Author: admin

ಮಂಗಳೂರು ಕುಕ್ಕರ್​ ಬಾಂಬ್​ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ)ಗೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರ ಶಾರೀಕ್ ಈಗಾಗಲೇ ಪೊಲೀಸರ ವಶದಲ್ಲಿದ್ದು, ತನಿಖೆಯಲ್ಲಿ ದೇವಸ್ಥಾನ, ಪೊಲೀಸರನ್ನು ಗುರಿಯಾಗಿಸಿ ದಾಳಿ ನಡೆಸುವುದು ಸೇರಿದಂತೆ ಹಲವಾರು ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತನಿಖೆಯನ್ನು ಎನ್ ಐಗೆ ಹಸ್ತಾಂತರಿಸಿದೆ. ಒಂದು ವೇಳೆ ಆಟೋದಲ್ಲಿ ಕುಕ್ಕರ್ ಬ್ಲಾಸ್ಟ್ ಆಗದೇ ಇದ್ದಿದ್ರೆ ಮಂಗಳೂರಿನ ಪ್ರಸಿದ್ಧ ದೇಗುಲಗಳು, ಬಸ್ ನಿಲ್ದಾಣ ಹಾಗೂ ಆರ್​​ಎಸ್​ಎಸ್​ ಕಚೇರಿ ಶಾರೀಕ್​ನ ಟಾರ್ಗೆಟ್ ಆಗಿತ್ತು ಎನ್ನುವ ಆಘಾತಕಾರಿ ಅಂಶಗಳು ಪೊಲೀಸ್ ತನಿಖೆ ವೇಳೆ ಹೊರಬಂದಿವೆ. ಉಗ್ರ ಶಾರೀಕ್ ವಿರುದ್ಧ UAPA ಕಾಯ್ದೆ ಅನ್ವಯ ಕೇಸ್​ ದಾಖಲು ಮಾಡಲಾಗಿದ್ದು, ಪ್ರಕರಣದ ತೀವ್ರತೆ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ NIAಗೆ ಕೇಸ್ ವರ್ಗಾವಣೆ ಮಾಡಲಾಗಿದ್ದು, ಇಂದು NIA ಅಧಿಕಾರಿಗಳು ಶಾರೀಕ್ ನ ತೀವ್ರ ವಿಚಾರಣೆ ಒಳಪಡಿಸಿದ್ದಾರೆ. ಮಂಗಳೂರಿನಲ್ಲಿ ಎನ್ ಐಎ ಘಟಕ ಸ್ಥಾಪನೆ? ಕಂಕನಾಡಿಯಲ್ಲಿ ಇತ್ತೀಚೆಗೆ…

Read More

ಹುಬ್ಬಳ್ಳಿ : ಬೈಕ್ ಸವಾರನಿಗೆ ಬರೋಬ್ಬರಿ 17, 500 ರೂಪಾಯಿ ದಂಡ ಬಿದ್ದಿದ್ದು, ದಂಡಕ್ಕೆ ಬೆಚ್ಚಿದ ಸವಾರ, ಬೈಕ್​ನನ್ನು ಸಂಚಾರಿ ಪೊಲೀಸರಿಗೆ ಒಪ್ಪಿಸಿ ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 23 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಬೈಕ್‌ ಸವಾರನಿಗೆ 17,500 ಸಾವಿರ ದಂಡ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಉತ್ತರ ಸಂಚಾರ ಠಾಣೆ ಪೊಲೀಸರಿಂದ ಬೈಕ್ ಸವಾರನಿಗೆ ದಂಡ ಕಟ್ಟುವಂತೆ ಸೂಚಿಸಲಾಗಿದೆ. ಪದೇ ಪದೇ ಸಂಚಾರಿ ನಿಯಮ ಉಲ್ಲಂಘಿಸಿ, ಭಾರಿ ದಂಡ ಹಾಕಿಸಿಕೊಂಡ ವ್ಯಕ್ತಿಯನ್ನು ಹುಬ್ಬಳ್ಳಿಯ ಮಹ್ಮದ್‌ ರಫೀಕ್‌ ಗುಡಗೇರಿ ಎಂದು ಗುರುತಿಸಲಾಗಿದೆ. ಹಣ ಈಗಲೇ ಪಾವತಿಸಲು ಸಾಧ್ಯವಿಲ್ಲ ಎಂದು ಬೈಕ್‌ ಚಾವಿ ಕೊಟ್ಟು ರಫೀಕ್ ಹೊರಟು ಹೋಗಿದ್ದಾನೆ. ಸದ್ಯ ರಫೀಕ್ ಬೈಕ್ ನ್ನು ಸಂಚಾರಿ ಠಾಣೆಗೆ ತೆಗೆದುಕೊಂಡು ಹೋಗಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ : ಖಾತಾ ವರ್ಗಾವಣೆಗೆ 5 ಲಕ್ಷ ರೂ. ಹಣ ಬೇಡಿಕೆಯಿಟ್ಟಿದ್ದ ತಹಶಿಲ್ದಾರರ ಹಾಗೂ ಕಚೇರಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ತಡರಾತ್ರಿ ನಡೆದಿದೆ. ಜಿಲ್ಲೆಯ ಚನ್ನಮ್ಮ ಕಿತ್ತೂರು ತಹಶಿಲ್ದಾರ್ ಸೋಮಲಿಂಗಪ್ಪ ಹಾಲಗಿ ಹಾಗೂ ನೌಕರ ಪ್ರಸನ್ನ ಜಿ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ದೂರುದಾರ ರಾಜೇಂದ್ರ ಇನಾಂದಾರ ಅವರ ತಂದೆ ಹೆಸರಿನಲ್ಲಿದ್ದ 10 ಎಕರೆ ಭೂಮಿಯನ್ನು ರಾಜೇಂದ್ರ ಹೆಸರಿಗೆ ವರ್ಗಾಯಿಸಲು 5 ಲಕ್ಷ ರೂ ಹಣದ ಬೇಡಿಕೆಯಿಟ್ಟದ್ದರು. ಮೊದಲ ಹಂತದಲ್ಲಿ ಎರಡು ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ,‌ ಲಂಚದ ಹಣ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ನಡೆದಿದ್ದಂತ ಅಕ್ರಮ ಸಂಬಂಧ, ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕ್ ನ ಶಹರ ಠಾಣೆಯ ಪೊಲೀಸರು, ಮೂಡಲಗಿ ತಾಲೂಕಿನ ರಾಜಾಪುರ ನಿವಾಸಿಯಾಗಿರುವಂತ ಬಾಳೇಶ್ ಕಟ್ಟಿಕಾರ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಬಾಳೇಶ್ ಕಟ್ಟಿಕಾರ್ ಅವರು ಆಗಸ್ಟ್ 7, 2022ರಂದು ನಡೆದಿದ್ದಂತ ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ಅಕ್ರಮಕ್ಕಾಗಿ ಎಲೆಕ್ಟ್ರಾನಿಕ್ ಡಿವೈಸರ್ ಸಪ್ಲೈ ಮಾಡಿದ್ದ ಎಂಬುದಾಗಿ ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕಲಬುರಗಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಬಸ್​ಗಳಿಗೆ ಮಸಿ ಬಳಿಯಲಾಗಿತ್ತು. ಇದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಬಸ್​ಗಳಿಗೆ ಕಪ್ಪು ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿಯಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಬಸ್​ ತಡೆದು ಮಸಿ ಬಳಿದಿದ್ದಾರೆ. ಬಸ್ ಮುಂಭಾಗದ ಗ್ಲಾಸ್​ಗೆ ಬಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಧ್ವನಿ ಹಾಗೂ ಫೋಟೊವನ್ನು ಅವರ ಅನುಮತಿ ಇಲ್ಲದೇ ಯಾರೂ ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ತಮ್ಮ ವ್ಯಕ್ತಿತ್ವದ ಹಕ್ಕು ಕಾಪಾಡಿಕೊಳ್ಳಲು ಅನುಮತಿ ನೀಡಬೇಕು ಎಂದು ಅಮಿತಾಭ್ ಬಚ್ಚನ್ ಹೈಕೋರ್ಟ್ ಮೊರೆ ಹೋಗಿದ್ದರು. ಅಮಿತಾಭ್ ಅವರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಶುಕ್ರವಾರ ನೀಡಿದ ಮಧ್ಯಂತರ ಆದೇಶದಲ್ಲಿ ಅನುಮತಿ ಇಲ್ಲದೇ ಅವರ ಫೋಟೊ, ಧ್ವನಿ ಬಳಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಖ್ಯಾತ ವ್ಯಕ್ತಿಯ ವ್ಯಕ್ತಿತ್ವವನ್ನು ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ. ಅದು ಕೂಡ ಆ ವ್ಯಕ್ತಿ ಸಾಕಷ್ಟು ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಅವರ ಫೋಟೊ ಹಾಗೂ ಧ್ವನಿ ಬಳಸುವುದು ಕಾನೂನು ಉಲ್ಲಂಘನೆ ಎಂದು ಹೇಳಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ತಮಿಳುನಾಡಿನ ಗೊಬಿಚೆಟ್ಟಿಪಾಳ್ಯಂ ನಿವಾಸಿ ಜ್ಯೋತಿಷಿಯ ಮಾತುಕೇಳಿ ಹಾವಿನಿಂದ ಕಚ್ಚಿಸಿಕೊಂಡು ನಾಲಗೆ ಕಳೆದುಕೊಂಡಿದ್ದಾನೆ. ಈತನಿಗೆ ದಿನವೂ ಹಾವಿನ ಕನಸು ಬೀಳುತ್ತಿತ್ತಂತೆ. ಹಾವಿನಿಂದ ಕಚ್ಚಿಸಿಕೊಂಡಂತೆ ಕನಸು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಈತ ಪರಿಹಾರಕ್ಕಾಗಿ ಜ್ಯೋತಿಷಿಯೊಬ್ಬರ ಬಳಿ ಹೋಗಿದ್ದಾನೆ. ಜ್ಯೋತಿಷಿ ಹಾವಿನ ಪೂಜೆ ಮಾಡುವಂತೆ ಸಲಹೆ ನೀಡಿದ್ದಾನೆ. ಹಾವಿನ ಹುತ್ತ ಇರುವ ದೇಗುಲವನ್ನು ಪೂಜೆಗಾಗಿ ಸಲಹೆ ಮಾಡಿದ್ದಾನೆ. ಪೂಜೆಯ ನಂತರ ಹಾವಿಗೆ ತನ್ನ ನಾಲಿಗೆಯನ್ನು ತೋರಿಸುವಂತೆ ಸಲಹೆ ನೀಡಿದ್ದಾನೆ. ಜ್ಯೋತಿಷಿಯ ಸಲಹೆಯಂತೆ ನಾಲಗೆಯನ್ನು ಹಾವಿನ ಮುಂದೆ ಚಾಚಿ ನಿಂತಿದ್ದಾನೆ. ಸಿಟ್ಟಿಗೆದ್ದ ಹಾವು ನಾಲಗೆಯನ್ನು ಕಚ್ಚಿದೆ. ಜೊತೆಯಲ್ಲಿದ್ದ ಸಂಬಂಧಿ ಹಾಗೂ ಕುಟುಂಬದವರು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಜೀವ ಉಳಿಸುವ ಸಲುವಾಗಿ ವೈದ್ಯರು ಆತನ ನಾಲಗೆಯನ್ನು ಕತ್ತರಿಸಿದ್ದಾರೆ. ಈರೋಡ್ ಮನಿಯನ್ ಮೆಡಿಕಲ್ ಆಸ್ಪತ್ರೆಯ ಮುಖ್ಯಸ್ಥ, ಡಾಕ್ಟರ್ ಎಸ್. ಸೆಂಥಿಲ್ ಕುಮಾರನ್ ಮಾತನಾಡಿ, ನವೆಂಬರ್ 18 ರಂದು ಈ ವ್ಯಕ್ತಿಗೆ ಹಾವು ಕಚ್ಚಿದ ಕಾರಣ ಬಾಯಲ್ಲಿ ತೀವ್ರವಾಗಿ ರಕ್ತಸ್ರಾವವಾಗುತ್ತಿತ್ತು. ಹಾವಿನ ವಿಷದಿಂದಾಗಿ ಆತನ ನಾಲಗೆಯ ಅಂಗಾಂಶಕ್ಕೆ ಹಾನಿಯಾಗಿತ್ತು. ಜೀವ ಉಳಿಸುವ…

Read More

ಸೆಕ್ಸ್ ಮಾಡುವ ವೇಳೆ ಹೃದಯಾಘಾದಿಂದ ಉದ್ಯಮಿ ಮೃತಪಟ್ಟಿದ್ದು, ಕೊಲೆ ಪ್ರಕರಣದಲ್ಲಿ ಸಿಲುಕುವ ಭೀತಿಯಿಂದ ಮಹಿಳೆ ಉದ್ಯಮಿ ಶವವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. 67 ವರ್ಷದ ಬೆಂಗಳೂರಿನ ಉದ್ಯಮಿ ಬಾಲಸುಬ್ರಹ್ಮಣ್ಯನ್ ಶವ ಜೆಪಿ ನಗರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಆಪ್ತರ ಸಹಾಯದಿಂದ ಮಹಿಳೆ ಜೊತೆ ದೈಹಿಕ ಸಂಪರ್ಕ ಬೆಳೆಸುತ್ತಿದ್ದ ಉದ್ಯಮಿ ಬಾಲಸುಬ್ರಹ್ಮಣ್ಯನ್ ಸೆಕ್ಸ್ ಮಾಡುವ ವೇಳೆ ಕಾರ್ಡಿಯಕ್ ಅರೆಸ್ಟ್ ಆಗಿ ಮೃತಪಟ್ಟಿದ್ದಾರೆ. ಇದರಿಂದ ಕೊಲೆ ಪ್ರಕರಣದ ಭೀತಿಗೆ ಒಳಗಾದ ಮಹಿಳೆ ಪತಿ ಹಾಗೂ ಸೋದರನ ಸಹಾಯ ಕೇಳಿದ್ದಾಳೆ. ಮೂವರು ಸೇರಿ ಬಾಲಸುಬ್ರಹ್ಮಣ್ಯನ್ ಅವರ ದೇಹವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ಜೆಪಿ ನಗರದ ನಿರ್ಜನ ಪ್ರದೇಶದಲ್ಲಿ ಬಿಸಾಡಿದ್ದಾರೆ. ಪೊಲೀಸರು ಬಾಲಸುಬ್ರಹ್ಮಣ್ಯನ್ ಅವರ ಫೋನ್ ಕಾಲ್ ಗಳ ಡಿಟೈಲ್ಸ್ ಹಾಗೂ ಲೋಕೆಷನ್ ಪರಿಶೀಲಿಸಿದಾಗ ಮಹಿಳೆಯ ಮನೆಗೆ ಪದೇಪದೆ ಭೇಟಿ ನೀಡಿರುವುದು ತೋರಿಸಿದೆ. ಕುಟುಂಬದ ಮೂಲಗಳ ಪ್ರಕಾರ ಇತ್ತೀಚೆಗಷ್ಟೇ ಆಂಜಿಯೊಪ್ಲಾಸ್ಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬಾಲಸುಬ್ರಹ್ಮಣ್ಯನ್ ವೈಯಕ್ತಿಕ ಕೆಲಸದ ಮೇಲೆ ಹೊರಗೆ…

Read More

ಬೆಳಗಾವಿ : ಗಡಿಭಾಗದಲ್ಲಿ ಕರ್ನಾಟಕದ ಬಸ್ಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆಯುತ್ತಿರುವುದು ಈಗ ರಾಜ್ಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಅಖಿಲ ಭಾರತೀಯ ಮರಾಠ ಸಂಘದ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದು, ಮಹಾರಾಷ್ಟ್ರ ಬಸ್ ಗಳಿಗೂ ಕಪ್ಪು ಮಸಿ ಬಳಿಯುವ ಭೀತಿ ಹಿನ್ನೆಲೆ ಏಕಾಏಕಿ 300ಕ್ಕೂ ಅಧಿಕ ಬಸ್ ಗಳನ್ನು ಸಂಚಾರವನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಥಗಿತ ಮಾಡಿದೆ. ಇತ್ತ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಎಂದಿನಂತೆ ಬಸ್ ಗಳು ತೆರಳುತ್ತಿವೆ. ನಿಪ್ಪಾಣಿಯ ಬಸ್ ನಿಲ್ದಾಣಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ. ಒಂದು ಡಿಆರ್ ತುಕಡಿ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಪೊಲೀಸರು ಕ್ರಮ ವಹಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಪುಣೆ: ಕರ್ನಾಟಕ ಬಸ್‌ ಗಳಿಗೆ ಕಪ್ಪು ಮಸಿ ಬಳಿದು ಮರಾಠ ಮಹಾಸಂಘ ಪುಂಡಾಟ ಮೆರೆದ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆ ಜಿಲ್ಲೆಯ ದೌಂಡ್‌ನಲ್ಲಿ ನಿಪ್ಪಾಣಿ-ಔರಂಗಾಬಾದ್ ಬಸ್‌ ಗೆ ಜೈ ಮಹಾರಾಷ್ಟ್ರ ಮತ್ತು ಜಾಹಿರ್ ನಿಷೇಧ್ ಪದಗಳನ್ನು ಕಪ್ಪು ಬಣ್ಣದಲ್ಲಿ ಬರೆದು ತಮ್ಮ ಪುಂಡಾಟವನ್ನು ಮೆರೆದಿದ್ದಾರೆ. ಗಡಿ ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ಮರಾಠ ಮಹಾಸಂಘವು ನವೆಂಬರ್ 25 ರಂದು ಪುಣೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ಸಂಕೇತವಾಗಿ, ಮಹಾಸಂಘ ಪುಂಡರು ಪುಣೆಯಲ್ಲಿ ರಾಜ್ಯ ಮತ್ತು ಕರ್ನಾಟಕದ ನಡುವೆ ಸಂಚರಿಸುವ ಬಸ್ಸುಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More