Author: admin

ಬೆಳಗಾವಿ : ಉದ್ಯೋಗ ಖಾತರಿ ಯೋಜನೆಯಡಿ ಜಲ ಸಂಜೀವಿನಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ, ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಮಟ್ಟದಲ್ಲಿ ಜಲ ಸಂಜೀವಿನಿ ಜಿಲ್ಲಾ ಸಂಯೋಜಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಷರತ್ತುಗಳು : ಪದವಿಧರರಾಗಿರಬೇಕು. ಕೃಷಿ/ಜಲಾನಯನ ಅಭಿವೃದ್ದಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳು ಜಲಾನಯನ ಅಭಿವೃದ್ದಿ ಕಾರ್ಯಕ್ರಮಗಳ ಅನುಷ್ಠಾನದ ಕನಿಷ್ಠ 10 ವರ್ಷ ಅನುಭವ ಹೊಂದಿರಬೇಕು. ಕನಿಷ್ಠ ಸಹಾಯಕ ಕೃಷಿ ನಿರ್ದೇಶಕ ಹುದ್ದೆಯಲ್ಲಿ ನಿವೃತ್ತಿ ಹೊಂದಿರುವ ಅಧಿಕಾರಿಗಳಾಗಿದ್ದು, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅನುಷ್ಠಾನ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ಸಾಮಥ್ರ್ಯ, ಸತತವಾಗಿ ಕ್ಷೇತ್ರ ಭೇಟಿ ಮಾಡುವ ಹಾಗೂ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುವ ಸಾಮಥ್ರ್ಯ ಹೊಂದಿರಬೇಕು. ಗರಿಷ್ಠ 65 ವರ್ಷ ವಯೋಮಿತಿ ಮೀರಿರಬಾರದು. Bsc (Aghriculture) Or B.Tech(Agriculture Engneering) ಪದವೀಧರರು, GUS ತಂತ್ರಾಂಶದ ಪರಿಣ ತಿ ಹೊಂದಿರಬೇಕು. ಸರ್ಕಾರೇತರ ಸಂಸ್ಥೆಗಳು/ಇತರೆ ಸಂಸ್ಥೆಗಳಲ್ಲಿ ಜಲಾನಯನ ಅಭಿವೃದ್ದಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ಕನಿಷ್ಠ 10 ವರ್ಷಗಳ ಅನುಭವ ಹೊಂದಿರಬೇಕು. ಸರ್ಕಾರೇತರ ಸಂಸ್ಥೆಗಳು/ಇತರೆ…

Read More

ಮುಂಬೈ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗಡಿ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಿಲುವಳಿ ಮಂಡಿಸಿದ್ದಾರೆ. ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಿರ್ಣಯವನ್ನು ಅಂಗೀಕರಿಸಿದ ಕೆಲವು ದಿನಗಳ ನಂತರ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಖಂಡಿಸಿ, ವಿಧಾನಸಭೆಯಲ್ಲಿ ಇದೇ ರೀತಿಯ ನಿರ್ಣಯವನ್ನು ಮಂಡಿಸಿದರು. ಇದನ್ನು ಸಹ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಬೆಳಗಾವಿ, ನಿಪ್ಪಾಣಿ, ಕಾರವಾರದ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಸಿಎಂ ಏಕನಾಥ್ ಶಿಂಧೆ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮಳೆಗಾಲದಲ್ಲಿ ಮೋಡ ಬಿತ್ತನೆಯಿಂದ ಕೃತಕವಾಗಿ ಮಳೆಯನ್ನು ಸೃಷ್ಟಿಸುವುದೇ ಕೃತಕ ಮಳೆ. ನೆಲದ ಮೇಲಿನ ನೀರು ಆವಿಯಾಗಿ ಮತ್ತು ಮೇಲೆದ್ದಂತೆ, ಅದು ತಂಪಾಗುತ್ತದೆ ಮತ್ತು ಮೋಡವಾಗುತ್ತದೆ.ಮೋಡಗಳಲ್ಲಿನ ನೀರಿನ ಅಣುಗಳು ಕೆಲವು ಋತುಗಳಲ್ಲಿ ಸಂಭವಿಸುವ ತಂಪಾದ ಗಾಳಿಯಿಂದ ದ್ರವರೂಪಕ್ಕೆ ಬದಲಾಗುತ್ತವೆ ಮತ್ತು ಮಳೆಯಾಗುತ್ತದೆ. ಕೆಲವೊಮ್ಮೆ ಈ ನೀರಿನ ಅಣುಗಳು ಅತಿಯಾಗಿ ತಣ್ಣಗಾದಾಗ ಮೋಡದಲ್ಲಿನ ತೇವಾಂಶವು ನೀರಾಗಿ ಬದಲಾಗುವುದಿಲ್ಲ. ಆಗ ಮೋಡ ಕವಿದಿದ್ದರೂ ಮಳೆ ಬರುವುದಿಲ್ಲ. ಈ ಸಮಯದಲ್ಲಿ ಪೊಟ್ಯಾಸಿಯಮ್ ಅಯೋಡೈಡ್, ಸಿಲ್ವರ್ ಅಯೋಡೈಡ್, ದ್ರವ ಪ್ರೋಪೇನ್ ಅಥವಾ ಕಾರ್ಬನ್ ಡೈಆಕ್ಸೈಡ್ ಅನ್ನು ಸಣ್ಣ ವಿಮಾನಗಳ ಮೂಲಕ ಮೋಡಗಳ ಮೇಲೆ ಸಿಂಪಡಿಸಲಾಗುತ್ತದೆ. ಅಥವಾ ಅದೇ ರಾಸಾಯನಿಕಗಳನ್ನು ಕೆಳಗಿನಿಂದ ಯಂತ್ರದಿಂದ ಬಿಸಿ ಮಾಡಿ ಮತ್ತು ಮೇಲಕ್ಕೆ ಉಡಾಯಿಸಿ. ಅವರು ತೇವಾಂಶವನ್ನು ಸರಿಪಡಿಸುತ್ತಾರೆ ಮತ್ತು ಮಳೆ ಸುರಿಯುತ್ತಾರೆ. ಇದು ಮೋಡ ಬಿತ್ತನೆಯ ವಿಧಾನವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಜಮ್ಮು: ಭಾರತೀಯ ಸೇನಾಪಡೆ ಮೂವರು ಉಗ್ರರನ್ನು ಎನ್ ಕೌಂಟರ್ ಮಾಡಿದ ಘಟನೆ ಜಮ್ಮುವಿನ ಸಿದ್ರಾ ಪ್ರದೇಶದಲ್ಲಿ ಬುಧವಾರ ನಡೆದಿದೆ. ಲಾರಿಯ ಸಂಚಾರವೊಂದು ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಕೂಡಲೇ ಲಾರಿಯನ್ನು ಹಿಂಬಾಲಿಸಲಾಗಿತ್ತು. ಜಮ್ಮುವಿನ ಸಿಧ್ರಾ ಪ್ರದೇಶದಲ್ಲಿ ಲಾರಿ ನಿಂತಿತು. ಲಾರಿ ನಿಂತ ಕೂಡಲೇ ಚಾಲಕ ಪರಾರಿಯಾದ. ಲಾರಿಯನ್ನು ಪರಿಶೀಲಿಸಿದಾಗ ಉಗ್ರರು ಅಡಗಿ ಕುಳಿತಿರುವುದು ಕಂಡು ಬಂದಿತ್ತು. ಕೂಡಲೇ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು ಎಂದು ಎಜಿಡಿಪಿ ಮುಕೇಶ್ ಸಿಂಗ್ ಮಾಹಿತಿ ನೀಡಿದ್ದಾರೆ. ಉಗ್ರರ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳಿದ್ದವು. ಉಗ್ರರು ದಾಳಿ ನಡೆಸಲು ಆರಂಭಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಲಾಯಿತು. ಈ ವೇಳೆ  ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಕಲ್ಯಾಣ ಕರ್ನಾಟಕ ಭಾಗದಲ್ಲಿ, ತೊಗರಿ ಬೆಳೆ ನೆಟೆರೋಗದಿಂದ ಸಂಪೂರ್ಣವಾಗಿ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಆದರೆ ಬಿಜೆಪಿ ಸರ್ಕಾರ ಮಾತ್ರ ಯಾವುದೇ ಸಮೀಕ್ಷೆಯನ್ನು ನಡೆಸದೆ, ಪರಿಹಾರವನ್ನು ನೀಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಸರ್ಕಾರ ನೆಟೆರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗಾರರಿಗೆ 500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ಪ್ರತಿ ಎಕರೆ ಪ್ರದೇಶಕ್ಕೆ 25,000 ನಷ್ಟ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಇಡೀ ಏಷ್ಯಾ ಖಂಡದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಈ ಜಿಲ್ಲೆಗೆ ತೊಗರಿಯ ಕಣಜ ಎಂದೇ ಕರೆಯಲಾಗುತ್ತಿದೆ. ಈ ಭಾಗದ ರೈತರ ಪ್ರಮುಖ ಬೆಳೆಯಾದ ತೊಗರಿ ಇಲ್ಲಿನ ಜಮೀನಿಗಳಲ್ಲಿ ಹೆಚ್ಚಾಗಿ ಬಿತ್ತನೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ ತೊಗರಿ ದೇಶದ ನಾನಾ ಭಾಗಗಳಿಗೆ ರವಾನೆ ಮಾಡಲಾಗುತ್ತಿದೆ. ಆದರೆ ಇತ್ತೀಚೆಗೆ ಎರಡು ವರ್ಷಗಳಿಂದ ಮಳೆ ಹೆಚ್ಚಿನ ಪ್ರಮಾಣದಲ್ಲಿ ಬೀಳುತ್ತಿರುವುದರಿಂದಾಗಿ ನಿರೀಕ್ಷಿತ…

Read More

ತುಮಕೂರು : ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಪಿಡಿಒ ಸೇರಿ ಮೂವರನ್ನು ಬಂಧಿಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ. ಎರಡು ತಲೆ ಹಾವಿನಿಂದ ಐಶ್ವರ್ಯ ವೃದ್ಧಿಸುತ್ತದೆ. ಈ ಹಾವು ಕೋಟ್ಯಂತರ ಬೆಲೆ ಬಾಳುತ್ತದೆ ಎಂದು ಸುಳ್ಳು ಹೇಳಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಮೂವರನ್ನೂ ಬಂಧಿಸಿ, ಹಾವನ್ನು ವಶಕ್ಕೆ ಪಡೆದಿದ್ದಾರೆ. ನಾಗರಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಕಾಂತರಾಜು ಹಾಗೂ ಸಹಚರರಾದ ಶೇಕ್​ ಹುಸೇನ್​, ಮೊಹ್ಮದ್​ ಆರೀಫ್​ ಎಂಬುವವರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್​ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕರ್ನಾಟಕ ವಿಧಾನಮಂಡಲಗಳ 148ನೇ ಅಧಿವೇಶನವನ್ನು ಉತ್ತರ ಕರ್ನಾಟಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕಾರಣಕ್ಕೆ ಸಹ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುತ್ತದೆ.ಅಂತೆಯೇ ಉತ್ತರ ಕರ್ನಾಟಕ ಭಾಗದ ಹತ್ತಾರು ಸಮಸ್ಯೆ ಸವಾಲುಗಳ ಬಗ್ಗೆ ವಿಶೇಷ ಚರ್ಚೆಗೆ ಅವಕಾಶ ಮಾಡಿಕೊಡಲು ಎರಡು ದಿನ ಮೀಸಲಿಡಬೇಕು ಎಂದು ಇದೆ ವೇಳೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ಅವರು ಸಭಾಪತಿಗಳಿಗೆ ಕೋರಿದರು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅವಕಾಶ ಮಾಡಿಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಪರಿಷತ್ ಸಭಾ ನಾಯಕ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.ಗಡಿ ಪ್ರದೇಶದಲ್ಲಿನ ಸಾರ್ವಜನಿಕ ಹಿತರಕ್ಷಣೆ ಉದ್ದೇಶದಿಂದಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ-2022ಕ್ಕೆ ವಿಧಾನ ಪರಿಷತ್ತ್ತಿನಲ್ಲಿ ಇಂದು ಅನುಮೋದನೆ ದೊರೆಯಿತು. ರಾಜ್ಯ ಸರ್ಕಾರವು ನೆಲ ಜಲ ಸಂರಕ್ಷಣೆ ವಿಷಯದಲ್ಲಿ, ಕನ್ನಡಿಗರು ಮತ್ತು ಕನ್ನಡಿಗರ ಬದುಕಿನ ರಕ್ಷಣಗೆ ಸರ್ಕಾರ ಬದ್ಧವಾಗಿದೆ. ಅವಶ್ಯಕತೆ ಇದೆ ಎಂಬುದು ಕಂಡುಬಂದಲ್ಲಿ ತಾಲೂಕಿನ ಹೆಸರನ್ನು ಸೇರಿಸುವ ರಚನೆಗೆ ಅವಕಾಶವಿದೆ. ಅಂಗೀಕಾರ ರೂಪದಲ್ಲಿರುವ ಕಾಯಿದೆಯನ್ನುಪರ್ಯಾಲೋಚಿಸಬೇಕು…

Read More

ಭೂ ಪರಿವರ್ತನೆಗೆ ಮತ್ತಷ್ಟು ಸರಳೀಕರಣ ಮಾಡುವ ಉದ್ದೇಶದ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ-2022ಕ್ಕೆ ವಿಧಾನ ಪರಿಷತ್ತ್ತಿನಲ್ಲಿ ಅನುಮೋದನೆ ಸಿಕ್ಕಿತು. ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್‍ನಲ್ಲಿ ಪರ್ಯಾಲೋಚಿಸಿ ಕೋರಿ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿದರು. 2021-2022ರ ವರ್ಷದ ಆಯವ್ಯಯ ಭಾಷಣದಲ್ಲಿ ಮಾಡಿದ ಪ್ರಸ್ತಾವನೆಗಳನ್ನು ಜಾರಿ ತಂದು ಕೃಷಿಯೇತರ ಉದ್ದೇಶಕ್ಕಾಗಿ ಭೂ ಪರಿವರ್ತನೆಯನ್ನು ಸರಳಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 (1964ರ ಕರ್ನಾಟಕ ಅಧಿನಿಯಮ 12)ರ 95ನೇ ಮತ್ತು 96ನೇ ಪ್ರಕರಣವನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ವಿಧೇಯಕ ಜಾರಿ ಮಾಡಲಾಗುತ್ತದೆ. ಭೂಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದಾಗ ಅಧಿಕಾರಿಗಳು ಜನರನ್ನು ಕಚೇರಿಗೆ ಅಲೆಸುತ್ತಾರೆ. ಇದನ್ನು ತಪ್ಪಿಸಲು 7 ದಿನಗಳೊಳಗಡೆ ಭೂಪರಿವರ್ತನೆ ಮಾಡಲು ಅನುಕೂಲವಾಗುವ ಹಾಗೆ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದೆ ಎಂದರು. ಈ ವೇಳೆ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಭೂ ತಿದ್ದುಪಡಿ ಕಾಯ್ದೆ ಬಡಜನರ ಪರವಾಗಿಲ್ಲ. ಇದು ಭೂ ಮಾಫಿಯಾ ಪರವಾಗಿದೆ. ಜನಹಿತ ದೃಷ್ಟಿಯಿಂದ ಈ ಕಾಯಿದೆಗೆ…

Read More

ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲು ಪ್ರಮಾಣವನ್ನು ಶೇ. 15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ. 3 ರಿಂದ 7ಕ್ಕೆ ಹೆಚ್ಚಿಸುವ 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ಶೈಕ್ಷಣ ಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಹಾಗೂ ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಮತ್ತು ಹುದ್ದೆಗಳಲ್ಲಿ ಮೀಸಲಾತಿ ವಿಧೇಯಕಕ್ಕೆ ವಿಧಾನ ಸಭೆಯಲ್ಲಿ ಇಂದು ಸರ್ವಾನುಮತದ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಮಂಡಿಸಿದ ವಿಧೇಯಕಕ್ಕೆ ಆಡಳಿತ ಹಾಗೂ ಪ್ರತಿಪಕ್ಷಗಳ ಎಲ್ಲಾ ಸದಸ್ಯರ ಒಕ್ಕೋರಲಿನ ಸಹಮತ ವ್ಯಕ್ತಪಡಿಸಿ ಸರ್ವಾನುಮತದ ಬೆಂಬಲ ಸೂಚಿಸಿದರು.ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧೇಯಕವು ಸರ್ವಾನುಮತದಿಂದ ಅಂಗೀಕಾರಗೊಂಡು ಅನುಮೋದನೆ ಪಡೆದಿದೆ ಎಂದು ಪ್ರಕಟಿಸಿದರು. ಇದಕ್ಕೂ ಮುನ್ನ ನಿಯಮ 69 ರಡಿ ನಡೆದ ಚರ್ಚೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಸದಸ್ಯರಾದ ಹೆಚ್.ಕೆ. ಪಾಟೀಲ, ಬಂಡೆಪ್ಪ ಕಾಶೆಂಪುರ, ಡಾ. ಕೆ. ಅನ್ನದಾನಿ, ಕೆ.ಎಂ. ಶಿವಲಿಂಗೇಗೌಡ,…

Read More

ಕರಾವಳಿಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್  ಗಿರಿ ವಿಚಾರವಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕೇಳಿದ ಪ್ರಶ್ನೆಗೆ ಸಚಿವ ಮಾಧುಸ್ವಾಮಿ ಉತ್ತರಿಸಿದರು. ಇದು ನೈತಿಕ ಪೊಲೀಸ್ ಗಿರಿಯೋ ಅನೈತಿಕ ಪೊಲೀಸ್ ಗಿರಿಯೋ ಅನ್ನೋದು ಗೊತ್ತಿಲ್ಲ.  ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಕಡಿವಾಣ ಹಾಕುವ ಕೆಲಸ ಮಾಡ್ತೇವೆ ಎಂದು ಮಾಧುಸ್ವಾಮಿ ಉತ್ತರಿಸಿದರು. ನಾವು ಯಾರಿಗೂ ಫ್ರೀ ಹ್ಯಾಂಡ್ ಕೊಟ್ಟಿಲ್ಲ, ನೀವು ಹೋಗಿ  ಮಾಡ್ಕೊಂಡು ಬರಬಹುದು ಅಂತ. ಪೊಲೀಸ್ ಯಾವಾಗಲೂ ಪೊಲೀಸ್, ಮೋರಲ್ ಪೊಲೀಸ್ ಅಂತ ಒಂದು ಇರಕ್ಕಾಗಲ್ಲ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More