ್ ಸಪ್ಲೈ ಮಾಡಿದ್ದ ಎಂಬುದಾಗಿ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಕಲಬುರಗಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಬಸ್ಗಳಿಗೆ ಮಸಿ ಬಳಿಯಲಾಗಿತ್ತು. ಇದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಬಸ್ಗಳಿಗೆ ಕಪ್ಪು ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿಯಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಬಸ್ ತಡೆದು ಮಸಿ ಬಳಿದಿದ್ದಾರೆ. ಬಸ್ ಮುಂಭಾಗದ ಗ್ಲಾಸ್ಗೆ ಬಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಧ್ವನಿ ಹಾಗೂ ಫೋಟೊವನ್ನು ಅವರ ಅನುಮತಿ ಇಲ್ಲದೇ ಯಾರೂ ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ತಮ್ಮ ವ್ಯಕ್ತಿತ್ವದ ಹಕ್ಕು ಕಾಪಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಅಮಿತಾಭ್ ಬಚ್ಚನ್ ಹೈಕೋರ್ಟ್ ಮೊರೆ ಹೋಗಿದ್ದರು. ಅಮಿತಾಭ್ ಅವರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಶುಕ್ರವಾರ ನೀಡಿದ ಮಧ್ಯಂತರ ಆದೇಶದಲ್ಲಿ ಅನುಮತಿ ಇಲ್ಲದೇ ಅವರ ಫೋಟೊ, ಧ್ವನಿ ಬಳಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಖ್ಯಾತ ವ್ಯಕ್ತಿಯ ವ್ಯಕ್ತಿತ್ವವನ್ನು ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಅದು ಕೂಡ ಆ ವ್ಯಕ್ತಿ ಸಾಕಷ್ಟು ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಅವರ ಫೋಟೊ ಹಾಗೂ ಧ್ವನಿ ಬಳಸುವುದು ಕಾನೂನು ಉಲ್ಲಂಘನೆ ಎಂದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ತಮಿಳುನಾಡಿನ ಗೊಬಿಚೆಟ್ಟಿಪಾಳ್ಯಂ ನಿವಾಸಿ ಜ್ಯೋತಿಷಿಯ ಮಾತುಕೇಳಿ ಹಾವಿನಿಂದ ಕಚ್ಚಿಸಿಕೊಂಡು ನಾಲಗೆ ಕಳೆದುಕೊಂಡಿದ್ದಾನೆ. ಈತನಿಗೆ ದಿನವೂ ಹಾವಿನ ಕನಸು ಬೀಳುತ್ತಿತ್ತಂತೆ. ಹಾವಿನಿಂದ ಕಚ್ಚಿಸಿಕೊಂಡಂತೆ ಕನಸು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಈತ ಪರಿಹಾರಕ್ಕಾಗಿ ಜ್ಯೋತಿಷಿಯೊಬ್ಬರ ಬಳಿ ಹೋಗಿದ್ದಾನೆ. ಜ್ಯೋತಿಷಿ ಹಾವಿನ ಪೂಜೆ ಮಾಡುವಂತೆ ಸಲಹೆ ನೀಡಿದ್ದಾನೆ. ಹಾವಿನ ಹುತ್ತ ಇರುವ ದೇಗುಲವನ್ನು ಪೂಜೆಗಾಗಿ ಸಲಹೆ ಮಾಡಿದ್ದಾನೆ. ಪೂಜೆಯ ನಂತರ ಹಾವಿಗೆ ತನ್ನ ನಾಲಿಗೆಯನ್ನು ತೋರಿಸುವಂತೆ ಸಲಹೆ ನೀಡಿದ್ದಾನೆ. ಜ್ಯೋತಿಷಿಯ ಸಲಹೆಯಂತೆ ನಾಲಗೆಯನ್ನು ಹಾವಿನ ಮುಂದೆ ಚಾಚಿ ನಿಂತಿದ್ದಾನೆ. ಸಿಟ್ಟಿಗೆದ್ದ ಹಾವು ನಾಲಗೆಯನ್ನು ಕಚ್ಚಿದೆ. ಜೊತೆಯಲ್ಲಿದ್ದ ಸಂಬಂಧಿ ಹಾಗೂ ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಜೀವ ಉಳಿಸುವ ಸಲುವಾಗಿ ವೈದ್ಯರು ಆತನ ನಾಲಗೆಯನ್ನು ಕತ್ತರಿಸಿದ್ದಾರೆ. ಈರೋಡ್ ಮನಿಯನ್ ಮೆಡಿಕಲ್ ಆಸ್ಪತ್ರೆಯ ಮುಖ್ಯಸ್ಥ, ಡಾಕ್ಟರ್ ಎಸ್. ಸೆಂಥಿಲ್ ಕುಮಾರನ್ ಮಾತನಾಡಿ, ನವೆಂಬರ್ 18 ರಂದು ಈ ವ್ಯಕ್ತಿಗೆ ಹಾವು ಕಚ್ಚಿದ ಕಾರಣ ಬಾಯಲ್ಲಿ ತೀವ್ರವಾಗಿ ರಕ್ತಸ್ರಾವವಾಗುತ್ತಿತ್ತು. ಹಾವಿನ ವಿಷದಿಂದಾಗಿ ಆತನ ನಾಲಗೆಯ ಅಂಗಾಂಶಕ್ಕೆ ಹಾನಿಯಾಗಿತ್ತು. ಜೀವ ಉಳಿಸುವ…
ಸೆಕ್ಸ್ ಮಾಡುವ ವೇಳೆ ಹೃದಯಾಘಾದಿಂದ ಉದ್ಯಮಿ ಮೃತಪಟ್ಟಿದ್ದು, ಕೊಲೆ ಪ್ರಕರಣದಲ್ಲಿ ಸಿಲುಕುವ ಭೀತಿಯಿಂದ ಮಹಿಳೆ ಉದ್ಯಮಿ ಶವವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. 67 ವರ್ಷದ ಬೆಂಗಳೂರಿನ ಉದ್ಯಮಿ ಬಾಲಸುಬ್ರಹ್ಮಣ್ಯನ್ ಶವ ಜೆಪಿ ನಗರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಆಪ್ತರ ಸಹಾಯದಿಂದ ಮಹಿಳೆ ಜೊತೆ ದೈಹಿಕ ಸಂಪರ್ಕ ಬೆಳೆಸುತ್ತಿದ್ದ ಉದ್ಯಮಿ ಬಾಲಸುಬ್ರಹ್ಮಣ್ಯನ್ ಸೆಕ್ಸ್ ಮಾಡುವ ವೇಳೆ ಕಾರ್ಡಿಯಕ್ ಅರೆಸ್ಟ್ ಆಗಿ ಮೃತಪಟ್ಟಿದ್ದಾರೆ. ಇದರಿಂದ ಕೊಲೆ ಪ್ರಕರಣದ ಭೀತಿಗೆ ಒಳಗಾದ ಮಹಿಳೆ ಪತಿ ಹಾಗೂ ಸೋದರನ ಸಹಾಯ ಕೇಳಿದ್ದಾಳೆ. ಮೂವರು ಸೇರಿ ಬಾಲಸುಬ್ರಹ್ಮಣ್ಯನ್ ಅವರ ದೇಹವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ಜೆಪಿ ನಗರದ ನಿರ್ಜನ ಪ್ರದೇಶದಲ್ಲಿ ಬಿಸಾಡಿದ್ದಾರೆ. ಪೊಲೀಸರು ಬಾಲಸುಬ್ರಹ್ಮಣ್ಯನ್ ಅವರ ಫೋನ್ ಕಾಲ್ ಗಳ ಡಿಟೈಲ್ಸ್ ಹಾಗೂ ಲೋಕೆಷನ್ ಪರಿಶೀಲಿಸಿದಾಗ ಮಹಿಳೆಯ ಮನೆಗೆ ಪದೇಪದೆ ಭೇಟಿ ನೀಡಿರುವುದು ತೋರಿಸಿದೆ. ಕುಟುಂಬದ ಮೂಲಗಳ ಪ್ರಕಾರ ಇತ್ತೀಚೆಗಷ್ಟೇ ಆಂಜಿಯೊಪ್ಲಾಸ್ಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಸುಬ್ರಹ್ಮಣ್ಯನ್ ವೈಯಕ್ತಿಕ ಕೆಲಸದ ಮೇಲೆ ಹೊರಗೆ…
ಬೆಳಗಾವಿ : ಗಡಿಭಾಗದಲ್ಲಿ ಕರ್ನಾಟಕದ ಬಸ್ಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆಯುತ್ತಿರುವುದು ಈಗ ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಅಖಿಲ ಭಾರತೀಯ ಮರಾಠ ಸಂಘದ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದು, ಮಹಾರಾಷ್ಟ್ರ ಬಸ್ ಗಳಿಗೂ ಕಪ್ಪು ಮಸಿ ಬಳಿಯುವ ಭೀತಿ ಹಿನ್ನೆಲೆ ಏಕಾಏಕಿ 300ಕ್ಕೂ ಅಧಿಕ ಬಸ್ ಗಳನ್ನು ಸಂಚಾರವನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಥಗಿತ ಮಾಡಿದೆ. ಇತ್ತ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಎಂದಿನಂತೆ ಬಸ್ ಗಳು ತೆರಳುತ್ತಿವೆ. ನಿಪ್ಪಾಣಿಯ ಬಸ್ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ. ಒಂದು ಡಿಆರ್ ತುಕಡಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಪೊಲೀಸರು ಕ್ರಮ ವಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…